Author: main-admin

ಮಂಗಳೂರು ಸಿಟಿ ಪೊಲೀಸ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದಿದ್ದು, ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್‌ಐ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಪರಿಶೀಲಿಸುತ್ತಿದ್ದಾಗ  ಮಂಗಳೂರು ಸಿಟಿ ಪೊಲೀಸ್ ಎಂಬ ಹೆಸರಿನ ಫೇಸ್‌ಬುಕ್ ಖಾತೆ ಕಂಡು ಬಂದಿತು. ಅದರಲ್ಲಿ ಪೊಲೀಸ್ ಆಯುಕ್ತರ ಭಾವಚಿತ್ರ ಮತ್ತು ಸರಕಾರದ ಲಾಂಛನವನ್ನು ಬಳಸಲಾಗಿತ್ತು. ಖಾತೆಯ ಬಗ್ಗೆ ಸಂಶಯಗೊAಡು ಆಯುಕ್ತರ ಕಚೇರಿಯಲ್ಲಿ ವಿಚಾರಿಸಿದಾಗ ನಕಲಿ ಖಾತೆ ಎಂದು ದೃಢಪಟ್ಟಿದೆ. ಈ ಬಗ್ಗೆ ಕಂಕನಾಡಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

Read More

ಮಂಗಳೂರು: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಸಲ್ಲಿಸಿದರು. ಈ ಕುರಿತು ಸಚಿವ ದಿನೇಶ್ ಗುಂಡರಾವ್ ಪೋಸ್ಟ್ ಹಂಚಿಕೊಂಡಿದ್ದು, ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಕೇಂದ್ರ ಸರ್ಕಾರವು ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ 2,400 ರೂ. ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ 8,768 ರೂ.ರಂತೆ ಒSP ಘೋಷಿಸಿದ್ದರೂ, ಕರ್ನಾಟಕದಲ್ಲಿ ಪ್ರಸ್ತುತ ಬೆಲೆ ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ 1,600-1,800 ರೂ. ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ 5,400 ರೂ. ಆಗಿದ್ದು, ಇದು ತೀವ್ರ ಮತ್ತು ಆಘಾತಕಾರಿ ಕುಸಿತವಾಗಿದೆ. ಕರ್ನಾಟಕದಲ್ಲಿ ಪ್ರಸ್ತುತ ಮಾರಾಟವಾಗಲು ಅಂದಾಜು 32 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಮೆಕ್ಕೆಜೋಳ ಲಭ್ಯವಿದೆ. ಆದ್ದರಿಂದ,…

Read More

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್, ಮಲೇರಿಯಾ ಪತ್ತೆ ಹಾಗೂ ತಡೆ ಕಾರ್ಯಗಳಲ್ಲಿ ಆರೋಗ್ಯ ಇಲಾಖೆಗೆ ಬೆಂಬಲ ನೀಡುವ ಉದ್ದೇಶದಿಂದ 100 ಟಾರ್ಚ್‌ಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಈ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಜಸಿಂತ ಡಿಸೋಜಾ ಉಪಸ್ಥಿತರಿದ್ದು, ರೋಹನ್ ಕಾರ್ಪೊರೇಶನ್‌ನ ಸೇಲ್ಸ್ ಮ್ಯಾನೇಜರ್ ಶ್ರೀ ಸವಿಲ್ ಅವರು ಆರೋಗ್ಯ ಇಲಾಖೆಗೆ ಟಾರ್ಚ್‌ಗಳನ್ನು ಹಸ್ತಾಂತರಿಸಿದರು. ರಾತ್ರಿ ಸಮಯದಲ್ಲಿ ನಡೆಯುವ ಕ್ಷೇತ್ರ ಪರಿಶೀಲನೆ, ಕೀಟಜನ್ಯ ಉತ್ಪತ್ತಿ ತಾಣಗಳ ಪತ್ತೆ ಹಾಗೂ ಮಲೇರಿಯಾ ನಿಯಂತ್ರಣ ಕಾರ್ಯಗಳಿಗೆ ಈ ಟಾರ್ಚ್‌ಗಳು ಆರೋಗ್ಯ ಸಿಬ್ಬಂದಿಗಳಿಗೆ ಮಹತ್ವದ ಸಹಕಾರ ನೀಡಲಿವೆ. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಜಸಿಂತ ಡಿಸೋಜಾ, “ಮಲೇರಿಯಾ ಪತ್ತೆ ಮತ್ತು ತಡೆ ಕಾರ್ಯಗಳಲ್ಲಿ ಕ್ಷೇತ್ರ ಮಟ್ಟದ ಪರಿಶೀಲನೆ ಅತ್ಯಂತ ಪ್ರಮುಖವಾಗಿದೆ. ಇಂತಹ ಸಂದರ್ಭಗಳಲ್ಲಿ…

Read More

ಉಡುಪಿ: ಪರ್ಯಾಯ ಪುತ್ತಿಗೆ ಮಠದಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಿದ್ದು, ಕೃಷ್ಣನೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ, ಆದಿ ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸಚಿವ ದಿನೇಶ್ ಗುಂಡೂರಾವ್ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಆದಿ ಉಡುಪಿಯಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಿದ್ದು, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ರೋಡ್ ಶೋ ನಡೆದಿದೆ. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿರುವ ಜನರು ಮೋದಿ ಮೋದಿ ಎಂದು ಜಯಘೋಷಗಳನ್ನು ಕೂಗಿ ಪ್ರಧಾನಿ ಮೇಲೆ ಹೂಮಳೆಗರೆದು ಸ್ವಾಗತಿಸಿದ್ದಾರೆ. ತೆರೆದ ವಾಹನದಲ್ಲಿ ಜನರತ್ತ ಕೈಬೀಸಿ ಪ್ರಧಾನಿ ಮೋದಿ ಸಾಗಿದ್ದಾರೆ. ರೋಡ್ ಶೋ ಮೂಲಕವಾಗಿ ಶ್ರೀಕೃಷ್ಣ ಮಠದ ರಥಬೀದಿಗೆ ಪ್ರಧಾನಿ ಮೋದಿ ಆಗಿಸಿದ್ದಾರೆ.

Read More

ಉಡುಪಿ: ಗ್ಯಾಸ್ ಸಿಲಿಂಡರ್ ಗೆ ಆಕಸ್ಮಿಕ ಬೆಂಕಿ ತಗುಲಿ ಸ್ಪೋಟಗೊಂಡು ಖಾಸಗಿ ಹೊಟೇಲ್ ಸಂಪೂರ್ಣ ಭಸ್ಮವಾದ ಘಟನೆ ಮಣಿಪಾಲ ಆರ್‌ಎಸ್‌ಬಿ ಸಭಾಭವನದ ಸಮೀಪ ನಡೆದಿದೆ. ಡೆಲ್ಲಿ ಡಾಬಾ ಎಂಬ ಹೊಟೇಲಿನಲ್ಲಿ ಗ್ಯಾಸ್ ಸಿಲಿಂಡರ್ ಅಕಸ್ಮಿಕವಾಗಿ ಸ್ಪೋಟಗೊಂಡು ಬೆಂಕಿ ಆವರಿಸಿದೆ. ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಜೀವ ಹಾನಿ ಆಗಿಲ್ಲ ಸಂಭವಿಸಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

Read More

ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರುಗೊಂಡಿದೆ. ಪಡುವನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಅಬ್ದುಲ್ ಹಾಶೀಮ್ (34) ಎಂಬಾತನು ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್ ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್ ಟಿಸಿಯೆಂದು ನಂಬಿಸಿ, ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 84/2025 ಕಲಂ 417, 419, 467, 468, 471 ಐ. ಪಿ. ಸಿ ಪ್ರಕರಣ ದಾಖಲಾಗಿತ್ತು. ಸದ್ರಿ ಪ್ರಕರಣದ ತನಿಖೆ ನಡೆಸಲಾಗಿದ್ದು ಪ್ರಕರಣದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಿರ್ಯಾದುದಾರರೆಂದು ಹೇಳಿಕೊಂಡು, ನಕಲಿ ಸಹಿ ಮಾಡಿ ನ್ಯಾಯಾಲಯಕ್ಕೆ ವಂಚಿಸುವ ಉದ್ದೇಶದಿಂದ, ಬೆಲೆಬಾಳುವ ಭದ್ರತಾ ಪತ್ರವನ್ನು ನೀಡಿದ ಆರೋಪಿ ಅಬ್ದುಲ್ ಹಾಶೀಮ್ (34)ನನ್ನು ನ.6ರಂದು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ…

Read More

ಬಂಟ್ವಾಳ: ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು ಕಳವು ಮಾಡಿದ ಘಟನೆ ನಡೆದಿದೆ. ಮನೆಯಲ್ಲಿ ಸರೋಜಿನಿ ಎನ್ನುವ ಮಹಿಳೆಯನ್ನು ನಿಲ್ಲಿಸಿ ಮನೆಮಂದಿ ಪಾಣೆಮಂಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಮಧ್ಯಾಹ್ನ 2-3 ರ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ಆಗಮಿಸಿ ದೀಚು (ದೀಕ್ಷಿತ್) ಅವರು ಮನೆಯ ವಿದ್ಯುತ್ ವಯರ್ ಹಾಗೂ ಲೈಟ್ ದುರಸ್ತಿ ಮಾಡಲು ತಿಳಿಸಿದ್ದಾರೆಂದು ಹೇಳಿದನು. ಸತ್ಯವೆಂದು ನಂಬಿದ ಸರೋಜಿನಿ ಆತನನ್ನು ಒಳಗೆ ಬಿಟ್ಟಿದ್ದರು. ಆತ ದುರಸ್ತಿಯ ನಾಟಕ ಮಾಡಿ ಮಲಗುವ ಕೋಣೆಯ ಮಂಚದ ಕೆಳಭಾಗದಲ್ಲಿ ಬ್ಯಾಗ್‌ನಲ್ಲಿದ್ದ ಚಿನ್ನ ಹಾಗೂ ನಗದನ್ನು ಕಳವು ಮಾಡಿದ್ದಾನೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ ಭದ್ರತೆಗಾಗಿ ಸುಮಾರು 3000ಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 10 ಮಂದಿ ಎಸ್ಪಿ ಹಾಗೂ ಹೆಚ್ಚುವರಿ ಎಸ್ಪಿಗಳನ್ನು ನೇಮಕ ಮಾಡಲಾಗಿದೆ. ಒಟ್ಟಾರೆ ಈ ಭದ್ರತೆ ನೇತೃತ್ವವನ್ನು ಎಸ್ ಪಿ ಜಿ ವಹಿಸಿಕೊಂಡಿದ್ದು, ಈಗಾಗಲೇ ಎಸ್‍ಪಿಜಿ ತಂಡ ಉಡುಪಿಗೆ ಆಗಮಿಸಿ ನಮ್ಮ ಪೊಲೀಸರೊಂದಿಗೆ ಕರ್ತವ್ಯ ನಿರ್ವಹಿಸುತ್ತಿದೆ. ಈ ಬಂದೋಬಸ್ತಿಗೆ ರಾಜ್ಯದ ಎಂಟಕ್ಕೂ ಅಧಿಕ ಜಿಲ್ಲೆಯ ಪೊಲೀಸ್ ತಂಡಗಳು ಉಡುಪಿಗೆ ಆಗಮಿಸಿದೆ. ರಾಜ್ಯದ ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ ಹಿತೇಂದ್ರ ಅವರ ನೇತೃತ್ವದಲ್ಲಿ ಐಜಿಗಳಾದ ಸಂದೀಪ್ ಪಾಟೀಲ್ ಹಾಗೂ ಚಂದ್ರಗುಪ್ತ ಮಾರ್ಗದರ್ಶನದಲ್ಲಿ ಈ ಭದ್ರತೆಯನ್ನು ಒದಗಿಸಲಾಗುತ್ತಿದೆ ಎಂದು ಎಸ್ ಪಿ ಮಾಹಿತಿ ನೀಡಿದರು

Read More

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿರುವ ಲತಾ ಎಂಬುವರ ಬ್ಯಾಗ್ ನಲ್ಲಿ ಇರಿಸಿದ್ದ 6,79,000 ರೂಪಾಯಿ ಮೌಲ್ಯದ 97ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿರುವ ಬಗ್ಗೆ ಮೇ. 3ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ. ಕ್ರ 17/2025 ರಂತೆ ಪ್ರಕರಣ ದಾಖಲಾಗಿ ಧರ್ಮಸ್ಥಳ ಪೊಲೀಸರು ಆರೋಪಿಗಳ ಪತ್ತೆಕಾರ್ಯದಲ್ಲಿದ್ದರು. ನವೆಂಬರ್ 23ರಂದು ಮತ್ತೆ ಧರ್ಮಸ್ಥಳದತ್ತ ಕಳ್ಳತನ ಮಾಡಲು ಆರೋಪಿಗಳು ಬರುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳದ ದ್ವಾರದ ಬಳಿ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಹುಬ್ಬಳ್ಳಿ ನಗರದ ಸಟಲ್ಮೆಂಟ್ ನಿವಾಸಿ ಬಿ.ಬಿ.ಜಾನ್(59) ಮತ್ತು ಆಕೆಯ ಮಗಳು ಆರತಿ ಯಾನೆ ಮಸಾಬಿ ಯಾನೆ ಅಸ್ಮಾ (34) ಎಂಬವರನ್ನು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಮುಂದಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದು, ವಿಚಾರಣೆ ನಡೆಸಿ, ಕಳ್ಳತನ ಮಾಡಿದ ಸುಮಾರು 5,32,000 ಸಾವಿರ ಮೌಲ್ಯದ 76 ಗ್ರಾಂ ಚಿನ್ನಾಭರಣಗಳನ್ನು ಧರ್ಮಸ್ಥಳ ಪೊಲೀಸರು ಹುಬ್ಬಳಿಯಲ್ಲಿರುವ ಆರೋಪಿಗಳ ಮನೆಯಿಂದ ವಶ ಪಡಿಸಿಕೊಂಡಿರುತ್ತಾರೆ.…

Read More

ಉಡುಪಿ : ವೈದ್ಯಕೀಯ ವಿದ್ಯಾರ್ಥಿನಿಯ ಮೊಬೈಲ್ ನ್ನು ಹ್ಯಾಕ್ ಮಾಡಿ ಅವರ ಅಕೌಂಟ್ ನಿಂದ 3,70,944 ಹಣವನ್ನು ಸೈಬರ್ ವಂಚಕರು ವರ್ಗಾವಣೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಗೆ ನವೆಂಬರ್ 18ರಂದು ಮದ್ಯಾಹ್ನ 7074136042 ನಂಬರಿನಿಂದ ICICI ಬ್ಯಾಂಕಿನ ಏಜೆಂಟ್ ಎಂದು ಕರೆ ಮಾಡಿ ಕ್ರೆಡಿಟ್ ಕಾರ್ಡ್ ಪ್ರೊಟೆಕ್ಷನ್ ಸರ್ವಿಸ್ನಿಂದ ನಿಮ್ಮ ಕಾರ್ಡ್ ಪ್ರೋಟೆಕ್ಷಷನ್ ಸರ್ವಿಸ್ Expire ಆಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ನನಗೆ ಆ ಸರ್ವಿಸ್ ಬೇಡ ಎಂದು ಹೇಳಿದ್ದಾರೆ. ಬಳಿಕ ಪುನಃ ಕರೆ ಮಾಡಿ Google ಲಿ I Mobile Lite App ಎಂದು ಸರ್ಚ್ ಮಾಡುವಂತೆ ತಿಳಿಸಿದ್ದಾರೆ. ವಿದ್ಯಾರ್ಥಿನಿ ಗೂಗಲ್ ನಲ್ಲಿ ಸರ್ಚ್ ಮಾಡಿದ ಬಳಿಕ ಅವರು ಮೊಬೈಲ್ ಹ್ಯಾಕ್ ಆಗಿದ್ದು, ನಂತರ 8100146420 ನೇ ನಂಬರಿಗೆ ವಿಧ್ಯಾರ್ಥಿನಿಯ ನಂಬರ್ Forword ಆಗಿ ವಿದ್ಯಾರ್ಥಿನಿಯ Savings Account ನಿಂದ ಹಾಗೂ ಕ್ರೆಡಿಟ್ ಕಾರ್ಡ್ ನಿಂದ 3,70,944/- ರೂ ಹಣವನ್ನು ಸೈಬರ್ ವಂಚಕರು…

Read More