ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಯ ಮೊಬೈಲ್ ಹ್ಯಾಕ್ ಮಾಡಿ 28.46ಲಕ್ಷ ರೂ. ವಂಚನೆ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 68ವರ್ಷದ ಮಹಿಳೆಯೋರ್ವರು ನಿವೃತ್ತಿಯಿಂದ ಬಂದ ಹಣವನ್ನು ಬ್ಯಾಂಕ್ನಲ್ಲಿರಿಸಿದ್ದರು. ಮಾ.3ರಂದು ರಾತ್ರಿ ಅವರ ಮೊಬೈಲ್ ಹ್ಯಾಕ್ ಆಗಿದ್ದು, ಮೆಸೇಜ್ಗಳನ್ನು ಪರಿಶೀಲಿಸಿದಾಗ 4 ಬ್ಯಾಂಕ್ ಖಾತೆಗಳಿಂದ 28,46,688 ರೂ.ವನ್ನು ಅವರ ಗಮನಕ್ಕೆ ಬಾರದೆ ವಿದ್ಡ್ರಾ ಮಾಡಲಾಗಿದೆ ಎಂಬುದು ಅವರಿಗೆ ತಿಳಿದು ಬಂದಿದೆ. ಆ ಬಳಿಕ ಅವರು ಬ್ಯಾಂಕ್ ಹೆಲ್ಸ್ಲೈನ್ ನಂಬರ್ಗೆ ಕರೆ ಮಾಡಿ ಬ್ಯಾಂಕ್ ಖಾತೆ ಹಾಗೂ ಎಟಿಎಂ ಕಾರ್ಡನ್ನು ಫ್ರೀಜ್ ಮಾಡಿಸಿದ್ದಾರೆ ಎಂದು ಸೈಬರ್ ಠಾಣೆಗೆ ನೀಡಿದ ದೂರಿನಲ್ಲಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಬೆಂಗಳೂರು: ರಾಜ್ಯದಲ್ಲಿ 12 ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಹೊಸದಾಗಿ ಆರಂಭವಾಗುವ ಪೊಲೀಸ್ ಠಾಣೆಯ ವಿವರವನ್ನು ಘೋಷಿಸಿದರು. ದಕ್ಷಿಣ ಕನ್ನಡ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆಯನ್ನು ಘೋಷಿಸಲಾಗಿದೆ. ಹೊಸದಾಗಿ ಪ್ರಾರಂಭವಾಗುವ ಪೊಲೀಸ್ ಠಾಣೆಗಳು ದಕ್ಷಿಣ ಕನ್ನಡ – ಮಾಣಿ ಪೊಲೀಸ್ ಠಾಣೆ ದಕ್ಷಿಣ ಕನ್ನಡ – ಸಜಿಪನಡು ಪೊಲೀಸ್ ಠಾಣೆ ಬೆಂಗಳೂರು ಗ್ರಾಮಾಂತರ – ದೊಡ್ಡಬಳ್ಳಾಪುರ ಸಂಚಾರ ಪೊಲೀಸ್ ಠಾಣೆ ಬೆಳಗಾವಿ – ಯರಗಟ್ಟಿ ಪೊಲೀಸ್ ಠಾಣೆ ಯಾದಗಿರಿ – ಕಕ್ಕೇರಾ ಪೊಲೀಸ್ ಠಾಣೆ ಚಿತ್ರದುರ್ಗ – ಹಿರಿಯೂರು ಸಂಚಾರ ಪೊಲೀಸ್ ಠಾಣೆ ದಾವಣಗೆರೆ – ಆನಗೋಡು ಪೊಲೀಸ್ ಠಾಣೆ ಹಾವೇರಿ – ತಿಳುವಳ್ಳಿ ಪೊಲೀಸ್ ಠಾಣೆ ಮೈಸೂರು – ಉದಯಗಿರಿ ದಕ್ಷಿಣ ಪೊಲೀಸ್ ಠಾಣೆ ವಿಜಯಪುರ – ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಕೋಲಾರ – ನರಸಾಪುರ ಕೈಗಾರಿಕಾ ವಲಯ ಪೊಲೀಸ್ ಠಾಣೆ ಚಾಮರಾಜನಗರ –…
ಮಂಗಳೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಹುಡುಕಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಆರು ಮಂದಿಯನ್ನು ಬಂಧಿಸಿದ್ದಾರೆ. ಮಾ.4ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬದ್ರಿಯಾ ರಸ್ತೆಯ ಕ್ಲಾಸಿಕ್ ಕಂಫರ್ಟ್ ಲಾಡ್ಜ್ ನಲ್ಲಿ ರೂಮ್ ಪಡೆದು ಕುಳಿತು MDMA ಹಾಗೂ ಹೈಡ್ರೋ ವೀಡ್ ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಮೊಹಮ್ಮದ್ ಸಯ್ಯದ್ ಆಫ್ರೀದಿ (26) ಕೊಟೇಶ್ವರ ಉಡುಪಿ ಮೂಲದವರು, ಪ್ರಸ್ತುತ ಪಾಂಡೇಶ್ವರ ಮಂಗಳೂರು; ಮಕ್ಸೂದ್ ಸಾಗ್ (23) ಬಲ್ಮಠ ಮಂಗಳೂರು; ಅಹಮ್ಮದ್ ಅಲಿ ಅರ್ಷಾನ್ (22) ಕೊಟೇಶ್ವರ ಉಡುಪಿ ಮೂಲದವರು, ಪ್ರಸ್ತುತ ಪಾಂಡೇಶ್ವರ ಮಂಗಳೂರು; ಫೆಲಿಕ್ಸ್ ಪಿ. ಜೊಸೆಫ್ (20) ಕೊಟ್ಟಾಯಂ, ಕೇರಳ ಇವರಿಂದ 53.87 ಗ್ರಾಂ MDMA, 103.20 ಗ್ರಾಂ ಹೈಡ್ರೋ ವೀಡ್ ಗಾಂಜಾ ಹಾಗೂ ಒಂದು MG Hector ಕಾರನ್ನು…
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2017ರಲ್ಲಿ ದಾಖಲಾಗಿದ್ದ ಧರ್ಮಸ್ಥಳ ಪೊಲೀಸ್ ಠಾಣೆಯ ಅಕ್ರಮ ಸಂಖ್ಯೆ 91/2017, ಐಪಿಸಿ ಕಲಂ 380 ಪ್ರಕರಣದಲ್ಲಿ ಆರೋಪಿಯಾಗಿದ್ದ ಬೆಂಗಳೂರು ಕುಂಬಳಗೋಡು ನಿವಾಸಿ ವೆಂಕಟೇಶ್ ಅಲಿಯಾಸ್ ಡಾಬರ್ ವೆಂಕಟೇಶ್ ಎಂಬಾತನು ಹಲವು ವರ್ಷಗಳಿಂದ ಪೊಲೀಸರಿಗೆ ಸಿಕ್ಕದೆ ತಲೆಮರೆಸಿಕೊಂಡಿದ್ದನು.ಆರೋಪಿಯ ಸುಳಿವು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ ಮತ್ತು ಚರಣ್ ರಾಜ್ ಅವರು ತುಮಕೂರು ಜಿಲ್ಲೆಯ ತಿಪಟೂರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು.ಬಂಧಿತ ಆರೋಪಿಯನ್ನು ದಿನಾಂಕ 05-03-2026 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಳ್ಳಾಲ: ಅರಣ್ಯಾಧಿಕಾರಿಯ ಬಾಡಿಗೆ ಮನೆಯಿಂದ ಕಳ್ಳರು ನಗ, ನಗದು ದೋಚಿದ ಘಟನೆ ಅಂಬಿಕಾರೋಡ್ನ ಕಾಪಿಕಾಡು ಎಂಬಲ್ಲಿ ನಡೆದಿದೆ. ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಕಳ್ಳರು ಹತ್ತೂವರೆ ಲಕ್ಷ ರೂ ಹಣ, 181 ಗ್ರಾಂ ಚಿನ್ನ, ಬೆಳ್ಳಿಯನ್ನು ಮತ್ತು ಒಂದು ಬೈಕ್ ಅನ್ನು ಹೊತ್ತೊಯ್ದಿದ್ದಾರೆ. ಅವರು ತಮ್ಮ ಹುಟ್ಟೂರು ಕೊಪ್ಪಳಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೆಹಬೂಬ್ ಸಾಬ್ ಇಂದು ತಮ್ಮ ಬಾಡಿಗೆ ಮನೆಗೆ ವಾಪಾಸ್ಸಾದ ಸಮಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕಳ್ಳರ ಪಾಲಾಗಿರುವ ಹತ್ತುೂವರೆ ಲಕ್ಷ ರೂ. ಗಳನ್ನು ಅವರು ಬ್ಯಾಂಕಿನಿಂದ ಸಾಲ ಪಡೆದಿದ್ದರು ಎಂದು ತಿಳಿದು ಬಂದಿದೆ. ಕಳ್ಳತನ ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಳ್ಳತನ ಯಾವಾಗ ನಡೆದಿದೆ ಎನ್ನುವುದರ ಸುಳಿವು ಅಕ್ಕಪಕ್ಕದಲ್ಲಿ ಸಾಕಷ್ಟು ಮನೆಗಳಿದ್ದರೂ ಸಿಕ್ಕಿಲ್ಲ. ಹತ್ತಿರದಲ್ಲಿ ಎಲ್ಲೂ…
ಪುತ್ತೂರು: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪ್ರಕರಣದ ದೂರುದಾರರಾದ ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಅವರು ದಿನಾಂಕ 02-03-2026 ರಂದು ಮಧ್ಯಾಹ್ನ ಪುತ್ತೂರಿನಿಂದ ಕೂರ್ನಡ್ಕಕ್ಕೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಸುಮಾರು 30 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಯತ್ನಿಸಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ದೂರುದಾರರು ಹಾಗೂ ಸಾರ್ವಜನಿಕರು ಸೇರಿ ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ, ಆತನು ಮೋಟಾರ್ ಸೈಕಲ್ ಸಹಿತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 26/2026ರಂತೆ ಪ್ರಕರಣ ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 351(3) ಹಾಗೂ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 3, 25, 27ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ತನಿಖೆಯ…
ಉಡುಪಿ : ವೈಯಕ್ತಿಕ ಕಾರಣದಿಂದ ಮನನೊಂದ ನರ್ಸಿಂಗ್ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಡಬ ರೆಂಜಿಲಾಡಿಯ ಲಾರೆನ್ಸ್ ಎಂಬವರ ಮಗಳು ಸ್ವೀಟಿ (18) ಎಂದು ಗುರುತಿಸಲಾಗಿದೆ. ಇವರು ಉಡುಪಿಯ ನರ್ಸಿಂಗ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಸ್ಪತ್ರೆಯ ವಸತಿ ನಿಲಯದಲ್ಲಿ ಉಳಿದುಕೊಳ್ಳುತ್ತಿದ್ದರು. ಫೆ.25ರಂದು ರಾತ್ರಿ ವಸತಿ ನಿಲಯದಲ್ಲಿರುವಾಗ ಇಲಿ ಪಾಷಣ ಸೇವಿಸಿದ್ದು, ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅವರು ಮಾ.3ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಜತ್ತೂರು ಗ್ರಾಮದ ಮಣಿಕ್ಕಳ ಎಂಬಲ್ಲಿ ಮಾ.3ರಂದು ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುತೇಶ್ ಕೆ.ಪಿ., ಪೊಲೀಸ್ ಉಪನಿರೀಕ್ಷಕರು (ಕಾ&ಸು) ರವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ರಸ್ತೆ ಬದಿಯಲ್ಲಿ ಜೋರಾಗಿ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಅಕ್ರಮ ಕೋಳಿ ಅಂಕ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ದಾಳಿ ನಡೆಸಿದಾಗ ಅಲ್ಲಿದ್ದ ಜನರು ಪರಾರಿಯಾಗಿದ್ದು, ಮೂರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಡಬ ನಿವಾಸಿ ಸತೀಶ್ (38), ಬಂಟ್ವಾಳ ನಿವಾಸಿ ಮುರಳಿ (30) ಹಾಗೂ ಪುತ್ತೂರು ನಿವಾಸಿ ಮೋನಪ್ಪ ಕೆ (36) ಎಂದು ಗುರುತಿಸಲಾಗಿದೆ. ವಿಚಾರಣೆಯಲ್ಲಿ ದೇರಣ್ಣ ಮತ್ತು ಉಮೇಶ್ ಎಂಬವರು ಕೋಳಿ ಅಂಕ ನಡೆಸುತ್ತಿರುವುದು ತಿಳಿದುಬಂದಿದೆ.ಸ್ಥಳದಿಂದ ಐದು ಹುಂಜ ಕೋಳಿಗಳು, ಎರಡು ಬಾಲುಗಳು (ಕೋಳಿಗಳ ಕಾಲಿಗೆ ಕಟ್ಟುವ ಸಣ್ಣ ಕತ್ತಿಗಳು), ಪಣವಾಗಿ ಇಟ್ಟಿದ್ದ ರೂ. 2,300 ನಗದು…
ಮಲ್ಪೆ : ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರ ತಂಡ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು 5 ಮಂದಿ ಯುವಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯ ವೈಯಕ್ತಿಕ ಕಾರಣಗಳಿಂದ ನಡೆದಿದ್ದಾಗಿ ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಮಲ್ಪೆ ಬೀಚ್ ಸಮೀಪ ನಡೆದ ಚಾಕು ದಾಳಿ ಪ್ರಕರಣದಲ್ಲಿ ನಾಲ್ವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಕಾನೂನಿನ ಸಂಘರ್ಷಕ್ಕೋಳಗಾದ ಬಾಲಕನನ್ನೂ ವಶಕ್ಕೆ ಪಡೆದು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗುತ್ತಿದೆ. ಮಾರ್ಚ್ 3ರಂದು ರಾತ್ರಿ ಸುಮಾರು 9.30ಕ್ಕೆ ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಬೀಚ್ ಬಳಿ ಇರುವ ಬ್ಲೂ ವೇವ್ಸ್ ಗೆಸ್ಟ್ ಹೌಸ್ ಸಮೀಪ ಈ ಘಟನೆ ನಡೆದಿದೆ. ಆರೋಪಿತರಾದ ಅಮೃತ್ ಭಂಡಾರಿ, ಪ್ರಜ್ಞೇಶ್, ಪುನಿತ್ ಪೂಜಾರಿ ಮತ್ತು ಅಭೀಜಿತ್ ಅವರು ಬಾಲಕನೊಂದಿಗೆ ಸೇರಿ ಒಂದೇ ಉದ್ದೇಶದಿಂದ ಅಕ್ರಮ ಕೂಟ ಸೇರಿಕೊಂಡು, KA19AD1036 ಸಂಖ್ಯೆಯ ಬಿಳಿ ಬೊಲೆರೊ ವಾಹನದಲ್ಲಿ ಸ್ಥಳಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಅಮೃತ್ ಭಂಡಾರಿಯ ತಂಗಿಯ ವಿಚಾರವಾಗಿ ತಗಾದೆ…
ಮಂಗಳೂರು: “Support madi bro Ullal masjid hathira bomb blast madthini” ಇನ್ಸ್ಟಾಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಕಾಮೆಂಟ್ ಮಾಡಿ ಧರ್ಮಗಳ ಮಧ್ಯೆ ದ್ವೇಷ ಹಾಗೂ ವೈಮನಸ್ಸು ಉಂಟುಮಾಡುವ ಪ್ರಯತ್ನ ನಡೆಸಿದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 41/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 196(2), 197(2), 299, 353(2) ಅನ್ವಯ ಪ್ರಕರಣ ದಾಖಲಾಗಿದೆ. ಬಂಧಿತನನ್ನು ಶಂಕರ್ ಮಸ್ತಪ್ಪ ಮೊಗೇರ್ (35), ದಿ. ಮಸ್ತಪ್ಪ ಅವರ ಪುತ್ರ, ದೇವಿನಗರ, ಜಾಲಿ, ಭಟ್ಕಳ, ಉತ್ತರ ಕನ್ನಡ ನಿವಾಸಿ ಎಂದು ಗುರುತಿಸಲಾಗಿದೆ. ಮಾ. 3ರಂದು ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿಯನ್ನು ದಸ್ತಗಿರಿ ಮಾಡಿ, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ನ್ನು ವಶಪಡಿಸಿಕೊಂಡಿದೆ.ಆರೋಪಿಯನ್ನು ಮಂಗಳೂರು ನಗರದ 7ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.










