ಬೆಳ್ತಂಗಡಿ; ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಹಲವರು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಸಿಂದನೂರಿನ ಶಾಲಾ ಮಕ್ಕಳ ಪ್ರವಾಸದ ಬಸ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಸರಕಾರಿ ಬಸ್ ಎದುರು ಬದುರಾಗಿ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಎರಡೂ ಬಸ್ಸಿನ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಾಹನದಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಶೌರ್ಯ ತಂಡದವರ ನೇತೃತ್ವದಲ್ಲಿ ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ
Author: main-admin
ಹಾಸನ: ಡಿಟಿಡಿಸಿ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ತಜ್ಞರ ತಂಡ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಲಾಸ್ಟ್ ಆದ ಸುತ್ತಮುತ್ತಲಿನ ಪೊಲೀಸರು ಅಂಗಡಿ ಬಂದ್ ಮಾಡಿಸಿದ್ದಾರೆ.ಅಲ್ಲಿಗೆ ಯಾರು ಪ್ರವೇಶಿಸದಂತೆ ಬ್ಯಾರಿಕೇಡ್ ಪೊಲೀಸರು ಅಳವಡಿಸಿದ್ದಾರೆ.ಕೊರಿಯರ್ ಶಾಪ್ವೊಂದರಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿ ಮಾಲೀಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಇಂದು ಸಂಜೆ 7:30ರ ಸಂದರ್ಭದಲ್ಲಿ ಘಟನೆ ನಡೆದಿದೆ. ಕೊರಿಯರ್ನಲ್ಲಿ ಬಂದಿದ್ದ ಮಿಕ್ಸಿಯನ್ನು ತರೆಯುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ನಗರದ ಕೆ ಆರ್ ಪುರಂ ಬಡಾವಣೆಯಲ್ಲಿರುವ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಬ್ಲಾಸ್ಸ್ ಆಗಿದೆ. ಕಚೇರಿ ಮಾಲೀಕ ಶಶಿ ಎಂಬುವರ ಬಲಗೈ ಐದು ಬೆರಳುಗಳು ಸಂಪೂರ್ಣ ತುಂಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಳ್ಯ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸೋನಿಯಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಬೆಂಗಳೂರು ರಾಮನಾಥ ಪುರದ, ಕೋರಮಂಗಲ ತಾಲೂಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ ಎಂಬವರ ಪುತ್ರಿ. ಸೋನಿಯಾ ಇಂದು ಕಾಲೇಜಿಗೆ ಹೋಗದೇ ಹಾಸ್ಟೇಲ್ ನಲ್ಲಿ ಉಳಿದುಕೊಂಡಿದ್ದಳು. ಮದ್ಯಾಹ್ನ ಆಕೆಯ ರೂಂ ನಲ್ಲಿದ್ದ ಇನ್ನೊಬ್ಬಳು ವಿದ್ಯಾರ್ಥಿನಿ ಊಟದ ತಟ್ಟೆ ತರಲೆಂದು ರೂಂ ಗೆ ಹೋದಾಗ ಬಾಗಿಲು ಹಾಕಿತ್ತು. ಬಾಗಿಲು ತಟ್ಟಿದ್ದರೂ ಬಾಗಿಲು ತೆರೆದಿರಲಿಲ್ಲ, ಆಕೆ ಮಲಗಿರಬಹುದು ಎಂದು ಭಾವಿಸಿ ಗೆಳತಿಯ ತಟ್ಟೆಯಲ್ಲಿ ಊಟ ಮುಗಿಸಿ ಮತ್ತೆ ರೂಮಿಗೆ ಬಂದಾಗಲೂ ಬಾಗಿಲು ತೆರೆಯದೇ ಇದ್ದ ಕಾರಣ ಸಂಶಯಗೊಂಡ ವಿದ್ಯಾರ್ಥಿನಿ ವಾರ್ಡನ್ ಗೆ ಮಾಹಿತಿ ನೀಡಿದ್ದು, ಇಲಾಖೆಯ ಸಿಬ್ಬಂದಿಗಳು ಬಂದು ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ, ಸ್ಥಳಕ್ಕೆ…
ಸುರತ್ಕಲ್;ಜಲೀಲ್ ಹತ್ಯೆ ಪ್ರಕರಣದ ಹಿನ್ನೆಲೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 29ರವರೆಗೆ ವಿಸ್ತರಿಸಿ ಮಂಗಳೂರು ನಗರ ಪೊಲೀಸರು ಆದೇಶಿಸಿದ್ದಾರೆ. ಸುರತ್ಕಲ್,ಕಾವೂರು,ಬಜಪೆ ಮತ್ತು ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್ 27ರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 29ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಮುಂದುವರಿಯಲಿದೆ. ಸುರತ್ಕಲ್,ಬಜಪೆ,ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ,ದಾಸ್ತಾನು,ಸಾಗಾಣಿಕೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಡಿಸೆಂಬರ್ 29ರ ಬೆಳಗ್ಗೆ 10 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಮಂಗಳೂರು;ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಬಂಧಿತರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ ಎಂದು ತಿಳಿದು ಬಂದಿದೆ. ಗುರುತು ಪತ್ತೆ ಆಗುವವರೆಗೆ ಆರೋಪಿಗಳ ಮಾಹಿತಿ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ. ನಿನ್ನೆ ರಾತ್ರಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಕೊಲೆಗೆ ಕಾರಣ ಏನು ಎಂಬುವುದನ್ನು ಪೂರ್ಣ ತನಿಖೆ ಬಳಿಕ ಹೇಳಲಾಗುವುದು ಎಂದು ಕಮಿಷನರ್ ಹೇಳಿದರು. ಮೂವರಲ್ಲಿ ಇಬ್ಬರು ಈ ಹಿಂದೆ ನಡೆದ ಹಲವು ಪ್ರಕರಣಗಳ ಆರೋಪಿಗಳು ಎಂದು ಹೇಳಿದ್ದಾರೆ. ಜಲೀಲ್ ಕೇಸ್ ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನು ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು 3 ಜನರನ್ನು ಮಾತ್ರ ಬಂಧನ ಮಾಡಲಾಗಿದೆ ಎಂದು ಕಮಿಷನರ್ ಹೇಳಿದ್ದಾರೆ.
ಕಾಸರಗೋಡು:ದುಬೈಯಿಂದ ಒಳ ಉಡುಪಿನಲ್ಲಿ ಬಚ್ಚಿಟ್ಟು ಒಂದು ಕೋಟಿ ರೂ.ಮೌಲ್ಯದ ಚಿನ್ನಾಭರಣವನ್ನು ಸಾಗಾಟ ಮಾಡುತ್ತಿದ್ದ ಯುವತಿಯನ್ನು ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡಿನ ಶಹಲಾ (19) ಬಂಧಿತ ಯುವತಿ.ಈಕೆ 1 ಕೋಟಿ ಮೌಲ್ಯದ ಚಿನ್ನಾಭರಣವನ್ನು ಮೂರು ಪ್ಯಾಕೇಟ್ ಮಾಡಿ ಒಳ ಉಡುಪಿನಲ್ಲಿ ಇಟ್ಟು ಸಾಗಾಟಕ್ಕೆ ಯತ್ನಿಸಿದ್ದರು. ಭಾನುವಾರ ರಾತ್ರಿ ದುಬೈಯಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಬಂದಿದ್ದ ಈಕೆ ಕಸ್ಟಮ್ಸ್ ತಪಾಸಣೆ ಬಳಿಕ ರಾತ್ರಿ 11 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದರು. ಪೊಲೀಸರು ಲಭಿಸಿದ ಖಚಿತ ಮಾಹಿತಿಯಂತೆ ಯುವತಿಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನಾಭರಣ ಸಾಗಾಟ ಪತ್ತೆಯಾಗಿದೆ.
ಮಂಗಳೂರು: ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮಹಿಳೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಲೀಲ್ ಹತ್ಯೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಅವರಿಗೆ ಗಾಂಜಾ ಮಾಫಿಯಾ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಹಿನ್ನೆಲೆ;ಶನಿವಾರ ಸಂಜೆ ಜಲೀಲ್ ಅಂಗಡಿಯಲ್ಲಿದ್ದ. ಆಗಾ ಇಬ್ಬರು ದುಷ್ಕರ್ಮಿಗಳು ಬೈಕ್ನಲ್ಲಿ ಬಂದು ಜಲೀಲ್ ಜೊತೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ ಬಳಿಕ ಏಕಾಏಕಿ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಈ ಬಗ್ಗೆ ಅಲ್ಲೇ ಇದ್ದ ಪ್ರತ್ಯಕ್ಷದರ್ಶಿಗಳು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ಆರೋಪಿಗಳು ಯಾರು ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟ ಸುಳಿವು ಪೊಲೀಸರಿಗೆ ಸಿಕ್ಕಿಲ್ಲ.ಅನುಮಾನ ಇದ್ದ ಹಲವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ನಡುವೆ ಸುರತ್ಕಲ್ ಠಾಣೆಗೆ ಇಬ್ಬರು ಮಹಿಳೆಯರನ್ನು ಕರೆಸಿಕೊಂಡ ಪೊಲೀಸರು ಸಾಕಷ್ಟು ವಿಚಾರಣೆ ನಡೆಸಿದ್ದಾರೆ.
ಮಂಗಳೂರು : ಸುರತ್ಕಲ್ ನ ಕಾಟಿಪಳ್ಳದಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ. ಮೃತ ವ್ಯಕ್ತಿಯ ಅಂತ್ಯ ಸಂಸ್ಕಾರ ಕೂಡ ಶಾಂತಿಯುವಾಗಿ ನಡೆದಿದೆ. ತನಿಖೆ ಪ್ರಗತಿಯಲ್ಲಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಜನರು ಊಹಾ ಪೋಹಗಳಿಗೆ ಕಿಗೊಡದೆ ಪರಸ್ಪರ ವಿಶ್ವಾಸದಿಂದ ಇರುವ ಅಗತ್ಯವಿದೆ. ಪೊಲೀಸರು ಯಾವುದೆ ಒತ್ತಡ ಇಲ್ಲದೇ ಮುಕ್ತವಾಗಿ ತನಿಖೆ ಮಾಡಲಿದ್ದಾರೆ. ಆರೋಪಿಗಳು ಯಾರೇ ಇದ್ದರೂ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ನಡೆದ ಯುವಕರಿಬ್ಬರ ಬರ್ಬರ ಹತ್ಯೆಯು ಬೆಳಗಾವಿ ಜನತೆಯನ್ನು ಬೆಚ್ಚಿಬೀಳಿಸಿದೆ. ನಗರದ ಹೊರ ವಲಯದಲ್ಲೇ ಈ ಘಟನೆ ನಡೆದಿದ್ದು, ಜನರನ್ನು ಆತಂಕಕ್ಕೆ ದೂಡಿದೆ.ಬಸವರಾಜ್ ಬೆಳಗಾಂವ್ಕರ್ (22), ಗಿರೀಶ್ ನಾಗಣ್ಣವರ (22) ಹತ್ಯೆಯಾದ ಯುವಕರು. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಯುವಕರು ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಆಡುತ್ತಿದ್ದರು. ಈ ವೇಳೆ ಮೈದಾನಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ವಾಹನ ನುಗ್ಗಿಸಿದ್ದ. ಮೈದಾನದಲ್ಲಿ ವಾಹನ ನುಗ್ಗಿಸಿದಕ್ಕೆ ಯುವಕರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಸಿಟ್ಟಾದ ಚಾಲಕ, ವಾಹನದಿಂದ ಕೆಳಗಿಳಿದು ಚಾಕುವಿನಿಂದ ಚುಚ್ಚಿ ಯುವಕರಿಬ್ಬರನ್ನು ಬರ್ಬರ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾಡಿ, ಎಸಿಪಿ ನಾರಾಯಣ ಭರಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕರಿಬ್ಬರ ಮೃತದೇಹಗಳನ್ನು ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಮಂಗಳೂರು : ಸುರತ್ಕಲ್ನಲ್ಲಿ ಮುಸ್ಲಿಂ ವ್ಯಾಪಾರಿ ಜಲೀಲ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಮಹಿಳೆಯರು ಸೇರಿ 4-5 ಜನರು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಧಪನ ಮಾಡುವ ವೇಳೆ ಮುಸ್ಲಿಂ ಮುಖಂಡರು ಪೊಲೀಸ್ ಆಯುಕ್ತರ ಬಳಿ ಈ ಪ್ರಕರಣ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಒತ್ತಾಯಿಸಿದ್ದಾರೆ ಈ ಘಟನೆ ಸಂಬಂದ 4-5 ಮಂದಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು ಇದರಲ್ಲಿ ಇಬ್ಬರು ಮಹಿಳೆಯರನ್ನ ಕೂಡಾ ವಿಚಾರಣೆ ನಡೆಸಲಾಗುತ್ತಿದ ಎಂದು ಮಾಹಿತಿ ಲಭ್ಯವಾಗಿದೆ ಮಂಗಳೂರು ನಗರದ ಸುರತ್ಕಲ್ ಸಮೀಪದ ಕೃಷ್ಣಾಪುರದ ನಾಲ್ಕನೇ ಬ್ಲಾಕ್ನ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳಿಬ್ಬರು, ಅಂಗಡಿ ಮಾಲೀಕ ಜಲೀಲ್ ಎಂಬುವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 6ರಿಂದ ಡಿಸೆಂಬರ್ 27ರ ಬೆಳಗ್ಗೆ 6 ರವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.









