Author: main-admin

ಬಂಟ್ವಾಳ: ಬಂಟ್ವಾಳ ಪಟ್ಟಣ ಪೊಲೀಸರು ಸಜಿಪಮೂಡ ಗ್ರಾಮದ ಪಂಜಾಜೆಯಲ್ಲಿ ಅಕ್ರಮ ಗೋಹತ್ಯೆ ಜಾಲವನ್ನು ಭೇದಿಸಿ, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಆರು ಜೀವಂತ ದನಗಳು, ಕೊಂದ ಮಾಂಸ, ಒಂದು ಕಾರು ಮತ್ತು ಚಟುವಟಿಕೆಗೆ ಬಳಸಲಾಗಿದೆ ಎನ್ನಲಾದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳಾದ ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್‌ ಸಾದೀಕ್‌ (30) ಎಂದು ಗುರುತಿಸಲಾಗಿದೆ.ಬಂಟ್ವಾಳ ಪಟ್ಟಣ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಂದೀಪ್ ಕುಮಾರ್ ಶೆಟ್ಟಿಗಾರ್ ಅವರಿಗೆ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ದೊರೆತ ನಂತರ ಮೇ 27 ರ ರಾತ್ರಿ ದಾಳಿ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಖಚಿತ ಸುಳಿವಿನ ಮೇರೆಗೆ ಕ್ಷಿಪ್ರವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ, ಪೊಲೀಸ್ ಸಿಬ್ಬಂದಿಯೊಂದಿಗೆ ಸಜಿಪಮೂಡ ಗ್ರಾಮದ ಪಂಜಾಜೆಯಲ್ಲಿರುವ ಆವರಣದ ಮೇಲೆ ದಾಳಿ ನಡೆಸಿದರು. ತಪಾಸಣೆಯ ಸಮಯದಲ್ಲಿ, ಮನೆಯ ಹಿಂದೆ ಇರುವ ಶೆಡ್‌ನಲ್ಲಿ ಮಾಂಸವನ್ನು ಕತ್ತರಿಸುತ್ತಿರುವುದು ಅಧಿಕಾರಿಗಳಿಗೆ ಕಂಡುಬಂದಿದೆ ಎಂದು ವರದಿಯಾಗಿದೆ.ವಿಚಾರಣೆಯ ಸಮಯದಲ್ಲಿ, ಆರೋಪಿಗಳು ಅಗತ್ಯವಿರುವ ಪರವಾನಗಿ ಅಥವಾ…

Read More

ಧರ್ಮಸ್ಥಳ : ಇಲ್ಲಿನ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರಿಗೆ ಮತ್ತು ಬರಿಸುವ ಪಾನೀಯ ನೀಡಿ ಅಸ್ವಸ್ಥಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ಮೇ 25 ರಂದು ರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ನಿವಾಸಿ ಶ್ರೀಮತಿ ಪ್ರೇಮಾ ಕೆ (70) ಎಂಬುವರೇ ದರೋಡೆಗೊಳಗಾದ ದುರ್ದೈವಿ. ಇವರಿಂದ 112 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು 7,000/- ರೂಪಾಯಿ ನಗದನ್ನು ಕಳವು ಮಾಡಲಾಗಿದ್ದು, ಕಳವಾದ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 10,00,700/- ರೂಪಾಯಿ ಎಂದು ಅಂದಾಜಿಸಲಾಗಿದೆ. ಘಟನೆಯ ವಿವರ:ದಿನಾಂಕ 25-05-2026 ರಂದು ಮಧ್ಯಾಹ್ನ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಪ್ರೇಮಾ ಅವರು ದೇವರ ದರ್ಶನ ಮುಗಿಸಿದ್ದರು. ರಾತ್ರಿ ವಾಪಾಸು ಬೆಂಗಳೂರಿಗೆ ಹೋಗುವ ಸಲುವಾಗಿ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದಲ್ಲಿರುವ ಬಸ್‌ ನಿಲ್ದಾಣಕ್ಕೆ ಬಂದು ಬಸ್ಸಿಗಾಗಿ ಕಾಯುತ್ತಾ ಕುಳಿತಿದ್ದರು. ಈ ವೇಳೆ ಅವರ ಬಳಿ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ರಾಜ್ಯಪಾಲರು ಪ್ರಸ್ತುತ ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ. ಮೂಲಗಳ ಪ್ರಕಾರ ರಾಜ್ಯಪಾಲರು ನಾಳೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯಪಾಲರು ಮರಳಿದ ಬಳಿಕವಷ್ಟೇ ರಾಜೀನಾಮೆ ಅಂಗೀಕಾರದ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಚರಿತ್ರೆಯ ದಣಿವರಿಯದ ಹೋರಾಟಗಾರ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿದೆ.

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮತ್ತು ಚರ್ಚೆಗಳಿಗೆ ಕಾರಣವಾಗಿದ್ದ ರಾಜಕೀಯ ಬೆಳವಣಿಗೆಗಳು ಇದೀಗ ಅಂತಿಮ ಹಂತಕ್ಕೆ ತಲುಪಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ತಮ್ಮ ಕಾವೇರಿ ನಿವಾಸದಲ್ಲಿ ಹಮ್ಮಿಕೊಂಡಿದ್ದ ಸಚಿವರ ಮಹತ್ವದ ‘ಬ್ರೇಕ್ ಫಾಸ್ಟ್’ (ಉಪಾಹಾರ) ಸಭೆಯಲ್ಲಿ ತಾವೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ದಿಢೀರ್ ಬೆಳವಣಿಗೆಯು ರಾಜ್ಯ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಕಾವೇರಿ ನಿವಾಸದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಪ್ರಸಕ್ತ ರಾಜಕೀಯ ಪರಿಸ್ಥಿತಿಯ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಆ ಬಳಿಕ ಸಿಎಂ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, “ನಾನು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ಸಚಿವರಿಗೆ ತಿಳಿಸಿದರು. ಸಿಎಂ ಅವರ ಈ ದಿಢೀರ್ ನಿರ್ಧಾರದಿಂದ ಸಭೆಯಲ್ಲಿದ್ದ ಹಲವು ಸಚಿವರು ಅಚ್ಚರಿ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,…

Read More

ಮೊಹಮ್ಮದ್ ಅಶ್ರಫ್ @ ಅಜ್ಜು @ ನಿಜಾಮ್ @ ಅಡ್ಡು @ ಸಮೀರ್, ಮಾವಿನಕಟ್ಟೆ, ಅಜಿಲಮೊಗರು, ಬೆಳ್ತಂಗಡಿ. ಎಂಬಾತ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ “ಬಿ” ರೌಡಿ ಶೀಟರ್ ಆಗಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ದ ಹಲವು ಪ್ರಕರಣಗಳು ದಾಖಲಾಗಿದೆ. ಆರೋಪಿತನು ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಈತನಿಗೆ ವಾರೆಂಟ್ ಜಾರಿಗೊಳಿಸಿತ್ತು. ಈತನ ವಿರುದ್ದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ: 136/2018, ಅ.ಕ್ರ.ಸಂ: 119/2024, ಅ.ಕ್ರ.ಸಂ: 130/2024, ಅ.ಕ್ರ.ಸಂ: 119/2024 ರಂತೆ ನಾಲ್ಕು ಪ್ರಕರಗಳು ದಾಖಲಾಗಿ, ಎಲ್ ಪಿ ಸಿ ವಾರಂಟ್ ಜಾರಿಯಾಗಿತ್ತು. ಈತನ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ,ಸಂ: 232/2017ರ ಪ್ರಕರಣದಲ್ಲಿಯೂ ನ್ಯಾಯಾಲಯವು ವಾರೆಂಟ್ ಹೊರಡಿಸಿರುತ್ತದೆ. ಸುರತ್ಕಲ್ ಪೊಲೀಸ್ ಠಾಣಾ ಅ.ಕ್ರ.ಸಂ: 63/2025 ಈ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದನು. ಸುಮಾರು ಎರಡು ವರ್ಷಗಳಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ದಿನಾಂಕ 26-05-2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು…

Read More

ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೇ 24ರಂದು ಬೆಳಗಿನ ಜಾವ ಸುಮಾರು 2:10 ಗಂಟೆಗೆ ಕೋಡಿಕಲ್‌ನ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೆಂಪು ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಂದ ಇಬ್ಬರು ಯುವಕರು ಹಲ್ಲೆ ನಡೆಸಿದ್ದರು. ಸ್ಕೂಟರ್‌ನ ಹಿಂಬದಿ ಸವಾರ ಸಿಮೆಂಟ್ ಶೀಟ್ ತುಂಡಿನಿಂದ ಪೊಲೀಸ್ ಸಿಬ್ಬಂದಿಯ ತಲೆಗೆ ಹೊಡೆದ ಪರಿಣಾಮ ಗಾಯವಾಗಿದ್ದು, ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್ ಠಾಣೆಯಲ್ಲಿ ಅ.ಕ್ರ 57/2026 ಕಲಂ 121(1), 109, 132, 3(5) ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಖಚಿತ ಮಾಹಿತಿಯ ಆಧಾರದಲ್ಲಿ ಆರೋಪಿಗಳನ್ನು ಕೇರಳ ರಾಜ್ಯದ ಕಾಂಞಿಗಾಡ್ ಪ್ರದೇಶದಲ್ಲಿ ಮೇ 26ರಂದು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಗಳನ್ನು ಮುಂದಿನ ಕ್ರಮಕ್ಕಾಗಿ ಉರ್ವ ಪೊಲೀಸ್…

Read More

ನಾಲಂದಾ (ಬಿಹಾರ): ಬಣ್ಣ ಬಣ್ಣದ ವಿದ್ಯುತ್ ದೀಪಗಳು ಹಾಗೂ ಜನರ ಹರ್ಷೋದ್ಗಾರಗಳ ನಡುವೆ ಸಂಭ್ರಮದಿಂದ ನಡೆಯುತ್ತಿದ್ದ ಬಿಹಾರದ ಸುಪ್ರಸಿದ್ಧ ‘ರಾಜಗೀರ್ ಮಲಮಾಸ್ ಮೇಳ’ದಲ್ಲಿ ಸೋಮವಾರ ರಾತ್ರಿ ಭೀಕರ ದುರಂತವೊಂದು ಸಂಭವಿಸಿದೆ. ಅತ್ಯಂತ ವೇಗವಾಗಿ ತಿರುಗುತ್ತಿದ್ದ Swing ನ ಸುರಕ್ಷತಾ ಬೆಲ್ಟ್ ಕಳಚಿದ ಪರಿಣಾಮ, 25 ವರ್ಷದ ಯುವಕನೊಬ್ಬ ಸುಮಾರು 20 ಅಡಿ ಎತ್ತರದಿಂದ ಕೆಳಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾನೆ. ನವಾದಾ ಜಿಲ್ಲೆಯ ನಿವಾಸಿಯಾದ ಅಮಾನ್ ಕುಮಾರ್ (25) ಮೃತಪಟ್ಟ ದುರದೃಷ್ಟಕರ ಯುವಕನಾಗಿದ್ದಾನೆ. ಈ ಭೀಕರ ಅಪಘಾತದ ಲೈವ್ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಎದೆ ನಡುಗಿಸುವಂತಿದೆ. ಮೃತ ಅಮಾನ್ ಕುಮಾರ್ ತನ್ನ ಸ್ನೇಹಿತರೊಂದಿಗೆ ಐತಿಹಾಸಿಕ ರಾಜಗೀರ್ ಮೇಳಕ್ಕೆ ಬಂದಿದ್ದನು. ಮೇಳದ ಪ್ರಮುಖ ಆಕರ್ಷಣೆಯಾಗಿದ್ದ, ಅತ್ಯಂತ ವೇಗವಾಗಿ ಗಾಳಿಯಲ್ಲಿ ಆಡುವ ‘ಸ್ಟ್ರಿಂಗ್ ಜೂಲಾ’ ಕ್ಕೆ ಹತ್ತಿದ್ದನು. ಅದು ಅತಿ ವೇಗವಾಗಿ ಚಲಿಸುತ್ತಿದ್ದಾಗ (ಸುಮಾರು 20 ಅಡಿಗಿಂತಲೂ ಹೆಚ್ಚು ಎತ್ತರದಲ್ಲಿದ್ದಾಗ), ಅಮಾನ್ ಕುಳಿತಿದ್ದ ಸೀಟಿನ ಸುರಕ್ಷತಾ ಬೆಲ್ಟ್ ತಾಂತ್ರಿಕ ದೋಷದಿಂದಾಗಿ ಇದ್ದಕ್ಕಿದ್ದಂತೆ…

Read More

ಉಡುಪಿ : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಉಡುಪಿ ಜಿಲ್ಲಾ ಪ್ರವಾಸದ ವೇಳೆ ಅವರು ಮಾಜಿ ರೌಡಿಶೀಟರ್ ಒಬ್ಬರಿಗೆ ಕಾರಿನಲ್ಲೇ ಕುಳಿತು ತಲೆ ಮುಟ್ಟಿ ಆಶೀರ್ವದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಇತ್ತೀಚೆಗಷ್ಟೇ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಜಿಲ್ಲೆಯ ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ಪ್ರವಾಸದ ವೇಳೆ ಅವರು ತಮ್ಮ ಕಾರಿನಲ್ಲಿ ಕುಳಿತಿದ್ದ ಸಂದರ್ಭದಲ್ಲಿ, ಎರಡು ಪ್ರಮುಖ ಕ್ರಿಮಿನಲ್ ಪ್ರಕರಣಗಳ ಆರೋಪಿಯಾಗಿರುವ ಸೋನು ಸುಧೀರ್ ಎಂಬಾತನ ತಲೆ ಮುಟ್ಟಿ ಆಶೀರ್ವದಿಸಿದ್ದಾರೆ ಎನ್ನಲಾದ ದೃಶ್ಯಗಳು ಮುನ್ನೆಲೆಗೆ ಬಂದಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಆಯೋಗದ ಅಧ್ಯಕ್ಷರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾರು ಈ ಸೋನು ಸುಧೀರ್?: ಮಹಿಳಾ ಆಯೋಗದ ಅಧ್ಯಕ್ಷರಿಂದ ಆಶೀರ್ವಾದ ಪಡೆದಿರುವ…

Read More

ಬೆಂಗಳೂರು: ಎಂಟು ವರ್ಷಗಳಿಂದ ಜೊತೆಯಲ್ಲೇ ಇದ್ದು, ಒಂದೇ ಮನೆಯಲ್ಲೇ ವಾಸವಾಗಿದ್ದ ಅಂಧ ಮಹಿಳೆಯೊಬ್ಬರ ಕಪಾಟಿನಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಭಾರಿ ಮೊತ್ತದ ನಗದನ್ನು ಕಳವು ಮಾಡಿದ್ದ ಹೈ ಪ್ರೊಫೈಲ್ ದಂಪತಿಯನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬೆಂಗಳೂರಿನ ಬಿಇಎಂಎಲ್ (BEML) ಲೇಔಟ್ ನಿವಾಸಿಗಳಾದ ಎಂಬಿಎ ಪದವೀಧರೆ ಶರ್ಮಿಳಾ ಶೇಷಾದ್ರಿ (50) ಮತ್ತು ಆಕೆಯ ಪತಿ ಡಿಪ್ಲೊಮಾ ಪದವೀಧರ ಗಣೇಶ್ ಕುಮಾರ್ (52) ಬಂಧಿತ ಆರೋಪಿಗಳಾಗಿದ್ದಾರೆ.ದೃಷ್ಟಿ ದೋಷವಿರುವ ಸಂತ್ರಸ್ತ ಮಹಿಳೆಯು ಕಳೆದ ಎಂಟು ವರ್ಷಗಳಿಂದ ಬಿಇಎಂಎಲ್ ಲೇಔಟ್‌ನಲ್ಲಿರುವ ಈ ದಂಪತಿಯ ಮನೆಯಲ್ಲೇ ವಾಸವಾಗಿದ್ದರು. ಜೂನ್ 2024 ರಲ್ಲಿ ಸಂತ್ರಸ್ತೆಯು ತನ್ನ ಚಿನ್ನಾಭರಣಗಳನ್ನು ಒಂದು ಬ್ಯಾಂಕ್ ಲಾಕರ್‌ನಿಂದ ಮತ್ತೊಂದು ಲಾಕರ್‌ಗೆ ಶಿಫ್ಟ್ ಮಾಡುವ ಸಲುವಾಗಿ ಮನೆಗೆ ತಂದಿದ್ದರು. ಒಟ್ಟು ಚಿನ್ನಾಭರಣಗಳ ಜೊತೆಗೆ ಭಾರಿ ಮೊತ್ತದ ₹49.50 ಲಕ್ಷ ರೂಪಾಯಿ ನಗದನ್ನು ಅವರು ತಮ್ಮ ಕೋಣೆಯ ಕಪಾಟಿನಲ್ಲಿ ಸುರಕ್ಷಿತವಾಗಿ ಇಟ್ಟಿದ್ದರು.

Read More

ಪುತ್ತೂರು: ಬ್ಯಾಂಕ್ ಲೋನ್ ಇಎಂಐ (EMI) ಗೊಂದಲ ಬಗೆಹರಿಸುವ ನೆಪದಲ್ಲಿ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿದ ಸೈಬರ್ ಕಳ್ಳರು, ಮಹಿಳೆಯೊಬ್ಬರ ಮೊಬೈಲ್ ಆ್ಯಪ್ ಮೂಲಕ ಬರೋಬ್ಬರಿ 2,92,000/- ರೂಪಾಯಿ ಹಣವನ್ನು ಲೂಟಿ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಂಚನೆಗೊಳಗಾದ 40 ವರ್ಷದ ಮಹಿಳೆಯೊಬ್ಬರು ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪಿರ್ಯಾದಿದಾರ ಮಹಿಳೆಯು ದಿನಾಂಕ 22-05-2026 ರಂದು ಪುತ್ತೂರಿನ ಕೋರ್ಟ್ ರೋಡ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಶಾಖೆಯಿಂದ ₹2,94,000/- ಚಿನ್ನದ ಸಾಲ (Gold Loan) ಪಡೆದಿದ್ದರು. ಜೂನ್ ತಿಂಗಳಿಂದ ಪ್ರತಿ ತಿಂಗಳು ₹6,000/- ಇಎಂಐ ಕಟ್ಟಾಗುವಂತೆ ಅವರು ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದ್ದರು. ಆದರೆ, ಲೋನ್ ಪಡೆದ ದಿನವೇ (ಮೇ 22) ಅವರ ಖಾತೆಯಿಂದ ₹6,000/- ಕಟ್ಟಾಗಿತ್ತು. ಈ ತಪ್ಪಾಗಿ ಕಟ್ಟಾದ ಹಣವನ್ನು ವಾಪಸ್ ಪಡೆಯುವ ಸಲುವಾಗಿ ಮಹಿಳೆಯು ಗೂಗಲ್‌ನಲ್ಲಿ ಎಸ್‌ಬಿಐ ಕೋರ್ಟ್ ರೋಡ್ ಶಾಖೆಯ ಫೋನ್ ನಂಬರನ್ನು ಹುಡುಕಿ ಕರೆ ಮಾಡಿದ್ದರು. ಆದರೆ ಆ ಕಡೆಯಿಂದ…

Read More