Author: main-admin

ಕಡಬ: ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಹತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕಡಬ ತಾಲೂಕಿನ ಕುಂತೂರು ಗ್ರಾಮದ ಸಾಲೆತ್ತಡ್ಕದ ರಝಿಕ್ ಬಂಧಿತ ಯುವಕನಾಗಿದ್ದಾನೆ. ಈತನ ವಿರುದ್ದ ಪುತ್ತೂರು ನಗರ ಠಾಣೆ,ಉಪ್ಪಿನಂಗಡಿ,ಸುಳ್ಯ,ಕೊಣಾಜೆ ಹಾಗೂ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಜನವರಿ 25 ರಂದು ಈತನನ್ನು ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮಾನ್ಯ ನ್ಯಾಯಾಲವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ. ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿಎಸ್ , ಕಡಬ ಠಾಣಾ ಎಸ್.ಐ ಆಂಜನೇಯ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಕಡಬ ಠಾಣಾ ಎ ಎಸ್ ಐ ಸುರೇಶ್ ಮತ್ತು ಇಲಾಖೆ ಜೀಪಿನ ಚಾಲಕ ನಾರಾಯಣ ಪಾಟಾಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Read More

ನವದೆಹಲಿ: ಇಂದು ದೇಶದಲ್ಲಿ 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪರೇಡ್‌ನಲ್ಲಿ ವಿವಿಧ ರಾಜ್ಯಗಳ ಟ್ಯಾಬ್ಲೋ(ಸ್ತಬ್ಧಚಿತ್ರ)ಗಳ ಪ್ರದರ್ಶನ ನಡೆಯುತ್ತಿದೆ. ಈ ಬಾರಿಯ ಕರ್ನಾಟಕದ ಸ್ತಬ್ಧಚಿತ್ರ ʻನಾರಿಶಕ್ತಿ(Nari Shakti)ʼ ಎಲ್ಲರ ಗಮನ ಸೆಳೆದಿದೆ. ಈ ಮೂಲಕ ಕರ್ನಾಟಕದ ಟ್ಯಾಬ್ಲೋ ರಾಜ್ಯದ 3 ಮಹಿಳಾ ಸಾಧಕರ ಅಸಾಧಾರಣ ಸಾಧನೆಗಳನ್ನು ಸಾಂಕೇತಿಕವಾಗಿ ಅನಾವರಣಗೊಳಿಸಿದೆ.ಸೂಲಗಿತ್ತಿ ನರಸಮ್ಮ – ಸೂಲಗಿತ್ತಿ, ತುಳಸಿ ಗೌಡ ಹಾಲಕ್ಕಿ – ‘ವೃಕ್ಷ ಮಾತೆ’ ಮತ್ತು ಸಾಲುಮರದ ತಿಮ್ಮಕ್ಕ ಅವರು ಸಮಾಜಕ್ಕೆ ಸಲ್ಲಿಸಿದ ಅವರ ನಿಸ್ವಾರ್ಥ ಕೊಡುಗೆಯಿಂದಾಗಿ ಹೆಸರುವಾಸಿಯಾಗಿದ್ದಾರೆ.

Read More

ಮಂಗಳೂರು ತಾ.ಪಂ/ ಜೋಕಟ್ಟೆ ಗ್ರಾ.ಪಂ: 74ನೇ ಗಣರಾಜ್ಯೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಮೃತ ಸರೋವರ ಯೋಜನೆಯಡಿ ಮಂಗಳೂರು ತಾಲೂಕಿನ ಜೋಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಾನ್ವಿ ಕೆರೆ ದಂಡೆಯಲ್ಲಿ ಹಿರಿಯ ನಾಗರಿಕರಾದ ಶ್ರೀಮತಿ ಬೆನ್ನಿ ವೇಗಸ್ ಅವರು ಧ್ವಜಾರೋಹಣ ನೆರವೇರಿಸಿದರು. ಇತ್ತೀಚೆಗಷ್ಟೇ ಜೋಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಜಲ ಸಂರಕ್ಷಣೆಗೆ ಸಂಬಂಧಪಟ್ಟಂತೆ ಚಿತ್ರಕಲಾ ಸ್ಪರ್ಧೆ ಆಯೋಜಿಸಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಈ ಸುಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಶ್ರೀ ಉಮ್ಮರ್‌ ಫಾರುಕ್ ಪಂಚಾಯತ್‌ ಅಧ್ಯಕ್ಷರು , ಶ್ರೀ ಅಬ್ದುಲ್ಲಾ ಆಸಫ್‌ ಪಂಚಾಯತ್‌ ಅಭಿವೃದ್ದಿ ಅಧಿಕಾರಿ , ಸದಸ್ಯರು ಪ್ರೆಸಿಲ್ಲಾ ಮೊಂತೇರೊ, ಶ್ರೀಮತಿ ನಿಶ್ಮಿತ. ಬಿ ತಾಲೂಕು ಪಂಚಾಯತ್‌ ಐಇಸಿ ಸಂಯೋಜಕರು ಹಾಗೂ ಗ್ರಾಮ ಪಂಚಾಯತ್‌ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಕಾರ್ಕಳ: ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಕಾರಿನೊಳಗೆ ಸ್ವಯಂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ನಡೆದಿದೆ. ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ(46) ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡವರು.ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಕೃಷ್ಣ ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ತನ್ನ ತಮ್ಮ ಶೇಖರ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತಾನು ತನ್ನ ಓಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳದಲ್ಲಿ ಡೆತ್ ನೋಟು ಸಿಕ್ಕಿದ್ದು, ಸ್ಥಳಕ್ಕೆ ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Read More

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ಅಬ್ದುಲ್ ಕರೀಂ ಅವರಿಗೆ ಎಸ್.ಡಿ.ಪಿ.ಐ ಕಾರ್ಯಕರ್ತರೆನ್ನಲಾದ ವ್ಯಕ್ತಿಗಳು ದೂರವಾಣಿ ಕರೆಮಾಡಿ ಬೆದರಿಕೆ ಹಾಕಿರುವುದಾಗಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿರುವುದಾಗಿ ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಮುಖಂಡರುಗಳ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಗಳನ್ನು ಹಾಕಲಾಗುತ್ತಿದ್ದು ಈ ಬಗ್ಗೆ ಅಲ್ಲಿಯೇ ಉತ್ತರ ನೀಡಿದ್ದೆ ಅದಕ್ಕೆ ಗ್ರೂಪಿನಲ್ಲಿಯೇ ಕೆಲವರು ಬೆದರಿಕೆ ಹಾಕಿದ್ದರು. ಇದಾದ ಬಳಿಕ ಕೆಲವು ಅಪರಿಚಿತ ನಂಬರ್ ಗಳಿಂದ ಕರೆ ಬಂದಿದ್ದು ಜೀವ ಬೆದರಿಕೆ ಹಾಕಿದ್ದಾರೆ. ಎಸ್.ಡಿ.ಪಿ.ಐಯವರಿಗೆ ಉತ್ತರ ನೀಡುತ್ತೀರಾ ಎಂದು ಕೇಳಿ ಮನೆಗೇ ಬಂದು ಕೊಲೆ ಮಾಡುವುದಾಗಿ ಕೊಲೆ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನಗರ ಅಧ್ಯಕ್ಷ ಸಲೀಂ ಗುರುವಾಯನಕೆರೆ, ವಿನ್ಸೆಂಟ್ ಡಿಸೋಜ, ಮೆಹಬೂಬ್, ರಫಿ ಬೆಳ್ತಂಗಡಿ, ಲತೀಫ್, ಎ.ಕೆ ಅಹಮ್ಮದ್, ಕೆ.ಹೆಚ್ ಖಾಲೀದ್, ಪುಲಾಬೆ ಇದ್ದರು.

Read More

ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆ ನಡೆದಿದ್ದು, ಪಾಪಿ ಪತಿಯೊಬ್ಬ ಮಗಳ ಎದುರೇ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅರಳಕುಪ್ಪೆ ಗ್ರಾಮದ ಶೋಭಾ (43) ಕೊಲೆಯಾದ ದುರ್ದೈವಿ. ಮನೋಹರ್ (48) ಪತ್ನಿಯನ್ನೇ ಕೊಂದ ಕಿರಾತಕ ಪತಿ.ಕಂಠಪೂರ್ತಿ ಕುಡಿದು ಪ್ರತಿನಿತ್ಯ ಮನೆಗೆ ಬರುತ್ತಿದ್ದ ಮನೋಹರ್ ಪತ್ನಿ ಜೊತೆ ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದನು. ಕುಡಿದ ಮತ್ತಿನಲ್ಲಿ ಪತ್ನಿಗೆ ಮನಬಂದಂತೆ ಬೈದು ಜಗಳ ತಾರಕಕ್ಕೆ ಏರಿದೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮನೋಹರ್ ಪತ್ನಿ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಮಗಳು ಅನುಷಾ ಸ್ಥಳೀಯರ ಬಳಿ ಸಹಾಯಕ್ಕೆ ಅಂಗಲಾಚಿದರೂ ಯಾರೂ ಕೂಡ ಬರಲಿಲ್ಲ ಎನ್ನಲಾಗಿದೆ. ನಂತರ ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳ್ತಂಗಡಿ; ತಾಲೂಕಿನ ಕಡಿರುದ್ಯಾವರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷ ಕಠಿಣ ಸಜೆ ಹಾಗೂ ರೂ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೆ ಒಳಗಾಗಿರುವ ಆರೋಪಿ ಕಡಿರುದ್ಯಾವರ ಗ್ರಾಮದ ಎರ್ಮಾಳಪಳ್ಕೆ ನಿವಾಸಿ ಬಾಬಿ(48) ಎಂಬಾತನಾಗಿದ್ದಾನೆ. ಈತ 2021ರ ಡಿಸೆಂಬರ್ ನಿಂದ 2022ರ ಫೆಬ್ರವರಿಯವರೆಗೆ ತನ್ನ ಪರಿಚಯದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಬಗ್ಗೆ ಬಾಲಕಿ 2022ರ ಮಾರ್ಚ್ ಮೂರರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬೆಳ್ತಂಗಡಿ ವೃತ್ತನಿರೀಕ್ಷಕ ಶಿವಕುಮಾರ್ ಅವರ ನೇತೃತವದಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸಿ ಆರೋಪಿ ಬಾಬಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಅರೋಪಿ ಮಾಡಿರುವ ಆರೋಪ ಸಾಬೀತಾಗಿದ್ದು, ನ್ಯಾಯಾಲಯದ ನ್ಯಾಯಾಧೀಶರಾದ ರಾಧಾಕೃಷ್ಣ ಅವರು ಜ 24 ರಂದು ಆರೋಪಿಗೆ …

Read More

ಧರ್ಮಸ್ಥಳ: ವ್ಯಕ್ತಿಯೊಬ್ಬರು ನೇತ್ರಾವತಿ ಸೇತುವೆ ಮೇಲಿನಿಂದ ನೀರಿಗೆ ಹಾರಿ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಧರ್ಮಸ್ಥಳ ಕನ್ಯಾಡಿ ಸಮೀಪ ನಡೆದಿದೆ ಮೈಸೂರಿನ ಮಂಜು (52) ಎಂಬವರು ಈ ಕೃತ್ಯ ಎಸಗಿದವರಾಗಿದ್ದು, ಇವರು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ಮನೆಯವರೊಂದಿಗೆ ಗಲಾಟೆ ಮಾಡಿ ಮಾನಸಿಕವಾಗಿ ನೊಂದು ಕನ್ಯಾಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಜ.24ರಂದು ಸಂಜೆ ನೇತ್ರಾವತಿ ಸೇತುವೆ ಮೇಲಿನಿಂದ ನದಿಗೆ ಹಾರಿದಾಗ ಸ್ಥಳೀಯರು ರಕ್ಷಿಸಿದ್ದಾರೆ.ಅವರ ಕೈ,ಕಾಲಿಗೆ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು: ರಾಜ್ಯಾದ್ಯಂತ ಕ್ಷ ಕಿರಣ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಏಕೆಂದರೆ, ಆರೋಗ್ಯ ಇಲಾಖೆಯ ಕ್ಷ ಕಿರಣ ವಿಕಿರಣ ಸುರಕ್ಷತಾ ನಿರ್ದೇಶನಾಲಯದ ನಿರ್ದೇಶಕರ ಹುದ್ದೆಗೆ ಅರ್ಹತೆ ಹೊಂದಿಲ್ಲದ ಅಧಿಕಾರಿಯನ್ನು ನಿಯೋಜಿಸಿರುವುದಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಕೇಂದ್ರ ಸರ್ಕಾರದ ಪರಮಾಣು ಶಕ್ತಿ ನಿಯಂತ್ರಣ ಮಂಡಳಿಯ(ಎಇಆರ್‌ಬಿ) ನಿಯಮಗಳನ್ನು ಗಾಳಿಗೆ ತೂರಿ ಅನರ್ಹತೆ ಹೊಂದಿರುವ ಡಾ.ಎನ್.ರವಿ ಎಂಬುವರನ್ನು ನೇಮಿಸಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ನಿರ್ದೇಶಕರ ಹುದ್ದೆ ಗ್ರೂಪ್ ‘ಎ’ ಹುದ್ದೆಯಾಗಿದೆ. ಅರ್ಹತೆ ಇರುವವರನ್ನು ನೇಮಿಸು ಬದಲು ಅನರ್ಹತೆ ಇರುವ ರೇಡಿಯೇಷನ್ ಸೆಫ್ಟಿ ಅಧಿಕಾರಿಯನ್ನು ಕಾನೂನುಬಾಹಿರವಾಗಿ ನೇಮಿಸಲಾಗಿದೆ. ಇದರ ಬಗ್ಗೆ ಸರ್ಕಾರ ಎಚ್ಚೆತ್ತುಗೊಳ್ಳದಿದ್ದರೆ, ಬರುವ ದಿನಗಳಲ್ಲಿ ಕ್ಷ ಕಿರಣ ಸೇವೆಯೇ ರದ್ದಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಹುದ್ದೆಗೆ ನೇಮಿಸಲು ಆರೋಗ್ಯ ಇಲಾಖೆ ಮತ್ತು ಮಂಡಳಿ ನಡುವೆ ಪರಸ್ಪರ ಒಪ್ಪಂದ ಮಾಡಿಕೊಂಡಿವೆ. ಒಪ್ಪಂದ ಅನ್ವಯ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಭೌತಶಾಸದಲ್ಲಿ ಎಂಎಸ್ಸಿ ಪದವಿ ಪಡೆದಿರಬೇಕು. ರೇಡಿಯಾಲಜಿಕಲ್ ಭೌತಶಾಸ್ತ್ರದಲ್ಲಿ ಎಂಎಸ್ಸಿ ಡಿಪ್ಲೊಮಾ ಪಡೆದಿರಬೇಕು. ಜತೆಗೆ, ಪ್ರತಿಷ್ಠಿತ ಅಕಾಡೆಮಿಕ್…

Read More

ಮಂಗಳೂರು : ಸಶಸ್ತ್ರ ಸೀಮಾಬಲ್‌ನಲ್ಲಿ ಭೋಪಾಲ್‌ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್‌ ಮುರಳೀಧರ್‌ ರೈ (37) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರವಿವಾರ ಭೋಪಾಲ್‌ನಲ್ಲಿ ಮಲಗಿದಲ್ಲೇ ಅವರಿಗೆ ಹೃದಯಾಘಾತವಾಗಿದ್ದು, ಸೋಮವಾರ ಬೆಳಗ್ಗೆ ಜತೆಗಿದ್ದವರು ಕರೆದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಊರಿಗೆ ಬರುವವರಿದ್ದರುಮುರಳೀಧರ್‌ ರೈ ಅವರು 2007ರಲ್ಲಿ ಕಾನ್‌ಸ್ಟೆಬಲ್‌ ಆಗಿ ಸಶಸ್ತ್ರ ಸೀಮಾ ಬಲ್‌ಗೆ ಸೇರಿದ್ದರು. ರವಿವಾರ ರಾತ್ರಿ ವೀಡಿಯೋ ಕಾಲ್‌ ಮೂಲಕ ಪತ್ನಿ ಜತೆ ಮಾತನಾಡಿದ್ದರು. ಫೆ. 5ರಂದು ನಡೆಯಲಿದ್ದ ತಾಯಿಯ ನಿಧನದ ಮೊದಲ ವರ್ಷದ ಕಾರ್ಯಕ್ರಮಕ್ಕಾಗಿ ಎರಡು ವಾರದ ರಜೆಯಲ್ಲಿ ಮಂಗಳವಾರ ಹೊರಟು ಬುಧವಾರ ಊರಿಗೆ ಬರುವವರಿದ್ದರು. ಅವರು ಪತ್ನಿ ಹಾಗೂ ಏಳು ತಿಂಗಳ ಮಗುವನ್ನು ಅಗಲಿದ್ದಾರೆ. ಇಂದು ಅಂತ್ಯಸಂಸ್ಕಾರಭೋಪಾಲ್‌ನಿಂದ ವಿಮಾನದ ಮೂಲಕ ಮುರಳೀಧರ ಅವರ ಮೃತದೇಹವನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಯಿತು. ಡಿಸಿ ರವಿ ಕುಮಾರ್‌ ಎಂ.ಆರ್‌., ಜಿ.ಪಂ. ಸಿಇಒ ಡಾ| ಕುಮಾರ್‌, ಸಹಾಯಕ ಆಯುಕ್ತ ಮದನ್‌ ಮೋಹನ್‌…

Read More