ಪುತ್ತೂರು: ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ನಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕಬಕದ ಮಹಮ್ಮದ್ ಮುಸ್ತಫಾ(36) ಎಂದು ಗುರುತಿಸಲಾಗಿದೆ. ಆರೋಪಿ ಮುಕ್ರಂಪಾಡಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ 14 ಗ್ರಾಂ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದನು. ಆರೋಪಿಯ ವಿರುದ್ಧ ಈಗಾಗಲೇ ಪೋಕ್ಸೋ ಪ್ರಕರಣ ಸಹ ದಾಖಲಾಗಿ, ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಸಹ ಮುಗಿಸಿದ್ದ ಎಂದು ತಿಳಿದು ಬಂದಿದೆ. 2024 ರಲ್ಲಿಯೂ ಈತನ ವಿರುದ್ಧ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಕಾರಣಕ್ಕೆ ಪ್ರಕರಣಗಳು ದಾಖಲಾಗಿದ್ದವು.
Author: main-admin
ಮಂಗಳೂರು: ಗಂಡನ ಮೇಲಿನ ಕೋಪದಲ್ಲಿ ಟೆಕ್ಸ್ ಟೈಲ್ ಅಂಗಡಿಗೆ ಬುಧವಾರ ಸಂಜೆ ವೇಳೆಗೆ ಬುರ್ಖಾ ಧರಿಸಿ ಬಂದಿದ್ದ ಪತ್ನಿಯೇ ತನ್ನ ಪತಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ಸಂಭವಿಸಿದೆ. ಕೃಷ್ಣ ಕುಮಾರ್ ಸೋಮಯಾಜಿ ಹಲ್ಲೆಗೀಡಾದವರಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದು ಹಲ್ಲೆ ಮಾಡಿದ್ದಾರೆ. ಬಿ.ಸಿ ರೋಡಿನ ಸೋಮಯಾಜಿ ಟೆಕ್ಸ್ ಟೈಲ್ ಅಂಗಡಿಗೆ ಸಂಜೆ ಏಳು ಗಂಟೆ ವೇಳೆಗೆ ಬುರ್ಖಾ ಧರಿಸಿ ಗ್ರಾಹಕನ ಸೋಗಿನಲ್ಲಿ ಬಂದಿದ್ದ ಪತ್ನಿ ಕ್ಯಾಶ್ ಕೌಂಟರ್ ನಲ್ಲಿ ಕುಳಿತ್ತಿದ್ದ ಪತಿಗೆ ಕತ್ತಿಯಲ್ಲಿ ಕಡಿದು ಪರಾರಿಯಾಗಿದ್ದರು. ಕೈಗೆ ಗಂಭೀರ ಗಾಯಗೊಂಡ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇತ್ತೀಚೆಗೆ ಗಂಡ – ಹೆಂಡತಿ ಮಧ್ಯೆ ಕೌಟುಂಬಿಕ ಕಲಹ ಉಂಟಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದೇ ವಿಷಯದಲ್ಲಿ ಪತ್ನಿ ನೇರವಾಗಿ ಅಂಗಡಿಗೆ ಬಂದು ಕತ್ತಿಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ (51) ಬುಧವಾರ ಬೆಳಿಗ್ಗೆ ಕರ್ತವ್ಯದಲ್ಲಿರುವಾಗ ಹೃದಯಾಘಾತದಿಂದ ನಿಧನರಾದರು. ಗಣೇಶ್ ಎಂದಿನಂತೆ ಶಾಲೆಗೆ ಬಂದಿದ್ದರು, ಆದರೆ ಕರ್ತವ್ಯದ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡ ನಂತರ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಅವರನ್ನು ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರನ್ನು ಬದುಕಿಸಲು ಪ್ರಯತ್ನಿಸಿದರು, ಆದರೆ ಅವರ ಪ್ರಯತ್ನಗಳ ಹೊರತಾಗಿಯೂ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಮಾರ್ಪಳ್ಳಿಯ ನಿವಾಸಿಯಾಗಿದ್ದ ಅವರು, ಸ್ಥಳೀಯ ಸ್ನೇಹಿತರ ಸಂಘಗಳು, ಭಜನಾ ಮಂಡಳಿ ಮತ್ತು ಗದ್ದಿಗೆ ಅಮ್ಮನವರ ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಕ್ಕಾಗಿ ಆ ಪ್ರದೇಶದಲ್ಲಿ ಪ್ರಸಿದ್ಧರಾಗಿದ್ದರು. ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಬೆಂಗಳೂರು : ದ್ವಿಚಕ್ರ ವಾಹನಗಳಲ್ಲಿ ಮಕ್ಕಳು ಹಿಂಬದಿ ಸವಾರಿ ಮಾಡುವಾಗ ಗರಿಷ್ಠ ವೇಗ ಮಿತಿಯನ್ನು ಸೂಚಿಸುವ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು 2022 ರ ನಿಯಮ 138 (7) ರ ಅನುಷ್ಠಾನಕ್ಕೆ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಬುಧವಾರ ರಾಜ್ಯಕ್ಕೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠವು ಈ ವಿಚಾರಣೆ ನಡೆಸಿದ್ದು, ಕೇಂದ್ರ ಮೋಟಾರು ವಾಹನ ನಿಯಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ರಾಜ್ಯ ಅಧಿಕಾರಿಗಳು ಕೆಲವು ಕ್ರಮಗಳನ್ನು ತೆಗೆದುಕೊಂಡಿದ್ದರೂ, ವಾಸ್ತವವಾಗಿ ಈ ನಿಯಮವನ್ನು ಇನ್ನೂ ಜಾರಿಗೆ ತಂದಿಲ್ಲ. ಈ ನಿಯಮವನ್ನು ಜಾರಿಗೆ ತರಬೇಕೆಂಬ ಯಾವುದೇ ಅನುಮಾನವಿಲ್ಲ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ, ಈ ನಿಯಮವನ್ನು ಜಾರಿಗೆ ತರಲು ರಾಜ್ಯವು ಈಗ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಈ ನಿಯಮವನ್ನು ಜಾರಿಗೆ ತರಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಕ್ಕೆ ನಿರ್ದೇಶಿಸುವ ಮೂಲಕ ನಾವು ಅರ್ಜಿಯನ್ನು ವಿಲೇವಾರಿ ಮಾಡಿದ್ದೇವೆ.” 9…
ಉಡುಪಿ: ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ತಲವಾರಿನಿಂದ ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಣಜಾರು ಪರಾರಿ ಮನೆ ನಿವಾಸಿ ಮಂಜುನಂದ ಹೆಗ್ಡೆ(49) ಹಾಗೂ ಕೊಪ್ಪಲ ನಿವಾಸಿ ಜಗದೀಶ್ ಹೆಗ್ಡೆ(48) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಕಬ್ಬಿಣದ ರಾಡನ್ನು ವಶಪಡಿಸಿಕೊಳ್ಳಲಾಗಿದೆ. ನ.15ರಂದು ರಾತ್ರಿ ವೇಳೆ ಶಿವರಾಜ್ ಎಂಬವರು ಕೆಲಸ ಮುಗಿಸಿ ವಾಪಾಸ್ಸು ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕಣಜಾರು ಗ್ರಾಮದ ಕೊಪ್ಪಲ ಎಂಬಲ್ಲಿ ಮಂಜುನಂದ ಹೆಗ್ಡೆ ಅಡ್ಡಗಟ್ಟಿ ತಲವಾರಿನಲ್ಲಿ ತಲೆಗೆ ಮಾರಣಾಂತಿಕವಾಗಿ ಹಲ್ಲೆಗೈದು ಕೊಲೆಗೆ ಯತ್ನಿಸಿದ್ದನು. ಬೈಕ್ನಿಂದ ಕೆಳಗೆ ಬಿದ್ದ ಶಿವರಾಜ್ಗೆ ಮಂಜುನಂದ ತಲವಾರಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಮಂಜುನಂದ ಹೆಗ್ಡೆ ಜೊತೆ ಜಯಾನಂದ ಹೆಗ್ಡೆ, ಚಂದ್ರಹಾಸ ಹೆಗ್ಡೆ ಹಾಗೂ ಇತರ 7 ರಿಂದ 8 ಮಂದಿ ಇದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಹಿರಿಯಡ್ಕ ಪೊಲೀಸ್ ಉಪನಿರೀಕ್ಷಕ ಪುನೀತ್…
ಮಂಗಳೂರು: ಸುಮಾರು ಎಂಟು ವರ್ಷಗಳ ಹಿಂದೆ ಆಗಸ್ಟ್ 25, 2018 ರಂದು ಪೀಟರ್ ಮೆಂಡೋನ್ಸಾ ಅವರು ಕಾಣೆಯಾದ ಪ್ರಕರಣದ ಬಗ್ಗೆ ಕಂಕನಾಡಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆ, ನೆರೆಯ ಜಿಲ್ಲೆಗಳು ಮತ್ತು ಇತರ ರಾಜ್ಯಗಳಲ್ಲಿ ವ್ಯಾಪಕವಾಗಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿತ್ತು. ಈ ಕಾರ್ಯಾಚರಣೆಯ ಭಾಗವಾಗಿ ವಿವಿಧ ಆಶ್ರಮಗಳು ಮತ್ತು ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಲಾಗಿತ್ತು. ಪೀಟರ್ ಮೆಂಡೋನ್ಸಾ ಅವರು ಇದೀಗ ನವೆಂಬರ್ 8 ರಂದು ನಗರದ ವೆಲೆನ್ಸಿಯಾ ಚರ್ಚ್ ಬಳಿಯ ಆಶ್ರಮವೊಂದರಲ್ಲಿ ಪತ್ತೆಯಾಗಿದ್ದಾರೆ. ಕಂಕನಾಡಿ ಟೌನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಟಿ. ಡಿ. ನಾಗರಾಜ್, ಸಬ್ ಇನ್ಸ್ಪೆಕ್ಟರ್ಗಳಾದ ಅನಿತಾ ಮತ್ತು ಶಿವಕುಮಾರ್, ಹಾಗೂ ಪೊಲೀಸ್ ಕಾನ್ಸ್ಟೆಬಲ್ ಶಿವಾನಂದ ಅವರನ್ನೊಳಗೊಂಡ ತಂಡವು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
ಮಂಗಳೂರು; ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಿಗೆ ಮತ್ತು ಸಾಧಕರಿಗೆ ಗೌರವ ಸನ್ಮಾನ ನವಂಬರ್ 25 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿ ಇರುವ “ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 10 ರಿಂದ 11 ರ ವರೆಗೆ ಕಾರ್ಯಕಾರಿ ಸಮಿತಿ ಸಭೆ ಮತ್ತು 29ನೇ ವಾರ್ಷಿಕ ಮಹಾಸಭೆ ಜರಗಲಿದೆ.ಬೆಳಿಗ್ಗೆ ಗಂಟೆ 11 ರಿಂದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಹಾಗೂ ಬಹಿರಂಗ ಅಧಿವೇಶನ ಕಾರ್ಯಕ್ರಮ ನಡೆಯಲಿದೆ.ಬಹಿರಂಗ ಅಧಿವೇಶನದಲ್ಲಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ವನ್ನು ಆಚರಿಸುತ್ತಿರುವ ಒಕ್ಕೂಟದ ದಾನಿಗಳಾದ ಉಮಾ ಕೃಷ್ಣ ಶೆಟ್ಟಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು 2025ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಿಗೆ ಗೌರವ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳು ಜರಗಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಹಿಸಲಿದ್ದಾರೆ.ಸಮಾರಂಭದಲ್ಲಿ…
ಉಜಿರೆ: ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತದ ಸರ್ವಧರ್ಮಗಳೂ ಸತ್ಯ, ಅಹಿಂಸೆ, ಪರೋಪಕಾರ, ಸೇವೆ, ಅನುಕಂಪ ಮೊದಲಾದ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿ ವಿಶ್ವವೇ ಒಂದು ಕುಟುಂಬ ಎಂದು ಭಾವಿಸುವ ವಿಶಾಲ ಮನೋಭಾವ ನಮ್ಮದಾಗಿದೆ. ನಮ್ಮ ಧರ್ಮವನ್ನು ಪ್ರೀತಿಸಿ ಅನುಷ್ಠಾನಗೊಳಿಸುವದರೊಂದಿಗೆ ಇತರರ ಧರ್ಮವನ್ನೂ ಗೌರವಿಸುವುದು ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ಜೀವಾಳವಾಗಿದೆ. ಮಾನವ ಸೇವೆಯೇ ಶ್ರೇಷ್ಠ ಧರ್ಮ ಎಂದು ಸಚಿವ ಡಾ. ಎಂ.ಬಿ. ಪಾಟೀಲ್ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸರ್ವಧರ್ಮ ಸಮ್ಮೇಳನದ ತೊಂಭತ್ತಮೂರನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ಸರ್ವಧರ್ಮ ಸಮನ್ವಯ ಕೇಂದ್ರವಾಗಿ ಸರ್ವಧರ್ಮೀಯರಿಗೂ ಸೇವೆ ನೀಡುವ ಧರ್ಮಸ್ಥಳ ಅನುಪಮ ಶ್ರದ್ಧಾ-ಭಕ್ತಿಯ ಕೇಂದ್ರವಾಗಿದೆ. ಇಲ್ಲಿನ ಧರ್ಮಸಹಿಷ್ಣುತೆ, ಚತುರ್ವಿದ ದಾನ ಪರಂಪರೆ, ಮಾನವೀಯ ಸೇವೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಮಾನವ ಸೇವೆಯೇ ಶ್ರೇಷ್ಠ ಧರ್ಮವಾಗಿದ್ದು ಲಕ್ಷದೀಪೋತ್ಸವ ಪ್ರತಿ ಮನೆಯಲ್ಲಿಯೂ, ಪ್ರತಿಯೊಬ್ಬರ ಮನದಲ್ಲಿಯೂ ವಿಶ್ವಸಾಮರಸ್ಯದ ಬೆಸುಗೆಯನ್ನು ಬೆಸೆಯಲಿ. ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ಶಾಂತಿ, ಸಾಮರಸ್ಯದ ಸೌಹಾರ್ದಯುತ ಬದುಕಿಗೆ ಲಕ್ಷದೀಪೋತ್ಸವ ನಾಂದಿಯಾಗಲಿ. ಲಕ್ಷದೀಪೋತ್ಸವದ ಹೊಂಬೆಳಕಿನಲ್ಲಿ…
ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ ಘಟನೆ ಬೆನ್ನಲ್ಲೇ ಜವಾಬ್ದಾರಿ ಮರೆತ ಕೆಲ ಮಾಧ್ಯಮಗಳು ಸ್ಫೋಟಕ ತಯಾರಿಸುವ ಕುರಿತು ವರದಿ ಪ್ರಕಟಿಸಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಎಚ್ಚರಿಕೆಯನ್ನು ನೀಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸೂಚನೆಗಳನ್ನು ನೀಡಿದ್ದು, ಕಾನೂನುಬಾಹಿರ ಚಟುವಟಿಕೆಗಳಿಗೆ ಸಹಾಯ ಮಾಡುವ, ಪ್ರೋತ್ಸಾಹಿಸುವ ಅಥವಾ ಉತ್ತೇಜಿಸುವ ದೃಶ್ಯಗಳನ್ನು ಪ್ರಸಾರ ಮಾಡದಂತೆ ಎಚ್ಚರಿಕೆ ನೀಡಿದೆ. ಕೆಲವು ಸುದ್ದಿ ವಾಹಿನಿಗಳು ಕೆಂಪು ಕೋಟೆ ಸ್ಫೋಟಗಳಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಸಂಬಂಧಿಸಿದ ವಿಷಯವನ್ನು ಪ್ರಸಾರ ಮಾಡುತ್ತಿವೆ. ಈ ಮೂಲಕ ಹಿಂಸಾಚಾರವನ್ನು ಸಮರ್ಥಿಸುತ್ತಿವೆ. ಜೊತೆಗೆ ಸ್ಫೋಟಕ ವಸ್ತುಗಳನ್ನು ಹೇಗೆ ತಯಾರಿಸುವುದು ಎಂಬುದರ ಕುರಿತಂತೆಯೂ ಮಾಹಿತಿ ವೀಡಿಯೊಗಳನ್ನು ಪ್ರಸಾರ ಮಾಡುತ್ತಿವೆ ಎಂಬುದು ಸಚಿವಾಲಯದ ಗಮನಕ್ಕೆ ಬಂದಿದೆ. ಅಂತಹ ಪ್ರಸಾರಗಳು ಹಿಂಸಾಚಾರವನ್ನು ಪ್ರೋತ್ಸಾಹಿಸಬಹುದು ಅಥವಾ ಪ್ರಚೋದಿಸಬಹುದು, ಸಾರ್ವಜನಿಕ ಸುವ್ಯವಸ್ಥೆಯನ್ನು ಅಡ್ಡಿಪಡಿಸಬಹುದು ಮತ್ತು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡಬಹುದು. ಅಂತಹ ವಿಷಯಗಳ ಬಗ್ಗೆ ವರದಿ ಮಾಡುವಾಗ ವಿವೇಚನೆ ಮತ್ತು ಸೂಕ್ಷ್ಮತೆಯಿಂದಿರಬೇಕೆಂದು ಒತ್ತಾಯಿಸಿದೆ. ಇದೇ ವೇಳೆ ಕೇಬಲ್ ಟೆಲಿವಿಷನ್…
ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ಅವರನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ರತ್ನಾಕರ್ ಅಮೀನ್ ಅವರು ತಿರುಪತಿಯಿಂದ ಹಿಂತಿರುಗುತ್ತಿದ್ದ ವೇಳೆ ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬAಧಿಸಿ ನ. 15ರಂದು ಉಡುಪಿಯಲ್ಲಿ ನಡೆದ ಪ್ರತಿಭಟನಾಸಭೆಯಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ್ ಅಮೀನ್ ಅವರು ದ್ವೇಷ ಭಾಷಣ ಮಾಡಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ರತ್ನಾಕರ್ ಅಮೀನ್ ಅವರನ್ನು ಬಂಧಿಸಿರುವ ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ಜಾಗರಣ ವೇದಿಕೆಯ ತಾಲೂಕು ಸಂಚಾಲಕ ಸುಜಿತ್ ಸೇರಿದಂತೆ ಪ್ರಮುಖ ಮುಖಂಡರು ಪೊಲೀಸರ ಈ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.










