ಕಾರ್ಕಳದ ಯುವಕ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ. ಹನಿ ಟ್ರ್ಯಾಪ್ ಗೆ ಒಳಗಾಗಿ ಡೆತ್ ನೋಟ್ ಬರೆದಿಟ್ಟು ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿದ್ದವು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಹರಿರಾಮ್ ಶಂಕರ್, ಡೆತ್ ನೋಟ್ ನಲ್ಲಿ ಉಲ್ಲೇಖಸಿರುವ ಎಲ್ಲಾ ವಿಷಯಗಳ ಬಗ್ಗೆ ತನಿಖೆ ನಡೆಸುವ ಅವಶ್ಯಕತೆ ಇದೆ. ಆರಂಭಿಕವಾಗಿ ಇದು ಪ್ರೀತಿ ವೈಫಲ್ಯದ ಪ್ರಕರಣವೆಂದು ಕಂಡುಬಂದರೂ, ಸೂಸೈಡ್ ನೋಟ್ನಲ್ಲಿರುವ ವಿಷಯಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ, ಆತ್ಮಹತ್ಯೆಯ ಹಿಂದಿರುವ ನೈಜತೆಯನ್ನು ಪತ್ತೆಹಚ್ಚುವತ್ತ ಗಮನಹರಿಸಲಾಗಿದೆ. ಈಗಲೇ ಯಾವುದೇ ತೀರ್ಮಾನಕ್ಕೆ ಬರುವುದಿಲ್ಲ, ಆತ್ಮಹತ್ಯೆಗೆ ಪ್ರಚೋದನೆ ನೀಡಿದವರು ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ತನಿಖೆ ಪಾರದರ್ಶಕವಾಗಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ…
Author: main-admin
ಕಾಸರಗೋಡು: ಕಾರಿನಲ್ಲಿ ಬಂದ ಇಬ್ಬರು ದುರ್ಷ್ಕಮಿಗಳು ಓಮ್ನಿ ವ್ಯಾನ್ ನ್ನು ತಡೆದು ವ್ಯಾಪಾರಿಯ ಕುತ್ತಿಗೆಯಲ್ಲಿದ್ದ ಮೂರು ಪವನ್ ನ ಚಿನ್ನದ ಸರ ಎಗರಿಸಿದ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ. ವರ್ಕಾಡಿ ಅರಿಬೈಲು ನಿವಾಸಿ ಸೀತಾರಾಮ ಶೆಟ್ಟಿ ( 33) ರವರ ಕುತ್ತಿಗೆಯಲ್ಲಿದ್ದ ಸರವನ್ನು ಎಗರಿಸಲಾಗಿದೆ. ಮೊರತ್ತನೆ ಯಲ್ಲಿ ಚಿಕನ್ ಸೆಂಟರ್ ಮಾಲಕ ರಾಗಿರುವ ಸೀತಾರಾಮ ಶೆಟ್ಟಿ ರವರು ಮಧ್ಯಾಹ್ನ ಅಂಗಡಿಯಿಂದ ವ್ಯಾನ್ ನಲ್ಲಿ ಮನೆಗೆ ಮರಳುತ್ತಿದ್ದಾಗ ಕಾರಿನಲ್ಲಿ ಬಂದ ಇಬ್ಬರು ವ್ಯಾನ್ ನ್ನು ತಡೆದು ಕೃತ್ಯ ನಡೆಸಿರುವುದಾಗಿ ದೂರಲಾಗಿದೆ.ಬಳಿಕ ಕಾರಲ್ಲಿದ್ದವರು ಪರಾರಿಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಮಂಗಳೂರು: ಸಾಮಾಜಿಕ ಜಾಲ ತಾಣದಲ್ಲಿ ಆತಂಕಕಾರಿ ಸಂದೇಶ ರವಾನೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಮುಲ್ಕಿ ಠಾಣಾ ಪೊಲೀರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು, ಶಾಂತಿನಗರ ಮೆಹನಾಝ್ ಮಂಝಿಲ್ ನಿವಾಸಿ ಟಿ ಎ ಮೊಯಿದಿನ್ ಎಂಬವರ ಪುತ್ರರಾದ ಮೊಹಮ್ಮದ್ ಅನ್ವರ್ (44) ಹಾಗೂ ತಾಯಿರ್ ನಕಾಶ್ (42) ಎಂದು ಹೆಸರಿಸಲಾಗಿದೆ. ಅ 15 ರಂದು ಸೋಷಿಯಲ್ ಮೀಡಿಯಾದಲ್ಲಿ ಓರ್ವ ವ್ಯಕ್ತಿಯು ಬ್ಯಾರಿ ಭಾಷೆಯಲ್ಲಿ ಮಾತಾಡುತ್ತಾ ಸಮಾಜದಲ್ಲಿ ಕೋಮು ಗಲಭೆಯಾಗುವಂತಹ ಕೃತ್ಯಕ್ಕೆ ಕಾರಣವಾಗುವ ಸಂದೇಶವನ್ನು ರವಾನಿಸಿದ್ದಾನೆ. ಈ ಸಂದೇಶದಲ್ಲಿ ‘ಒಂದು ಗ್ಯಾಂಗ್ ಇದೆ ಯಾರು ಕ್ಯಾರ್ ಲೆಸ್ ಮಾಡಬೇಡಿ, ಖಾಲಿ ಬಜಪೆ, ಸುರತ್ಕಲ್ ಅಂತಲ್ಲ, ಅವರ ಗ್ಯಾಂಗ್ ಇರುವುದು ಭಟ್ಟಕೋಡಿಯಲ್ಲಿ. ಬಜಪೆ ಮತ್ತು ಸುರತ್ಕಲ್ ಜನರು ಮಾತ್ರ ಕ್ಯಾರ್ ಫುಲ್ ಆಗಿರುವುದಲ್ಲ. ಕಿನ್ನಿಗೋಳಿಯವರು ಕ್ಯಾರ್ ಫುಲ್ ಆಗಿರಬೇಕಾಗುತ್ತದೆ ಹಾಗೂ ಎಲ್ಲಾ ಕುಡುಕರ ಗ್ಯಾಂಗ್ ಇರುವುದು ಭಟ್ಟಕೋಡಿ ಬಾರ್ ನಲ್ಲಿ. ನಾನು ಖುದ್ದು ಅವರ ಟೀಮ್ ಎಲ್ಲಾ ಭಟ್ಟಕೋಡಿಯಲ್ಲಿ ನೋಡಿದ್ದೇನೆ. ಸುಮಾರು ಒಂದೂವರೆ ತಿಂಗಳ…
ಪುತ್ತೂರು: ಅ.17ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯ ಗ್ರಾಮ ಎಂಬವರು ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬರುತ್ತಿರುವಾಗ, ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣಾ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283, ಶ್ರೀ ಶೈಲ ಎಂ ಕೆ, ಕೈ ಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರೂ, ತನ್ನ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಬಂದು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿದ್ದು ಈ ಕುರಿತು ಬಶೀರ್ ಅವರನ್ನು ಹಿಂಬಾಲಿಸಿ ವಾಹನವನ್ನು ತಡೆದು ಆತನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ಮಾಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಆಗಿದೆ. ಇದನ್ನು ಪರಿಶೀಲಿಸಿ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283, ಶ್ರೀ ಶೈಲ ಎಂ ಕೆ ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.
ಮಂಗಳೂರು: ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಆಗಿ 64,000 ರೂ. ಕಳೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ದೂರುದಾರರು ಅಕ್ಟೋಬರ್ 5 ರಂದು ಸ್ನೇಹಿತರನ್ನು ಭೇಟಿ ಮಾಡಲು ನಗರಕ್ಕೆ ಬಂದಿದ್ದರು. ಅಂದು ಸಂಜೆ, ಅವರಿಗೆ ಅಪರಿಚಿತ ಸಂಖ್ಯೆಯಿಂದ ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಇರುವ ವಾಟ್ಸಾಪ್ ಸಂದೇಶ ಬಂದಿತ್ತು. ಆ ರಾತ್ರಿ, ಅವರು ಅದನ್ನು ಪರಿಶೀಲಿಸಲು ಆ ಲಿಂಕ್ ಅನ್ನು ಕ್ಲಿಕ್ ಮಾಡಿದ್ದಾರೆ. ಪರಿಣಾಮ ಅವರ ಸಂಪೂರ್ಣ ಮೊಬೈಲ್ ಫೋನ್ ಹ್ಯಾಕ್ ಆಗಿದೆ. ವಂಚಕರು ದೂರುದಾರರ ಫೋನಿನಲ್ಲಿರುವ ಯುಪಿಐ ಆಧಾರಿತ ಅಪ್ಲಿಕೇಶನ್ಗಳಿಗೆ ಪ್ರವೇಶ ಪಡೆದುಕೊಂಡಿದ್ದಾರೆ. ಇದರಿಂದಾಗಿ ವಿಭಿನ್ನ ಲಾಗಿನ್ಗಳ ಒಟಿಪಿಗಳು ಅವರಿಗೆ ಬಂದಿದೆ. ನಂತರ ಅವರಿಗೆ ತಿಳಿಯದಂತೆ ಎರಡು ಪ್ರತ್ಯೇಕ ವಹಿವಾಟುಗಳ ಮೂಲಕ 60,000 ರೂ. ಮತ್ತು 4,000 ರೂ. ವರ್ಗಾಯಿಸಿಕೊಂಡಿದ್ದಾರೆ. ಈ ವಂಚನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಅಧಿಕಾರಿಗಳಿಗೆ…
ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಲಾಭ ಗಳಿಸಿಕೊಡುತ್ತೇವೆ ಎಂದು ನಂಬಿಸಿ ಕಿನ್ನಿಗೋಳಿ ಪರಿಸರದ ಪರಿಚಯಸ್ಥ ಜನರಿಗೆ ಕೋಟಿಗಟ್ಟಲೆ ರೂಪಾಯಿ ವಂಚಿಸಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಿನ್ನಿಗೋಳಿ ಸಮೀಪದ ಕವತ್ತಾರಿನ ರಿಚರ್ಡ್ ಡಿಸೋಜ ಮತ್ತು ಅವನ ಹೆಂಡತಿ ರಶ್ಮಿ ರೀಟಾ ಪಿಂಟೊ ಸೆರೆಯಾಗಿರುವ ಆರೋಪಿಗಳು. ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಸಾರ್ವಜನಿಕರಿಗೆ ಹೂಡಿಕೆ ನೆಪದಲ್ಲಿ ಸುಮಾರು 1.5 ಕೋ. ರೂ. ವಂಚಿಸಿದ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಸುಮಾರು ಒಂದೂವರೆ ವರ್ಷದಿಂದ ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದರು. ಮೂಲ್ಕಿ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾವೂರು ಮರಕಡದ ಜ್ಯೋತಿನಗರದ ಧರ್ಮರಾಜ (60) ಎಂದು ಗುರುತಿಸಲಾಗಿದೆ. ಆರೋಪಿಯು 2018ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಎಲ್ಪಿಸಿ ವಾರೆಂಡ್ ಹೊರಡಿಸಿತ್ತು. ಅದರಂತೆ ಕಾವೂರು ಠಾಣೆಯ ಪೊಲೀಸರು ಮುಲ್ಕಿಯ ಪಕ್ಷಿಕರೆಯ ಕೆಂಬ್ರಾಲ್ನಿಂದ ಬಂಧಿಸಿದ್ದಾರೆ. ಆರೋಪಿಯನ್ನು 1ನೇ ಹೆಚ್ಚುವರಿ ಹಿರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ಅ.29ರವರೆಗೆ ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದೆ.
ಉಡುಪಿ: ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ ಪವಿತ್ರ (17), ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಎಂದು ಗುರುತಿಸಲಾಗಿದೆ. ಯುವತಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ನಗರ ಪೋಲಿಸ್ ಠಾಣೆಯ ಎಸ್.ಐ ಭರತೇಶ್, ಎ.ಎಸ್.ಐ ಪರಮೇಶ್ವರ್ ಕೆ, ಎ.ಎಸ್ ಐ ರಮೇಶ್, ಮುಖ್ಯ ಆರಕ್ಷಕ ಜಯಕರ್ ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಎರಡು ಮೃತದೇಹಗಳನ್ನು ನೇಣುಕುಣಿಕೆಯಿಂದ ತೆರವುಗೊಳಿಸಿ ಅಂಬುಲೆನ್ಸ್ ವಾಹನದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ಪೋಲಿಸ್ ಇಲಾಖೆಗೆ ನೆರವು ನೀಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ವಿ.ಕೆ. ಫರ್ನಿಚರ್ ಅಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ “Diya With Rangoli Competition – 2025” ಎಂಬ ಆಕರ್ಷಕ ಸ್ಪರ್ಧೆ ಆಯೋಜಿಸಲಾಗಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ರಂಗೋಲಿ ಮತ್ತು ದಿಯಾ ವಿನ್ಯಾಸವನ್ನು ಪ್ರದರ್ಶಿಸಿ ₹10,000 ಮೌಲ್ಯದ ಗಿಫ್ಟ್ ವೌಚರ್ ಗೆಲ್ಲುವ ಅವಕಾಶವನ್ನು ಭಾಗವಹಿಸುವವರಿಗೆ ನೀಡಲಾಗಿದೆ.ಸ್ಪರ್ಧೆಯ ಅವಧಿ: ಅಕ್ಟೋಬರ್ 20ರಿಂದ ಅಕ್ಟೋಬರ್ 24, 2025ರವರೆಗೆ.ಭಾಗವಹಿಸುವ ವಿಧಾನ:• ಸ್ಪರ್ಧೆಯಲ್ಲಿ ಭಾಗವಹಿಸಲು ಇನ್ಸ್ಟಾಗ್ರಾಂನಲ್ಲಿ @vkfurniture_electronics ಪುಟವನ್ನು ಫಾಲೋ ಮಾಡಬೇಕು.• ದಿಯಾ ಇರಿಸಿದ ಸುಂದರವಾದ ರಂಗೋಲಿಯ ಚಿತ್ರವನ್ನು ಪೋಸ್ಟ್ ಹಾಗೂ ಸ್ಟೋರಿಯಾಗಿ ಅಪ್ಲೋಡ್ ಮಾಡಬೇಕು.• ಪೋಸ್ಟ್ನಲ್ಲಿ @vkfurniture_electronics ಟ್ಯಾಗ್ ಮಾಡಿ, #vkfurnitureandelectronicsRangoliwithdiya ಹ್ಯಾಶ್ಟ್ಯಾಗ್ ಬಳಸಬೇಕು.• ಹೆಚ್ಚು ಲೈಕ್ ಮತ್ತು ಶೇರ್ ಪಡೆದ ಪೋಸ್ಟ್ಗಳಿಗೆ ಗೆಲ್ಲುವ ಹೆಚ್ಚಿನ ಅವಕಾಶ.ಗಮನಿಸಿ: ರಂಗೋಲಿ ದೀಪಾವಳಿ ಕಾಲದಲ್ಲಿಯೇ (2025) ಸೃಜಿಸಲ್ಪಟ್ಟಿರಬೇಕು.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 📞 87488 00666ಅಥವಾ ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಿ: VK Furniture & Electronics
ಬಂಟ್ವಾಳ: ತಾಲೂಕಿನ ಪಾಣೆ ಮಂಗಳೂರಿನಲ್ಲಿ ರಿಕ್ಷಾ ಚಾಲಕನೋರ್ವ ನಿಷೇಧಿತ ಎಂ.ಡಿ.ಎಂ.ಎ. ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಬಂಟ್ವಾಳ ನಿವಾಸಿ ಆಗಿರುವ ಮೊಹಮ್ಮದ್ ಇಮ್ತಿಯಾಜ್ (40) ಬಂಧಿತ ಆರೋಪಿಯಾಗಿದ್ದಾನೆ. ಪಾಣೆಮಂಗಳೂರು ಸ್ಮಶಾನದ ರಸ್ತೆಯಲ್ಲಿ ಈತ ಅನುಮಾಸ್ಪವಾಗಿ ರಿಕ್ಷಾದಲ್ಲಿ ನಿಂತಿರುವ ವೇಳೆ ಪೊಲೀಸರು ವಿಚಾರಿಸಿದಾಗ ಈತನ ಬಳಿ ಒಂದು ಸಾವಿರ ರೂಪಾಯಿ ಮೌಲ್ಯದ 760 ಮಿಲಿ ಗ್ರಾಂ ಎಂ.ಡಿ.ಎಂ.ಎ.ಮಾದಕ ವಸ್ತುಸಿಕ್ಕಿದ್ದು ಪೋಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.






