Author: main-admin

ಮಂಗಳೂರು: ನಗರದ ಸಿಟಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಫುಡ್ ಪಾಯಿಸನ್ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಂಡುಬಂದ ಹಿನ್ನೆಲೆಯಲ್ಲಿ ದ.ಕ ಆರೋಗ್ಯ ಇಲಾಖೆ ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್​​ಐಆರ್ ದಾಖಲಿಸಿದೆ. ಆಸ್ಪತ್ರೆಗೆ ದಾಖಲಾಗಿದ್ದ 137 ಮಂದಿ ವಿದ್ಯಾರ್ಥಿನಿಯರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಯ ಕಡೆಗೆ ಹೆಜ್ಜೆ ಹಾಕಿದ್ದಾರೆ. ಮಂಗಳೂರು ನಗರದ ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್‌ನ 137 ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಕದ್ರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್ ಅವರು ನೀಡಿರುವ ದೂರಿನಂತೆ ಈ ಪ್ರಕರಣ ದಾಖಲು ಮಾಡಲಾಗಿದೆ. ಯಾವುದೋ ಸಂಶಯಾಸ್ಪದ ವಿಷಹಾರಿ ಆಹಾರವನ್ನು ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ನೀಡಲಾಗಿದೆ ಮತ್ತು ಆಹಾರ ತಯಾರಿಕೆ ಹಾಗೂ ಪೂರೈಕೆಯಲ್ಲಿ ಶುಚಿತ್ವ ಕಾಪಾಡದೆ ನಿರ್ಲಕ್ಷ್ಯ ವಹಿಸಲಾಗಿದೆ. ಜಿಲ್ಲಾಡಳಿತಕ್ಕೆ ಮಾಹಿತಿ ನೀಡದ ಕಾಲೇಜು ಆಡಳಿತ ಮಂಡಳಿ ಆಸ್ವತ್ರೆಗೆ ದಾಖಲಿಸುವ ಸಂದರ್ಭ ಸೂಕ್ತ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ವರದಿ ಮಾಡದೇ ಲೋಪ…

Read More

ಟರ್ಕಿ : ಸತತ ಭೂಕಂಪನದಿಂದ ಟರ್ಕಿ ಹಾಗೂ ಸಿರಿಯಾ ದೇಶಗಳು ಸಂಪೂರ್ಣ ನಾಶವಾಗಿದ್ದು, ಭೂಕಂಪನದಿಂದಾಗಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರ ಆಕ್ರಂದನ ಮುಗಿಲು ಮುಟ್ಟಿದೆ. ಆದರೆ ಮತ್ತೆ ಮತ್ತೆ ಭೂಕಂಪನ ಉಂಟಾಗುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ.ಈ ನಡುವೆ ಸೋಮವಾರದ ಭೂಕಂಪದಿಂದ ದೇಶ ಚೇತರಿಸಿಕೊಳ್ಳುವ ಮೊದಲೇ ಮಂಗಳವಾರ ಮತ್ತೆ ರಿಕ್ಟರ್ ಮಾಪಕದಲ್ಲಿ 7.6 ಮತ್ತು 6 ತೀವ್ರತೆ ಹೊಂದಿದ್ದ ಎರಡು ಭೂಕಂಪ ಸಂಭವಿಸಿದ್ದು, ಪತನದ ಅಂಚಿನಲ್ಲಿದ್ದ ಮತ್ತಷ್ಟು ಕಟ್ಟಡಗಳನ್ನು ನೆಲಸಮ ಮಾಡಿವೆ.ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪನ ಪರಿಣಾಮ ಮೃತರ ಸಂಖ್ಯೆ ಕನಿಷ್ಠ 7,926ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಟರ್ಕಿಯಲ್ಲಿ ಕನಿಷ್ಠ 5,894 ಜನರು ಸಾವನ್ನಪ್ಪಿದ್ದು, 34,810 ಜನರು ಗಾಯಗೊಂಡಿದ್ದಾರೆ ಎಂದು ಟರ್ಕಿಯ ಉಪಾಧ್ಯಕ್ಷ ಫುವಾಟ್ ಒಕ್ಟೇ ಹೇಳಿದ್ದಾರೆ. ಟರ್ಕಿ ಮತ್ತು ಸಿರಿಯಾದ ದುರಂತವು 5,600ಕ್ಕೂ ಹೆಚ್ಚು ಕಟ್ಟಡಗಳು ನೆಲಕಚ್ಚುವಂತೆ ಮಾಡಿದೆ. ಅನೇಕ ನಗರಗಳಲ್ಲಿ ಕಟ್ಟಡಗಳು ನಾಮಾವಶೇಷವಾಗಿವೆ. ದಕ್ಷಿಣ ಟರ್ಕಿ ಮತ್ತು ಉತ್ತರ ಸಿರಿಯಾ ನಡುವಿನ 250 ಮೈಲು ಉದ್ದದ ಪ್ರದೇಶದಲ್ಲಿ…

Read More

ಮೂಲ್ಕಿ:ಕಾಲೇಜು ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಡಿ ಎಂಬಲ್ಲಿನಡೆದಿದೆ. ಅಮಿತಾ ಬಿವಿ (34) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಓರ್ವ ಮಗಳಿದ್ದಾಳೆ.ಅಮಿತಾ ಅವರಿಗೆ ವಿವಾಹವಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಅಮಿತಾ ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

Read More

ಬೆಳ್ತಂಗಡಿ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆಗೆ ಚೇತರಿಸಿಕೊಳ್ಳದೆ ಅಸುನೀಗಿದ ಘಟನೆ ನಡೆದಿದೆ. ಮೃತ ಯುವಕನನ್ನು ಕೊಕ್ಕಡ ಸೌತಡ್ಕ ನಿವಾಸಿ ಸಿರಾಜ್ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ಟಿಪ್ಪರ್ ಮತ್ತು ಸಿರಾಜ್ ಸಂಚರಿಸುತ್ತಿದ್ದ ಬೈಕ್ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಕೆಂಪಕೋಡಿ ಎಂಬಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮಸಿರಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಪಘಾತದ ತೀವ್ರತೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿರಾಜ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Read More

ದಾವಣಗೆರೆ;ಮಕ್ಕಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಘಟನೆ ನಡೆದಿದ್ದು ಇಂಗ್ಲೀಷ್ ವಿಷಯದ ಶಿಕ್ಷಕ ವಿಜಯ್ ಕುಮಾರ್ (54) ಮೃತರು. ವಿಜಯ್ ಕುಮಾರ್ ಬೆಳಗ್ಗೆ ಶಾಲೆಯಲ್ಲಿ ಪ್ರಾರ್ಥನೆ ಮುಗಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

Read More

ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ. ಬೆದರಿಕೆ ಹಾಕಿರುವ ವ್ಯಕ್ತಿ ಇಂಡಿಯನ್ ಮುಜಾಹಿದ್ದೀನ್ ಎಂಬ ಭಯೋತ್ಪಾದಕ ಸಂಘಟನೆ ಹೆಸರಿನಲ್ಲಿ ಬೆದರಿಕೆ ಹಾಕಿದ್ದಾನೆ. ಈ ಬೆದರಿಕೆ ಕರೆ ನಂತರ, ಮುಂಬೈ ಪೊಲೀಸರು ಸೇರಿದಂತೆ ಎಲ್ಲಾ ಏಜೆನ್ಸಿಗಳು ಅಲರ್ಟ್ ಆಗಿವೆ. ಮುಂಬೈ ಪೊಲೀಸರ ಪ್ರಕಾರ, ಸೋಮವಾರ ವಿಮಾನ ನಿಲ್ದಾಣದಲ್ಲಿ ಈ ಬೆದರಿಕೆ ಕರೆ ಬಂದಿದೆ. ಇದಾದ ಬಳಿಕ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿಮಾನ ನಿಲ್ದಾಣದ ಎಲ್ಲಾ ಏಜೆನ್ಸಿಗಳಿಗೂ ಎಚ್ಚರಿಕೆಯನ್ನು ಕಳುಹಿಸಲಾಗಿದೆ. ಮುಂಬೈನ ಸಹರ್ ಪೊಲೀಸರು ಅಪರಿಚಿತರ ವಿರುದ್ಧ ಐಪಿಸಿ ಸೆಕ್ಷನ್ 505(1) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಶುಕ್ರವಾರ ಮುಂಜಾನೆ ಮುಂಬೈನಲ್ಲಿ ಉಗ್ರರ ದಾಳಿಯ ಭೀತಿ ಎದುರಾಗಿತ್ತು. ತನಿಖಾ ಸಂಸ್ಥೆ ಎನ್‌ಐಎಗೆ ಬೆದರಿಕೆ ಮೇಲ್ ಕಳುಹಿಸಲಾಗಿದೆ. ಈ ಮೇಲ್ ಅನ್ನು ಎನ್‌ಐಎ ಇಮೇಲ್ ಐಡಿಯಲ್ಲಿ ಸ್ವೀಕರಿಸಲಾಗಿದೆ. ಇದರಲ್ಲಿ ಮುಂಬೈನಲ್ಲಿ ದಾಳಿಯ ಬೆದರಿಕೆ ಇತ್ತು. ಇದಾದ ನಂತರ ಮುಂಬೈ ಪೊಲೀಸರು ಮತ್ತು ಏಜೆನ್ಸಿಗಳು ಅಲರ್ಟ್…

Read More

ಬೆಳ್ತಂಗಡಿ : ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆ ಉಜಿರೆಯ ವಸತಿ ಗೃಹಗಳ ಮೇಲೆ ಜಿಲ್ಲಾ ಎಸ್.ಪಿ ಅವರ ಸೂಚನೆಯಂತೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಸೋಮವಾರ ರಾತ್ರಿಯ ವೇಳೆ ಐದು ವಿಶೇಷ ಪೊಲೀಸ್ ತಂಡಗಳು ಏಕಕಾಲದಲ್ಲಿ ಲಾಡ್ಜ್ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಪರಿಶೀಲನೆಯ ವೇಳೆ ಯಾವುದೇ ಅನೈತಿಕ ಚಟುವಟಿಕೆಗಳು ನಡೆದಿರುವುದು ಕಂಡುಬಂದಿಲ್ಲ ಎಂದು ತಿಳಿದು ಬಂದಿದೆ. ಉಜಿರೆಯ ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು ಈ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಎಲ್ಲ ಲಾಡ್ಜ ಗಳಿಗೂ ದಾಖಲೆಗಳನ್ನು ಸಮರ್ಪಕವಾಗಿ ಇರಿಸುವಂತೆ ಹಾಗೂ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Read More

ಮಂಗಳೂರು : ಊಟ ಸೇವಿಸಿದ ಬಳಿಕ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್ ನಲ್ಲಿ ನಡೆದಿದೆ. ಮಂಗಳೂರಿನ ಶಕ್ತಿನಗರದಲ್ಲಿರುವ ಸಿಟಿ ನರ್ಸಿಂಗ್ ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ ನಿಂದಾಗಿ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ವಿದ್ಯಾರ್ಥಿನಿಯರನ್ನು ಮಂಗಳೂರಿನ ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ.

Read More

ಕಾಪು: ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಲಭಿಸಿದೆ ಎನ್ನಲಾಗಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ, ಕಾರ್ಕಳ ಡಿವೈಎಸ್ಪಿ ಅರವಿಂದ್ ನೇತೃತ್ವದ ಮೂರು ಪೊಲೀಸ್ ತಂಡಗಳು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದೆ.ಕೊಲೆಯಾದ ಶರತ್ ಅವರ ಮೊಬೈಲ್ ಮಾಹಿತಿ ಮತ್ತು ಸಿಸಿಟಿವಿ ವಿಡಿಯೋ ಆಧಾರದಲ್ಲಿ ತನಿಖೆ ನಡೆಯುತ್ತಿದೆ.ಕೊಲೆಗೆ ಸಂಬಂಧಿಸಿ ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ. ಶರತ್ ಶೆಟ್ಟಿ ಭೂ ವ್ಯವಹಾರ ನಡೆಸಿಕೊಂಡಿರುವುದರಿಂದ ಪೊಲೀಸರು ಈ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ.

Read More

ಉಡುಪಿ: ಸಾರ್ವಜನಿಕರ ದೈನಂದಿನ ಜೀವನದಲ್ಲಿ ಹಾಸುಹೊಕ್ಕಿರುವ ಪ್ಲಾಸ್ಟಿಕ್ ನ ಬಳಕೆಯ ನಂತರ, ಅದರ ತ್ಯಾಜ್ಯ ವಿಲೇವಾರಿ ಸಮಸ್ಯೆ ಎಲ್ಲೆಡೆ ಕಂಡುಬರುತ್ತಿದೆ. ಪ್ಲಾಸ್ಟಿಕ್ ನಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಬೇಕಾದ ಬೃಹತ್ ಸಮಸ್ಯೆಯೂ ನಮ್ಮ ಮುಂದಿದೆ. ಪ್ಲಾಸ್ಟಿಕ್ ಅನ್ನು ಒಂದು ತ್ಯಾಜ್ಯವೆಂದು ಪರಿಗಣಿಸುವ ಬದಲಿಗೆ ಅದನ್ನು ಸೂಕ್ತ ರೀತಿಯಲ್ಲಿ ಮರುಬಳಕೆ ಮಾಡಿದರೆ ಅದು ಒಂದು ಸಂಪನ್ಮೂಲವಾಗುತ್ತದೆ ಎಂಬುದಕ್ಕೆ ಉಡುಪಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ನಿರ್ಮಿಸಿದ ರಸ್ತೆ ಸಾಕ್ಷಿಯಾಗಿದೆ. ಪ್ಲಾಸ್ಟಿಕ್ ತ್ಯಾಜ್ಯದ ಮರುಬಳಕೆ ಕುರಿತಂತೆ 2019 ರ ಡಿಸೆಂಬರ್ 10 ರಂದು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಅಡಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ರಸ್ತೆ ನಿರ್ಮಾಣ ಮಾಡುವ ಕಾರ್ಯಾಗಾರವನ್ನು ಉಡುಪಿ ಜಿಲ್ಲಾ ಪಂಚಾಯತ್ ನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹಾಗೂ ಪ್ಲಾಸ್ಟಿಕ್ ಮ್ಯಾನ್ ಖ್ಯಾತಿ ಪಡೆದ ತಮಿಳುನಾಡಿನ ಡಾ.ವಾಸುದೇವನ್ ಇವರು ಜಿಲ್ಲೆಯ ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ಇಂಜಿನಿಯರ್ ಗಳು ಮತ್ತು ಅಧಿಕಾರಿಗಳಿಗೆ ತರಬೇತಿ ನೀಡಿದ್ದರು.ಉಡುಪಿ ಜಿಲ್ಲೆಯ ಎಸ್‌ಎಲ್‌ಆರ್‌‌ಎಂ(SLRM) ಕೇಂದ್ರಗಳಲ್ಲಿ ಶೇಖರಣೆಯಾಗಿದ್ದ ಪ್ಲಾಸ್ಟಿಕ್…

Read More