ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಬಂಟ್ವಾಳ ಮೂಲದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಎಫ್ಟಿಎಸ್ಸಿ-1) ನ್ಯಾಯಾಧೀಶ ವಿನಯ್ ದೇವರಾಜ್ 5 ವರ್ಷಗಳ ಶಿಕ್ಷೆ ವಿಧಿಸಿ ನಿನ್ನೆ (ಫೆ.15) ತೀರ್ಪು ನೀಡಿದ್ದಾರೆ. ಅಬ್ದುಲ್ ಅಶ್ರಫ್ (42) ಶಿಕ್ಷೆಗೊಳಗಾದ ಆರೋಪಿ ಎಂದು ಗುರುತಿಸಲಾಗಿದೆ. ಏನಿದು ಪ್ರಕರಣ ? ಆರೋಪಿತು 2024ರ ಆ.11ರಂದು ತನ್ನ ಅಂಗಡಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದದೆ. ಮನೆಯಲ್ಲಿ ನೊಂದು ಕುಳಿತಿದ್ದ ಬಾಲಕಿಯನ್ನು ತಾಯಿ ಪ್ರಶ್ನಿಸಿದಾಗ ನಡೆದ ಘಟನೆಗಳನ್ನು ವಿವರಿಸಿದ್ದಳು. ಘಟನೆಯ ಕುರಿತು ಆ.12ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಸೈ ರತನ್ ಕುಮಾರ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ವೇಳೆ ನ್ಯಾಯಾಧೀಶರು ಆರೋಪಿ ಅಶ್ರಫ್ ಗೆ ಬಿಎನ್ಎಸ್ ಕಲಂ 74ರಡಿ 3 ವರ್ಷ ಸಾದಾ ಸಜೆ, 10,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ,…
Author: main-admin
ಕಾರ್ಕಳ: ಚಾಲಕನ ಮೇಲೆ ಟಿಪ್ಪರ್ ಮಾಲೀಕ ಮತ್ತು ಅವರ ಜೊತೆಗಿದ್ದ ವ್ಯಕ್ತಿಯೋರ್ವ ಹಲ್ಲೆ ಮಾಡಿ ಅಟ್ಟಹಾಸ ಮೆರೆದ ಘಟನೆ ಕಾರ್ಕಳದಲ್ಲಿ ನಡೆದಿದೆ. ಯೋಗಿಶ್ ಎಂಬವರು ಬಂಧಿತ ಆರೋಪಿ. ಚಾಲಕ ಅರ್ಜುನ್ ಹಲ್ಲೆಗೊಳಗಾದ ವ್ಯಕ್ತಿ. ಯೋಗಿಶ್ ಎಂಬವರ ಟಿಪ್ಪರ್ ನಲ್ಲಿ ಅರ್ಜುನ್ ಚಾಲಕರಾಗಿ ದುಡಿಯುತ್ತಿದ್ದರು. ಅರ್ಜುನ್ ಗೆ ಸಂಬಳ ಬಾಕಿಯಿಟ್ಟದ್ದನ್ನು ಕೇಳಿದ ಪದೇ ಪದೇ ಕೇಳಿದ ಬಳಿಕ ಯೋಗಿಶ್ ಅದನ್ನು ನವೆಂಬರ್ ನಲ್ಲಿ ಕೊಟ್ಟಿದ್ದರು. ಫೆ.೧೩ಕ್ಕೆ ರಾತ್ರಿ ಬೆಳ್ಮಣ್ ನಲ್ಲಿರುವ ತನ್ನ ಮಾವನ ಹೋಟೆಲ್ ಗೆ ಅರ್ಜುನ್ ಹೋದಾಗ ಅಲ್ಲಿದ್ದ ಯೋಗಿಶ್ ಅವಾಚ್ಯ ಶಬ್ಧಗಳಿಂದ ಬೈದು ಆತನ ಮುಖಕ್ಕೆ ಹೊಡೆದಿದ್ದಾನೆ. ಯೋಗಿಶ್ ಜೊತೆಗಿದ್ದ ಗಡ್ಡಧಾರಿ ವ್ಯಕ್ತಿ ಕೂಡಾ ಸೋಡಾ ಬಾಟಲಿಯಿಂದ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ಅರ್ಜುನ್ ಕಾರ್ಕಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಅವರು ಹಲ್ಲೆ ನಡೆಸಿದ ಸಂದರ್ಭ ತನ್ನ ಜೇಬಿನಲ್ಲಿದ್ದ ಹಣ ಕಳೆದುಹೋಗಿದೆ ಎಂದು ಕೂಡಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮಂಗಳೂರು: ಸಿಗರೇಟ್ ನಲ್ಲಿ ಮಾದಕ ವಸ್ತುವನ್ನು ಬೆರೆಸಿ ಸಾರ್ವಜನಿಕ ಸ್ಥಳದಲ್ಲಿ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಬಿಜೈಯಲ್ಲಿ ನಡೆದಿದೆ. ಕೇರಳ ಕೋಯಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿ ನಿವಾಸಿ ಶಾಮಿಲ್ (21) ಹಾಗೂ ಬಿಜೈ ನ್ಯೂ ರೋಡ್ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಸಿಗರೇಟು ಸೇದುತ್ತಿದ್ದ ಮಲಪ್ಪುರ ಜಿಲ್ಲೆಯ ಪೆರುಂಪಡಪ್ಪು ನಿವಾಸಿ ಸಫ್ವಾನ್ (22) ಬಂಧಿತ ಆರೋಪಿಗಳು. ಇವರು ಸಾರ್ವಜನಿಕ ಸ್ಥಳಗಳಲ್ಲಿ ಡ್ರಗ್ಸ್ ಸೇದುತ್ತಿದ್ದ ಬಗ್ಗೆ ಅನುಮಾನಗೊಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಾದಕ ವಸ್ತು ಸೇವನೆ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದರು. ಇದೀಗ ಅವರನ್ನು ವಶಪಡಿಸಿಕೊಂಡು ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಡ್ರಗ್ಸ್ ಸೇವಿಸಿರೋದು ದೃಢಪಟ್ಟಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಗಣತಿಯನ್ನು ನಡೆಸಲಾಗುತ್ತಿದೆ. 2025ನೇ ಸಾಲಿನಲ್ಲಿ ರಸ್ತೆ ಸಂಚಾರ ಗಣತಿಯನ್ನು ಫೆಬ್ರವರಿ 17ರಂದು ಬೆಳಗ್ಗೆ 6ರಿಂದ ಫೆಬ್ರವರಿ 24ರ ಬೆಳಗ್ಗೆ 6ರವರೆಗೆ ಸತತವಾಗಿ 7 ದಿನಗಳ ಕಾಲ ನಡೆಸಲಾಗುವುದು. ದ.ಕ. ಜಿಲ್ಲೆಯಲ್ಲಿ ಈ ಗಣತಿಗೆ ಸುಮಾರು 126 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ. ವಾಹನ ಸಂಚಾರದ ಬೆಳವಣಿಗೆಯ ತೀವ್ರತೆಯನ್ನು ಗಮನಿಸಿ ರಸ್ತೆಗಳ ಮೇಲೈಯನ್ನು ಅಭಿವೃದ್ಧಿ ಪಡಿಸುವುದು, ರಸ್ತೆಗಳನ್ನು ಅಗಲಪಡಿಸುವುದು ಹಾಗೂ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು ಇತ್ಯಾದಿ ರಸ್ತೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸರಕಾರವು ರೂಪಿಸಲು ಮತ್ತು ಕೈಗೆತ್ತಿಗೊಳ್ಳುವ ಉದ್ದೇಶದಿಂದ ವಾಹನಗಳ ಸಂಚಾರ ಗಣತಿ ನಡೆಸಲಾಗುತ್ತದೆ. ವಾಹನ ಸಂಚಾರ ವಿವರಗಳನ್ನು ಸಂಗ್ರಸಲು ದ.ಕ. ಜಿಲ್ಲೆಯ 126 ಗಣತಿ ಕೇಂದ್ರಗಳಲ್ಲಿ ಸಹಾಯಕ ಇಂಜಿನಿಯರ್/ಕಿರಿಯ ಇಂಜಿನಿಯರ್ಗಳನ್ನು ನೇಮಿಸಲಾಗಿದೆ. ಈ ವಾಹನ ಸಂಚಾರದ ಗಣತಿಗೆ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸಬೇಕು…
ಸುಳ್ಯ: ಬಾಡಿಗೆ ಪಾವತಿಸುವಂತೆ ಕೇಳಿದಾಗ ಹಲ್ಲೆ ನಡೆಸಿದ್ದಾರೆಎಂದು ಆರೋಪಿಸಿ ಸುಳ್ಯ ಠಾಣೆಗೆ ದೂರು ನೀಡಲಾಗಿದೆ. ಹಲ್ಲೆಗೊಳಗಾದವರನ್ನು ಕನಕಮಜಲು ಗ್ರಾಮದ ಅಬ್ದುಲ್ లతిథా ಎಂದು ಗುರುತಿಸಲಾಗಿದ್ದು ಅವರು ಸುಳ್ಯದ ಎಪಿಎಂಸಿಯಲ್ಲಿ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕನಕಮಜಲಿನ ಸುಣ್ಣಮೂಲೆಯಲ್ಲಿ ಒಂದು ವಾಣಿಜ್ಯ ಕಟ್ಟಡ ಹೊಂದಿದ್ದರು. ಅದರಲ್ಲಿ ಒಂದು ಅಂಗಡಿಯನ್ನು అబ్బులో ಅವರಿಗೆ ಬಾಡಿಗೆ ನೀಡಿದ್ದು, ಅಬ್ದುಲ್ ಸರಿಯಾಗಿ ಬಾಡಿಗೆ ಪಾವತಿಸುತ್ತಿರಲಿಲ್ಲ. ಫೆಬ್ರವರಿ 12ರಂದು ‘ಸಂಜೆ ಅಂಗಡಿ ಬಳಿಗೆ ಹೋಗಿ ಅಬ್ದುಲ್ ಅವರಿಗೆ ತಿಂಗಳಿಗೆ ಸರಿಯಾಗಿ ಬಾಡಿಗೆ ಪಾವತಿಸುವಂತೆ ಕೇಳಿದಾಗ, ಅಂಗಡಿಯಲ್ಲಿದ್ದ ಅಬ್ದುಲ್ ಅವರ ಮಕ್ಕಳಾದ ಬಾತಿಶಾ ಮತ್ತು ಹಫೀಶ್ ಅವಾಚ್ಯವಾಗಿ ಬೈದು ನಾವು ಬಾಡಿಗೆ ಹಣವನ್ನು ಕೊಡುವುದಿಲ್ಲ ನಾವು ಕೊಟ್ಟಾಗ ನೀವು ತೆಗೆದುಕೊಳ್ಳಬೇಕು ಎಂದು ಉಡಾಫೆಯಿಂದ ಮಾತನಾಡಿ ಬಳಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬೆಳ್ಳಾರೆ : ಕೊಳ್ತಿಗೆ ಗ್ರಾಮದಲ್ಲಿ ತಂದೆಯೇ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದ್ದು ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೈಂಗಿಕ ದೌರ್ಜನ್ಯದ ಕುರಿತು ಯುವತಿಯ ತಾಯಿಯೇ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ. ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು : ಸರಕಾರಿ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.66 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಗೆ ನಮ್ರತಾ ಎಂಬಾಕೆಯ ಪರಿಚಯವಾಗಿದ್ದು, ಆಕೆ ಟೆಂಡರ್ದಾರ ಅವಿನಾಶ್ ಶೆಟ್ಟಿಗೆ 2.50 ಲಕ್ಷ ರೂ. ನೀಡಿದರೆ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿದ್ದಳು. ಅದರಂತೆ ತಾನು ಅವಿನಾಶ್ ಶೆಟ್ಟಿಗೆ ಕರೆ ಮಾಡಿ ಆತನ ಸೂಚನೆಯಂತೆ ತನ್ನ ಮಗಳಿಗೆ ಉದ್ಯೋಗ ದೊರಕಿಸಿಕೊಡಲು ವಿನಂತಿಸಿದೆ. ಹಾಗೇ ಚೆಕ್ ಕೂಡ ನೀಡಿದೆ.ಬಳಿಕ ಆತನನ್ನು ವಿಚಾರಿಸಿದಾಗ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದಿದ್ದ. ಬಳಿಕ ಇದೊಂದು ವಂಚನೆಯ ಜಾಲ ಎಂದು ಮನವರಿಕೆಯಾಯಿತು. ಈತ ಹಲವು ಮಂದಿಗೆ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿ ಬಳಿಕ ವಂಚಿಸಿದ್ದ ಆರೋಪದಡಿ ಜ.5ರಂದು ಉರ್ವ ಠಾಣೆ ಪೊಲೀಸರು ಬಂಧಿಸಿರುವ ವಿಚಾರ ತಿಳಿದು ಬಂತು. ಈ ಮಧ್ಯೆ ತಾನು ನೀಡಿದ ಚೆಕ್ ಅಕ್ಷತಾ ಎಂಬಾಕೆಯ ಖಾತೆ ಯಲ್ಲಿ ಕ್ಲಿಯರ್ ಆಗಿದೆ. ಅದಲ್ಲದೆ ಇನ್ನಷ್ಟು ಮೊತ್ತವನ್ನು ಗೂಗಲ್ ಪೇ ಮೂಲಕ ಗೌತಮ್ ಶೆಟ್ಟಿಗೆ ವರ್ಗಾವಣೆ ಮಾಡಿದ್ದಾರೆ. ಹಾಗಾಗಿ ಅವಿನಾಶ್…
ಬೆಳ್ತಂಗಡಿ : ಮಂಗಳೂರಿಗೆ ಬರಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ವೇಳೆ ಹೃದಯಾಘಾತದಿಂದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ಹಿದಾಯತ್ ಶುಕ್ರವಾರ ಊರಿಗೆ ಬರುವರಿದ್ದರು, ಈ ಹಿನ್ನಲೆ ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಿನಲಸ್ಲಿ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅಷ್ಟರಲ್ಲೇ ಅವರು ಸಾವನಪ್ಪಿದ್ದರು. ಹಿದಾಯತ್ ಮೊದಲು ಉದ್ಯೋಗ ನಿಮಿತ್ತ ಬಹರೈನ್ ಗೆ ತೆರಳಿದ್ದವರು ಬಳಿಕ ಸೌದಿ ಅರೇಬಿಯಾಕ್ಕೆ ತೆರಳಿ ಕಾರ್ಗೊ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಕುಂದಾಪುರ: ವೆಂಕಟರಮಣ ಆರ್ಕೇಡ್ನಲ್ಲಿರುವ ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸಂಸ್ಥೆಯಲ್ಲಿ ಇರಿಸಿದ್ದ 7.25 ಕೋ.ರೂ. ಠೇವಣಿಯನ್ನು ಗ್ರಾಹಕರಿಗೆ ಮರಳಿಸದೆ ವಂಚಿಸಲಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ ಕಸಬಾದ ಶ್ರೀಧರ್ ದೂರು ನೀಡಿದ್ದು, ಅವರು 2022ರಲ್ಲಿ ಮಗಳಾದ ಶ್ರೀರûಾ ಹೆಸರಿನಲ್ಲಿ ಇಟ್ಟ 2 ಲಕ್ಷ ರೂ., ಶ್ರೀ ವರ್ಷಾ ಹೆಸರಿನಲ್ಲಿ ಇಟ್ಟ 5 ಲಕ್ಷ ರೂ. ಠೇವಣಿ ವಾಯಿದೆ ಮುಗಿದರೂ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಮತ್ತು ನಿರ್ದೇಶಕರು ಆ ಹಣವನ್ನು ಮರಳಿಸಿಲ್ಲ. ಇದೇ ರೀತಿ ಸುಮಾರು 44 ಜನರ ಒಟ್ಟು 7,18,24,831 ರೂ. ಠೇವಣಿ ವಾಯಿದೆ ಮುಗಿದರೂ ಮರಳಿ ನೀಡದೇ ಇರುವುದು ಗಮನಕ್ಕೆ ಬಂದಿದೆ. ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶಿವಾನಂದ, ನಿರ್ದೇಶಕರಾದ ಪ್ರಕಾಶ ಲೋಬೋ, ಮಹೇಶ ಲಕ್ಷ್ಮಣ ಕೊತ್ವಾಲ, ವಿಟuಲ, ಅವಿನಾಶ ಪಿಂಟೋ, ಕೆ. ರಾಜೇಶ ದೈವಜ್ಞ, ಎಚ್. ಮಹಾಬಲ, ರತ್ನಾಕರ, ದಯಾನಂದ, ಮರ್ವಿನ್ ಫೆರ್ನಾಂಡಿಸ್, ಸರೋಜಾ, ಸುಧಾಕರ, ಗೋಪಾಲ, ಡಾ| ದಿನಕರ ಇವರೆಲ್ಲ ಸೇರಿ ಒಟ್ಟು…
ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ದಾಟಿ ಹೋಟೆಲ್ ಗೆ ನುಗ್ಗಿ ಕಾರು, ಬೈಕ್ ಗಳನ್ನು ಜಖಂಗೊಳಿಸಿದ ಘಟನೆ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ನಿಲ್ಲಿಸಿ ಅದರ ಚಾಲಕ ಹೊಟೇಲ್ಗೆ ತೆರಳಿದ್ದರು. ಈ ವೇಳೆ ಲಾರಿ ಏಕಾಏಕಿ ಇಳಿಜಾರಾಗಿರುವ ರಸ್ತೆಯಾಗಿ ರಾಷ್ಟೀಯ ಹೆದ್ದಾರಿ 66ನ್ನು ದಾಟಿಕೊಂಡು ಹೊಟೇಲ್ಗೆ ಢಿಕ್ಕಿ ಹೊಡೆದಿದೆ. ಅಲ್ಲದೆ, ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಎರಡು ಆಟೋ ರಿಕ್ಷಾಗಳು, ಎರಡು ಕಾರು ಹಾಗೂ ಒಂದು ದ್ವಿಚಕ್ರ ವಾಹನ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.