Author: main-admin

ಮಂಗಳೂರು: ನಗರದ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಹರೀಶ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬುಧವಾರ ಸುಳ್ಯ ಬಳಿ ರಸ್ತೆ ಅಪಘಾತದಲ್ಲಿ ಹರೀಶ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಜೀವನ್ಮರಣ ಸ್ಥಿತಿಯಲ್ಲಿ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು‌. ಆದರೆ ರವಿವಾರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹರೀಶ್ ಅವರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕು ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದರು.

Read More

ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಾದಂತ ಪತಿಯೊಬ್ಬ, ಆಕೆಯ ಊರಿಗೆ ತೆರಳಿ ಚಾಕುವಿನಿಂದ ಹಲ್ಲೆ ಮಾಡಿರುವಂತ ಘಟನೆ ಧಾರವಾಡದ ಗರಗದಲ್ಲಿ ನಡೆದಿದೆ. ಧಾರವಾಡದ ಬನಶ್ರೀ ನಗರದಲ್ಲಿ ರೂಪ ಹಾಗೂ ಬಸವರಾಜ ಅವ್ವಣ್ಣನವರ್ ವಾಸವಿದ್ದರು. ಪತ್ನಿಯ ಬಗ್ಗೆ ಸದಾ ಅನುಮಾನಗೊಳ್ಳುತ್ತಿದ್ದರಿಂದ ಮನೆಯನ್ನು ಬಿಟ್ಟು ಧಾರವಾಡ ತಾಲ್ಲೂಕಿನ ಗರಗ ಗ್ರಾಮದ ತವರು ಮನೆಗೆ ಪತ್ನಿ ರೂಪಾ ತೆರಳಿದ್ದರು. ಒಂದು ವಾರದಿಂದ ರೂಪ ತನ್ನ ತವರು ಮನೆಯಲ್ಲೇ ಇದ್ದಿದ್ದರಿಂದ ಸಿಟ್ಟಾದಂತ ಪತಿ ಬಸವರಾಜ ಇಂದು ಅವರ ತವರು ಮನೆಯಾದಂತ ಗರಗಕ್ಕೆ ತೆರಳಿದ್ದಾನೆ. ಪತ್ನಿ ರೂಪಾ ಜೊತೆಗೆ ಜಗಳಕ್ಕೆ ಇಳಿದಂತ ಜಗಳ ತೀವ್ರಗೊಂಡ ವೇಳೆಯಲ್ಲಿ ಪತ್ನಿಗೆ ಜಾಕುವಿನಿಂದ ಹಲ್ಲೆ ಮಾಡಿದ್ದಾನೆ. ಇದನ್ನು ಬಿಡಿಸೋದಕ್ಕೆ ಹೋದಂತ ಅತ್ತೆ ಯಲ್ಲವಮ್ಮ ಎಂಬುವರ ಮೇಲೂ ಹಲ್ಲೆ ಮಾಡಿದ್ದಾರೆ. ಬಸವರಾಜ್ ಚಾಕುವಿನಿಂದ ಮಾಡಿದಂತ ಹಲ್ಲೆಯಿಂದ ರೂಪಾ, ಯಲ್ಲವ್ವ ಗಾಯಗೊಂಡಿದ್ದಾರೆ. ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಧಾರವಾಡದ ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಕುವಿನಿಂದ ಹಲ್ಲೆ ಮಾಡಿದಂತ ಬಸವರಾಜನನ್ನು ಬಂಧಿಸಲಾಗಿದೆ.

Read More

ಕಾರವಾರ: ಒಂದೂವರೆ ವರ್ಷದ ಹಿಂದೆ ಕಾರವಾರದಲ್ಲಿ ಮೀನುಗಾರರ ಬಲೆಗೆ ಸಿಕ್ಕಿದ್ದ ಬಂಗುಡೆ (ಇಂಡಿಯನ್ ಮಾಕ್ರೆಲ್) ಮೀನು ಅಂತಿತಹದ್ದಲ್ಲ. ದೇಶದಲ್ಲಿಯೇ ಅತಿ ದೊಡ್ಡ ಬಂಗುಡೆ ಮೀನು ಎನ್ನುವುದು ತಡವಾಗಿ ಬೆಳಕಿಗೆ ಬಂದಿದೆ. ಆ ಮೀನನ್ನು ಕಾರವಾರದಲ್ಲಿ ಸಂರಕ್ಷಿಸಿ ಇಡಲಾಗಿದೆ. ಬೈತಖೋಲದ ಆನಂದ ಹರಿಕಂತ್ರ ಅವರ ಬಲೆಗೆ ಈ ಬಂಗಡೆ ಸಿಕ್ಕಿತ್ತು. ಇಂಗ್ಲಿಷ್‌ನಲ್ಲಿ `ಇಂಡಿಯನ್ ಮಾಕ್ರೆಲ್’ ಎಂದು ಕರೆಯುವ ಬಂಗುಡೆಯು 48 ಸೆಂ.ಮೀ. ಉದ್ದ, 1.230 ಕೆ.ಜಿ. ತೂಕವಿದೆ. ಇದು ಹೆಣ್ಣು ಬಂಗುಡೆ ಎಂದು ಗುರುತಿಸಲಾಗಿದೆ. ಮೀನಿನ ಬಗ್ಗೆ ಕಾರವಾರದ ಸಾಗರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಂಶೋಧನೆ ನಡೆಸಿ, ಇದು ಅತಿ ದೊಡ್ಡ ಬಂಗುಡೆ ಎಂದು ಖಚಿತಪಡಿಸಿದ್ದಾರೆ. ಕೇಂದ್ರ ಸರಕಾರದ ಕಡಲ ಮೀನು ಸಂಶೋಧನಾ ಸಂಸ್ಥೆ (ಸಿಎಂಎಫ್‌ಆರ್‌ಐ) ಕೂಡ ಇದನ್ನು ಪ್ರಕಟಿಸಿದೆ.

Read More

ಕಾರ್ಕಳ : ಕುದುರೆಮುಖ ವನ್ಯಜೀವಿ ವಿಭಾಗದ ಕಾರ್ಕಳ ವಲಯದ ನೂರಾಲ್‌ಬೆಟ್ಟು ಗ್ರಾಮದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಲಯದ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತರಿಂದ 1 ಬಂದೂಕು, 21 ಕಾಡತೂಸು, 1 ಸರ್ಚ್‌ಲೈಟ್ 2 ಮೊಬೈಲ್ ಫೋನ್ , ಆರೋಪಿಗಳು ಬಳಸಿದ್ದ ಕಾರು ಮತ್ತು 1 ಆಟೋರಿಕ್ಷಾ ವಶಕ್ಕೆ ಪಡೆಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರಶಾಂತ್ ಪೂಜಾರಿ ಮತ್ತು ಅಶೋಕ್ ಪೂಜಾರಿ ಎಂದು ಗುರುತಿಸಲಾಗಿದೆ. ಕುದುರೆಮುಖ ವನ್ಯಜೀವಿ ವಿಭಾಗ ಕಾರ್ಕಳದ ಉಪಅರಣ್ಯ ಸಂರಕ್ಷಣಾಧಿಕಾರಿ ಶಿವರಾಮು ಬಾಬು ಅವರ ನಿರ್ದೇಶನದಂತೆ, ಕುದುರೆಮುಖ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು.

Read More

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ. ಗೋವನ್ನು ಪಿಕಪ್ ನಲ್ಲಿ ಸಾಗಿಸುತ್ತಿದ್ದನ್ನು ಕಂಡ ಬಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಬಂದ ಪೊಲೀಸರು ಪಿಕಪ್ ವಾಹನ ಮತ್ತು ಓರ್ವನನ್ನು ವಶಕ್ಕೆ ಪಡೆದಿದ್ದು ಗೋವನ್ನು ಸುರಕ್ಷಿತವಾಗಿ ದೇವಳದ ಗೋಶಾಲೆಗೆ ಸ್ಥಳಾಂತರಿಸಲಾಗಿದೆ.

Read More

ನವದೆಹಲಿ : ಅನೇಕ ಜನರು ಮನೆಯಲ್ಲಿ ಬಳಸಬಹುದಾದ ಹಿಮಾಲಯನ್ ಉಪ್ಪಿನ ಬಳಕೆಯು ಅವರ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಈ ಸಮಯದಲ್ಲಿ ಯಾರೂ ಅದನ್ನು ಬಳಸಬಾರದು ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ. ಇದರರ್ಥ ಈ ಉಪ್ಪಿನಲ್ಲಿ ಸಾಕಷ್ಟು ಅಯೋಡಿನ್ ಇಲ್ಲ ಮತ್ತು ಅಯೋಡೈಸ್ಡ್ ಲವಣಗಳ ಬಳಕೆಯು ದೇಹದಲ್ಲಿ ಅಯೋಡಿನ್ ಕೊರತೆಗೆ ಕಾರಣವಾಗಬಹುದು ಎಂದು ತಮಿಳುನಾಡು ಆರೋಗ್ಯ ಇಲಾಖೆ ಒತ್ತಿಹೇಳಿದೆ. ಅಯೋಡಿನ್ ಕೊರತೆ ತಡೆಗಟ್ಟುವಿಕೆಗಾಗಿ ರಾಷ್ಟ್ರೀಯ ಕಾರ್ಯಕ್ರಮದ ಸಮನ್ವಯ ಸಮಿತಿಯ ಇತ್ತೀಚಿನ ಸಭೆಯಲ್ಲಿ ಕೆಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಮತ್ತು ಅಯೋಡಿನ್ ಬಗ್ಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಜಾಹೀರಾತುಗಳು ಹಿಮಾಲಯನ್ ಉಪ್ಪಿನ ಆಹಾರದ ಬಗ್ಗೆ ಸಾಕಷ್ಟು ಮಾತನಾಡುವುದರಿಂದ, ಇದು ಹೆಚ್ಚಿನ ಪ್ರಮಾಣದ ಪೋಷಕಾಂಶಗಳನ್ನ ಹೊಂದಿರುತ್ತದೆ ಎಂದು ಜನರು ನಂಬುತ್ತಾರೆ ಮತ್ತು ಆದ್ದರಿಂದ ಇದನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಹಿಮಾಲಯನ್ ಉಪ್ಪಿನಲ್ಲಿ ಸಾಮಾನ್ಯವಾಗಿ ಅಯೋಡಿನ್ ಹೆಚ್ಚಾಗಿರುವುದಿಲ್ಲ ಮತ್ತು ಅದನ್ನು ತಿನ್ನುವುದರಿಂದ ಜನರಿಗೆ ಆರೋಗ್ಯ ಸಮಸ್ಯೆಗಳು…

Read More

ಮಂಗಳೂರು : ಮೂರು ಕಳವು ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಲಯಕ್ಕೆ ಹಾಜರಾಗದೆ 12 ತಲೆಮರೆಸಿಕೊಂಡ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಕೋನಾಲು ನಿವಾಸಿ ಅಬ್ದುಲ್ ಹಮೀದ್(50) ಬಂಧಿತ ಆರೋಪಿ. 1999ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ 2012ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 3 ಕಳವಯ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಬ್ದುಲ್ ಹಮೀದ್ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ. ಆ ಬಳಿಕ ವಿಚಾರಣೆಗೆ ಹಾಜರಾಗದೇ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಧರ್ಮಸ್ಥಳದ ಬಳಿಯಲ್ಲಿ ವಶಕ್ಕೆ ದಸ್ತಗಿರಿ ಮಾಡುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಆತನನ್ನು ಮುಂದಿನ ಕ್ರಮಕ್ಕಾಗಿ ಸಿಸಿಬಿ ಪೊಲೀಸರು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದೆ.

Read More

ಮಂಗಳೂರು: ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ಫೆಬ್ರವರಿ 7 ರಂದು ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಕೆಎ-02ಎಸಿ 5994 ನೊಂದಣೆ ಸಂಖ್ಯೆಯ ವಾಹನದಲ್ಲಿದ್ದ ವಿವಿದ ಜಾತಿಯ 26 ದಿಮ್ಮಿಗಳನ್ನು ಸೇರಿ ಒಟ್ಟು 6 ಲಕ್ಷ ಬೆಲೆಬಾಳುವ ಸೊತ್ತುಗಳನ್ನು ಸರಕಾರದ ಪರ ಅಮಾನತು ಪಡಿಸಿ, ಕುಂದಾಪುರ ತಾಲೂಕಿನ ಮೊಹಮ್ಮದ್ ಸಿರಾಜ್ ಎಂಬವರ ವಿರುದ್ಧ ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಪತ್ತೆಹಚ್ಚಿ ಅರಣ್ಯ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ್, ವಲಯ ಅರಣ್ಯ ಅಧಿಕಾರಿ(ಪ್ರಭಾರ) ಪ್ರಶಾಂತ್, ಉಪ ವಲಯ ಅರಣ್ಯ ಅಧಿಕಾರಿ ಶಿವಾನಂದ ಸದೇಪ ಮಾದರ, ಉಪ ವಲಯ ಅರಣ್ಯ ಅಧಿಕಾರಿ ವಿನಯ ಕುಮಾರ್, ವಾಹನ ಚಾಲಕರು ಜಯಪ್ರಕಾಶ್ ಕೆ, ಮತ್ತು ಜಯಪ್ರಕಾಶ್ ಭಾಗವಹಿಸಿದ್ದರು. ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ್ ಎಂ.ಖಣದಾಳಿ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಇವರು ಮುಂದಿನ ತನಿಖೆಯನ್ನು…

Read More

ಉಡುಪಿ : ಇತ್ತೀಚೆಗೆ ಶರಣಾಗಿದ್ದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರನ್ನು ಮೂರು ಪ್ರಕರಣಗಳಿಗೆ ಸಂಬಂಧಿಸಿ ವಿಚಾರಣೆಗೆ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿದ್ದ ಲಕ್ಷ್ಮೀ ತೊಂಬಟ್ಟು ಅವರನ್ನು ಪೊಲೀಸರು ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಅದರಂತೆ ನ್ಯಾಯಾಧೀಶರು ಲಕ್ಷ್ಮಿ ಅವರನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು. ಇದೀಗ ಪೊಲೀಸರು ಲಕ್ಷ್ಮೀ ಅವರನ್ನು ವಶಕ್ಕೆ ಪಡೆದುಕೊಂಡಿದ್ದು ಕುಂದಾಪುರ ಡಿವೈಎಸ್ಪಿ ಎಚ್‌.ಡಿ ಕುಲಕರ್ಣಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಅಮಾಸೆಬೈಲು ಠಾಣೆ ವ್ಯಾಪ್ತಿಗೊಳಪಡುವ 3 ಪ್ರಕರಣಗಳಲ್ಲಿ ಲಕ್ಷ್ಮೀ ತನಿಖೆ ನಡೆಯಲಿದೆ.

Read More

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ನಂಬಿಸಿ 46,00,000 ರೂ. ಹಣವನ್ನು ವಂಚಿಸಿರುವ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಕೇರಳ ಮೂಲದ ಜುನೈದ ವಿ ಕೆ ಎಂಬಾತನನ್ನು ಪತ್ತೆ ಮಾಡಿ ದಸ್ತಗಿರಿ ಕ್ರಮ ಜರುಗಿಸಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಯಾರೋ ಅಪಚಿರಿತ ವ್ಯಕ್ತಿ ವಾಟ್ಸ್ ಆ್ಯಫ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ತಿಳಿಸಿ ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವ ಬಗ್ಗೆ, ದೂರುದಾರರಿಂದ ಹಂತ ಹಂತವಾಗಿ ಒಟ್ಟು 46,00,000 ರೂ. ಹಣವನ್ನು ಪಡೆದು ವಂಚನೆ ಮಾಡಿರುವುದಾಗಿದೆ. ದೂರುದಾರು ನೀಡಿದ ದೂರಿನಂತೆ ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕಲಂ 66(ಸಿ) 66(ಡಿ) ಐಟಿ ಆಕ್ಟ್ ಮತ್ತು 308(2), 318(2), 336(3), 112 ಬಿ.ಎನ್.ಎಸ್ ಅಡಿ ಪ್ರಕರಣ ದಾಖಲಾಗಿರುತ್ತದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರಿಂದ ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರವನ್ನು ಸಂಗ್ರಹಿಸಿ ನೋಡಿದಾಗ ಪಶ್ಚಿಮ ಬಂಗಾಳದ ಮೂಲದ ವ್ಯಕ್ತಿಗೆ 10,00,000ರೂ. ಹಣ ವರ್ಗಾವಣೆಯಾಗಿದೆ. ನಂತರ…

Read More