Author: main-admin

ಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ಮೋಟಾ‌ರ್ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ಮಾರುತಿ ಕಂಬಾಲ್ ಅವರಿಗೆ ದಂಡ ವಿಧಿಸಲಾಗಿದೆ. ಮಂಗಳೂರು ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್. ಬ್ಯಾಡಗಿ ಅವರು ಆರೋಪಿಯ ವಿರುದ್ಧ ನಡೆದ ವಿಚಾರಣೆಯಲ್ಲಿ ತಪ್ಪು ಸಾಬೀತಾಗಿದ್ದು, ಒಟ್ಟು ರೂ. 29,000/- ದಂಡ ಪಾವತಿಸಲು ಆದೇಶ ಹೊರಡಿಸಿದ್ದಾರೆ.ಅಪ್ರಾಪ್ತ ವಯಸ್ಕರಿಗೆ ವಾಹನ ನೀಡುವುದು ರಸ್ತೆ ಅಪಘಾತಗಳಿಗೆ ಕಾರಣವಾಗುವ ಗಂಭೀರ ತಪ್ಪು ಎಂದು ನ್ಯಾಯಾಲಯ ತೀರ್ಪಿನಲ್ಲಿ ಸೂಚಿಸಿದ್ದು, ಇಂತಹ ಕೃತ್ಯಗಳಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

Read More

ಮಂಗಳೂರು : ನಗರದ ಸುರತ್ಕಲ್ ಸಮೀಪ ಕಾಟಿಪಳ್ಳದ 8ನೇ ಬ್ಲಾಕ್ ಚೊಕ್ಕಬೆಟ್ಟುವಿನ ಅಂಚೆ ಕಚೇರಿ ರಸ್ತೆಯ ಅಬ್ದುಲ್ ಖಾದರ್ ರವರ ಮನೆಯಲ್ಲಿ ಅಕ್ರಮವಾಗಿ ದನ ವಧೆಯನ್ನು ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಮತ್ತೋರ್ವ ತಲೆಮರೆಸಿಕೊಂಡಿದ್ದಾನೆ. ಬಂಧಿತರು ಚೊಕ್ಕಬೆಟ್ಟುವಿನ ಅಜೀಜ್ ಅಹಮ್ಮದ್(55), ಇಮ್ಮಿಯಾಜ್ (41), ಎ ಕೆ ಆಶೀಕ್(22) ಎಂದು ಗುರುತಿಸಲಾಗಿದೆ.. ಮತ್ತೋರ್ವ ಆರೋಪಿ ಬಶೀರ್ ಚೊಕ್ಕಬೆಟ್ಟು ಎಂಬಾತನು ತಲೆಮರೆಸಿಕೊಂಡಿದ್ದಾನೆ. ಆರೋಪಿ ಇಮ್ಮಿಯಾಜ್ ನು ತಂದಿದ್ದ 2 ಹೆಣ್ಣು ಕರುಗಳನ್ನು ಬಶೀರ್ ಹಾಗೂ ಅಶಿಕ್ ಇವರೊಂದಿಗೆ ಸೇರಿಕೊಂಡು ವಧೆ ಮಾಡಿ ದನದ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡಲು ಮುಂದಾಗಿದ್ದರು ಎಂದು ಹೇಳಲಾಗಿದೆ. ಈ ಸಂದರ್ಭ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.

Read More

ಉಳ್ಳಾಲ: ಮರದ ಕೊಂಬೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆಬುರುಡೆ, ಅಸ್ಥಿಪಂಜರ ಪತ್ತೆಯಾದ ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ,ತಲೆಬುರುಡೆ ಮತ್ತು ಅವಶೇಷಗಳು ಪತ್ತೆಯಾಗಿವೆ. ಫಾರ್ಮ್ ನೊಳಗಡೆ ತೋಟದ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರಿಗೆ ಮಂಗಳವಾರ ಬೆಳಿಗ್ಗೆ ಅಸ್ಥಿಗಳು ಕಾಣಸಿಕ್ಕಿವೆ. ಸ್ಥಳದಲ್ಲಿ ಹಸಿರು ಬರ್ಮುಡ ಚಡ್ಡಿ, ಹಸಿರು ಟೀ ಶರ್ಟ್ ಪತ್ತೆಯಾಗಿದ್ದು ,ಮರದ ಗೆಲ್ಲಲ್ಲಿ ನೈಲಾನ್ ಹಗ್ಗದ ನೇಣಿನ ಕುಣಿಕೆ ಇದ್ದು ಅದರಲ್ಲಿ ಹೆಡ್ ಫೋನ್ ಮತ್ತು ಎಲುಬುಗಳು ನೇತಾಡುತ್ತಿವೆ. ಮತ್ತೊಂದು ಗೆಲ್ಲಲ್ಲಿ ಕೇಸರಿ ಶಾಲು ಜೋತು ಬಿದ್ದಿದೆ. ಬರ್ಮುಡದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೇರಳ ಗಡಿಭಾಗದ ಮಂಜೇಶ್ವರ ಠಾಣಾ ವ್ತಾಪ್ತಿಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಬಿಹಾರ ಮೂಲದ ಅಪ್ರಾಪ್ತ ವಲಸೆ ಕಾರ್ಮಿಕನೊಬ್ಬ ನಾಪತ್ತೆಯಾಗಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಅದೇ ವ್ಯಕ್ತಿಯ ಶವ ಇದಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Read More

ಮಂಗಳೂರು : ನಗರದ ಸಮೀಪ ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಸಬ ಬೆಂಗ್ರೆ ನಿವಾಸಿ ಅಲ್ತಾಫ್ (47) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ದಂಗೆ, ಶಸ್ತ್ರ ಪ್ರಯೋಗ, ಹಾನಿ ಮತ್ತು ಬೆದರಿಕೆ ಸೇರಿ ಹಲವು ಪ್ರಕರಣ ದಾಖಲಾಗಿತ್ತು. ಈತನ ಬಗ್ಗೆ ಮಂಗಳೂರು 2ನೇ ಸಿ.ಜೆ.ಎಂ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಲಾಗಿದ್ದು, ವಿಚಾರಣೆ ನಡೆಯುತ್ತಿತ್ತು. ಆದರೆ ವಿಚಾರಣೆಯ ಸಮಯದಲ್ಲಿ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದರಿಂದ, ನ್ಯಾಯಾಲಯವು ದೀರ್ಘಕಾಲದಿಂದ ಬಾಕಿ ಇರುವ ಪ್ರಕರಣ ಎಂದು ಪರಿಗಣಿಸಿತ್ತು. ಖಚಿತ ಮಾಹಿತಿಯ ಮೇರೆಗೆ, ಉತ್ತರ ಠಾಣೆಯ ಎಎಸ್‌ಐ ಬಾಬು, ಗುರು ಬಿ.ಟಿ ಮತ್ತು ಸುನಿಲ್ ಕುಮಾರ್ ಎನ್ ಅವರ ತಂಡವು ಅಕ್ಟೋಬರ್ 5ರಂದು ಮಂಗಳೂರು ಬಂದರು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಬಂಧಿತನನ್ನು ಮಂಗಳೂರು…

Read More

ಉಡುಪಿ: ಅಂಬಾಗಿಲು ಜಂಕ್ಷನ್ ನಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೈಕ್ ಬಸ್ಸಿನಡಿ ಸಿಲುಕಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಚಾಲಕನನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯಾಳು ಮೃತಪಟ್ಟಿರುವ ಕುರಿತು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮೃತರನ್ನು ರವಿ ಪೂಜಾರಿ (44) ಸುಬ್ರಮಣ್ಯ ನಗರ ಪುತ್ತೂರು ಎಂದು ಗುರುತಿಸಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

Read More

ಸುರತ್ಕಲ್ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್ ವಾಹನ ಹಾಗೂ ಬೈಕ್‌ನ್ನು ಸುರತ್ಕಲ್ ಪೊಲೀಸರು ವಶಪಡಿಸಿದ್ದಾರೆ. ಸೆ.30ರಂದು ರಾತ್ರಿ ಸುಮಾರು 9 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯ ಸುಕುಮಾ‌ರ್ ಎಂಬವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ KA-19-AE-8017 ನೇ ನಂಬ್ರದ ಪಿಕಪ್ ವಾಹನವನ್ನು ರಾತ್ರಿ 10 ಗಂಟೆಗೆ ನೋಡಿದಾಗ ಪಿಕಪ್ ವಾಹನವು ಇಲ್ಲದೇ ಇದ್ದು, ರಾತ್ರಿ ಯಾರೋ ಕಳವು ಮಾಡಿಕೊಂಡು ಹೋಗಿದ್ದಾರೆಂದು ಅ.3 ರಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದ ಪೊಲೀಸರು ಅ.7ರಂದು ಬೈಕ್‌ವೊಂದರಲ್ಲಿ ಅನುಮಾನಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಯುವಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಯನ್ನು ತಿರುವನಂತಪುರಂ ನಿವಾಸಿ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್(29) ಎಂದು ಗುರುತಿಸಲಾಗಿದೆ.…

Read More

ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ.68, 69ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆ ಏನಿತ್ತೋ ಅದು ಸಾಧ್ಯವಾಗಿಲ್ಲ. ಇಂದು ಸಂಜೆ ಜಾತಿಗಣತಿ ಸಮೀಕ್ಷೆ ಎಷ್ಟು ಆಗಲಿದೆ ಎಂಬುದು ತಿಳಿಯಲಿದೆ. ನನಗೆ ಬಂದಿರುವಂತ ಮಾಹಿತಿಯಂತೆ ಎಲ್ಲಾ ಜಿಲ್ಲೆಯಲ್ಲಿ ಸಂಪೂರ್ಣ ಸಮೀಕ್ಷೆಯಾಗಿಲ್ಲ ಎಂದರು. ನಾಳೆಯಿಂದ ಅಕ್ಟೋಬರ್ 8, 9, 10 ಮೂರು ದಿನ ವರ್ಕಿಂಗ್ ಡೇಸ್ ಇದೆ. 13, 14, 15, 16, 17, 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ಸಮೀಕ್ಷೆ ಹಿನ್ನಲೆಯಲ್ಲಿ ದಸರಾ ರಜೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದರು. ನಿನ್ನೆ ಶಿಕ್ಷಣ ಇಲಾಖೆಯಿಂದ ಒಂದು ಆದೇಶ ಮಾಡಲಾಗಿದೆ. ಹಿಂದುಳಿದ ಆಯೋಗದ ಜೊತೆಗೆ ಚರ್ಚಿಸಿ ಮಾಡಿರುವಂತ ಆದೇಶವಾಗಿದೆ. ಇಂದು ಈ…

Read More

ಬಂಟ್ವಾಳ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಅವರನ್ನು ಬೈಂದೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ.  ಮೂಲತಃ ಸಾಗರ ತಾಲೂಕಿನ ನಿವಾಸಿಯಾಗಿರುವ ಶಿವಕುಮಾರ್ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅನೇಕ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಹಿಂದೆ ಬೆಳ್ತಂಗಡಿಯಿ0ದ ವರ್ಗಾವಣೆಯಾಗಿ ಬಂದಿದ್ದ ಅವರು ಕಳೆದ ಎರಡು ವರ್ಷಗಳಿಂದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. 

Read More

ಕಾಸರಗೋಡು: ಹಣದ ವಿಚಾರಕ್ಕೆ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಕುಂಬಳೆಯ ಸೀತಂಗೋಳಿಯಲ್ಲಿ ರಸ್ತೆ ಮಧ್ಯೆ ನಡೆದಿದೆ. ಕುಂಬಳೆಯ ಸೀತಂಗೋಳಿಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಬದಿಯಡ್ಕ ನಿವಾಸಿ ಅನಿಲ್ ಕುಮಾರ್ ಅಲಿಯಾಸ್ ಕುಟ್ಟನ್ ಎಂಬಾತನ ಕುತ್ತಿಗೆಗೆ ಚಾಕು ಇರಿಯಲಾಗಿದೆ. ಇರಿತಕ್ಕೊಳಗಾದ ಅನಿಲ್ ಕುಮಾರ್ ಬದಿಯಡ್ಕದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೆ ಚಾಕನ್ನು ಕುತ್ತಿಗೆಯಲ್ಲೇ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇರ್ತದಿಂದ ಗಂಭೀರ ಗಾಯಗೊಂಡ ಯುವಕನನ್ನ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರಿಂದ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ಎರಡು ವಾಹನವನ್ನು ವಶಕ್ಕೆ ಪಡೆಯಲಾಗಿದೆ.

Read More

ಮಂಗಳೂರು: ಕಥೋಲಿಕ್ ಉದ್ಯಮಿ, ವೃತ್ತಿಪರ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಂಗಳೂರಿನ ಮಿಲಾಗ್ರಿಸ್ ಸಭಾಂಗಣದಲ್ಲಿ ಅಕ್ಟೋಬರ್ 5ರಂದು ನೆರವೇರಿತು. ಸಮಾರಂಭದಲ್ಲಿ ಐವರು ಸಾಧಕರಾದ ವೃತ್ತಿಪರ ಕ್ಷೇತ್ರದಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೋ, ಉದ್ಯಮ ಕ್ಷೇತ್ರದಲ್ಲಿ ಬೆಂಗಳೂರಿನ ಆಸ್ಟಿನ್ ರೋಚ್, ಕೃಷಿ ಕ್ಷೇತ್ರದಲ್ಲಿ ಮಂಗಳೂರಿನ ಡಾ| ಗಾಡ್ವಿನ್ ರೊಡ್ರಿಗಸ್ ಬೆಳ್ವಾಯಿ, ಅನಿವಾಸಿ ಉದ್ಯಮಿ ದುಬೈಯ ಪ್ರತಾಪ್ ಮೆಂಡೋನ್ಸಾ, ಮಹಿಳಾ ಸಾಧಕಿ ಶೋಭಾ ಮೆಂಡೊನ್ಸಾ ಅವರಿಗೆ 2023-25ನೇ ಸಾಲಿನ ರಚನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇಳೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, “ಸಾಧನೆ ಮಾಡಬೇಕೆಂದು ಅನೇಕರು ಪ್ರಯತ್ನಿಸುತ್ತಾರೆ. ಎಲ್ಲರಿಗೂ ಕೈಗೂಡುವುದಿಲ್ಲ. ಆದರೆ, ಅವರನ್ನು ಗುರುತಿಸಿ ಗೌರವಿಸುವುದು ಮುಖ್ಯವಾಗಿದೆ. ರಚನಾ ಸಂಸ್ಥೆ ಸೂಕ್ತ ಸಾಧಕರನ್ನೇ ಆಯ್ದುಕೊಂಡು ಗೌರವಿಸಿದೆ. ಸೂಕ್ತ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವ ಮೂಲಕ ಪ್ರಶಸ್ತಿಗೆ ಮತ್ತಷ್ಟು ಗೌರವ ಹೆಚ್ಚಾಗುವ ಜೊತೆಗೆ ಪುರಸ್ಕೃತರ ಜವಾಬ್ದಾರಿ ಹೆಚ್ಚಿದೆ. ದೇಶಕ್ಕೆ ಕೊಂಕಣಿ ಕೆಥೋಲಿಕರ ಕೊಡುಗೆ ಅವಿಸ್ಮರಣೀಯ. ರಾಜಕೀಯದಲ್ಲೂ ಕೊಂಕಣಿ…

Read More