ಪುತ್ತೂರು: ಇಬ್ಬರು ಯುವತಿಯರು ನಾಪತ್ತೆಯಾಗಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಇನಾಮೊಗ್ರುವಿನ ಮೋನಿಶಾ (23) ಮತ್ತು ಮಂಡ್ಯದ ಪಾಂಡವಪುರದ ದಿವ್ಯಾ (20) ನಾಪತ್ತೆಯಾದ ಯುವತಿಯರು ಎಂದು ಗುರುತಿಸಲಾಗಿದೆ. ಇವರಿಬ್ಬರೂ ಮಂಡ್ಯದಲ್ಲಿ ಒಂದೇ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದರು. ವರದಿಯ ಪ್ರಕಾರ, ಇವರಿಬ್ಬರೂ ನಾಲ್ಕು ದಿನಗಳ ಹಿಂದೆ ಮೋನಿಶಾ ಅವರ ಮನೆಗೆ ಬಂದಿದ್ದು, ಅಂದಿನಿಂದ ನಾಪತ್ತೆಯಾಗಿದ್ದಾರೆ. ಈ ಇಬ್ಬರೂ ಯುವತಿಯರು ಶ್ರವಣ ಮತ್ತು ಮಾತಿನ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
Author: main-admin
ಮಂಗಳೂರು : ಕಾವೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನವನ್ನು ಅಡಮಾನವಿರಿಸಿ 6.24 ಲಕ್ಷ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಕಾಶಭವನ ನಿವಾಸಿ ಹಾರಿಫ್ ಅಬುಬಕ್ಕರ್ (39), ನಂತೂರು ಬಿಕರ್ನಕಟ್ಟೆ ನಿವಾಸಿ ಮಹಮ್ಮದ್ ಆಶೀಕ್ ಕಟ್ಟತ್ತಾರ್ (34), ಪುತ್ತೂರು ಬೆಳಂದೂರು ನಿವಾಸಿ ಅಬ್ದುಲ್ ರಮೀಜ್ (33) ಬಂಧಿತರು. ಅಸಲಿ ಚಿನ್ನಾಭರಣಗಳೆಂದು ನಂಬಿಸಿ ನಕಲಿ ಚಿನ್ನವನ್ನು ಅಡವಿಟ್ಟು ಇವರು ಆತ್ಮಶಕ್ತಿ ಸಹಕಾರಿ ಸಂಘದಲ್ಲಿ 6.24 ಲಕ್ಷ ರು. ಸಾಲ ಪಡೆದಿದ್ದರು. ನಕಲಿ ಚಿನ್ನದ ಮಾಹಿತಿ ಸಿಗುತ್ತಿದ್ದಂತೆ ಸೊಸೈಟಿ ಕಡೆಯಿಂದ ಕಾವೂರು ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ಮೂವರನ್ನು ಬಂಧಿಸಿದ್ದು ಅವರಿಂದ 5 ಲಕ್ಷ ನಗದು, 45 ಗ್ರಾಮ್ ನಕಲಿ ಚಿನ್ನದ ಒಡವೆಗಳು, 20 ಲಕ್ಷ ಮೌಲ್ಯದ ಒಂದು ಕಾರು, ನಾಲ್ಕು ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಸೊತ್ತಿನ ಒಟ್ಟು ಮೌಲ್ಯ 26.50 ಲಕ್ಷ ಆಗಬಹುದೆಂದು ಅಂದಾಜಿಸಲಾಗಿದೆ. ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಅವರ ಮಾರ್ಗದರ್ಶನದಲ್ಲಿ…
ಬಂಟ್ವಾಳ: ಕಳೆದ ಕೆಲವು ದಿನಗಳ ಹಿಂದೆ ಬೊಲೆರೊ ವಾಹನದಲ್ಲಿ ಗಾಂಜಾ ಸಾಗಿಸುವಾಗ ಅಬಕಾರಿ ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು, ಅವರು ಬೈಕ್ನಲ್ಲಿ ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಗಾಂಜಾ ಸಾಗಾಟ ಪ್ರಕರಣದಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಫರಂಗಿಪೇಟೆಯ ಮೊಹಮ್ಮದ್ ಅಜರುದ್ದೀನ್ ಮತ್ತು ಅಮ್ಮೆಮಾರ್ನ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 10 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ಟೋಬರ್ 8 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಐ ಸಂದೀಪ್ ಕುಮಾರ್ ಶೆಟ್ಟಿ ಅವರು ಗಸ್ತು ತಿರುಗುತ್ತಿದ್ದಾಗ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಬೂಮರೆಡ್ಡಿ ಮಾರ್ಗದರ್ಶನದಲ್ಲಿ ಬಂಟ್ವಾಳ ಡಿವೈಎಸ್ಪಿ ಎಸ್. ವಿಜಯಪ್ರಸಾದ್ ಅವರ ಸೂಚನೆಯಂತೆ ಈ ಕಾರ್ಯಾಚರಣೆ ನಡೆಸಲಾಯಿತು. ಬಂಟ್ವಾಳ ನಗರ ಪೊಲೀಸ್ ಇನ್ಸ್ಪೆಕ್ಟರ್ ಅನಂತಪದ್ಮನಾಭ ಅವರ ನೇತೃತ್ವದಲ್ಲಿ ಪಿಎಸ್ಐಗಳಾದ ಸಂದೀಪ್ ಕುಮಾರ್ ಶೆಟ್ಟಿ…
ಕರ್ನಾಟಕ ಹಾಗೂ ಗೋವಾ ನಿರ್ದೇಶನಾಲಯದ 72 ನೌಕಾ ಎನ್.ಸಿ.ಸಿ ವಿದ್ಯಾರ್ಥಿಗಳು ಉಡುಪಿಯ ಮಲ್ಪೆ ಬಂದರಿನಿಂದ ಮಂಗಳೂರು ದಕ್ಕೆ ಪರೀಕ್ಷಾತ್ಮಕ ಸಾಗರ ಯಾನವನ್ನು ಪ್ರಾರಂಭಿಸಿದ್ದಾರೆ. ಈ ಯಾನವು ಸಾಗರ ನೌಕಾಯಾನ ದಂಡಯಾತ್ರೆ – ಮೆನು (ಅತ್ಯಂತ ಉದ್ಯಮಶೀಲ ನೌಕಾ ಘಟಕ) 2025 ಎಂಬ ಗಣನೀಯ All India ಟ್ರೋಫಿಯ ಭಾಗವಾಗಿದೆ. ಶಿಬಿರವು ಸಾಹಸ ಮತ್ತು ಕೌಶಲ್ಯಾಭಿವೃದ್ಧಿಯ ಮಿಶ್ರಣವನ್ನು ಒದಗಿಸುತ್ತದೆ: ತೀವ್ರ ನೌಕಾ ಕೌಶಲ್ಯ ಪ್ರ್ಯಾಸಗಳು, ನದಿ ಹಾಗೂ ಸಾಗರ ನ್ಯಾವಿಗೇಶನ್ ಅಭ್ಯಾಸಗಳು, ಟ್ರೆಕ್ಕಿಂಗ್ ಮತ್ತು ಉಡುಪಿ ಜಿಲ್ಲೆಯ ಸಾಂಸ್ಕೃತಿಕ ಸ್ಥಳಗಳಿಗೆ ಭೇಟಿ, ಮಂಗಳೂರು ಬ್ಲೂ ಫ್ಲ್ಯಾಗ್ ಬೀಚ್, ತಣ್ಣೀರು ಬಾವಿ ಬಳಿಕ ಉಡುಪಿ ದಿಕ್ಕಿನಲ್ಲಿ ಹಿಂದಿರುಗುವ ಪಯಣವನ್ನು ಪ್ರಾರಂಭಿಸಲಾಯಿತು; ನಂತರ ಪ್ರಸಿದ್ಧ ಕಟೀಲ್ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದವನ್ನು ಸ್ವೀಕರಿಸಲಾಯಿತು ಮತ್ತು ಮುಲ್ಕಿಯ ಮಂಡ್ರಾ ಕ್ಲಬ್ ನಲ್ಲಿ ಸಿಬ್ಬಂದಿ ಮತ್ತು ನೌಕಾ ವಿದ್ಯಾರ್ಥಿಗಳೊಂದಿಗೆ ವಿಶ್ರಾಂತಿ ಸಮಯವನ್ನು ಕಳೆದರು. ಈ ಯಾನದ ಗುರಿಗಳು ಕೇವಲ ನೌಕಾ ತಂತ್ರಗಳನ್ನು ಕಲಿಸುವಷ್ಟಲ್ಲ. ಇದು ವಿದ್ಯಾರ್ಥಿಗಳಿಗೆ ಗಾಳಿಚಾಲಿತ…
ಮಂಗಳೂರು : ರಾಜ್ಯ ಸರಕಾರ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ‘ಮನೆ ಮನೆಗೆ ಪೊಲೀಸ್’ ಎಂಬ ಯೋಜನೆಯನ್ನು ಆರಂಭಿಸಿದೆ. ಆದರೆ ಈ ಬಗ್ಗೆ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ಇಲ್ಲದ ಕಾರಣ ಮತ್ತು ಪ್ರಚಾರದ ಕೊರತೆಯಿಂದಾಗಿ ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿಯಾಗಿದೆ. ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ವಿಶ್ವಾಸ ತುಂಬುವುದು, ಸುರಕ್ಷತೆಯ ವಾತಾವರಣ ಸೃಷ್ಟಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಆದರೆ ಬಹುತೇಕ ಮಂದಿಗೆ ಇದರ ಬಗ್ಗೆ ಸ್ಪಷ್ಟ ಮಾಹಿತಿಯೇ ಇಲ್ಲ ಹಾಗಾಗಿ ದಿಢೀರ್ ಮನೆಗೆ ಆಗಮಿಸಿ ಪ್ರಶ್ನಿಸುವ ಪೊಲೀಸರಿಗೆ ಏನು ಉತ್ತರಿಸಬೇಕು ಎಂಬ ಗೊಂದಲ ಸಾರ್ವಜನಿಕರಲ್ಲಿದೆ. ದೇಶದಲ್ಲೇ ಪ್ರಥಮ ಎಂಬಂತೆ ಮನೆ ಮನೆಗೆ ಪೊಲೀಸ್’ ಎಂಬ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೊಳಿಸುತ್ತಿದೆ. ಪ್ರತಿಯೊಂದು ಮನೆಗೂ ಪೊಲೀಸರು ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಪ್ರಯತ್ನಿಸಲಿದ್ದಾರೆ. ಈ ಯೋಜನೆಯಿಂದ ಕಾನೂನಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಪೊಲೀಸ್ ಇಲಾಖೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಲು ಕೂಡ ಸಹಾಯವಾಗಲಿದೆ. ಅಲ್ಲದೆ…
ಮಂಗಳೂರು : ನಗರದ ಸಮೀಪ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸಿ ದಾಸ್ತಾನು ಮಾಡುವ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ.ಪೊಲೀಸರು ಮರಳು ಸಾಗಾಟ ಸ್ಥಳಕ್ಕೆ ದಾಳಿ ನಡೆಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಸಾರಾಂಶ : ಪಿರ್ಯಾದಿ JNANASHEKAR ರವರು ದಿನಾಂಕ 10/10/2025 ರಂದು 12:30 ಗಂಟೆಗೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಣಂಬೂರು ಗ್ರಾಮದ ತಣ್ಣೀರುಬಾವಿ, ನಾಯರ್ ಕುದ್ರು ಎಂಬಲ್ಲಿಗೆ ಮಧ್ಯಾಹ್ನ 1.15 ಗಂಟೆಗೆ ತಲುಪಿ ನೋಡಿದಾಗ ಅಲ್ಲಿ ಕ್ಲಾಡಿ ಡಿಲೀಮಾ ಪ್ರಾಯ 62 ವರ್ಷ ಎಂಬ ವ್ಯಕ್ತಿಯು ಯಾವುದೇ ಪರವಾನಿಗೆ ಇಲ್ಲದೆ ಮಾರಾಟ ಮಾಡಿ ಅಕ್ರಮ ಸಂಪಾದನೆಯ ಉದ್ದೇಶದಿಂದ ಅಕ್ರಮವಾಗಿ ಹಿಟ್ಟಾಚಿ ಯಂತ್ರದ ಮೂಲಕ ಮರಳು ತೆಗೆದು KA19AF4769 ಗೆ ಲೋಡ್ ಮಾಡಿ ತನ್ನ ಮನೆಯ ಹಿಂದೆಯೇ ಅಕ್ರಮ ದಾಸ್ತಾನು ಇರಿಸಿದ್ದು, ಈ ಮರಳು ಸರಕಾರಕ್ಕೆ ಸೇರಿದ ಭೂಮಿಯ ಆಳದಲ್ಲಿರುವ ಮರಳನ್ನು ಅಕ್ರಮವಾಗಿ ಯಾವುದೇ ಅನುಮತಿ ಯಾ ಪರವಾನಿಗೆ ಇಲ್ಲದೆ ಅಕ್ರಮವಾಗಿ ಹಿಟ್ಟಾಚಿ ಯಂತ್ರದ ಮೂಲಕ ತೆಗೆದು,…
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 1650 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಈ ಕಛೇರಿಯ ಉಲ್ಲೇಖಿತ ಪತ್ರವನ್ನು ಗಮನಿಸಲು ಕೋರಲಾಗಿದೆ. ಸದರಿ ಪತ್ರದಲ್ಲಿ 1650 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ (275 ಕಲ್ಯಾಣ ಕರ್ನಾಟಕ ಮತ್ತು 1375 ಕಲ್ಯಾಣ ಕರ್ನಾಟಕೇತರ ಹುದ್ದೆಗಳು) ಸಂಬಂಧಪಟ್ಟ ಘಟಕಗಳಿಂದ ವರ್ಗಿಕರಣವನ್ನು ಪಡೆದು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಲಾಗಿತ್ತು ಹಾಗೂ ಘಟಕವಾರು ಹುದ್ದೆಗಳ ಹಂಚಿಕೆಯ ವಿವರವನ್ನು ಅನುಬಂಧ ಆ ರಲ್ಲಿ ಒದಗಿಸಲಾಗಿತ್ತು. ಸದರಿ 1650 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಆಡಳಿತಾತ್ಮಕ ಕಾರಣಗಳಿಂದ ಮರು ಹಂಚಿಕೆಮಾಡಲಾಗಿದ್ದು, ಘಟಕವಾರು ಹುದ್ದೆಗಳ ಮರು ಹಂಚಿಕೆಯ ವಿವರವನ್ನು ಅನುಬಂಧ-ಅರಲ್ಲಿ ಲಗತ್ತಿಸಿದೆ. ಹಾಗೂ ಸದರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಘಟಕಗಳಿಂದ ವರ್ಗಿಕರಣವನ್ನು ಪಡೆದು ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳವಂತೆ ಕೋರಲಾಗಿದೆ.
ಜಾನಪದ ಕ್ರೀಡೆ ಕಂಬಳ ನಡೆಸಲು ಬಜೆಟ್ನಲ್ಲಿ 2 ಕೋಟಿ ರೂಪಾಯಿ ಅನುದಾನ ಮೀಸಲಿರಿಸುವಂತೆ ರಾಜ್ಯ ಕಂಬಳ ಅಸೋಸಿಯೇಷನ್ ಮುಖ್ಯಮಂತ್ರಿಗೆ ಮನವಿ ಮಾಡಿದೆ ಎಂದು ಕಂಬಳ ಅಸೋಸಿಯೇಷನ್ ಅಧ್ಯಕ್ಷ ಡಾ.ಐಕಳಬಾವ ದೇವೀಪ್ರಸಾದ್ ಶೆಟ್ಟಿ ಹೇಳಿದ್ದಾರೆ. ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ನಲ್ಲಿ ಈ ಮೊತ್ತ ಮೀಸಲಿರಿಸಿ ಕಂಬಳ ಆಯೋಜಕರಿಗೆ ಒದಗಿಸಿದರೆ ಕಂಬಳಕ್ಕೆ ಪೂರಕ ಯೋಜನೆ ರೂಪಿಸಲು ಅನುಕೂಲವಾಗಲಿದೆ. ಈ ಹಿಂದೆ ಒಂದು ಕಂಬಳ ನಡೆಸಲು 5 ಲಕ್ಷ ರೂಪಾಯಿ ನೀಡಲಾಗಿತ್ತು. ಈ ಬಾರಿ 2 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತಿದೆ. 2 ಕೋಟಿ ರೂಪಾಯಿ ಮೀಸಲಿರಿಸಿದರೆ ಒಂದು ಕಂಬಳಕ್ಕೆ ತಲಾ 8 ಲಕ್ಷ ರೂಪಾಯಿಯಂತೆ ಒಟ್ಟು 25 ಕಂಬಳಗಳಿಗೆ ಅನುದಾನ ನೀಡಲು ಸಾಧ್ಯವಾಗಲಿದೆ. ಈ ಬಗ್ಗೆ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಮತ್ತೊಮ್ಮೆ ಸರ್ಕಾರಕ್ಕೆ, ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದರು. ರಾಜ್ಯ ಸರಕಾರ ಯುವಜನ ಸಬಲೀಕರಣ ಮತ್ತು ಕ್ರೀಡಾ ಪ್ರಾಧಿಕಾರದಿಂದ ರಾಜ್ಯ ಕಂಬಳ ಅಸೋಸಿಯೇಶನ್ಗೆ ಅಧಿಕೃತ ಮಾನ್ಯತೆ ನೀಡಲಾಗಿದೆ. ರಾಜ್ಯ ಕಂಬಳ…
ಉಡುಪಿ: ಕಳೆದ 14ವರ್ಷಗಳ ಹಿಂದೆ ದತ್ತು ಕೇಂದ್ರದಿಂದ ನಾಪತ್ತೆಯಾಗಿದ್ದ ವಿಶೇಷ ಚೇತನ ಬಾಲಕನನ್ನು ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿದೆ. ಉಡುಪಿ ಸಂತೆಕಟ್ಟೆಯಲ್ಲಿರುವ ಶ್ರೀಕೃಷ್ಣಾನುಗ್ರಹ ದತ್ತು ಸ್ವಿಕಾರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದ ಸಂತೋಷ (12) ಎಂಬ ಬುದ್ದಿ ಮಾಂದ್ಯ ಬಾಲಕ 2011ರ ಫೆ.23ರಂದು ರಾತ್ರಿ ಸಂಸ್ಥೆಯಿಂದ ನಾಪತ್ತೆಯಾಗಿದ್ದನು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ತನಿಖೆಯ ಪತ್ತೆ ಬಗ್ಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ಈ ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಪ್ರಸ್ತುತ ಕಾರ್ಕಳದ ವಿಜೇತ ವಿಶೇಷ ಮಕ್ಕಳ ಶಾಲೆಯಲ್ಲಿ 2018ರಿಂದ ಆಶ್ರಯ ಪಡೆದಿರುವ ಬಿಪಿನ್ ಎಂಬ ಹೆಸರಿನ ಹುಡುಗ, ನಾಪತ್ತೆಯಾಗಿದ್ದ ಸಂತೋಷನಿಗೆ ಹೋಲಿಕೆಯಾಗುತ್ತಿರುವುದು ಕಂಡುಬಂತು. ಈ ಬಗ್ಗೆ ಅವನ ಮುಖ ಚಹರೆ, ಈಗಿನ ಅಂದಾಜು ಪ್ರಾಯ, ಕುಳಿತುಕೊಳ್ಳುವ ಭಂಗಿ, ಸಂಪೂರ್ಣ ಚಲನವಲನದ ಬಗ್ಗೆ ಖಚಿತಪಡೆಸಿಕೊಂಡು, ದೂರುದಾರೆ ಮೆರಿನಾ ಎಲಿಜಬೆತ್ ಹಾಗೂ ಸಂತೋಷ ಕಾಣೆಯಾದ ಸಮಯದಲ್ಲಿ ಆ ಸಂಸ್ಥೆನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ…
ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಮಂಗಳೂರಿನ ಕಾವೂರು ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಕಾರು ಬೆಂಕಿಗಾಹುತಿಯಾಗಿದೆ. ಕದ್ರಿ ಅಗ್ನಿಶಾಮಕದಳದವರು ಆಗಮಿಸಿ, ಬೆಂಕಿ ನಂದಿಸಿದ್ದಾರೆ.










