ಕಣ್ಣೂರು: ವಿಷಪೂರಿತ ಆಹಾರ ಸೇವಿಸಿ ಏಳು ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಯೋನೈಸ್ ನೊಂದಿಗೆ ಚಿಕನ್ ತಿಂದ ಏಳು ವಿದ್ಯಾರ್ಥಿಗಳು ಆಹಾರ ವಿಷದಿಂದ ಸೋಂಕಿಗೆ ಒಳಗಾಗಿದ್ದರು. ಕಣ್ಣೂರಿನ ನಿತ್ಯಾನಂದ ಭವನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಫುಡ್ ಪಾಯ್ಸನ್ ನಿಂದ ಬಳಲುತ್ತಿದ್ದರು. ಹೊಟ್ಟೆ ನೋವು ಮತ್ತು ವಾಂತಿಯ ಬಗ್ಗೆ ದೂರು ನೀಡಿದ ನಂತರ ವಿದ್ಯಾರ್ಥಿಗಳನ್ನು ಪಪ್ಪಿನಿಸ್ಸೆರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಮಕ್ಕಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ, ಎಂದು ವೈದ್ಯರು ತಿಳಿಸಿದ್ದಾರೆ
Author: main-admin
ಬೆಂಗಳೂರು: ಕೆಲ ದಿನಗಳ ಹಿಂದೆ ನೈಟ್ ಶಿಫ್ಟ್ ಕೆಲಸ ಮುಗಿಸಿಕೊಂಡು, ಮುಂಜಾನೆ ಬೈಕ್ ಟ್ಯಾಕ್ಸಿಯಲ್ಲಿ ಖಾಸಗೀ ಕಂಪನಿ ಉದ್ಯೋಗಿಯೊಬ್ಬರು ಮನೆಗೆ ತೆರಳುತ್ತಿದ್ದರು. ಅವರನ್ನು ತಡೆದಿದ್ದಂತ ಬಂಡೇಪಾಳ್ಯ ಪೊಲೀಸ್ ಠಾಣೆಯ ಪೇದೆಗಳು, ಅವರ ಬ್ಯಾಗ್ ನಲ್ಲಿ ಗಾಂಜಾ ಇಟ್ಟು, ಕೇಸ್ ಹಾಕುವುದಾಗಿ ಬೆದರಿಸಿ ಹಣ ಪೀಕಿದ್ದರು. ಈ ಪ್ರಕರಣ ಸಂಬಂಧ ಇಬ್ಬರು ಕಾನ್ಸ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಲಾಗಿದೆ. ಕಳೆದ ಜನವರಿ 11ರಂದು ಮುಂಜಾನೆ 3.50ರ ಸುಮಾರಿಗೆ ಹೆಚ್ ಎಸ್ ಆರ್ ಲೇಔಟ್ ಬಳಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಂತ ಹಿಮಾಚಲ ಪ್ರದೇಶ ಮೂಲಕ ಖಾಸಗೀ ಕಂಪನಿ ಉದ್ಯೋಗಿ ವೈಭವ್ ಎಂಬುವರನ್ನು ಬಂಡೇಪಾಳ್ಯ ಪೊಲೀಸ್ ಠಾಣೆಯ ಇಬ್ಬರು ನೈಟ್ ಶಿಫ್ಟ್ ಪೇದೆಗಳು ತಡೆದಿದ್ದರು. ಬೈಕ್ ಟ್ಯಾಕ್ಸಿಯಲ್ಲಿ ಮನೆಗೆ ತೆರಳುತ್ತಿದ್ದಂತ ಅವರ ಬ್ಯಾಗ್ ಪರಿಶೀಲಿಸಿ, ಗಾಂಜಾ ಅವರೇ ಇಟ್ಟು, ನೀನು ಗಾಂಜಾ ಸೇವಿಸುತ್ತೀಯ ಎಂಬುದಾಗಿ ಹೆದರಿಸಿದ್ದರು. ಅಲ್ಲದೇ ಆಸ್ಪತ್ರೆಗೆ ಕರೆದೊಯ್ಯುವುದಾಗಿ ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದರು. ಆದ್ರೇ ಗಾಂಜಾ ಅಭ್ಯಾಸ, ಸೇವನೆ ಇಲ್ಲದಂತ ವೈಭವ್ ನನಗೆ…
ಬಂಟ್ವಾಳ:ಜೀಪ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಮೂಲದ ವಿಜಿತ್ ಮೃತಪಟ್ಟ ಯುವಕ. ಬಂಟ್ವಾದಲ್ಲಿ ನಡೆಯುವ ಬಿಜೆಪಿಯ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ತೆಲಂಗಾಣ ದಾಖಲೆಯ ವಾಹನಕ್ಕೆ ನರಹರಿ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಢಿಕ್ಕಿಯಾಗಿದೆ ಎನ್ನಲಾಗಿದೆ. ಇನ್ನು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಆರ್.ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಟದಹಳ್ಳಿಯಲ್ಲಿ ಅಕ್ರಮ ಸಂಬಂಧ ಒಪ್ಪದಿದ್ದಕ್ಕೆ ವ್ಯಕ್ತಿಯೊಬ್ಬ ಮಹಿಳೆಗೆ ಚಾಕು ಇರಿತ ಘಟನೆ ಬೆಳಕಿಗೆ ನಡೆದಿದೆ. ಶೇಖ್ ಮೆಹಬೂದ್ ಎಂಬಾತನಿಂದ ಹಬೀಬಾತಾಜ್ ಎಂಬ ಮಹಿಳೆಗೆ (30)ಗೆ ಚಾಕು ಇರಿತ ಮಾಡಿದ್ದಾನೆ. ಆರು ವರ್ಷದ ಹಿಂದೆ ಹಬೀಬಾತಾಜ್ ಪತಿ ಮೃತಪಟ್ಟಿದ್ದರು. ಹಬೀಬಾತಾಜ್ ಇಬ್ಬರು ಮಕ್ಕಳ ಜೊತೆ ಜೀವನ ನಡೆಸುತ್ತಿದ್ದರು. ಹಬೀಬಾ ತಾಜ್, ಆಟೋ ಚಾಲಕ ಶೇಖ್ ಮೆಹಬೂದ್ ಸ್ನೇಹ ಬೆಳೆಸಿದ್ದರು. ಆಟೋ ಚಾಲಕ ಶೇಖ್ ಮೆಹಬೂದ್ ಮದುವೆಯಾಗಿ ಮಕ್ಕಳಿದ್ದರು. ಹೀಗಾಗಿ ಆಟೋ ಚಾಲಕ ಶೇಖ್ ಮೆಹಬೂದ್ನಿಂದ ದೂರವಾಗಲು ಹಬೀಬಾ ನಿರ್ಧರಿಸಿದ್ದರು. ಈ ವಿಚಾರ ಮನಗಂಡು ನಿನ್ನೆ ರಾತ್ರಿ ಶೇಖ್ ಮೆಹಬೂದ್ , ಹಬೀಬಾ ನಡುವೆ ಗಲಾಟೆ ನಡೆಯಿತು. ಗಲಾಟೆ ವೇಲೆ ಹಬೀಬಾ ತಾಜ್ ಗೆ ಚಾಕು ಇರಿದ್ದಾನೆ ಎಂದು ತಿಳಿದು ಬಂದಿದೆ. ಗಾಯಾಳು ಹಬೀಬಾ ತಾಹ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಶೇಖ್ ಮೆಹಬೂದ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ…
ಉಡುಪಿ: 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಬ್ರಹ್ಮಗಿರಿಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಕಾಪು ಮೂಲದ ದಂಪತಿ ಪುತ್ರಿ ಮಂಗಳಾದೇವಿ(11) ಆತ್ಮಹತ್ಯೆ ಮಾಡಿಕೊಂಡವರು. ಈಕೆ ಕಾಪುವಿನ ಖಾಸಗಿ ಶಾಲೆಯ ವಿದ್ಯಾರ್ಥಿನಿ. ಶಾಲೆ ರಜೆ ಹಿನ್ನಲೆ ಮನೆಯಲ್ಲೇ ಇದ್ದರು, ತಂದೆ ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಬಾಲಕಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿ ನಗರ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಆಕೆ ಉಪಯೋಗಿಸುತ್ತಿದ್ದ ಟ್ಯಾಬ್ ವಶಕ್ಕೆ ತೆಗೆದುಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರಿದಿದೆ.
ಕೊಡಗು : ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ರೇಷ್ಮೆ ಹಡ್ಲು ಹಾಡಿಯಲ್ಲಿ ಆದಿವಾಸಿಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಗಳನ್ನು ಭಜರಂಗದಳದ ಕಾರ್ಯಕರ್ತರು ತರಾಟೆ ತೆಗೆದುಕೊಂಡಿದ್ದಲ್ಲದೇ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಐವರು ವಶಕ್ಕೆ ಪಡೆಯಲಾಗಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆ ಹಡ್ಲು ಹಾಡಿಯಲ್ಲಿರುವ ಆದಿವಾಸಿ ನಿವಾಸಿಗಳಿಗೆ ಎಳ್ಳು ಬೆಲ್ಲ ಹಂಚೋದಕ್ಕೆ ಭಜರಂಗದಳದ ಕಾರ್ಯಕರ್ತರು ತೆರಳಿದಾಗ ಬೈಬಲ್ ಬೋಧನೆಯನ್ನು ಮಾಡುತ್ತಿರುವು ಕಂಡು ಬಂದಿದೆ. ಆಗ ಭಜರಂಗದಳದ ಕಾರ್ಯಕರ್ತರು ತರಾಟೆ ತೆಗೆದುಕೊಂಡಿದ್ದಾರೆ. ಈ ಸಂಬಂದ ಈಗಾಗಲೇ ಸುಮಾರು 500 ಕುಟುಂಬಗಳಲ್ಲಿ 250 ಮಂದಿಯನ್ನು ಮತಾಂತರ ಆಗಿದ್ದಾರೆಂಬ ಆರೋಪಿಸಿದ್ದು, ಐವರು ಕ್ರಿಶ್ಚಿಯರನ್ನುವಶಕ್ಕೆ ಪಡೆದು ಕೂಡಲೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಸಂಬಂಧ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಜೋಗಿಕುಂಬ್ರಿ ಗ್ರಾಮದಲ್ಲಿ ಪ್ರೇಮವೈಫಲ್ಯದಿಂದ ಬಾಲಕಿ ಕಳೆನಾಶಕ ಸೇವಿಸಿ, ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಬೆಡ್ನಲ್ಲೇ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆಗೈದ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ದೀಪ್ತಿ ಎಂಬಾಕೆ ಎಸ್.ಕೆ ಮೇಗಲ್ ಗ್ರಾಮದ ನಿತೇಶ್ ಎಂಬುವನನ್ನ ಪ್ರೀತಿಸುತ್ತಿದ್ದಳು. ಆತ ವಂಚಿಸಿದ್ದಾನೆ ಎಂದು ಗೊತ್ತಾಗುತ್ತಿದ್ದಂತೆ, ಕಳೆನಾಶಕ (ಕ್ರಿಮಿನಾಶಕ) ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಿದ್ದರು. ಕೆಲದಿನಗಳಿಂದ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರಂತ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ಆಕೆ ಡೆತ್ ನೋಟ್ ಬರೆದಿಟ್ಟಿದ್ದು, ‘ನಾನು ನಿತೇಶ್ನನ್ನ ಪ್ರೀತಿಸುತ್ತಿದ್ದೆ. ನಮ್ಮಿಬ್ಬರ ಮಧ್ಯೆ ಜಗಳದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದೇನೆಂದು ಬರೆದಿದ್ದಾಳೆ. ಈ ಸಂಬಂದ ನಿತೇಶ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಡುಪಿಯ ಕಾಲೇಜೊಂದರಿಂದ ಅನುಮತಿ ಪಡೆದು ಹೊರ ಹೋದ ಯುವತಿಯೊಬ್ಬಳು, ಬಳಿಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯನ್ನು ಪಡುಬೆಳ್ಳೆ ನಿವಾಸಿ ಸ್ಟೀಫನ್ ಅಮ್ಮನ್ ಅವರ ಪುತ್ರಿ 20ವರ್ಷದ ರಿಯೋನಾ ಅಮ್ಮನ್ನ ಎಂದು ಗುರುತಿಸಲಾಗಿದೆ. ಈಕೆ ಎಂದಿನಂತೆ ಜನವರಿ 13 ರಂದು ಉಡುಪಿಯ ಕಾಲೇಜಿಗೆ ಹೋಗಿದ್ದು, ಮಧ್ಯಾಹ್ನ ಅನುಮತಿ ಪಡೆದು ಹೊರ ಹೋಗಿದ್ದಾಳೆ. ಆ ಬಳಿಕ ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾಳೆ. ಈ ಬಗ್ಗೆ ಆಕೆಯ ತಾಯಿ ರೀಟಾ ಅಮ್ಮನ್ನ ಉಡುಪಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ರಿಯೋನಾ ಅಮ್ಮನ್ನ 5 ಅಡಿ ಎತ್ತರವಿದ್ದು, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದಾಳೆ. ನೀಲಿ ಬಣ್ಣದ ಟೀ-ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದಿದ್ದಾಳೆ. ಈಕೆ ಕನ್ನಡ, ಇಂಗ್ಲೀಷ್, ತುಳು ಭಾಷೆ ಮಾತನಾಡುತ್ತಿದ್ದು, ಇವರ ಬಗ್ಗೆ ಮಾಹಿತಿ ಇದ್ದಲ್ಲಿ ಉಡುಪಿ ನಗರ ಠಾಣೆಗೆ ಸಂಪರ್ಕಿಸುವಂತೆ ಕೋರಲಾಗಿದೆ.
ನಾಗ್ಪುರ: ಕೇಂದ್ರ ಸಚಿವ ʻನಿತಿನ್ ಗಡ್ಕರಿʼಗೆ ಕೊಲೆ ಬೆದರಿಕೆ ಕರೆ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ ಪೊಲೀಸರು ಕರೆ ಮಾಡಿದವನ ಗುರುತು ಪತ್ತೆಹಚ್ಚಿದ್ದಾರೆ. ಬೆಳಗಾವಿ ಜೈಲಿನಲ್ಲಿರುವ ವ್ಯಕ್ತಿಯೊಬ್ಬರಿಂದ ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ ಕರೆಗಳು ಬಂದಿವೆ ಎಂದು ತಿಳಿದುಬಂದಿದ್ದು, ನಾಗ್ಪುರ ಪೊಲೀಸರು ಶನಿವಾರ ಕರೆ ಮಾಡಿದವರನ್ನು ಪತ್ತೆಹಚ್ಚಿದ್ದಾರೆ. ಕರೆ ಮಾಡಿದವರನ್ನು ಜಯೇಶ್ ಕಾಂತ ಎಂದು ಗುರುತಿಸಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೈಲಿನಿಂದ ಬೆದರಿಕೆ ಹಾಕಲಾಗುತ್ತಿದೆ. ಕರೆ ಮಾಡಿದವರು ಕುಖ್ಯಾತ ದರೋಡೆಕೋರ ಮತ್ತು ಕೊಲೆ ಆರೋಪಿ ಜಯೇಶ್ ಕಾಂತ ಬೆಳಗಾವಿ ಜೈಲಿನಲ್ಲಿ ಬಂಧಿಯಾಗಿದ್ದಾನೆ. ಜೈಲಿನೊಳಗೆ ಅಕ್ರಮವಾಗಿ ಫೋನ್ ಬಳಸಿ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಹಾಕಿದ್ದಾನೆ. ನಾಗ್ಪುರ ಪೊಲೀಸರ ತಂಡವು ತನಿಖೆಗಾಗಿ ಬೆಳಗಾವಿಗೆ ತೆರಳಿದೆ ಮತ್ತು ಪ್ರೊಡಕ್ಷನ್ ರಿಮಾಂಡ್ ಕೇಳಿದೆ ಎಂದು ನಾಗ್ಪುರದ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದಾರೆ. ದಾವೂದ್ ಇಬ್ರಾಹಿಂ ಗ್ಯಾಂಗ್ನ ಸದಸ್ಯನೆಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬ ಬೆದರಿಕೆ ಕರೆಗಳನ್ನು ಮಾಡಿ 100 ಕೋಟಿ ರೂ.ಗೆ ಬೇಡಿಕೆಯಿಟ್ಟ…
ಬೆಳ್ತಂಗಡಿ:ದಲಿತ ಯುವಕ ಶ್ರೀಧರ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶಿಬಾಜೆಯ ತಿಮ್ಮಪ್ಪ, ಲಕ್ಷ್ಮಣ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಬಂಧಿತ ಆರೋಪಿಗಳು. ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಮೂಡಿಗೆರೆಯ ಶ್ರೀಧರ ಎಂಬವರ ಮೃತದೇಹ ಕಳೆದ ಡಿ. 18ರಂದು ಕೆಲಸ ಮಾಡುವ ತೋಟದ ಮೂಲೆಯಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದಿತ್ತು.ಇದೊಂದು ಕೊಲೆ ಎಂದು ದೂರು ದಾಖಲಾಗಿತ್ತು.










