Author: main-admin

ಕಾಸರಗೋಡು: ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿ ಚಾಲಕರಿಗೆ ರಿವಾಲ್ವರ್ ತೋರಿಸಿ ಎರಡು ಲಾರಿಗಳನ್ನು ಅಪಹರಿಸಿದ ಘಟನೆ ಬುಧವಾರ ಕರ್ನಾಟಕ ಕೇರಳ ಗಡಿಯ ಮೀಯಪದವಿನಲ್ಲಿ ನಡೆದಿದ್ದು, ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಮಂಜೇಶ್ವರ ಪೊಲೀಸರು ಬೇಧಿಸಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರ ನಾಸಿಕ್ ನ ರಾಕೇಶ್ ಕಿಶೋರ್ (25), ಸೋಂಕಾಲಿನ ಹೈದರ್ ಅಲಿ (22), ಪೈವಳಿಕೆ ಕಳಾಯಿಯ ಸಯಾಫ್ (22), ಮೀಯಪದವು ಮುಹಮ್ಮದ್ ಸಫ್ವಾನ್ (23) ಬಂಧಿತರು. ಈ ವೇಳೆ ಮತ್ತಿಬ್ಬರು ಪರಾರಿಯಾಗಿದ್ದು, ಅವರಿಗಾಗಿ ಶೋಧ ಆರಂಭವಾಗಿದೆ. ಬಂಧಿತರಿಂದ ಅಪಹರಣಗೊಂಡ ಎರಡು ಲಾರಿ, ಪಿಸ್ತೂಲ್, ನಾಲ್ಕು ಸಜೀವ ಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ವಿವರ ಬುಧವಾರ ಸಂಜೆ 6 ಗಂಟೆಯ ವೇಳೆ ಮೀಯಪದವು ಬೆಜ್ಜದಲ್ಲಿ ಬರುತ್ತಿದ್ದ ಎರಡು ಲಾರಿಯನ್ನು ಪಿಸ್ತೂಲು ತೋರಿಸಿ ಅಡ್ಡಗಟ್ಟಿ ಕೆಳಗಿಳಿಸಿ ಮೊಬೈಲ್, ಹಣವನ್ನು ದೋಚಿ ಲಾರಿಗಳನ್ನು ಅಪಹರಿಸಿದ್ದರು. ಈ ಬಗ್ಗೆ ತಕ್ಷಣ ಮಾಹಿತಿ ಪಡೆದ ಮಂಜೇಶ್ವರ ಪೊಲೀಸರು ಲಾರಿಗಳನ್ನು ಬೆನ್ನಟ್ಟಿದ್ದಾಗ ಪೈವಳಿಕೆ ಕೊಮ್ಮಂಗಳ ಬಳಿ ಎರಡು…

Read More

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ 5 ಮತ್ತು 8ನೇ ತರಗತಿಯ ವಾರ್ಷಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಮಾರ್ಚ್ 13ರಿಂದ 5 ಮತ್ತು 8ನೇ ತರಗತಿಯ ಪರೀಕ್ಷೆಗಳು ಆರಂಭಗೊಳ್ಳಲಿವೆ. ದಿನಾಂಕ 06-03-2023ಯ ಸೋಮವಾರದಿಂದ ದಿನಾಂಕ 10-03-2023ರ ಶುಕ್ರವಾರದವರೆಗೆ ವಿದ್ಯಾರ್ಥಿಗಳಿಗೆ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಿರ್ವಹಿಸಲಾಗುತ್ತದೆ. ವಿಶೇಷ ಶಾಳೆಗಳ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ಸರಬರಾಜು ಮಾಡುವ ಪ್ರಶ್ತೋತ್ತರ ಪತ್ರಿಕೆಗಳನ್ನೇ ಬಳಸಿ, ಶಾಲಾ ಹಂತದಲ್ಲಿ ಹಿಂದಿನ ಸಾಲುಗಳಲ್ಲಿ ನಡೆಸಿದಂತೆ ಮೌಲ್ಯಾಂಕನ ನಡೆಸುವುದು ದು ತಿಳಿಸಿದೆ. ಉಳಿದಂತೆ ಮಾ.13ರಿಂದ 18ರವರೆಗೆ ವಿಷಯವಾರು ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಯಶಸ್ಸು ಕಂಡಿದೆ. ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿ ಗನ್ ಮೂಲಕ ಆನೆಗೆ ಅರಿವಳಿಕೆ ನೀಡಲಾಗಿದೆ. ಫೆ.20 ಬೆಳಿಗ್ಗೆ ಕಾಡಾನೆ ದಾಳಿಯಿಂದ ಸ್ಥಳೀಯ ನಿವಾಸಿಗಳಾದ ರಂಜಿತಾ (21) ಮತ್ತು ರಮೇಶ್ ರೈ (52 ವ) ಮೃತಪಟ್ಟಿದ್ದರು. ಅಂದು ರಾತ್ರಿಯೇಮೈಸೂರು ದುಬಾರೆಯಿಂದ ಅಭಿಮನ್ಯು ಸೇರಿ 5ಆನೆಗಳನ್ನು ತರಲಾಗಿದ್ದು, ಫೆ.21 ರಂದು ಡ್ರೋನ್ ಕ್ಯಾಮರಾ ಬಳಸಿ ನರಹಂತಕ ಆನೆಯನ್ನು ಪತ್ತೆ ಹಚ್ಚಿದ್ದು, ದುಬಾರೆಯ ಆನೆಗಳ ಮೂಲಕ ಸೆರೆಹಿಡಿಯುವ ಕಾರ್ಯಾಚರಣೆಯು ರೆಂಜಲಾಡಿ ಗ್ರಾಮದ ತುಂಬೆ ರಕ್ಷಿತಾರಣ್ಯದಲ್ಲಿ ಆರಂಭಗೊಂಡಿತ್ತು. ಆದರೆ ನಿನ್ನೆ ಆನೆಗೆ ಅರಿವಳಿಕೆ ನೀಡುವ ಪ್ರಯತ್ನ ವಿಫಲಗೊಂಡಿತ್ತು. ಇಂದು ಸಂಜೆ ಮತ್ತೆ ಆನೆಯನ್ನು ಪತ್ತೆ ಹಚ್ಚಿ ಅರಿವಳಿಕೆ ಮದ್ದು ಶೂಟ್ ಮಾಡಿ ಆನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.

Read More

ಮಂಗಳೂರು;ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆಯ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜೊತೆಗೆ ಬೆಂಗಳೂರು ಪಶ್ವಿಮ ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ವೈರ್ಲೆಸ್ ಎಸ್.ಪಿಯಾಗಿದ್ದ ಡಿ.ಕಿಶೋರ್ ಬಾಬು ಅವರನ್ನು ಗುಪ್ತದಳ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ, ಕೆಎಸ್ ಆರ್ ಪಿ ಬೆಂಗಳೂರು ಕಮಾಂಡೆಂಟ್ ಆಗಿರುವ ಕೆ.ವಂಶಿಕೃಷ್ಣ ಅವರನ್ನು ಬೆಂಗಳೂರು ವೈರ್ಲೆಸ್ ಎಸ್.ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮುಹಮ್ಮದ್ ಸುಜೀತಾ ಎಂ.ಎಸ್. ಅವರನ್ನು ಬೆಂಗಳೂರು ಸಿಎಆರ್ ಡಿಸಿಪಿಯಿಂದ ಬೆಂಗಳೂರು ದಕ್ಷಿಣ ಸಂಚಾರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಅರುಣಾಂಶುಗಿರಿ ಅವರನ್ನು ಸಿಎಆರ್ ಬೆಂಗಳೂರು ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.ಬೆಳಗಾವಿ ಲೋಕಾಯುಕ್ತ ಎಸ್.ಪಿ. ಯಶೋಧಾ ವಂಟಗೋಡಿ ಅವರನ್ನು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.

Read More

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಕೃತ್ಯಗಳಿಗೆ ಬಳಸುತ್ತಿದ್ದ ಕಮ್ಯುನಿಟಿ ಹಾಲ್ ಅನ್ನು ಎಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎನ್ ಐಎ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಜುಲೈ 26ರಂದು ಹತ್ಯೆ ಮಾಡಲಾಗಿತ್ತು.

Read More

ಉಳ್ಳಾಲ:ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26)ಮೃತ ಯುವಕ.ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿದ್ದಾರೆ. ಕಲ್ಲಾಪು ಮಾರುಕಟ್ಟೆಗೆ ಪಂಪ್ವೆಲ್ ಕಡೆಯಿಂದ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Read More

ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಗರದ ಬುಧವಾರ ಸಂಜೆ ಸಂಭವಿಸಿದೆ. ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ ಪಿಕ್-ಅಪ್ ಕಾರಿನ ಹಿಂದೆ ಇತ್ತು. ಎರಡೂ ವಾಹನಗಳು ಕೆಪಿಟಿಯಿಂದ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದವು.ನಂತೂರು ಜಂಕ್ಷನ್‌ನಲ್ಲಿ ಕಾರು ಚಾಲಕ ಬ್ರೇಕ್‌ ಹಾಕಿದಾಗ ಪಿಕ್‌ಅಪ್‌ನಲ್ಲಿದ್ದ ಪಟ್ಟಿಗಳು ಕಾರಿನ ಹಿಂಭಾಗದಿಂದ ಒಳಗೆ ಹೊಕ್ಕಿವೆ. ಕಾರಿನಲ್ಲಿ ಚಾಲಕ ಮಾತ್ರವಿದ್ದರು. ಪಟ್ಟಿಗಳು ಹಿಂಭಾಗದ ಸೀಟುಗಳನ್ನು ದಾಟಿ ಬಂದು ಚಾಲಕನ ಸೀಟಿಗೆ ತಾಗಿ ನಿಂತಿವೆ. ಕಾರಿಗೆ ಹಾನಿಯಾಗಿದೆ. ಪಿಕ್‌ಅಪ್‌ ವಾಹನದ ಚಾಲಕನ ನಿರ್ಲಕ್ಷ್ಯದ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸೋಷಿಯಲ್‌ ಮೀಡಿಯಾದಲ್ಲಿ ಬರುವ ಜಾಹಿರಾತುಗಳನ್ನು ನಂಬಿ ಕೆಲಸಕ್ಕೆ ಅರ್ಜಿ ಹಾಕುವ ಹುಷಾರ್‌ ಆಗಿರುವುದು ಮುಖ್ಯವಾಗಿದೆ. ಕರಾವಳಿಯ ಯುವಕನೊಬ್ಬ ಇಂತಹ ಜಾಲಕ್ಕೆ ಬಲಿಯಾಗಿ ಲಕ್ಷಾಂತರ ಹಣವನ್ನು ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ನಿವಾಸಿ ಯುವನೊಬ್ಬ ವರ್ಕಫ್ರಮ್‌ ಹೋಂನಲ್ಲಿ ಕಂಪನಿಯ ಉದ್ಯೋಗದಲ್ಲಿದ್ದು, ಮತ್ತೊಂದು ಹೊಸ ಉದ್ಯೋಗ ಪಡೆಯುವ ಆಸೆಯಲ್ಲಿ ಆತ ಫೇಸ್​​ಬುಕ್ ಕಂಡ ​ ಜಾಹಿರಾತು ನಂಬಿ ಅದಕ್ಕೆ ವಾಟ್ಸ್‌ಆಪ್‌ ಮೂಲಕ ಸಂಪರ್ಕಿಸಿದ್ದಾನೆ. ಆರೋಪಿ ಕೆಲಸದ ಫಾರ್ಮ್​​ನ್ನು ತುಂಬುವಂತೆ ಸಂತ್ರಸ್ತನಿರಿಗೆ ಕಳುಹಿಸಿದ್ದಾರೆ. ಯುವಕನಿಂದ ವಿವಿಧ ಬ್ಯಾಂಕ್​ ಅಕೌಂಟ್​​ಗಳಿಗೆ ವೀಸಾ ಕೆಲಸಕ್ಕಾಗಿ ಹಣ ಹಾಕಿಸಿಕೊಂಡಿದ್ದಾನೆ. ಕಸ್ಟಮ್ಸ್ ಕ್ಲಿಯರೆನ್ಸ್ ಮತ್ತು ಇತರ ಬದಲಾವಣೆಗಾಗಿ ಎಟಿಎಂ ಮೂಲಕ, ಫೋನ್​ ಪೇ ಮೂಲಕ ಹಣ ಹಾಕಿಸಿಕೊಂಡಿದ್ದು ಬರೊಬ್ಬರಿ 9.79 ಲಕ್ಷ ರೂ. ಪಡೆದು ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಈ ವಂಚನೆ ಬಗ್ಗೆ ಸಿಇಎನ್​ ಪೊಲೀಸ್​ ಠಾಣೆಯಲ್ಲಿ ​ಐಟಿ ಕಾಯ್ದೆಯ ಸೆಕ್ಷನ್ 66 (ಡಿ) ಮತ್ತು ಐಪಿಸಿಯ ಸೆಕ್ಷನ್ 419…

Read More

ಮಂಗಳೂರು: ತುಳು ಚಲನಚಿತ್ರ ” ಪಿಲಿ ” ಬಿಡುಗಡೆ ಸಂಬಂಧ ಇಂದು (ದಿನಾಂಕ 22-02-2023) ಬುಧವಾರ ಸಂಜೆ 4 ಗಂಟೆಗೆ ಮಂಗಳೂರು ನಗರದ ವುಡ್ ಲಾಂಡ್ಸ್ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಕಾರಣಾಂತರಗಳಿಂದ ನವಂಬರ್ 10 ರಂದು ಅದ್ದೂರಿಯಾಗಿ ಕರಾವಳಿಯಾದ್ಯಂತ ತೆರೆ ಕಾಣಬೇಕಿದ್ದ ಎನ್. ಎನ್. ಎಂ.ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದ ಪಿಲಿ ತುಳು ಚಿತ್ರ ಬಿಡುಗಡೆಗೆ ತಡೆಯುಂಟಾಗಿದ್ದ ಕಾರಣ ಸಮಸ್ತ ಚಿತ್ರತಂಡಕ್ಕೆ ಅಪಾರ ನೋವು ಹಾಗೂ ಸಿನಿಪ್ರಿಯರಿಗೆ ಅಗಾಧ ನಿರಾಸೆಯಾಗಿತ್ತು… ಕಷ್ಟ ಪಟ್ಟು ತುಳು ಭಾಷೆಯ ಅಭಿಮಾನದಿಂದ ಚಿತ್ರವನ್ನು ತಯಾರಿಸಿ ಅದನ್ನು ಪ್ರದರ್ಶನಕ್ಕೆ ಸಜ್ಜುಗೊಳಿಸಿದಾಗ ಅದಕ್ಕೆ ಅಡ್ಡಿ ಪಡಿಸಿರುವುದು ಒಂದು ಬಹಳ ಬೇಸರದ ಸಂಗತಿಯಾಗಿದೆ . ಈ ಎಲ್ಲ ಅಡಚಣೆಗೆ ಸಮಸ್ತ ಪಿಲಿ ಚಿತ್ರತಂಡ ವಿಷಾದ ವ್ಯಕ್ತ ಪಡಿಸುತ್ತದೆ. ಪ್ರತಿ ಸಂದರ್ಭದಲ್ಲಿ ತುಳು ಚಲನಚಿತ್ರ ರಂಗಕ್ಕೆ ಬೆನ್ನೆಲುಬಾಗಿ ನಿಂತಿರುವ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು , ಸೇರಿದಂತೆ ಹಲವಾರು ತುಳುನಾಡಿನ ಗಣ್ಯರ ಬೆಂಬಲದೊಂದಿಗೆ…

Read More

ಮಂಗಳೂರು- ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕರ್ತವ್ಯ ನಿರತ ನಿರ್ವಾಹಕಿ ಮೇಲೆ ಹಲ್ಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ನಿರ್ವಾಹಕಿ ವಿಜಯಾ ಅವರು ನೀಡಿದ ದೂರಿನ ಮೇರೆಗೆ ಪ್ರಯಾಣಿಕ ಹಸನ್‌ನನ್ನು ಪುತ್ತೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 20ರಂದು ಸಂಜೆ ಪುತ್ತೂರು ನಿಲ್ದಾಣದಿಂದ ಬಸ್‌ ಹೊರಟು ನಗರದ ಮಾರುಕಟ್ಟೆ ಬಳಿಯ ತಂಗುದಾಣ ತಲುಪಿದಾಗ ಅಂಗವಿಕಲ ಪ್ರಯಾಣಿಕರೋರ್ವರಿಗೆ ಸೀಟು ಬಿಟ್ಟುಕೊಡುವಂತೆ ನಿರ್ವಾಹಕಿ ಕೇಳಿದ್ದು, ಆಕ್ಷೇಪಿಸಿದ ಆರೋಪಿಯು ಅವ್ಯಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಬಸ್‌ನಿಂದ ಇಳಿದು ಓಡಿ ಪರಾರಿಯಾಗಿದ್ದ. ನಿರ್ವಾಹಕಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಕಾರ್ಯಾಚರಣೆ ನಡೆಸಿದ ಪುತ್ತೂರು ಮಹಿಳಾ ಠಾಣಾ ಪೊಲೀಸರು ಆರೋಪಿ ಹಸನ್‌ನನ್ನು ಬಂಧಿಸಿದ್ದಾರೆ.

Read More