Author: main-admin

ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ ಹಣಕ್ಕಾಗಿ ಎರಡು ವರ್ಷದ ಬಾಲಕಿಯನ್ನು ಕೊಂದು ಚೀಲದಲ್ಲಿ ಬಚ್ಚಿಟ್ಟ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿ ರಾಘವೇಂದ್ರನನ್ನು ಇದೀಗ ಬಂಧಿಸಲಾಗಿದೆ. ಆರೋಪಿ ಮನೆಯಿಂದ ದುರ್ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ನೆರೆಹೊರೆಯವರು ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 7 ರಂದು ರಾಘವೇಂದ್ರ ಬಾಲಕಿ ಮಾನ್ಸಿಯನ್ನು ಅಪಹರಿಸಿ ಆಕೆಯ ಪೋಷಕರಾದ ಶಿವಕುಮಾರ್ ಮತ್ತು ಮಂಜು ಅವರಿಂದ 2 ಲಕ್ಷ ರೂ. ಹಣಕ್ಕಾಗಿ ವಿಮೋಚನೆಗಾಗಿ ಬೇಡಿಕೆಯಿಡಲು ಯೋಜಿಸಿದ್ದ. ಬಾಲಕಿಯ ಪೋಷಕರು ದೇವ್ಲಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಐದು ವರ್ಷಗಳಿಂದ ರಾಘವೇಂದ್ರ ಅವರಿಗೂ ಅವರ ಪರಿಚಯವಿತ್ತು. ರಾಘವೇಂದ್ರ ಕೆಲ ದಿನಗಳ ಹಿಂದೆ ಕೆಲಸ ಕಳೆದುಕೊಂಡಿದ್ದ. ಪತಿ ತನ್ನ ಬ್ಯಾಂಕ್ ಖಾತೆಯಲ್ಲಿ ಸುಮಾರು 10 ಲಕ್ಷ ರೂ. ಇಟ್ಟಿರುವುದಾಗಿ ಬಾಲಕಿಯ ತಂದೆ ಮಂಜು ಹೇಳುವುದನ್ನು ರಾಘವೇಂದ್ರ ಕೇಳಿಸಿಕೊಂಡಿದ್ದಾನೆ. ಹಣದ ಅವಶ್ಯಕತೆಯಿದ್ದ ರಾಘವೇಂದ್ರ ಬಾಲಕಿಯನ್ನು ಅಪಹರಿಸಿದ್ದಾನೆ. ಮಗಳು ಕಾಣದಿದ್ದಾಗ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದರಿಂದ ಭಯಭೀತನಾದ ರಾಘವೇಂದ್ರ…

Read More

ಉಡುಪಿ: ಬಿಟ್ ಕಾಯಿನ್‌ನಲ್ಲಿ ಹೂಡಿದ ಲಕ್ಷಾಂತರ ರೂ. ಹಣವನ್ನು ವಾಪಾಸು ನೀಡದೆ ಮೋಸ ಮಾಡಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ರೇಯ ಆಚಾರ್ಯ ಎಂಬವರಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯಿಸಿಕೊಂಡ ತುಷಾರ್ ಕಪೂರ್ ಎಂಬಾತ ಬಿಟ್ ಕಾಯಿನ್‌ನಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಬರುವ ಬಗ್ಗೆ ಆಸೆ ತೋರಿಸಿದ್ದ. ಅದಕ್ಕಾಗಿ ಆತ್ರೇಯ ಆಚಾರ್ಯಗೆ ವೆಬ್‌ಸೈಟ್‌ನಲ್ಲಿ ವ್ಯಾಲೆಟ್ ಓಪನ್ ಮಾಡಿ ಹಣ ಪಾವತಿಸುವಂತೆ ತಿಳಿಸಿದ್ದ. ಇದನ್ನು ನಂಬಿದ ಆತ್ರೇಯ ಆಚಾರ್ಯ, ಮಾರಚ್ 19ರಿಂದ ಎಪ್ರಿಲ್ 9ರ ಮಧ್ಯಾವಧಿಯಲ್ಲಿ ತುಷಾರ್ ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಒಟ್ಟು 25,52,300ರೂ. ಹಣವನ್ನು ಆನ್ ಲೈನ್ ಮೂಲಕ ವರ್ಗಾವಣೆ ಮಾಡಿದ್ದರು. ಆ ಬಳಿಕ ವ್ಯಾಲೇಟ್‌ನಲ್ಲಿದ್ದ ಬಿಟ್ ಕಾಯಿನ್‌ನ್ನು ತುಷಾರ್ ಎಪ್ರಿಲ್ 9ರಂದು ವರ್ಗಾವಣೆ ಮಾಡಿ, ಬಿಟ್ ಕಾಯಿನ್ ನೀಡದೆ, ಪಡೆದ ಹಣ ವಾಪಾಸು ಕೊಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ.

Read More

ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಹೇಳಿದರು.

Read More

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಬಿಜೆಪಿ ಪಕ್ಷದಿಂದ ( BJP Party ) ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಮೊದಲ ಪಟ್ಟಿ ಬಿಡುಗಡೆಯಾಗಿದೆ. 189 ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಇಂದು ಘೋಷಣೆ ಮಾಡಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕರ್ನಾಟಕ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸೋ ಸಂಬಂಧ ಜಿಲ್ಲಾ ಹಂತದಲ್ಲಿ, ತಾಲೂಕು ಹಂತದಲ್ಲಿ, ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಲಾಗಿದೆ ಎಂದರು. ಬಿಎಸ್ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹಲವು ಸುತ್ತಿನ ಮಾತುಕತೆಯನ್ನು ಚರ್ಚಿಸಲಾಗಿದೆ. ಬಿಜೆಪಿಯಿಂದ ನಡೆಸಿದಂತ ಬೂತ್ ಲೆವೆಲ್ ನಿಂದ ರಾಜ್ಯ ಮಟ್ಟದವರೆಗಿನ ವರದಿಯನ್ನು ಆಧರಿಸಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಎಲ್…

Read More

ಮಕ್ಕಳಿಬ್ಬರು ಪೋಷಕರಿಗೆ ಗೊತ್ತಿಲ್ಲದೇ ಹೊಳೆಗೆ ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ-ಕೇರಳ ಗಡಿಭಾಗದ ಅಡೂರು ಎಂಬಲ್ಲಿ ಸಂಭವಿಸಿದೆ. ಪೋಷಕರಿಗೆ ತಿಳಿಯದೇ ನದಿಗೆ ಹೋಗಿದ್ದು ನದಿ ನೀರಿನಲ್ಲಿ ಮುಳುಗಿ ಕಂದಮ್ಮಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅಡೂರು ದೇವರಡ್ಕದ ನಿವಾಸಿ ಶಾಫಿ ಎಂಬವರ ಪುತ್ರ ಮುಹಮ್ಮದ್ ಆಶೀಕ್ (7) ಮತ್ತು ಹಸೈನಾರ್ ರವರ ಪುತ್ರ ಮುಹಮ್ಮದ್ ಫಾಸಿಲ್(9) ನೀರಿನಲ್ಲಿ ಮುಳುಗಿ ಮೃತಪಟ್ಟವರು . ಮೃತದೇಹಗಳನ್ನು ಕಾಸರಗೋಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

Read More

ಧಾರವಾಡ : ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಭಾಗ ಸಂಖ್ಯೆ 94 ರ ಮತಗಟ್ಟೆ ಅಧಿಕಾರಿಯಾಗಿದ್ದ ನವೀನ ಡಿ. ಸೂರ್ಯವಂಶಿ ಅವರು ಚುನಾವಣಾ ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೋರಿ, ಕಾರ್ಯಲೋಪ ಮಾಡಿರುವುದರಿಂದ ತಕ್ಷಣ ಸರಕಾರಿ ಸೇವೆಯಿಂದ ಅವರನ್ನು ಅಮಾನತ್ತುಗೊಳಿಸಿ, ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ಆದೇಶ ಹೊರಡಿಸಿದ್ದಾರೆ. ನವೀನ್ ಸೂರ್ಯವಂಶಿ ಅವರು 2023 ರ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯಲೋಪ ಮಾಡಿದ್ದಲ್ಲದೇ, ಸಕಾಲಕ್ಕೆ ಮಾಹಿತಿ, ದಾಖಲೆಗಳನ್ನು ನೀಡದೇ ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 134 ಉಲ್ಲಂಘನೆ ಮಾಡಿದ್ದರಿಂದ ಅವರನ್ನು ಸರಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಲಾಗಿದೆ. ಅಮಾನತ್ತು ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ಅನ್ವಯ ಜೀವನಾಂಶ ಭತ್ಯೆ ಪಡೆಯಲು ಅರ್ಹರಿದ್ದು, ತಮ್ಮ ಕಚೇರಿ ಮುಖ್ಯಸ್ಥರ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡಬಾರದೆಂದು ಜಿಲ್ಲಾಧಿಕಾರಿಗಳು ಆಗಿರುವ…

Read More

ಬೆಂಗಳೂರು : ಚುನಾವಣೆ ಘೋಷಣೆಗೂ ಮುನ್ನ ಶೋಧನೆಯ ಅಧಿಕಾರವಿಲ್ಲ ಎಂದು ಹೈಕೋರ್ಟ್ ಪೀಠ ಮಹತ್ವದ ಆದೇಶ ಹೊರಡಿಸಿದೆ. ಚುನಾವಣೆಯ ಘೋಷಣೆಗೂ ಮುನ್ನ ಶೋಧನೆಯ ಅಧಿಕಾರವಿಲ್ಲ, ಸಾಮಾಗ್ರಿಗಳನ್ನು ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಏಕಸದಸ್ಯಪೀಠ ಮಹತ್ವದ ಆದೇಶ ನೀಡಿದೆ.ಇಷ್ತಿಯಾಕ್ ಅಹಮದ್ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಆದೇಶ ಹೊರಡಿಸಿದ್ದು, ಚುನಾವಣೆ ಘೋಷಣೆಗೂ ಮುನ್ನ ಚುನಾವಣೆ ಘೋಷಣೆಗೂ ಮುನ್ನ ಚುನಾವಣಾ ಅಧಿಕಾರಿಗಳು ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳುವ ಅಧಿಕಾರವಿಲ್ಲ ಎಂದು ಹೇಳಿದ್ದಾರೆ. ಮಾ.19 ರಂದು ಚುನಾವಣಾಧಿಕಾರಿಗಳು ಶಿವಾಜಿನಗರ ಕ್ಷೇತ್ರದಲ್ಲಿ ಆಹಾರ ಸಾಮಾಗ್ರಿ ಹಂಚಿಕೆ ವೇಳೆ ದಾಳಿ ನಡೆಸಿ ಆಹಾರ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಸಂಬಂಧ ಇಷ್ತಿಯಾಕ್ ಎಂಬುವವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಮಾರ್ಚ್ 29 ರಂದು ಚುನಾವಣೆ ಘೋಷಣೆ ಹಿನ್ನೆಲೆ ಮಾ.19 ರಂದು ಆಹಾರ ಸಾಮಗ್ರಿ ವಶಕ್ಕೆ ಪಡೆದಿದ್ದ ಚುನಾವಣಾಧಿಕಾರಿಗಳ ಕ್ರಮವನ್ನು ಹೈಕೋರ್ಟ್ ರದ್ದುಗೊಳಿಸಿದೆ.

Read More

ಉಡುಪಿ: ಉಡುಪಿಯಲ್ಲಿ ಹದಿಹರೆಯದ ಯುವತಿ ನಾಪತ್ತೆಯಾಗಿದ್ದಾಳೆ. ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ(19) ನಾಪತ್ತೆಯಾದ ಯುವತಿಯಾಗಿದ್ದಾಳೆ. ಏಪ್ರಿಲ್ 7 ರಂದು ಶ್ರೀ ಲಕ್ಷ್ಮೀ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಬೆಂಗಳೂರು : ಐಎಎಸ್ ಅಧಿಕಾರಿ ಆಕಾಶ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದ್ದು, ಪತ್ನಿ ವಂದನಾ ಬೆಂಗಳೂರು ಪೂರ್ವ ವಿಭಾಗದ ಮಹಿಳಾ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ ಡಾ. ಆಕಾಶ್ ಶಂಕರ್ ವಿರುದ್ಧ ಪತ್ನಿ ಡಾ.ಎಸ್. ವಂದನಾ ಬೆಂಗಳೂರು ಪೂರ್ವ ವಿಭಾಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಐಎಸ್ ಅಧಿಕಾರಿ ಡಾ. ಅಕಾಶ್ ಅವರ ತಂದೆ, ತಾಯಿ, ಸಹೋದರ ವಿರುದ್ಧವೂ ದೂರು ದಾಖಲಾಗಿದ್ದು, ವಿವಾಹ ಸಂದರ್ಭದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಆಭರಣಗಳನ್ನು ಉಡುಗೊರೆಯಾಗಿ ನೀಡಿದ್ದರೂ. ಸಹ ಬೆಂಗಳೂರಿನಲ್ಲಿ ಮನೆ ಕೊಡಿಸಬೇಕು ಎಂದು ವರದಕ್ಷಿಣ ಕಿರುಕುಳ ನೀಡುತ್ತಿದ್ದಾರೆ ಎಂದು ವಂದನಾ ಆರೋಪಿಸಿದ್ದಾರೆ.

Read More

ಉಡುಪಿ: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿಯ ಯುವಕನೋರ್ವ ಮೃತಪಟ್ಟಿರುವುದಾಗಿ ವರದಿಯಾಗಿದೆ. ಎರಡು ವಾರದ ಹಿಂದೆ ಸೌದಿಯಲ್ಲಿ ರಸ್ತೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಕಾಪು ನಿವಾಸಿ ಮಜೂರು ಕೊಂಬಗುಡ್ಡೆ ನಿವಾಸಿ ಮುಹಮ್ಮದ್ ರಿಯಾಝ್(27) ಜುಬೈಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.ಮಾರ್ಚ್ 25ರಂದು ಜುಬೈಲ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮುಹಮ್ಮದ್ ರಿಯಾಝರನ್ನು ಜುಬೈಲ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ರವಿವಾರ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ತಂದೆತಾಯಿ, ಪತ್ನಿಯನ್ನು ಅಗಲಿದ್ದಾರೆ.

Read More