Author: main-admin

ಉಳ್ಳಾಲ: ನಿಷೇಧಿತ ಎಂಡಿಎಂಎ ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಉಚ್ಚಿಲ ರಿಲಾಯನ್ಸ್ ಪೆಟ್ರೋಲ್ ಪಂಪ್‌ನಲ್ಲಿ ಅಡ್ಡಗಟ್ಟಿ ಬಂಧಿಸಿದ್ದಾರೆ. ಬಂಧಿತರಿಂದ 95 ಸಾವಿರ ರೂ. ಬೆಲೆಯ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲದ ಆಝಾದ್‌ನಗರ 1ನೇ ಕ್ರಾಸ್‌ನ ಮೊಹಮ್ಮದ್ ಖಾಲಿದ್ (39), ಹಾಗೂ ಮಂಜೇಶ್ವರದ ಲಿಖಿತ್ (21) ಬಂಧಿತರು. ಇಬ್ಬರೂ ಡಿಯೊ ಸ್ಕೋಟರ್‌ನಲ್ಲಿ ತಲಪಾಡಿಯಿಂದ ಉಚ್ಚಿಲ ರಿಲಯನ್ಸ್ ಪೆಟ್ರೋಲ್ ಪಂಪ್ ಕಡೆಗೆ ಎಂಡಿಎಂಎ ಹೊಂದಿರುವ ಪಾಕೆಟ್ ಸಮೇತ ಹೋಗುತ್ತಿದ್ದ ಸಮಯದಲ್ಲಿ ಉಳ್ಳಾಲ ಪೊಲೀಸರು ಸ್ಕೂಟರ್‌ನ್ನು ಅಡ್ಡಗಟ್ಟಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.20 ಸಾವಿರ ರೂ. ಮೌಲ್ಯದ 10 ಗ್ರಾಂ ಎಂಡಿಎಂಎ, 50 ಸಾವಿರ ರೂ. ಬೆಲೆ ಬಾಳುವ ಸ್ಕೂಟರ್ ಹಾಗೂ 25 ಸಾವಿರ ರೂ. ಬೆಲೆ ಬಾಳುವ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಗಾಂಜಾ ಮಾರಾಟದ ಪ್ರಕರಣಗಳಿವೆ.ಉಳ್ಳಾಲ ಠಾಣೆಯ ಇನ್ಸ್ಪೆಕ್ಟರ್ ಸಂದೀಪ್ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐಗಳಾದ ರೇವಣ್ಣ ಸಿದ್ದಪ್ಪ, ಪ್ರದೀಪ್ ಟಿ.ಆರ್., ಶಿವಕುಮಾರ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಶೋಕ,…

Read More

ಮಂಗಳೂರು: ಹಿಮಾಚಲ ಪ್ರದೇಶದಿಂದ ರೈಲು ಮೂಲಕ ನಿಷೇಧಿತ ಗಾಂಜಾ- ಚರಸ್‌ಗಳನ್ನು ತಂದು ಮಂಗಳೂರಿನ ಉದ್ಯಮಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮುಡಾರಿ ಸುಕೇತ್ ಕಾವ, ಕಾರ್ಕಳ ಆನೆಕೆರೆ ನಿವಾಸಿ ಸುನಿಲ್ ಮತ್ತು ತಮಿಳುನಾಡು ರಾಜ್ಯದ ಕೊಯಂಬತ್ತೂರು ನಿವಾಸಿ ಅರವಿಂದ ಎಂದು ತಿಳಿದುಬಂದಿದೆ. ಹಿಮಾಚಲ ಪ್ರದೇಶ ರಾಜ್ಯದ ಕುಲ್ಲು ಜಿಲ್ಲೆಯ ಪಾರ್ವತಿ ವ್ಯಾಲಿ ಎಂಬ ಗುಡ್ಡಗಾಡು ಪ್ರದೇಶದ ಜನರಿಂದ ಕಡಿಮೆ ಹಣಕ್ಕೆ ಗಾಂಜಾ-ಚರಸ್‌ಗಳನ್ನು ಖರೀದಿ ಮಾಡುತ್ತಿದ್ದರು. ತಾವು ಟ್ರಕ್ಕಿಂಗ್ ಮಾಡುವವರು, ಪ್ರವಾಸಿಗರು, ಪ್ರವಾಸಿ ಗೈಡ್‌ಗಳು ಎಂದೆಲ್ಲಾ ಆ ಜನರನ್ನು ನಂಬಿಸುತ್ತಿದ್ದರು. ಅಲ್ಲಿನ ಜನರಿಂದ ಕಡಿಮೆ ಬೆಲೆಗೆ ಖರೀದಿಸಿಕೊಂಡು ರೈಲಿನಲ್ಲಿ ಬಂದು ಮಂಗಳೂರಿನ ಉದ್ಯಮಿಗಳು ಮತ್ತು ವ್ಯಾಪಾರಸ್ಥರಿಗೆ ಪೂರೈಸಿ ಅವರ ಮೂಲಕ ಸಾರ್ವಜನಿಕರಿಗೆ ಮತ್ತು ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ತಲುಪುವಂತೆ ಮಾಡಿ ಸುಲಭವಾಗಿ ಹಣ ಸಂಪಾದನೆ ಮಾಡುತ್ತಿದ್ದರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್‍ ತಿಳಿಸಿದ್ದಾರೆ. ಆರೋಪಿಗಳ ಬಗ್ಗೆ ಖಚಿತ…

Read More

ಸುರತ್ಕಲ್‌ : ಕೆಲಸ ಮಾಡುವಾಗ ಗುಡ್ಡ ಕುಸಿತ ಉಂಟಾಗಿ ಓರ್ವ ಕಾರ್ಮಿಕ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೇಳೈರು ಗ್ರಾಮದ ಚೇಳೈರು ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ಕಾರ್ಮಿಕನನ್ನು ಓಬಲೇಶ್ವರ ಎಂದು ಗುರುತಿಸಲಾಗಿದೆ. ರೈಲ್ವೇ ಸೇತುವೆಯ ಮೇಲ್ಭಾಗದಲ್ಲಿ ಕಂಬಿಗಳನ್ನು ನೇರಮಾಡುತ್ತಿದ್ದ ಸಂದರ್ಭ ಕಾರ್ಮಿಕರು ಕೆಳಭಾಗದಲ್ಲಿ ಗುಡ್ಡ ಅಗೆಯುತ್ತಿದ್ದರು. ಈ ವೇಳೆ ರೈಲೊಂದು ಏಕಾಏಕಿ ಬಂದ ಹಾದುಹೋದ ಪರಿಣಾಮ ಮಣ್ಣು ಕುಸಿದು ಗುಡ್ಡದ ಕೆಳಭಾಗದಲ್ಲಿ ಅಗೆಯುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಈ ವೇಳೆ ಆರೇಳು ಕಾರ್ಮಿಕರ ಮೇಲೆ ಮಣ್ಣು ಬಿದ್ದಿದೆ. ಈ ಪೈಕಿ ಓಬಳೇಶ್ವರ ಮತ್ತು ಬಳ್ಳಾರಿಯ ಗೋವಿಂದಪ್ಪ ಅವರ ಮೈಮೇಲೆ ಹೆಚ್ಚಿನ ಪ್ರಮಾಣದ ಮಣ್ಣುಬಿದ್ದು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ರಕ್ಷಿಸಿ ಖಾಸಗಿ ಆಸ್ಪತೆರೆಗ ದಾಖಲಿಸಲಾಗಿದ್ದು, ಈ ವೇಳೆ ಓಬಳೇಶ್ವರ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಗೋವಿಂದಪ್ಪ ಅವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಕಾರ್ಮಿಕರಾದ ಕಿಟ್ಟರಾಜ ಎಂಬವರು ಸುರತ್ಕಲ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ…

Read More

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡವೊಂದು ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಖಲಂದರ್ ಅಬ್ಬಾಸ್ ಅವರ ಪುತ್ರ ಮಹಮ್ಮದ್ ಶಾಕೀರ್ ಎಂಬವರು ನೀಡಿದ ದೂರಿನಂತೆ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್, ರೋಹಿತ್, ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಾಕೀರ್ ಮಂಗಳೂರು ಬಲ್ಮಠ ಎಂಬಲ್ಲಿರುವ ಯೆನಪೋಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಜ. 12ರಂದು ಕಾಲೇಜು ಮುಗಿಸಿ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ ಈತ ಕುಳಿತುಕೊಂಡಿದ್ದ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ಬೇಕೆ ಎಂದು ಕೇಳಿದ್ದರು. ವೀರಕಂಭ ಗ್ರಾಮದ ಕೆಲಿಂಜ ಎಂಬಲ್ಲಿಗೆ ಬಸ್ ತಲುಪಿದಾಗ ಏಕಾಏಕಿಯಾಗಿ ಬಸ್ಸಿನೊಳಗೆ ಬಂದ ಚಂದ್ರಶೇಖರ, ಪ್ರಜ್ವಲ್, ರೋಹಿತ್ ಹಾಗೂ ಮೂವರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಶಾಕೀರ್ ವಿಟ್ಲ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅಹಮದಾಬಾದ್: ಮದುವೆಯ ನಂತರವೂ ಆಸ್ತಿಯಲ್ಲಿ ಸಮಾನ ಹಕ್ಕಿದೆ ಎಂದು ಅಭಿಪ್ರಾಯಪಟ್ಟಿರುವ ಗುಜರಾತ್ ಹೈಕೋರ್ಟ್ ಮಗಳು ಮತ್ತು ಸಹೋದರಿಯರ ಬಗ್ಗೆ ಇರುವ ಸಮಾಜದ ಮನಸ್ಥಿತಿಯನ್ನು ಬದಲಾಯಿಸಬೇಕಾಗಿದೆ ಎಂದು ಶುಕ್ರವಾರ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎ. ಶಾಸ್ತ್ರಿ ಅವರ ವಿಭಾಗೀಯ ಪೀಠವು ಕುಟುಂಬದ ಆಸ್ತಿ ಹಂಚಿಕೆಯಲ್ಲಿ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಅಲ್ಲಿ ಅರ್ಜಿದಾರರ ಪ್ರಕರಣದಲ್ಲಿ ಅವರ ಸಹೋದರಿ ಆಸ್ತಿಯಲ್ಲಿ ತನ್ನ ಹಕ್ಕನ್ನು ಬಿಟ್ಟುಕೊಟ್ಟಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ. ಅರ್ಜಿದಾರರ ಸಲ್ಲಿಕೆಯ ಬಗ್ಗೆ ಮಾತನಾಡಿದ ಮುಖ್ಯ ನ್ಯಾಯಾಧೀಶರು, ‘ಕುಟುಂಬದಲ್ಲಿ ಮಗಳು ಅಥವಾ ಸಹೋದರಿ ಮದುವೆಯಾದ ನಂತರ, ನಾವು ಅವಳಿಗೆ ಏನನ್ನೂ ನೀಡಬಾರದು ಎಂಬ ಮನೋಭಾವವನ್ನು ಬದಲಾಯಿಸಬೇಕು. ಅವಳು ನಿಮ್ಮೊಂದಿಗೆ ಜನಿಸಿದ ನಿಮ್ಮ ಸಹೋದರಿಯಾಗಿದ್ದಾಳೆ. ಅವಳು ಮದುವೆಯಾಗಿದ್ದರೂ, ಆಕೆಗೆ ತವರು ಮನೆಯಲ್ಲಿರುವ ಸ್ಥಾನಮಾನ ಬದಲಾಗುವುದಿಲ್ಲ’ ಎಂದಿದ್ದಾರೆ. ʻವಿವಾಹಿತ ಅಥವಾ ಅವಿವಾಹಿತ ಮಗನು ಮಗನಾಗಿ ಉಳಿದಿದ್ದರೆ, ವಿವಾಹಿತ ಅಥವಾ ಅವಿವಾಹಿತ ಮಗಳು ಮಗಳಾಗಿಯೇ ಉಳಿಯಬೇಕು.…

Read More

ಮೈಸೂರು :ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಾಂಟ್ರೋ ರವಿಯನ್ನು ಪೊಲೀಸರು ಗುಜರಾತ್ ನಲ್ಲಿ ಬಂಧಿಸಿದ್ದಾರೆ. ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿ ಕೆ.ಎಸ್‌.ಮಂಜುನಾಥ್ ಅಲಿಯಾಸ್‌ ಸ್ಯಾಂಟ್ರೊ ರವಿಯನ್ನು ಮೈಸೂರು ಪೊಲೀಸರು ಗುಜರಾತ್‌ನಲ್ಲಿ ಶುಕ್ರವಾರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಾಗಿ ಹತ್ತು ದಿನಗಳ ನಂತರ ಆರೋಪಿಯನ್ನು ಬಂಧಿಸಲಾಗಿದೆ. 2ನೇ ಪತ್ನಿ ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು. ವಿವಿಧ ತಂಡಗಳನ್ನು ರಚಿಸಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ವಿವಾಹಿತ ಎಂಬುದನ್ನು ಮುಚ್ಚಿಟ್ಟು, ಪರಿಶಿಷ್ಟ ಸಮುದಾಯದ ಮಹಿಳೆಯನ್ನು ವಂಚಿಸಿ ಮದುವೆಯಾಗಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ, ವರದಕ್ಷಿಣೆ ಕಿರುಕುಳ ನೀಡಿ, ಸುಳ್ಳು ಪ್ರಕರಣ ದಾಖಲಿಸಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿತ್ತು. ನಗರದ ಸಂತ್ರಸ್ತ ಮಹಿಳೆ ಹಾಗೂ ಅವರ ಕುಟುಂಬದ ಸದಸ್ಯರು ಒಡನಾಡಿ ಸೇವಾ ಸಂಸ್ಥೆಯ ನೆರವು ಪಡೆದು ದೂರು ದಾಖಲಿಸಿದ್ದರು.

Read More

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೊಲೀಸರು ದಾಳಿ ನಡೆಸಿ 10 ಲಕ್ಷ ರೂ ಮೌಲ್ಯದ ಹಣವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಅನೇಕಲ್ ತಾಲೂಕಿನ ಹುಸ್ಕೂರು ಬಳಿ ನಡೆದಿದೆ. ಇಬ್ಬರು ವ್ಯಕ್ತಿಗಳು ನಿರ್ಜನ ಪ್ರದೇಶದಲ್ಲಿ ಇನೋವಾ ಕಾರು ನಿಲ್ಲಿಸಿಕೊಂಡು ಕಂತೆ ಕಂತೆ ನೋಟು ಎಣಿಸುತ್ತಿದ್ದರು. ಈ ವೇಳೆ ಅಲ್ಲೇ ರೌಂಡ್ಸ್ ನಲ್ಲಿದ್ದ ಪೊಲೀಸರು ಅನುಮಾನಗೊಂಡು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 10 ಲಕ್ಷ ರೂ ಹಣ ಪತ್ತೆಯಾಗಿದೆ.ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಿಚಾರಣೆ ನಡೆಸಿದಾಗ ಸರಿಯಾದ ಉತ್ತರ ಬರಲಿಲ್ಲ. ಈ ಹಿನ್ನೆಲೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಂಚಾಯತಿಯ ಬಿಲ್ ಕಲೆಕ್ಷರ್ ಮಲ್ಲೇಶ್ ಮತ್ತು ನೆಲಮಂಗದಲದ ರಾಜೇಶ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಜೇಶ್ವರ; ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್‌ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೀಯಪದವಿನ ಪ್ರೀತೇಶ್ ಮತ್ತು ಅಭಿ ಮೃತ ವಿದ್ಯಾರ್ಥಿಗಳು ಎನ್ನಲಾಗಿದೆ. ಶಾಲಾ ಬಸ್, ವಿದ್ಯಾರ್ಥಿಗಳು ಹೋಗುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಮಂಗಳೂರು: ಸುರತ್ಕಲ್ ಬಸ್‌ ನಿಲ್ದಾಣ ಸನಿಹದಲ್ಲಿ ಮೂರು ವರ್ಷದ ಮಗುವೊಂದು ಸಾರ್ವಜನಿಕರಿಗೆ ಪತ್ತೆಯಾಗಿದ್ದು, ತಾಯಿಯಿಂದ ಬೇರ್ಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸಾರ್ವಜನಿಕರು ಮಗುವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಮಗು ಬೋಳು ತಲೆಯಲ್ಲಿದ್ದು, ಗುಲಾಬಿ ಬಣ್ಣದ ಅಂಗಿ ಧರಿಸಿದೆ. ಮಗುವಿನ ಪೋಷಕರನ್ನು ಪತ್ತೆ ಹಚ್ಚಲು ಸಾರ್ವಜನಿಕರು ಪೊಲೀಸರಿಗೆ ಕೋರಿದ್ದು, ಮಗುವನ್ನು ಕಳೆದುಕೊಂಡ ಪೋಷಕರು ಸುರತ್ಕಲ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಯಾರಾದರೂ ಮಗುವನ್ನು ಕಳೆದುಕೊಂಡಿದ್ದಲ್ಲಿ ಸುರತ್ಕಲ್ ಠಾಣಾ ಫೋನ್ ದೂ.ಸಂ.- 0824-2220540, ಪೊಲೀಸ್ ನಿರೀಕ್ಷಕರ ಮೊ.ಸಂ.- 9480805360, ಪೊಲೀಸ್ ಉಪನಿರೀಕ್ಷಕ- 9480802344, ನಗರ ನಿಸ್ತಂತು ನಿಯಂತ್ರಣ ಕೊಠಡಿ ಮೊ. 9480802321 ಅಥವಾ ಮಹಿಳಾ ಸಮನ್ವಯ ಅಧಿಕಾರಿ ಮೊ.: 9448332713ನ್ನು ಸಂಪರ್ಕಿಸುವಂತೆ ಸುರತ್ಕಲ್ ಠಾಣೆಯ ಪ್ರಕಟನೆ ತಿಳಿಸಿದೆ.

Read More

ಬೆಂಗಳೂರು: ಬೇಸಾದಯ ಉದ್ದೇಶಕ್ಕಾಗಿ ಹೊಂದಿರುವ ಯಾವುದೇ ಭೂಮಿಯನ್ನು ಬೇಸಾಯೇತರ ಉದ್ದೇಶಕ್ಕಾಗಿ ಪರಿವರ್ತಿಸುವಾಗ ಸಲ್ಲಿಸುವಂತ ಅರ್ಜಿ ಶುಲ್ಕದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. ಈ ಸಂಬಂಧ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಿಂದ ರಾಜ್ಯ ಪಾಲರ ಪರವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಮೂಲ ಅಧಿನಿಯಮದಲ್ಲಿನ 96ನೇ ಪ್ರಕರಣದಲ್ಲಿ ಉಪಪ್ರಕರಣ(1)ರಲ್ಲಿ ಸುಳ್ಳು ಅಥವಾ ತಪ್ಪು ಅಫಿಡವಿಟ್ ಘೋಷಣೆಯನ್ನಾಧರಿಸಿ ಎಂಬ ಪದಗಳನ್ನು ಸೇರಿಸುವುದು ಎಂದಿದ್ದಾರೆ. ಇನ್ನೂ ಭೂ ಪರಿವರ್ತನೆ ಶುಲ್ಕಲದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. ಒಂದು ಸಾವಿರ ರೂಪಾಯಿಯ ಶುಲ್ಕವನ್ನು ಒಂದು ಲಕ್ಷಕ್ಕೆ ಹೆಚ್ಚಿಸಿದ್ದರೇ, ಇಪ್ಪತ್ತೈದು ರೂಪಾಯಿಗಳ ಶುಲ್ಕವನ್ನು ಎರಡು ಸಾವಿರದ ಐದುನೂರು ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

Read More