ಮಂಗಳೂರು: ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ. ಪ್ಲಾಸ್ಟಿಕ್ನಲ್ಲಿರುವ ಹಾನಿಕಾರಕ ರಾಸಾಯನಿಕಗಳು ಬಿಸಿ ಆಹಾರಕ್ಕೆ ಸೇರಿ ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತಿವೆ. ಹೋಟೆಲ್, ಕ್ಯಾಂಟೀನ್ಗಳಿಂದ ಹೆಚ್ಚಾಗಿ ಕಾರ್ಮಿಕರು ಅಥವಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಬಿಸಿ ಆಹಾರ ಪದಾರ್ಥಗಳನ್ನು ಕೊಂಡೊಯ್ಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಕವರ್, ನ್ಯೂಸ್ ಪೇಪರ್ಗಳಲ್ಲಿ ಬಿಸಿ ಆಹಾರ ಪದಾರ್ಥಕ್ಕೆ ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್, ತಂಬಾಕು ಸೇವನೆ ನಿಷೇಧ, ಎಚ್ಚರಿಕೆಯ ಫಲಕ ಇಲ್ಲದೆ ಇರುವುದು, ಅಂಗಡಿ, ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರ್ ಲೈಟರ್, ಬೆಂಕಿ ಪೊಟ್ಟಣಗಳನ್ನು ಇಟ್ಟರೆ ಅವರಿಗೆ ದಂಡ ವಿಧಿಸಬೇಕು. ತಂಬಾಕು ಬ್ರಾಂಡ್ ಹೆಸರಿನೊಂದಿಗೆ ಜಾಹೀರಾತು ಫಲಕಗಳು ಅಥವಾ ಯಾವುದೇ ರೀತಿಯಲ್ಲಿ ತಂಬಾಕು ಉತ್ಪನ್ನಗಳ ಪ್ರಚಾರ, 21 ವರ್ಷದೊಳಗಿನವರಿಗೆ ತಂಬಾಕು ಮಾರಾಟ ಮಾಡಿದರೆ, ಚಿಲ್ಲರೆ ಅಂಗಡಿಗಳಲ್ಲಿ…
Author: main-admin
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪಿ ಅಬೂಬಕರ್ (53) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಪೊಕ್ಸ್-ಎಫ್ಟಿಎಸ್ಸಿ 2) ನ್ಯಾಯಾಧೀಶ ಮಾನು ಕೆ.ಎಸ್. ಅವರು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ. 2025ರ ಮಾ.29ರಂದು ಅಬೂಬಕರ್ ತನ್ನ ನೆರೆಮನೆಯ ಬಾಲಕಿಯನ್ನು ಮನೆಯೊಳಗೆ ಒಬ್ಬಳಿದ್ದಾಗ ಎಳೆದೊಯ್ದು ಯಾರೂ ವಾಸವಿಲ್ಲದ ಮನೆಯೊಂದರ ಬಳಿ ಅತ್ಯಾಚಾರಗೈದಿದ್ದ. ಅದಕ್ಕೂ ಮುನ್ನ ಈತನು 3 ಬಾರಿ ಆಕೆಯನ್ನು ಅತ್ಯಾಚಾರಗೈದಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಶಿವಕುಮಾರ್ ಬಿ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಧೀಶರು ಬಿಎನ್ಎಸ್ ಕಲಂ 64(1) ಹಾಗೂ ಪೊಕ್ಸ್ ಕಾಯ್ದೆಯ ಕಲಂ 6 ರಡಿ ಆರೋಪಿಗೆ 20 ವರ್ಷಗಳ ಕಠಿಣ ಸಜೆ ಹಾಗು 45,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 4 ತಿಂಗಳು ಸಾದಾ ಸಜೆ ವಿಧಿಸಿ ತೀರ್ಪು…
ಮಂಗಳೂರು: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೊಬ್ಬನ ಶವ ಕೊಣಾಜೆ ಠಾಣಾ ವ್ಯಾಪ್ತಿಯ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತ ಯುವಕ. ವಿವೇಕ್ ಶೆಟ್ಟಿಗಾರ್ ಅವರು ಮಂಗಳೂರಿನ ಕದ್ರಿ ಬಳಿ ಇರುವ ವೇದ ಮೊರ್ಟಾಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿ ರಾತ್ರಿ 9 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದರು. ಅದರಂತೆ ಮಾರ್ಚ್ 9ರಂದು ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿದ್ದ ವಿವೇಕ್ ರಾತ್ರಿ ಸುಮಾರು 9.30ಕ್ಕೆ ತಾಯಿಗೆ ದೂರವಾಣಿ ಕರೆ ಮಾಡಿ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದರು. ರಾತ್ರಿ 12 ಗಂಟೆಯಾದರೂ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರ ಮೊಬೈಲ್ಗೆ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿಲ್ಲ. ಮರುದಿನ ಮಾರ್ಚ್ 10ರಂದು ಕೂಡ ಮೊಬೈಲ್ಗೆ ಕರೆ ಮಾಡಿದಾಗ ಸಂಪರ್ಕಕ್ಕೆ ಸಿಕ್ಕಿಲ್ಲ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.…
ಮಂಗಳೂರು: ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹತ್ತು ಲಕ್ಷ ಮೌಲ್ಯದ 201 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹತ್ತು ಲಕ್ಷ ಮೌಲ್ಯದ 201 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 9ರಂದು ಮುಂಜಾನೆ ಸುಮಾರು 3 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಆಗಮಿ ಸಿದ ಜಾಮ್ನಗರ -ತಿರುನಲ್ವೇಲಿ ಜಂಕ್ಷನ್ ಎಕ್ಸ್ಪ್ರೆಸ್ ರೈಲಿನಲ್ಲಿ ತಪಾಸಣೆ ಕೈಗೊಳ್ಳಲಾಗಿದೆ. ರೈಲಿನ ಸಾಮಾನ್ಯ ಬೋಗಿಯ ಮೇಲಿನ ಲಗ ಜ್ ರಾಕ್ನಲ್ಲಿ ವಾರೀಸುದಾರರು ಇಲ್ಲದ ಮೂರು ಬ್ಯಾಗ್ಗಳನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ನೂರಾರು ಬಳಸಿದ ಮೊಬೈಲ್ಗಳು ಪತ್ತೆಯಾಗಿವೆ. ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಆರ್ಪಿಎಫ್ ಹೆಡ್ ಕಾನ್ಸ್ಟೇಬಲ್ ಸುಜೀಶ್ ಮತ್ತು ಕಾನ್ಸ್ಟೇಬಲ್ ರಾಮಕೃಷ್ಣ ಅವರು ತಪಾಸಣೆ ಕೈಗೊಂಡು ಮೊಬೈಲ್…
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದಲ್ಲಿ ಮನೆಯಿಂದ ಹಾಡಹಗಲೇ ಚಿನ್ನಾಭರಣ ಕಳ್ಳತನವಾದ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಭೇದಿಸಿ ಆರೋಪಿಯನ್ನು ಬಂಧಿಸಿ ಕಳವು ಮಾಡಿದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 7ರಂದು ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆ ಮನೆಯಲ್ಲಿದ್ದವರು ಹೊರಗಿದ್ದ ಸಂದರ್ಭದಲ್ಲಿ ಉಲ್ಲಾಸ್ ನಗರದ ಮನೆಯೊಂದರ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4,80,000 ರೂ. ಮೌಲ್ಯದ 39 ಗ್ರಾಂ ಚಿನ್ನಾಭರಣ ಹಾಗೂ 182 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದರು. ಈ ಬಗ್ಗೆ ನೀಡಿದ ದೂರಿನ ಆಧಾರದ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗಾಗಿ ಕಾವೂರು ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ವಿಶೇಷ ಪತ್ತೆ ತಂಡವನ್ನು ರಚಿಸಲಾಗಿತ್ತು. ತನಿಖೆಯ ವೇಳೆ ಕಳ್ಳತನ ಮಾಡಿದ ಆರೋಪಿ ಸಜೀಪನಡು, ದೇರಾಜೆ ಮನೆ ನಿವಾಸಿ ಅಶೋಕ್ (41) ಎಂಬಾತನನ್ನು ಮಾರ್ಚ್ 8ರಂದು ಬಂಧಿಸಲಾಗಿದೆ. ಬಂಧಿತನಿಂದ ಕಳವು ಮಾಡಿದ ಎಲ್ಲಾ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.…
ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ವೇಷದಲ್ಲಿ ಬಂದು ಮನೆಯವರನ್ನು ಬೆದರಿಸಿ ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣ ದೋಚಿದ್ದ ನಾಲ್ವರು ಖದೀಮರನ್ನು ಬೆಂಗಳೂರು ಬ್ಯಾಡರಹಳ್ಳಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಸ್ನೇಹಿತನೇ ಸ್ಕೆಚ್ ಹಾಕಿದ ‘ಮಾಸ್ಟರ್ ಮೈಂಡ್’! ಈ ದರೋಡೆಯ ಹಿಂದೆ ಸಂತ್ರಸ್ತ ಹೊಂಬಾಳೆಗೌಡರ ಆಪ್ತ ಸ್ನೇಹಿತ ಬೆಟ್ಟೇಗೌಡನ ಕುತಂತ್ರವಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೊಂಬಾಳೆಗೌಡರು ಇತ್ತೀಚೆಗಷ್ಟೇ ಸೈಟ್ ಮಾರಾಟ ಮಾಡಿ ಮನೆಯಲ್ಲಿ ದೊಡ್ಡ ಮೊತ್ತದ ಹಣ ಇಟ್ಟಿದ್ದನ್ನು ಗಮನಿಸಿದ್ದ ಬೆಟ್ಟೇಗೌಡ, ಅದನ್ನು ಲೂಟಿ ಮಾಡಲು ಸಂಚು ರೂಪಿಸಿದ್ದನು. ಘಟನೆ ಹಿನ್ನೆಲೆ ದರೋಡೆಗಾಗಿ ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಆರೋಪಿ ನಾಗೇಂದ್ರನನ್ನು ಬಳಸಿಕೊಳ್ಳಲಾಗಿತ್ತು. ನಾಗೇಂದ್ರ ಪಿಎಸ್ಐ ಸಮವಸ್ತ್ರ ಧರಿಸಿ ಅಧಿಕಾರಿಯಂತೆ ಮನೆಗೆ ನುಗ್ಗಿದ್ದನು. ಮನೆಯವರ ಕೈಕಾಲುಗಳಿಗೆ ಟೇಪ್ ಸುತ್ತಿ, ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ ಜೀವ ಬೆದರಿಕೆ ಹಾಕಿದ್ದ ಈ ಗ್ಯಾಂಗ್, ಒಟ್ಟು 20 ಲಕ್ಷ ರೂಪಾಯಿ ನಗದು ಮತ್ತು 677 ಗ್ರಾಂ ಚಿನ್ನವನ್ನು ದೋಚಿ ಪರಾರಿಯಾಗಿತ್ತು. ಪೊಲೀಸ್ ಕಾರ್ಯಾಚರಣೆ ಮತ್ತು…
ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಗೆ ಸಿಗುತ್ತಿರುವ ಅಕ್ರಮ ಸೌಲಭ್ಯಗಳು ಮತ್ತು ರಾಜಾತಿಥ್ಯದ ವರದಿಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಆಪರೇಷನ್ ಕ್ಲೀನ್-ಅಪ್ ಆರಂಭಿಸಿದ್ದಾರೆ. ಜೈಲುಗಳ ಒಳಗಿನ ಭ್ರಷ್ಟಾಚಾರ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಿಬ್ಬಂದಿಗಳ ವರ್ಗಾವಣೆ ಮಾತ್ರವಲ್ಲದೆ, ಕೈದಿಗಳ ವಿಶೇಷ ಸಂದರ್ಶನಕ್ಕೂ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಇಂದು ಬಿಡುಗಡೆ ಮಾಡಿದ್ದಾರೆ. ವಿಶೇಷ ಸಂದರ್ಶನಕ್ಕೆ ಯಾರಿಗೆ ಅವಕಾಶ? ಇನ್ಮುಂದೆ ಜೈಲಿನಲ್ಲಿರುವ ಕೈದಿಗಳನ್ನು ಭೇಟಿ ಮಾಡುವುದು ಅಷ್ಟು ಸುಲಭವಲ್ಲ. ಕೇವಲ ಮಾನವೀಯ ಮತ್ತು ತುರ್ತು ಕಾರಣಗಳಿದ್ದಾಗ ಮಾತ್ರ ವಿಶೇಷ ಸಂದರ್ಶನಕ್ಕೆ ಅವಕಾಶ ನೀಡಲಾಗುತ್ತದೆ: ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಗೆ ಸಿಗುತ್ತಿರುವ ಅಕ್ರಮ ಸೌಲಭ್ಯಗಳು ಮತ್ತು ರಾಜಾತಿಥ್ಯದ ವರದಿಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಆಪರೇಷನ್ ಕ್ಲೀನ್-ಅಪ್ ಆರಂಭಿಸಿದ್ದಾರೆ. ಜೈಲುಗಳ ಒಳಗಿನ ಭ್ರಷ್ಟಾಚಾರ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಿಬ್ಬಂದಿಗಳ ವರ್ಗಾವಣೆ ಮಾತ್ರವಲ್ಲದೆ,…
ಬಂಟ್ವಾಳ: ಚಲಿಸುವ ಬಸ್ನಲ್ಲಿ ಬ್ಯಾಗ್ ಒಳಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿಯನ್ನು ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ನಿವಾಸಿ ಸಮದ್ ಖಾನ್ (37) ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ 174 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ ನವೆಂಬರ್ 19, 2025 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಳವು ನಡೆದಿತ್ತು. ಪ್ರಯಾಣಿಕರೊಬ್ಬರು ಬಸ್ನಲ್ಲಿ ಬ್ಯಾಗ್ ಒಳಗೆ ಇರಿಸಿದ್ದ ಅಂದಾಜು 170 ರಿಂದ 180 ಗ್ರಾಂ ಚಿನ್ನಾಭರಣಗಳನ್ನು ಆರೋಪಿಯು ಚಾಣಾಕ್ಷತನದಿಂದ ಕಳವು ಮಾಡಿದ್ದನು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಅರಿತ ಪೊಲೀಸರು ತನಿಖೆ ಚುರುಕುಗೊಳಿಸಿ, ತಾಂತ್ರಿಕ ಮಾಹಿತಿ ಹಾಗೂ ಖಚಿತ ಮೇರೆಗೆ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಪೂರ್ತಿ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಂತಾರಾಜ್ಯ ಕಳ್ಳನ…
ಎಂಸಿಸಿ ಬ್ಯಾಂಕ್ – ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ ವಹಿವಾಟು ದಾಟಿದ ಗಮನಾರ್ಹ ಸಾಧನೆಯ ಸ್ಮರಣಾರ್ಥವಾಗಿ, ಮಾರ್ಚ್ 8, 2026 ರಂದು ಬೈಂದೂರು ಶಾಖೆಯ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಉಚಿತ ವೈದ್ಯಕೀಯ ಆರೋಗ್ಯ ಶಿಬಿರದೊಂದಿಗೆ ಭವ್ಯ ಆಚರಣೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ಹೋಲಿ ಕ್ರಾಸ್ ಚರ್ಚ್ನ ಧರ್ಮಗುರುಗಳಾದ ವಂದನೀಯ ಫಾದರ್ ವಿನ್ಸೆಂಟ್ ಕುವೆಲ್ಲೊ; ರಂಗಭೂಮಿ ಕಲಾವಿದ ಶ್ರೀ ಗಣೇಶ್ ಕಾರಂತ್; ಸಮಾಜ ಸೇವಕ ಶ್ರೀ ಫಯಾಜ್ ಅಲಿ; ಮತ್ತು ಬೈಂದೂರು ಯೆಡ್ಥರೆಯಲ್ಲಿರುವ ಶ್ರೀ ಧರ್ಮಸ್ಥಳ ಸ್ವಸಹಾಯ ಗುಂಪಿನ ಅಧ್ಯಕ್ಷೆ ಶ್ರೀಮತಿ ಶೈಲಾ ಭಾಗವಹಿಸಿದ್ದರು. ಫಾ| ಮುಲ್ಲರ್ ಮೆಡಿಕಲ್ ಕಾಲೇಜು ಅಸ್ಪತೆಯ ಡಾ| ಎಲ್ರೊಯ್ ಸಲ್ಡಾನ್ಹಾ, ಶಾಖಾ ನಿರ್ದೇಶಕರಾದ ಶ್ರೀ ಎಲ್ರಾಯ್ ಕೆ. ಕ್ರಾಸ್ಟೊ; ಜನರಲ್ ಮ್ಯಾನೇಜರ್ ಶ್ರೀ ಸುನಿಲ್ ಮಿನೇಜಸ್; ಮತ್ತು ಬೈಂದೂರ್ ಶಾಖೆಯ…
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಿಗಳು ಸಾರ್ವಜನಿಕರನ್ನು ವಂಚಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇದೀಗ “ಡಿಜಿಟಲ್ ಅರೆಸ್ಟ್” (Digital Arrest) ಹೆಸರಿನಲ್ಲಿ ಜನರನ್ನು ಭಯಭೀತಿಗೊಳಿಸಿ ಹಣ ಲೂಟಿ ಮಾಡುವ ದಂಧೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತು ಸೈಬರ್ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ನೈಜವಾಗಿ “ಡಿಜಿಟಲ್ ಅರೆಸ್ಟ್” ಎನ್ನುವುದೇ ಇಲ್ಲ! ಯಾರನ್ನಾದರೂ ಆನ್ಲೈನ್ನಲ್ಲಿ ವಿಡಿಯೋ ಕರೆ ಮೂಲಕ ಬಂಧಿಸಲು ಕಾನೂನಿನಲ್ಲಿ ಅವಕಾಶವಿಲ್ಲ. “ಡಿಜಿಟಲ್ ಅರೆಸ್ಟ್” ಎನ್ನುವುದು ಕೇವಲ ಸ್ಕ್ಯಾಮರ್ಗಳು ಸೃಷ್ಟಿಸಿರುವ ಸುಳ್ಳು ಭಯವಷ್ಟೇ. ವಂಚಕರು ಆರ್ಬಿಐ (RBI), ಸಿಬಿಐ (CBI), ಅಥವಾ ಪೊಲೀಸ್ ಅಧಿಕಾರಿಗಳಂತೆ ಸೋಗು ಹಾಕಿ ವಿಡಿಯೋ ಕರೆ ಮಾಡುತ್ತಾರೆ. “ನಿಮ್ಮ ಹೆಸರಿನಲ್ಲಿ ಅಕ್ರಮ ಪಾರ್ಸೆಲ್ ಬಂದಿದೆ” ಅಥವಾ “ನಿಮ್ಮ ಬ್ಯಾಂಕ್ ಖಾತೆ ಅಕ್ರಮ ಚಟುವಟಿಕೆಗೆ ಬಳಕೆಯಾಗಿದೆ” ಎಂದು ಹೆದರಿಸಿ, ಪ್ರಕರಣದಿಂದ ಹೊರಬರಲು ಹಣ ಪಾವತಿಸುವಂತೆ ಒತ್ತಾಯಿಸುತ್ತಾರೆ. ವಂಚಕರು ಬಳಸುವ ತಂತ್ರಗಳು: ನಕಲಿ ಐಡಿ ಕಾರ್ಡ್ಗಳು: ಸರ್ಕಾರಿ ಸಂಸ್ಥೆಗಳ ಲೋಗೋ ಇರುವ ನಕಲಿ ಗುರುತಿನ…









