Author: main-admin

ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ ಪಿ ಎಸ್ ಐ ಹನುಮೇಶ್ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಈ ಕುರಿತು ದೂರು ನೀಡಲಾಗಿದೆ. ಬೆಂಗಳೂರಿನ ಮಹದೇವಪುರ ಠಾಣೆಯ ಪಿಎಸ್ಐ ಹನುಮೇಶ್ ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಯರಿಗೆ ಲೈಂಗಿಕ ದೌರ್ಜನ್ಯಸೆಗಿರುವ ಆರೋಪದಲ್ಲಿ ಇದೀಗ ದೂರು ನೀಡಲಾಗಿದೆ. ಕಾನ್ಸ್ಟೇಬಲ್ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ದೂರು ಸಲ್ಲಿಸಲಾಗಿದೆ. ವೈಟ್‌ಫೀಲ್ಡ್ ಉಪವಿಭಾಗದ ಎಸಿಪಿ ಯಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನಕಲಿ ಖಾತೆ ತೆರೆದು ಕ್ವಾಟರ್ಸ್ ಮಹಿಳೆಯರಿಗೆ ಪಿಎಸ್ಐ ಹನುಮೇಶ್ ಮೆಸೇಜ್ ಮಾಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ.

Read More

ಬಂಟ್ವಾಳ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 180 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿ 19ರಂದು ಮಧ್ಯಾಹ್ನ ಬಂಟ್ವಾಳ ತಾಲೂಕಿನ ಕೊಡ್ಮಾಣು ಗ್ರಾಮದ ಪಕ್ಕಳಪಾದೆ ಎಂಬಲ್ಲಿ ರಸ್ತೆಯ ಬದಿಯ ನಿರ್ಜನ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ಅಕ್ರಮವಾಗಿ ವಶದಲ್ಲಿಟ್ಟುಕೊಂಡಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಮಂಜುನಾಥ ಟಿ., ಪೊಲೀಸ್ ಉಪ ನಿರೀಕ್ಷಕರು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ, ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು. ಸ್ಥಳದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಆತನು ಬಂಟ್ವಾಳ ಮೇರಮಜಲು ನಿವಾಸಿ ಪ್ರಶಾಂತ್ @ ಪ್ರಸಾದ್ (30) ಎಂದು ತಿಳಿದುಬಂದಿದೆ. ತಪಾಸಣೆ ವೇಳೆ ಆತನ ಬಳಿಯಿಂದ 180 ಗ್ರಾಂ ಗಾಂಜಾ ಪತ್ತೆಯಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ, ಬಂಟ್ವಾಳದ ಪಲ್ಲಮಜಲು ನಿವಾಸಿ ಅಬ್ದುಲ್ ರಜಾಕ್ ಎಂಬವರು ಗಾಂಜಾವನ್ನು ಗಿರಾಕಿಗಳಿಗೆ ಮಾರಾಟ ಮಾಡುವಂತೆ ನೀಡಿದ್ದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿತನನ್ನು ಗಾಂಜಾ ಹಾಗೂ…

Read More

ಬಂಟ್ವಾಳ: ಅಂಗನವಾಡಿಗೆ ತೆರಳುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಗುರುವಾರ ಬೆಳಗ್ಗೆ ಬೋಳಂತೂರಿನಲ್ಲಿ ನಡೆದಿದೆ. ಗಾಯಗೊಂಡ ಮಗು ಬೋಳಂತೂರು ನಾರ್ಶ ಬಂಗಾರಕೋಡಿ ನಿವಾಸಿ ರಿಯಾಝ್ ಎಂಬವರ ಪುತ್ರಿ ರಿಜಿಲಾ ಸಾರಮ್ಮ ಎಂದು ತಿಳಿದು ಬಂದಿದೆ. ಮನೆಯ ಸಮೀಪವೇ ಅಂಗನವಾಡಿ ಕೇಂದ್ರವಿದ್ದು, ಗುರುವಾರ ಬೆಳಗ್ಗೆ ರಿಜಿಲಾ ಒಬ್ಬಳೇ ಅಂಗನವಾಡಿಗೆಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೀದಿನಾಯಿಯೊಂದು ಏಕಾಏಕಿ ದಾಳಿ ಮಾಡಿದೆ. ಘಟನೆಯಿಂದ ಮಗುವಿನ ಮುಖ ಸಹಿತ ಇಡೀ ದೇಹದ ಮೇಲೆ ಗಂಭೀರ ಗಾಯಗಳಾಗಿವೆ. ಮಗುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Read More

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ತಂಡದಲ್ಲಿ ಉಡುಪಿ ಜಿಲ್ಲಾ ಎಸ್.ಪಿ ಹರಿರಾವ್ ಶಂಕರ್ ಐಪಿಎಸ್, ಡಿವೈಎಸ್‌ಪಿ ಎಂಆ‌ರ್ ಹರೀಶ್ ಅವರಿದ್ದಾರೆ. 2022ರ ಡಿ.18ರಂದು ಶಿಬಾಜೆಯಲ್ಲಿ ಕೆಲಸ ಮಾಡುತ್ತಿದ್ದ ತೋಟದ ಒಳಗೆ ಶ್ರೀಧರ ಅವರ ಕೊಲೆ ನಡೆದಿತ್ತು.ಈ ಪ್ರಕರಣದಲ್ಲಿ ಹಲವಾರು ಪ್ರಭಾವಿಗಳು ಭಾಗಿಯಾಗಿರುವ ಆರೋಪ ಆರಂಭದಿಂದಲೂ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ದಲಿತ ಸಂಘಟನೆಗಳು ಬೃಹತ್ ಹೋರಾಟಗಳನ್ನು ನಡೆಸಿದ್ದರು. ಆದರೆ ಶ್ರೀಧರ ಅವರ ಕೊಲೆ ಪ್ರಕರಣದ ಆರೋಪಿಗಳು ಪತ್ತೆಯಾಗಲೇ ಇಲ್ಲ.ಪೊಲೀಸ್‌ ತನಿಖೆ ಸಮರ್ಪಕವಾಗಿ ನಡೆಯದ ಹಿನ್ನೆಲೆಯಲ್ಲಿ ಹರೀಶ್ ಮುಗೇರ ಎಂಬವರು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಕೊಂಡಿದ್ದರು. ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ಬಳಿಕ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ…

Read More

ನಾಯಕತ್ವ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ದಿನಾಂಕ 19.02.2026ರಂದು “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು. ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಅತಿಥಿ ಭಾಷಣಕಾರರಾಗಿ ಮಸ್ಕತ್‌ನ ಬ್ಯಾಂಕಿAಗ್ ಮತ್ತು ಹಣಕಾಸು ಅಧ್ಯಯನ ಕಾಲೇಜಿನ ತರಬೇತಿ ನಿರ್ದೇಶಕ ಡಾ| ಕೆ. ರಾಜೇಶ್ ನಾಯಕ್ ಮತ್ತು ಪ್ರಸಿದ್ಧ ಚಾರ್ಟರ್ಡ್ ಅಕೌಂಟೆAಟ್ ಮತ್ತು ತೆರಿಗೆ, ಉದ್ಯಮಶೀಲತೆ ಮತ್ತು ವ್ಯವಹಾರ ಸಲಹಾ ಸೇವೆಗಳಲ್ಲಿ ತಜ್ಞ ಸಿಎ ಎಸ್. ಎಸ್. ನಾಯಕ್ ಭಾಗವಹಿಸಿದ್ದರು.ಸಿ.ಎ. ಎಸ್. ಎಸ್. ನಾಯಕ್ ತಮ್ಮ ಉಪನ್ಯಾಸದಲ್ಲಿ ಭಾರತೀಯ ಬ್ಯಾಂಕಿAಗ್ ವ್ಯವಸ್ಥೆ ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿ, ಅದರ ಸ್ಥೈರ್ಯ, ನಿಯಂತ್ರಣದ ಬಲ ಹಾಗೂ ವೇಗವಾಗಿ ಬದಲಾಗುತ್ತಿರುವ ಆರ್ಥಿಕ ಪರಿಸ್ಥಿತಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಪ್ರಶಂಸಿಸಿದರು. ಹೊಸ ವ್ಯವಹಾರ ಅವಕಾಶಗಳನ್ನು ಹುಡುಕುವುದಕ್ಕಿಂತ ಮೊದಲು ಗ್ರಾಹಕರ ದೂರಗಳನ್ನು ಪರಿಹರಿಸುವುದು ಅತ್ಯಂತ…

Read More

ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣದ ದೂರುದಾರನನ್ನೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರು ಬಡ್ತಿ ಪಡೆಯುವುದಕ್ಕಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಈ ಸಂಬಂಧ ಸಿಸಿಬಿಗೆ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ದೂರು ನೀಡಿದ್ದರು. ಈ ದೂರು ಆಧರಿಸಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ…

Read More

ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾದಕವಸ್ತು ಮಾರಾಟ ಜಾಲವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ಅಜ್ಮಲ್ ಸಿ @ ಅಜ್ಜು (30), ಕೋಝಿಕೋಡ್, ಕೇರಳ; ಇಸ್ಮಾಯಿಲ್ (28), ವಯನಾಡ್ ಜಿಲ್ಲೆ, ಕೇರಳ; ಸಂಶೀರ್ (27), ಕೋಝಿಕೋಡ್, ಕೇರಳ ಎಂದು ಗುರುತಿಸಲಾಗಿದೆ. ಬಂಧಿತರಿಂದ 53.58 ಗ್ರಾಂ ನಿಷೇಧಿತ ಎಂಡಿಎಂಎ (MDMA) ಮಾದಕವಸ್ತು, ಒಂದು ಕಾರು, ಮೊಬೈಲ್ ಫೋನ್‌ಗಳು, ರೂ.10,000 ನಗದು ಹಾಗೂ ತಲವಾರ್ ವಶಪಡಿಸಿಕೊಳ್ಳಲಾಗಿದೆ. ಫೆಬ್ರವರಿ 18ರಂದು ಆರೋಪಿಗಳು ಪುತ್ತೂರಿನಿಂದ ಸುಳ್ಯ ಕಡೆಗೆ ಕಾರಿನಲ್ಲಿ ಮಾದಕವಸ್ತು ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ತಕ್ಷಣ ಕಾರ್ಯಾಚರಣೆ ಕೈಗೊಂಡ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ 53.58 ಗ್ರಾಂ ಎಂಡಿಎಂಎ ಪತ್ತೆಯಾಗಿದೆ. ವಶಪಡಿಸಿಕೊಂಡ ಮಾದಕವಸ್ತುವಿನ ಅಂದಾಜು ಮಾರುಕಟ್ಟೆ ಮೌಲ್ಯ ರೂ.5,38,800 ಎಂದು ತಿಳಿದುಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕೇರಳ, ಗೋವಾ ಹಾಗೂ ಕರ್ನಾಟಕದ…

Read More

ಬೆಳ್ತಂಗಡಿ: ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬಾಲಕ ಅಭೀಶ್ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್ ರೀತಿ ಇದ್ದ ಬಾಂಬ್​​ನಿಂದ ಮಕ್ಕಳು ಕ್ರಿಕೆಟ್ ಆಡಿದ್ದಾರೆ. ಓರ್ವ ಬಾಲಕ ಪತ್ತೆಯಾದ ಚೆಂಡಿನಾಕಾರದ ವಸ್ತುವನ್ನು ಬೌಲ್ ಮಾಡಿದ್ದು, ಅಭೀಶ್ ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಈ ವೇಳೆ ಅಭೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡು ಹಂದಿ ಬೇಟೆ ಆಡಲು ಇಟ್ಟಿದ್ದ ಬಾಂಬ್​ ಎಂದು ಶಂಕಿಸಲಾಗಿದೆ.

Read More

ಮಂಗಳೂರು: ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ BSNL ಇಲಾಖೆಗೆ ಸೇರಿದ ತಾಮ್ರದ ಕೇಬಲ್ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ 16-02-2026ರಂದು BSNL ಕಚೇರಿ, ಪಾಂಡೇಶ್ವರ, ಮಂಗಳೂರು ಇಲ್ಲಿ ಜೂನಿಯರ್ ಟೆಲಿಕಾಂ ಆಫೀಸರ್ ಆಗಿರುವ ವಿನೋದ ಶೇಖರ್ ನಾಯಕ್ ಅವರು ಠಾಣೆಗೆ ಹಾಜರಾಗಿ ದೂರು ನೀಡಿದ್ದರು. ಡಿಸೆಂಬರ್ 2025ರಿಂದ 14-02-2026ರವರೆಗೆ BSNL ಇಲಾಖೆಗೆ ಸೇರಿದ ತಾಮ್ರದ ಕೇಬಲ್‌ಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಕಳುವಾದ ಕೇಬಲ್‌ಗಳ ಅಂದಾಜು ಮೌಲ್ಯ ಸುಮಾರು ₹70 ಲಕ್ಷ ಎಂದು ಹೇಳಲಾಗಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಯಲ್ಲಿ ಠಾಣಾ ಅ.ಕ್ರ.45/2026, ಕಲಂ 303(2) BNS 2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು 18-02-2026ರಂದು ಕೆಳಕಂಡ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಎಕ್ಕೂರು ನಿವಾಸಿ ಮಂಜುನಾಥ ಡಿ (29) (ಕೇಬಲ್ ಜಾಯಿಂಟರ್, NFS ಕೇಬಲ್, L&T ಕಂಪನಿ, ಕದ್ರಿ ಮಂಗಳೂರು), ಕಣ್ಣೂರು ಮೂಲದ…

Read More

ಬೆಳ್ತಂಗಡಿ: ಕುತ್ತೂರಿನ ಲಿಂಗಪ್ಪ ಮಲೆಕುಡಿಯ ಅವರ ಮನೆಯಲ್ಲಿ ನಕ್ಸಲ್ ಸಂಬಂಧಿತ ಕರಪತ್ರ ಹಂಚಿಕೆ ಹಾಗೂ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ ಆರೋಪದಡಿ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ಜಾನ್ ಅಲಿಯಾಸ್ ಜಯಣ್ಣ ರಾಯಚೂರು ಅವರು ಫೆಬ್ರವರಿ 19ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಬಾಡಿ ವಾರಂಟ್ ಮೂಲಕ ಕೇರಳ ಪೊಲೀಸರು ಜಯಣ್ಣರನ್ನು ಕೋರ್ಟ್‌ಗೆ ಹಾಜರುಪಡಿಸಿದರು.ಜಯಣ್ಣ ಪರ ವಕೀಲ ಶಿವಕುಮಾರ್ ಹಾಗೂ ಸರ್ಕಾರದ ಪರ ವಕೀಲ ದಿವ್ಯರಾಜ್ ಹೆಗ್ಡೆ ನ್ಯಾಯಾಲಯಕ್ಕೆ ಹಾಜರಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏ.10ಕ್ಕೆ ವಿಚಾರಣೆ ಮುಂದೂಡಲಾಗಿದೆ

Read More