Author: main-admin

ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ.ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 11ರಿಂದ ಮಾರ್ಚ್ 12ರವರೆಗೆ ಎರಡು ದಿನಗಳ ಕಾಲ ಈ ಶೋಧ ಕಾರ್ಯಾಚರಣೆ ನಡೆಯಿತು. ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಅಧಿಕಾರಿಗಳಿಗೆ 11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಜಮೀನು ಸೇರಿದಂತೆ ಒಟ್ಟು ರೂ.6,90,64,716 ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿವೆ. ಇದರ ಜೊತೆಗೆ ವಿವಿಧ ರೂಪದಲ್ಲಿ ಭಾರಿ ಪ್ರಮಾಣದ ಚರಾಸ್ತಿಯೂ ಪತ್ತೆಯಾಗಿದೆ.ರೂ. 3,95,941 ನಗದುರೂ. 1,47,50,506 ಮೌಲ್ಯದ ಚಿನ್ನಾಭರಣರೂ. 17,00,000 ಮೌಲ್ಯದ ವಾಹನಗಳುರೂ. 25,75,000 ಮೌಲ್ಯದ ಬ್ಯಾಂಕ್ ಠೇವಣಿರೂ. 72,68,554 ಮೌಲ್ಯದ ಇತರೆ ವಸ್ತುಗಳುಇವೆಲ್ಲವನ್ನು…

Read More

ಪ್ರೇಮ ವೈಫಲ್ಯ, ಆನ್‌ಲೈನ್‌ ಜೂಜಾಟ ಸೇರಿ ಇತರ ಕಾರಣಗಳಿಂದಾಗಿ ಕಳೆದ 3 ವರ್ಷಗಳಲ್ಲಿ ರಾಜ್ಯದ ವಿವಿಧ ಸರಕಾರಿ ಶಾಲೆ,ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಒಟ್ಟು 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ| ಎಚ್. ಸಿ.ಮಹದೇವಪ್ಪ ಹೇಳಿದರು.ಕಾಂಗ್ರೆಸ್‌ನ ತಿಪ್ಪಣ್ಣಪ್ಪ ಕಮಕನೂರ ಪ್ರಶ್ನೆಗೆ ಉತ್ತರಿಸಿ, ಸರಕಾರಿ ಶಾಲೆ (ಶಾಲಾ ಶಿಕ್ಷಣ ಇಲಾಖೆ) 10, ವಸತಿ ಶಾಲೆ (ಕ್ರೈಸ್) 5 ಮತ್ತು ವಿದ್ಯಾರ್ಥಿ ನಿಲಯದ (ಸಮಾಜ ಕಲ್ಯಾಣ ಇಲಾಖೆ) 12 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿ ನಿಲಯದಲ್ಲಿ ದಾಖಲಾದ ಪ್ರಕರಣಗಳಲ್ಲಿ ಯಾವುದೇ ರೀತಿಯ ಒತ್ತಡದ ಜೀವನ, ರ್ಯಾಗಿಂಗ್ ಅಥವಾ ಮೂಲಭೂತ ಸೌಕರ್ಯಗಳ ಕೊರತೆ ಮುಖ್ಯವಾಗಿ ಕಾರಣವಾಗಿರುವುದಿಲ್ಲ ಎಂದು ತಿಳಿಸಿದರು.ಈಗಾಗಲೇ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರು ಸರಕಾರದ ಅಧೀನದಲ್ಲಿರುವ ವಸತಿ ಶಾಲೆ/ ಕಾಲೇಜುಗಳ,ಅಲ್ಪಸಂಖ್ಯಾಕರ ವಸತಿ ಶಾಲೆಗಳ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಆತ್ಮಹತ್ಯೆ ತಡೆ…

Read More

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1, 2026 ರಿಂದ ಟೋಲ್ ದರಗಳನ್ನು ಪರಿಷ್ಕರಿಸಲಿದೆ. ಹಣದುಬ್ಬರ ಮತ್ತು ಸಗಟು ಬೆಲೆ ಸೂಚ್ಯಂಕದ ಆಧಾರದ ಮೇಲೆ ಈ ಏರಿಕೆ ಮಾಡಲಾಗುತ್ತಿದ್ದು, ವಾರ್ಷಿಕ ಪಾಸ್ ದರ ₹3,000 ದಿಂದ ₹3,075 ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ. ಇದು ಮುಖ್ಯವಾಗಿ ಫಾಸ್ಟ್ಯಾಗ್ ಹೊಂದಿರುವ ಖಾಸಗಿ ವಾಹನ ಸವಾರರಿಗೆ ಅನ್ವಯಿಸಲಿದೆ. ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಶೇ. 3 ರಿಂದ 5% ರಷ್ಟು ದರ ಏರಿಕೆಯಾಗುವ ನಿರೀಕ್ಷೆಯಿದೆ. ಫಾಸ್ಟ್ಯಾಗ್ ಬ್ಲಾಕ್‌ಲಿಸ್ಟ್ ಆಗುವುದನ್ನು ತಪ್ಪಿಸಲು KYC ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ.

Read More

ರಾಜ್ಯದಲ್ಲಿ ಮತ್ತೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಎ1 ಆರೋಪಿ ಸೈಯದ್ ಪರಾರಿಯಾಗಿದ್ದು, ಇನ್ನುಳಿದ ಐವರನ್ನು ಬಂಧಿಸಿದ್ದಾರೆ. ಇನ್ನೂ ಡಿಸಿ ಕಚೇರಿಯಲ್ಲಿ ಡಿಸಿ ಹಾಗೂ ಎಡಿಸಿ ಅವರಿಗೆ ಸಂಬಂಧಿತ ಡಿಎಸ್‌ಸಿ ಕೀ ಕಳ್ಳತನ ಮಾಡಿದ್ದಾರೆ ಎಂದು ನೌಕರ ಸೈಯದ್ ಸಾದಿಕ್ ವಿರುದ್ಧ ಕಳ್ಳತನ ಆರೋಪ ಕೇಳಿಬಂದಿದೆ. ಸದ್ಯ ಗುತ್ತಿಗೆ ನೌಕರರನ್ನು ಕೆಲಸದಿಂದ ವಜಾಗೊಳಿಸಿದ್ದು, ಓರ್ವ ಸರ್ಕಾರಿ ನೌಕರನನ್ನು ಅಮಾನತುಗೊಳಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಐವರು ಸಿಎಲ್‌ಟಿಸಿ ಸಿಬ್ಬಂದಿ 15 ಲಕ್ಷ…

Read More

ಬೆಂಗಳೂರು : ಸನ್ನಡತೆ ಆಧಾರದ ಮೇಲೆ ರಾಜ್ಯ ಸರ್ಕಾರವು ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಜೈಲುಗಳಿಂದ ಮೂವರು ಮಹಿಳೆಯರೂ ಸೇರಿದಂತೆ 30ಕೈದಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ, ಸಂವಿಧಾನದ ಆರ್ಟಿಕಲ್ 161ರ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಪರಿಶೀಲನಾ ಸಮಿತಿಯ ಶಿಫಾರಸಿನ ಮೇರೆಗೆ, ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಸಂವಿಧಾನದ ಆರ್ಟಿಕಲ್​​ 161 ಅನ್ವಯ ರಾಜ್ಯಪಾಲರ ಅನುಮೋದನೆಯೂ ಇದಕ್ಕೆ ದೊರೆತಿದೆ. ವಿವಿಧ ಕೇಂದ್ರ ಕಾರಾಗೃಹಗಳಿಂದ ಬಂದ 54 ಪ್ರಕರಣಗಳನ್ನು ಪರಿಶೀಲಿಸಿದ LCR ಸಮಿತಿ, ಅವುಗಳಲ್ಲಿ 30 ಜೀವಾವಧಿ ಕೈದಿಗಳನ್ನು ಬಿಡುಗಡೆಗೆ ಆಯ್ಕೆ ಮಾಡಿದೆ. ಮುಖ್ಯಾಂಶಗಳು: ಸನ್ನಡತೆಯ ಮಾನದಂಡ : ಜೈಲಿನ ನಿಯಮಗಳನ್ನು ಪಾಲಿಸಿ, ಉತ್ತಮ ನಡವಳಿಕೆ ತೋರಿದ ಕೈದಿಗಳನ್ನು ಈ ಪಟ್ಟಿಗೆ ಆಯ್ಕೆ ಮಾಡಲಾಗಿದೆ. ರಾಜ್ಯಪಾಲರ ಅನುಮೋದನೆ: ಸರ್ಕಾರದ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ಈ ಬಿಡುಗಡೆಗೆ ಅಂಕಿತ ಹಾಕಿದ್ದಾರೆ. ಪುನರ್ವಸತಿಗೆ ಅವಕಾಶ: ಬಿಡುಗಡೆಯಾದ ಕೈದಿಗಳು ಸಮಾಜದ ಮುಖ್ಯವಾಹಿನಿಗೆ ಸೇರಿ ಹೊಸ ಜೀವನ ಆರಂಭಿಸಲು ಈ ನಿರ್ಧಾರ ಪೂರಕವಾಗಲಿದೆ. ಜೈಲು ಶಿಕ್ಷೆಯ…

Read More

ಸುಳ್ಯ: ಸರ್ಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶ್ರೀರಾಂ ಪೇಟೆಯ ಬಳಿ ಇಂದು ಮಧ್ಯಾಹ್ನ ನಡೆದಿದೆ.ಕೊಡಿಯಾಲ್‌ಬೈಲ್‌ನಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು (42) ಮೃತರು. ಮೂಲತಃ ಕೆ.ಆರ್. ನಗರದವರಾದ ಮಂಜು ಅವರು ಕಳೆದ ಎರಡು ವರ್ಷಗಳಿಂದ ಸುಳ್ಯದ ಸರ್ಕಾರಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಮಧ್ಯಾಹ್ನದವರೆಗೂ ಸಹೋದ್ಯೋಗಿಗಳ ಜೊತೆ ಲವಲವಿಕೆಯಿಂದಲೇ ಮಾತನಾಡಿದ್ದ ಅವರು, “ಸ್ವಲ್ಪ ಹುಷಾರಿಲ್ಲ, ವಿಶ್ರಾಂತಿ ಪಡೆದು ಬರುತ್ತೇನೆ” ಎಂದು ಹೇಳಿ ಮನೆಗೆ ತೆರಳಿದ್ದರು. ಹೀಗೆ ಹೋದವರು ಮನೆಯಿಂದ ಔಷಧಿಗಾಗಿ ಮೆಡಿಕಲ್ ಸ್ಟೋರ್‌ಗೆ ಬಂದಿದ್ದ ಸಂದರ್ಭದಲ್ಲಿ ಶ್ರೀರಾಂ ಪೇಟೆಯ ಬಳಿ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ

Read More

ಮಂಗಳೂರು:ಹೊಸಬೆಟ್ಟು ಪ್ರದೇಶದ ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಕದ್ದ ವಸ್ತುಗಳನ್ನು ಮತ್ತು ಅಪರಾಧಕ್ಕೆ ಬಳಸಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ರಾಜಸ್ಥಾನದ ಜೋಧಪುರದ ನಿವಾಸಿ ಮುಖೇಶ್ ದಾಸ್ (46) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಬೆಂಗಳೂರಿನ ಬನಶಂಕರಿಯ ಶ್ರೀನಿವಾಸ ನಗರದಲ್ಲಿ ವಾಸಿಸುತ್ತಿದ್ದಾನೆ. ಪೊಲೀಸರ ಪ್ರಕಾರ, ಈ ಘಟನೆ ಫೆಬ್ರವರಿ 14, 2025 ರ ರಾತ್ರಿ ನಡೆದಿದ್ದು, ಹೊಸಬೆಟ್ಟುವಿನ ರಾಷ್ಟ್ರೀಯ ಹೆದ್ದಾರಿಯ ಬಳಿ ಇರುವ ‘ಫ್ರೆಂಡ್ಸ್ ಗ್ಯಾರೇಜ್’ ಗೆ ಲಾರಿ ಚಾಲಕನೊಬ್ಬ ಬಂದು ತನ್ನ ವಾಹನವನ್ನು ನಿಲ್ಲಿಸಿದ್ದ. ನಂತರ ದುರಸ್ತಿಗಾಗಿ ಗ್ಯಾರೇಜ್ ನಲ್ಲಿ ನಿಲ್ಲಿಸಲಾಗಿದ್ದ ಎರಡು ಭಾರೀ ವಾಹನಗಳ ಬಿಡಿಭಾಗಗಳನ್ನು ಕದ್ದು ತನ್ನ ಲಾರಿಯಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ. ಕಳ್ಳತನದ ನಂತರ, ಗ್ಯಾರೇಜ್ ಮಾಲೀಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ, ಸುರತ್ಕಲ್ ಪೊಲೀಸರು ತನಿಖೆ ಆರಂಭಿಸಿ ಆರೋಪಿಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಪೊಲೀಸರು 96,000 ರೂ. ಮೌಲ್ಯದ ವಾಹನ ಬಿಡಿಭಾಗಗಳು ಮತ್ತು…

Read More

ಮಂಗಳೂರು: ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತು ಮತ್ತು ಇತರೆ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಉಳ್ಳಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ವಿವರ: ದಿನಾಂಕ 12-03-2026 ರಂದು ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡಕ್ಕೆ ಉಳ್ಳಾಲ ತಾಲೂಕು ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪದ ಗೌಂಡ್ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಕೇರಳ ರಾಜ್ಯದ ಮಂಜೇಶ್ವರದ ಅಲ್ತಾಫ್, ಉಪ್ಪಳದ ಶೇಕ್ ಅರ್ಬಾಜ್ ಹಾಗೂ ರಶೀದ್ ಆಲ್ವಿನ್ ಎಂಬವರುಗಳು ಮಾದಕ ವಸ್ತು ಗಾಂಜಾವನ್ನು ತಂದು ತಮ್ಮ ಗಿರಾಕಿಗಳಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಹಣಕ್ಕಾಗಿ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಲಭಿಸಿತು. ಮಾಹಿತಿ ಮೇರೆಗೆ ಪೊಲೀಸರು ಪಂಚರ ಸಮ್ಮುಖದಲ್ಲಿ ಸ್ಥಳಕ್ಕೆ ಧಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು. ಆರೋಪಿಗಳಿಂದ ಒಟ್ಟು ರೂ.51,500 ಮೌಲ್ಯದ ನಿಷೇಧಿತ ಮಾದಕ ವಸ್ತುವಾದ 1 ಕೆಜಿ 110 ಗ್ರಾಂ ತೂಕದ ಗಾಂಜಾ, ರೂ.520 ನಗದು, ಒಂದು…

Read More

ಉಡುಪಿ: ಕಳೆದ ಎರಡು ಮೂರು ದಿನಗಳಿಂದ ಚೊಂಬು ತಲೆಗೆ ಸಿಲುಕಿಕೊಂಡಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಎಂಬಲ್ಲಿ ಇಂದು ನಡೆದಿದೆ. ಪರಿಸರದಲ್ಲಿ ಚೊಂಬು ತಲೆಗೆ ಹಾಕಿಕೊಂಡು ಒದ್ದಾಡುತ್ತಿದ್ದ ಮಂಗವನ್ನು ಸ್ಥಳಿಯ ಸಮಾಜ ಸೇವಕರು ಮತ್ತು ಪರಿಸರ ಪ್ರೇಮಿ ನವೀನ್ ಕುಮಾರ್ ಚಿತ್ರಬೈಲ್, ಸುಕೇಶ್, ಹರೀಶ ರಾಮ ಮತ್ತು ವಿಶ್ವನಾಥ ಎಂಬವರು ಗಮನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಅವರು ಕೋತಿಯನ್ನು ಹಗ್ಗ ಕಟ್ಟಿ ಹಿಡಿದು, ಚಿತ್ರಬೈಲು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪರಿಸರಕ್ಕೆ ಕೊಂಡೊಯ್ದಿದ್ದಾರೆ. ಕೋತಿಯ ತಲೆಯನ್ನು ನೀರಿನಲ್ಲಿ ಒದ್ದೆ ಮಾಡಿ ಬಳಿಕ ನಾಜೂಕಾಗಿ ಚೊಂಬನ್ನು ತಲೆಯಿಂದ ಬೇರ್ಪಡಿಸಿದ್ದಾರೆ. ಚೊಂಬು ತೆಗೆದ ತಕ್ಷಣ ಬದುಕಿದೆಯೋ ಬಡ ಜೀವ ಎಂಬಂತೆ ಕೋತಿ ಜಿಗಿದು ಓಡಿ ಪರಾರಿಯಾಗಿದೆ. ಸ್ಥಳೀಯ ಯುವಕರ ಈ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Read More

ವಿಟ್ಲ: ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಇದ್ದುಕೊಂಡು ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿ, ಸುಮಾರು ರೂ.1,79,700 ಮೌಲ್ಯದ 17.97 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಶ್ರಫ್ ಜಿ ಎಂಬಾತ ತನ್ನ ಮನೆಯಲ್ಲಿ ಎಂಡಿಎಂಎ ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರತ್ನಕುಮಾರ್ ಎಂ. ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ಅಶ್ರಫ್ ಜಿ (38) ವಾಸವಿದ್ದ ಮನೆಯನ್ನು ಪರಿಶೀಲಿಸಿದಾಗ, ಅಶ್ರಫ್ ಜಿ ಜೊತೆಗೆ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಹಾಗೂ ಅಶ್ರಫ್ ಎನ್.ಎ. ಎಂಬವರು ಇದ್ದರು. ಮನೆಯ ಪರಿಶೀಲನೆಯ ವೇಳೆ ಒಟ್ಟು 17.97 ಗ್ರಾಂ ತೂಕದ ಸುಮಾರು ರೂ.1,79,700…

Read More