ನವದೆಹಲಿ: ಪ್ರಾಣಿಗಳ ಮೇಲೆ ಕ್ರೌರ್ಯ ಮೆರೆದಿರುವ ಆಘಾತಕಾರಿ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ಎರಡು ಬೀದಿ ನಾಯಿಗಳ ಮರಿಗಳನ್ನು ಕತ್ತು ಹಿಸುಕಿ ಕೊಂದು ದೆಹಲಿಯ ದ್ವಾರಕಾ ನೆರೆಹೊರೆಯ ಖಾಲಿ ಜಾಗದಲ್ಲಿ ನೇತು ಹಾಕಿರುವ ಘಟನೆ ನಡೆದಿದೆ. ಘಟನೆ ಸಂಬಂಧ ದ್ವಾರಕಾ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 429 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಫೇಸ್ಬುಕ್ ಗ್ರೂಪ್ SGACC (ಸಂಜಯ್ ಗಾಂಧಿ ಅನಿಮಲ್ ಕೇರ್ ಸೆಂಟರ್) ಪೋಸ್ಟ್ ಪ್ರಕಾರ, ನಾಯಿಮರಿಗಳನ್ನು ಡಿಸೆಂಬರ್ 27 ರ ಸಂಜೆ ದ್ವಾರಕಾದ ಸೆಕ್ಟರ್ 9 ರ ಆಜಾದ್ ಹಿಂದ್ ಅಪಾರ್ಟ್ಮೆಂಟ್ನ ಪಕ್ಕದ ಖಾಲಿ ಪ್ಲಾಟ್ನಲ್ಲಿ ತೆಗೆದುಕೊಂಡು ಹೋಗಲಾಗಿದೆ ಎನ್ನಲಾಗುತ್ತಿದೆ. ನಾಯಿಮರಿಗಳು ಆರೋಗ್ಯವಾಗಿದ್ದವು, ಅವು ಖಾಲಿ ಪ್ಲಾಟ್ನಲ್ಲಿಯೇ ಇರುತ್ತಿದ್ದವು. ಆದರೆ ಯಾರೋ ಕೃತ್ಯವೆಸಗಿದ್ದಾರೆ. ಕ್ರಮಿನಾಶಕವನ್ನು ನೀಡಿ ಕೊಲ್ಲಲಾಗಿದೆ ಎನ್ನಲಾಗುತ್ತಿದೆ. ಉಳಿದ ನಾಲ್ಕು ಮರಿಗಳನ್ನು ಸ್ಥಳೀಯ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ ಎಂದು ಫೇಸ್ ಬುಕ್ ಪೋಸ್ಟ್ ನಲ್ಲಿ ಹೇಳಲಾಗಿದೆ. ಬದುಕುಳಿದ ಅವರ ನಾಲ್ಕು ಒಡಹುಟ್ಟಿದವರನ್ನು ಕ್ರಿಮಿನಾಶಕ ನಂತರ ಅವರ ತಾಯಿ ಹಿಂದಿರುಗುವವರೆಗೆ…
Author: main-admin
ಉಡುಪಿ: ಕೆಲಸದ ಸಮಯದಲ್ಲಿ ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿ ಮಲಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್ ಅವರನ್ನು ಅಮಾನತುಗೊಳಿಸಲಾಗಿದೆ. ಬಡ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಮದ್ಯ ಸೇವಿಸಿ ಅಮಲಿನಲ್ಲಿ ತೇಲುತ್ತಾ ಶಾಲೆಯ ಜಗಲಿ ಮೇಲೆ ಸುಖ ನಿದ್ದೆ ಮಾಡಿದ್ದು, ಈ ಘಟನೆಗೆ ಪೆರ್ಡೂರು ಗ್ರಾ.ಪಂ. ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ, ಗ್ರಾಮಸ್ಥರು ಹಾಗೂ ಸಾಮಾಜಿಕ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕ್ರಮಕ್ಕೆ ಆಗ್ರಹಿಸಿದ್ದರು. ಘಟನೆಯ ಸತ್ಯಾಸತ್ಯತೆಯ ವರದಿ ಪರಿಶೀಲಿಸಿದ ಡಿಡಿಪಿಐ ಗಣಪತಿ ಕೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಕುಡುಕ ಶಿಕ್ಷಕ ಕೃಷ್ಣಮೂರ್ತಿ ನಾಯಕ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಉಜಿರೆ: ಬೊಲೋರೊ ವಾಹನವೊಂದು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದು ಆಟೋದಲ್ಲಿದ್ದ ನಾಲ್ಕು ಜನರಿಗೆ ಗಂಭೀರ ಗಾಯಗೊಂಡ ಘಟನೆ ಉಜಿರೆಯ ಓಡಲ ಕ್ರಾಸ್ ನಲ್ಲಿ ಡಿ.28 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಓಡಲ ಕ್ರಾಸ್ ನಲ್ಲಿ ಬೆಳಾಲು ಕಡೆಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಉಜಿರೆ ಕಡೆಯಿಂದ ಬರುತ್ತಿದ್ದ ಕಾರ್ಯತಡ್ಕ ನಿವಾಸಿ ಚಾಲಕ ಸಾಂತಪ್ಪ ಎಂಬವರ ಬೊಲೋರೊ ವಾಹನ ಓವರ್ ಟೇಕ್ ಮಾಡುವ ರಭಸದಲ್ಲಿ ಡಿ.28 ರಂದು ರಾತ್ರಿ ಸುಮಾರು 8:30 ಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ರಿಕ್ಷಾದಲ್ಲಿದ್ದ ಚಾಲಕ ಸೇರಿ ನಾಲ್ಕು ಮಂದಿಗೆ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ ಚಾಲಕ ಗುರಿಪಳ್ಳ ನಿವಾಸಿ ಪ್ರವೀಣ್(42) , ಕುಪ್ಪೆಟ್ಟಿ ನಿವಾಸಿ ರಫೀಕ್(55) ಕೊಟ್ಟಿಗೆಹಾರ ನಿವಾಸಿಗಳಾದ ಸುಹೈಲ್ (30) ಹಾಗೂ ಚೇತನ್(27) ಗಂಭೀರವಾಗಿ ಗಾಯಗೊಂಡಿದ್ದರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದರಲ್ಲಿ ಸುಹೈಲ್ ಅವರ…
ಮಂಗಳೂರು: ತಂತ್ರಜ್ಞಾನವನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡು ಅಪರಾಧ ಪತ್ತೆ, ನಿಯಂತ್ರಣ ಮತ್ತು ತ್ವರಿತ ತನಿಖೆಗೆ ಮುಂದಾಗಿರುವ ಪೊಲೀಸ್ ಇಲಾಖೆ ರಾಜ್ಯಾದ್ಯಂತ ಲಕ್ಷಾಂತರ ಸಿಸಿ ಕೆಮರಾಗಳನ್ನು ಜಿಯೋ ಟ್ಯಾಗಿಂಗ್ ಮಾಡಿಕೊಳ್ಳುತ್ತಿದೆ. ಸಾರ್ವಜನಿಕ ಸುರಕ್ಷೆ ಕಾಯಿದೆ ಯಡಿ ದಿನಕ್ಕೆ 500ಕ್ಕಿಂತ ಹೆಚ್ಚು ಬಾರಿ ಜನರ ಓಡಾಟವಿರುವ ಅಥವಾ ಒಂದೇ ಬಾರಿಗೆ 100 ಮಂದಿಯ ಓಡಾಟವಿರುವ ಕಟ್ಟಡ/ಮಳಿಗೆಗಳಲ್ಲಿ ಸಿಸಿ ಕೆಮರಾ ಕಡ್ಡಾಯಗೊಳಿಸಲಾಗಿದ್ದು ಈ ರೀತಿ ಅಳವಡಿಕೆಯಾಗಿರುವ, ಸಾರ್ವಜನಿಕ ಸ್ಥಳದ ಪಕ್ಕ ಇರುವ ಕೆಮರಾಗಳನ್ನು ಜಿಯೋ ಟ್ಯಾಗಿಂಗ್ಗೆ ಒಳಪಡಿಸಲಾಗುತ್ತಿದೆ. ಏನಿದು ಜಿಯೋ ಟ್ಯಾಗಿಂಗ್?ಜಿಯೋ ಟ್ಯಾಗಿಂಗ್ ಎಂಬುದು ಪೊಲೀಸ್ ಇಲಾಖೆಯ ಆಯಪ್ವೊಂದರಡಿ ಕಾರ್ಯಾಚರಿಸುತ್ತದೆ. ಇದು ಜಿಐಎಸ್ (ಜಿಯೋಗ್ರಾಫಿಕ್ ಇನ್ಫಾರ್ಮೇಷನ್ ಸಿಸ್ಟಂ) ಆಗಿದ್ದು ಸಿಸಿ ಕೆಮರಾಗಳು ನಿರ್ದಿಷ್ಟವಾಗಿ ಯಾವ ಕಟ್ಟಡದ, ಯಾವ ಭಾಗದಲ್ಲಿವೆ, ಯಾವ ಕಡೆ ಮುಖ ಮಾಡಿವೆ, ಅವುಗಳ ಸ್ಟೋರೇಜ್ ಸಾಮರ್ಥ್ಯ ಎಷ್ಟು ಎಂಬಿತ್ಯಾದಿ ಸ್ಪಷ್ಟ ಮಾಹಿತಿಗಳು ಆಯಪ್ನಲ್ಲಿ ಸಂಗ್ರಹಿಸಿ ಇಡಲಾಗುತ್ತದೆ. ಯಾವುದೇ ಸ್ಥಳದಲ್ಲಿ ಏನಾದರೂ ಅಹಿತರ ಘಟನೆ ನಡೆದರೆ ಅಲ್ಲಿರುವ ಕೆಮರಾಗಳ ಮಾಹಿತಿ ಕ್ಷಣಾರ್ಧದಲ್ಲಿ ಪೊಲೀಸರಿಗೆ ಲಭ್ಯವಾಗುತ್ತದೆ. ಅಲ್ಲದೆ…
ಮಂಗಳೂರು: ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಕೊರೋನ ರೂಪಾಂತರಿ ತಳಿಯ ಹಾವಳಿ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮದ ಭಾಗವಾಗಿ ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ ಲಕ್ಷಣ ಕಂಡು ಬಂದಲ್ಲಿ ಅವರನ್ನು ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್ ವಾರ್ಡ್ ಸಿದ್ದಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆಯಲ್ಲದೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸುವ ವಿದೇಶಿ ಪ್ರಯಾಣಿಕರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಈ ವೇಳೆ ಕೋವಿಡ್ ದೃಢಪಟ್ಟರೆ ಆ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಲ್ಯಾಬ್ಗೆ ಕಳುಹಿಸಲಾಗುತ್ತದೆ. ಕೋವಿಡ್ ದೃಢಪಟ್ಟ ವ್ಯಕ್ತಿಗಳಿಗೆ ಐಸೊಲೇಶನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಸನ್ನದ್ಧವಾಗಿದೆ. ಕೋವಿಡ್ ಸೋಂಕನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಆರೋಗ್ಯ ಅಣಕು ಪ್ರದರ್ಶನವು ಮಂಗಳವಾರ ವೆನ್ಲಾಕ್ ಸಹಿತ ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ ನಡೆಸಲಾಗಿದೆ.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಸಿ.ಟಿ.ರವಿ ಅವರು ಎತ್ತಿದ ಪ್ರಶ್ನೆ, ಸದನದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಯ್ತು. ಈ ವೇಳೆ ಮಾತನಾಡಿದ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಬೈಬಲ್, ಕುರಾನ್, ಭಗವದ್ಗೀತೆಯಲ್ಲಿ ಇನ್ನೊಬ್ಬರಿಗೆ ಅನ್ಯಾಯ ಮಾಡಬೇಕು ಎಂದು ಬರೆದಿಲ್ಲ. ತಾನು ವಾಸಿಸುವ ನೆಲದ ಕಾನೂನಿಗೆ ಗೌರವ ಕೊಡಬೇಕು ಎಂದು ಬರೆಯಲಾಗಿದೆ ಎಂದು ಯು.ಟಿ.ಖಾದರ್ ಹೇಳಿದರು. ಭಯೋತ್ಪಾದಕರು, ಅಪರಾಧಿಗಳು, ಕ್ರೈಮ್ ಮಾಡುವವರು ಎಲ್ಲ ಸಮುದಾಯದಲ್ಲಿಯೂ ಇದ್ದಾರೆ. ಅವರನ್ನು ಧರ್ಮದ ಆಧಾರದಲ್ಲಿ ಗುರುತಿಸುವುದು ದೊಡ್ಡ ತಪ್ಪು ಎಂದು ಖಾದರ್ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಗೆ ಬಂದಾತ ದೇವರ ದಯದಲ್ಲಿ ರಿಕ್ಷಾದಲ್ಲಿಯೇ ಬಾಂಬ್ ಸ್ಫೋಟವಾದ ಕಾರಣ ಸಿಕ್ಕಿ ಬಿದ್ದ ಎಂದು ಯು.ಟಿ.ಖಾದರ್ ಹೇಳಿದರು.
ಧಾರವಾಡ : ಕೋವಿಡ್ ರೂಪಾಂತರಿ ಬಿ.ಎಫ್.7 ಸೋಂಕು ಬಂದರೂ ಅದನ್ನು ಸಮರ್ಪಕವಾಗಿ ನಿರ್ವಹಿಸಲು ರಾಜ್ಯ ಸರ್ಕಾರ ಅಗತ್ಯ ಸಿದ್ದತೆ ಮಾಡಿಕೊಂಡಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, : ಕೋವಿಡ್ ರೂಪಾಂತರಿ ಬಿ.ಎಫ್.7 ಸೋಂಕು ಬಂದರೂ ಅದನ್ನು ಸಮರ್ಪಕವಾಗಿ ನಿರ್ವಹಿಸಲು ರಾಜ್ಯ ಸರ್ಕಾರ ಅಗತ್ಯ ಸಿದ್ದತೆ ಮಾಡಿಕೊಂಡಿದೆ. ಕೋವಿಡ್ದೊಂದಿಗೆ ಜೀವನ ಸಾಗಿಸುವ ಅನಿವಾರ್ಯತೆ ಇದೆ. ಅದು ಜೀವನದ ಒಂದು ಭಾಗವಾಗುತ್ತಿದ್ದು, ಮುಂಜಾಗೃತಾ ಕ್ರಮಗಳೊಂದಿಗೆ ಬದುಕಬೇಕಿದೆ ಎಂದು ಹೇಳಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಎಲ್ಲ ರೀತಿಯ ಆರ್ಥಿಕ ಚಟುವಟಿಕೆಗಳನ್ನು ನಿರ್ಭಂಧಿಸಲಾಗಿತ್ತು. ಈಗ ಕೋವಿಡ್ ನಿಯಂತ್ರಣಕ್ಕೆ ಬಂದಿರುವುದರಿಂದ ಆರ್ಥಿಕ, ವಾಣಿಜ್ಯ, ಚುಟವಟಿಕೆಗಳು ಪುನರಾರಂಭಗೊಂಡು, ಚೈತನ್ಯ ಪಡೆದಿವೆ. ಇಂತಹ ಸಂದರ್ಭದಲ್ಲಿ ಯಾವುದೇ ರೀತಿಯ ಆರ್ಥಿಕ, ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸುವ ಅಥವಾ ತಡೆಯುವ ಯೋಚನೆ ಸರ್ಕಾರದ ಮುಂದೆ ಇಲ್ಲಾ ಎಂದು ತೀಳಿಸಿದ್ದಾರೆ. ಎಲ್ಲರೂ ಕಡ್ಡಾಯವಾಗಿ ಮೂರು ಡೋಸ್ ಲಸಿಕೆ ಪಡೆಯುವುದು, ಮಾಸ್ಕ್ ಧರಿಸುವುದು ಮತ್ತು ಒಳಾಂಗಣದಲ್ಲಿರುವ ಆಸನಗಳಿಗೆ ಮಾತ್ರ ಅವಕಾಶ…
ಮಂಗಳೂರು: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 32 ವರ್ಷದ ವ್ಯಕ್ತಿಗೆ 15 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಹಾಗೂ 50,000 ರೂಪಾಯಿ ದಂಡವನ್ನು ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್ಟಿಎಸ್ಸಿ-ಐಐ (ಪೋಕೊ) ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ತೀರ್ಪು ನೀಡಿದ್ದಾರೆ. ಮಾತ್ರ ವ ಲ್ಲದೇ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರವನ್ನೂ ನ್ಯಾಯಾಲಯ ಘೋಷಿಸಿದೆ. 2021 ರ ಆ. 9ರಂದು ಈ ಘಟನೆ ನಡೆದಿತ್ತು. ಆ. 15ರಂದು ಆರೋಪಿಯನ್ನು ಬಂಧಿಸಲಾಗಿತ್ತು. ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ತನಿಖಾಧಿಕಾರಿಯಾಗಿದ್ದರು ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ವೆಂಕಟರಮಣ ಸ್ವಾಮಿ ಮಾಹಿತಿ ನೀಡಿದ್ದಾರೆ. ಕ್ರಿಮಿನಲ್ ಬೆದರಿಕೆಗಾಗಿ ನ್ಯಾಯಾಲಯವು ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ಒಂದು ತಿಂಗಳು ಶಿಕ್ಷೆ ಕೂಡ ವಿಧಿಸಿದೆ.
ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯವು ಎನ್ಇಪಿ ಮೊದಲ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 24, 2022 ರಂದು ಯುಯುಸಿಎಂಎಸ್ ಪೋರ್ಟಲ್ನಲ್ಲಿ ಪ್ರಕಟಿಸಿದೆ. ಸಮಸ್ಯೆಯಿರುವ ಉಳಿಕೆಯಾದ ಫಲಿತಾಂಶವನ್ನು ಡಿಸೆಂಬರ್ 29 ರಂದು ಪ್ರಕಟಿಸಲಾಗುವುದು. ಮೌಲ್ಯಮಾಪನ ಕಾರ್ಯವು ಹಂತಹಂತವಾಗಿ ಪೂರ್ಣಗೊಳ್ಳುತ್ತಿದ್ದು ಈಗಾಗಲೇ ಸ್ನಾತಕ ಪದವಿಯ ಆರನೇ ಸೆಮಿಸ್ಟರ್ನ ಫಲಿತಾಂಶ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅನುಕೂಲ ಮಾಡಿಕೊಡಲಾಗಿದೆ. ತರಗತಿಗಳ ನಡುವೆಯೇ ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್ನ ಮೌಲ್ಯಮಾಪನ ಕಾರ್ಯ ನಡೆಸಲಾಗುತ್ತಿದ್ದು ಸದರಿ ಸೆಮಿಸ್ಟರ್ಗಳ ಫಲಿತಾಂಶವನ್ನು ಜನವರಿ 20, 2023 ರ ಒಳಗೆ ಪ್ರಕಟಿಸಲಾಗುವುದು, ಎಂದು ಕುಲಸಚಿವರ (ಪರೀಕ್ಷಾಂಗ) ಪ್ರಕಟಣೆ ತಿಳಿಸಿದೆ.
ಕೊಣಾಜೆ:ರಸ್ತೆ ಬದಿ ನಿಂತಿದ್ದ ಶಾಲಾ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇದೀಗ ನಡೆದಿದೆ. ಬೋಳಿಯಾರು ಭಟ್ರಬೈಲು ನಿವಾಸಿ 8ನೇ ತರಗತಿ ವಿದ್ಯಾರ್ಥಿ ಕಾರ್ತಿಕ್ (14) ಮೃತ ಬಾಲಕ. ಕಾರ್ತಿಕ್ ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ವೇಳೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಸ್ಥಳಕ್ಕೆ ಮಂಗಳೂರು ಸಂಚಾರಿ ಠಾಣೆ ಪೊಲೀಸರು ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










