ಉಡುಪಿ : ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿ ಶೀಟರ್ ಕಾರ್ತಿಕ್ ಆಚಾರ್ ವಿರುದ್ಧ ಗಡಿಪಾರು ಆದೇಶವನ್ನು ಹೊರಡಿಸಲಾಗಿದೆ. ಕುಂದಾಪುರ ತಾಲೂಕು ಇಡೂರು ಕುಂಜ್ಞಾಡಿ ಗ್ರಾಮದ ಹೊಸಿಮನೆ ಕಾರ್ತಿಕ್ ನಿಲಯದ ಕಾರ್ತಿಕ್ ಆಚಾರ್ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಪೊಲೀಸ್ ಅಧೀಕ್ಷಕರು ಎಪ್ರಿಲ್ 9ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ. ಈತನ ವಿರುದ್ಧ ಒಟ್ಟು 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈತನ ಮೇಲೆ ರೌಡಿಶೀಟ್ ತೆರೆಯಲಾಗಿದೆ. ಈತನನ್ನು ಬೆಂಗಳೂರು ಕಮೀಷನರೇಟ್ ನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.
Author: main-admin
ಕುಂದಾಪುರ : ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ. ಮೃತರನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಎಂಬವರ ಪತ್ನಿ ಶಾರದಾ (55) ಎಂದು ಗುರುತಿಸಲಾಗಿದೆ. ಶಾರದಾ ಅವರು ಕೋಟೇಶ್ವರ ಅಂಕದಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರೆಂದು ತಿಳಿದುಬಂದಿದೆ.ಈ ವೇಳೆ ಸ್ಕೂಟಿಯನ್ನು ಅವರ ಮಗ ಚಾಲನೆ ಮಾಡುತ್ತಿದ್ದು, ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಮಗ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಅಪರಾಧಿ ಗದಗ ತಾಲೂಕಿನ ಹೊಳೆಮುನ್ನೂರು ನಿವಾಸಿ ಮಹೇಶ ಮಾದರ (20) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಸ್ ಸಿ-2 (ಪೊಕ್ಸೊ) ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರ ಹೊರವಲಯದಲ್ಲಿ ಬಾಡಿಗೆ ಮನೆಯಲ್ಲಿ ತಂದೆ ತಾಯಿಯೊಂದಿಗೆ ವಾಸವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಹೋಮ್ ನರ್ಸ್ ಕೆಲಸ ಮಾಡಿಕೊಂಡಿದ್ದಳು. ಆರೋಪಿ ಮಹೇಶ ಮಾದರ ಕೂಡ ಪಕ್ಕದ ಮನೆಯಲ್ಲಿ ವಾಸವಾಗಿದ್ದ. ಇವರ ಮಧ್ಯೆ ಪರಿಚಯವಾಗಿ ಸ್ನೇಹ ಬೆಳೆದಿತ್ತು. 2015ರ ಮೇ 19ರಂದು ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರೆ ಮಾಡಿದ್ದ ಆರೋಪಿ ಮಹೇಶ ಬಲ್ಲಾಳ್ಬಾಗ್ಗೆ ಕರೆಸಿ ಅಲ್ಲಿಂದ ಆಟೋದಲ್ಲಿ ಕಾವೂರು ಬಳಿಯ ಶೆಡ್ಗೆ ಕರೆದುಕೊಂಡು ಹೋಗಿ ಅಂದು ರಾತ್ರಿ ಆಕೆಯ ಲೈಂಗಿಕ ದೌರ್ಜನ್ಯ ಎಸಗಿದ್ದ. ಮರುದಿನ ಬೆಳಗ್ಗೆ 11ಕ್ಕೆ ಸರ್ಕಾರಿ ಬಸ್ಸಿನಲ್ಲಿ ಬಳ್ಳಾರಿಗೆ ಕರೆದುಕೊಂಡು ಹೋಗಿದ್ದ. ಅಲ್ಲೂ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ…
ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಕ್ಕೆ ಅಪಮಾನಕಾರಿ ಸನ್ನೆ ಮಾಡಿ ಮಾತನಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಕ್ಷಮಾಪಣಾ ಪತ್ರ ಸಲ್ಲಿಸುವುದಾಗಿ ನಟ ರಣವೀರ್ ಸಿಂಗ್ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದ್ದಾರೆ. ವಿಚಾರಣೆಯ ವೇಳೆ ದೂರುದಾರರ ಪರ ವಕೀಲರು, ಅರ್ಜಿದಾರ ರಣವೀರ್ ಸಿಂಗ್ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಪಶ್ಚಾತ್ತಾಪವಿಲ್ಲ. ದೂರು ನೀಡಿರುವುದೇ ತಪ್ಪು ಎಂಬಂತೆ ಬಿಂಬಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಅರ್ಜಿದಾರರ ಪರ ವಕೀಲರು, ದೂರುದಾರರೊಂದಿಗೆ ಚರ್ಚಿಸಿ ಅವರಿಗೆ ತೃಪ್ತಿಯಾಗುವ ಭಾಷೆಯಲ್ಲಿಯೇ ಪರಿಷ್ಕೃತ ಪ್ರಮಾಣ ಪತ್ರ ಸಲ್ಲಿಸುವುದಾಗಿ ಹೇಳಿದರು. ಗೋವಾದಲ್ಲಿ ಕೆಲ ತಿಂಗಳ ಹಿಂದೆ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್ಎಫ್ಐ) ಕಾಂತಾರ ಚಾಪ್ಟರ್-1 ಚಿತ್ರದ ಚಾಮುಂಡಿ ದೈವಕ್ಕೆ ಅಪಮಾನ ಮಾಡಿದ ಆರೋಪದಡಿ ದಾಖಲಾಗಿರುವ ಖಾಸಗಿ ದೂರು ಮತ್ತು ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ, ರಣವೀರ್ ಸಿಂಗ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ವಿಚಾರಣೆ ನಡೆಸಿದರು. ಘಟನೆ ನಡೆದ ದಿನ ನಾನು…
ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ.ಇದೊಂದು ಸುಳ್ಳು ಸುದ್ದಿ ಆಗಿದ್ದು, ಈ ಒಂದು ವಿಡಿಯೋ ವೈರಲ್ ಮಾಡಿದ ಯುವಕನನ್ನು ಸದ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾಧ್ಯಮಗಳಲ್ಲಿ ಮಾತನಾಡಿದ ಅವರು ಜೊಂಬಿ ಡ್ರಗ್ಸ್ ಏನು ಇಲ್ಲ. ಅದು ಸತ್ಯಕ್ಕೆ ದೂರವಾದದ್ದು ಪಂಜಾಬ್ ಮೂಲದ ಲಾರಿ ಚಾಲಕನಿಗೆ ಕುಡಿತದ ಅಭ್ಯಾಸವಿತ್ತು. ಹಿಂದೆ ಪಂಜಾಬ್ ನಲ್ಲಿ ಡ್ರಗ್ಸ್ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾನೆ. ಯಾವುದೋ ಆರೋಗ್ಯ ಸಮಸ್ಯೆಗಳಿಗೂ ಔಷಧ ತೆಗೆದುಕೊಂಡಿದ್ದ. ಹಾಗಾಗಿ ಆತನಿಗೆ ಅದರಿಂದ ಪರಿಣಾಮ ಆಗಿತ್ತು. ಈ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ ಮಾಡಿದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿಸಿದರು. ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂದು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಯುವಕ ಒಬ್ಬ ವೈರಲ್ ಮಾಡಿದ್ದ. ಈ ಕುರಿತಂತೆ ಬೆಂಗಳೂರಿನ ಬಾಗಲೂರು ಪೊಲೀಸರು ಹೇಮಂತ ಎಂಬತನನ್ನ ಅರೆಸ್ಟ್ ಮಾಡಿದ್ದಾರೆ.…
ಬೆಳ್ತಂಗಡಿ: ತಾನು ಕೆಲಸ ಮಾಡುತ್ತಿದ್ದ ಕೇರಳದ ಹೋಟೆಲ್ನ ಮಾಲಕನನ್ನೇ ಏ.6ರಂದು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಪೆರ್ದಾಡಿ ನಿವಾಸಿ ಉಮರಬ್ಬ ಎಂಬವರ ಪುತ್ರ ಇರ್ಷಾದ್ (32) ಎಂಬಾತನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕೇರಳದ ಚಡಯಮಂಗಳ- ಕುರಿಯೋಡು ಸ್ವೈಸಿ ಎಂಬ ಹೆಸರಿನ ಹೊಟೇಲ್ ಉದ್ಯಮ ನಡೆಸುತ್ತಿದ್ದ ಮಾಲೀಕ ಶಕೀರ್ ಹುಸೈನ್ ಎಂಬವರನ್ನು ಇರ್ಷಾದ್ ಕೊಲೆ ಮಾಡಿದ್ದಾನೆ. ಬಿರಿಯಾಣಿ ಪಾಕ ತಜ್ಞನಾಗಿದ್ದ ಬೆಳ್ತಂಗಡಿಯ ಇರ್ಷಾದ್ ತಾನು ಕೆಲಸ ಮಾಡುತ್ತಿದ್ದ ಹೋಟೆಲ್ಗೆ ಬರುತ್ತಿದ್ದ ಅಕ್ಕಿ ಮೂಟೆಯಲ್ಲಿರುವ 50,100,150 ರೂಪಾಯಿಗಳ ಕೂಪನ್ಗಾಗಿ ನಡೆದ ಜಗಳದಿಂದ ಈ ಕೃತ್ಯವೆಸಗಿದ್ದಾನೆ. ಅಕ್ಕಿಮೂಟೆಯಲ್ಲಿ ಬರುತ್ತಿದ್ದ ಕೂಪನ್ ಒಟ್ಟು ಸೇರಿಸಿ ಮಾಲಕರಿಗೆ ಕೊಡಬೇಕೆಂದು ಹೊಟೇಲ್ ಮಾಲಕ ಕೇರಳದ ಆಕಲ್ ನಿವಾಸಿ ಶಕೀರ್ ಹುಸೈನ್ ನಿರ್ದೇಶನ ನೀಡಿದ್ದರು. ಅದಾಗ್ಯೂ ಇರ್ಷಾದ್ ಕೂಪನ್ಗಳನ್ನು ತಾನೇ ಸಂಗ್ರಹಿಸಿಟ್ಟುಕೊಂಡಿದ್ದ. ಇದನ್ನುಪ್ರಶ್ನಿಸುವ ಸಲುವಾಗಿ ಪತ್ನಿಯೊಂದಿಗೆ ಆತ ವಿಶ್ರಾಂತಿ ಪಡೆಯುತ್ತಿದ್ದ ವಸತಿ ಗೃಹದ ಎರಡನೇ ಮಹಡಿಗೆ ಹೋಗಿದ್ದ ವೇಳೆ ಇಬ್ಬರ ನಡುವೆ ಮಾತಿಗೆ…
ಮಂಗಳೂರು: ನಾನಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಇಂಟರ್ಪೋಲ್ ಮೂಲಕ ಪೊಲೀಸ್ ಇಲಾಖೆ ರೆಡ್ಕಾರ್ನರ್ ನೋಟಿಸ್ ಜಾರಿಗೊಳಿಸಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಸುಲೈಮಾನ್ ಯಾನೆ ಶಮೀರ್ (38) ಮತ್ತು ಶಂಶುದ್ದೀನ್ (36) ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. 2017ರಲ್ಲಿ ಕುಶಾಲನಗರದ ಸುಲೈಮಾನ್ ಯಾನೆ ಶಮೀರ್ ನಗರದ ಲೇಡಿಹಿಲ್ ಬಳಿ ಉರ್ವ ಠಾಣೆಯಲ್ಲಿ ಆಗ ಎಎಸ್ಸೈ ಆಗಿದ್ದ ಐತಪ್ಪ ಮೇಲೆ ರಾಡ್ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ. 2013ರಲ್ಲಿ ದೇರಳಕಟ್ಟೆಯಲ್ಲಿ ಗ್ಯಾಂಗ್ರೇಪ್ ಪ್ರಕರಣದಲ್ಲಿ ಕೂಡ ಈತ ಆರೋಪಿಯಾಗಿದ್ದ. ಈತನ ವಿರುದ್ಧ 14 ಪ್ರಕರಣಗಳು ದಾಖಲಾಗಿವೆ. ಈತ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಶುದ್ದೀನ್ ಯಾನೆ ಅಲ್ತಾಫ್ ಯಾನೆ ಅಲ್ತಾಫ್ ಇಮ್ರಾನ್ ಯಾನೆ ಇಮ್ರಾನ್ 2008ರಲ್ಲಿ ಮೂಲ್ಕಿಯ ಪಾವಂಜೆ ಬಳಿ ಪ್ರವೀಣ್ ಎಂಬವರನ್ನು ಅಪಹರಿಸಿ ಕಾರು ಮತ್ತು ಬೆಲೆ ಬಾಳುವ ಸೊತ್ತುಗಳನ್ನು ದೋಚಿ, ಕಳವಾರು ಬಳಿಯ ಕೋರೆಯೊಂದಕ್ಕೆ ಕರೆದುಕೊಂಡು ಹೋಗಿ…
ಗುರುಪುರ ಫಲ್ಗುಣಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಜೆ ಪಡ್ಡಾಯಿಬೆಟ್ಟು ನಿವಾಸಿ ಕೌಶಿಕ್ ಬೆಲ್ಚಡ (30) ಎಂಬವರ ಮೃತದೇಹ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ. ಬುಧವಾರ ಸಂಜೆ 6:30ಕ್ಕೆ ಗುರುಪುರದತ್ತ ಸ್ಕೂಟರ್ ನಲ್ಲಿ ಆಗಮಿಸಿದ್ದ ಕೌಶಿಕ್ ಫಲ್ಗುಣಿ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ್ದರು ಎನ್ನಲಾಗಿದೆ. ಕತ್ತಲಾದ ಕಾರಣ ಬುಧವಾರ ಕಾರ್ಯಾಚರಣೆ ನಡೆಸಲು ಸಾಧ್ಯವಾಗಿರಲಿಲ್ಲ. ಇಂದು ಮಂಗಳೂರು ಅಗ್ನಿಶಾಮಕ ದಳದ ಸಿಬ್ಬಂದಿಯು ಕೌಶಿಕ್ಗಾಗಿ ಹುಡುಕಾಟ ಆರಂಭಿಸಿದ್ದರು. ಪಾಣೆಮಂಗಳೂರಿನ ಮುಳುಗು ತಜ್ಞರು ಕೂಡ ಆಗಮಿಸಿ ಸೇತುವೆ ಕಂಬಗಳ ಬಳಿ ಕಾರ್ಯಾಚರಣೆ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಬಜ್ಪೆ ಪೊಲೀಸರು ಸ್ಕೂಟರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.
ಮಂಗಳೂರು: ಎಸ್.ಐ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಆರೋಪಿ ಸಮೀರ್ ವಿರುದ್ಧ ಸಾಮೂಹಿಕ ಅತ್ಯಾಚಾರ ಸಹಿತ 14 ಪ್ರಕರಣಗಳು ದಾಖಲಾಗಿವೆ. ಈತನ ಸುಳಿವು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಕಮಿಷನರ್ ಮನವಿ ಮಾಡಿದ್ದಾರೆ. ಈ ಹಿಂದೆ ಆರೋಪಿ ಸಫ್ಘಾನ್ ಎಂಬಾತನ ಮೇಲೂ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮ ಜರುಗಿಸಲಾಗಿತ್ತು ಎಂದು ಅಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಮಂಗಳೂರು: ನಗರದ ಮೀನುಗಾರಿಕಾ ದಕ್ಕೆಯ ಬಳಿಯ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ನಾಸಿರ್ ಯಾನೆ ದಕ್ಕೆ ನಾಸಿರ್ ಕೊಲೆಯಾದ ವ್ಯಕ್ತಿ. ಈತ ಹಲವಾರು ಕಳ್ಳತನ, ದರೋಡೆ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯಾಗಿದ್ದಾನೆ. ಈತನನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ನದಿಗೆ ಹಾಕಿರುವ ಶಂಕೆ ವ್ಯಕ್ತವಾಗಿದೆ. ಆತನ ಹಣೆ ಮತ್ತು ದೇಹದಲ್ಲಿ ಗಾಯದ ಗುರುತಿದೆ. ದಕ್ಕೆಯ ಸಮೀಪ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸಮೀಪದ ನದಿಯ ಪಕ್ಕ ಶವ ಪತ್ತೆಯಾಗಿರುವುದಾಗಿದೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.










