Author: main-admin

ಮಂಗಳೂರು :ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡಬಾರದಂದು ಎಂದು ಒತ್ತಾಯಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಿಂದು ಜನಜಾಗೃತಿ ಸಮಿತಿಯ ಮಂಗಳೂರು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು. ಫೆಬ್ರವರಿ 14ರಂದು ಪ್ರೇಮಿಗಳ ದಿನಾಚರಣೆಯಂದು ಪ್ರೀತಿ,ಪ್ರೇಮದ ಹೆಸರಿನಲ್ಲಿ ಸಮಾಜದಲ್ಲಿ ಅನಾಚಾರಗಳು, ಅತ್ಯಾಚಾರಗಳು ಹೆಣ್ಣುಮಕ್ಕಳನ್ನು ಹೆಚ್ಚಾಗುತ್ತಿದೆ. ಹೆಣ್ಮಕ್ಕಳನ್ನು ಚುಡಾಯಿಸುವುದು, ಕೆಟ್ಟ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಘಟನೆಗಳು ನಡೆಯುತ್ತಿದೆ. ಇದು ನಮ್ಮ ಹಿಂದು ಸಂಸ್ಕೃತಿ ಅಲ್ಲ. ಹೀಗಾಗಿ ಇಂತಹ ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡಬಾರದಂದು ಎಂದು ಒತ್ತಾಯಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಿಂದು ಜನಜಾಗೃತಿ ಸಮಿತಿಯ ಮಂಗಳೂರು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಸಮಿತಿಯ ಭವ್ಯ ಗೌಡ ಅವರು, ಹಿಂದೂ ಸಂಸ್ಕೃತಿ ಅಲ್ಲದ ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡಬಾರದು. ಯುವಜನತೆ ಇಂದು ದಾರಿ ತಪ್ಪುತ್ತಿದ್ದಾರೆ. ಶಾಲಾ ಕಾಲೇಜುಗಳಲ್ಲೂ ಕೂಡಾ ವಿಶೇಷ ಪೊಲೀಸ್ ದಳ ರಚನೆ ಮಾಡಬೇಕು ಎಂದರು. 2019ರ ಫೆಬ್ರವರಿ 14ರಂದೇ ಪುಲ್ವಾಮಾ ದಾಳಿ ನಡೆದು ನಾವು ಯೋಧರನ್ನು ಕಳೆದುಕೊಂಡಿದ್ದೇವೆ. ಅದೇ ದಿನವನ್ನು…

Read More

ಮಂಗಳೂರು : ‘ಪೊಲೀಸ್ ಅಧಿಕಾರಿಗಳ ಭ್ರಷ್ಟಾಚಾರದ ಕುರಿತು ನಿರ್ದಿಷ್ಟ ಪ್ರಕರಣದ ಬಗ್ಗೆ ಪ್ರಾಮಾಣಿಕವಾಗಿ ದೂರು ನೀಡಿದರೆ ಆ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ’ ಎಂದು ಎಡಿಜಿಪಿ (ಕಾನೂನು ಸುವ್ಯವಸ್ಥೆ ) ಅಲೋಕ್ ಕುಮಾರ್ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಪೊಲೀಸ್‌ ಕಾರ್ಯನಿರ್ವಹಣೆಗೆ ಸಂಬಂಧಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ ಬಳಿಕ ಅವರು ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದರು. ‘ಪೊಲೀಸ್‌ ಅಧಿಕಾರಿಗಳ ವಿರುದ್ಧ ಎಷ್ಟು ಮಂದಿ ಆರೋಪ ಮಾಡಿದ್ದಾರೆ ಎನ್ನುವುದು ನಮಗೆ ಮುಖ್ಯವಲ್ಲ. ಆ ಆರೋಪಗಳನ್ನು ನಿರ್ದಿಷ್ಟಪಡಿಸಿದರೆ ತನಿಖೆ ನಡೆಸಬಹುದು. ಪೊಲೀಸ್ ಅಧಿಕಾರಿಗಳ ವಿರುದ್ಧ ನಿರ್ದಿಷ್ಟ ದೂರುಗಳಿದ್ದರೆ ನೀಡಬಹುದು. ಇದೇ 11ರಂದು (ಶುಕ್ರವಾರ) ಬೆಳಿಗ್ಗೆೆ 11ಕ್ಕೆ ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆಯುವ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲೂ ದೂರು ನೀಡಬಹುದು’ ಎಂದರು. ಜಿಲ್ಲೆೆಯಲ್ಲಿ ಕೋಮು ಆಧರಿತ ಕೊಲೆಗಳ ತಡೆಗೆ ಕೈಗೊಂಡ ಕ್ರಮಗಳ ಕುರಿತು ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ‘ ನಗರ ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯ ಸುರತ್ಕಲ್, ಬಂದರ್‌, ಉಳ್ಳಾಲ ಠಾಣೆಗಳ…

Read More

ಬೆಂಗಳೂರು: ಇತ್ತೀಚೆಗೆ ಜೈಲು ಶಿಕ್ಷೆಗೆ ಗುರಿಯಾಗಿರುವ ಅನುಭವ ಖ್ಯಾತಿಯ ನಟಿ ಅಭಿನಯ ಹಾಗೂ ಆಕೆಯ ಕುಟುಂಬದ ಮೇಲೆ ಲುಕೌಟ್ ನೋಟಿಸ್ ಜಾರಿಯಾಗಿದೆ. ಅತ್ತಿಗೆ ವರಲಕ್ಷ್ಮಿ ಅವರು ನಟಿ ಅಭಿನಯ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲು ಮಾಡಿದ್ದರು. ಅಭಿನಯ ಕುಟುಂಬ ವರದಕ್ಷಿಣೆ ಹಣ ಪಡೆದಿದ್ದಲ್ಲದೆ ಲಕ್ಷ್ಮಿದೇವಿಯವರನ್ನು ಪೋಷಕರ ಮನೆಗೆ ಅಟ್ಟಿದ್ದರು. 80 ಸಾವಿರ ರೂ. ನಗದು ಹಾಗೂ 250 ಗ್ರಾಂ ಚಿನ್ನಾಭರಣ ವರದಕ್ಷಿಣೆ ರೂಪವಾಗಿ ಪಡೆದಿರುವುದು ಕೂಡ ಸಾಬೀತಾಗಿತ್ತು. ಸೆಷನ್ಸ್ ಕೋರ್ಟ್ ಅಭಿನಯ, ತಾಯಿ ಹಾಗೂ ಸಹೋದರನಿಗೆ ಜೈಲು ಶಿಕ್ಷೆ ವಿಧಿಸಿತ್ತು. ಯಾವಾಗ ಜೈಲು ಶಿಕ್ಷೆ ಪ್ರಕಟವಾಯಿತೋ, ಅಂದಿನಿಂದ ಅಭಿನಯ ಮತ್ತು ಕುಟುಂಬದ ಸದಸ್ಯರು ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದಾರೆ. ಈ ಮೊದಲು ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಅಭಿನಯ, ಸಹೋದರ ಹಾಗೂ ತಾಯಿ ಹೈಕೋರ್ಟ್‌ಗೆ ಹೋಗಿದ್ದರು. ಆದರೆ ಹೈಕೋರ್ಟ್ ಸಹ ಸೆಷನ್ಸ್ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು. ಈ ಹಿನ್ನೆಲೆ ಆರೋಪಿಗಳನ್ನು ಬಂಧಿಸಬೇಕಿತ್ತು. ಆದರೆ ಪೊಲೀಸರ ಕೈಗೆ ಅವರು…

Read More

ಬೆಂಗಳೂರು: 17 ವರ್ಷದ ಕಬಡ್ಡಿ ಆಟಗಾರ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ಮೃತರನ್ನು ಹುಬ್ಬಳ್ಳಿ ಮೂಲದ ಸಂಗೀತಾ ಎಂದು ಗುರುತಿಸಲಾಗಿದೆ. ಆಕೆ ಖಾಸಗಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದಳು. ಬಳಗಾರನಹಳ್ಳಿ ನಿವಾಸಿಯಾದ ಸಂಗೀತಾ ಅವರು ಕ್ರೀಡಾ ಕೂಟದ ಭಾಗವಾಗಿ ಕಬಡ್ಡಿ ಪಂದ್ಯದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದರು. ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವಳು ತುಂಬಾ ಫಿಟ್ ವಿದ್ಯಾರ್ಥಿಯಾಗಿರುವುದರಿಂದ ಈ ಘಟನೆಯು ಆಘಾತವನ್ನು ಉಂಟುಮಾಡಿತು.

Read More

ಸುಳ್ಯದ ಪುರಭವನದಲ್ಲಿ ನಡೆಯಬೇಕಾಗಿದ್ದ ಮದುವೆಯೊಂದು ವರ ಬಾರದ ಕಾರಣ ರದ್ದುಗೊಂಡ ಘಟನೆ ವರದಿಯಾಗಿದ್ದು , ವರನ ಮೊದಲ ಪತ್ನಿ ಗಂಡನ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ನಡೆದಿದೆ. ಸುಳ್ಯದ ಉಬರಡ್ಕ ಗ್ರಾಮದ ಯುವತಿಗೆ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಯುವಕನೊಂದಿಗೆ ಮದುವೆ ನಿಗದಿಯಾಗಿತ್ತು. ಫೆ.9ರಂದು ಕೆ.ವಿ.ಜಿ. ಪುರಭವನದಲ್ಲಿ ಮದುವೆ ನಡೆಯಬೇಕಾಗಿತ್ತು. ಮದುಮಗನ ಕಡೆಯ ಬಂದುಮಿತ್ರರು ಆಗಮಿಸಿದ್ದು ಟೌನ್‌ಹಾಲ್ ಅಲಂಕಾರವೂ ನಡೆದಿತ್ತು. ಫೆ.8ರಂದು ವಧುವಿನ ಮನೆಯಲ್ಲಿ ಡಿ.ಜೆ. ಅಳವಡಿಸಿ ಮದುವೆ ಸಂಭ್ರಮ ಕಳೆಗಟ್ಟಿತ್ತು. ವಧುವಿನ ಕಡೆಯವರು ಮದುವೆಗಾಗಿ ಹಾಲ್ ಗೆ ಆಗಮಿಸಿ ಮದುವೆ ಸಿದ್ಧತೆ ನಡೆಸುತ್ತಿದ್ದರು. 500 ಮಂದಿಗೆ ಭೋಜನದ ವ್ಯವಸ್ಥೆ ಕೂಡ ಮಾಡಲಾಗಿತ್ತು. ಇದ್ದಕ್ಕಿದ್ದಂತೆ ವರ ಕಾಣುತ್ತಿಲ್ಲ ಎಂದು ಮಾಹಿತಿ ಬಂದಿದ್ದು ಮದುಮಗನ ಫೋನ್ ನಂಬರಿಗೆ ಕರೆ ಮಾಡಿದಾಗ ಸ್ವಿಚ್‌ಆಫ್ ಆಗಿತ್ತು. ಹೀಗಾಗಿ ವಧುವಿನ ಕಡೆಯವರು ಕಂಗಾಲಾಗಿದ್ದರು. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಯಿಂದ ವರನಿಗೆ ಈ ಹಿಂದೆ ಒಂದು ಮದುವೆಯಾಗಿದ್ದು,‌ ಆತನ…

Read More

ಮಂಗಳೂರು : ಫಾಝಿಲ್ ಹತ್ಯೆ ಆರೋಪಿಗಳಿಗೆ ನೆರವು ನೀಡುವಂತೆ ವ್ಯಕ್ತಿಯೊಬ್ಬ ಕರೆ ಮಾಡಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 2ರಂದು ಬೆಳಿಗ್ಗೆ 11.40ರ ಸಮಯದಲ್ಲಿ ನಾನು ಕೋಟೆಕಾರ್ ಗ್ರಾಮದ ಮಾಡೂರು ಸೊವುರ್ ಎಂಬಲ್ಲಿ ಇದ್ದಾಗ ಹರ್ಷಿತ್ ಎಂಬಾತ ಮೊಬೈಲ್‌ನಿಂದ ಕರೆ ಮಾಡಿದ್ದ. ಸುರತ್ಕಲ್‌ನಲ್ಲಿ ಫಾಝಿಲ್ ಎಂಬಾತನನ್ನು ಕೊಲೆ ಮಾಡಿ ಜೈಲಿಗೆ ಹೋಗಿ ಜಾಮೀನಿನಲ್ಲಿ ಹೊರಗೆ ಬಂದಿದ್ದೇನೆ. ನನಗೆ ಮತ್ತು ಜೈಲಿನೊಳಗೆ ಇರುವವರಿಗೆ ನೀವು ಹಣದ ಸಹಾಯ ಮಾಡಬೇಕು’ ಕೇಳಿದ್ದ. ‘ಮುಂದೆ ಸಮಸ್ಯೆಯಾದರೆ ನಮ್ಮನ್ನು ದೂರ ಬೇಡಿ’ ಎಂದು ಹೆದರಿಸಿದ್ದ’ ಎಂದು ವ್ಯಕ್ತಿಯೊಬ್ಬರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ‘ಈ ವ್ಯಕ್ತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ದೂರು ನೀಡಿರುವ ವ್ಯಕ್ತಿ ಕೋರಿದ್ದಾರೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Read More

ಬೆಂಗಳೂರು: ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಅಧಿಕಾರಿಗಳ ವರ್ಗಾವಣೆಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು 10 ತಹಶೀಲ್ದಾರ್ ಅವರನ್ನು ವರ್ಗಾವಣೆ ( Tahsildar Transfer ) ಮಾಡಿ ಆದೇಶಿಸಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತ ಹಾಗೂ ಮುಂದಿನ ಆದೇಶದವರೆಗೆ ತಹಶೀಲ್ದಾರ್ ಗಳನ್ನು ನಿಯೋಜಿಸಿದಂತ ಸ್ಥಳಕ್ಕೆ ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದ್ದಾರೆ.

Read More

ಗಾಜಿಯಾಬಾದ್‌;ಕೋರ್ಟ್‌ ಆವರಣದಲ್ಲಿ ವಕೀಲರು, ಪೊಲೀಸರು ಮತ್ತು ಶೂ ಪಾಲೀಶ್‌ ಮಾಡುತ್ತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ನಡೆದಿದೆ. ಶೂ ಪಾಲಿಶ್‌ ಮಾಡುತ್ತಿದ್ದ ವ್ಯಕ್ತಿಯ ಕಿವಿಯನ್ನು ಚಿರತೆ ಹರಿದು ಹಾಕಿದೆ.ಆತ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿರತೆ ಪ್ರವೇಶಿಸಿದ ಕೂಡಲೇ ಹಳೆ ಕಟ್ಟಡದ ಕೋರ್ಟ್‌ ಕೋಣೆಗಳನ್ನು ಖಾಲಿ ಮಾಡಲಾಗಿತ್ತು.ಚಿರತೆ ದಾಳಿ ಬಳಿಕ‌ ಬಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ದಾಳಿಯಿಂದ ಇಡೀ ನ್ಯಾಯಾಲಯದಲ್ಲಿ ಆತಂಕ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

Read More

ಬೆಂಗಳೂರು : ಫೆ. 10 ರಿಂದ 24 ರವರೆಗೆ ರಾಜ್ಯ ಬಜೆಟ್ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆ ವಿಧಾನಸೌಧದ ಸುತ್ತಾಮುತ್ತಾ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿಧಾನಸೌಧದ ಸುತ್ತಾಮುತ್ತಾ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, 5 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಮೆರವಣಿಗೆ, ಪ್ರತಿಭಟನೆಗೆ, ಸಭೆ ಆಯೋಜನೆಗೆ ನಿಷೇಧ ಹೇರಲಾಗಿದೆ. ಈ ವೇಳೆ ಯಾವುದೇ ಪ್ರತಿಕೃತಿಗಳ ದರ್ಶನ ಹಾಗೂ ದಹನ ಮಾಡುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಫೆ.10 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆ.17 ಕ್ಕೆ ಬಜೆಟ್ ಮಂಡನೆಯಾಗಲಿದೆ. ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ, ಸಾರ್ವಜನಿಕ ನೆಮ್ಮದಿಗೆ ಭಂಗ, ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ ರೆಡ್ಡಿಯವರು ಐಪಿಸಿ ಸೆಕ್ಷನ್ 144 ರ ಪ್ರಕಾರ ಪ್ರತಿಬಂಧಕಾಜ್ಞೆ ಜಾರಿಮಾಡಿ ಆದೇಶಿಸಿದ್ದಾರೆ.

Read More

ಪುತ್ತೂರು: ಸಿ ಮತ್ತು ಡಿ ದರ್ಜೆ ಸ್ಥಾನಮಾನಕ್ಕೆ ಒತ್ತಾಯಿಸಿ ಫೆ.6ರಿಂದ ಬೆಂಗಳೂರಿನ ಫ್ರೀಡಂ‌ ಪಾರ್ಕ್ ನಲ್ಲಿ ನಡೆಯುತ್ತಿರುವ ಗ್ರಾ.ಪಂ.ನೌಕರರ ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಸರಕಾರ ಸ್ಪಂದಿಸದೇ ಇದ್ದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಎಚ್ಚರಿಸಿದ್ದಾರೆ. ಗ್ರಾಮ ಪಂಚಾಯಿತಿ ನೌಕರರಿಂದ ಫ್ರೀಡಂ ಪಾರ್ಕ್​ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ನನ್ನ ಬೆಂಬಲ ಇದೆ, ಗ್ರಾಮೀಣ ಮಟ್ಟದಲ್ಲಿ ಸರಕಾರದ ಅಭಿವೃದ್ಧಿ ಕೆಲಸಗಳಿಗೆ ಕೈ ಜೋಡಿಸುವುದೇ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಗ್ರಾಮ ಪಂಚಾಯತ್ ಕೆಲಸಗಾರರು. ಹಳ್ಳಿಗಳಲ್ಲಿ ಇವರನ್ನೆಲ್ಲಾ ಸರಕಾರಿ ನೌಕರರೆಂದೇ ಜನ ಪರಿಗಣಿಸುತ್ತಾರೆ. ಆದರೆ ಕಳೆದ ಮೂವತ್ತು ಮೂವತ್ತೈದು ವರ್ಷಗಳಿಂದಲೂ ಈ ನೌಕರರ ಪಾಡು ಕೇಳುವವರಿಲ್ಲ. ಗ್ರಾಮ ಪಂಚಾಯತ್ ಗಳಲ್ಲಿ ಕೆಲಸ ನಿರ್ವಹಿಸಿ ಪಂಚಾಯತ್ ಸುಸೂತ್ರವಾಗಿ ಕೆಲಸ ನಿರ್ವಹಿಸಲು ನೆರವಾಗುತ್ತಿರುವ ಕ್ಲರ್ಕ್ ಗಳು, ಡಾಟಾ ಎಂಟ್ರಿ ಆಪರೇಟರ್ ಗಳು, ನೀರು ಬಿಡುವವರು, ಬಿಲ್…

Read More