ಉಡುಪಿ: ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರಿಬ್ಬರು ನಿನ್ನೆ ರಾತ್ರಿ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದೂ ಯುವಸೇನೆಯ ಮುಖಂಡ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜುಕೊಳ ಅವರು ಇಂದು ಬೀಚ್ ಬಳಿ ಜೋಡಿಯೊಂದರ ಪ್ರೇಮದ ವಿಚಾರವಾಗಿ ರಾಜಿ ಪಂಚಾಯಿತಿಗೆ ಕರೆದಿದ್ದರು. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ಯುವಕ ಚೂರಿ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಹೊಟ್ಟೆ ಭಾಗಗಕ್ಕೆ ಇರಿದ ಪರಿಣಾಮ ಅಲ್ಲೆ ಕುಸಿದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಂದು ಪೊಲೀಸ್ ಮೂಲಗಳು ತಿಳಿಸಿವೆ.
Author: main-admin
ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ವಶದಿಂದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸುಳ್ಯದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 118/24 (ಕಲಂ 121(1), 132, 262 BNS) ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರು ಸಮಗ್ರ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ರಾಘವನ್ @ ಕೋಳಿಕರಣ್ ವಿರುದ್ಧ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಸುಳ್ಯ ಕೋರ್ಟಿನಲ್ಲಿ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶ ಬಿ. ಮೋಹನ್ ಬಾಬು ಅವರು ಆರೋಪಿಗೆ ಕೆಳಕಂಡಂತೆ ಶಿಕ್ಷೆ ವಿಧಿಸಿದ್ದಾರೆ: • ಕಲಂ 121(1) ರಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.10,000 ದಂಡ. ದಂಡ ಕಟ್ಟಲು ವಿಫಲರಾದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ. • ಕಲಂ 132 ರಡಿಯಲ್ಲಿ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಲು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ 1 ವರ್ಷದ…
ಮನೆಯಿಂದ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯನಗರ ಅಂಬಾಗಿಲಿನ ನಿವಾಸಿ ಸುರೇಶ್ ಪೂಜಾರಿ(54) ಎಂಬವರ ಶವವು ಕೊಡವೂರು ಶಂಕರನಾರಾಯಣ ದೇವಸ್ಥಾನದ ಹಿಂದುಗಡೆ ಡ್ರೈನೇಜ್ ನೀರು ಹರಿಯುವ ಇಂದ್ರಾಣಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುರೇಶ್ ಪೂಜಾರಿ ಅವರು ಕೆಲವು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದ್ರಾಣಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಮೇಲಕ್ಕೆತ್ತಲಾಯಿತು. ಮಲ್ಪೆಯ ಶಬೀರ್, ಮುಸ್ತಾಕ್ ನೆರವಾದರು. ಮಲ್ಪೆ ಪೋಲಿಸ್ ಠಾಣೆಯ ಎ.ಎಸ್. ಐ ಹರೀಶ್ ಕೆ ಅವರು ಮಹಜರು ಪ್ರಕ್ರಿಯೆ ನಡೆಸಿದರು.
ಮಂಗಳೂರು : ಪ್ರೇಯಸಿಯಿಂದ ಯಾವುದೇ ಕರೆಗಳು ಹಾಗೂ ಮೆಸೇಜ್ ಬರದ ಹಿನ್ನೆಲೆಯಲ್ಲಿ ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಯುವಕನೊಬ್ಬ ವಿದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ವರದಿಯಾಗಿದೆ. ಮೃತ ಯುವಕನನ್ನು ಪುನೀತ್ ಪೂಜಾರಿ (32) ಎಂದು ತಿಳಿದುಬಂದಿದೆ. ಮಂಗಳೂರಿನ ಸೋಮೇಶ್ವರದ ಪುನೀತ್ ಕೆಲಸದ ನಿಮಿತ್ ಒಮನ್ ದೇಶದಲ್ಲಿದ್ದನು. ಕಳೆದ ಒಂದೂವರೆ ವರ್ಷಗಳಿಂದ ಪುನೀತ್ ಪೂಜಾರಿ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಪುನೀತ್ ಪೂಜಾರಿ ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದು ಹಿಂದಿರುಗಿದ್ದನು. ಇದೀಗ ಪ್ರೇಮ ವೈಫಲ್ಯದಿಂದ ಆತ್ಮ-ಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ಉರ್ವಾ ನಿವಾಸಿ ಯುವತಿಯನ್ನು ಪ್ರೀತಿಸುತ್ತಿದ್ದನು. ಸೋಶಿಯಲ್ ಮೀಡಿಯಾ ಖಾತೆಗಳಲ್ಲಿಯೂ ಯುವತಿ ಜೊತೆಗಿನ ಫೋಟೋಗಳನ್ನು ಸಹ ಶೇರ್ ಮಾಡಿಕೊಂಡಿದ್ದನು. ಕಳೆದ ಕೆಲವು ದಿನಗಳಿಂದ ಯುವತಿ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಮನನೊಂದು ಪುನೀತ್ ಪ್ರಾಣ ಕಳೆದುಕೊಂಡಿದ್ದಾನೆ.
ಬೆಳ್ತಂಗಡಿ: ಹಲವು ಸಮಯಗಳಿಂದ ಉಜಿರೆ-ಬೆಳ್ತಂಗಡಿಯ ರಸ್ತೆಗಳಲ್ಲಿ ವಿವಿಧ ಭಂಗಿಗಳಲ್ಲಿ ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ವೀಲಿಂಗ್ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಜಂಕ್ಷನ್ ರಸ್ತೆಯಲ್ಲಿ ಫೆ.8 ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಡ್ಯಾನಿ ಫ್ರಾನ್ಸಿಸ್ ತಾವ್ರೋ ಎಂಬವರು ಕರ್ತವ್ಯದ ವೇಳೆ ಹೆಲ್ಮೆಟ್ ಧರಿಸದೆ ಆಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಯ ಪ್ರಾಣಕ್ಕೆ ಹಾನಿಯಾಗುವಂತೆ ವೀಲಿಂಗ್ ಮಾಡಿಕೊಂಡು ಧರ್ಮಸ್ಥಳ ರಸ್ತೆಯ ಮೂಲಕ ಪರಾರಿಯಾಗಿದ್ದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆಯ ವರದಿಯನ್ನು ಮಾಡಿದ್ದರು. ಬಳಿಕ ಈತ ವಿವಿಧ ಕಡೆಗಳಲ್ಲಿ ಅಪಾಯಕಾರಿಯಾಗಿ ವೀಲಿಂಗ್ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ವಿಡಿಯೋಗಳನ್ನು ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದರು ಅದ್ರೆ ಸವಾರ ಮಾತ್ರ ಪೊಲೀಸರ ಕೈಗೆ ಸಿಗುತ್ತಿರಲಿಲ್ಲ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ಪಿ…
ಮಂಗಳೂರು: ಸರ್ಕಾರಿ ಕಾಮಗಾರಿಯ ಬಿಲ್ ಪಾವತಿಗೆ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಕಚೇರಿಯ ಎಸ್ಡಿಎ ಸಂಪತ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಫಿರ್ಯಾದುದಾರರು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಪ್ರಥಮ ದರ್ಜೆ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದು, 2025ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿದ್ದರು. ಈ ಕಾಮಗಾರಿಗಳ ಬಿಲ್ ಪಾವತಿಗಾಗಿ ಶೇ.4ರಂತೆ ಒಟ್ಟು ರೂ.22,600/- ಲಂಚ ನೀಡಬೇಕೆಂದು ಸಂಪತ್ ಅವರು ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಸಂಬಂಧ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಸಂಪತ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೋಮವಾರ ಫಿರ್ಯಾದುದಾರರಿಂದ ರೂ.22,600/- (ಇಪ್ಪತ್ತೆರಡು ಸಾವಿರ ಆರು ನೂರು) ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಸಂಪತ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಂಡು ತನಿಖೆ ಮುಂದುವರಿಸಲಾಗಿದೆ. ಈ…
ಉಡುಪಿ: ಜಿಲ್ಲೆಯ ಹೆಗ್ಗುಂಜೆ ಗ್ರಾಮದ ಉದಯ ಮರಕಾಲ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ನ್ಯಾಯಾಧೀಶೆ ಶ್ವೇತಾಕ್ಷಿ ಅವರು ಆರೋಪಿಗೆ ಒಂದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ಹಾಗೂ ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡದ ಮೊತ್ತ 55,000 ರೂ. ಪಾವತಿಸದಿದ್ದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದೆಂದು ಆದೇಶಿಸಿದ್ದಾರೆ. ಪಿರ್ಯಾದಿದಾರ ಶಿರಿಯಾರ ಗ್ರಾಮದ ಬಡಾಕರೆಯ ನಿವಾಸಿ ಸುರೇಂದ್ರ ಶೆಟ್ಟಿ ಪರ ಉಡುಪಿಯ ಹಿರಿಯ ನ್ಯಾಯವಾದಿ ಶಿರಿಯಾರ ಕಲ್ಮರ್ಗಿ ಪ್ರಭಾಕರ ನಾಯಕ್ ವಾದಿಸಿದ್ದರು.
ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮಂಗಳೂರಿನಲ್ಲಿ ನಡೆದ ಅತಿದೊಡ್ಡ ವಿದೇಶಿ ಕರೆನ್ಸಿ ವಶಪಡಿಸಿಕೊಳ್ಳುವಿಕೆಯಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 80 ಲಕ್ಷ ರೂ.ಗೆ ಸಮಾನವಾದ ಕರೆನ್ಸಿಯನ್ನು ವಶಪಡಿಸಿಕೊಳ್ಳಲಾಗಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಮಂಗಳೂರು ಪ್ರಾದೇಶಿಕ ಘಟಕದ ಅಧಿಕಾರಿಗಳು, ನಿರ್ಗಮನ ಹಾಲ್ಗೆ ಆಗಮಿಸಿದಾಗ ಒಬ್ಬ ಪುರುಷ ಪ್ರಯಾಣಿಕ ಮತ್ತು ಇಬ್ಬರು ಮಹಿಳಾ ಪ್ರಯಾಣಿಕರನ್ನು ತಡೆದರು. ಈ ಮೂವರು ಫೆಬ್ರವರಿ 27 ರಂದು ಇಂಡಿಗೋ ವಿಮಾನ 6E 1438 ಮೂಲಕ ಅಬುಧಾಬಿಗೆ ಪ್ರಯಾಣಿಸಬೇಕಿತ್ತು. ತಪಾಸಣೆಯ ಸಮಯದಲ್ಲಿ, ಅಧಿಕಾರಿಗಳು ತಮ್ಮ ಕೈ ಸಾಮಾನುಗಳಲ್ಲಿ ಮತ್ತು ಚೆಕ್-ಇನ್ ಸಾಮಾನುಗಳಲ್ಲಿ ಜಾಣತನದಿಂದ ಬಚ್ಚಿಟ್ಟಿದ್ದ ವಿದೇಶಿ ಕರೆನ್ಸಿಯನ್ನು ಕಂಡುಕೊಂಡರು. ವಶಪಡಿಸಿಕೊಂಡ ಕರೆನ್ಸಿಯಲ್ಲಿ ದೊಡ್ಡ ಪ್ರಮಾಣದ ಯುಎಸ್ ಡಾಲರ್ಗಳು, ಸಣ್ಣ ಪ್ರಮಾಣದ ಪೌಂಡ್ ಸ್ಟರ್ಲಿಂಗ್, ಸೌದಿ ರಿಯಾಲ್ ಮತ್ತು ಯುಎಇ ದಿರ್ಹಮ್ ಸೇರಿವೆ. ಕೇರಳ ಮೂಲದ ಮೂವರು ಪ್ರಯಾಣಿಕರನ್ನು 1962 ರ ಕಸ್ಟಮ್ಸ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ವಶಕ್ಕೆ ತೆಗೆದುಕೊಂಡು, ನಂತರ ನ್ಯಾಯಾಲಯದ…
ಬೆಳ್ತಂಗಡಿ: ಚಿನ್ನದ ಒಡವೆಗಳನ್ನು ಪಾಲೀಶ್ ಮಾಡಿ ತೊಳೆದು ಕೊಡುತ್ತೇನೆ ಎಂದು ನಂಬಿಸಿ ವಂಚನೆ ನಡೆಸಿದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಪ್ರದೇಶದಲ್ಲಿ ಫೆಬ್ರವರಿ 10, 2026 ರಂದು ಘಟನೆ ನಡೆದಿದೆ. ಸೇಲ್ಸ್ಮ್ಯಾನ್ ರೂಪದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಮನೆಮಂದಿಗೆ ಚಿನ್ನದ ಒಡವೆಗಳನ್ನು ತೊಳೆಯುವ ಹಾಗೂ ಪಾಲೀಶ್ ಮಾಡುವುದಾಗಿ ನಂಬಿಸಿ ಪಡೆದುಕೊಂಡು, ಯಾವುದೋ ರಾಸಾಯನಿಕ ದ್ರಾವಣ ಬಳಸಿ ಚಿನ್ನವನ್ನು ಕರಗಿಸಿ ವಂಚನೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.13/2026, ಕಲಂ 318(4) ಬಿ.ಎನ್.ಎಸ್. 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿತನಾದ ಬಿಹಾರ ರಾಜ್ಯದ ಸುಪೌಲ್ ಜಿಲ್ಲೆಯ ನಿವಾಸಿ ಚಂದನ್ ಕುಮಾರ್ (30) ಎಂಬಾತನನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯಿಂದ ಸುಮಾರು ₹75,000 ಮೌಲ್ಯದ 7.00 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿತರ ಪತ್ತೆಗಾಗಿ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್…
ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್ಶಾಖೆಯಲ್ಲಿ ಸಂಭ್ರಮದಿAದ ಆಚರಿಸಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಪರಪ್ಪಾಡಿಯ ಅವರ್ ಲೇಡಿ ಆಫ್ ಪರ್ಪೆಚುಯಲ್ ಸುಕುರ್ ಚರ್ಚ್ನ ಧರ್ಮಗುರುಗಳಾದ ವಂದನೀಯ ಫಾ| ಡೇನಿಸ್ ಡಿಸೋಜ ಹಾಗೂ ಬೆಳ್ಮಣ್ನ ಸಂತ ಜೋಸೆಫರ ಪ್ರೌಢ ಶಾಲೆಯ ಶಿಕ್ಷಕಿ ಶ್ರೀಮತಿ ಲೈಲಾ ಬಬಿತಾ ನೊರೊನ್ಹಾಉಪಸ್ಥಿತರಿದ್ದರು. ವೇದಿಕೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಜೆರಾಲ್ಡ್ ಜೂಡ್ ಡಿಸಿಲ್ವಾ, ನಿರ್ದೇಶಕಿ ಡಾ| ಫ್ರೀಡಾ ಡಿಸೋಜ, ಮಹಾಪ್ರಬಂಧಕ ಶ್ರೀ ಸುನಿಲ್ ಮಿನೇಜಸ್ ಮತ್ತು ಬೆಳ್ಮಣ್ ಶಾಖಾ ಪ್ರಬಂಧಕಿ ಶ್ರೀಮತಿ ಶೈನಿ ಲಸ್ರಾದೊ ಹಾಜರಿದ್ದರು.ಒಂದು ವರ್ಷದ ಯಶಸ್ವಿಪೂರ್ಣತೆ ಹಾಗೂ ರೂ 10 ಕೋಟಿಯ ವ್ಯವಹಾರ ಮೈಲಿಗಲ್ಲು ಸಾಧನೆಯನ್ನು ಸಂಕೇತಿಸುವAತೆ ಅಧ್ಯಕ್ಷರು, ಗಣ್ಯ ಅತಿಥಿಗಳು, ಬೆಳ್ಮಣ್ ಶಾಖೆಯ ಎಲ್ಲಾ ಗ್ರಾಹಕರ…










