Author: main-admin

ಪುತ್ತೂರು: ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಫ್ರಿದ್ ಎಂದು ಗುರುತಿಸಲಾಗಿದೆ. ಪ್ರಶಾಂತ್ ರೈ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಿಂದೂ ಕಾರ್ಯಕರ್ತ ಜೀವ ಬೆದರಿಕೆ ಹಾಕಿದ್ದು, ಈ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಳ್ಳಾರೆಯ ಪೊಲೀಸ್ ಠಾಣೆಯ ಎದುರು ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ಕಾರ್ಯಕರ್ತರು ನೆರೆದಿದ್ದರು. ಇನ್ನು ಸಫ್ರಿದ್‌ನನ್ನು ಬಜ್ಪೆಯಲ್ಲಿ ಪೊಲೀಸರು ಬಂಧಿಸಿದ್ದು, ಈತನನ್ನು ಬೆಳ್ಳಾರೆ ಠಾಣೆಗೆ ಕರೆತಂದಿರುವುದಾಗಿ ತಿಳಿದು ಬಂದಿದೆ

Read More

ಬೆಂಗಳೂರು: ನಾಳೆಯಿಂದವಿಧಾನಮಂಡಲಅಧಿವೇಶನಆರಂಭವಾಗಲಿದ್ದು, ಸರ್ಕಾರಹಾಗೂಪ್ರತಿಪಕ್ಷಗಳಮಧ್ಯೆಜಂಗೀಕುಸ್ತಿಶುರುವಾಗಲಿದೆ. 40 ಪರ್ಸೆಂಟ್ ಕಮಿಷನ್, ಬೆಂಗಳೂರಿನ ಮಳೆ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆ ಇದೆ. ವಿರೋಧಪಕ್ಷಕ್ಕೆಆಹಾರವಾಗದಂತೆಆಡಳಿತರೂಢಬಿಜೆಪಿಪ್ಲಾನ್ರೂಪಿಸಿಕೊಂಡಿದೆ. ಇನ್ನೊಂದೆಡೆಸರ್ಕಾರವನ್ನುಇಕ್ಕಟ್ಟಿಗೆಸಿಲುಕಿಸಲುಕಾಂಗ್ರೆಸ್ಮತ್ತುಜೆಡಿಎಸ್ಸಿದ್ಧವಾಗಿದೆ. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಹಲವು ವಿಧೇಯಕಗಳು ಮಂಡನೆಯಾಗಲಿವೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ, ಮಳೆ ಅನಾಹುತ, ಪಿಎಸ್ ಐ ಸೇರಿದಂತೆ ಇತರೆ ನೇಮಕಾತಿ ಅಕ್ರಮ ಆರೋಪಗಳ ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದ್ದು, ಕಾಂಗ್ರೆಸ್ ತಿರುಗೇಟು ನೀಡಲು ಪ್ರತಿತಂತ್ರದೊಂದಿಗೆ ಆಡಳಿತಾರೂಢ ಬಿಜೆಪಿ ಸಜ್ಜಾಗಿದೆ.

Read More

ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದು  ಜರುಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್‌ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ ಘಟನೆ ಸೆ 10 ರಂದು ಬೆಳಿಗ್ಗೆ ಬೆಳ್ಳಾರೆಯಲ್ಲಿ ನಡೆದಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್‌ ನ ಮ್ಯಾನೇಜರ್‌ ಪ್ರಶಾಂತ್‌ ರೈವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಶಫೀಕ್‌ ತಮ್ಮ, ಸಫ್ರಿದ್‌ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಈತ ದಿ. ಪ್ರವೀಣ್ ನೆಟ್ಟಾರ್ ಅವರ ಕೋಳಿ ಫಾರ್ಮ್‌ ನಲ್ಲಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರ.…

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವ್ರು ಸ್ವೀಕರಿಸಿದ ಉಡುಗೊರೆಗಳ ಇ-ಹರಾಜಿನಲ್ಲಿ ಜನರು ವ್ಯಾಪಕವಾಗಿ ಬಿಡ್ ಮಾಡುತ್ತಿದ್ದು, ಸ್ವೀಕರಿಸಿದ ಈ ಮೊತ್ತವನ್ನ ನಮಾಮಿ ಗಂಗೆ ಅಭಿಯಾನಕ್ಕೆ ಬಳಸಲಾಗುವುದು. ಇನ್ನು ಈ ಹರಾಜಿನಲ್ಲಿ ದೇಶದ ವಿವಿಧ ಭಾಗಗಳಿಂದ ಜನರು ಭಾಗವಹಿಸಿದ್ದಾರೆ ಅನ್ನೋದು ವಿಶೇಷ. ಈ ಪೈಕಿ ಉಡುಪಿಯ ಚಾರ್ಟರ್ಡ್ ಅಕೌಂಟೆಂಟ್ ಕೆ. ರಂಗನಾಥ್ ಆಚಾರ್ ಮತ್ತು ರಾಯಪುರದ ಡಾ. ಸಂಜೀವ್ ಜೈನ್ ಅವರು ಮೋದಿಗೆ ನೀಡಿದ ಕೆಲವು ಉಡುಗೊರೆಗಳನ್ನ ಖರೀದಿಸಿದ್ದಾರೆ. ‘ಅವರು 2019 ರಿಂದ ಇ-ಹರಾಜಿನ ಮೂಲಕ ವಿವಿಧ ವಸ್ತುಗಳನ್ನ ಸಂಗ್ರಹಿಸುತ್ತಿದ್ದಾರೆ ಮತ್ತು ಅವರು ಇಲ್ಲಿಯವರೆಗೆ ಖರೀದಿಗಾಗಿ ಸುಮಾರು 3 ಲಕ್ಷ ರೂ.ಗಳನ್ನ ಖರ್ಚು ಮಾಡಿದ್ದಾರೆ. ಅದ್ರಂತೆ, ವಿಷ್ಣುವಿನ ವಿಗ್ರಹವನ್ನ 1.75 ಲಕ್ಷ ರೂ.ಗಳಿಗೆ ಖರೀದಿಸಿದರು’ ಎನ್ನುವ ಮಾಹಿತಿ ಏಜೆನ್ಸಿ ಮೂಲಕ ವ್ಯಕ್ತವಾಗಿದೆ. ಇ-ಹರಾಜಿಗೆ ಕಳೆದ ವರ್ಷ ಅಭೂತಪೂರ್ವ ಬೆಂಬಲ.!ಪ್ರಧಾನಮಂತ್ರಿಗಳು ಸ್ವೀಕರಿಸಿದ ಉಡುಗೊರೆಗಳನ್ನ ದೇಶ ಮತ್ತು ವಿದೇಶಗಳಲ್ಲಿ ಇ-ಹರಾಜು ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಪಡೆದ ಮೊತ್ತವನ್ನ ನದಿಯ ಪುನರುಜ್ಜೀವನಕ್ಕಾಗಿ ನೀಡಲಾಗುತ್ತಿದೆ.…

Read More

ನವದೆಹಲಿ: ಬೀದಿ ನಾಯಿಗಳಿಗೆ ಆಹಾರ ನೀಡುವವರನ್ನೇ ಅವುಗಳ ಲಸಿಕೆಗೆ ಜವಾಬ್ದಾರರನ್ನಾಗಿ ಮಾಡಬಹುದು ಮತ್ತು ಬೀದಿ ನಾಯಿಗಳು ಜನರ ಮೇಲೆ ದಾಳಿ ಮಾಡಿದರೆ ಆ ವೆಚ್ಚವನ್ನು ಅವುಗಳಿಗೆ ಊಟ ಹಾಕಿ ಸಲಹಿದವರೇ ಭರಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಕುರಿತು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ಜನರ ಸುರಕ್ಷತೆ ಮತ್ತು ಪ್ರಾಣಿಗಳ ಹಕ್ಕುಗಳ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಜೆಕೆ ಮಹೇಶ್ವರಿ ಅವರಿದ್ದ ಪೀಠ, ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದ್ದು, ನಮ್ಮಲ್ಲಿ ಹೆಚ್ಚಿನವರು ನಾಯಿ ಪ್ರಿಯರು. ನಾನು ಕೂಡ ನಾಯಿಗಳಿಗೆ ಆಹಾರ ನೀಡುತ್ತೇನೆ. ಜನರು ಬಯಸಿದರೆ ಶ್ವಾನಗಳನ್ನು ನೋಡಿಕೊಳ್ಳಲಿ ಆದರೆ ಅವುಗಳನ್ನು ಗುರುತಿಸಬೇಕು, ಚಿಪ್ ಮೂಲಕ ಟ್ರ್ಯಾಕ್ ಮಾಡಬಾರದು ಎಂದಿದ್ದಾರೆ. ಬೀದಿನಾಯಿ ಸಮಸ್ಯೆಯನ್ನು ಪರಿಹರಿಸಲು ತರ್ಕಬದ್ಧ ಪರಿಹಾರವನ್ನು ಕಂಡುಹಿಡಿಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಿದೆ.

Read More

ಕಲಬುರಗಿ : ಕಲುಷಿತ ನೀರು ಸೇವಿಸಿ ವಾಂತಿ ಭೇದಿಯಿಂದ ಓರ್ವ ಸಾವನ್ನಪ್ಪಿದ್ದು, 52 ಮಂದಿ ಅಸ್ವಸ್ಥರಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ನಡೆದಿದೆ. ಕಲುಷಿತ ನೀರು ಕುಡಿದು ಮಂದೇವಾಲ ಗ್ರಾಮದಲ್ಲಿ ವಾಂತಿಭೇದಿ ಉಲ್ಬಣಗೊಂಡಿದ್ದು, ಓರ್ವ ಸಾವನ್ನಪ್ಪಿದರೆ, ಗ್ರಾಮದ 52 ಜನರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಾಂತಿ ಭೇದಿಯಿಂದ ರಾತ್ರಿ ಗ್ರಾಮದ ತಾಯಪ್ಪ (70) ಮೃತಪಟ್ಟಿದ್ದಾರೆ.

Read More

ಕಾಪು: ಖಾಸಗಿ ಬಸ್‌ನ ಟೈರ್ ಸ್ಫೋಟಗೊಂಡ ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರ ಪೈಕಿ ಓರ್ವರ ಕಾಲಿಗೆ ಗಂಭೀರ ಹೊಡೆತ ಬಿದ್ದ ಘಟನೆ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಾಯಾಗೊಂಡ ಪ್ರಯಾಣಿಕ ಧನರಾಜ್, ಕಾರ್ಕಳದಿಂದ ಮಂಗಳೂರು ಕಡೆಗೆ ಹೋಗಲು ಪಡುಬಿದ್ರಿ ಬಸ್ ಬಂದು ನಿಲ್ಲುತ್ತಿದಂತೆ, ಬಸ್ಸಿನ ಬಲ ಬದಿಯ ಹಿಂದಿನ ಟಯರ್ ಭಾರಿ ಸದ್ದಿನೊಂದಿಗೆ ಸ್ಫೋಟಗೊಂಡಿದೆ. ಬಸ್ಸಿನ ಟೈರ್‌ನ ಮೇಲ್ಭಾಗ ಪ್ಲಾಟ್ ಪಾರ್ಮ್ ಛಿಂದಿಯಾಗಿ ಕುಳಿತಿದ್ದ ಪ್ರಯಾಣಿಕನ ಕಾಲಿ ಬಲವಾಗಿ ಹೊಡೆದಿದೆ. ಪರಿಣಾಮ ಪ್ರಯಾಣಿಕ ಗಂಭೀರ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.

Read More

ಮಂಗಳೂರು: ಕೊಲೆ ಯತ್ನ ನಡೆಸಿದ ಆರೋಪಿಗಳಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ಜಾಗದ ತಕರಾರಿನ ದ್ವೇಷದಿಂದ ಮೂಡುಬಿದಿರೆ ತಾಲೂಕು ನಿಡ್ಡೋಡಿ ಗ್ರಾಮದ ಕೊಂಟಡ್ಕದಲ್ಲಿ ವಸಂತರಾಜ ಶೆಟ್ಟಿ ಅವರನ್ನು ಆರೋಪಿಗಳಾದ ಪ್ರಸನ್ನ ಕುಮಾರ್‌, ಜಯಂತಿ ಸುವರ್ಣ ಮತ್ತು ರಕ್ಷಾ ಸುವರ್ಣ ಕೊಲೆ ಮಾಡಲು ಯತ್ನಿಸಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.ಆರೋಪಿಗಳಿಗೆ ಭಾರತೀಯ ದಂಡ ಸಂಹಿತೆ ಕಲಂ 447ರಂತೆ ತಲಾ 500 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಒಂದು ವಾರದ ಸಾದಾ ಸಜೆ, ಕಲಂ 326ರಂತೆ 3 ವರ್ಷ ಸಾದಾ ಸಜೆ ಮತ್ತು ತಲಾ 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 15 ದಿನಗಳ ಸಾದಾ ಸಜೆ ವಿಧಿಸಿದ್ದಾರೆ. ಕಲಂ 504ರಡಿ 6 ತಿಂಗಳ ಸಜೆ ವಿಧಿಸಿದ್ದಾರೆ. ಕಲಂ 307ರಡಿ 3 ವರ್ಷಗಳ ಸಾದಾ ಸಜೆ ಮತ್ತು ತಲಾ 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ತಲಾ 1 ತಿಂಗಳು…

Read More

ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ನಿಟ್ಟೆ ಗರಡಿಯ ಬಳಿ ಮಾದಕ ವಸ್ತು ಸೇವಿಸಿ ನಶೆಯಲ್ಲಿ ತೇಲಾಡುತ್ತಿದ್ದ ಯುವಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ಶಹದತ್ (21) ಎಂದು ತಿಳಿದುಬಂದಿದೆ. ಆತ ಕಾಲೇಜೊಂದರ ವಿದ್ಯಾರ್ಥಿ ಎನ್ನಲಾಗಿದ್ದು, ಗಾಂಜಾ ಸೇವನೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದು ಈತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ಖಚಿತವಾಗಿದೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಯಚೂರು: ಜಿಲ್ಲೆಯಲ್ಲಿ ಮಕ್ಕಳಿಗೆ ತಿದ್ದಿ ಬುದ್ದಿ ಹೇಳುವ ಶಿಕ್ಷಕರೇ ಈಗ ವಿಕೃತಿ ಮನಸ್ಥಿತಿಯಿಂದ ಮೆರೆಯುತ್ತಿದ್ದಾರೆ. ಶಾಲೆಯ ಶಿಕ್ಷಕರೊಬ್ಬರು ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿದ್ದಕ್ಕೆ ಆಕೆಯ ಮೇಲೆ ಬಿಸಿ ನೀರು ಎರೆಚಿ ವಿಕೃತವಾಗಿ ಮೆರೆದಿದ್ದಾರೆ. ರಾಯಚೂರು ಜಿಲ್ಲೆಯ ಸಂತೆಕೆಲ್ಲೂರು ಗ್ರಾಮದಲ್ಲಿ ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿಕೊಂಡಿದ್ದರು. ಈ ವೇಳೆ ಶಿಕ್ಷಿಕ ಹುಲಿಗೆಪ್ಪ ವಿದ್ಯಾರ್ಥಿನಿ ಮೇಲೆ ಬಿಸಿ ನೀರು ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 2ನೇ ತರಗತಿಯಲ್ಲಿದ್ದ ವಿದ್ಯಾರ್ಥಿಗೆ ಬಿಸಿ ನೀರು ಸುರಿದ್ದಿದ್ದಾರೆ. ಈ ಘಟನೆಯಿಂದ ಶೇ. 4೦ ರಷ್ಟು ಮಗುವಿನ ದೇಹ ಸುಟ್ಟು ಹೋಗಿದೆ. ಕೂಡಲೇ ದೂರು ನೀಡಿದರೆ ಪೊಲೀಸರು ಮಾತ್ರ ಹಿಂದೇಟು ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

Read More