ಪುತ್ತೂರು: ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಹೊರವಲಯದ ಮುರ ಜಂಕ್ಷನ್ ಸಮೀಪ ಸಂಭವಿಸಿದೆ. ಗಾಯಾಳುಗಳನ್ನು ಅಂಡೆಪುನಿ ನಿವಾಸಿ ಈಶ್ವರ್ ಭಟ್, ಅವರ ಮಗಳು ಅಪೂರ್ವ ಹಾಗೂ ಮೊಮ್ಮಗು ಎಂದು ತಿಳಿದು ಬಂದಿದೆ. ಮಾಹಿತಿಯ ಪ್ರಕಾರ ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಇಂದು ಶ್ರಾದ್ಧ ಕಾರ್ಯಕ್ರಮದ ಹಿನ್ನೆಲೆ ಭಾಗವಹಿಸಲು ಅವರ ಮಗಳು ಅಪೂರ್ವ ಹಾಗೂ ಮೊಮ್ಮಗಳು ಬೆಂಗಳೂರಿನಿಂದ ಪುತ್ತೂರಿಗೆ ಆಗಮಿಸಿದ್ದರು. ಈಶ್ವರ್ ಭಟ್ ಅವರು ಪುತ್ತೂರು ಪೇಟೆಯಿಂದ ಇವರನ್ನು ತಮ್ಮ ಕಾರಿನಲ್ಲಿ ಮನೆಗೆ ಕರೆತರುತ್ತಿದ್ದ ವೇಳೆ, ಮುರ ಜಂಕ್ಷನ್ ಬಳಿ ಪಡೂರಿಗೆ ತೆರಳುವ ಒಳರಸ್ತೆಗೆ ಕಾರನ್ನು ತಿರುಗಿಸುತ್ತಿದ್ದರು. ಈ ಸಂದರ್ಭದಲ್ಲಿ ಪುತ್ತೂರಿನಿಂದ ಮಂಗಳೂರಿನತ್ತ ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್, ಕಾರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಹಲವು ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದೆ ಎಂದು ತಿಳಿದುಬಂದಿದೆ. ಅಪಘಾತ ನಡೆದ ಕೂಡಲೇ ಸ್ಥಳೀಯರು…
Author: main-admin
ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೃಹತ್ ಮಾವಿನ ಮರವೊಂದು ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಘಟನೆ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ. ಅಬ್ದುಲ್ ಸಲೀಂ ಎಂಬವರು ರಾಮಕುಂಜದ ರಸ್ತೆ ಬದಿ ತನ್ನ ಮಾರುತಿ 800 ಕಾರನ್ನು ನಿಲ್ಲಿಸಿ ಹೊರ ಹೋಗಿದ್ದರು. ಕಾರಿನಲ್ಲಿ ರಹಿಮಾನ್, ಅಬ್ಬಾಸ್ ಹಾಗೂ ರಮ್ಲಾನ್ ಕುಳಿತಿದ್ದರು. ಈ ವೇಳೆ ಮರ ಬೀಳುವ ಶಬ್ದ ಕೇಳಿ ಮೂವರು ಕಾರಿನಿಂದ ಇಳಿದು ದೂರ ಹೋಗಿದ್ದಾರೆ. ಅಷ್ಟರಲ್ಲೇ ಮಾವಿನ ಮರ ಕಾರಿನ ಮೇಲೆ ಬಿದ್ದಿದೆ. ಕಾರು ಸಂಪೂರ್ಣ ಜಖಂಗೊಂಡು ಹಾನಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ದ ವಾಗಿರಬೇಕು. ವೆಂಟಿಲೇ ಟರ್, ಆಕಿಜನ್, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ದಪಡಿಸಿಕೊ ಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಯಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ. ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್,…
ಮಂಗಳೂರು: ಜೂನ್ 1 ರಂದು ಮಂಗಳೂರಿನಲ್ಲಿ ನಡೆಯುವ ಒಂದು ದಿನದ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ಮತ್ತು ರಾಷ್ಟ್ರೀಯ ಕಲಾ ಸಮ್ಮೇಳನವನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(YPFT)ಆಯೋಜಿಸಿರುವ ಈ ಕಾರ್ಯಕ್ರಮ, ಜೂನ್ 1 ರಂದು ಬೆಳಗ್ಗೆ 9.30 ರಿಂದ ರಾತ್ರಿ 11 ರವರೆಗೆ ದಿನವಿಡೀ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಲಾ ಪ್ರದರ್ಶನಗಳು ಮತ್ತು ಸಾಂಸ್ಕೃತಿಕ ಪ್ರದರ್ಶನಗಳು ನಡೆಯಲಿವೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ YPFTಯ ಸತೀಶ್ ಶೆಟ್ಟಿ ಅವರು, ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವ ಅವರ ಸಮನ್ವಯದಲ್ಲಿ, ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಮತ್ತು ಸಾಂಪ್ರದಾಯಿಕ ಕಲಾ ಛಾಯಾಗ್ರಹಣ ಪ್ರದರ್ಶನದ ಜೊತೆಗೆ ಎಂಟು ಭಾರತೀಯ ಶಾಸ್ತ್ರೀಯ ಕಲಾ ಪ್ರಕಾರಗಳನ್ನು ಪ್ರದರ್ಶಿಸಲಾಗುವುದು ಎಂದರು. ಅಂದು ಮಧ್ಯಾಹ್ನ 1 ಗಂಟೆಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಸನ್ಮಾನಿಸಲಾಗುವುದು…
ಬೆಂಗಳೂರು : ಅಬಕಾರಿ ಸನ್ನದುಗಳ ನವೀಕರಣ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಲು ಮುಂದಾಗಿರುವ ಸರ್ಕಾರದ ಪ್ರಸ್ತಾವ ವಿರೋಧಿಸಿ ಮದ್ಯ ಮಾರಾಟಗಾರರು ಮೇ. 29 ರಿಂದ ಕರ್ನಾಟಕದಾದ್ಯಂತ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ. ರಾಜ್ಯ ಸರ್ಕಾರವು ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದೇ ಸಂದರ್ಭದಲ್ಲಿ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಮದ್ಯ ಮಾರಾಟಗಾರರ ಸಂಘ ಸಭೆ ಕರೆದು ಸಮಾಲೋಚನೆ ನಡೆಸಿದೆ. ಮದ್ಯ ಮಾರಾಟಗಾರರು ಈ ತಿಂಗಳು 29 ರಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್ ಸ್ಟೋರ್ ಕ್ಲೋಸ್ ಮಾಡಲು ತೀರ್ಮಾನ ಮಾಡಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘದ ಉಪಾಧ್ಯಕ್ಷ ಕರುಣಾಕರ್ ಹೆಗ್ಡೆ ತಿಳಿಸಿದ್ದಾರೆ. ರಾಜ್ಯದಲ್ಲಿ ಜುಲೈನಿಂದ ಅಬಕಾರಿ ವರ್ಷ ಆರಂಭವಾಗಲಿದ್ದು, ಆಗ ರಾಜ್ಯದ ಎಲ್ಲಾ 13 ಸಾವಿರಕ್ಕೂ ಅಧಿಕ ಅಬಕಾರಿ ಸನ್ನದುದಾರರು ತಮ್ಮ ಲೈಸೆನ್ಸ್ ನವೀಕರಿಸಿಕೊಳ್ಳಬೇಕಿದೆ.…
ಮಂಗಳೂರಿನಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು ಪಂಪ್ವೆಲ್ ಸೇತುವೆಯ ಕೆಳಭಾಗ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದರಿಂದ ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದಾರೆ. ಇಲ್ಲಿ ಪ್ರವಾಹ ಪರಿಸ್ಥಿತಿ ಎದುರಾದ ಹಿನ್ನೆಲೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ರಾಜಕಾಲುವೆಯಲ್ಲಿ ಅಧಿಕ ಪ್ರಮಾಣದಲ್ಲಿ ನೀರು ತುಂಬಿ ಹರಿಯುತ್ತಿದೆ. ಇದೀಗ ನಿರಂತರವಾಗಿ ಮಳೆ ನೀರು ಹರಿಯುತ್ತಿದ್ದು ಮುಂದೆ ಸಾರ್ವಜನಿಕರು ಯಾವ ರೀತಿಯ ಪರಿಸ್ಥಿತಿಯನ್ನು ಎದುರಿಸಬೇಕಾಗಿ ಬರುತ್ತದೋ ಎಂಬ ಆತಂಕ ಕೂಡಾ ಸೃಷ್ಟಿಯಾಗಿದೆ. ಇಲ್ಲಿ ದಿನನಿತ್ಯ ಟ್ರಾಫಿಕ್ ಜಾಂ ಸಮಸ್ಯೆ ಕೂಡಾ ಕಂಡುಬರುತ್ತಿದೆ.
ಬೆಂಗಳೂರು: ದೇವನಹಳ್ಳಿ ಬಳಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ರೇವ್ ಪಾರ್ಟಿ ನಡೀತಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿದ್ದು, 30ಕ್ಕೂ ಹೆಚ್ಚು ಯುವಕ-ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಬಳಿ ಪಾರ್ಮ್ ಹೌಸ್ನಲ್ಲಿ ರೇವ್ ಪಾರ್ಟಿ ನಡೀತಿತ್ತು. ರಾತ್ರಿಯಿಂದ ಬೆಳಗಿನ ಜಾವದ ತನಕ ರೇವ್ ಪಾರ್ಟಿ ನಡೆದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ರೇವ್ ಪಾರ್ಟಿಯಲ್ಲಿ 30ಕ್ಕೂ ಹೆಚ್ಚು ಯುವಕ ಯುವತಿಯರು ಮೈ ಮರೆತಿದ್ದುದು ಕಂಡುಬಂದಿದೆ. ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವಕ-ಯುವತಿಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಯುವಕ ಯುವತಿಯರ ವಿಚಾರಣೆ ಅಂತ್ಯದ ಬಳಿಕ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದವರನ್ನು ಪೊಲೀಸ್ ವ್ಯಾನ್ನಲ್ಲಿ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಮೆಡಿಕಲ್ ಚೆಕ್ ಅಪ್ ಕೂಡ ಮಾಡಿಸಿದ್ದಾರೆ. ಮೆಡಿಕಲ್ ಟೆಸ್ಟ್ ಬಳಿಕ ಎಲ್ಲರನ್ನೂ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಬಳಿ ಮುಂಜಾನೆವರೆಗೂ ರೇವ್ ಪಾರ್ಟಿ…
ಮಂಗಳೂರು: ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿಯಲ್ಲಿರುವ ಮಾಲ್ ವೊಂದರ ಪಾರ್ಕಿಂಗ್ ನಲ್ಲಿರುವ ಕೊಠಡಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿತ್ತೆನ್ನಲಾದ ಹುಕ್ಕಾ ಬಾರ್ ಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಂಕನಾಡಿಯ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ BLACK MOON RESTO CAFÉ ಎಂಬ ಹೆಸರಿನಲ್ಲಿ ಕಾನೂನುಬಾಹಿರವಾಗಿ ನಡೆಸುತ್ತಿದ್ದ ಹುಕ್ಕಾ ಬಾರ್ ಗೆ ದಾಳಿ ನಡೆಸಲಾಗಿದೆ. 2023-24ರಲ್ಲಿ ಕೆಫೆಟೇರಿಯಾ ನಡೆಸಲು ಮಂಗಳೂರು ಮಹಾನಗರ ಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆದಿದ್ದ ಆರೋಪಿಗಳು ಕೆಫೆಟೇರಿಯಾ ನೆಪದಲ್ಲಿ ಅಕ್ರಮ ಹುಕ್ಕಾ ಬಾರ್ ನಡೆಸುತ್ತಿದ್ದರು. ಇವರು ನಿಯಮಗಳನ್ನು ಉಲ್ಲಂಘಿಸಿ ಯುವಕರನ್ನು ಮಾದಕ ಭ್ರಮಾ ಲೋಕದಲ್ಲಿ ತೇಲಿಸಿ ಹೆಚ್ಚಿನ ಹಣ ಸಂಪಾದಿಸಿ ಅಪರಾಧವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹುಕ್ಕಾ ಬಾರ್ ನಿಂದ ಹುಕ್ಕಾ ಸೇದುವ ಉಪಕರಣಗಳು, ತಂಬಾಕು ಉತ್ಪನ್ನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ. ನೇತೃತ್ವದಲ್ಲಿ ಪಿಎಸ್ಸೈ ಸುದೀಪ್ ಎಂ.ವಿ.,…
ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ಕರ್ನಾಟಕದ ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಲೆ ಪ್ರಕರಣದ ತನಿಖೆ ಬಹುತೇಕ ಕೊನೆಯ ಹಂತ ತಲುಪಿದ್ದು, ತನಿಖೆಯ ವೇಳೆ ಕೆಲವು ಸ್ಪೋಟಕವಾದ ವಿಚಾರಗಳು ಬಯಲಾಗಿದೆ. ಕೊಲೆಯಾದ ಓಂ ಪ್ರಕಾಶ್ ಅವರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿಗೆ ವಹಿಸಿತ್ತು. ಕೊಲೆಗೆ ಪ್ರಮುಖ ಕಾರಣಗಳನ್ನು ಇದೀಗ ಸಿಸಿಬಿ ಪತ್ತೆ ಹಚ್ಚಿದೆ. ಕುಟುಂಬದ ಬಗ್ಗೆ ತೋರಿದ ನಿರ್ಲಕ್ಷವೇ ಓಂಪ್ರಕಾಶ್ ಅವರ ಕೊಲೆಗೆ ಕಾರಣವಾಗಿದೆ. ಆಸ್ತಿಯ ವಿಚಾರದಲ್ಲಿ ಕುಟುಂಬದಲ್ಲಿ ಭೋಗಿಲೆದ್ದಿದ್ದ ಮನಸ್ಥಾಪದಿಂದ ಓಂ ಪ್ರಕಾಶ್ ಅತ್ತೆಯಾಗಿದೆ. ಕೌಟುಂಬಿಕ ಕಾರಣಗಳಿಂದ ಪತಿಯನ್ನು ಕ್ರೂರವಾಗಿ ಪತ್ನಿ ಪಲ್ಲವಿ ಅತ್ತೆಗೈದಿದ್ದರೂ ಓಂ ಪ್ರಕಾಶ್ ಕೊಲೆಗೆ ಸಿಸಿಬಿ ತನಿಖೆಯ ವೇಳೆ ಕೆಲವು ಕಾರಣಗಳನ್ನು ಪತ್ತೆ ಹಚ್ಚಿದೆ. ತನ್ನ ಬಗ್ಗೆ ವೈಯಕ್ತಿಕವಾಗಿ ಗಮನಹರಿಸಿಲ್ಲ ಎಂದು ಪತ್ನಿ ಪಲ್ಲವಿ ಆರೋಪಿಸಿದ್ದಾರೆ ಮಗಳಿಗೆ ಮದುವೆ ಮಾಡಿಲ್ಲ ಎಂದು ಪತಿಯ ಮೇಲೆ ಕೋಪಗೊಂಡಿದ್ದರು. ತನ್ನ ಭಾಗದ ಕುಟುಂಬದ ಬಗ್ಗೆ ಹೆಚ್ಚು ಗಮನ ವಹಿಸುತ್ತಿದ್ದ…
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ ನಾಲ್ಕು ಇನ್ ಸ್ಟಾ ಗ್ರಾಂ ಪೇಜ್ ಗಳು ಹಾಗೂ ಒಂದು ಫೇಸ್ಬುಕ್ ಪೇಜ್ ನ್ನು ರದ್ದುಪಡಿಸಿ ಪ್ರಕರಣ ದಾಖಲಿಸಲಾಗಿದೆ.ಇದುವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಉದ್ರೇಕಕಾರಿ ಮತ್ತು ಪ್ರಚೋದನ ಕಾರಿಯಾಗಿ ಪೋಸ್ಸ್ ಮಾಡುತ್ತಿದ್ದಒಟ್ಟು 6 ಇನ್ ಸ್ಟಾ ಗ್ರಾಂ ಪೇಜ್ ಗಳು ಹಾಗೂ 1 ಪೇಸ್ ಬುಕ್ ಪೇಜ್ ನ್ನು ರದ್ದುಗೊಳಿಸಲಾಗಿದೆ.ವಿಎಚ್ಪಿ, ಬಜರಂಗದಳ, ಅಶೋಕ್ನಗರ ಮತ್ತು ಸ್ಕಂದ ನಾಡ ಎಂಬ ಎರಡು ಇನ್ ಸ್ಟಾ ಗ್ರಾಂ ಪೇಜ್ಗಳ ವಿರುದ್ದ ಉರ್ವಾ ಪೊಲೀಸ್ ಠಾಣೆಯಲ್ಲಿ, ಡಿಜೆ ಭರತ್೨೦೦೮ ಎಂಬ ಇನ್ ಸ್ಟಾ ಗ್ರಾಂ ಪೇಜ್ ವಿರುದ್ದ ಕಾವೂರು ಪೊಲೀಸ್ ಠಾಣೆಯಲ್ಲಿ, ಕರವಾಳಿ ಆಫೀಸಿಯಲ್ ಎಂಬ ಇನ್ ಸ್ಟಾ ಗ್ರಾಂ ಪೇಜ್ ವಿರುದ್ದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ, “ಆಶಿಕ್ ಮೈಕಾಲ” ಎಂಬ ಪೇಸ್ ಬುಕ್ ಪೇಜ್ ವಿರುದ್ದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೇಜ್ ಗಳ ಮಾಹಿತಿ ಹಾಗೂ ರದ್ದು ಮಾಡುವ ಬಗ್ಗೆ ಸಂಬಂಧಪಟ್ಟ ಕಾನೂನು ಜಾರಿ…