Author: main-admin

ಪುತ್ತೂರು: ಪ್ರವೀಣ್ ನೆಟ್ಟಾರು ಹಂತಕರಿಗೆ ನೆರವು ನೀಡಿದ್ದ ಆರೋಪಿಗಳಿಬ್ಬರು ವಿದೇಶದಲ್ಲಿ ಅಡಗಿರುವ ವಿಚಾರವನ್ನು ಎನ್‌ಐಎ ಪತ್ತೆ ಹಚ್ಚಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ. ಹಂತಕರಿಗೆ ನೆರವು ನೀಡಿದವರಿಬ್ಬರು ವಿದೇಶದಲ್ಲಿ ಅಡಗಿರುವ ಬಗ್ಗೆ ಎನ್‌ಐಎಗೆ ಸುಳಿವು ದೊರೆತ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದ ತಂಡ ಇಬ್ಬರನ್ನು ವಶಕ್ಕೆ ಪಡೆದಿದೆ. ಈ ಇಬ್ಬರು ಆರೋಪಿಗಳನ್ನು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.ಒಟ್ಟು ಆರು ಮಂದಿ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿದ್ದು, ಈ ಪೈಕಿ ಐವರನ್ನು ಎನ್‌ಐಎ ಈಗಾಗಲೇ ವಶಕ್ಕೆ ಪಡೆದಿದೆ ಎನ್ನಲಾಗುತ್ತಿದೆ. ಆದರೆ ಇವರೆಲ್ಲರನ್ನು ವಿದೇಶದಿಂದಲೇ ಪತ್ತೆ ಹಚ್ಚಿ ವಶಕ್ಕೆ ಪಡೆದರೇ ಅಥವಾ ಭಾರತದಲ್ಲೇ ವಶಕ್ಕೆ ಪಡೆದರೇ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಶರೀಫ್ ಮತ್ತು ಕೆ.ಎ. ಮಸೂದ್ ಸೌದಿಯಲ್ಲಿ ಅಡಗಿರುವ ಸುಳಿವು ಎನ್‌ಐಎಗೆ ಲಭ್ಯವಾಗಿದೆ. ಅವರನ್ನು ಪತ್ತೆ ಹಚ್ಚಿ ಭಾರತಕ್ಕೆ ಕರೆ ತರುವ ಪ್ರಯತ್ನಗಳು ನಡೆಯುತ್ತಿವೆ. ಇನ್ನೂ ಒಬ್ಬ ಆರೋಪಿ ಪತ್ತೆಯಾಗಬೇಕಿದೆ.ನಿಷೇಧಿತ ಪಿಎಫ್‌ಐ ಸದಸ್ಯರಾಗಿರುವ ಮೊಹಮ್ಮದ್‌ ಮುಸ್ತಫಾ ಎಸ್‌.,…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ನೇತ್ರಾವತಿಯ ನೀರು ಕುಡಿಯಲು ಯೋಗ್ಯವಲ್ಲ ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ರಾಷ್ಟ್ರೀಯ ನೀರಿನ ಗುಣಮಟ್ಟ ಯೋಜನೆ ಅಡಿಯಲ್ಲಿ ನದಿ ಮತ್ತು ‌ಕೆರೆಗಳ ನೀರಿನ ಗುಣಮಟ್ಟದ ವರದಿಯನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಟಿಸಿದೆ.ಅದರಲ್ಲಿ ಧರ್ಮಸ್ಥಳದಲ್ಲಿ ಸಂಗ್ರಹಿಸಿದ ನೇತ್ರಾವತಿ ನದಿ ನೀರಿನ ಮಾದರಿಯನ್ನು ಪರೀಕ್ಷಿಸಿದಾಗ ನೀರು ಅಕ್ಟೋಬರ್ ತಿಂಗಳವರೆಗೆ ಸ್ನಾನಕ್ಕೆ ಯೋಗ್ಯವಾಗಿತ್ತು.ಆದರೆ ನವೆಂಬರ್ ತಿಂಗಳಲ್ಲಿ ಅದರ ಗುಣಮಟ್ಟ ಕುಸಿದು ಬಿ ವರ್ಗದಿಂದ ಸಿ ವರ್ಗಕ್ಕೆ ಇಳಿದಿದೆ. ಇದರನ್ವಯ ನೀರು ಸ್ನಾನಕ್ಕೂ ಯೋಗ್ಯವಿಲ್ಲ. ನೇತ್ರಾವತಿ ನದಿ ಮಂಗಳೂರು ನಗರ ಮತ್ತು ನದಿ ದಂಡೆಯ ಪಟ್ಟಣ ಹಾಗು ಹಳ್ಳಿಗಳಿಗೆ ಕುಡಿಯುವ ನೀರಿನ ಮೂಲವಾಗಿದೆ. ಕೆಲವೆಡೆ ಈ ನೀರನ್ನು ಶುದ್ದೀಕರಿಸಿ ಪೂರೈಕೆ ಮಾಡಲಾಗುತ್ತಿದ್ದರೆ ಆ ಸವಲತ್ತು ಇಲ್ಲದ ಊರುಗಳಿಗೆ ನೇರ ಸರಬರಾಜು ಆಗುತ್ತಿದೆ.

Read More

ಕುಂದಾಪುರ: ಶನಿವಾರ ಬೆಳಿಗ್ಗೆ ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬಸ್ಸಿನಿಂದ ಆಯತಪ್ಪಿ ಬಸ್ ಚಕ್ರದಡಿ ಬಿದ್ದು ಮೃತಪಟ್ಟ ಕಾಲೇಜು ವಿದ್ಯಾರ್ಥಿಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಆತನ ಪೋಷಕರು ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿಗಳಾದ ನಾಗಪ್ಪ ಪೂಜಾರಿ ಜಲಜಾ ದಂಪತಿಗಳ ಪುತ್ರ ಸುದೀಪ್ ಪೂಜಾರಿ (20) ಯವರ ನೇತ್ರದಾನ‌ ಮಾಡಲಾಗಿದೆ. ಶನಿವಾರ ಬೆಳಿಗ್ಗೆ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಮನೆಯಾದ ಕಟ್ ಬೆಲ್ತೂರಿನಿಂದ ಸುದೀಪ್ ಸಂಚರಿಸುತ್ತಿದ್ದಾಗ ಹೆಮ್ಮಾಡಿ ಜಂಕ್ಷನ್ ಬಳಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಸ್ ಮುಂಬದಿಯ ಬಾಗಿಲಲ್ಲಿ ನಿಂತಿದ್ದ ಸುದೀಪ್ ಬಸ್ ನ ಮುಂದಿನ ಚಕ್ರದಡಿಯಲ್ಲಿ ಸಿಲುಕಿ ಗಂಭೀರ ಗಾಯಗೊಂಡು ಆತ ಮೃತಪಟ್ಟಿದ್ದ. ಬಸ್ ಅಪಘಾತದಲ್ಲಿ ಮೃತಪಟ್ಟ ಸುದೀಪ್ ಅವರ ಮೃತದೇಹವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿರಿಸಿದ್ದು ನೇತ್ರ ತಜ್ಞೆ ಡಾ. ವಿಜಯಲಕ್ಷ್ಮಿ ಅವರು ನೇತ್ರದಾನದ ಮಹತ್ವದ ಬಗ್ಗೆ ಮೃತ ಸುದೀಪ್ ಪೂಜಾರಿ ಪೋಷಕರ ಬಳಿ ತಿಳಿಸಿದ್ದು ಇದಕ್ಕೆ ಪೋಷಕರು ಸಮ್ಮತಿ ಸೂಚಿಸಿದ…

Read More

ಉಡುಪಿ: ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್​ ನಾಯಿಯನ್ನೇ ಕೊಂದಿರುವ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದಿದೆ. ರಾಜೇಶ್ ವಿಕೃತಿ ಮೆರೆದ ವಾರ್ಡನ್.ಹುಡುಗಿ ಜೊತೆ ಆಡಿದ್ದಕ್ಕೆ ನಾಯಿಯನ್ನೇ ಕೊಂದಿದ್ದಾನೆ. ಕೃತ್ಯದ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಪಿ ವಾರ್ಡನ್ ಕೃತ್ಯಕ್ಕೆ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ಹೊರಹಾಕಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಂಜುಳಾ ಕರ್ಕೇರ ಎಂಬುವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ರೂವಾರಿ ಶಾರೀಕ್ ಆರೋಗ್ಯದಲ್ಲಿ ಕೊನೆಗೂ ಸುಧಾರಣೆ ಕಂಡುಬಂದಿದೆ. ಕಳೆದ ಒಂದೂವರೆ ತಿಂಗಳುಗಳಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟ ಗಾಯಗಳ ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ಸದ್ಯದಲ್ಲೇ ಡಿಸ್ಚಾರ್ಜ್ ಮಾಡಲು ಸಿದ್ಧತೆಗಳು ನಡೆದಿವೆ. ಡಿಸ್ಚಾರ್ಜ್​ ಬಳಿಕ ಎನ್​ಐಎ ವಶಕ್ಕೆ: ಸ್ಫೋಟದ ಸಂದರ್ಭದಲ್ಲಿ ಶೇ 25 ರಷ್ಟು ಸುಟ್ಟ ಗಾಯಗಳಿಂದ ಬಚಾವಾಗಿದ್ದ ಶಾರೀಕ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಫೋಟದ ಪರಿಣಾಮದಿಂದಾಗಿ ಶಾರೀಕ್ ಮುಖ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ. ಕಳೆದ ಒಂದೂವರೆ ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಶಾರೀಕ್ ಭಾಗಶಃ ಗುಣಮುಖನಾಗಿದ್ದು, ಬಹುತೇಕ ಸುಟ್ಟ ಗಾಯಗಳು ವಾಸಿಯಾಗಿವೆ. ಸಣ್ಣ ಪುಟ್ಟ ಗಾಯಗಳಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಈಗಾಗಲೇ ಚಿಕಿತ್ಸೆಯ ಜೊತೆ ಜೊತೆಗೆ ಬಹುತೇಕ ವಿಚಾರಣೆ ನಡೆಸಿರೋ ಎನ್‌ಐಎ ಅಧಿಕಾರಿಗಳ ತಂಡ ಮುಂದಿನ ವಾರವೇ ಶಾರೀಕ್​ನನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ವಶಕ್ಕೆ ಪಡೆಯಲಿದೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ.

Read More

ಮಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರಣ್ಯಾಧಿಕಾರಿಗೆ ಭ್ರಷ್ಟಾಚಾರದಡಿ 1.5 ಕೋಟಿ ದಂಡ ಮತ್ತು 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಸತ್ರ (ವಿಶೇಷ) ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ ಸೈಹಾದ್ರಿ ವಲಯದ ವಲಯ ಅರಣ್ಯಾಧಿಕಾರಿ ಆರೋಪಿ ಎಸ್.ರಾಘವ ಪಾಟಾಳಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಆರೋಪಿಯಾಗಿದ್ದಾರೆ. ಪಾಟಾಳಿ ಮೇಲೆ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿರುವ ದೂರಿನ ಮೇರೆಗೆ ಮಂಗಳೂರು ಕರ್ನಾಟಕ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ D:21-07-2011 do da od 11/2011 o 13(1x) tad 13(2) ಭ್ರಷ್ಟಾಚಾರ ತಡೆ ಕಾಯ್ದೆ 1988, ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಯನ್ನು ನಡೆಸಿದ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಮಾನ್ಯ ಬಿ.ಬಿ. ಜಕಾತಿ ಅವರು ಅಂತಿಮ ತೀರ್ಪು ನೀಡಿದ್ದು. ತೀರ್ಪಿನಲ್ಲಿ ಎಸ್.ರಾಘವ ಪಾಟಾಳಿ, ವಲಯ ಅರಣ್ಯಾಧಿಕಾರಿ, ಸಹ್ಯಾದ್ರಿ ವಲಯ, ಇವರ ವಿರುದ್ಧ ಕಲಂ 13(1)(ಇ) ಜೊತೆಗೆ 13(2)…

Read More

ನವದೆಹಲಿ : ಬೆಂಗಳೂರು ವಿಮಾನ ನಿಲ್ದಾಣದಲ್ಲಿ(Bengaluru airport) 55 ಪ್ರಯಾಣಿಕರನ್ನು ಬಿಟ್ಟಿದ್ದಕ್ಕಾಗಿ DGCA ಗೋ ಫಸ್ಟ್ (Go First) ವಿಮಾನದಲ್ಲಿ ಬರೋಬ್ಬರಿ 10 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ. ಈ ಸುದ್ದಿ ಈಗ ತಾನೆ ಬಂದಿದೆ. ಹೆಚ್ಚಿನ ಮಾಹಿತಿ ಸಿಕ್ಕ ಕೂಡಲೇ ಅಪ್ ಡೇಟ್ ಮಾಡಲಾಗುವುದು. ಪುನಃ ನಮ್ಮ ಪೇಜಿಗೆ ಭೇಟಿ ನೀಡಿ.

Read More

ಮಂಗಳೂರು: ಗಣ ರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಗುರುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆ ಸಿಐಎಸ್‌ಎಫ್ ಶ್ವಾನದಳಕ್ಕೆ ಬೆಲ್ಜಿಯನ್‌ ಮೆಲಿನೊಯ್ಸ ತಳಿಯ ಮ್ಯಾಕ್ಸ್‌ ಮತ್ತು ರೇಂಜರ್‌ ಹೆಸರಿನ ಎರಡು ಶ್ವಾನಗಳು ಸೇರ್ಪಡೆಗೊಂಡಿವೆ. ಬೆಂಗಳೂರಿನ ತರಳುವಿನಲ್ಲಿ ಸಿಐಎಸ್‌ಎಫ್‌ನ ಶ್ವಾನ ಸಂತಾನೋತ್ಪತ್ತಿ ಮತ್ತು ತರಬೇತಿ ಕೇಂದ್ರದಲ್ಲಿ ನಡೆದ ತರಬೇತಿಯಲ್ಲಿ ಮ್ಯಾಕ್ಸ್ ಪ್ರಥಮ ಮತ್ತು ರೇಂಜರ್ ದ್ವಿತೀಯ ಸ್ಥಾನ ಪಡೆದಿದೆ.ಗಣರಾಜ್ಯೋತ್ಸವ ಸಮಾರಂಭದ ಸಂದರ್ಭ ಸಿಐಎಸ್‌ಎಫ್‌ನ ಏರ್‌ಪೋರ್ಟ್ ಸೆಕ್ಯುರಿಟಿ ಗಾರ್ಡ್ಸ್ (ಎಎಸ್‌ಜಿ) ವಿಭಾಗದಿಂದ ನಾಯಿಗಳನ್ನು ಭವ್ಯವಾಗಿ ಸ್ವಾಗತಿಸಲಾಯಿತು. ಸಿಬಂದಿಗಳು ರಕ್ಷಣಾ ತಂತ್ರಗಳ ಬಗ್ಗೆ ಪ್ರಾತ್ಯಕ್ಷಿಕೆಯನ್ನೂ ನೀಡಿದರು.

Read More

ಸುಳ್ಯ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಓರ್ವ ವೃದ್ಧ ಹಾಗೂ ಗರ್ಭಿಣಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ-1: ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರತ್ ಎಂಬವರ ಪತ್ನಿ ಮಲ್ಲಿಕಾ (26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಗರ್ಭಿಣಿ. ಮೃತ ಮಹಿಳೆ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದು, ಗಣರಾಜ್ಯೋತ್ಸವ ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ. ಪ್ರಕರಣ.2: ವೃದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದ ಜಟ್ಟಿಪಳ್ಳದಲ್ಲಿ ನಡೆದಿದೆ.ವಿಶ್ವನಾಥ ಭಂಡಾರಿ(72ವ) ಎಂಬುವವರು ಮೃತ ದುರ್ದೈವಿ. ಮನೆಯ ಜಗಲಿಯಲ್ಲಿ ಕಬ್ಬಿಣದ ರಾಡ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇವರು ಕೆಲ ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದು ಮನೆಯಲ್ಲೇ ಇದ್ದರು. ಹೀಗಾಗಿ…

Read More

ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ತಾಲೂಕಿನ ಮರವೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಗೋಪಾಲ್ ಬಿಂದಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಲಿ ಕಾರ್ಮಿಕರಾಗಿರುವ ಬಾಲಕಿಯ ಪೋಷಕರ ದೂರಿನ ಪ್ರಕಾರ, ವ್ಯಕ್ತಿ ಕಾರ್ಮಿಕರ ಕೋಣೆಗೆ ನುಸುಳಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಘಟನೆ ಜನವರಿ 23 ರಂದು ವರದಿಯಾಗಿದೆ. ಆರೋಪಿಯ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More