ಮಂಗಳೂರು: ಪೊಲೀಸರು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ತಂಡವೊಂದು ಕ್ರಿಕೆಟ್ನಲ್ಲಿ ಜಯಗಳಿಸಿ ವಾಪಸ್ಸು ತೆರಳುವ ಸಂದರ್ಭದಲ್ಲಿ ಜಯಘೋಷಗಳನ್ನು ಮೊಳಗಿಸಿ ಹೋಗುತ್ತಿದ್ದರು. ಈ ಸಂದರ್ಭ ಕೆಲವು ಪೊಲೀಸರು ಯುವಕರನ್ನು ತಡೆ ಹಿಡಿದು ವಿಚಾರಣೆ ನಡೆಸಿದ್ದಾರೆ. ಪೊಲೀಸ್ ಸಿಬ್ಬಂದಿಯೊಬ್ಬ ಪುಟ್ಟ ಬಾಲಕನ ಮೇಲೆ ಬಾಸುಂಡೆ ಬರುವ ಹಾಗೆ ಎಡಕೈಗೆ ಲಾಠಿಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಕೆಳಕ್ಕೆ ಬಿದ್ದ ಬಾಲಕನನ್ನು ಸ್ಥಳೀಯರೇ ಹೊತ್ತುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಸ್ಥಳೀಯರು ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರಲ್ಲದೇ, ಬಳಿಕ ಪಣಂಬೂರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದಾರೆ. ಈ ಘಟನೆ ಬಗ್ಗೆ ಸ್ಥಳೀಯರು ಹೇಳುವಂತೆ ‘ಈ ಬಾಲಕನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು ದೌರ್ಜನ್ಯ ಅಂತಾನೇ ಹೇಳಬಹುದು. ಆ ಬಾಲಕನಿಗೆ ಮೊದಲೇ…
Author: main-admin
ನೆಲ್ಯಾಡಿ: ಕಾಡಾನೆ ದಾಳಿಯಿಂದ ತಂದೆ ಮೃತಪಟ್ಟು ಮಗ ತೀವ್ರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಅರಣ್ಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಬಳಿ ಇರುವ ಶಿರಾಡಿಯ ಕೊಟ್ಟಿಕ್ಕಲ್ ಎಂಬಲ್ಲಿ ನಡೆದಿದೆ. ತಿಮ್ಮಪ್ಪ (45) ಮೃತರು. ಇವರ ಮಗ ಶರಣ್ (18) ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಿಮ್ಮಪ್ಪ ಅವರು ಶಿರಾಡಿ ಜನತಾ ಕಾಲೋನಿಯ ನಿವಾಸಿ ಎಂದು ತಿಳಿದುಬಂದಿದೆ. ಕಾರ್ಯದ ನಿಮಿತ್ತ ಕೊಟ್ಟಿಕ್ಕಲ್ ಸಮೀಪ ಮಗನ ಜೊತೆ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ರಸ್ತೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಫೋಟಕ ಬಳಸಿ ಬಂಡೆ ಹೊಡೆಯುವ ಶಬ್ದಕ್ಕೆ ಬೆದರಿದ ಒಂಟಿ ಸಲಗ ಇವರ ಮೇಲೆ ದಾಳಿ ಮಾಡಿರಬಹುದು ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಸರಗೋಡು: ಖಾಸಗಿ ಬಸ್ ಢಿಕ್ಕಿಯಾಗಿ ಮಗು ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚೆರ್ಕಳದಲ್ಲಿ ನಿನ್ನೆ ಸಂಜೆ ನಡೆದಿದೆ. ಸೀತಾಂಗೋಳಿಯ ಆಶಿಕ್ – ಝುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಮೃತಪಟ್ಟ ಬಾಲಕ. ಜೊತೆಗಿದ್ದ ತಾಯಿ ಸುಬೈದಾ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಚೆರ್ಕಳ ಬಸ್ಸು ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಬಾಲ್ಯ ವಿವಾಹ ತಡೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದ್ದು, ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮಪಂಚಾಯಿತಿಗಳಿಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಾಜ್ಯದಲ್ಲಿ ಬಾಲ್ಯ ವಿವಾಹಗಳು ಹೆಚ್ಚಳವಾಗುತ್ತಿದ್ದು, ಬಾಲ್ಯ ವಿವಾಹ ತಡೆಯಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮದುವೆಯ ನೋಂದಣಿಯನ್ನು ಗ್ರಾಮ ಪಂಚಾಯಿತಿ ಅಧಿಕಾರ ವ್ಯಾಪ್ತಿಗೆ ಒಳಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿಗಳಿಗೆ ವಿವಾಹ ನೋಂದಣಿ ಅಧಿಕಾರ ನೀಡಬೇಕು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ನೋಂದಣಿ ಜವಾಬ್ದಾರಿ ವಹಿಸಿ 250 ರೂ. ಒಳಗೆ ಶುಲ್ಕ ನಿಗದಿ ಮಾಡಿ ನೋಂದಣಿ ಕಡ್ಡಾಯಗೊಳಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೇಳಿದೆ ಎನ್ನಲಾಗಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡ ನಾಗರಿಕರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ನಂತರ ಸಾವಿನ ಸಂಖ್ಯೆ ನಾಲ್ಕಕ್ಕೇರಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಒಂಬತ್ತು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರಲ್ಲಿ ಕೆಲವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕೆಲವರನ್ನು ವಿಮಾನದಲ್ಲಿ ಜಮ್ಮುವಿಗೆ ರವಾನಿಸಲಾಗಿದೆ. ಮೃತರನ್ನು ದೀಪಕ್ ಕುಮಾರ್, ಸತೀಶ್ ಕುಮಾರ್ ಮತ್ತು ಪ್ರೀತಮ್ ಲಾಲ್ ಮತ್ತು ಶಿವಪಾಲ್ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಡಾಂಗ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಶಸ್ತ್ರಸಜ್ಜಿತ ಭಯೋತ್ಪಾದಕರು ಮೂರು ಮನೆಗಳಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಉಗ್ರರ ಪತ್ತೆಗೆ ವ್ಯಾಪಕ ಶೋಧ ಕಾರ್ಯಾಚರಣೆ ಮುಂದುವರೆದಿದೆ. ನಿನ್ನೆ(ಭಾನುವಾರ) ಸಂಜೆ ಡಾಂಗ್ರಿ ಗ್ರಾಮದಲ್ಲಿ ಇಬ್ಬರು ಶಸ್ತ್ರಸಜ್ಜಿತ ಉಗ್ರರು ಮೂರು ಮನೆಗಳಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಿಂದ…
ಕಾರ್ಕಳ: ವೇಗವಾಗಿ ಸಾಗುತಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಪಲ್ಟಿಯಾದ ಘಟನೆ ಹೆಬ್ರಿ ತಾಲೂಕಿನ ಅಂಡಾರು ಕರಿಯಾಲು ಕ್ರಾಸ್ ಬಳಿ ನಡೆದೆ. ಜನವರಿ 1 ರಂದು ಭಾನುವಾರ ಮುಂಜಾನೆ ಈ ಅಪಘಾತ ನಡೆದಿದ್ದು, ಅಜೆಕಾರಿನ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಇದಾಗಿದೆ. ಬೆಂಗಳೂರಿನಿಂದ ಕೆರ್ವಾಶೆಯ ಮೂಲಕ ಅಜೆಕಾರಿಗೆ ಬರುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಇಬ್ಬರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ಈ ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮ್ಯಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಮ್ಯಾಗಿ ಜೊತೆ ತರಕಾರಿ, ಕಾರ್ನ್ ಹಾಕಿದ್ರೆ ಅದ್ರ ರುಚಿ ದುಪ್ಪಟ್ಟಾಗುತ್ತದೆ. ತರಕಾರಿ, ಕಾರ್ನ್ ಹಾಕಿ ಮ್ಯಾಗಿ ಮಾಡೋದು ಹೇಗೆ ಅಂತಾ ನಾವು ಹೇಳ್ತೇವೆ ನೋಡಿ. ಕಾರ್ನ್ ಮ್ಯಾಗಿಗೆ ಬೇಕಾಗುವ ಪದಾರ್ಥ ಎರಡು ಪ್ಯಾಕೆಟ್ ಮ್ಯಾಗಿ ಒಂದು ಈರುಳ್ಳಿ (ಸಣ್ಣಗೆ ಕತ್ತರಿಸಿದ) ಕಾರ್ನ್ ಒಂದು ಸಣ್ಣ ಬೌಲ್ ಕ್ಯಾರೆಟ್ (ತೆಳುವಾದ ಉದ್ದಗೆ ಕಟ್ ಮಾಡಿದ್ದು) ಕ್ಯಾಪ್ಸಿಕಮ್ (ಸಣ್ಣಗೆ ಕತ್ತರಿಸಿದ್ದು) ಒಂದು ಟೊಮೆಟೊ (ಸಣ್ಣದಾಗಿ ಕತ್ತರಿಸಿದ) ಎರಡು ಹಸಿರು ಮೆಣಸಿನಕಾಯಿಗಳು (ಸಣ್ಣಗೆ ಕತ್ತರಿಸಿದ) ಉಪ್ಪು ರುಚಿಗೆ ತಕ್ಕಷ್ಟು ನೀರು ಅಗತ್ಯಕ್ಕೆ ತಕ್ಕಷ್ಟು ಕಾರ್ನ್ ಮ್ಯಾಗಿ ಮಾಡುವ ವಿಧಾನ ಒಂದು ಪಾತ್ರೆಗೆ ನೀರನ್ನು ಹಾಕಿ ಕುದಿಸಿ. ನೀರು ಕುದಿಯಲು ಶುರುವಾದಾಗ ಈರುಳ್ಳಿ, ಕ್ಯಾರೆಟ್, ಕಾರ್ನ್, ಟೊಮೆಟೊ, ಕ್ಯಾಪ್ಸಿಕಂ, ಹಸಿರು ಮೆಣಸಿನಕಾಯಿ ಮತ್ತು ಸ್ವಲ್ಪ ಉಪ್ಪು ಸೇರಿಸಿ. ಸ್ವಲ್ಪ ಮ್ಯಾಗಿ ಮಸಾಲೆಯನ್ನು ಹಾಕಿ. ತರಕಾರಿ ಬೇಯುತ್ತಿದ್ದಂತೆ ಮ್ಯಾಗಿ ಹಾಗೂ ಮ್ಯಾಗಿ ಮಸಾಲೆಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಬೇಯಿಸಿ. ಸೂಪ್ ನಂತೆ ಮ್ಯಾಗಿ…
ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಾಳ್ತಿಲ ಗ್ರಾಮದ ಕಸೆಕೋಡಿ ಮನೆ ನಿವಾಸಿ ಮಂಜುನಾಥ ಭೋವಿ(50) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 105 ಕೆ.ಜಿ. ಅಡಿಕೆ, ಕಳವು ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೋಳಂಗಡಿ ನಿವಾಸಿ ಐವನ್ ಥೋರಸ್ ಎಂಬವರು ತನ್ನ ಅಡಿಕೆ ತೋಟದ ಮಧ್ಯೆದಲ್ಲಿರುವ ಅಂಗಳದಲ್ಲಿ ಅಡಿಕೆ ಒಣಗಲು ಹಾಕಿದ್ದರು. ಡಿ.24 ಮತ್ತು ಡಿ.29ರ ಮಧ್ಯದ ಅವಧಿಯಲ್ಲಿ ಇದರಿಂದ 100-120 ಕೆ.ಜಿ ಅಡಿಕೆಯನ್ನು ಯಾರೋ ಕಳವುಗೈದಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಬಂಟ್ವಾಳ ನಗರ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಡಿ.30ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಂಜುನಾಥ ಭೋವಿ ವಿರುದ್ಧ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಅಲ್ಲದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರ, ಹೊನ್ನಾವರ ಠಾಣಾ ವ್ಯಾಪ್ತಿಯಲ್ಲಿ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ ಪ್ರಕರಣಗಳು…
ಹೊಸ ವರ್ಷದ ಮೊದಲ ದಿನವೇ ಶ್ರೀಸಾಮಾನ್ಯನಿಗೆ ದೊಡ್ಡ ಶಾಕ್ ಕಾದಿದೆ. ಜನವರಿ 1, 2023 ರಿಂದ ಗ್ಯಾಸ್ ಸಿಲಿಂಡರ್ಗಳ ಬೆಲೆಗಳು ಹೆಚ್ಚಾಗಿದೆ. ಇಂದಿನಿಂದ ಸಿಲಿಂಡರ್ ಖರೀದಿ ದುಬಾರಿಯಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಗ್ರಾಹಕರಿಗೆ ಸಂಕಷ್ಟ ಎದುರಾಗುವಂತೆ ಮಾಡಿದೆ. ಇನ್ನು ದೆಹಲಿ, ಮುಂಬೈನಿಂದ ಪಾಟ್ನಾವರೆಗಿನ ಎಲ್ಲಾ ನಗರಗಳಲ್ಲಿ ಗ್ಯಾಸ್ ಸಿಲಿಂಡರ್ ಖರೀದಿ ದುಬಾರಿಯಾಗಿದೆ. ಯಾವ ನಗರದಲ್ಲಿ ಸಿಲಿಂಡರ್ ದರ ಎಷ್ಟಿದೆ ಎಂದು ತಿಳಿಯೋಣ. ಜನವರಿ 1, 2023 ರಿಂದ ವಾಣಿಜ್ಯ ಸಿಲಿಂಡರ್ಗಳ ಬೆಲೆಗಳು ಹೆಚ್ಚಾಗಿದೆ. ದೇಶೀಯ ಗ್ಯಾಸ್ ಸಿಲಿಂಡರ್ಗಳ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಆದರೆ ವಾಣಿಜ್ಯ ಸಿಲಿಂಡರ್ಗಳ ಬೆಲೆಯಲ್ಲಿ ಬರೋಬ್ಬರಿ 25 ರೂ. ಹೆಚ್ಚಳವಾಗಿದೆ. ವಾಣಿಜ್ಯ ಸಿಲಿಂಡರ್ ದರಗಳು: (ರೂ.ಗಳಲ್ಲಿ) ದೆಹಲಿ – 1769 ರೂ. ಮುಂಬೈ – 1721 ರೂ. ಕೊಲ್ಕತ್ತಾ – 1870 ರೂ. ಚೆನ್ನೈ – 1917 ರೂ. ದೇಶೀಯ ಸಿಲಿಂಡರ್ ದರಗಳು- (ರೂ.ಗಳಲ್ಲಿ) ದೆಹಲಿ – 1053 ರೂ. ಮುಂಬೈ – 1052.5 ರೂ.…
ಬೆಂಗಳೂರು : ಕಲರ್ಸ್ ಕನ್ನಡದ ಈ ಬಾರಿಯ ಬಿಗ್ ಬಾಸ್ 9 ರ ವಿಜೇತರಾಗಿ ಕರಾವಳಿಯ ಪ್ರತಿಭಾನ್ವಿತ ನಟ ರೂಪೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಗಿರಿಗಿಟ್ ಚಿತ್ರದ ತುಳುನಾಡಿನ ಪ್ರೇಕ್ಷಕರ ಮನಗೆದ್ದ ನಟ ಈಗ ಬಿಗ್ ಬಾಸ್ ವಿನ್ನರ್ ಆಗಿದ್ದಾರೆ. ಒಟಿಟಿ ಮೂಲಕ ಕಾಲಿಟ್ಟ ರೂಪೇಶ್ ಶೆಟ್ಟಿ, ಟಿವಿ ಬಿಗ್ ಬಾಸ್ನಲ್ಲಿಯೂ ಸ್ಪರ್ಧಿಯಾಗಿ ಪೈಪೋಟಿ ನೀಡಿದ್ದರು. ಒಟಿಟಿ ಟಾಪರ್ ಆಗಿದ್ದ ರೂಪೇಶ್ ಶೆಟ್ಟಿ ಈಗ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿದ್ದಾರೆ. ರಾಕೇಶ್ ಅಡಿಗಗೆ ಟಫ್ ಫೈಟ್ ಕೊಟ್ಟು, ಬಿಗ್ ಬಾಸ್ ವಿನ್ನರ್ ಟೈಟಲ್ ಅನ್ನ ತಮ್ಮದಾಗಿಸಿಕೊಂಡಿದ್ದಾರೆ. ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದಾರೆ. 2ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಒಟ್ನಲ್ಲಿ ರೂಪೇಶ್ ಶೆಟ್ಟಿ ಗೆಲವು ಕನ್ನಡಿಗರಿಗೆ, ತುಳುನಾಡಿನ ಸಮಸ್ತ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.










