Author: main-admin

ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್‌ ಪೂಜಾರಿ ಸ್ಥಾನಮನೆ(36) ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡಿತು. ಇದನ್ನು ‌ನೋಡಿದ ಸಾರ್ವಜನಿಕರು ಸಂಶಯಗೊಂಡು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಗ್ನಿಶಾಮಕ ದಳವನ್ನು ಕರೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರು ನದಿಯಲ್ಲಿ ಹುಡುಕಾಟ ನಡೆಸಿದಾಗ ರಾಜೇಶ್ ಪೂಜಾರಿಯ‌ ಮೃತದೇಹ ಪತ್ತೆಯಾಗಿದೆ. ಗೂಡಿನಬಳಿಯ ಮುಳುಗುತಜ್ಞರಾದ ಇಕ್ಬಾಲ್ (ಬಾಬಿ), ಮುಹಮ್ಮದ್( ಮಮ್ಮು), ಹಾರಿಸ್, ಇಬ್ರಾಹೀಂ ಎಂ.ಕೆ. ಅವರು ನದಿಯಲ್ಲಿ ಶೋಧ ಮತ್ತು ಮೃತದೇಹ ಮೇಲಕ್ಕೆತ್ತಲು ಸಹಕಾರ ನೀಡಿದರು. ರಾಜೇಶ್ ಅವರು ಕಳೆದ ರಾತ್ರಿ ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಸೇತುವೆಯಲ್ಲಿ ಅಪಘಾತಕ್ಕೀಡಾಗಿ ಅವರು ನದಿಗೆಸೆಯಲ್ಪಟ್ಟಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು,…

Read More

ಮಂಗಳೂರು : ಮಂಗಳೂರಿನಲ್ಲಿ ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ ಸಂಬಂಧ ವೈದ್ಯರು, ವಿದ್ಯಾರ್ಥಿಗಳು ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮತ್ತೋರ್ವ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 11 ಕ್ಕೇರಿದೆ. ಕೆಎಂಸಿ ಅಂತಿಮ ವರ್ಷದ ವಿದ್ಯಾರ್ಥಿ ತುಮಕೂರಿನ ಡಾ.ವಿ.ಎಸ್. ಹರ್ಷಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದೇರಳಕಟ್ಟೆಯ ಯೆನೇಪೋಯಾ ಮೆಡಿಕಲ್ ಕಾಲೇಜು, ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಅತ್ತಾವರ, ಕೆ.ಎಂ.ಸಿ ಮಣಿಪಾಲ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳು ಈ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ವೈದ್ಯರಾದ ಡಾ. ಸಮೀರ್(32), ಮಣಿಮಾರನ್ ಮುತ್ತು(28)ರನ್ನು ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್ (24), ಡಾ.ವರ್ಷಿಣಿ ಪ್ರತಿ (26), ಡಾ.ರಿಯಾ ಚಡ್ಡ (22), ಡಾ.ಹೀರಾ ಬಸಿನ್ (23) ಹಾಗೂ ವೈದ್ಯ ಡಾ.ಸಮೀರ್ (32), ಮಣಿಮಾರನ್ ಮುತ್ತು (28), ಸ್ಥಳೀಯ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್ (34) ಬಂಧಿಸಲಾಗಿದೆ. ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ (27), ಡಾ.ಕ್ಷಿತಿಜ್ ಗುಪ್ತ (23) ಇವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ…

Read More

ಉಡುಪಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕುಮ್ಕಿ ಜಮೀನಿನಲ್ಲಿ ಕೃಷಿ ಮಾಡಲು 30 ವರ್ಷ ಗುತ್ತಿಗೆ ನೀಡಲು ಸರಕಾರ ನಿರ್ಧರಿಸಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಮಾಡಾವು-ಸುಳ್ಯ ವಿದ್ಯುತ್‌ ಪ್ರಸರಣ ಮಾರ್ಗದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು,ಡೀಮ್ಡ್‌ ಫಾರೆಸ್ಟ್‌ ಸಮಸ್ಯೆ ಪರಿಹಾರವಾಗಿದೆ. ಅಲ್ಲದೆ ಕುಮ್ಕಿ ಜಮೀನಿನಲ್ಲಿ ಕೃಷಿ ಮಾಡಲು 30 ವರ್ಷ ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸಿದೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ಹತ್ತು ವರ್ಷಗಳ ವಿದ್ಯುತ್‌ ಬೇಡಿಕೆ ಮುಂದಿರಿಸಿ ಜಿಲ್ಲೆಯಲ್ಲಿ ಪ್ರಸ್ತಾವನೆಯಲ್ಲಿದ್ದ ಹನ್ನೊಂದು 110 ಕೆವಿ ಸಬ್‌ಸ್ಟೇಷನ್‌ಗಳಿಗೆ ಮಂಜೂರಾತಿ ನೀಡಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿದ್ದ ಹಲವಾರು ವಿದ್ಯುತ್‌ ಯೋಜನೆಗಳಿಗೆ ಕಳೆದ ಒಂದೂವರೆ ವರ್ಷದಲ್ಲಿ ಮಂಜೂರಾತಿ ನೀಡಲಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ 200 ಸಬ್‌ಸ್ಟೇಷನ್‌ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

Read More

ಹಾಸನ : ಕರ್ತವ್ಯಲೋಪ ಹಿನ್ನೆಲೆ ಹಾಸನ ಜಿಲ್ಲೆ ಸಕಲೇಶಪುರ ವಲಯ ಅರಣ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಅರಣ್ಯ ಅಪರಾಧಗಳ ತನಿಖೆ ನಡೆಸುವಲ್ಲಿ ವಿಫಲವಾದ ಹಿನ್ನೆಲೆ ಸಕಲೇಶಪುರ ವಲಯ ಅರಣ್ಯಾಧಿಕಾರಿ ಎಸ್.ಎಲ್ ಶಿಲ್ಪಾ ಅವರನ್ನು ಅಮಾನತು ಮಾಡಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ಕಿಶೋರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ವಲಯ ಅರಣ್ಯಾಧಿಕಾರಿಗೆ ಇರುವ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದು, ಸರ್ಕಾರಿ ಸ್ವತ್ತನ್ನು ರಕ್ಷಣೆ ಮಾಡುವಲ್ಲಿ ವಿಫಲರಾಗಿ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ. ಅಧಿಕಾರಿ, ಸಿಬ್ಬಂದಿ ವರ್ಗದವರ ನಡುವೆ ಭಿನ್ನಾಭಿಪ್ರಾಯ ಉಂಟಾಗಲು ಹಾಗೂ ವಿಭಾಗದ ಮತ್ತು ವಲಯದ ಆಡಳಿತಾತ್ಮಕ ತೊಡಕು ಉಂಟಾಗಲು ನೇರ ಕಾರಣರಾಗಿದ್ದಾರೆ ಎಂದು ಅಮಾನತು ಮಾಡಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ಕಿಶೋರ್ ಸಿಂಗ್ ಆದೇಶ ಹೊರಡಿಸಿದ್ದಾರೆ.

Read More

ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ತೊಕ್ಕೊಟ್ಟಿನ ಬಳಿಯ ಪೆರ್ಮಣ್ಣೂರು ಗ್ರಾಮದ ಮಾಜೀಲ್ ಅಬ್ದುಲ್ ರೆಹಮಾನ್ ಮತ್ತು ದಾವಣಗೆರೆಯ ಹೊನ್ನಾಳಿ ಮೂಲದ ನದೀಂ ಅಹಮದ್ ಎಂದು ಗುರುತಿಸಲಾಗಿದೆ. ಇಬ್ಬರೂ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಖ್ ಹಾಗೂ ಆತನ ಜೊತೆಗಾರರಾದ ಮಾಜಿ ಮುನೀರ್ ಮತ್ತು ಸೈಯದ್ ಯಾಸಿನ್ ಜೊತೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಶಾರಿಕ್, ಮಾಜ್ ಮುನೀರ್ ಹಾಗೂ ಯಾಸಿನ್ ಶಿವಮೊಗ್ಗದ ತುಂಗಾ ದಡ ಹಾಗೂ ಮಂಗಳೂರಿನ ಸೇತ್ರಾವತಿ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದರು. ಅಲ್ಲದೇ ಮೂವರು ಮಂಗಳೂರಿನಲ್ಲಿ ಲಷ್ಕರ್ ಉಗ್ರರ ಪರ ಗೋಡೆ ಬರಹ ಬರೆದಿದ್ದರು ಎನ್ನಲಾಗಿದೆ.

Read More

ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 40 ಕ್ಕು ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಣಿಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಲಕ್ಷ್ಮೀ (55) ಸಾವನ್ನಪ್ಪಿದ್ದು, ಕಲುಷಿತ ನೀರು ಸೇವಿಸಿರುವ 40 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಪೇಟೆ ನಗರದ ರಾಣಿಪೇಟೆ, ಚಲವಾದಿಕೇರಿ ಸೇರಿದಂತೆ ಹಲವಡೆ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಪೈಪ್ ಲೈನ್ ಕಾಮಗಾರಿ ವೇಳೆ ನೀರು ಕಲುಷಿತಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

Read More

ಮಂಗಳೂರು : ಅತ್ಯಂತ ಅಘಾತಕಾರಿ ಘಟನೆಯೊಂದರಲ್ಲಿ ನಗರದಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆ ಪ್ರಕರಣದಲ್ಲಿ ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಂಬತ್ತು ಮಂದಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ ಎನ್ನುವ ವಿಚಾರ ಕಳವಳಕಾರಿಯಾಗಿದೆ. ಬಂಧನದ ಕುರಿತು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಅವರು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ದೂರಿನ ಆಧಾರದ ಮೇಲೆ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ಮೊದಲು ಬಂಧಿಸಲಾಗಿದೆ. ಈತ ಯುಕೆಯ ಪ್ರಜೆಯಾಗಿದ್ದು, ಎನ್ ಆರ್ ಐ ಕೋಟಾದಲ್ಲಿ ಡೆಂಟಲ್ ವಿದ್ಯಾರ್ಥಿಯಾಗಿದ್ದು ಕಳೆದ ಹದಿನೈದು ವರ್ಷಗಳಿಂದಲೂ ವಿದ್ಯಾಭ್ಯಾಸ ಮಾಡುತ್ತಿದ್ದು,ಆತನಿಗೆ ಶಿಕ್ಷಣ ಇನ್ನೂ ಪೂರ್ಣ ಗೊಳಿಸಲು ಸಾಧ್ಯವಾಗಿಲ್ಲ. ಗಾಂಜಾ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ. ನೀಲ್ ಕಿಶೋರಿಲಾಲ್ ವಿದ್ಯಾರ್ಥಿನಿಯರು ಮತ್ತು ವೈದ್ಯರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದು, ಸಾಕಷ್ಟು ಪೂರಕ ಸಾಕ್ಷಧಾರಗಳಿಂದ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಬಂಧಿತ ಆರೋಪಿಗಳು,ಕೇರಳ ಮೂಲದ ಡಾ ಸಮೀರ್ (32), ಡಾ. ನಾಡಿಯಾ…

Read More

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಜಿಲ್ಲೆಯ 357539 ಪಿಹೆಚ್‍ಹೆಚ್ (ಬಿಪಿಎಲ್) ಮತ್ತು 42333 ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗಳಿಗೆ ಜನವರಿ-2023ರ ಮಾಹೆಗೆ ಆಹಾರಧಾನ್ಯ ಬಿಡುಗಡೆಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ (ಪಿಎಂಜಿಕೆಎವೈ)ಯಲ್ಲಿ ಬಿಡುಗಡೆಗೊಳಿಸುತ್ತಿದ್ದ ಆಹಾರಧಾನ್ಯ ಹಂಚಿಕೆಯನ್ನು ಜನವರಿ-2023ರ ಮಾಹೆಯಲ್ಲಿ ಸ್ಥಗತಿಗೊಂಡಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ (ಎನ್‍ಎಫ್‍ಎಸ್‍ಎ) ಪಿಹೆಚ್‍ಹೆಚ್ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ ತಲಾ 5 ಕೆಜಿಯಂತೆ ಹಾಗೂ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ ತಲಾ 35 ಕೆ.ಜಿ ಅಕ್ಕಿಯನ್ನು ಬಿಡುಗಡೆಗೊಳಿಸಲಾಗಿದೆ. ಪಡಿತರ ಚೀಟಿದಾರರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯವನ್ನು ಉಚಿತವಾಗಿ ಪಡೆಯಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Read More

ಫತೇಹಬಾದ್: 100ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿದ್ದ ಜಿಲೇಬಿ ಬಾಬಾನಿಗೆ ಹರ್ಯಾಣದ ಜಿಲ್ಲಾ ನ್ಯಾಯಾಲಯ 14 ವರ್ಷ ಜೈಲು ಶಿಕ್ಷೆ ನೀಡಿ ಆದೇಶಿಸಿದೆ. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಬಲ್ವಂತ್ ಸಿಂಗ್ ಮಂಗಳವಾರ ಪೋಕ್ಸೋ ಕಾಯ್ದೆಯಡಿ 14 ವರ್ಷ, ಐಟಿ ಕಾಯ್ದೆ ಅಡಿಯಲ್ಲಿ 5 ವರ್ಷ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ಒಟ್ಟಾಗಿ 14 ವರ್ಷ ಶಿಕ್ಷೆ ವಿಧಿಸಿ ಆದೇಶ ನೀಡಿದರು. ಮಹಿಳೆಯರ ಮೇಲೆ ಅತ್ಯಾಚಾರ ಮಾಡುವುದು, ಅವರ ಅಶ್ಲೀಲ ವಿಡಿಯೊ ಸೆರೆ ಹಿಡಿಯುವುದು 63 ವರ್ಷದ ಜಿಲೇಬಿ ಬಾಬಾ ಅಲಿಯಾಸ್‌ ಅಮರವೀರ್‌ನ ನಿತ್ಯದ ಕಾಯಕವಾಗಿತ್ತು. ವಿಡಿಯೊ ಬಳಸಿಕೊಂಡು ಮಹಿಳೆಯರನ್ನು ಬ್ಲ್ಯಾಕ್‌ಮೇಲ್ ಮಾಡಿ ಶೋಷಿಸುತ್ತಿದ್ದ. ನಾಲ್ವರು ಹೆಣ್ಣುಮಕ್ಕಳು ಮತ್ತು ಇಬ್ಬರು ಗಂಡುಮಕ್ಕಳ ತಂದೆಯಾಗಿದ್ದ ಈತನ ಪತ್ನಿ ನಿಧನರಾಗಿದ್ದರು. ಮೂಲತಃ ಪಂಜಾಬ್‌ನವನಾದ ಈತ 23 ವರ್ಷಗಳ ಹಿಂದೆ ಮನ್ಸಾ ಪಟ್ಟಣದಿಂದ ತೋಹನಾಕ್ಕೆ ಬಂದು ಜಿಲೇಬಿ ಅಂಗಡಿ ತೆರೆದು ಪ್ರಸಿದ್ಧನಾಗಿದ್ದ. ಕೆಲವು ವರ್ಷಗಳ ಬಳಿಕ ತೋಹನಾದಿಂದಲೂ ನಾಪತ್ತೆಯಾಗಿ ದೇವಸ್ಥಾನವೊಂದನ್ನು ಕಟ್ಟಿ ಬಾಬಾ ಅವತಾರದಲ್ಲಿ ಮರಳಿದ್ದ. ಅಲ್ಲಿಂದ…

Read More

ಉಡುಪಿ: ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನವು ಫೆಬ್ರವರಿ 11 ಮತ್ತು 12 ರಂದು ಉಡುಪಿಯ ಎಂ.ಜಿ.ಎ. ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಸಲಹಾ ಸಮಿತಿಯ ಅಧ್ಯಕ್ಷ ವಿ.ಸುನಿಲ್ ಕುಮಾರ್ ಹೇಳಿದರು. ನಗರದ ಎಂ.ಜಿ.ಎ. ಕಾಲೇಜಿನ ಆವರಣ, ರವೀಂದ್ರ ಮಂಟಪದ ಹಿಂಭಾಗದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ತಾತ್ಕಾಲಿಕ ಕಚೇರಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಯಕ್ಷಗಾನಕ್ಕೆ ತನ್ನದೇ ಆದ ಹಿರಿಮೆ ಗರಿಮೆ ಇದ್ದು, ತುಳುನಾಡಿನಲ್ಲಿ ಇದಕ್ಕೆ ಇನ್ನೂ ಹೆಚ್ಚಿನ ಮಹತ್ವ ಇದೆ. ಯಕ್ಷಗಾನದಲ್ಲಿ ಪ್ರಸ್ತುತ ಇರುವ ಮತ್ತು ಮುಂದಿನ ದಿನದಲ್ಲಿ ಎದುರಾಗುವ ಹೊಸ ರೀತಿಯ ಸವಾಲುಗಳನ್ನು ಎದುರಿಸುವ ಬಗ್ಗೆ, ಹೊಸ ಪೀಳಿಗೆಗೆ ಯಕ್ಷಗಾನದ ಬಗ್ಗೆ ತಿಳಿಸಲು ಸೇರಿದಂತೆ ಯಕ್ಷಗಾನ ಬೆಳವಣಿಗೆ ಕುರಿತಂತೆ ಸಮ್ಮೇಳನದಲ್ಲಿ ಸಮಗ್ರ ಚರ್ಚೆ ನಡೆಯಲಿದೆ ಎಂದರು. ಯಕ್ಷಗಾನ ಕಲಾವಿದರು ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಬಳುವಳಿಯನ್ನು ನೀಡಿದ್ದಾರೆ. ಯಕ್ಷಗಾನ ಪ್ರಸಂಗದಲ್ಲಿ ಯಾವುದೇ…

Read More