Author: main-admin

ಮಂಗಳೂರು: ಇನ್‌ಸ್ಟ್ರಾಗ್ರಾಮ್‌ನಲ್ಲಿ PRAKARA TV ಎಂಬ ಹೆಸರಿನ ಅಕೌಂಟ್‌ನಲ್ಲಿ ಕಾಸರಗೋಡು ಜಿಲ್ಲೆಯ ಕುಂಬ್ಳೆ ತಾಲೂಕಿನ ಸೀತಂಗೋಳಿ ಎಂಬಲ್ಲಿ ಯುವಕರ ನಡುವೆ ನಡೆದ ಹಲ್ಲೆಯ ವಿಡಿಯೋದ ಮೇಲೆ “ಮಂಗಳೂರು: ನಡುರಸ್ತೆಯಲ್ಲೇ ಗ್ಯಾಂಗ್‌ವಾರ್, ಯುವಕನ ಕುತ್ತಿಗೆಯಲ್ಲೇ ಉಳಿದುಕೊಂಡ ಡ್ರ್ಯಾಗರ್‌” ಎಂಬುದಾಗಿ ಬರೆದು ಪ್ರಸಾರ ಮಾಡಿದ ಆರೋಪದ ಮೇಲೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕದ್ರಿ ಠಾಣೆಯಲ್ಲಿ ಸಾಮಾಜಿಕ ಜಾಲತಾಣಗಳ ಮಾನಿಟರಿಂಗ್ ಕರ್ತವ್ಯವನ್ನು ನಿರ್ವಹಿಸಿಕೊಂಡಿರುವ ನಾಗರಾಜ್ ಅ.9ರಂದು ಮಧ್ಯಾಹ್ನ 1ಕ್ಕೆ ಕದ್ರಿ ಪಾರ್ಕ್‌ನಲ್ಲಿ ಕರ್ತವ್ಯದಲ್ಲಿರುವ ವೇಳೆ ಇನ್‌ಸ್ಟ್ರಾಗ್ರಾಮ್ ಪರಿಶೀಲಿಸುತ್ತಿರುವಾಗ ಸಿತಾಂಗೋಳಿಯಲ್ಲಿ ನಡೆದ ಕೃತ್ಯವು ಮಂಗಳೂರಿನಲ್ಲಿ ನಡೆದಿದೆ ಎಂಬಂತೆ ಬಿಂಬಿಸುವಂತೆ ಸುಳ್ಳು ಸುದ್ದಿಯ ವಿಡಿಯೋವನ್ನು ಪೋಸ್ಟ್ ಮಾಡಿರುವುದನ್ನು ಕಂಡಿದ್ದಾರೆ

Read More

ನಿಷೇಧಿತ ಸಂಘಟನೆ ಪಿಎಫ್‌ಐ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಲ್ಲದೆ, ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಪ್ರಚಾರ ಮಾಡುತ್ತಿದ್ದ ಉಪ್ಪಿನಂಗಡಿ ಮೂಲದ ಮುಸ್ಲಿಂ ಧರ್ಮಗುರು ಸೈಯದ್ ಇಬ್ರಾಹಿಂ ತಂಙಳ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪಿಎಫ್‌ಐ ಕಾನೂನು ಬಾಹಿರ ಸಂಘಟನೆಯೆಂದು 28-09-2022 ರಂದು ಭಾರತ ಸರ್ಕಾರ ಘೋಷಣೆ ಮಾಡಿತ್ತು. ಇದರ ಅರಿವಿದ್ದರೂ, ಹಳೆಯ ಪಿಎಫ್‌ಐ ಪ್ರಮುಖರ ಜೊತೆಗೆ ಸಂಪರ್ಕದಲ್ಲಿದ್ದುಕೊಂಡು ಅ.9ರಂದು ಆರೋಪಿ ಸೈಯ್ಯದ್ ಇಬ್ರಾಹಿಂ ತಂಙಳ್ (55) ಸಾಮಾಜಿಕ ಜಾಲತಾಣ ವಾಟ್ಸ್ ಆಪ್ ಗ್ರೂಪ್ ನಲ್ಲಿ ಕೇಂದ್ರ ಸರಕಾರದಿಂದ ನಿಷೇಧಕ್ಕೊಳಗಾದ ಪಿಎಫ್ಐ ಸಂಘಟನೆಯ ಪರವಾಗಿ ಪೋಸ್ಟ್ ಪ್ರಕಟಿಸಿದ್ದ. ಅಲ್ಲದೇ ಈ ಬಗ್ಗೆ ಸ್ವಯಂ ಪ್ರೇರಿತನಾಗಿ ಪ್ರಚಾರ ಮಾಡಿದ್ದ. ಸೈಯದ್ ಇಬ್ರಾಹಿಂ ನಿಷೇಧಿತ ಸಂಘಟನೆ ಪರವಾಗಿ ಕೃತ್ಯವೆಸಗಿದ್ದರಿಂದ, ಸ್ವಯಂ ದೂರನ್ನು ಪಡೆದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 113/2025 U/s 10 (a), (i), 13, 18 UAPA Act ರಂತೆ ದಾಖಲಾಗಿದೆ. ಆರೋಪಿಯನ್ನು ಮಂಗಳೂರು ನಗರದ ಉರ್ವ ಸ್ಟೋರ್ ಬಳಿಯಿಂದ ವಶಕ್ಕೆ ಪಡೆದು…

Read More

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಎಸ್‌ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ನ್ಯಾಯಾಲಯವು ಆರೋಪಿಗೆ ಅ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. 2025ರ ಮೇ 27ರಂದು ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಬಳಿಕ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದ. ಅಲ್ಲದೆ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿಯೂ ಆರೋಪಿ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈತನ ವಿರುದ್ಧ ಬಂಟ್ವಾಳ ನಗರ ಠಾಣೆ, ಬಂಟ್ವಾಳ ಗ್ರಾಮಾಂತರ ಠಾಣೆ, ಉಪ್ಪಿನಂಗಡಿ ಠಾಣೆ, ಪುತ್ತೂರು ನಗರ ಠಾಣೆ ಸಹಿತ 15 ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತರ ಮತ್ತು ಸಂಚು ರೂಪಿಸಿದ ಆರೋಪದ ಹಿನ್ನೆಲೆಯಲ್ಲಿ, ಮಹೇಶ ಶೆಟ್ಟಿ, ತಿಮರೋಡಿ, ಎಂ ಡಿ ಸಮೀರ್ ಗಿರೀಶ್ ಮಟ್ಟಣ್ಣನವರ್ ಟಿ. ಜಯಂತ್, ಅಜಯ್ ಅಂಜನ್ ವಿರುದ್ಧ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು. ಎಸ್ಐಟಿ, ಆದಾಯ ತೆರಿಗೆ ಇಲಾಖೆ ಮತ್ತು ಇಡಿ ಇಂದ ತನಿಖೆಗೆ ಮನವಿ ಮಾಡಲಾಗಿದೆ. ತೇಜಸ್ ಗೌಡ, ಧನ ಕೀರ್ತಿ ಅರಿಗ ಇತರರಿಂದ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಈ ಹಿನ್ನೆಲೆ ಇದೀಗ ಗೃಹ ಇಲಾಖೆ, ಎಸ್ಐಟಿ, ಇಡಿ ಮತ್ತು ಐಟಿ ಇಲಾಖೆಗೆ ಹೈ ಕೋರ್ಟ್ ನೋಟಿಸ್ ನೀಡಿದೆ. ಬಳಿಕ ವಿಚಾರಣೆಯನ್ನು ಅಕ್ಟೋಬರ್ 16ಕ್ಕೆ ನಿಗದಿಪಡಿಸಿತು. ಧರ್ಮಸ್ಥಳದ ವಿರುದ್ಧ ಆಧಾರ ರಹಿತ ಸುಳ್ಳು ಆರೋಪ ಮಾಡಿದ್ದಾರೆ. ಕೋಟ್ಯಾಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ದೂರು ನೀಡಿದರೂ ಪ್ರತಿವಾದಿಗಳು ತನಿಖೆ ನಡೆಸಿಲ್ಲ. ಹೀಗಾಗಿ ಸಮಗ್ರ ತನಿಖೆಗೆ ನಿರ್ದೇಶನ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

Read More

ಚಿತ್ರದುರ್ಗ: ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್​​ ಸಹ ಕಾರ್ಯದರ್ಶಿ ಶರಣ್ ಪಂಪ್​​ವೆಲ್​​ಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ, ಮತ್ತು ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್ವೆಲ್ಗೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ಪ್ರಶ್ನಸಿ ಶರಣ್ ಪಂಪ್ವೆಲ್ ಹೈಕೋರ್ಟ್ ಮೊರೆ ಹೋಗಿದ್ದರು. ಕೆಲ ಷರತ್ತು ವಿಧಿಸಿ ಜಿಲ್ಲಾಡಳಿತದ ನಿರ್ಬಂಧವನ್ನು ಹೈಕೋರ್ಟ್ ತೆರವುಗೊಳಿಸಿತ್ತು. ಸೆಪ್ಟೆಂಬರ್​ 13 ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ ವೇಳೆ ಬೆಳಗ್ಗೆ 10:30ರಿಂದ 12:30ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಶರಣ್ ಪಂಪ್​​ವೆಲ್​​ ಅಂದಿನ ದಿನ 12:30ರ ಬದಲು 12:45ರವರೆಗೆ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದು, ಜೊತೆಗೆ ಶೋಭಾಯಾತ್ರೆಯಲ್ಲಿ ಭಾಷಣ ಕೂಡ ಮಾಡಿದ್ದರು. ಈ ಬಗ್ಗೆ ಪೊಲೀಸರು ಹೈಕೋರ್ಟ್ ಗಮನಕ್ಕೆ ತಂದಿದ್ದರು. ಹೀಗಾಗಿ ಆದೇಶ ಉಲ್ಲಂಘಿಸಿದ್ದಕ್ಕೆ ಇದೀಗ ಹೈಕೋರ್ಟ್…

Read More

ಮಂಗಳೂರು: ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಾದಿಕ್ ಹಾಗೂ ಅಬ್ದುಲ್ ಮಜೀದ್ ಬಂಧಿತ ಆರೋಪಿಗಳು.ಬಂಧಿತರಿಂದ 88,700 ರೂ. ಮೌಲ್ಯದ 8.790 ಕಿಲೋ ಗ್ರಾಂ ಗಾಂಜಾ, 1,00,000 ರೂ. ಮೌಲ್ಯದ ಬೈಕ್ ಸೇರಿದಂತೆ ಒಟ್ಟು 2,17,460 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬುಧವಾರ ಬೆಳಗ್ಗೆ ಬಂಟ್ವಾಳ ಪಿಎಸ್‌ಐ ಸಂದೀಪ್‌ ಕುಮಾ‌ರ್ ಶೆಟ್ಟಿ ಠಾಣಾ ವ್ಯಾಪ್ತಿಯಲ್ಲಿ ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಗೂಡಿನಬಳಿ ಸಮೀಪ ಪಾಣೆಮಂಗಳೂರು ಕಡೆಯಿಂದ ಬಿ.ಸಿ.ರೋಡು ಕಡೆಗೆ ಬೈಕ್‌ನಲ್ಲಿ ಹೆಲೈಟ್ ಧರಿಸದೆ ಬರುತ್ತಿದ್ದ ಇಬ್ಬರನ್ನು ನಿಲ್ಲಿಸಲು ಸೂಚಿಸಿದಾಗ, ಅವರು ಬೈಕನ್ನು ನಿಲ್ಲಿಸದೆ ಪರಾರಿಯಾದರು. ಈ ವೇಳೆ ಅವರನ್ನು ಬೆನ್ನಟ್ಟಿದ ಪೊಲೀಸರು ಕೈಕುಂಜೆ ರೈಲ್ವೆ ಸ್ಟೇಷನ್ ಬಳಿ ಬೈಕನ್ನು ಸುತ್ತುವರಿದು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದಾಗ ಅವರು ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಈ ಹಿಂದೆ ಪಿಕಪ್ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ವೇಳೆ…

Read More

ಉಡುಪಿ: ದಿನಾಂಕ 09/10/2025ರಂದು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕೆಜಿ 937 ಗ್ರಾಂ 209 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 7,12,963/- ಬೆಲೆಯ ಗಾಂಜಾ, 345 ಗ್ರಾಂ 596 ಮಿಲಿಗ್ರಾಂ ಎಂ.ಡಿ.ಎಂ.ಎ. ಅಂದಾಜು ಮೌಲ್ಯ ರೂಪಾಯಿ 8,08,464/- ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ ಪೌಡರ್‌ನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು. ನಾಶಪಡಿಸಿದ ಮಾದಕ ದ್ರವ್ಯದ ಒಟ್ಟು ಅಂದಾಜು ಮೌಲ್ಯ ರೂಪಾಯಿ 15,21,427/- ಆಗಿರುತ್ತದೆ. ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿಯ ಅಧ್ಯಕ್ಷರಾದ ಹರಿರಾಮ್‌ ಶಂಕರ್‌, ಐಪಿಎಸ್‌, ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿ ಸದಸ್ಯರು ಹಾಗೂ ಸಹಾಯಕ ಪೊಲೀಸ್‌ ಅಧೀಕ್ಷಕರಾದ ಡಾ. ಹರ್ಷಾ ಪ್ರಿಯಂವದಾ ಐ.ಪಿ.ಎಸ್. ಮತ್ತು ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರು ಹಾಗೂ ಸದಸ್ಯರಾದ ಪ್ರಭು ಡಿ.ಟಿ. ಇತರ ಪೊಲೀಸ್‌ ಅಧಿಕಾರಿಯವರು…

Read More

ಪುತ್ತೂರು :  ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ಯುವಕನೋರ್ವನನ್ನು ಬೆಂಗಳೂರಿನಲ್ಲಿ 3 ತಿಂಗಳ ಕಾಲ ಅಕ್ರಮವಾಗಿ ಕೂಡಿ ಹಾಕಿ ಹಲ್ಲೆಗೈದ ಘಟನೆ ನಡೆದಿದೆ. ಈ ಬಗ್ಗೆ ಬೆಂಗಳೂರಿನ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಅಪಹರಣಕ್ಕೊಳಗಾದ ಸಫಾ ನಗರ ಮಠ ನಿವಾಸಿ  ಮೊಹಮ್ಮದ್ ಮುಸ್ತಫಾ ಎಂಬವರು ನೀಡಿದ ದೂರಿನನ್ವಯ ಬಿಎನ್‌ಎಸ್ ಸೆಕ್ಷನ್ 118(1), 127(4), 140(2), 351(2),352,3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ದೇವನಹಳ್ಳಿ ಠಾಣಾ ಪೊಲೀಸರು, ಅಜಯ್, ಕಾರ್ತಿಕ್, ಜೀವನ್ ಎಂಬ ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ನಾಲ್ಕನೇ ಆರೋಪಿ ಲಕ್ಷಣ್  ತಲೆ ಮರೆಸಿಕೊಂಡಿದ್ದು ಆತನ ಪತ್ತೆಗೆ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಚೀಫ್ ಫೈನಾಸ್ಸಿಂಗ್ ಆಫೀಸರ್ ಆಗಿ ಸಂತ್ರಸ್ಥ ಯುವಕ ಕೆಲಸಕ್ಕಿದ್ದು ಸ್ನೇಹಿತ ಮೊಹಮ್ಮದ್ ರಾಜೀ ಎಂಬಾತನ ಜೊತೆ ಇಂದಿರಾನಗರದ ಬಳಿಯಿರುವ ಲಾಡ್ಜೊಂದರಲಿ ವಾಸವಾಗಿದ್ದ. ಅಲ್ಲಿಗೆ ಬಂದ ಕಾರ್ತಿಕ್ ಎಂಬವರು ಮೊಹಮ್ಮದ್ ರಾಜೀ ಜೊತೆ ಮಾತುಕತೆ ನಡೆಸುತ್ತಿದ್ದ. ಆ ದಿನ ಮೊಹಮ್ಮದ್ ರಾಜೀಯು ತನಗೇನೋ…

Read More

ಚೆನ್ನೈ: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ಸೇವಿಸಿ ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಪ್ ತಯಾರಿಕ ಕಂಪನಿಯ ಮಾಲೀಕನನ್ನು ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. ಸಿರಪ್ ಕುಡಿದು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 20ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಬಳಿಕ ಕೋಲ್ಡ್ರಿಫ್ ಸಿರಪ್ ಅನ್ನು ನಿಷೇಧಿಸಲಾಯಿತು. ಈ ಬೆನ್ನಲ್ಲೇ ಸಿರಪ್ ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾ ಕಂಪನಿಯ ಮಾಲೀಕ ರಂಗನಾಥನ್ ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 20,000 ರೂ. ಬಹುಮಾನವನ್ನೂ ಘೋಷಿಸಲಾಗಿತ್ತು. ಅಂತಿಮವಾಗಿ ಬುಧವಾರ ತಡರಾತ್ರಿ ಚೆನ್ನೈನಲ್ಲಿ ರಂಗನಾಥನ್‌ನನ್ನು ಬಂಧಿಸಲಾಗಿದೆ. ಸಿರಪ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಷಕಾರಿ ಕೈಗಾರಿಕಾ ರಾಸಾಯನಿಕ ಡೈಥಿಲೀನ್ ಗ್ಲೈಕೋಲ್ ಇರುವುದು ಪತ್ತೆಯಾದ ಬಳಿಕ ಮಾಲೀಕನನ್ನು ಅರೆಸ್ಟ್ ಮಾಡಲಾಗಿದೆ. ಸದ್ಯ ರಂಗನಾಥನ್‌ನನ್ನು ಚೆನ್ನೈನಿಂದ ಛಿಂದ್ವಾರಕ್ಕೆ ಪೊಲೀಸರು ಕರೆ ತರುತ್ತಿದ್ದು, ನಂತರ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಈ ಹಿಂದೆ ಸ್ರೆಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮಧ್ಯಪ್ರದೇಶವಲ್ಲದೆ ರಾಜಸ್ಥಾನದಲ್ಲೂ ಈ ಸಿರಪ್ ಸೇವಿಸಿದ ನಂತರ ಮಕ್ಕಳು ಸಾವನ್ನಪ್ಪಿರುವ ವರದಿಗಳಿವೆ. ಕೋಲ್ಡ್ರಿಫ್ ಹೆಸರಿನ ಈ ಸಿರಪ್…

Read More

ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ಸಮುದ್ರ ಪಾಲಾದ  ಘಟನೆ ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಬುಧವಾರ ಸಂಜೆ ನಡೆದಿದೆ. ಮನೋಹರ್ ಪುತ್ರನ್ (53) ಮೃತ ದುರ್ದೈವಿಯಾಗಿದ್ದಾರೆ. ಸಾಯಂಕಾಲ ಸರಿ ಸುಮಾರು 6:30 ಸಮಯ ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಪುತ್ರನ್ ಹೋಗಿದ್ದರು ಎನ್ನಲಾಗಿದೆ. ಈ ಸಂದರ್ಭ ಆಕಸ್ಮಿಕವಾಗಿ ಸಮುದ್ರ ಪಾಲಾಗಿ ಕಣ್ಮರೆಯಾಗಿದ್ದರು. ಮಾಹಿತಿ ಪಡೆದ ಪಣಂಬೂರು ಠಾಣಾ ಪೋಲಿಸರು ಸ್ಥಳಕ್ಕೆ ಧಾವಿಸಿ ಸ್ಥಳೀಯ ಮೀನುಗಾರರ ಸಹಾಯದಿಂದ ಹುಡುಕಾಟ ಆರಂಭಿಸಿ ಸುಮಾರು ರಾತ್ರಿ 9:30 ಸಮಯ ಮೃತ ದೇಹವನ್ನು ಮೇಲಕ್ಕೆತ್ತಲಾಯಿತು. ಪಣಂಬೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಾಲಾಗಿದೆ

Read More