Author: main-admin

ಬೆಳ್ತಂಗಡಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಂಜುಮಖಾನ್ (41)ಎಂಬಾತನಾಗಿದ್ದಾನೆ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಿಂದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Read More

ವಿಟ್ಲ: ವಿಟ್ಲ ಸಮೀಪದ ಕಾಂತಡ್ಕದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ. ರಹೀಮ್ ಶಾನ್ ಅವರ ಮನೆಯಲ್ಲಿ ಕುಟುಂಬ ಸದಸ್ಯರು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು, ರಾತ್ರಿ ಗಂಟೆ 8 ರಿಂದ 11 ಗಂಟೆಯ ಒಳಗೆ ಮನೆಗೆ ನುಗ್ಗಿ ಸುಮಾರು ಹದಿನೈದು ಪವನ್ ಚಿನ್ನ ಹಾಗೂ ಒಂದು ಲಕ್ಷ ನಗದನ್ನು ದರೋಡೆ ‌ಮಾಡಿ ಪರಾರಿಯಾಗಿರುವುದಾಗಿ ವರದಿಯಾಗಿದೆ.ಇನ್ನು ಮನೆಮಂದಿ ರಾತ್ರಿ 12 ಗಂಟೆಗೆ ಬಂದಾಗ ಹಿಂಬದಿಯ ಬಾಗಿಲು ಮುರಿಯಲಾಗಿದ್ದು, ಕಳವು ನಡೆದ ಬಗ್ಗೆ ಬೆಳಕಿಗೆ ಬಂದಿದೆ.ಸ್ಥಳಕ್ಕಾಗಮಿಸಿದ ವಿಟ್ಲ ಪೋಲಿಸರು ಪರಿಶೀಲನೆ ನಡೆಸಿದ್ದಾರೆ.

Read More

ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ, ಆರೋಪಿ ಪರಾರಿಯಾಗಿರುವ ಹಿನ್ನಲೆಯಲ್ಲಿ ಆಟೋ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಅಂಗಡಿಯ ಸಿಬ್ಬಂದಿಯಾಗಿದ್ದ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ, ಬಳಿಕ ಅಂಗಡಿ ದರೋಡೆ ನಡೆಸಿ , ಮುಸುಕುಧಾರಿಯಾಗಿದ್ದ ಆರೋಪಿ ಅನಂತರ ಸ್ವಲ್ಪ ದೂರಕ್ಕೆ ಓಡಿ ಹೋಗಿ ಆಟೋರಿಕ್ಷಾವೊಂದರಲ್ಲಿ ಹೋಗಿದ್ದು ಸಿಸಿ ಟಿವಿ ಕೆಮರಾದಲ್ಲಿ ದಾಖಲಾಗಿತ್ತು.ಆರೋಪಿ ಯಾವ ಕಡೆ ಹೋಗಿದ್ದ ಎಂಬ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Read More

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವಂತ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸೋವರೆಗೆ ಮುಷ್ಕರ ನಿಲ್ಲಿಸುವುದಿಲ್ಲ ಎಂಬುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ರಾಜ್ಯ ಆರೋಗ್ಯ, ವೈದ್ಯಕೀಯ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಎಚ್. ಯಮೋಜಿ ಅವರು, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ KSHCOEA ಸಂಘವು ಹಲವಾರು ವರ್ಷಗಳಿಂದ, ಹಲವು ಹಂತಗಳಲ್ಲಿ ಹೋರಾಟ ಮತ್ತು ಸರ್ಕಾರದ ಗಮನ ಸೆಳೆದು ಸರ್ಕಾರವೆ ಆರೋಗ್ಯ ಇಲಾಖೆಯ ಗುತ್ತಿಗೆ ಹೊರಗುತ್ತಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಶ್ರೀನಿವಾಸಚಾರ ಸಮೀತಿ ರಚಿಸಿ ವರದಿ ಪಡೆದಿದ್ದು ವರ್ಷಗಳೆ ಕಳೆದು ಹೋಗಿದೆ. ಹತ್ತು ಹಲವು ಸಾರಿ ಸದರಿ ನೌಕರರ ಮೇಲಿನ ಅನ್ಯಾಯವನ್ನು ಅತ್ಯಂತ ಜವಾಬ್ದಾರಿಯುತವಾಗಿ ಸರ್ಕಾರಕ್ಕೆ ಮುಜಗರವಾಗದಂತೆ ಬಹಳ ಸಂಯಮದಿಂದ ರಾಷ್ಟ್ರದ ಅತಿದೊಡ್ಡ ಕಾರ್ಮಿಕ ಸಂಘಟನೆ ಭಾರತೀಯ ಮಜ್ದೂರ್ ಸಂಘ ಹಾಗೂ ಶಾಸಕರು ಮತ್ತು…

Read More

ಉಡುಪಿ : ತ್ಯಾಜ್ಯ ವಿಲೇವಾರಿಯಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಯೋಜನೆಗಳನ್ನು ರೂಪಿಸಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿರುವ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ಜಿಲ್ಲೆಯು ಪ್ರಸ್ತುತ ಮತ್ತೊಂದು ವಿನೂತನ ಸ್ವಚ್ಛತಾ ಕಾರ್ಯಕ್ರಮದ ಪ್ರಾಯೋಗಿಕ ಯೋಜನೆಗೆ ಜಿಲ್ಲಾಧಿಕಾರಿಗಳ ವಸತಿಗೃಹ ಸಾಕ್ಷಿಯಾಗಿದೆ. ಮನೆಯ ಕಾಂಪೌ0ಡ್ ನಲ್ಲಿ ಬೀಳುವ ಒಣಕಸವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡುವ ವಿಧಾನವನ್ನು ಉಡುಪಿ ಜಿಲ್ಲಾಧಿಕಾರಿಗಳ ವಸತಿಗೃಹದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿದ್ದು, ವಸತಿಗೃಹದಲ್ಲಿನ ಕೈ ತೋಟದ ಒಣ ಹುಲ್ಲು, ತೋಟದ ಗಿಡಗಳಿಂದ ಬಿದ್ದಿದ್ದ ಗಿಡದ ಎಲೆಗಳು, ಮರದ ಮೇಲಿಂದ ಬಿದ್ದ ಒಣ ಎಲೆಗಳನ್ನು ಒಟ್ಟುಗೂಡಿಸಿ, “ಡ್ರೈ ಲೀವ್ಸ್ ಕಂಪೋಸ್ಟ್ ಬೆಡ್” ನಿರ್ಮಾಣ ಮಾಡಲಾಗಿದೆ. ಕಾಂಪೌ0ಡ್ ನಲ್ಲಿ ಸಂಗ್ರಹಿಸಲಾದ ಎಲೆ ಮತ್ತು ಹುಲ್ಲನ್ನು ಸೆಗಣಿಯೊಂದಿಗೆ ಮಿಶ್ರಣ ಮಾಡಿ, 10*6 ಅಳತೆಯ ಬೆಡ್ ಮಾದರಿಯಲ್ಲಿ ಜೋಡಿಸಲಾಗಿದ್ದು,ಗೋಣಿಚೀಲದ ಹೊದಿಕೆ ಹಾಕಲಾಗಿದೆ.ಪ್ರತಿ ದಿನ ದಿನ ಈ ಬೆಡ್ ಮೇಲೆ ನೀರಿನ ಸಿಂಪಡಣೆ ಮಾಡಬೇಕಿದ್ದು, ಇದು 45 ದಿನಗಳ ಬಳಿಕ ಅತ್ಯುತ್ತಮ ಸಾವಯವ ಗೊಬ್ಬರವಾಗಿ ಪರಿವರ್ತನೆಗೊಳ್ಳಲಿದೆ. ಇದನ್ನು ಕೈ ತೋಟದಲ್ಲಿನ ಗಿಡಗಳಿಗೆ…

Read More

ಹಾಲು, ಸಕ್ಕರೆ ಮತ್ತು ಟೀ ಎಲೆಗಳಿಂದ ತಯಾರಿಸಿದ ಚಹಾಕ್ಕಿಂತ ಗ್ರೀನ್ ಟೀ ಸೇವನೆ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂಬುದರಲ್ಲಿ ಎರಡು ಮಾತಿಲ್ಲ. ಹೆಚ್ಚಿನ ಆರೋಗ್ಯ ತಜ್ಞರು ತೂಕವನ್ನು ಕಡಿಮೆ ಮಾಡಲು ಮತ್ತು ಅನೇಕ ಸಮಸ್ಯೆಗಳನ್ನು ತೊಡೆದುಹಾಕಲು ಗ್ರೀನ್ ಟೀ ಕುಡಿಯಲು ಶಿಫಾರಸು ಮಾಡುತ್ತಾರೆ, ಆದರೆ ಗ್ರೀನ್ ಟೀಗೆ ಕೆಲವು ವಿಶೇಷ ವಸ್ತುಗಳನ್ನು ಸೇರಿಸಿದರೆ, ಅದರ ಗುಣಲಕ್ಷಣಗಳು ಬಹಳಷ್ಟು ಹೆಚ್ಚಾಗುತ್ತದೆ. ಹಸಿರು ಚಹಾದಲ್ಲಿ ಈ ವಸ್ತುಗಳನ್ನು ಮಿಶ್ರಣ ಮಾಡುವುದು ಪ್ರಯೋಜನಕಾರಿ ಶುಂಠಿ ಶುಂಠಿಯನ್ನು ಗ್ರೀನ್ ಟೀ ಜೊತೆ ಬೆರೆಸಿ ಸೇವಿಸಿದರೆ ಆರೋಗ್ಯಕ್ಕೆ ಹಲವಾರು ರೀತಿಯಲ್ಲಿ ಲಾಭವಾಗುತ್ತದೆ.. ಇದರ ಸಹಾಯದಿಂದ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ ಕ್ಯಾನ್ಸರ್ ನಂತಹ ಅಪಾಯಕಾರಿ ಮತ್ತು ಮಾರಣಾಂತಿಕ ಕಾಯಿಲೆಗಳನ್ನು ತಡೆಯುತ್ತದೆ. ಪುದೀನ ಎಲೆಗಳು , ಚಕ್ಕೆ ಕೆಲವರು ಗ್ರೀನ್ ಟೀಗೆ ಪುದೀನ ಎಲೆಗಳು ಮತ್ತು ದಾಲ್ಚಿನ್ನಿ ಸೇರಿಸುತ್ತಾರೆ, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದನ್ನು ಸೇವಿಸಿದ ನಂತರ ದೀರ್ಘಕಾಲ ಹಸಿವು ಇರುವುದಿಲ್ಲವಾದ್ದರಿಂದ, ತೂಕವೂ ಕಡಿಮೆಯಾಗಲು ಪ್ರಾರಂಭಿಸುತ್ತದೆ.…

Read More

ಚೆನೈ : ಚಿತ್ರರಂಗದ ಖ್ಯಾತ ಗಾಯಕಿ ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತೆ ವಾಣಿ ಜೈರಾಮ್ ಅವರು ಶನಿವಾರ ಚೆನ್ನೈನ ತಮ್ಮ ನಿವಾಸದಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಕಿಯ ಸಾವನ್ನು ಥೌಸಂಡ್ ಲೈಟ್ಸ್ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದು, ಐಪಿಸಿ ಸೆಕ್ಷನ್ 174ರಡಿ ಪ್ರಕರಣವನ್ನ ಆಯೂರ್ ಲಾನ್ಪರ ಪೊಲೀಸ್ ಠಾಣೆಯ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಇನ್ನು ಈ ಖ್ಯಾತ ಗಾಯಕಿಯ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ ಎನ್ನಲಾಗಿದ್ದು, ಅವರಿಗೆ ನಿಖರವಾಗಿ ಏನಾಯಿತು ಎಂಬುದರ ಕುರಿತು ತನಿಖೆ ನಡೆಯಲಿದೆ. ಚೆನ್ನೈನಲ್ಲಿರುವ ನುಂಗಬಾಕಂ ಮನೆಯಲ್ಲಿ ವಾಣಿ ಅವರು ವಾಸವಾಗಿದ್ದರು. ಅವರ ಹಣೆಗೆ ಪೆಟ್ಟು ಬಿದ್ದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಇಂದು ಎಂದಿನಂತೆ ಮನೆ ಕೆಲಸದವಳು ವಾಣಿ ಮನೆಗೆ ತೆರಳಿದ್ದರು. ಡೋರ್ ಲಾಕ್ ಆದ ಕಾರಣ ಕಾಲಿಂಗ್ ಬೆಲ್ ಒತ್ತಿದ್ದಾರೆ. ಆದರೆ, ಒಳಗಡೆ ಇಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಕಾರಣಕ್ಕೆ ಮನೆ ಕೆಲಸದವಳು ಪತಿಯ ಮೊಬೈಲ್​ನಿಂದ ವಾಣಿ ಅವರಿಗೆ ಕರೆ…

Read More

ಕಾರವಾರ: ಸಮಸ್ಯೆಯನ್ನು ಹೇಳಿಕೊಂಡ ಬಂದ ವಿವಾಹಿತ ಮಹಿಳೆಯ ಮೇಲೆಯೇ ಕಣ್ಣಾಕಿದ ದೈವ ನರ್ತಕ ಆಕೆಯನ್ನು ಮದುವೆ ಆಗೋದಾಗಿ ಹೇಳಿದ್ದು ವೈರಲ್ ಆಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಅಂಬಾರಕೊಡ್ಲ ಗ್ರಾಮದಲ್ಲಿ ದೈವ ನರ್ತಕ ಚಂದ್ರಹಾಸ್ ಮಹಿಳೆಗೆ ಮೋಸ ಮಾಡಲು ಮುಂದಾಗಿದ್ದಾನೆ ಎನ್ನಲಾಗಿದೆ. ಅಂಬಾರಕೊಡ್ಲದಲ್ಲಿ ದೇವಸ್ಥಾನ ನಿರ್ಮಿಸಿ ಕಾಳಿ, ದುರ್ಗೆ, ಅರ್ಧನಾರೀಶ್ವರ ದೈವ ಮೈಮೇಲೆ ಬರುತ್ತದೆ ಎಂದು ಜನರನ್ನು ನಂಬಿಸಿದ್ದ. ಇದನ್ನು ನಂಬಿದ್ದ ಜನರು ಇಲ್ಲಿಗೆ ಬಂದು ಸಮಸ್ಯೆ ಹೇಳಿಕೊಳ್ಳುತ್ತಿದ್ದರು ಎನ್ನಲಾಗಿದೆ. ಅದರಂತೆ ಬೆಳಗಾವಿ ಮೂಲದ ಮಹಿಳೆಯೋರ್ವರು ತನ್ನ ಕಷ್ಟ ಪರಿಹಾರಕ್ಕಾಗಿ ದೈವ ನರ್ತಕ ಬಳಿ ಬಂದಿದ್ದರು. ಸಮಸ್ಯೆ ಹೇಳಿಕೊಂಡ ಮಹಿಳೆಯನ್ನ ತಾನೇ ವರಿಸುವುದಾಗಿ ಈ ದೈವ ನರ್ತಕ ಪಾತ್ರಿ ಚಂದ್ರಹಾಸ್ ಬಹಿರಂಗವಾಗಿಯೇ ವಾಗ್ದಾನ ಮಾಡಿದ್ದಾನೆ. ಮಾತ್ರವಲ್ಲ, ಇತ್ತೀಚೆಗೆ ಭಾರೀ ಸದ್ದು ಮಾಡಿದ ‘ಕಾಂತಾರ’ ಚಿತ್ರದ ಸ್ಟೈಲ್‌ನಲ್ಲಿ ‘ಈ ಬಾಲಕಿಯನ್ನ ಈ ಬಾಲಕ ಮದುಗೆ ಆಗ್ತಾನೆ’ ಎಂದು ದೈವ ನರ್ತಕ ಪಾತ್ರಿ ಹೇಳಿದ್ದಾನೆ. ಈವತ್ತಿನಿಂದ ಈ ಬಾಲಕಿ ನನ್ನ…

Read More

ಮಂಗಳೂರು: ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪತ್ರಕರ್ತರು ಮತ್ತು ಜನಸಾಮಾನ್ಯರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ, ಪತ್ರಕರ್ತರಿಗೆ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪೊಲೀಸ್‌ ಕಮಿಷನರ್‌ ಎನ್.ಶಶಿಕುಮಾರ್ ಅವರಿಗೆ ಶುಕ್ರವಾರ ಪತ್ರಕರ್ತರ ನಿಯೋಗ ಮನವಿ ಸಲ್ಲಿಸಿತು. ಟೋಲ್‌ಗೇಟ್‌ಗಳಲ್ಲಿ ಸಿಬ್ಬಂದಿಗಳು ಪತ್ರಕರ್ತರು ಸಹಿತ ಸಾರ್ವಜನಿಕರ ಮೇಲೆ ಹಲ್ಲೆ ನಡೆಸುತ್ತಿರುವ ಕೃತ್ಯಗಳು ಹೆಚ್ಚಿವೆ. ಪೊಲೀಸ್‌ ಇಲಾಖೆ ಈ ಕುರಿತು ಸೂಕ್ತ ಕ್ರಮ ಜರುಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಮನವಿ ಮಾಡಿದರು.

Read More

ಮೂಢನಂಬಿಕೆಗೆ ಒಳಗಾಗಿ ಕೆಲವರು ತಮ್ಮ ಮಕ್ಕಳ ಪ್ರಾಣವನ್ನೇ ಪಣವಾಗಿಟ್ಟ ಹಲವು ಘಟನೆಗಳು ಈ ಹಿಂದೆ ನಡೆದಿವೆ. ಚಿಕ್ಕ ಮಕ್ಕಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವಾಗ ಆಸ್ಪತ್ರೆಗೆ ಹೋಗುವ ಬದಲು ಮಂತ್ರವಾದಿಯ ಮೊರೆ ಹೋಗುವುದು ಹಾಗೂ ತಮಗೆ ತಿಳಿದ ಮದ್ದು ನೀಡಲು ಯತ್ನಿಸುವುದು ಮಾಡಿ ಮಕ್ಕಳ ಪ್ರಾಣಕ್ಕೆ ಸಂಚಕಾರ ತರುತ್ತಾರೆ. ಈಗ ಮಧ್ಯಪ್ರದೇಶದ ಶಾಡೋಲ್ ಜಿಲ್ಲೆಯಲ್ಲಿ ಅಂತವುದೇ ಒಂದು ಘಟನೆ ನಡೆದಿದ್ದು, ನ್ಯುಮೋನಿಯಾದಿಂದ ಬಳಲುತ್ತಿದ್ದ ಮೂರು ತಿಂಗಳ ಹೆಣ್ಣು ಮಗುವಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಬದಲು ಕಾದ ಕಬ್ಬಿಣದಿಂದ ಹೊಟ್ಟೆಯ ಮೇಲೆ 51 ಬಾರಿ ಬರೆ ಹಾಕಲಾಗಿದೆ. ಕಾದ ಕಬ್ಬಿಣದ ಬರೆ ಹಾಕಿದರೆ ಗುಣಮುಖವಾಗುತ್ತದೆ ಎಂಬ ಮೂಢನಂಬಿಕೆಯಿಂದ ಈ ಕೆಲಸ ಮಾಡಲಾಗಿದೆ. ಮಗುವಿನ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದಾಗ ಆಸ್ಪತ್ರೆಗೆ ಕರೆದುಕೊಂಡು ಹೋದ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮಗು ಮೃತಪಟ್ಟಿದ್ದು, ಇದೀಗ ಮಕ್ಕಳ ಕಲ್ಯಾಣ ಇಲಾಖೆಯಿಂದ ಆರೋಪಿ ಮಹಿಳೆ ವಿರುದ್ಧ ದೂರು ನೀಡಲಾಗಿದೆ.

Read More