Author: main-admin

ಬಂಟ್ವಾಳ: ಸುಮಾರು ಎಂಟು ವರ್ಷಗಳಿಂದ ಪೊಲೀಸರಿಗೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 166/2017 ರ ಪ್ರಕರಣಕ್ಕೆ ಸಂಬಂಧಿಸಿ, ಐಪಿಸಿ ಕಲಂ 379 ಹಾಗೂ 34 ಅಡಿ ಆರೋಪಿಯಾಗಿದ್ದ ಕೇರಳದ ಮಲಪ್ಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತನು ಹಲವು ವರ್ಷಗಳಿಂದ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದನು. ಪೊಲೀಸರ ಮಾಹಿತಿ ಸಂಗ್ರಹದ ಆಧಾರದ ಮೇಲೆ ದಿನಾಂಕ 16-03-2026 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಕೃಷ್ಣಕಾಂತ ಕೆ ಅವರ ನೇತೃತ್ವದಲ್ಲಿ ಹೆಡ್ ಕಾನ್ಸ್‌ಟೇಬಲ್ 314 ಸಂತೋಷ್ ಹಾಗೂ ಪಿಸಿ 2462 ಶಿವಾನಂದ ಮಡ್ಡಿ ಅವರು ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ಪೊಳಚಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಬೆಂಗಳೂರು : ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡವಾಗಿದೆ ಕಂದಾಯ ಇಲಾಖೆ ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳ ತಲೆದಂಡ ಆಗಿದ್ದು ಮೂರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೌದು ಉತ್ತರ ಒದಗಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಇದೀಗ 3 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಮೂವರು ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು ಉತ್ತರ ಒದಗಿಸದ ಹಿನ್ನೆಲೆ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಪಿಡಬ್ಲ್ಯೂಡಿ ಇಲಾಖೆ, ಪಶು ಸಂಗೋಪನೆ, ಸಾರಿಗೆ, ಐಟಿಬಿಟಿ ಡಿಪಿಎಆರ್ ಹಾಗೂ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೋಟಿಸ್ ನೀಡಲು ಸೂಚನೆ ನೀಡಿದ್ದಾರೆ. ಸರಿಯಾದ ಉತ್ತರ ನೀಡದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಸಿಎಂ ಸೂಚನೆಯ ಹಿನ್ನೆಲೆ ಮಧ್ಯಾಹ್ನ 2 ಗಂಟೆಗೆ ಸಿಎಸ್…

Read More

ಉಡುಪಿ: ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕ‌ರ್ ಮಗುಚಿ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಟ್ಯಾಂಕರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವುದಾಗಿ ತಿಳಿದು ಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.‌ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಇದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದರು. ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಟ್ಯಾಂಕ‌ರ್ ಮೇಲೆ ನೀರು ಹಾಯಿಸುವ ಮೂಲಕ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಘಟನೆಯ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸಂಚಾರವನ್ನು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Read More

ಸುಳ್ಯ : ಸಂಚಾರ ನಿಯಮಗಳನ್ನು ಪದೇ ಪದೇ ಉಲ್ಲಂಘಿಸುವವರಿಗೆ ದಂಡ ಪಾವತಿಸುವುದು ಸುಲಭದ ಕೆಲಸವಾಗಿಬಿಟ್ಟಿದೆ. ಆದರೆ, ಸುಳ್ಯದ ನ್ಯಾಯಾಲಯವು ಸಂಚಾರ ನಿಯಮ ಪದೇ ಪದೆೇ ಉಲ್ಲಂಘಿಸಿದ ಯುವಕನಿಗೆ ದಂಡದ ಜೊತೆ ಸಮುದಾಯ ಸೇವೆ ಮಾಡುವಂತೆ ಅಪರೂಪದ ಶಿಕ್ಷೆ ವಿಧಿಸಿ ಆದೇಶಿಸಿದೆ. ಸುಳ್ಯ ನಿವಾಸಿ ರಕ್ಷಿತ್ ಎಂಬಾತ ಹಲವು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ. ಈತನ ವಿರುದ್ಧ ಸುಳ್ಯ ಪೊಲೀಸ್ ಉಪ ನಿರೀಕ್ಷಕ ಸಂತೋಷ್ ಬಿ.ಪಿ. ಅವರು ಐಎಂವಿ ಕಾಯ್ದೆಯಡಿ ಮೂರು ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಳ್ಯದ ಜೆಎಂಎಫ್‌ಸಿ ನ್ಯಾಯಾಲಯವು ಈಗ ಕಠಿಣ ಮತ್ತು ಅರ್ಥಪೂರ್ಣ ಶಿಕ್ಷೆ ನೀಡಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಎರಡು ಪ್ರಕರಣಗಳಲ್ಲಿ ಒಟ್ಟು 3,000 ರೂ. ದಂಡ ವಿಧಿಸಿದೆ. ಅಲ್ಲದೇ, ನ್ಯಾಯಾಲಯವು ಆರೋಪಿಗೆ ಮೂರೂ ಪ್ರಕರಣಗಳಲ್ಲಿಯೂ ತಲಾ ಐದು ದಿನಗಳಂತೆ ಒಟ್ಟು 15 ದಿನಗಳ ಕಾಲ ಸಮುದಾಯ ಸೇವೆ ಸಲ್ಲಿಸುವಂತೆ ಆದೇಶಿಸಿದೆ. ಮಾರ್ಚ್ 15 ರಿಂದ ಮಾರ್ಚ್ 29 ರವರೆಗೆ ಒಟ್ಟು 15…

Read More

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಬೆದರಿಸಿ 14 ಲಕ್ಷ ರೂ. ವಸೂಲಿ ಮಾಡಿದ ಯುವಕನ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾರ್ಪಳ್ಳಿ ಬಲ್ಲಾಳ್ ನಗರದ ನಿವಾಸಿ ಮಹಿಮಾ (22) ಎಂಬಾಕೆಗೆ ಕೆ.ಆರ್.ಪೇಟೆಯ ಶರತ್‌ ಎಂಬಾತನು ಕಳೆದ 2ವರ್ಷಗಳ ಹಿಂದೆ ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ. ಮೊದಲಿಗೆ ಬೇರೆ ಬೇರೆ ಸಮಸ್ಯೆಗಳನ್ನು ಹೇಳಿಕೊಂಡು 500, 1000, 2000 ರೂ. ಹೀಗೆ ಹಣವನ್ನು ಪಡೆದುಕೊಳ್ಳುತ್ತಿದ್ದನು. ಈ ಹಣವನ್ನು ಮಹಿಮಾ ವಾಪಸ್ಸು ಕೇಳಿದಾಗ ಏನಾದರೂ ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದು, ಕಳೆದ ಫೆಬ್ರವರಿ ತಿಂಗಳಲ್ಲಿ ಶರತ್‌ ಕರೆ ಮಾಡಿ ಮಹಿಮಾ ಬಳಿ 15ಲಕ್ಷ ಹಣವನ್ನು ಕೊಡುವಂತೆ ಕೇಳಿದ್ದ, ಆದರೆ ಅಷ್ಟು ಹಣ ಯಾಕೆ ಬೇಕೆಂದು ಕೇಳಿದಾಗ ಶರತ್ ತಂದೆಗೆ ಉಷಾರಿಲ್ಲ ಎಂದು ತಿಳಿಸಿದ್ದ, ಅಷ್ಟೊಂದು ಹಣ ಇಲ್ಲ ಎಂದು ಹೇಳಿದಾಗ ಆರೋಪಿ‌ ಶರತ್ ಅವಾಚ್ಯ ಶಬ್ದಗಳಿಂದ ಪೋನಿನಲ್ಲಿ ಬೈದು ನೀನು ಹಣ ಕೊಡದಿದ್ದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ ಎಂದು ದೂರಲಾಗಿದೆ. ಬಳಿಕ ಯುವತಿ ಭಯಗೊಂಡು…

Read More

ಸುಳ್ಯ: ಸುಳ್ಯದ ಶ್ರೀರಾಂಪೇಟೆಯಲ್ಲಿರುವ ರಾಜೇಶ್ ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಶನಿವಾರ ಸಂಜೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ. ಚೂರಿ ಇರಿತಕ್ಕೊಳಗಾದ ಯುವಕರನ್ನು ಸುಳ್ಯ ಬೀರಮಂಗಲ ಬಂಗ್ಲಗುಡ್ಡೆ ನಿವಾಸಿಗಳಾದ ಹರೀಶ್ ಬಂಗ್ಲಗುಡ್ಡೆ ಹಾಗೂ ನಿತೇಶ್ ಕೆ.ಆರ್. ಬಂಗ್ಲಗುಡ್ಡೆ ಎಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳಾದ ಅಜ್ಜಾವರ ಗ್ರಾಮದ ಕಾಂತಮಂಗಲ ಗಂಧದಗುಡ್ಡೆ ನಿವಾಸಿಗಳಾದ ದಯಾನಂದ ಮತ್ತು ರಾಜೇಶ್ ಬಿ.ಆರ್. ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಚೂರಿ ಇರಿತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

Read More

ಚಿತ್ರದುರ್ಗ, ಮಾರ್ಚ್ 15: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಸಾವನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ಸಂಭವಸಿದೆ. ಅಪಘಾತದಲ್ಲಿ ರಿಸರ್ವ್ ಸಬ್‌ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್, ಅಂಬರೀಶ್ ಮತ್ತು ಸಚಿನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಿಎಸ್‌ಐ ಈಶ್ವರ್ ಹಾಗೂ ಆರ್‌ಎಸ್‌ಐ ಮಹಾಂತೇಶ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ 7 ಗಂಟೆಗೆ ಅಫಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್‌ಪೆಕ್ಟರ್‌ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸುಮಾರು 300 ಮೀಟರ್‌ಗಳಷ್ಟು ಮುಂದಕ್ಕೆ ಎಳೆದೊಯ್ಯಲ್ಪಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮರೇಶ್, ಮಂಜುನಾಥ್ ಮತ್ತು ಸಚಿನ್ ಎಂಬ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಲಕ್ಷ್ಮಣ್ ಮತ್ತು ಈಶ್ವರ್ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣೆಗೆರೆ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ…

Read More

ಕಡಬ: ಪರವಾನಿಗೆ ಪಡೆಯಲು ಇಚ್ಚಿಸುವ ಎಲ್ಲಾ ಇಲೆಕ್ಟಿಕ್ ಆಟೋ (ಇ- ಅಟೋ) ರಿಕ್ಷಾ ಚಾಲಕ, ಮಾಲಕರು ಮಾರ್ಚ್ 31ರೊಳಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎ ತಿಳಿಸಿದ್ದಾರೆ. ಪಡೀಲ್‌ ನ ಪ್ರಜಾಸೌಧದಲ್ಲಿ ಶುಕ್ರವಾರ ಆಟೋ ರಿಕ್ಷಾ ಸಂಘದ ಬೇಡಿಕೆಗಳು, ಇ-ಆಟೋ ರಿಕ್ಷಾಗಳಿಗೆ ಪರವಾನಿಗೆ ಕುರಿತಂತೆ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್‌ಟಿಒ ಅಂಕಿ ಅಂಶಗಳ ಪ್ರಕಾರ ಇ ಆಟೋ ರಿಕ್ಷಾಗಳಿಂದ ಈವರೆಗೆ ಕೇವಲ 250 ಅರ್ಜಿಗಳು ಮಾತ್ರವೇ ಬಂದಿವೆ. ಸುಮಾರು 3000ದಷ್ಟು ಇ ಆಟೋಗಳು ಸಂಚರಿಸುತ್ತಿದ್ದು, ರಾಜ್ಯ ಸರಕಾರ ಈಗಾಗಲೇ ವಾಣಿಜ್ಯ ಬಳಕೆಯ ಇ-ಆಟೋ ರಿಕ್ಷಾಗಳಿಗೆ ಪರವಾನಿಗೆಯನ್ನು ಕಡ್ಡಾಯಗೊಳಿಸಿದೆ. 2025ರ ಮೊದಲು ನೋಂದಣಿ ಆಗಿರುವ ಎಲ್ಲಾ ಇ ಆಟೋ ರಿಕ್ಷಾಗಳು ಪರವಾನಿಗೆಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಹೇಳಿದರು. ಸಭೆಯಲ್ಲಿ ವಿವಿಧ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಪ್ರತಿನಿಧಿಗಳು ಮಾತನಾಡಿ, ಪರವಾನಿಗೆಗೆ ಅರ್ಜಿ ಸಲ್ಲಿಕೆ ವೇಳೆ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನಿಷ್ಠ…

Read More

ಬೆಂಗಳೂರು : ಜೈಲುಗಳಲ್ಲಿ ಮಾದಕ ವಸ್ತು ನಿರ್ಮೂಲನೆಗೆ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಮುಂದಾಗಿದ್ದು ರಾಜ್ಯಾದ್ಯಂತ ಜೈಲಿನಲ್ಲಿ ಮಾದಕ ವಸ್ತು ಪತ್ತೆ ಪರೀಕ್ಷೆ ನಡೆಸಲಾಗುತ್ತಿದೆ. ಈ ಮೂಲಕ ಜೈಲುಗಳಲ್ಲಿ ಡ್ರಗ್ಸ್ ನೆಟ್ವರ್ಕ್ ಬ್ರೇಕ್ ಹಾಕಲು ಇದೀಗ ಅಲೋಕ್ ಕುಮಾರ್ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾರೆ. ನಿಮ್ಹಾನ್ಸ್ ಆಸ್ಪತ್ರೆ ಜೊತೆ ಸೇರಿ ಡ್ರಗ್ಸ್ ಮುಕ್ತ ಕಾರಾಗೃಹ ಮಾಡಲು ಪಣ ತೊಟ್ಟಿದ್ದಾರೆ. ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ವಿವಿಧ ಮಾದರಿ ಡ್ರಗ್ಸ್ ಪರೀಕ್ಷೆ ನಡೆಸಲಾಗುತ್ತದೆ. ಸದ್ಯ ರಾಜ್ಯದ ಎಲ್ಲಾ ಜೈಲುಗಳಲ್ಲಿ ಶೇಕಡ 10 ರಷ್ಟು ಕೈದಿಗಳಿಗೆ ಡ್ರಗ್ಸ್ ಮಾದರಿ ಪರೀಕ್ಷೆ ನಡೆಸಲಾಗಿದೆ. ಜೈಲು ವೈದ್ಯಾಧಿಕಾರಿಗಳಿಂದ ಕೈದಿಗಳಿಗೆ ಮಾದಕ ವಸ್ತು ಪರೀಕ್ಷೆ ನಡೆಸಲಾಗಿದೆ. ಕೈದಿಗಳು ಡ್ರಗ್ ಅಡಿಕ್ಟ್ ಆಗಿದ್ದರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.

Read More

ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ.ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 11ರಿಂದ ಮಾರ್ಚ್ 12ರವರೆಗೆ ಎರಡು ದಿನಗಳ ಕಾಲ ಈ ಶೋಧ ಕಾರ್ಯಾಚರಣೆ ನಡೆಯಿತು. ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಅಧಿಕಾರಿಗಳಿಗೆ 11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಜಮೀನು ಸೇರಿದಂತೆ ಒಟ್ಟು ರೂ.6,90,64,716 ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿವೆ. ಇದರ ಜೊತೆಗೆ ವಿವಿಧ ರೂಪದಲ್ಲಿ ಭಾರಿ ಪ್ರಮಾಣದ ಚರಾಸ್ತಿಯೂ ಪತ್ತೆಯಾಗಿದೆ.ರೂ. 3,95,941 ನಗದುರೂ. 1,47,50,506 ಮೌಲ್ಯದ ಚಿನ್ನಾಭರಣರೂ. 17,00,000 ಮೌಲ್ಯದ ವಾಹನಗಳುರೂ. 25,75,000 ಮೌಲ್ಯದ ಬ್ಯಾಂಕ್ ಠೇವಣಿರೂ. 72,68,554 ಮೌಲ್ಯದ ಇತರೆ ವಸ್ತುಗಳುಇವೆಲ್ಲವನ್ನು…

Read More