ಮಂಗಳೂರು: ರಾಜ್ಯಾದ್ಯಂತ ಹೊಸ ಸಂಚಲನ ಮೂಡಿಸಿದ್ದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಇದೀಗ ಆಸ್ಪತ್ರೆಯಿಂದ ನೇರವಾಗಿ ಜೈಲಿಗೆ ಶಿಫ್ಟ್ ಆಗಿದ್ದಾನೆ. ಆರೋಪಿ ಮುರುಗನ್ ಡಿ ಜೈಲಿಗೆ ಸೇರಿರುವ ವ್ಯಕ್ತಿ. ಪೊಲೀಸರ ವಶದಲ್ಲಿದ್ದ ವೇಳೆ ಸ್ಥಳ ಮಹಜರು ಮಾಡುತ್ತಿದ್ದಾಗ ಅಧಿಕಪ್ರಸಂಗ ಮಾಡಲು ಹೋಗಿ ಪೊಲೀಸರಿಂದ ಗುಂಡೇಟು ತಿಂದಿದ್ದ. ಕರ್ನಾಟಕ-ಕೇರಳ ಗಡಿ ಭಾಗದ ಅಜ್ಜಿನಡ್ಕ ಎಂಬಲ್ಲಿ ಈತ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ಸಂದರ್ಭ ಉಳ್ಳಾಲ ಠಾಣಾಧಿಕಾರಿ ಆತನ ಕಾಲಿಗೆ ಗುಂಡು ಹಾರಿಸಿದ್ದರು. ನಂತರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಆತ ಇದೀಗ ಚೇತರಿಸಿಕೊಂಡಿದ್ದಾನೆ. ಆದ್ದರಿಂದ ಆತನನ್ನು ಡಿಸ್ಟಾರ್ಜ್ ಮಾಡಿ ಜಿಲ್ಲಾ ಕಾರಾಗ್ರಹಕ್ಕೆ ಕಳುಹಿಸಲಾಯಿತು.
Author: main-admin
ಪುತ್ತೂರು: ದ್ವಿಚಕ್ರ ವಾಹನದ ಸವಾರನೋರ್ವನು ಕರ್ತವ್ಯ ನಿರತ ಮಹಿಳಾ ಎಸ್ಐಗೆ ಆವಾಝ್ ಹಾಕಿ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾನೆಂದು ಆರೋಪಿಸಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿನ ಆಟೋಸ್ಟ್ಯಾಂಡ್ನಲ್ಲಿ ರಿಕ್ಷಾ ಚಾಲಕನಾಗಿ ವೃತ್ತಿ ನಡೆಸುತ್ತಿರುವ ಕಡಬ ತಾಲೂಕಿನ ಗೊಳಿತೊಟ್ಟು ಗ್ರಾಮದ ನಿವಾಸಿ ಪ್ರತಾಪ್ ಗೌಡ (35) ಪ್ರಕರಣದ ಆರೋಪಿ. ಸಂಪ್ಯ ಗ್ರಾಮಾಂತರ ಠಾಣೆಯ ಉಪ ನಿರೀಕ್ಷಕಿ ಸುಷ್ಮಾ ಜಿ.ಭಂಡಾರಿಯವರು ಸಿಬ್ಬಂದಿಯೊಂದಿಗೆ ಸಂಪ್ಯ ಠಾಣೆಯ ಮುಂಭಾಗದ ಮಾಣಿ – ಮೈಸೂರು ಹೆದ್ದಾರಿಯಲ್ಲಿ ವಾಹನ ತಪಾಸಣೆಯಲ್ಲಿ ತೊಡಗಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದು ಬಂದಿದೆ. ಆದರೆ ವಾಹನದ ಹಿಂಬದಿ ಸವಾರ ಹೆಲ್ಮೆಟ್ ಧರಿಸಿರಲಿಲ್ಲ. ಆದ್ದರಿಂದ ಪೊಲೀಸರು ವಾಹನ ನಿಲ್ಲಿಸಿ ದಂಡ ಪಾವತಿಸುವಂತೆ ಸವಾರನಲ್ಲಿ ತಿಳಿಸಿದ್ದರು. ಇದರಿಂದ ಸಿಟ್ಟುಗೊಂಡ ಹಿಂಬದಿ ಸವಾರ ಪ್ರತಾಪ್ ಗೌಡ ಪೊಲೀಸರಿಗೇ ಆವಾಝ್ ಹಾಕಿ ಹಲ್ಲೆಗೆ ಮುಂದಾಗಿದ್ದಾನೆ. ಈತನ ವಿರುದ್ಧ ಈಗಾಗಲೇ ಮಂಗಳೂರಿನ ಕಾವೂರು ಠಾಣೆಯಲ್ಲಿ ಎರಡು ಪ್ರಕರಣ ಹಾಗೂ ಸಂಪ್ಯ ಗ್ರಾಮಾಂತರ…
ಕಾರವಾರ : ಹಾಲಕ್ಕಿ ಬುಡಕಟ್ಟು ಸಮುದಾಯದ ಹೋರಾಟಗಾರ್ತಿ, ಹಿರಿಯ ಜಾನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಕ್ರಿ ಬೊಮ್ಮ ಗೌಡ (88) ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಅಂತಲೂ ಕರೆಯಲಾಗುತ್ತಿತ್ತು. ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಪದ್ಮಶ್ರೀ ಮಾತ್ರವಲ್ಲದೇ, ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು.
ಉಡುಪಿ : ಪಡಿಬಿದ್ರಿ ಪೇಟೆಯಲ್ಲಿ 20 ದಿನಗಳ ಹಿಂದೆ ಬುಲೆಟ್ ಬೈಕ್ ಕಳ್ಳತನವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೂಳೆಬೈಲು ನಿವಾಸಿ ರುಹಾನ್, ಶಿವಮೊಗ್ಗದ ಗೋಪಾಲ ನಿವಾಸಿ ತಾಜುದ್ದೀನ್ ಪಿ.ಕೆ ಯಾನೆ ತಾಜು ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಏನಿದು ಪ್ರಕರಣ ? ಜನವರಿ 21ರಂದು ರಾತ್ರಿ ಮುಂಡ್ಕೂರು ನಿವಾಸಿ ಪರೀಕ್ಷಿತ್ ಶೆಟ್ಟಿ ಎಂಬವರು ಪಡುಬಿದ್ರಿ ಪೇಟೆಯಲ್ಲಿ ಬುಲೆಟ್ ಬೈಕ್ನ್ನು ನಿಲ್ಲಿಸಿ ಕೆಲಸಕ್ಕೆ ತೆರಳಿದ್ದರು. ಬೆಳಗ್ಗೆ ಕೆಲಸ ಮುಗಿಸಿ ವಾಪಸ್ ಬಂದು ನೋಡಿದಾಗ ಅಲ್ಲಿ ಬೈಕ್ ಇರಲಿಲ್ಲ. ಬೈಕನ್ನು ಕಳವು ಮಾಡಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಶಿವಮೊಗ್ಗದಲ್ಲಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು. ಇದನ್ನೂ ಓದಿ : ರಿಕ್ಷಾ ಹಾಗೂ ಹೊಂಡಾ ಆಕ್ಟಿವಾ ನಡೆವೆ ಅಪಘಾತ; ಸವಾರರಿಗೆ ಗಾಯ ಸದ್ಯ ಪೊಲೀಸರ ಬಲೆಗೆ ಬಿದ್ದ ಕಳ್ಳರಿಂದ ಪಡುಬಿದ್ರಿಯಲ್ಲಿ ಕಳವು…
ಮಂಗಳೂರು: ನಕಲಿ ನೋಟುಗಳನ್ನು ಚಲಾಯಿಸಿರುವ ಆರೋಪಿ ಸಾಬೀತಾದ ಹಿನ್ನೆಲೆಯಲ್ಲಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿಗೆ 5ವರ್ಷಗಳ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಅಬ್ಬಾಸ್ (57) ಶಿಕ್ಷೆಗೊಳಗಾದ ಅಪರಾಧಿ. ಅಬ್ಬಾಸ್ ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿಯ ಹ್ಯಾಮಿಲ್ಟನ್ ಕಟ್ಟಡದ 1ನೇ ಮಹಡಿಯಲ್ಲಿನ ಶ್ರೀಕಟೀಲ್ ಎಂಟರ್ ಪ್ರೈಸಸ್ನಲ್ಲಿ ಮಕ್ಕಳ ಪ್ರಾಜೆಕ್ಟ್ ವರ್ಕ್ಗೆಂದು ಸುಳ್ಳು ಹೇಳಿ 100ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಕಲರ್ ಪ್ರಿಂಟ್ ಮಾಡಿಸಿ ನಕಲಿ ಮಾಡಿದ್ದನು. 2020ರ ಅ.31ರಂದು 12.30ಕ್ಕೆ ಮಾರ್ಗನ್ಸ್ ಗೇಟ್ ಜಂಕ್ಷನ್ ಬಳಿ ಇರುವ ಅಂಗಡಿಗಳಲ್ಲಿ ವಸ್ತುಗಳನ್ನು ಖರೀಸುವ ನೆಪದಲ್ಲಿ ನಕಲಿ ನೋಟುಗಳನ್ನು ಚಲಾವಣೆಗೆ ಪ್ರಯತ್ನಿಸುತ್ತಿದ್ದಾನೆ. ಈ ಸಂದರ್ಭ ಸಿ.ಸಿ.ಬಿ ಪೊಲೀಸ್ ಉಪ ನಿರೀಕ್ಷಕ ಪ್ರದೀಪ್ ಟಿ.ಆರ್. ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಯಲ್ಲಿದ್ದ 11 ನಕಲಿ ನೋಟುಗಳನ್ನು ಹಾಗೂ 2 ಅಸಲಿ ನೋಟುಗಳನ್ನು ವಶಪಡಿಸಿಕೊಂಡಿದ್ದರು.…
ಕಾಸರಗೋಡು: ಮಲೆಯಾಳಂ ನಲ್ಲಿ ನಾಗೇಂದ್ರನ್ ಹನಿಮೂನ್ ಎನ್ನುವ ಒಂದು ವೆಬ್ ಸೀರಿಸ್ ಬಂದಿತ್ತು, ನಟ ಸೂರಜ್ ನಟಿಸಿದ್ದ ಈ ವೆಬ್ ಸಿರಿಸ್ ಬಾರಿ ಮೆಚ್ಚುಗೆಗೆ ಪಾತ್ರವಾಗಿತ್ತು, ಅದರಲ್ಲೂ ನಟ ಹಣಕ್ಕಾಗಿ ಬೇರೆ ಬೇರೆ ಊರುಗಳಿಗೆ ತೆರಳಿ ಬೇರೆ ಬೇರೆ ಹೆಸರಿನಲ್ಲಿ ನಾಲ್ಕು ಮದುವೆಯಾಗುತ್ತಾನೆ. ಕೊನೆಗೆ ಸಿಕ್ಕಿಬಿಳುವ ಕಥೆ ಇರುವ ಸಿನೆಮಾ. ಇದೀಗ ಅದೇ ರೀತಿಯ ಸಿನೆಮಾ ಕಥೆಯನ್ನೇ ಹೋಲುವ ಘಟನೆಯ ನಿಜ ಜೀವನದಲ್ಲಿ ನಡೆದಿದ್ದು, ನಾಲ್ಕು ಮದುವೆಯಾದವನ್ನು ಇದೀಗ ಕಾಸರಗೋಡು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು ನಿವಾಸಿ ದೀಪು ಫಿಲಿಪ್ (36) ಬಂಧಿತ ಆರೋಪಿ. ಇತ ನಾಲ್ಕು ಮದುವೆಯಾಗಿದ್ದು. ಇದೀಗ ಪತ್ನಿಯರ ದೂರಿನಂತೆ ಕೇರಳದ ಕೊನ್ನಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆದರೆ ಆತ ಬಂಧನಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣ ಫೆಸ್ ಬುಕ್, ಅದು ಹೇಗೆ ಅಂತೀರಾ ಈ ಸ್ಟೋರಿ ನೋಡಿ ಆರೋಪಿ ದೀಪು ಫಿಲಿಫ್ ಕಾಸರಗೋಡು ಜಿಲ್ಲೆಯವನು, ಈತ 10 ವರ್ಷಗಳ ಹಿಂದೆ ಕಾಸರಗೋಡಿನ…
ಪಡುಬಿದ್ರಿ : ಖಾಸಗಿ ವೇಗದೂತ ಬಸ್ಸಿನ ಚಾಲಕನಿಗೆ ಅಪಸ್ಮಾರ ಸಂಭವಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಧರಗೆ ಚಲಿಸಿದ ಘಟನೆ ಬುಧವಾರ ಬೆಳಿಗ್ಗೆ ಎರ್ಮಾಳು ತೆಂಕ ಜಾಮಿಯಾ ಮಸೀದಿ ಬಳಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ವೇಗದೂತ ಬಸ್ಸಿನ ಚಾಲಕ ಶಂಭು ಮುಲ್ಕಿಯವರು ಎರ್ಮಳು ತೆಂಕ ಸಮೀಪಿಸುತ್ತಿದ್ದಂತೆ ಅವರಿಗೆ ಅಪಸ್ಮಾರ ಸಂಭವಿಸಿದೆ. ಇದೇ ಸಂದರ್ಭ 24 ಬಸ್ಸು ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಧರೆಗೆ ಚಲಿಸಿದೆ. ಈ ಸಂದರ್ಭ ಮೂರು ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗಿ, ವಿದ್ಯುತ್ ತಂತಿಗಳು ತುಂಡಾಗಿ, ವಿದ್ಯುತ್ ವ್ಯತ್ಯಯ ಉಂಟಾಗಿದೆ.ಬಸ್ಸಿನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಅಂಬುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ ರವಾನಿಸಲಾಗಿದೆ. ಚಾಲಕ ಶಂಬುರವರು ಚೇತರಿಸುತ್ತಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕಾಸರಗೋಡು: ಮಾದಕ ವಸ್ತು ಸಂಬಂಧಿತ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಕಾಸರಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉಳಿಯತ್ತಡ್ಕ ಎಸ್. ಪಿ ನಗರದ ಮೊಯ್ದೀನ್ ಎಂ. ಎಚ್ (28) ಎಂದು ಗುರುತಿಸಲಾಗಿದೆ. ಕಾಫಾ ಕಾಯ್ದೆಯಂತೆ ಈತನನ್ನು ಬಂಧಿಸಲಾಗಿದೆ. ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ 10 ಕ್ಕೂ ಅಧಿಕ ಪ್ರಕರಣಗಳ ಆರೋಪಿಯಾಗಿರು ಈತ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದನು. 2019 ರಲ್ಲಿ ಗಾಂಜಾ , 2021 ರ್ಯಾಲಿಯಲ್ಲಿ ಓರ್ವನನ್ನು ಅಪಹರಿಸಿದ್ದ ಪ್ರಕರಣ,2023 ರಲ್ಲಿ ಗಾಂಜಾ ಬಳಕೆ, 2024 ರಲ್ಲಿ ಹೊಡೆದಾಟ ಸೇರಿದಂತೆ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ. ಇದೀಗ ಕಾಸರಗೋಡು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು: ಐಟಿಐ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ-ಎಫ್ಟಿಎಸ್ಸಿ-1) ಅಪರಾಧಿಗೆ 1 ವರ್ಷ ಸಾದಾ ಜೈಲು ಮತ್ತು 10ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಸಜಿಪನಡು ಕಂಚಿನಡ್ಕ ನಿವಾಸಿ ಜಮಾಲ್ (24) ಶಿಕ್ಷೆಗೊಳಗಾದಾತ. ಜಮಾಲ್ ಬೆಳ್ತಂಗಡಿಯಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ. 2024ರ ಅ. 5ರಂದು ವಿದ್ಯಾರ್ಥಿನಿ ಬೆಳ್ತಂಗಡಿಯ ಐಟಿಐ ಕಾಲೇಜೊಂದಕ್ಕೆ ತನ್ನ ಸಂಬಂಧಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದ. ಅ. 10ರಂದು ಬೆಳಗ್ಗೆ 7.45ರ ಸುಮಾರಿಗೆ ಮತ್ತೆ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ಆತ ಅಪ್ರಾಪ್ತ ವಯಸ್ಸಿನ ಬಾಲಕಿ ಸೇರಿದಂತೆ ಇಬ್ಬರಿಗೂ ಬೈಕ್ ತಾಗಿಸಿಕೊಂಡು ಚಲಾಯಿಸಿದ್ದಾನೆ. “ನಿನ್ನನ್ನು ಕಾಲೇಜು ವರೆಗೆ ಬಿಡಬೇಕಾ? ನಿನ್ನ ಮೊಬೈಲ್ ನಂಬರ್ ನನಗೆ ಕೊಡು’ ಎಂದು ಕೇಳಿದ್ದಾನೆ. ಅ. 15ರಂದು ಬೆಳಗ್ಗೆ 7.45ಕ್ಕೆ ಮತ್ತೆ ಬೈಕ್ನಲ್ಲಿ ಬಂದು ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿನಿ ನೀಡಿದ…
ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೊಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು (ಫೆ.11) ಸಂಭವಿಸಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ ಎಂದು ತಿಳಿಯಲಾಗಿದೆ. ಅವಿವಾಹಿತನಾಗಿದ್ದ ಅಭಿಷೇಕ್ ಅವರು 2020 ರಲ್ಲಿ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯ ಎಚ್.ಸಿ.ಯಾಗಿ ನೇಮಕಗೊಂಡಿದ್ದರು. ಅ ಬಳಿಕ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರಿಗೆ ಕಳೆದ ಒಂದು ವರ್ಷದ ಹಿಂದೆ ಬೆನ್ನುಮೂಳೆಯ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಬ್ಲಡ್ ಕ್ಯಾನ್ಸರ್ ಕಂಡು ಬಂದಿತ್ತು. ಅ ಬಳಿಕ ಸುಮಾರು 8 ತಿಂಗಳಿನಿಂದ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ. ಅಭಿಷೇಕ್ ಅವರ ತಂದೆ ಕೂಡ ಪೋಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿತ್ತಿದ್ದು, ಬೆಂಗಳೂರು ನಗರದಲ್ಲಿ ವಾಸವಾಗಿದ್ದಾರೆ ಎಂದು ಹೇಳಲಾಗಿದೆ. ಅಭಿಷೇಕ್ ಅವರ ಮೃತದೇಹವನ್ನು ಹುಟ್ಟೂರು ದಾವಣಗೆರೆ ಜಿಲ್ಲೆಗೆ ಕೊಂಡು ಹೋಗಿದ್ದು,…