ಕಲ್ಲುಗುಂಡಿಯ ಅನ್ಯಕೋಮಿನ ಹುಡುಗನೊಬ್ಬ ಸುಬ್ರಹ್ಮಣ್ಯದ ಹಿಂದೂ ಹುಡುಗಿ ಜತೆ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿ ಸುಬ್ರಹ್ಮಣ್ಯ ಬಸ್ ಸ್ಟ್ಯಾಂಡ್ ನಲ್ಲಿ ಭೇಟಿಯಾಗಿರುವ ಘಟನೆ ನಡೆದಿದೆ.ಗುಂಪಿನಿಂದ ಹಲ್ಲೆಯಾಗಿದ್ದು ಅನ್ಯಕೋಮಿನ ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಲಾಗಿದೆ. ಆತ ಗಂಭೀರ ಗಾಯಗೊಂಡು ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ. ಇನ್ ಸ್ಟಾಗ್ರಾಂ ಮೂಲಕ ಇಬ್ಬರಿಗೂ ಪರಿಚಯವಾಗಿದ್ದು, ಇವರಿಬ್ಬರೂ ಸುಬ್ರಹ್ಮಣ್ಯ ಬಸ್ ಸ್ಟಾಂಡ್ ನಲ್ಲಿ ಭೇಟಿಯಾಗಿದ್ದಾರೆ.ಈ ಸಂದರ್ಭ ಕುಮಾರಧಾರ ಹತ್ತಿರ ಗುಂಪಿನಿಂದ ಹಲ್ಲೆ ನಡೆದಿದ್ದು, ಯುವಕನ ತಲೆಗೆ ಏಟು ಬಿದ್ದು, ಆತ ಗಂಭೀರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Author: main-admin
ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ 1.9 ಕೋಟಿ ನಕಲಿ ಹಣ ಸಿಕ್ಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸಂಬಂಧ ಪಿಚ್ಚಿ ಮುತ್ತು ಎಂಬಾತನನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಡಿಸೆಂಬರ್ 28 ರಂದು ಈತ ಬ್ಯಾಗ್ ನಲ್ಲಿ ನಕಲಿ ನೋಟುಗಳನ್ನು ತುಂಬಿಸಿಕೊಂಡು ಬರುತ್ತಿರುವ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಈತನನ್ನು ಬಲೆಗೆ ಬೀಳಿಸಿದ್ದಾರೆ. 2000 ಮುಖ ಬೆಲೆಯ 623 ನಕಲಿ ನೋಟು ಹಾಗೂ 500 ಮುಖ ಬೆಲೆಗೆ 174 ನಕಲಿ ನೋಟುಗಳು ಪತ್ತೆಯಾಗಿದೆ. ಆರೋಪಿಯು ತಮಿಳುನಾಡಿನ ತೂತ್ತುಕುಡಿಯಿಂದ ನಕಲಿ ನೋಟುಗಳನ್ನು ತರುತ್ತಿದ್ದನು ಎನ್ನಲಾಗಿದೆ. ಈ ಕುರಿತು ಸಿದ್ದಾಪುರ ಪೊಲೀಸರು ಕೇಸ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆ ಆರೋಪಿ ಬಾಯ್ಬಿಟ್ಟಿಲ್ಲ ಎಂಬುದಾಗಿ ತಿಳಿದು ಬಂದಿದೆ. ತನಿಖೆ ಮುಂದುವರೆದಿದೆ.
ಮಂಗಳೂರು: ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನೊಬ್ಬ ಲಿಂಗ ಪರಿವರ್ತನೆ (Gender change) ಮಾಡಿಸಿಕೊಂಡು ಹೆಣ್ಣಾಗಿದ್ದಾನೆ. ಈ ನಡುವೆ ಆತ ತಾನು ಈ ರೀತಿ ಲಿಂಗ ಪರಿವರ್ತನೆ ಮಾಡಿಕೊಳ್ಳಲು ದೇರಳಕಟ್ಟೆಯ ಗೆಳೆಯನೊಬ್ಬ ಕಾರಣ ಎಂದು ಹೇಳಿದ್ದು, ಆ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರವನ್ನು ಆತ ವಿಡಿಯೊ ಕ್ಲಿಪ್ ಒಂದರಲ್ಲಿ ಹೇಳಿಕೊಂಡಿದ್ದಾನೆ. ಯೂಟ್ಯೂಬ್ ಕ್ಲಿಪ್ನಲ್ಲಿ ಏನಿದೆ?ತುಮಕೂರಿನ ನಿಝಾಂ ಎಂಬ ಯುವಕ ಮನೆಗೆ ಬಾರದೇ ಹಲವು ತಿಂಗಳುಗಳು ಕಳೆದಿದೆ. ಇದರಿಂದ ತಾಯಿ ಸಂಬಂಧಿಕರ ಮೂಲಕ ಯುವಕನ ಮೊಬೈಲ್ಗೆ ಕರೆ ಮಾಡಿದಾಗ, ತಾನು ಹುಡುಗಿಯಾಗಲು ಬಯಸಿದವನು. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ತೃತೀಯ ಲಿಂಗಿಗಳ ಜತೆಗೆ ನೆಲೆಸಿದ್ದೇನೆ. ಈ ರೂಪದಲ್ಲಿ ಮರಳಿ ಊರಿಗೆ ಬಂದಲ್ಲಿ ತಾಯಿ ಹಾಗೂ ಸಂಬಂಧಿಕರಿಗೆ ನೋವಾಗುವುದು. ಅದಕ್ಕಾಗಿ ಬರಲು ಬೇಸರವಾಗುತ್ತಿದೆ ಎಂದಿದ್ದಾನೆ. ಇದೇ ವೇಳೆ ಯುವಕನ ಸಂಬಂಧಿಕರು ಇಂತಹ ಶಸ್ತ್ರಚಿಕಿತ್ಸೆ ನಡೆಸಲು ಕಾರಣ ಯಾರು? ಎಂಬುದನ್ನು ಪ್ರಶ್ನಿಸಿದಾಗ, ತನ್ನ ಗೆಳೆಯ ದೇರಳಕಟ್ಟೆಯವ. ತನ್ನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸುವಂತೆ ಮಾಡಿದ್ದಾನೆ ಎಂದು ನಿಝಾಂ ಹೇಳಿದ್ದಾನೆ. ಸದ್ಯ…
ಉಡುಪಿ : ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜೊತೆ ಲಿಂಕ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಎನ್ಐಎ ಇಂದು ಶಂಕಿತ ವಿದ್ಯಾರ್ಥಿ ರಿಹಾನ್ ಶೇಖ್ ನ ಉಡುಪಿ ಜಿಲ್ಲೆಯ ಬ್ರಹ್ಮಾವರದ ವಾರಂಬಳ್ಳಿಯಲ್ಲಿರುವ ಫ್ಲಾಟ್ ಮಹಜರು ನಡೆಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ್ದ ಎನ್ ಐ ಎ ಅಧಿಕಾರಿಗಳ ತಂಡ ದಿನ ಪೂರ್ತಿ ಫ್ಲ್ಯಾಟ್ ನಲ್ಲಿ ಮಹಜರು ನಡೆಸಿ ಕೆಲ ಅಮೂಲ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದೇ ಸಂದರ್ಭ ರಿಹಾನ್ ಕುಟುಂಬದ ಸದಸ್ಯರನ್ನು ವಿಚಾರಣೆ ನಡೆಸಿ ಕೆಲ ವಿಷಯಗಳನ್ನು ಸಂಗ್ರಹಿಸಿದ್ದಾರೆ. ಬಳಿಕ ಸಂಜೆ ಹೊತ್ತಿಗೆ ಶಂಕಿತ ಯುವಕನನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ: ಇಲ್ಲಿನ ಇಂದ್ರಾಳಿ ರೈಲ್ವೇ ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ರೈಲ್ವೇ ಹಳಿಗೆ ಬಳಸಾಗುವ ರಬ್ಬರ್ ಗೆ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಪರಿಣಾಮ ಇಂದ್ರಾಳಿ ಪರಿಸರದಲ್ಲಿ ದಟ್ಟ ಹೊಗೆ ಎದಿದ್ದು ಆತಂಕ ಮೂಡಿಸಿದೆ. ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಬೆಂಕಿಗಾಹುತಿಯಾಗಿದೆ. ಎರಡು ಅಗ್ನಿಶಾಮಕ ದಳದ ವಾಹನಗಳು, ಹತ್ತಕ್ಕೂ ಹೆಚ್ಚು ಮಂದಿ ಬೆಂಕಿ ನಂದಿಸಲು ಶ್ರಮಿಸಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್ಐಎ ಚುರುಕುಗೊಳಿಸಿದೆ. ಇಂದು ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದೆ. ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದಂತ ಮಾಹಿತಿಯ ಆಧಾರ ಮೇಲೆ ಇಂದು ಪಿ ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ 7 ಎನ್ಐಎ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿದ್ದಾರೆ. ಇದೀಗ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹಲವು ಮಹತ್ವದ ಮಾಹಿತಿಯನ್ನು ಕಲೆಹಾಕುವ ಕೆಲಸದಲ್ಲಿ ಎನ್ಐಎ ಅಧಿಕಾರಿಗಳು ನಿರತರಾಗಿರೋದಾಗಿ ತಿಳಿದು ಬಂದಿದೆ. ಶಾರಿಕ್ ನೀಡಿದಂತ ಮಾಹಿತಿಯ ಆಧಾರದ ಮೇಲೆ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಂತ ಉಡುಪಿ ಮೂಲಕ ವಿದ್ಯಾರ್ಥಿ ರಿಹಾನ್ ಶೇಖ್ ಎಂಬಾತನನ್ನು ಎನ್ಐಎ…
ಚೆನ್ನೈ:ತೂಕ ಇಳಿಸಲು ಮಾತ್ರೆ ತೆಗೆದುಕೊಳ್ಳುತ್ತಿದ್ದ ಯುವಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಚೆನ್ನೈನಲ್ಲಿ ನಡೆದಿದೆ. ಶ್ರೀಪೆರಂಬದೂರು ಸಮೀಪದ ಸೂರ್ಯ (21) ಮೃತ ಯುವಕ. ಮೃತ ಸೂರ್ಯಗೆ ತೂಕ ಕಡಿಮೆ ಮಾಡಿಕೊಳ್ಳುವಂತೆ ಕಳೆದ ಕೆಲ ತಿಂಗಳ ಹಿಂದೆ ವೈದ್ಯರು ಸಲಹೆ ಮಾಡಿದ್ದರು. ಆದರೆ ಸ್ನೇಹಿತರ ಸಲಹೆ ಮೇಲೆ ಸೂರ್ಯ ಡಿ.22ರಿಂದ ತೂಕ ಕಡಿಮೆ ಮಾಡುವ ಮಾತ್ರೆಗಳನ್ನು ತೆಗೆದುಕೊಂಡಿದ್ದ. ವೈದ್ಯರ ಸಲಹೆ ಪಡೆಯದೆ ಮಾತ್ರೆ ತೆಗೆದುಕೊಂಡಿದ್ದರಿಂದ ಅವರು ತೂಕ ಕಳೆದುಕೊಂಡು ದುರ್ಬಲವಾಗತೊಡಗಿದ್ದರು. ಜನವರಿ 1ರಂದು ಪ್ರಜ್ಞಾಹೀನರಾಗಿ ಬಿದ್ದಿದ್ದ ಅವರನ್ನು ಕೂಡಲೇ ಮನೆಯವರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದರು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸಂತ್ರಸ್ತನ ತಂದೆ ಪಾಳ್ಯಂ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮಾತ್ರೆಗಳು ಆತನ ಸಾವಿಗೆ ಕಾರಣವೇ ಎಂದು ತನಿಖೆ ನಡೆಸುತ್ತಿದ್ದಾರೆ.
ಉಡುಪಿ : ಉಡುಪಿ ಹಳೆ ಕೆ ಎಸ್ ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಕಾಪು ತೆಂಕ ಎರ್ಮಾಳ್ ನಿವಾಸಿ ಜಯಂತ್ ಸಾಲಿಯಾನ್ (46) ಹೆಬ್ರಿ ನಾಡ್ಪಾಲು ನಿವಾಸಿ ದಿನೇಶ್ ಎಸ್ (42) ಬಂಧಿತರು. ಉಡುಪಿ ಹಳೆ ಕೆ ಎಸ್ ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಲಾಡ್ಜ್ ಗೆ ದಾಳಿ ನಡೆಸಿದ್ದು, ಸಂತ್ರಸ್ಥೆಯನ್ನು ರಕ್ಷಿಸಿ ಆರೋಪಿಗಳಾದ ಜಯಂತ್ ಸಾಲಿಯಾನ್ ಮತ್ತು ದಿನೇಶ್ ಎಸ್ ಎನ್ನುವರನ್ನು ಬಂಧಿಸಿದ್ದು ಕೃತ್ಯಕ್ಕೆ ಸಂಬಂದಿಸಿದ 4 ಮೊಬೈಲ್ ಪೋನ್ , 5,600 ರೂ. ನಗದು, ಹಾಗೂ ಇತರೆ ಸಾಕ್ಷ್ಯ ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಶೇಖರ್, ಜಯಂತ್ ಮತ್ತು ದಿನೇಶ್ ಎನ್ನುವ ಆರೋಪಿಗಳು ಸಂತ್ರಸ್ತ ಮಹಿಳೆಯನ್ನು ಲಾಡ್ಜ್ ರೂಮಿನಲ್ಲಿರಿಸಿ ಹಣಕ್ಕಾಗಿ ವೇಶ್ಯವಾಟಿಕೆ ನಡೆಸಿ ಈ ಹಣದಿಂದ ಜೀವನ ನಡೆಸುತ್ತಿರುವುದು ತನಿಖೆಯಲ್ಲಿ ತಿಳಿದಿರುವುದಾಗಿ ಪೊಲೀಸ್ ಅಧಿಕಾರಿಗಳು…
ಬೆಳ್ತಂಗಡಿ: ಬಾಲಕಿ ಮೇಲೆ ನೆರೆಮನೆಯ ಯುವಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಆಕೆ ಗರ್ಭವತಿಯಾಗಿರುವುದನ್ನು ತಿಳಿದು, ಗರ್ಭಪಾತ ಮಾಡಿಸಿದ ಆರೋಪದಡಿ ಕಡಿರುದ್ಯಾವರ ಗ್ರಾಮದ ನಾಲ್ವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.2ರಂದು ಪ್ರಕರಣ ದಾಖಲಿಸಲಾಗಿದೆ. ಕಡಿರುದ್ಯಾವರ ಗ್ರಾಮದ ಕೊಪ್ಪದಗುಂಡಿ ನಿವಾಸಿಗಳಾದ ಸುಧೀರ್, ಪಾರ್ವತಿ, ಮನೋಹರ್, ಮಾದು ಎಂಬವರು ಈ ಆರೋಪಕ್ಕೆ ಒಳಗಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯವರು ನೀಡಿದ ದೂರಿನ ಮೇಲೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ನೊಂದ ಬಾಲಕಿ ಭಾನುವಾರ ಹಾಗೂ ಶಾಲಾ ರಜಾ ದಿನಗಳಲ್ಲಿ ಸುಧೀರ್ ಎಂಬಾತನ ಮನೆಗೆ ಆಗಾಗ ಟಿ.ವಿ ನೋಡಲು ಹೋಗುತ್ತಿದ್ದು, ಕಳೆದ ಡಿ.26ರಂದು ಆತ ಆಕೆಯನ್ನು ತನ್ನ ಅಜ್ಜಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿ, ಈ ವಿಚಾರವನ್ನು ಮನೆಯವರಲ್ಲಿ ಹೇಳಿದರೆ ಪೊಲೀಸರಿಗೆ ದೂರು ಕೊಡುವುದಾಗಿ ಹೆದರಿಸಿದನೆಂದು ಆರೋಪಿಸಲಾಗಿದೆ. ಬಾಲಕಿ ಗರ್ಭವತಿ ಆಗುತ್ತಿದ್ದಂತೆ ಈ ವಿಚಾರವನ್ನು ತಿಳಿದ ಆರೋಪಿ ಮತ್ತು ಇತರರು ಆಕೆಯನ್ನು ಕಾರಿಯಲ್ಲಿ ಕರೆದುಕೊಂಡು ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿರುವುದಾಗಿ ದೂರಿನಲ್ಲಿ ಅರೋಪಿಸಲಾಗಿದೆ.ಬಾಲಕಿಯ ಮೇಲೆ ನಡೆದ ಈ ಕೃತ್ಯದ ಬಗ್ಗೆ…
“ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ” ಹೀಗೆಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗೇಲ್ ಕಂಪೆನಿಯ ಅಧಿಕಾರಿಗಳಿಗೆ ಬಹಿರಂಗ ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು. ದೇರೆಬೈಲ್ ಕೊಂಚಾಡಿ ಬಳಿ ರಸ್ತೆ ಕಾಮಗಾರಿಯ ಗುದ್ದಲಿಪೂಜೆಗೆ ಬಂದಿದ್ದ ಶಾಸಕರಲ್ಲಿ ಸ್ಥಳೀಯರು ಗೇಲ್ ಕಂಪೆನಿ ಅಧಿಕಾರಿಗಳು ಎಲ್ಲೆಂದರಲ್ಲಿ ರಸ್ತೆಯನ್ನು ಅಗೆಯುತ್ತಿದ್ದು ಇದರಿಂದ ನೀರಿನ ಪೈಪ್ ಒಡೆದು ಸಮಸ್ಯೆ ಸೃಷ್ಟಿಯಾಗಿದೆ ಎನ್ನುವುದನ್ನು ಗಮನಕ್ಕೆ ತಂದರು. ಈ ವೇಳೆ ಸ್ಥಳದಲ್ಲೇ ಇದ್ದ ಕಂಪೆನಿ ಅಧಿಕಾರಿಗಳನ್ನು ಕರೆದ ಶಾಸಕರು, “ಬೇಕಾಬಿಟ್ಟಿ ಕಾಮಗಾರಿ ಮಾಡಬೇಡಿ, ಏನೇ ಮಾಡೋದಿದ್ರೂ ಸ್ಥಳೀಯ ಕಾರ್ಪೋರೇಟರ್ ಹಾಗೂ ಸಾರ್ವಜನಿಕರ ಗಮನಕ್ಕೆ ತಂದು ಬಳಿಕ ಮಾಡಿ. ನಿಮ್ಮಿಂದಾಗಿ ನಗರ ಪಾಲಿಕೆಯ ಎಲ್ಲಾ ಕಡೆಗಳಲ್ಲಿ ಸಮಸ್ಯೆಯಾಗುತ್ತಿದೆ. 10-15 ದಿನಗಳು ನೀರಿಲ್ಲದಿದ್ದರೆ ಜನರು ಏನು ಮಾಡಬೇಕು? ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ…










