Author: main-admin

ತಮಿಳುನಾಡು; ಕೋರ್ಟಿನ ಆವರಣದಲ್ಲೇ ಪತ್ನಿಯ ಮುಖದ ಮೇಲೆ ಪತಿಯೊಬ್ಬ ಆ್ಯಸಿಡ್ ಎಸೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರುನಲ್ಲಿ ನಡೆದಿದೆ. ಗುರುವಾರ ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಆ್ಯಸಿಡ್ ಎರಚಿದ್ದು, ಆಕೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ ಪ್ರಕರಣವೊಂದರ ವಿಚಾರಣೆಗೆ ಸಂಬಂಧಿಸಿದಂತೆ ಕವಿತಾ ಇಂದು ನ್ಯಾಯಾಲಯಕ್ಕೆ ಆಗಮಿಸಿದ್ದ ವೇಳೆ ಪತಿ ಶಿವಕುಮಾರ್ ಆಸಿಡ್ ಎರಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ಕಪಕ್ಕದಲ್ಲಿದ್ದ ಕೆಲವು ವಕೀಲರು ಶಿವಕುಮಾರ್ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಕವಿತಾ ಹಾಗೂ ವಕೀಲರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಯ ಹಿಂದಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ‌.

Read More

ಕಾರ್ಕಳ: ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಉಂಟಾದ ಅಗ್ನಿ ಆಕಸ್ಮಿಕಕ್ಕೆ ಇಡೀ ಕಾರ್ಖಾನೆ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷ ರೂಪಾಯಿಗೂ ಮಿಕ್ಕಿ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಅತ್ತೂರು ಚರ್ಚಿಗೆ ಸೇರಿದ್ದ ಪರ್ಪಲೆ ಗುಡ್ಡದಲ್ಲಿರುವ ಮೇಣದ ಬತ್ತಿ ತಯಾರಿಕಾ ಘಟಕದ ಇಡೀ ಕಟ್ಟಡ, ಯಂತ್ರೋಪಕರಣಗಳು ಹಾಗೂ ಮೇಣದ ಬತ್ತಿ ತಯಾರಿಕೆಗೆ ದಾಸ್ತಾನು ಇರಿಸಲಾಗಿದ್ದ ಅಪಾರ ಪ್ರಮಾಣದ ಮೇಣ ಹಾಗೂ ಉತ್ಪಾದನೆಯಾಗಿದ್ದ ಮೇಣದ ಬತ್ತಿಗಳು ಬೆಂಕಿಯ ಕೆನ್ನಾಲಗೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಸಾಯಂಕಾಲ ಏಕಾಎಕಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಘಟಕವನ್ನು ವ್ಯಾಪಿಸಿದೆ. ತಕ್ಷಣವೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಎರಡು ಅಗ್ನಿಶಾಮಕ ದಳದ ವಾಹನಗಳು ಘಟನಾಸ್ಥಳಕ್ಕೆ ಬಂದರೂ ಬೆಂಕಿ ಬಹುತೇಕ ಘಟಕವನ್ನು ವ್ಯಾಪಿಸಿದ ಹಿನ್ನಲೆಯಲ್ಲಿ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ.

Read More

ಮಂಗಳೂರು: 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃಷ್ಣಾಪುರ, ಕಾಟಿಪಳ್ಳ ಗ್ರಾಮದ ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಬಂಧಿತ ಆರೋಪಿ.ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದೆ.ಇನ್ನು ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್‌ ಕುಮಾರ್‌ರವರ ನಿರ್ದೇಶನದಂತೆ ಮಾರ್ಚ್ 22 ರಂದು ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಹೇಶ್‌ ಪ್ರಸಾದ್‌ ನೇತೃತ್ವದಲ್ಲಿ, ಉಪನಿರೀಕ್ಷಕರಾದ ಮಲ್ಲಿಕಾರ್ಜುನ್‌, ಸಿಬಂದಿಗಳಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಬಂಧಿಸಿದೆ.

Read More

ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.22ರಂದು ವರದಿಯಾಗಿದೆ. ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ಅವರ ಪುತ್ರ ಲೋಕೇಶ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಚಿಕ್ಕಮಗಳೂರಿನಲ್ಲಿ ಜಿಯೋ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ತನ್ನ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಲೋಕೇಶ್ ತಂದೆ, ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

Read More

ನವದೆಹಲಿ : ಮಾರ್ಚ್ 23 ರ ಇಂದಿನಿಂದ ಮೂರು ದಿನ ಕರ್ನಾಟಕ ಸೇರಿ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( IMD) ಮುನ್ಸೂಚನೆ ನೀಡಿದೆ. ಮಾರ್ಚ್ 23 ರಿಂದ ಮಾ.25 ರವರೆಗೆ ಭಾರತದಲ್ಲಿ ಆಲಿಕಲ್ಲು, ಗುಡುಗು ಸಹಿತ ಮಳೆಯಾಗಲಿರುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಮತ್ತು ಮಧ್ಯ ಅರೇಬಿಯನ್ ಸಮುದ್ರದ ಮೇಲೆ, ಎರಡು ಆಂಟಿ ಸೈಕ್ಲೋನ್ಗಳು ರೂಪುಗೊಂಡಿದ್ದುಜೊತೆಗೆ, ಜೊತೆಗೆ ಇತರ ಕೆಳಮಟ್ಟದ ಸೈಕ್ಲೋನಿಕ್ ಪರಿಚಲನೆಗಳು ರೂಪುಗೊಂಡಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 23 ಮತ್ತು 25 ರ ನಡುವೆ ಕರ್ನಾಟಕ, ಪಂಜಾಬ್, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾಂಗ್ರೆಸ್ ರಾಜ್ಯದಲ್ಲಿ ಧೂಳಿಪಟವಾಗಲಿದೆ : ಬಿ.ಎಸ್ ಯಡಿಯೂರಪ್ಪ ತುಮಕೂರು: ಕಾಂಗ್ರೆಸ್ ರಾಜ್ಯದಲ್ಲಿ ಧೂಳಿಪಟವಾಗಲಿದೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ…

Read More

ಕಲಬುರಗಿ : ಹಾಡಹಗಲೇ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ ಹಾಗರಗಾ ರಸ್ತೆಯಲ್ಲಿ ನಡೆದಿದೆ. ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಕೊಲೆ ಮಾಡಲಾಗಿದ್ದು, ಮೃತಪಟ್ಟ ಮಹಿಳೆಯನ್ನು ಮುಜತ್ ಸುಲ್ತಾನ್ (35) ಎಂದು ಗುರುತಿಸಲಾಗಿದೆ. ಹಂತಕರು ಮೊದಲು ಮಜತ್ ಸ್ಕೂಟಿಗೆ ಕಾರಿನಿಂದ ಡಿಕ್ಕಿ ಹೊಡೆಸಿದ್ದು, ಕೆಳಗೆ ಬಿದ್ದ ಮಜತ್ ಮೇಲೆ ಏಳಲು ಹೋದಾಗ ಆಕೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Read More

ಮಂಗಳೂರು: ವಿದ್ಯಾರ್ಥಿಯೋರ್ವ ಸೀಮೆಎಣ್ಣೆ ಸೇವಿಸಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ನೈಮರ್ಮುಲಾ ತನ್ಸಿಯುಲ್ ಇಸ್ಲಾಂ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಉಮರ್ ಅಫ್ರಾಬುದ್ದೀನ್ (15) ಪೆರುಂಬಳ ಚಾಳ ಜೆಟ್ಟಿ ಅಶ್ರಫ್ ಹಾಗೂ ಫಾಮಿನಿಯಾ ದಂಪತಿಯ ಪುತ್ರ ಸಾವನ್ನಪ್ಪಿದ ವಿದ್ಯಾರ್ಥಿ. ಹಲವು ದಿನಗಳಿಂದ ತೀವ್ರ ಅಸ್ವಸ್ಥನಾಗಿದ್ದ ಉಮರ್ ಅಫ್ರಾಬುದ್ದೀನ್ ಸೀಮೆಎಣ್ಣೆ ಸೇವಿಸಿದ್ದಾಗಿ ಪತ್ತೆಯಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಕಷ್ಟ ಕಾಣಿಸಿಕೊಂಡ ಕಾರಣ ಬಾಲಕ ಸೀಮೆಎಣ್ಣೆ ಸೇವಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಸಾವಿನ ಕುರಿತು ತನಿಖೆ ನಡೆಸುತ್ತಿದ್ದಾರೆ.

Read More

ಬಾಗಲಕೋಟೆ : ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಪಿಯುಸಿ, ಪದವಿ ವಿದ್ಯಾರ್ಥಿಗ’ಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈ ಬಾರಿ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ . 4 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ ಎಂದು ಹೇಳಿದರು. ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಇನ್ನು ಮುಂದೆ ಶುಲ್ಕವಿಲ್ಲದೇ ಪ್ರವೇಶ ಪಡೆಯಬಹುದು ಎಂದು ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದರು. ಯಾವ ಮಕ್ಕಳು ಆರ್ಥಿಕ ಸ್ಥಿತಿಯಿಂದ ವಿದ್ಯಾಬ್ಯಾಸ ಸ್ಥಗಿತಗೊಳಿಸಬಾರದು ಎಂಬ ಹಿತದೃಷ್ಠಿಯಿಂದ ಈ ವರ್ಷದ ಬಜೆಟ್‍ನಲ್ಲಿ ಪಿಯುಸಿಯಿಂದ ಪದವಿವರೆಗೆ ಉಚಿತ ಶಿಕ್ಷಣ, ದುಡಿಯುವ ಹೆಣ್ಣು ಮಕ್ಕಳಿಗೆ ಉಚಿತ ಬಸ್‍ಪಾಸ್ ಸೌಲಭ್ಯ ಘೋಷಿಸಲಾಗಿದೆ. ದುಡಿಯುವ ವರ್ಗದಲ್ಲಿ, ಹೆಣ್ಣುಮಕ್ಕಳಲ್ಲಿ, ಯುವಕರಲ್ಲಿ ಶಕ್ತಿ ತುಂಬಿದಲ್ಲಿ ಅವರಲ್ಲಿರುವ ಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ ಇದು…

Read More

ಬಂಟ್ವಾಳ: ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಿಂದ ಸಾಲ ಪಡೆದು ಮರುಪಾವತಿಸದ ಆರೋಪಿಗೆ ಬಂಟ್ವಾಳ ನ್ಯಾಯಾಲಯ ಚೆಕ್‌ ಅಮಾನ್ಯ (ಬೌನ್ಸ್‌) ಪ್ರಕರಣದಲ್ಲಿ 5,69,500 ರೂ. ದಂಡ ವಿಧಿಸಿ ಆದೇಶ ನೀಡಿದೆ. ಪಂಜಿಕಲ್ಲು ನಿವಾಸಿ ಪದ್ಮನಾಭ ಮಡಿವಾಳ ಆರೋಪಿಯಾಗಿದ್ದು, ಬಂಟ್ವಾಳ ಪಿಎಲ್‌ಡಿ ಬ್ಯಾಂಕಿನಿಂದ ಸಾಲ ಪಡೆದು ಮರುಪಾವತಿಸಿರಲಿಲ್ಲ. ಬ್ಯಾಂಕಿಗೆ ಅವರು ನೀಡಿದ ಚೆಕ್‌ ಕೂಡ ಅಮಾನ್ಯಗೊಂಡಿದ್ದು, ಹೀಗಾಗಿ ಬ್ಯಾಂಕ್‌ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಂಟ್ವಾಳ ಸಿವಿಲ್‌ ಜಡ್ಜ್ ಹಿರಿಯ ವಿಭಾಗ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಒಟ್ಟು ದಂಡದಲ್ಲಿ 5 ಸಾವಿರ ರೂ. ಸರಕಾರ ಹಾಗೂ ಉಳಿದ ಮೊತ್ತವನ್ನು ಬ್ಯಾಂಕಿಗೆ ಪಾವತಿಸಬೇಕು. ತಪ್ಪಿದಲ್ಲಿ ಒಂದು ವರ್ಷ ಸಾದಾ ಜೈಲು ಶಿಕ್ಷೆಗೆ ಗುರಿಯಾಗಬೇಕಿದೆ ಎಂದು ಆದೇಶಿಸಿದೆ. ಬ್ಯಾಂಕಿನ ಪರ ನ್ಯಾಯವಾದಿ ಶಿವಪ್ರಕಾಶ್‌ ಜೈನ್‌ ವಾದಿಸಿದ್ದರು.

Read More

ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಇನ್ಸ್‌ಪೆಕ್ಟರ್ ವಿವೇಕಾನಂದ ಮತ್ತು ಎಸ್ ಐ.ರಾಮಕೃಷ್ಣ ಅವರ ನೇತ್ರತ್ವದ ತಂಡ ಬಂಧಿಸಿದೆ.ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಯಾನೆ ನಿಸಾರ್ ಆಹಮ್ಮದ್ ಬಂಧಿತ ಆರೋಪಿ.ಫೆ.18 ರಂದು ಪಾಣೆಮಂಗಳೂರು ಜೈನರಪೇಟೆ ನಿವಾಸಿ ಸುಲೈಮಾನ್ ಎಂಬಾತನಿಗೆ ಕತ್ತರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿದ್ದ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿ ನಿಸಾರ್ ಪ್ರಕರಣವೊಂದರಲ್ಲಿ ಆರೋಪಿಯಾಗಿ ಜೈಲಿಗೆ ಹೋಗಿ ಜೈಲಿನಿಂದ ಹೊರಬಂದಿದ್ದ.ಜೈಲಿನಿಂದ ಹೊರ ಬಂದ ಕೆಲ ದಿನಗಳಲ್ಲಿ ಯೇ ಮತ್ತೆ ಪರಿಚಯಸ್ಥನಿಗೆ ಕ್ಷುಲ್ಲಕ ಕಾರಣಕ್ಕಾಗಿ ಕತ್ತರಿಯಿಂದ ಇರಿದು ಪರಾರಿಯಾಗಿದ್ದ.ಇಂದು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ.

Read More