Author: main-admin

ನೆಲ್ಯಾಡಿ: ಇಂದು ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ನೆಲ್ಯಾಡಿ ಅಶ್ವಿನಿ ಆಂಬುಲೆನ್ಸ್ ನಲ್ಲಿ ನೆಲ್ಯಾಡಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Read More

ಪಂಜಾಬ್‌: ಸರ್ಕಾರಿ ಆಸ್ಪತ್ರೆಯೊಂದು ರೋಗಿಗಳಿಗೆ ಎಕ್ಸ್-ರೇ ಯ ಹಾರ್ಡ್‌ ಕಾಪಿ ಕೊಡದೇ ಅದರ ಫೋಟೋವನ್ನು ಮೊಬೈಲ್ ಫೋನ್‌ನಲ್ಲೇ ಕ್ಲಿಕ್ಕಿಸಿ ಕೊಟ್ಟಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ವರದಿಗಳ ಪ್ರಕಾರ, ಪಂಜಾಬ್‌ನ ಪಟಿಯಾಲಾ ನಗರದ ಆಸ್ಪತ್ರೆಯ ಸರ್ಕಾರಿ ನೌಕರರು ʻಸ್ಮಾರ್ಟ್‌ಫೋನ್ ಹೊಂದಿರುವವರು ಮಾತ್ರ ಎಕ್ಸ್-ರೇಗಾಗಿ ಬರಬೇಕು. ಎಕ್ಸ್-ರೇ ಸ್ಕ್ಯಾನಿಂಗ್ ಸಮಯದಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ತನ್ನಿʼ ಎಂದು ಪ್ರಕಟಣೆ ಮಾಡಿದ್ದರು ಎನ್ನಲಾಗಿದೆ. ಸಿಎಂ ಭಗವಂತ್ ಮಾನ್ ಅವರು ಪಂಜಾಬ್‌ನ ನಾಗರಿಕರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಹಾತೊರೆಯುತ್ತಿದ್ದರೆ, ಇತ್ತ ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಹಾರ್ಡ್ ಕಾಪಿ ವರದಿ ನೀಡುವ ಬದಲು ಸ್ಮಾರ್ಟ್‌ಫೋನ್‌ಗಳಲ್ಲಿ ಎಕ್ಸ್-ರೇಗಳ ಚಿತ್ರಗಳನ್ನು ಕ್ಲಿಕ್ಕಿಸಿ ಕೊಡುವ ಮೂಲಕ ವಿಲಕ್ಷಣವಾಗಿ ವರ್ತಿಸುತ್ತಿವೆ. ಆಸ್ಪತ್ರೆಯಲ್ಲಿ ಎಕ್ಸ್-ರೇ ಫಿಲ್ಮ್ ಖಾಲಿಯಾದಾಗ ಅವರು ಸಾಮಾನ್ಯವಾಗಿ ಈ ಘೋಷಣೆ ಮಾಡುತ್ತಾರೆ ಎಂದು ಆಸ್ಪತ್ರೆಯ ಸಿಬ್ಬಂದಿ ಹೇಳಿಕೊಂಡಿದ್ದಾರೆ. ಈ ವಿಲಕ್ಷಣ ವರ್ತನೆಯು ಬಡ ರೋಗಿಗಳ ಮೇಲೆ ಪರಿಣಾಮ ಬೀರಿದೆ. ಸ್ವಂತ ಸೆಲ್ ಫೋನ್‌ ಹೊಂದಿರದ ಬಡ ರೋಗಿಗಳನ್ನು ವಿಚಾರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. 53…

Read More

ಉಡುಪಿ : ನಾಡಗೀತೆಯ ರಾಗ ಸಂಯೋಜನೆ, ಕಾಲಮಿತಿ ಬಗ್ಗೆ 2005ರಿಂದ ಸ್ಪಷ್ಟತೆ ಇರಲಿಲ್ಲ. ಈ ಕುರಿತು ರಚಿಸಲಾದ ಎಚ್.ಆರ್.ಲೀಲಾವತಿ ನೇತೃತ್ವದ ಸಮಿತಿ ಮೈಸೂರಿನ ಅನಂತ ಸ್ವಾಮಿ ಅವರ ರಾಗಸಂಯೋಜನೆಯಡಿ 2.30ನಿಮಿಷ ಗಳಲ್ಲಿ ಕುವೆಂಪು ಬರೆದ ನಾಡಗೀತೆಯ ಯಾವುದೇ ಶಬ್ದವನ್ನು ಬಿಡದೆ ಹಾಡಲು ಸರಕಾರಕ್ಕೆ ಶಿಫಾರಸ್ಸು ಮಾಡಿದೆ. ಅದನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒಪ್ಪಿ ಮುಖ್ಯಮಂತ್ರಿ ಅವರಿಂದ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದರು. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸುನಿಲ್ ಕುಮಾರ್, ಸರಕಾರಿ ಸೇರಿದಂತೆ ಬೇರೆ ಬೇರೆ ಕಾರ್ಯಕ್ರಮದಲ್ಲಿ ಕಾಲಮಿತಿ, ರಾಗದ ಬಗ್ಗೆ ಸ್ಪಷ್ಟತೆ ಇರದೆ ನಾಡಗೀತೆಯನ್ನು 6. 7ನಿಮಿಷಗಳವರೆಗೆ ಕೂಡ ಹಾಡಲಾಗುತಿತ್ತು. ಇದಕ್ಕೆಲ್ಲ ಅಂತ್ಯ ಹಾಡುವ ಹಿನ್ನೆಲೆಯಲ್ಲಿ ಕಳೆದ 18 ವರ್ಷಗಳಿಂದ ಚರ್ಚೆಯಲ್ಲಿದ್ದ ಗೊಂದಲದ ಬಗ್ಗೆ ಸರಕಾರ ಸ್ಪಷ್ಟ ನಿಲುವು ತೆಗೆದುಕೊಂಡಿದೆ. ನಾಡ ಗೀತೆಯು ಕರ್ನಾಟಕದ ಅಸ್ಮಿತೆಯ ಪ್ರಶ್ನೆ. ಕರ್ನಾಟಕವನ್ನು ಗೌರವಿಸುವ ಕಾರ್ಯ ವನ್ನು ನಾಡಗೀತೆ ಮೂಲಕ ನಾವು ಮಾಡುತ್ತಿದ್ದೇವೆ. ಬರಗೂರು ರಾಮಚಂದ್ರ, ಬೈರಪ್ಪ ಸಹಿತ ಎಲ್ಲ…

Read More

ಉಡುಪಿ: ಕೋಟತಟ್ಟು ಗ್ರಾ.ಪಂ., ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಟಾನ ಕೋಟದ ಸಹಭಾಗಿತ್ವದಲ್ಲಿ ನೀಡಲಾಗುವ 2022ನೇ ಸಾಲಿನ ಡಾ.ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ನಟ ಡಾ.ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ. ಕಳೆದ 17 ವರ್ಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡಲಾಗುತ್ತಿದೆ. ಈ ಬಾರಿ ದಶಕಗಳಿಂದ ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಡಾ.ರಮೇಶ್ ಅರವಿಂದ್ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 10ರಂದು ಡಾ.ಕೋಟ ಶಿವರಾಮ ಕಾರಂತರ ಜನ್ಮದಿನದಂದು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

Read More

ಪುತ್ತೂರು: ಯುವತಿಯರಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ನೊಂದ ಯುವತಿಯೋರ್ವಳು ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ್ದಾಳೆ‌. ಕಲ್ಲೇಗ ಶೇವಿರೆ ಸಮೀಪ ಯುವತಿಯರು ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ಸಂದರ್ಭ ಬೈಕ್‌ನಲ್ಲಿ ಬಂದ ಯುವಕರ ತಂಡವೊಂದು ಯುವತಿಯರನ್ನು ಅಡ್ಡಗಟ್ಟಿ ಚುಡಾಯಿಸಿ, ಕಿರುಕುಳ ನೀಡಿರುವುದಾಗಿ ಯುವತಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಮಹಿಳಾ ಠಾಣೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

Read More

ಬೆಳ್ತಂಗಡಿ : ರಾಜ್ಯ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಅಭಿಯಾನದ ಬೆನ್ನಲ್ಲೆ ಇದೀಗ ಕರಾವಳಿಗೂ ಪೇ ಎಂಎಲ್ ಎ ಪೋಸ್ಟರ್ ಅಭಿಯಾನ ಎಂಟ್ರಿ ಕೊಟ್ಟಿದ್ದು, ಶಾಸಕರ ಫೋಟೋ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಕ್ಯಾಂಪೇನ್ ಶುರು ಮಾಡಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಫೋಟೋ ಹಾಕಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕ್ಯಾಂಪೇನ್ ಶುರು ಮಾಡಿದ್ದು, ಬೆಳ್ತಂಗಡಿಯ ಬಸ್ ನಿಲ್ದಾಣ, ಸಾರ್ವಜನಿಕ ಶೌಚಾಲಯ ಹಾಗೂ ಬಸ್ ಗಳಲ್ಲಿ ಪೇ ಎಂಎಲ್ ಎ ಪೋಸ್ಟರ್ ಅಂಟಿಸಿ ಅಭಿಯಾನ ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಪೇ-ಸಿಎಂ ಪೋಸ್ಟರ್ ಅಂಟಿಸುವ ಮೂಲಕ ರಾಜ್ಯ ಕಾಂಗ್ರೆಸ್ ವಿನೂತನ ಅಭಿಯಾನ ಆರಂಭಿಸಿದ್ದು, ಸರ್ಕಾರದ ವಿರುದ್ಧ 40 ಪರ್ಸೆಂಟ್​ ಕಮಿಷನ್​​ ಆರೋಪ ಮಾಡಿದೆ. ಈ ಬೆನ್ನಲ್ಲೇ ಕರಾವಳಿಯಲ್ಲೂ ಇದೀಗ ಪೇ ಎಂಎಲ್ ಎ ಅಭಿಯಾನ ಶುರುವಾಗಿದೆ.

Read More

ಮಂಗಳೂರು:ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ಬುಧವಾರ ಮುಂಜಾನೆ ಸುಮಾರು 3.30 ಕ್ಕೆ ಬೆಂಗಳೂರಿನ ಇಬ್ಬರು ಹಾಗೂ ಚಿಕ್ಕಮಗಳೂರಿನ ಓರ್ವ ವಿದ್ಯಾರ್ಥಿನಿ ಹಾಸ್ಟೆಲ್‌ನ ಕಿಟಕಿ ಮುರಿದು ಹೊರಬಂದು ಕಾಣೆಯಾಗಿದ್ದರು.ಈ ಕುರಿತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಘಟನೆ ಸಂಬಂಧ ಕಂಕನಾಡಿಯ ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಚೆನ್ನೈನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿದ ಪೊಲೀಸರು ಬಳಿಕ ಸ್ವೀಕಾರ ಕೇಂದ್ರಕ್ಕೆ ಒಪ್ಪಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಈ ಮೊದಲು ಮಂಗಳೂರಿನ‌ ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ವಿದ್ಯಾರ್ಥಿನಿಯರ ಪತ್ತೆಗೆ ಚೆನ್ನೈಗೆ ತೆರಳಿದ್ದರು. ಇವರು ಯಾಕೆ ತೆರಳಿದ್ದಾರೆ ಎನ್ನುವುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

Read More

ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ದಸರಾ ಸೆಪ್ಟೆಂಬರ್ 28ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ದಸರಾ ರಜೆಯನ್ನು ಅಕ್ಟೋಬರ್ 3 ರಿಂದ ಅಕ್ಟೋಬರ್ 16 ರವರೆಗೆ ನೀಡಲಾಗಿದೆ. ಆದರೆ ಮಂಗಳೂರು ದಸರಾ ಆರಂಭಗೊಳ್ಳುವ ಸಂದರ್ಭದಲ್ಲೇ ನಗರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಬೇಕೆಂದು ಆಗ್ರಹಗಳು ಕೇಳಿಬಂದಿತ್ತು.ಇದೀಗ ತಾಲೂಕಿನಲ್ಲಿ ಹೆಚ್ಚುವರಿ ನಾಲ್ಕು ದಿನ ರಜೆ ಘೋಷಿಸಲು ಶಿಕ್ಷಣ ಸಚಿವರು ಸೂಚಿಸಿದ ಹಿನ್ನೆಲೆ ಮಂಗಳೂರು ತಾಲೂಕಿನಲ್ಲಿ ಮಾತ್ರ ಸೆ. 28 ರಿಂದ ಅಕ್ಟೋಬರ್ 1ರ ತನಕ ಹೆಚ್ಚುವರಿ ರಜೆ ನೀಡಲಾಗಿದ್ದು, ಆ ಮೂಲಕ ಅಕ್ಟೋಬರ್ 16ರವರೆಗೆ ದಸರಾ ರಜೆ ನೀಡಿದಂತಾಗಿದೆ.ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸೂಚಿಸಲಾಗಿದೆ. ಹಾಗೂ ಮಂಗಳೂರಿನಲ್ಲಿ ಹೆಚ್ಚುವರಿಯಾಗಿ ನೀಡಿರುವ 4 ದಿನಗಳ ರಜೆಯನ್ನು ನವೆಂಬರ್ (2022) ತಿಂಗಳಲ್ಲಿ ನಾಲ್ಕು ಶನಿವಾರ ಪೂರ್ಣದಿನದ ತರಗತಿಗಳನ್ನು ಹಾಗೂ ಎರಡು ಭಾನುವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ಸರಿದೂಗಿಸಲು ಶಿಕ್ಷಣ ಇಲಾಖೆ…

Read More

ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿಕ್ಕಮಗಳೂರಿನ ಕಡೂರು ಸೋಮನಹಳ್ಳಿ ತಾಂಡಾದ ರಕ್ಷಿತಾ ಕುಟುಂಬಕ್ಕೆ ರಾಜ್ಯ ಸರ್ಕಾರ 8 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ. ತಾಂಡಾ ಅಭಿವೃದ್ಧಿ ನಿಗಮದಿಂದ 1 ಲಕ್ಷ ರೂ., ಉದ್ಯಮಶೀಲತೆ ಯೋಜನೆಯಡಿ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಶೇಖರ್ ನಾಯ್ಕ ಮತ್ತು ಲಕ್ಷ್ಮೀಬಾಯಿ ದಂಪತಿಯ ಪುತ್ರಿ ವಿದ್ಯಾರ್ಥಿನಿಯಾಗಿದ್ದ ರಕ್ಷಿತಾ ಬಸ್ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಮಿದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆ ಕುಟುಂಬಸ್ಥರು ನೋವಿನಲ್ಲೂ ಮಗಳ ಬಹುಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದಿದ್ದರು. ಪಿಯು ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ರಕ್ಷಿತಾ, ಸೆ.18ರಂದು ಚಿಕ್ಕಮಗಳೂರಿನ ಸಂಬಂಧಿಕರ ಮನೆಗೆ ಬಸ್​ನಲ್ಲಿ ಹೋಗುವಾಗ ಮಾರ್ಗ ಮಧ್ಯೆ ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಳಿ ಆಯತಪ್ಪಿ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿತ್ತು. ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಮಿದುಳು ನಿಷ್ಕ್ರಿಯಗೊಂಡಿದೆ, ಇನ್ನು ಮಗಳು ಬದುವುದಿಲ್ಲ ಎಂಬ ಸುದ್ದಿ ಕೇಳಿ…

Read More

ಬೆಳ್ತಂಗಡಿ: ದೇಶದ ಸಮಸ್ತ ಜನರ ಬಹು ನಿರೀಕ್ಷೆಯ ಶ್ರೀ ರಾಮ ಮಂದಿರದ ನಿರ್ಮಾಣ ಕಾರ್ಯ ಸಂಕ್ರಾಂತಿ ಬಳಿಕ ಬಹುತೇಕ‌ ಕಾಮಗಾರಿಗಳಿಗೆ ವೇಗ ಸಿಗಲಿದೆ. ಕಂಬಗಳನ್ನು ನಿಲ್ಲಿಸುವ ಕಾರ್ಯ ಸಾಗುತ್ತಿದೆ ದೇವರನ್ನು ಕುಳ್ಳಿರಿಸುವ ಪೀಠದವರೆಗಿನ ಕಾರ್ಯ ಮುಗಿದಿದೆ ಎಂದು ಉಡುಪಿ ಪೇಜಾವರ ಶ್ರೀಗಳು ಹೇಳಿದರು. ಧರ್ಮಸ್ಥಳದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬಾಲರಾಮ ದೇವರ ಮೂರುತಿಯನ್ನು ಅಮೃತಶಿಲೆಯಿಂದ ನಿರ್ಮಿಸುವ ವಿಚಾರ ಮುಂದಿದ್ದು, ನೀಲಿ ವರ್ಣವೂ ಅದರಲ್ಲಿ ಒಳಗೊಳ್ಳಲಿದೆ. ಇದನ್ನು ಈಗಾಗಲೇ ಸಭೆಯಲ್ಲಿ ನಿರ್ಣಯಿಸಲಾಗಿದೆ. ಇದಕ್ಕೆ ಬೇಕಾದ ಶಿಲೆಯ ಶೋಧ ನಡೆಯುತ್ತಿದೆ ಎಂದರು. ಉಗ್ರ ಚಟುವಟಿಕೆಗಳ  ಸಂಬಂಧ ಪ್ರತಿಕ್ರಿಯಿಸಿದ ಶ್ರೀಗಳು, ಶಿವಮೊಗ್ಗ ಹಾಗೂ ಕರಾವಳಿ ಭಾಗದಲ್ಲಿ ಉಗ್ರರ ಸಂಚು ಪತ್ತೆಯಾಗಿದೆ. ಇದನ್ನು ಈ ಮೊದಲೇ ಮಟ್ಟ ಹಾಕಬೇಕಿತ್ತು. ಕೇಂದ್ರ, ರಾಜ್ಯ ಸರಕಾರಗಳು ಈಗಾಗಲೇ ಬಂಧಿಸಿದವರನ್ನು ತೀವ್ರ ವಿಚಾರಣೆ ನಡೆಸಿ, ಇದರ ಮೂಲವನ್ನು ಬೇರು ಸಹಿತ ಕಿತ್ತೊಗೆಯಬೇಕು. ಈ ವಿಚಾರಗಳಿಗೆ ಕೋಮು‌ ಬಣ್ಣಹಚ್ಚುವ ಷಡ್ಯಂತ್ರ ನಡೆಯುತ್ತಿದ್ದು ಇದಕ್ಕೆ ಸರಕಾರ ಅವಕಾಶ ಮಾಡಿಕೊಡಬಾರದು. ದೇಶದಲ್ಲಿ ಸದಾ ಶಾಂತಿ…

Read More