ಪುತ್ತೂರು: ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ, ಸಹೋದರನ ಮಾಹಿತಿಯನ್ನು ಪಡೆಯುವ ಜತೆಗೆ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಕೊಯಿಲ ನಿವಾಸಿ ನಿಝಾಮ್ (25) ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡಿದ್ದಾರೆಂದು ಹೇಳಲಾಗಿದೆ. ಮಂಗಳೂರಿನ ಮಲ್ಲೂರು ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಹೋದರನ ಮಾಹಿತಿ ಪಡೆದು ಆತನನ್ನು ಅಪಹರಣ ಮಾಡಿ ಹಣ ತರದೇ ಹೋದರೆ ತಮ್ಮನನ್ನು ಕೊಲೆ ಮಾಡುವುದಾಗಿ ಹೇಳಿದ್ದಾರೆ ಎಂದು ನಿಝಾಮ್ ಹೇಳಿದ್ದಾರೆ. ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Author: main-admin
ಗಜಯಾಬಾದ್: ರಸ್ತೆ ಬದಿಯ ಉಪಾಹಾರ ಗೃಹದಲ್ಲಿ ಚಪಾತಿಗೆಂದು ಕಲಸಿಟ್ಟ ಹಿಟ್ಟಿಗೆ ಉಗುಳಿ ಚಪಾತಿ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಕಿಶನ್ ಗಂಜ್ ಬಿಹಾರದ ನಾಸಿರುದ್ದೀನ್ ಬಂಧಿತ ಆರೋಪಿ. ಮೋಹನ್ ನಗರ ವಜೀರಾಬಾದ್ ರಸ್ತೆಯಲ್ಲಿರುವ ಪಸೋಂಡಾ ಗ್ರಾಮದಲ್ಲಿ ರಸ್ತೆ ಬದಿಯಲ್ಲಿರುವ ಉಪಾಹಾರ ಗೃಹದಲ್ಲಿ ಈತ ಅಡುಗೆ ಸಿಬ್ಬಂದಿಯಾಗಿದ್ದ. ಇಲ್ಲಿ ಚಪಾತಿ ಮಾಡಲೆಂದು ಕಲಸಿಟ್ಟ ಹಿಟ್ಟಿಗೆ ಈತ ಉಗುಳಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೀಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಸಾಹಿಬಾಬಾದ್ ವೃತ್ತದ ಸಹಾಯಕ ಪೊಲೀಸ್ ಆಯುಕ್ತ ಪೂನಂ ಮಿಶ್ರಾ ಹೇಳಿದ್ದಾರೆ. ಭಾರತೀಯ ದಂಡ ಸಂಹಿತೆಯ 269 (ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ನಿರ್ಲಕ್ಷ್ಯದ ಕ್ರಿಯೆ) ಮತ್ತು 270 (ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಗೋಕುಲ ಗೋಶಾಲೆಯಲ್ಲಿದ್ದ, ಹೆಗ್ಗಡೆಯವರ ಪ್ರೀತಿಯ ಗೀರ್ ತಳಿಯ ಎತ್ತು ಗಿರೀಶ ಜ.18 ರಂದು ರಾತ್ರಿ ವೇಳೆ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ. ಬಹಳ ವರ್ಷಗಳಿಂದ ಈ ಗೋಶಾಲೆಯಲ್ಲಿದ್ದ ಗಿರೀಶನಿಗೆ 18 ವರ್ಷ ವಯಸ್ಸು. ಕ್ಷೇತ್ರದ ಯಾವುದೇ ಉತ್ಸವಗಳಿಗೂ ಬಸವನಾಗಿ ಗಿರೀಶನೇ ಮುಂಚೂಣಿಯಲ್ಲಿತ್ತು. ಉತ್ಸವಗಳಿಗೆ ಹೋಗುವುದರಲ್ಲೇ ಸಂತೋಷ ಪಡುತ್ತಿದ್ದ ಈ ಬಸವ ಇದೀಗ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ.ಎಲ್ಲರೊಂದಿಗೆ ಸಕ್ರೀಯವಾಗಿದ್ದ ಗಿರೀಶನಿಗೆ ದಿಢೀರ್ ಹೃದಯಾಘಾತ ಸಂಭವಿಸಿ ಉಸಿರುಚೆಲ್ಲಿದೆ. ಜ.19 ರಂದು ಬೆಳಗ್ಗೆ 11 ಗಂಟೆ ವೇಳೆ ಗೌರವಯುತವಾಗಿ ಆತನ ಅಂತ್ಯಸಂಸ್ಕಾರ ನಡೆಸಲಾಯಿತು. ಗಿರೀಶ ಶ್ರೀ ಕ್ಷೇತ್ರ ಧರ್ಮಸ್ಥಳದ ವಿಶೇಷತೆಯಾಗಿತ್ತು. ಗೋಶಾಲೆಯಲ್ಲಿ ಅತೀ ಹಿರಿಯನಾಗಿದ್ದ ಗಿರೀಶನಿಗೆ ಖಾವಂದರೆಂದರೆ ಬಲು ಪ್ರೀತಿ. ಕ್ಷೇತ್ರದ ಉತ್ಸವದಲ್ಲಿ ಖಾವಂದರು ಗಿರೀಶ ಎಂದು ಕರೆದರೆ ಗಿರೀಶನು ಪ್ರೀತಿಯಿಂದ ತಲೆ ಎತ್ತಿ ಖಾವಂದರನ್ನು ನೋಡುತ್ತಿದ್ದ. ಇವರಿಬ್ಬರ ಬಾಂಧವ್ಯ ಅನನ್ಯವಾಗಿತ್ತು. ಇತ್ತೀಚೆಗೆ ಧರ್ಮಸ್ಥಳಕ್ಕೆ ಆಗಮಿಸಿದ ಪುಂಗನೂರು ಹಸುವಿನೊಂದಿಗೆ ಗಿರೀಶನ ಒಡನಾಟ ಚೆನ್ನಾಗಿರುತ್ತಿತ್ತು. ಪುಂಗನೂರು ಕರು ಗಿರೀಶನಿಗೆ ಏನೇ ಮಾಡಿದರು ಸಿಟ್ಟಾಗದೆ ಪ್ರೀತಿಯಿಂದ ಸ್ವೀಕರಿಸುತ್ತಿದ್ದ. ಒಟ್ಟಾರೆ…
ಒಂಟಿ ಮನೆಯಲ್ಲಿ ಒಂದೇ ಕುಟುಂಬದ ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಒಂಬತ್ತು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಂಜಿತಾ (24), ಬಿಂದು (21), ಚಂದನ (18) ಆತ್ಮಹತ್ಯೆಗೆ ಶರಣಾದ ಸಹೋದರಿಯರಾಗಿದ್ದಾರೆ. ಈ ವಿಷಯ ಗುರುವಾರ (ಜ.19) ಬೆಳಕಿಗೆ ಬಂದಿದೆ. ಅನೇಕ ವರ್ಷಗಳ ಹಿಂದೆ ಪೋಷಕರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಅಂದಿನಿಂದ ಅಜ್ಜಿ ಜತೆಯಲ್ಲಿ ಇವರು ವಾಸವಿದ್ದರು. ಇತ್ತೀಚೆಗೆ ಅಜ್ಜಿ ಕೂಡ ಮೃತಪಟ್ಟಿದ್ದರು. ಅಜ್ಜಿ ಮರಣದ ಬಳಿಕ ಮಾನಸಿಕ ಖಿನ್ನತೆಗೆ ಇವರು ಒಳಗಾಗಿದ್ದರು ಎನ್ನಲಾಗಿದೆ. ಕಿಬ್ಬನಹಳ್ಳಿ ಬಳಿಯ ಗಾರ್ಮೆಂಟ್ಸ್ನಲ್ಲಿ ಇಬ್ಬರು ಸಹೋದರಿಯರು ಕೆಲಸ ಮಾಡುತ್ತಿದ್ದರು. 9 ದಿನಗಳ ಹಿಂದೆ ಒಂಟಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶವ ಕೊಳೆತು ವಾಸನೆ ಬಂದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಅನ್ಯಧರ್ಮೀಯರಿಗೆ ವ್ಯಾಪಾರ ನಿಷೇಧದ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಶಿವಶಕ್ತಿ ಶಾಖೆ ಕದ್ರಿಯಿಂದ ಬ್ಯಾನರ್ ಅಳವಡಿಸಲಾಗಿದೆ. ಇದೇ ಬ್ಯಾನರ್ನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಆರೋಪಿಯ ಉಲ್ಲೇಖವೂ ಇರುವುದು ಹಲವರ ಗಮನ ಸೆಳೆದಿದೆ. ‘ಕದ್ರಿ ಮಂಜುನಾಥನ ಜಾತ್ರೆಯಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ’ ಎಂದು ಬ್ಯಾನರ್ನಲ್ಲಿ ಹೇಳಲಾಗಿದೆ. ‘ಕುಕ್ಕರ್ ಬಾಂಬ್ ಆರೋಪಿಯು ಮೊದಲು ಕದ್ರಿ ದೇವಸ್ಥಾನವನ್ನೇ ಟಾರ್ಗೆಟ್ ಮಾಡಿದ್ದ. ಅಂಥ ಮನಸ್ಥಿತಿ ಇರುವವರಿಗೆ ಮತ್ತು ವಿಗ್ರಹಾರಾಧನೆಯನ್ನು ಹರಮ್ ಎಂದು ನಂಬಿರುವ ಯಾರಿಗೂ ಇಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ’ ಎಂದು ಬ್ಯಾನರ್ನಲ್ಲಿ ಬರೆಯಲಾಗಿದೆ. ಕದ್ರಿ ಜಾತ್ರಾ ಮಹೋತ್ಸವವು ಜನವರಿ 14 ರಿಂದ ಜನವರಿ 23ರವರೆಗೆ ನಡೆಯಲಿದೆ. ಒಂಬತ್ತು ದಿನಗಳ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.
ಕನ್ನಡದಲ್ಲಿ ಕೆಲ ಸಿನಿಮಾಗಳನ್ನು ಮಾಡಿ ಜನಪ್ರಿಯರಾಗಿದ್ದ ಧನುಷ್ ಸಾವನ್ನಪ್ಪಿದ್ದು, ಸ್ಯಾಂಡಲ್ವುಡ್ಗೆ ಅಘಾತ ಉಂಟುಮಾಡಿದೆ. ಪ್ಯಾರ್ ಕಾ ಗೋಲ್ ಗುಂಬಜ್, ಕೊಟ್ಲಲ್ಲಪ್ಪೋ ಕೈ, ಸಂಪಿಗೆ ಹಳ್ಳಿ, ಲೀಡರ್ ,ಸ್ನೇಹಿತ ಚಿತ್ರಗಳಲ್ಲಿ ನಟ ಧನುಷ್ ಅಭಿನಯಸಿದ್ದಾರೆ. ಕಳೆದವಾದ ಲಡಾಕ್ ಗೆ ಶೂಟಿಂಗ್ ಗೆ ಹೋಗಿದ್ದ ವೇಳೆ ಅನಾರೋಗ್ಯಕ್ಕೆ ತುತ್ತಾಗಿದ್ದ ನಟ ಧನುಷ್ ಆಸ್ಪತ್ರೆಗೆ ದಾಖಲಾಗಿದ್ರು. ಲಡಾಕ್ ವಾತಾರಣದಿಂದ ನಟ ಧನುಷ್ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ನಟ ಧನುಷ್ ನ್ಯೂಮೋನಿಯಾದಿಂದ ಬಳಲುತ್ತಿದ್ದರು. ನ್ಯೂಮೋನಿಯಾಗೆ ಬಲಿಯಾದ ನಟ ಧನುಷ್ ಆಗಿದ್ದಾರೆ. ನಿನ್ನೆ ರಾತ್ರಿ 10:45ಕ್ಕೆ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸ್ಯಾಂಡಲ್ವುಡ್ ನ ಅನೇಕ ನಟ-ನಟಿಯರು ಧನುಷ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ವಿಟ್ಲ;ಮನೆಯೊಂದಕ್ಕೆ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಮಾಣಿ ಕಾಪಿಕಾಡು ಬಳಿ ನಡೆದಿದೆ. ದೀಪಾ ಎಂಬವರ ಮನೆ ಬೆಂಕಿಗೆ ಆಹುತಿಯಾಗಿದೆ.ದೀಪಾ ಅವರು ಮನೆಯಲ್ಲಿ ಒಬ್ಬರೇ ಇದ್ದಾಗ ಘಟನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಸಿಲಿಂಡರ್ ಸ್ಪೋಟದ ಶಬ್ಧದಿಂದ ಜನರು ಕೆಲ ಕಾಲ ಆತಂಕಿತರಾಗಿದ್ದರು. ಸ್ಥಳಕ್ಕೆ ಪುತ್ತೂರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸುವ ಕೆಲಸವನ್ನು ಮಾಡಿದ್ದಾರೆ.
ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಿಂದ ಮನೆಯಲ್ಲಿದ್ದ ವಿದ್ಯುತ್ ಉಪಕರಣಾ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಮನೆಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಪುತ್ತೂರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದರೆ.
ಬೆಂಗಳೂರು: ಕರ್ನಾಟಕದಲ್ಲಿನ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಏಪ್ರಿಲ್ 4 ರಂದು ಮಹಾವೀರ ಜಯಂತಿ ರಜೆ ಇರುವ ಕಾರಣ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ. 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆ ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದೆ. ಮಾರ್ಚ್ 31- ಪ್ರಥಮ ಭಾಷೆ,ಏಪ್ರಿಲ್ 3- ಗಣಿತ, ಏಪ್ರಿಲ್ 6- ದ್ವಿತೀಯ ಭಾಷೆ, ಏಪ್ರಿಲ್ 10- ವಿಜ್ಞಾನ,ಏಪ್ರಿಲ್ 12- ತೃತೀಯ ಭಾಷೆ,ಏಪ್ರಿಲ್ 15- ಸಮಾಜ ವಿಜ್ಞಾನ ವಿಷಯಗಳ
ಮುಂಬೈ : ಮುಂಬೈ-ಗೋವಾ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ 9 ಮಂದಿ ಸ್ಥಳದಲ್ಲೇ ಮೃತಪಟ್ಟರೆ, 4 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಿದರು. ಸ್ಥಳೀಯರ ಸಹಾಯದಿಂದ ಗಾಯಗೊಂಡ ಮಗುವನ್ನು ಕಾರಿನಿಂದ ಹೊರತೆಗೆದು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.










