Author: main-admin

ಉಡುಪಿ ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಇದೀಗ ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಬರೋಬ್ಬರಿ 10 ಲಕ್ಷ ರೂಪಾಯಿ ನಗದು ದೋಚಿರುವ ಘಟನೆ ರವಿವಾರ ನಡೆದಿದೆ. ಅಮಾಸೆಬೈಲು ಸಮೀಪದ ಕೊಟ್ಟಕ್ಕಿ ನಿವಾಸಿ, ಆನಂದ ಪೂಜಾರಿಯವರು ಅಮಾಸೆಬೈಲು ಮಾರುಕಟ್ಟೆಯಲ್ಲಿ ದಿನಸಿ ಅಂಗಡಿ ಮತ್ತು ಕೋಳಿ ಫಾರಂ ನಡೆಸುತ್ತಿದ್ದು, ಅಡಿಕೆ ವ್ಯಾಪಾರದಲ್ಲೂ ತೊಡಗಿಸಿಕೊಂಡಿದ್ದಾರೆ. ಮಧ್ಯಾಹ್ನ 3 ರಿಂದ 4 ಗಂಟೆಯ ನಡುವಿನ ಅವಧಿಯಲ್ಲಿ, ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ ನುಗ್ಗಿದ ಕಳ್ಳರು ಕಪಾಟಿನ ಬಾಗಿಲು ಮುರಿದು ಒಳಗಿದ್ದ ಹಣವನ್ನು ದೋಚಿದ್ದಾರೆ. ಬಲ್ಲ ಮೂಲಗಳ ಪ್ರಕಾರ, ಕಳುವಾದ 10 ಲಕ್ಷ ರೂಪಾಯಿ ಮೊತ್ತವು ಆನಂದ ಪೂಜಾರಿಯವರು ಇತ್ತೀಚೆಗಷ್ಟೇ ಅಡಿಕೆ ಮಾರಾಟ ಮಾಡಿ ತಂದಿದ್ದ ಹಣ ಎನ್ನಲಾಗಿದೆ. ಕಳ್ಳರಿಗೆ ಈ ಹಣದ ಬಗ್ಗೆ ಮೊದಲೇ ಮಾಹಿತಿ ಇತ್ತೇ ಎಂಬ ಸಂಶಯವೂ ವ್ಯಕ್ತವಾಗಿದೆ. ಕಳ್ಳರು ಅತ್ಯಂತ ಚಾಲಾಕಿತನದಿಂದ ವರ್ತಿಸಿದ್ದು, ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ತಮ್ಮ ಗುರುತು ಪತ್ತೆಯಾಗಬಾರದೆಂಬ ಉದ್ದೇಶದಿಂದ ಸಿಸಿಟಿವಿ…

Read More

ಉಡುಪಿ: ಅಲೆವೂರು, ಬೆಳ್ಳೆ ಮತ್ತು ಕುಂತಲ್‌ನಗರ ಪ್ರದೇಶಗಳಲ್ಲಿ ಮಕ್ಕಳ ಅಪಹರಣಕಾರರ ಬಗ್ಗೆ ಸುಳ್ಳು ವರದಿಗಳನ್ನು ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಎಚ್ಚರಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಸಂದೇಶವು “ಮಕ್ಕಳ ಅಪಹರಣಕಾರರು, ವೇಷ ಧರಿಸಿ ಅಲೆಯೂರು, ಬೆಳ್ಳೆ ಮತ್ತು ಕುಂತಲ್‌ನಗರ ಪ್ರದೇಶಗಳಲ್ಲಿ ಓಡಾಡುತ್ತಿದ್ದಾರೆ. ಬೆಳಿಗ್ಗೆ ಮತ್ತು ಸಂಜೆ ಮಕ್ಕಳು ಆಟೋಗಳಲ್ಲಿ ಹೋಗುವಾಗ ಪೋಷಕರು ತಮ್ಮ ಮಕ್ಕಳೊಂದಿಗೆ ಇರಬೇಕೆಂದು ಒತ್ತಾಯಿಸಲಾಗಿದೆ. ಮಕ್ಕಳನ್ನು ಎಚ್ಚರಿಕೆಯಿಂದ ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ಹೇಳುತ್ತದೆ. ಈ ವರದಿಗಳು ಸಂಪೂರ್ಣವಾಗಿ ಸುಳ್ಳು ಎಂದು ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಸ್ಪಷ್ಟಪಡಿಸಿದ್ದಾರೆ ಮತ್ತು ಸಾರ್ವಜನಿಕರು ಅಂತಹ ಸಂದೇಶಗಳನ್ನು ಫಾರ್ವರ್ಡ್ ಮಾಡದಂತೆ ಒತ್ತಾಯಿಸಿದ್ದಾರೆ. “ಯಾರಾದರೂ ಅಂತಹ ಸಂದೇಶಗಳನ್ನು ಹಂಚಿಕೊಳ್ಳುತ್ತಿರುವುದು ಕಂಡುಬಂದರೆ, ದಯವಿಟ್ಟು ತಕ್ಷಣ ಅಧಿಕಾರಿಗಳಿಗೆ ತಿಳಿಸಿ. ಹೊಣೆಗಾರರ ​​ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಔಪಚಾರಿಕ ಪ್ರಕರಣ ದಾಖಲಿಸಲಾಗುವುದು” ಎಂದು ಅವರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಮುದಾಯದ ಜಾಗರೂಕತೆಯ ಮಹತ್ವವನ್ನು…

Read More

ಉಡುಪಿ : ಮಾದಕ ವಸ್ತು ಅಕ್ರಮ ಸಾಗಾಟಕ್ಕೆ ಸಂಬ0ಧಿಸಿ ಇಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಮಾ.6ರಂದು ಸಂಜೆ ವೇಳೆ ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಎಂಬಲ್ಲಿ ಬಂಧಿಸಿದ್ದಾರೆ. ಬೆಳಪು ಗ್ರಾಮದ ದರ್ಗಾ ಬಳಿಯ ನಿವಾಸಿ ಝಹೀರ್ ಅಹ್ಮದ್(66) ಮತ್ತು ಬೆಳಪು ಸ್ಟಡಿ ಸರ್ಕಲ್ ನಿವಾಸಿ ಸಯ್ಯದ್ ಶಮೀಮ್(28) ಬಂಧಿತ ಆರೋಪಿಗಳು. ಇವರಿಂದ ೨.೮೩ ಗ್ರಾಂ ತೂಕದ MDMA ಮಾದಕ ವಸ್ತು, ಮೊಬೈಲ್ ಪೋನ್ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಇವರು ಕಾರಿನಲ್ಲಿ ಅಕ್ರಮವಾಗಿ ಮಾದಕ ವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಕಾರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಮಾದಕ ವಸ್ತು ಸಾಗಿಸುತ್ತಿರುವುದು ಕಂಡುಬAತು. ಅದರಂತೆ ಕಾರಿನಲ್ಲಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಉಡುಪಿ ಜಿಲ್ಲಾಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸುಧಾಕರ ಎಸ್.ನಾಯ್ಕ್ ನಿರ್ದೇಶನದಂತೆ, ಕಾರ್ಕಳ ಪೊಲೀಸ್ ಉಪಾಧೀಕ್ಷಕ ವಿಜಯ್ ಪ್ರಸಾದ್ ಮತ್ತು ಕಾಪು ವೃತ್ತ ನಿರೀಕ್ಷಕ ಅಝಮತ್ ಆಲಿ ಮಾರ್ಗದರ್ಶನದಲ್ಲಿ ಶಿರ್ವ ಪೊಲೀಸ್…

Read More

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಕಂಬಳೆಬೆಟ್ಟು ನೂಜಿ ಎಂಬಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸಿಡಿಮದ್ದು ತಯಾರಿಸುತ್ತಿದ್ದ ವೇಳೆ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ​ವಿಟ್ಲ ಮುಡ್ನೂರು ಗ್ರಾಮದ ನಿವಾಸಿ ಅಬ್ದುಲ್ ಗಫೂರ್ (51) ಎಂದು ಗುರುತಿಸಲಾಗಿದೆ. ಈತನು ಯಾವುದೇ ಪರವಾನಗಿ ಇಲ್ಲದೆ ಸರ್ಕಾರಿ ಜಮೀನಿನಲ್ಲಿ ಅಪಾಯಕಾರಿ ಸ್ಫೋಟಕಗಳನ್ನು ತಯಾರಿಸುತ್ತಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.​ ಶನಿವಾರ ಆರೋಪಿಯನ್ನು ದಸ್ತಗಿರಿ ಮಾಡಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Read More

ಮಂಗಳೂರು: ಕೊಟ್ಟಾರ ಚೌಕಿ ಬಳಿ ರಸ್ತೆ ಬದಿಯಲ್ಲಿ ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಆರೋಪದಡಿ ಕೊಡಿಯಾಲಬೈಲು ನಿವಾಸಿ ರೋಶನ್ ಎಂಬಾತನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಗಸ್ತಿನಲ್ಲಿದ್ದಾಗ ಮಾ.5ರಂದು ರಾತ್ರಿ 7 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಸಿಗರೇಟು ಸೇದುತ್ತಿದ್ದ ಯುವಕನನ್ನು ವಿಚಾರಿಸಿದ್ದು, ಆತನ ವರ್ತನೆ ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಮತ್ತಷ್ಟು ವಿಚಾರಿಸಿದಾಗ ಸಿಗರೇಟಿನ ಒಳಗಡೆ ಮಾದಕ ದ್ರವ್ಯ ತುಂಬಿಸಿ ಸೇದಿರುವುದನ್ನು ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಆತನ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Read More

ಮಂಗಳೂರು: ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಕೊಲೆ ಪ್ರಕರಣವೊಂದರ ಆರೋಪಿ, ಕುಖ್ಯಾತ ರೌಡಿಶೀಟರ್‌ನ ಸಹಚರನನ್ನು ಮಂಗಳೂರು ನಗರ ಅಪರಾಧ ಪತ್ತೆ ದಳ ಪೊಲೀಸರು ಬಂಧಿಸಿ ಮುಂದಿನ ತನಿಖೆಗಾಗಿ ಸುರತ್ಕಲ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತನನ್ನು ಬಳ್ಳಾರಿ ಮೂಲದ ಸೂಫೀಯಾನ್ ಹುಸೇನ್ ಅಲಿಯಾಸ್ ಕೊಟ್ರೇಶಿ (31) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಶ್ಯಾಮ ಪುರದ ಬೇಕರಿ ಸಮೀಪ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸೂಫೀಯಾನ್ ಕಳೆದ ಹಲವು ವರ್ಷಗಳಿಂದ ಕಲಬುರಗಿ, ಬಳ್ಳಾರಿ, ಮುಂಬೈ ಮತ್ತು ಆಂಧ್ರ ಪ್ರದೇಶದಾದ್ಯಂತ ಅಲೆದಾಡಿ ಅಂತಿಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ. ಈ ಅವಧಿಯಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿ ಹೆಸರನ್ನು ‘ಹುಸೇನ್’ ಎಂದು ಬದಲಾಯಿಸಿಕೊಂಡಿದ್ದ ಆತ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಮತ್ತು ಚಾಲನಾ ಪರವಾನಗಿಯಂತಹ ಅಧಿಕೃತ ದಾಖಲೆಗಳನ್ನು ಪಡೆದು ಸ್ಥಳೀಯ ಮಹಿಳೆಯೊಬ್ಬರನ್ನು ಮದುವೆಯಾಗಿ ಹೊಸ ಗುರುತಿನೊಂದಿಗೆ ಜೀವನ ನಡೆಸುತ್ತಿದ್ದ. ವೃದ್ಧೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಕಳವು ಮಾಡಿ ಆಕೆಯನ್ನು ಕೊಲೆಗೈದ ಪ್ರಕರಣದಲ್ಲಿ ಈತ ಈ ಹಿಂದೆ ಜೈಲು ಪಾಲಾಗಿದ್ದ. ಜೈಲಿನಲ್ಲಿದ್ದಾಗ ತನ್ನನ್ನು ಸೂಫೀಯಾನ್…

Read More

ಬೆಳ್ತಂಗಡಿ: ವಿದ್ಯಾರ್ಥಿ ಜೀವನದ ಪ್ರಮುಖ ಹಂತಗಳಲ್ಲಿ ಪಿಯು ಶಿಕ್ಷಣವೂ ಒಂದು ಪ್ರಮುಖ ಹಂತವಾಗಿದೆ. “10ನೇ ತರಗತಿಯ ಬಳಿಕ ಮುಂದೇನು?” ಎಂಬ ಪ್ರಶ್ನೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಾಮಾನ್ಯವಾಗಿ ಮೂಡುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಸರಿಯಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ (Talent Test) ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಮಾರ್ಚ್ 8ರಿಂದ ಮಾರ್ಚ್ 11ರವರೆಗೆ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ತಮ್ಮ ಅನುಕೂಲಕರ ದಿನಗಳಲ್ಲಿ ಬಂದು ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವ ಸಲುವಾಗಿ ನಾಲ್ಕು ದಿನಗಳ ಕಾಲ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಪ್ರತಿದಿನ ಬೆಳಗ್ಗೆ 10.00 ರಿಂದ 11.10 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 3.40 ರವರೆಗೆ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಕ್ಯಾಂಪಸ್‌ನಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳು (Multiple Choice Questions) ಇರುತ್ತವೆ. ವಿಜ್ಞಾನ…

Read More

ವಿಟ್ಲ: ಕೊಳ್ಳಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್ (12) ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ಸಂಭವಿಸಿದೆ. ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುವ ವೇಳೆ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಆಸೀಪ್‌ನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಳಿತ್ತನೂಜಿಯ ವಿದ್ಯಾರ್ಥಿಯಾಗಿದ್ದ ಆಸಿಪ್ ಶಾಲೆಯ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಪ್ರತಿಭಾವಂತ ಬಾಲಕನಾಗಿದ್ದನು ಎಂದು ತಿಳಿದುಬಂದಿದೆ. ತಾಯಿಗೆ ಏಕೈಕ ಮಗನಾಗಿದ್ದ ಆಸಿಪ್‌ನ ಅಕಾಲಿಕ ನಿಧನವು ಕುಟುಂಬದವರನ್ನು ತೀವ್ರ ಆಘಾತಕ್ಕೆ ಗುರಿಮಾಡಿದ್ದು, ಬಂಧುಬಳಗ ಹಾಗೂ ಗ್ರಾಮಸ್ಥರಲ್ಲೂ ದುಃಖದ ವಾತಾವರಣ ನಿರ್ಮಾಣವಾಗಿದೆ.

Read More

ಬಂಟ್ವಾಳ : ಎರಡು ದಿನಗಳ ಹಿಂದೆ ಫರಂಗಿಪೇಟೆ ಸಮೀಪ ನೇತ್ರಾವತಿ ನದಿ ದಡದಲ್ಲಿ ಆಧಾರ್‌ ಕಾರ್ಡ್‌ ರಾಶಿ ಪತ್ತೆಯಾದ ಘಟನೆಗೆ ಸಂಬಂಧಿಸಿ ಫರಂಗಿಪೇಟೆ ಅಂಚೆ ಇಲಾಖೆ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಪುದು ಗ್ರಾಮದ ಸುಜೀರ್ ಎಂಬಲ್ಲಿ ನೇತ್ರಾವತಿ ನದಿ ದಡದಲ್ಲಿ ಮಾ.3ರಂದು ಸಮಯ ಸಂಜೆ ಸ್ಥಳೀಯ ನಿವಾಸಿಗಳ 2013ರಿಂದ 2023ರವರೇಗಿನ ಅಂದಾಜು 500 ಮೂಲ ಆಧಾರ್ ಕಾರ್ಡ್‌ಗಳು ಪತ್ತೆಯಾಗಿದ್ದವು. ಆಧಾರ್ ಕಾರ್ಡ್ ಪ್ರತಿಗಳಲ್ಲಿ ಫರಂಗಿಪೇಟೆಯ ಪೋಸ್ಟ್ ಆಫೀಸಿನ ಸೀಲ್ ಪತ್ತೆಯಾಗಿದ್ದು, ಮೂಲ ಆಧಾರ್ ಕಾರ್ಡ್ ಪ್ರತಿಗಳು ಸಾರ್ವಜನಿಕರ ಮನೆಗೆ ತಲುಪದೆ, ನೇತ್ರಾವತಿ ನದಿ ಹೇಗೆ ಬಂತು ಎಂಬ ಪ್ರಶ್ನೆ ಎದುರಾಗಿದೆ. ಆಧಾರ್‌ ಕಾರ್ಡ್‌ಗಳು ಪ್ರಸ್ತುತ ಗ್ರಾಮ ಪಂಚಾಯತ್ ಸ್ವಾಧೀನದಲ್ಲಿದೆ. ಸಂಬಂಧಪಟ್ಟ ಅಂಚೆ ಇಲಾಖೆಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಪತ್ರ ಬರೆಯುವಂತೆ ಪಾಣೆಮಂಗಳೂರು ಕಂದಾಯ ನಿರೀಕ್ಷಕರು ತಹಸೀಲ್ದಾರ್‌ಗೆ ವರದಿ ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಧಾರ್ ಕಾರ್ಡ್‌ಗಳಲ್ಲಿ ಫರಂಗಿಪೇಟೆಯ…

Read More

ಕಾರ್ಕಳ ನಗರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ನಗರ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿರುವ ಇಬ್ರಾಹಿಂ ಯಾನೆ @ ಇಬ್ಬು ಎಂಬುವವನು ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದನು. ಕಾರ್ಕಳ ನಗರ ಠಾಣೆಯ ವಾರಂಟ್ ಸಿಬ್ಬಂದಿಗಳಾದ ಎಚ್‌ಸಿ 2096 ಲೋಕೇಶ್ ಹಾಗೂ ಎಚ್‌ಸಿ 83 ಸಂಜಯ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಬಂಧಿಸಿ ಕಾರ್ಕಳಕ್ಕೆ ಕರೆತಂದಿದ್ದಾರೆ. ಬಂಧಿತನನ್ನು ಕಾರ್ಕಳದ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾ

Read More