ಹೈದರಾಬಾದ್: ಸಿನೆಮಾ ಶೈಲಿಯಲ್ಲೇ ನಡೆದ ನೈಜ ಕಾರ್ಯಾಚರಣೆಯೊಂದರಲ್ಲಿ ಮಲ್ಕಾಜ್ಗಿರಿ ಪೊಲೀಸ್ ಆಯುಕ್ತೆ ಐಪಿಎಸ್ ಸುಮತಿ ಅವರು ಗೂಂಡಾಗಳಿಗೆ ಮರೆಯಲಾಗದ ಪಾಠ ಕಲಿಸಿದ್ದಾರೆ. ಮಧ್ಯರಾತ್ರಿ ಯಾವುದೇ ಭದ್ರತೆಯಿಲ್ಲದೆ, ಒಬ್ಬ ಸಾಮಾನ್ಯ ಮಹಿಳೆಯಂತೆ ದಿಲ್ಸುಖ್ನಗರ ಬಸ್ ನಿಲ್ದಾಣದಲ್ಲಿ ನಿಂತು, ಕಿರುಕುಳ ನೀಡಲು ಬಂದ 40ಕ್ಕೂ ಹೆಚ್ಚು ಕಾಮುಕರನ್ನು ಜೈಲಿಗಟ್ಟಿದ್ದಾರೆ. ಮಲ್ಕಾಜ್ಗಿರಿ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಸುಮತಿ ಅವರು ಶಾಕ್ ಟ್ರೀಟ್ಮೆಂಟ್ ನೀಡಲು ನಿರ್ಧರಿಸಿದ್ದರು. ರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 3 ಗಂಟೆಯವರೆಗೆ ಅವರು ಒಬ್ಬಂಟಿಯಾಗಿ ರಸ್ತೆಯಲ್ಲಿ ನಿಂತು ಪರಿಸ್ಥಿತಿಯನ್ನು ಅವಲೋಕಿಸಿದರು. ಅಲ್ಲಿಯವರೆಗೆ ಯಾವುದೇ ಪೊಲೀಸ್ ಗಸ್ತು ವಾಹನಗಳು ಕಾಣಿಸಿಕೊಳ್ಳದಿರುವುದು ನಮ್ಮ ವ್ಯವಸ್ಥೆಯ ವೈಫಲ್ಯವನ್ನೂ ಎತ್ತಿ ತೋರಿಸಿತು.ಮದ್ಯ ಮತ್ತು ಗಾಂಜಾ ಅಮಲಿನಲ್ಲಿದ್ದ ಹೆಚ್ಚಿನ ಗೂಂಡಾಗಳು (ಅದರಲ್ಲೂ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು) ಸುಮತಿಯವರನ್ನು ಸುತ್ತುವರೆದು ಅಶ್ಲೀಲ ಪ್ರಶ್ನೆಗಳನ್ನು ಕೇಳುತ್ತಾ ಕಿರುಕುಳ ನೀಡಲು ಆರಂಭಿಸಿದರು. ಬೈಕ್ಗಳನ್ನು ಅಡ್ಡ ನಿಲ್ಲಿಸಿ ಅಸಭ್ಯವಾಗಿ ವರ್ತಿಸಿದರು. ಆದರೆ ಸುಮತಿ ಅವರು ಧೈರ್ಯಗುಂದದೆ ಎಲ್ಲವನ್ನೂ ಗಮನಿಸುತ್ತಿದ್ದರು. ಸುಮಾರು 3:30ಕ್ಕೆ…
Author: main-admin
ಬೆಂಗಳೂರು: ದೇಶದ ಅತ್ಯಂತ ಸಂವೇದನಾಶೀಲ ಪ್ರದೇಶಗಳಲ್ಲಿ ಒಂದಾದ ಬೆಂಗಳೂರುದಲ್ಲಿರುವ ಇಸ್ರೋ ಐಸೈಟ್ ಕ್ಯಾಂಪಸ್ ಮೇಲ್ಭಾಗದಲ್ಲಿ ಅನುಮತಿ ಇಲ್ಲದೆ ಡ್ರೋನ್ ಹಾರಾಟ ನಡೆಸಿರುವ ಘಟನೆ ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ. ನಿಷೇಧಿತ ‘ನೋ ಡ್ರೋನ್ ಝೋನ್’ ಪ್ರದೇಶದಲ್ಲೇ ಈ ಘಟನೆ ನಡೆದಿರುವುದು ಗಂಭೀರವಾಗಿ ಪರಿಗಣಿಸಲಾಗಿದೆ. ಸಿಐಎಸ್ಎಫ್ ಯುನಿಟ್ನ ಸಬ್ ಇನ್ಸ್ಪೆಕ್ಟರ್ ನೀಡಿದ ದೂರಿನ ಪ್ರಕಾರ, ಮೇ 2ರಂದು ಬೆಳಿಗ್ಗೆ ಸುಮಾರು 8:16ರ ವೇಳೆಗೆ 80 ರಿಂದ 100 ಅಡಿ ಎತ್ತರದಲ್ಲಿ ಡ್ರೋನ್ ಸುಮಾರು 10 ರಿಂದ 12 ಸೆಕೆಂಡ್ಗಳ ಕಾಲ ಕ್ಯಾಂಪಸ್ ಮೇಲ್ಭಾಗದಲ್ಲಿ ಹಾರಾಡಿರುವುದು ಪತ್ತೆಯಾಗಿದೆ. ನಂತರ ಅದು ಕಣ್ಮರೆಯಾಗಿದ್ದು, ಯಾರು ಹಾರಿಸಿದರು ಎಂಬುದು ಇನ್ನೂ ತಿಳಿದುಬಂದಿಲ್ಲ.ಇಸ್ರೋ ಐಸೈಟ್ ಕ್ಯಾಂಪಸ್ ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವುದರಿಂದ, ಇಲ್ಲಿ ಯಾವುದೇ ಅನುಮತಿ ಇಲ್ಲದೆ ವೈಮಾನಿಕ ಚಟುವಟಿಕೆಗಳನ್ನು ನಡೆಸುವುದು ಕಾನೂನುಬಾಹಿರ. ಇಂತಹ ಘಟನೆಗಳು ರಾಷ್ಟ್ರೀಯ ಭದ್ರತೆಗೆ ಅಪಾಯ ಉಂಟುಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಸಂಬಂಧ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡ್ರೋನ್ ಹಾರಿಸಿದವರ ಪತ್ತೆಗೆ…
ತುಮಕೂರು: ಪ್ರೀತಿಯ ಹೆಸರಿನಲ್ಲಿ ಏಳು ವರ್ಷಗಳ ಕಾಲ ಜೊತೆಗಿದ್ದು, ಮದುವೆಯಾದ ಒಂದೂವರೆ ವರ್ಷಕ್ಕೆ ಗರ್ಭಿಣಿ ಪತ್ನಿಯನ್ನು ಕೈಬಿಟ್ಟು ಮತ್ತೊಂದು ಮದುವೆಗೆ ಸಿದ್ಧನಾಗಿರುವ ಪತಿಯ ವಿರುದ್ಧ ಯುವತಿಯೊಬ್ಬಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾಳೆ. ಇದೀಗ ಈ ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಯುವತಿ ಹೇಳಿದ್ದಾಳೆ. ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆಯ ಸಂತ್ರಸ್ತೆ ಏಳು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದಾಗ, ಜೆರಾಕ್ಸ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಬೊಮ್ಮಾನಾಯಕ್ ಎಂಬಾತನ ಪರಿಚಯವಾಗಿತ್ತು. ಪ್ಯಾನ್ ಕಾರ್ಡ್ ಮಾಡಿಸಲು ಹೋದಾಗ ಶುರುವಾದ ಸ್ನೇಹ ಬಳಿಕ ಪ್ರೀತಿಯಾಗಿ ಬದಲಾಗಿತ್ತು. ಪೋಷಕರ ವಿರೋಧದ ನಡುವೆಯೂ ಈ ಜೋಡಿ ಪಾವಗಡದ ದೇವಸ್ಥಾನದಲ್ಲಿ ಮದುವೆಯಾಗಿತ್ತು. ಮದುವೆಯಾಗಿ ಒಂದೂವರೆ ವರ್ಷ ಸುಖ ಸಂಸಾರ ನಡೆಸಿದ ಬಳಿಕ, ಬೊಮ್ಮಾನಾಯಕ್ ತನ್ನ ಪೋಷಕರ ಮಾತಿಗೆ ಮರುಳಾಗಿ ಗರ್ಭಿಣಿ ಪತ್ನಿಯನ್ನು ದೂರ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಬೊಮ್ಮಾನಾಯಕ್ ಕುಟುಂಬದವರು ಆತನಿಗೆ ಮತ್ತೊಂದು ಮದುವೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದಾಗ ಜಾತಿ ನಿಂದನೆ, ವರದಕ್ಷಿಣೆ ಕಿರುಕುಳ ಮತ್ತು…
ನೆಲಮಂಗಲ: ಮಗಳ ಮದುವೆ ತಯಾರಿಯಲ್ಲಿದ್ದ ಕುಟುಂಬವೊಂದು ಆಮಂತ್ರಣಪತ್ರ ಕೊಡಲು ಪರವೂರಿಗೆ ಹೋಗಿಬರುವುದರ ಒಳಗೆ ವಿವಾಹಕ್ಕೆಂದು ಮಾಡಿಸಿಟ್ಟ ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನೆಲಮಂಗಲ ಬಳಿಯ ದಾಸನಪುರದ ಮುನೇಶ್ವರ ಬಡಾವಣೆಯಲ್ಲಿ ನಡೆದಿದೆ. ಶಿವ ಮತ್ತು ಲೋಕೇಶ್ವರಿ ಎಂಬುವವರ ಮನೆಯ ಡೋರ್ ಒಡೆದು ಒಳ ನುಗ್ಗಿರುವ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ, ನಗದು ದೋಚಿ ಎಸ್ಕೇಪ್ ಆಗಿದ್ದಾರೆ. ತಮಿಳುನಾಡಿನ ಮೂಲವರಾದ ಲೋಕೇಶ್ವರಿ ಹಾಗೂ ಶಿವ ಎಂಬವರು ಸಾಕಷ್ಟು ವರ್ಷದಿಂದ ನೆಲಮಂಗಲದಲ್ಲಿ ನೆಲೆಸಿ ತಮ್ಮ ಜೀವನ ಕಟ್ಟುಕೊಂಡಿದ್ದರು. ಕೂಲಿ ನಾಲಿ ಮಾಡಿ ಜೀವನ ನಡೆಸುತ್ತಿದ್ದ ಇವರು ತಮ್ಮ ಮೂರನೇ ಮಗಳಾದ ಶಂಕರಿ ಮದುವೆ ತಯಾರಿಯಲ್ಲಿದ್ದರು. ಈ ಹಿನ್ನೆಲೆ ಕೂಡಿಟ್ಟ ಹಣದ ಜೊತೆಗೆ ಸಾಲ ಮಾಡಿ ಮಗಳಿಗೆ ಚಿನ್ನಾಭರಣ ತಂದಿದ್ದರು. ಈ ನಡುವೆ ಮದುವೆ ಆಮಂತ್ರಣ ಪತ್ರಿಕೆಯನ್ನ ವರನ ಮನೆಯವರಿಗೆ ಕೊಡಲೆಂದು ತಮಿಳುನಾಡಿಗೆ ಹೋಗಿ ಬರುವುದರ ಒಳಗೆ ಅವು ಕಳ್ಳರಪಾಲಾಗಿವೆ. ವಧುವಿಗೆಂದು ಖರೀದಿಸಿದ್ದ ನೆಕ್ಲೆಸ್, ಕಿವಿ ಓಲೆ, ಸೇರಿದಂತೆ 60 ಗ್ರಾಂಗಳಿಗೂ ಅಧಿಕ ಒಡವೆ ಮನೆಯಲ್ಲಿತ್ತು…
ಕಾರ್ಕಳ : ಕ್ಯಾನ್ಸರ್ ರೋಗವನ್ನು ಆಯುರ್ವೇದಿಕ್ ಚಿಕಿತ್ಸೆ ಮೂಲಕ ಗುಣಪಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳ್ಳಣ್ ಗ್ರಾಮದ ರೊನಾಲ್ಡ್ ರೋಡ್ರಿಗಸ್(68) ಎಂಬವರ ಪತ್ನಿಗೆ ಕ್ಯಾನ್ಸರ್ ಕಾಯಿಲೆ ಇದ್ದು ಮಾ.23ರಂದು ಅವರು ತನ್ನ ಹೆಂಡತಿಯನ್ನು ಫಿಸಿಯೋಥೆರಫಿ ಬಗ್ಗೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಬಳಿಕ ರೋನಾಲ್ಡ್ ಅವರಿಗೆ ಉಡುಪಿಯ ಕಡಿಯಾಳಿ ದೇವಸ್ಥಾನದ ಬಳಿ ಸಿದ್ದಾರ್ಥ್ ಎಂಬ ಹೆಸರಿನ ವ್ಯಕ್ತಿಯ ಪರಿಚಯವಾಗಿದ್ದು, ಆತ ಆಯುರ್ವೇದಿಕ್ ಚಿಕಿತ್ಸೆ ಮೂಲಕ ನಿಮ್ಮ ಪತ್ನಿಯ ರೋಗ ಗುಣಪಡಿಸಬಹುದು ಎಂದು ನಂಬಿಸಿದ್ದನು .ಅದರಂತೆ ರೋನಾಲ್ಡ್ ಸಿದ್ದಾರ್ಥ್ ಪರಿಚಯಿಸಿದ ಮಾಧವ ಎಂಬಾತ ಸೂಚಿಸಿದ ಅನಿಲ್ ಪವಾರ್ ಎಂಬ ಹೆಸರಿನ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು. ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ 40,000ರೂ. ಹಣವನ್ನು ಸಿದ್ದಾರ್ಥ್ಗೆ ನೀಡಿದ್ದರು. ಅಲ್ಲದೆ ಆರೋಪಿ ಉಡುಪಿಯ ಆರ್ಯುವೇದಿಕ್ ಔಷಧಿ ಅಂಗಡಿಯಲ್ಲಿನ ಔಷದಿ ಖರೀದಿಸಿ ಸೇವಿಸಿದರೆ ಖಾಯಿಲೆ ಗುಣ ಆಗುತ್ತದೆ ಎಂದು ಹೇಳಿದ್ದು ಅದರಂತೆ ಅವರು 10,80,000ರೂ. ಮೊತ್ತದ…
ಬೆಳ್ತಂಗಡಿ: ಕ್ರೇನ್ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಗುದ್ದಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಾಲುವಿನಲ್ಲಿ ನಡೆದಿದೆ. ಬಳಂಜದ ಜಯ ಮೇಸ್ತ್ರಿ(49) ಎಂಬವರೇ ಮೃತ ದುರ್ದೈವಿ. ಬೆಳಾಲಿನಲ್ಲಿ ಬಾಡಿಗೆ ಮನೆಯಲ್ಲಿ ಅವರು ವಾಸವಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು.
ನವದೆಹಲಿ: ಭಾರತವು ತನ್ನ ರಕ್ಷಣಾ ಸಿದ್ಧತೆಯನ್ನು ಮತ್ತಷ್ಟು ಬಲಪಡಿಸಲು ಮುಂದಾಗಿದ್ದು, ಬಂಗಾಳಕೊಲ್ಲಿಯ ಸುಮಾರು 3,550 ಕಿ.ಮೀ. ವ್ಯಾಪ್ತಿಯನ್ನು ‘ಅಪಾಯಕಾರಿ ವಲಯ’ವೆಂದು ಘೋಷಿಸಿ NOTAM ಸೂಚನೆ ಹೊರಡಿಸಿದೆ. ಈ ದೀರ್ಘ ವ್ಯಾಪ್ತಿಯ ಕಾರಿಡಾರ್ ಭಾರತದ ಪ್ರಮುಖ ಪರಮಾಣು ಸಾಮರ್ಥ್ಯದ ಅಗ್ನಿ-IV (Agni-IV) ಕ್ಷಿಪಣಿ(Missile)ಯ ಉಡಾವಣೆಯ ಮುನ್ಸೂಚನೆಯನ್ನು ನೀಡುತ್ತಿದೆ. ಅಗ್ನಿ-IV: ಭಾರತದ ಪರಮಾಣು ತ್ರಿಕೋನದ ಬಲ ರಕ್ಷಣಾ ಮೂಲಗಳ ಪ್ರಕಾರ, ಪ್ರಸ್ತುತ ಘೋಷಿಸಲಾಗಿರುವ 3,500–4,000 ಕಿ.ಮೀ ವ್ಯಾಪ್ತಿಯು ಮಧ್ಯಂತರ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯಾದ (IRBM) ಅಗ್ನಿ-IV ರ ಸಾಮರ್ಥ್ಯಕ್ಕೆ ಹೊಂದಿಕೆಯಾಗುತ್ತದೆ. ಇದು ಎರಡು ಹಂತದ ಘನ-ಇಂಧನ ಚಾಲಿತ ಕ್ಷಿಪಣಿಯಾಗಿದ್ದು, 1,000 ಕೆಜಿ ತೂಕದ ಸಿಡಿತಲೆಯನ್ನು ಹೊತ್ತೊಯ್ಯಬಲ್ಲದು.ವಿಮಾನಯಾನ ಕ್ಷೇತ್ರದಲ್ಲಿ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ NOTAM (Notice to Airmen/Air Missions) ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಇದು ವಾಯುಯಾನ ಅಧಿಕಾರಿಗಳು ಪೈಲಟ್ಗಳು ಮತ್ತು ವಿಮಾನ ಸಿಬ್ಬಂದಿಗೆ ನೀಡುವ ಸಮಯ-ಸೂಕ್ಷ್ಮ ಹಾಗೂ ನಿರ್ಣಾಯಕ ಅಧಿಸೂಚನೆಯಾಗಿದೆ.ವಿಮಾನ ಹಾರಾಟದ ಹಾದಿಯಲ್ಲಿ ಎದುರಾಗಬಹುದಾದ ತಾತ್ಕಾಲಿಕ ಅಪಾಯಗಳು, ರನ್ವೇ ಮುಚ್ಚುವಿಕೆ ಅಥವಾ ವಿಮಾನ ನಿಲ್ದಾಣದ ಸೇವೆಗಳಲ್ಲಿನ ಬದಲಾವಣೆಗಳ…
ಮಂಗಳೂರು: ನರಿಂಗಾನ ಗ್ರಾಮದ 19 ವರ್ಷದ ಯುವತಿಯೊಬ್ಬಳು ತನ್ನ ಮನೆಯಿಂದ ಮೇ 4 ರ ಸೋಮವಾರ ಬೆಳಗಿನ ಜಾವದಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಯ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಕಾಣೆಯಾದ ಹುಡುಗಿಯನ್ನು ಇಬ್ರಾಹಿಂ ಎಂ ಅವರ ಮಗಳು ರಾಭಿಯತುಲ್ ಅಧಭಿಯ ಎಂದು ಗುರುತಿಸಲಾಗಿದೆ. ಆಕೆಯ ತಂದೆ ನೀಡಿದ ದೂರಿನ ಪ್ರಕಾರ, ಮೇ 3 ರ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಕುಟುಂಬವು ಊಟದ ನಂತರ ಮಲಗಲು ಹೋಗಿದ್ದಾಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆಸೋಮವಾರ ಬೆಳಗಿನ ಜಾವ 2:30 ಕ್ಕೆ ಇಬ್ರಾಹಿಂ ಮಂಗಳೂರು ಡಾಕ್ಗೆ ಕೆಲಸಕ್ಕೆ ಹೋಗಲು ಎದ್ದಾಗ, ತನ್ನ ಮಗಳು ತನ್ನ ಕೋಣೆಯಲ್ಲಿ ಇಲ್ಲದಿರುವುದು ಮತ್ತು ಅಡುಗೆಮನೆಯ ಹಿಂಬಾಗಿಲು ತೆರೆದಿರುವುದು ಕಂಡುಬಂದಿದೆ. ಸ್ಥಳೀಯ ಎಲ್ಲಾ ಪ್ರದೇಶಗಳನ್ನು ಹುಡುಕಿದರೂ ಮತ್ತು ಸಂಬಂಧಿಕರೊಂದಿಗೆ ವಿಚಾರಿಸಿದರೂ, ಆಕೆಯ ಸ್ಥಳ ಇನ್ನೂ ತಿಳಿದಿಲ್ಲ.ಕಾಣೆಯಾದ ಯುವತಿಯ ವಿವರಣೆ:ವಯಸ್ಸು: 19 ವರ್ಷಗಳುಎತ್ತರ: 4.6 ಅಡಿಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟುಉಡುಪು: ಕೊನೆಯ ಬಾರಿಗೆ…
ಹಾವೇರಿ : ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಪಲ್ಲಕ್ಕಿ ಬಸ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಬ್ರೇಕ್ ಲೈನ್ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕ್ಷಣಾರ್ಧದಲ್ಲಿ ಬಸ್ಗೆ ವ್ಯಾಪಿಸಿದೆ. ಈ ವೇಳೆ ಸಮಯಪ್ರಜ್ಞೆ ಮೆರೆದ ಚಾಲಕ ಪಕ್ಕೀರಪ್ಪ ಅವರು ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದಾಗಿ ಬಸ್ಸಿನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳೂರು: ಕಳೆದ ಆರು ವರ್ಷಗಳಿಂದ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದ, ಭಾರೀ ಹಣಕ್ಕಾಗಿ ನಡೆದ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಸುರತ್ಕಲ್ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಪ್ರಕರಣವು ಫೆಬ್ರವರಿ 8, 2014 ರಂದು ನಡೆದಿದ್ದು, ಕುಳಾಯಿ ಹೊಸಬೆಟ್ಟು ನಿವಾಸಿ ಸುಮತಿ ಪ್ರಭು ಅವರನ್ನು ಬರ್ಬರವಾಗಿ ಕೊಲೆ ಮಾಡಲಾಯಿತು. ಪೊಲೀಸ್ ದಾಖಲೆಗಳ ಪ್ರಕಾರ, ದುಷ್ಕರ್ಮಿಗಳು ಆಕೆಯ ಕತ್ತು ಸೀಳಿ 192 ಗ್ರಾಂ (24 ಪೌಂಡ್) ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ, ಇದರ ಮೌಲ್ಯ ಸುಮಾರು 3,80,000 ರೂ.ಗಳಷ್ಟಿತ್ತು. ನಂತರ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಮತ್ತು ದರೋಡೆ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಅಪರಾಧಕ್ಕೆ ಸಂಬಂಧಿಸಿದಂತೆ ಪೊಲೀಸರು ಆರಂಭದಲ್ಲಿ ಮೂವರು ವ್ಯಕ್ತಿಗಳನ್ನು ಬಂಧಿಸಿದ್ದರು – ರಾಜಸ್ಥಾನದ ಭರತ್ಪುರ ಜಿಲ್ಲೆಯ ಶಿವರಾಮ್; ರಾಜಸ್ಥಾನದ ಭರತ್ಪುರ ಜಿಲ್ಲೆಯ ಬಹದ್ದೂರ್ ಸಿಂಗ್ (ಬಹದ್ದೂರ ಅಥವಾ ಬುಯ್ಯ ಎಂದೂ ಕರೆಯುತ್ತಾರೆ) ಮತ್ತು ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಶಹನವಾಜ್ (ಶಾನು ಎಂದೂ ಕರೆಯುತ್ತಾರೆ). 2ನೇ ಹೆಚ್ಚುವರಿ…










