ಸುಳ್ಯ: ಹಾಡಹಗಲೆ ನಡುಬೀದಿಯಲ್ಲಿ ತಲ್ವಾರ್ ಹಿಡಿದು ಓಡಾಡಿದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದು, ಆತನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಸುಳ್ಯ ಕನಕಮಜಲು ಗ್ರಾಮದ ಸುಣ್ಣಮೂಲೆ ಬಳಿ ಸಂದೀಪ್ ಎಂಬಾತ ತಲವಾರು ಹಿಡಿದುಕೊಂಡು ಹೋಗುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸಂದೀಪ್ ನನ್ನು ಸುಳ್ಯ ಪೊಲೀಸರು ಬಂಧಿಸಿದ್ದು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ. ಸಂದೀಪ್ ಗೆ ತಲವಾರು ಹೇಗೆ ಸಿಕ್ಕದೆ ಎಂಬುವುದು ಪೊಲೀಸರು ತನಿಖೆಯಿಂದ ತಿಳಿಯಬೇಕಿದೆ. ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕುರಿತ ಬ್ಯಾನರ್ ಅಳವಡಿಸಿಲು ಕನಕಮಜಲು ಪೇಟೆಯಲ್ಲಿ ಅನುಮತಿ ನೀಡಿಲ್ಲ ಎಂಬ ಕಾರಣಕ್ಕೆ ಕೋಪಗೊಂಡು ಈತ ತಲ್ವಾರ್ ಹಿಡಿದು ನಡೆದಾಡುತ್ತಿದ್ದ ಎಂದು ಹೇಳಲಾಗಿತ್ತು. ಈ ಬಗ್ಗೆ ಕನಕಮಜಲು ಗ್ರಾಮ ಪಂಚಾಯಿತಿ ಅವರನ್ನು ಸಂಪರ್ಕಿಸಿದಾಗ, ‘ ಪ್ಲೆಕ್ಸ್ ಬ್ಯಾನರ್ ಅಳವಡಿಸುವ ವಿಷಯವಾಗಿ ಅನುಮತಿಗಾಗಿ ನಮ್ಮಲ್ಲಿಗೆ ಯಾರೂ ಬಂದಿಲ್ಲ. ಬಟ್ಟೆ ಬ್ಯಾನರ್ ಹಾಕಲು ನಾವು ಅನುಮತಿ ನೀಡಿದ್ದೇವೆ’ ಎಂದು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ…
Author: main-admin
ಮಂಗಳೂರು:ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಪ್ರಮುಖ ಸಭೆ ನಡೆಸಲಿದ್ದಾರೆ. ಆರು ಜಿಲ್ಲೆಯ ಎಸ್ಪಿ,ಎನ್ ಐ ಎ ಅಧಿಕಾರಿಗಳೊಂದಿಗೆ ಎಡಿಜಿಪಿ ಸಭೆ ನಡೆಸಲಿದ್ದು, ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ ನಲ್ಲಿ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ.ಆರೋಪಿಗಳ ದಸ್ತಗಿರಿಗೆ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರಮುಖ ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ಸಭೆ ಮಾಡಲಿದ್ದೇವೆ. ಮಂಗಳೂರಿನ ಕಾನೂನು ಸುವ್ಯವಸ್ಥೆ ಬಗ್ಗೆಯೂ ಸಭೆ ಮಾಡುತ್ತೇವೆ.ಮುಖ್ಯ ಆರೋಪಿಗಳಿಗೆ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ಮಾಡಿದವರಿಗೂ ಕ್ರಮ ಆಗಲಿದೆ.ಎನ್ ಐ ಎ ಅಧಿಕಾರಿಗಳ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.ಎನ್ ಐ ಎ ಅಧಿಕಾರಿಗಳ ಜೊತೆ ಕರ್ನಾಟಕ ತಂಡ ಈ ಕೆಲಸ ಮಾಡಲಿದೆ. ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಸಂಪೂರ್ಣ ಮಾಹಿತಿ ಇದೆ. ಅವರ ಫೋಟೋ,ಮನೆ ವಿಳಾಸ,ತಂದೆ-ತಾಯಿ,ಹೆಂಡತಿ ಮಾಹಿತಿ ಎಲ್ಲವೂ…
ವಿಟ್ಲ: ಗ್ರಾ. ಪಂ ಸದಸ್ಯ ಪುನೀತ್ ಮಾಡತ್ತಾರು ಎಂಬವರಿಗೆ ಸಾರ್ವಜನಿಕವಾಗಿ ಹಲ್ಲೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೇಪು ಗಣೇಶ ಮತ್ತು ನಿಶಾಂತ್ ಶೆಟ್ಟಿ ನೀರುಮಾರ್ಗ ಬಂಧಿತರು. ವಿಟ್ಲದ ಚಂದಳಿಕೆ ಮಾಡತ್ತಡ್ಕ ರಸ್ತೆಯಲ್ಲಿ ನಿನ್ನೆ ಈ ಘಟನೆ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಮೂಡಿಗೆರೆ: ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುತ್ತಿರುವಂತೆ ಮಳೆ ಸಂಬಂಧಿ ಅವಘಡಗಳು ಹೆಚ್ಚಾಗುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನಲ್ಲಿ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು ಗ್ರಾಮದಲ್ಲಿ ಎಂಬಲ್ಲಿ ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು ಮೃತರನ್ನು 55 ವರ್ಷದ ಚಂದ್ರಮ್ಮ ಹಾಗೂ ಮಗಳು 37 ವರ್ಷದ ಸರಿತಾ ಎಂದು ಗುರುತಿಸಲಾಗಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಆ. 9ರಂದು ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್ಹೌಸ್ ಬಳಿ ನಡೆದಿದೆ. ಮೃತರನ್ನು ಪಿಲಿಕಳ ಪಂಪ್ಹೌಸ್ ಬಳಿಯ ನಿವಾಸಿ ಸಚಿನ್ (17) ಎಂದು ಗುರುತಿಸಲಾಗಿದೆ.ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.ಆ. 9ರಂದು ಕಾಲೇಜಿಗೆ ರಜೆ ಇದ್ದು, ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು. ಅವಳಿ ಮಕ್ಕಳ ಪೈಕಿ ಓರ್ವರಾಗಿರುವ ಅವರು ತಂದೆ, ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ
ಮಂಗಳೂರು;ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಕೊಲೆಯತ್ನ, ಅಥವಾ ಹಲ್ಲೆ ಘಟನೆ ನಡೆದಿಲ್ಲ, ಈ ಬಗ್ಗೆ ಯಾರೂ ಸುಳ್ಳು ಸುದ್ದಿ ಹರಡಬೇಡಿ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಕೊಲೆ ಯತ್ನ ನಡೆಸಿದ್ದಾರೆಂಬ ಸುದ್ದಿ ಸುಳ್ಳಾಗಿದ್ದು, ವ್ಯಕ್ತಿಯೊಬ್ಬರು ಕಂಕನಾಡಿ ಠಾಣೆಗೆ ಆಗಮಿಸಿ ತನಗೆ ಇಂಟರ್ನೆಟ್ ಮೂಲಕ ಬೆದರಿಕೆ ಕರೆ ಬಂದಿರುವುದಾಗಿ ಹಾಗೂ ತನ್ನನ್ನು ಯಾರೋ ಎರಡು ಮೂರು ಬೈಕ್ ಗಳಲ್ಲಿ ಹಿಂಬಾಲಿಸುತ್ತಿರುವುದಾಗಿ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದಾಗ ಇಂಟರ್ನೆಟ್ ಮೂಲಕ ಕರೆ ಬಂದಿರುವುದು ಕಂಡು ಬಂದಿದೆ. ಆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಯಾರೋ ಹಿಂಬಾಲಿಸಿಕೊಂಡು ಬಂದ ಬಗ್ಗೆ ಸಿಸಿಟಿವಿ ಪರಿಶೀಲಿಸಲಾಗಿದೆ. ಅದು ಫುಡ್ ಡೆಲಿವರಿಯ ವಾಹನವಾಗಿದ್ದು, ಅದು ದೂರು ನೀಡಿರುವ ವ್ಯಕ್ತಿಯ ಪಕ್ಕದ ಮನೆಗೆ ಆರ್ಡರ್ ಪೂರೈಕಾಗಿ ಬಂದಿದ್ದಾಗಿದೆ. ಈ ಬಗ್ಗೆ ದೂರುದಾರರಿಗೂ ಮನವರಿಕೆಯಾಗಿದೆ ಎಂದು ಹೇಳಿದ್ದಾರೆ. ನಿನ್ನೆ ಘಟನೆ ಆಗಿದ್ದು, ನಾನು ಕಂಕನಾಡಿ ಠಾಣೆಗೆ ತೆರಳಿ, ದೂರು ನೀಡಿರುವ ವ್ಯಕ್ತಿ ಜತೆ…
ವಿಟ್ಲ: ನೆಕ್ಕರೆ ಕಾಡಿನಲ್ಲಿ ತಲೆ ಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಗುರುತಿಸಲಾಗಿದೆ. ನಾಗೇಶ್ ಗೌಡ ರವರು 6 ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿನ್ನೆ ಸಂಜೆ ವೇಳೆ ಗುಡ್ಡಕ್ಕೆ ಕಟ್ಟಿಗೆಗೆ ತೆರಳಿದ್ದವರಿಗೆ ತಲೆ ಬುರುಡೆ, ಎಲುಬು ಬಟ್ಟೆಗಳು ಕಾಣ ಸಿಕ್ಕಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ನಾಪತ್ತೆ ಪ್ರಕರಣಗಳ ಜಾಡು ಹಿಡಿದು ತನಿಖೆ ನಡೆಸಿದ್ದು, ಈ ವೇಳೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ನಾಪತ್ತೆಯಾದ ನಾಗೇಶ್ ಎಂಬವರ ಮಗನನ್ನು ಸ್ಥಳಕ್ಕೆ ಕರೆಸಿ ಪರಿಶೀಲಿಸಿದಾಗ ಅದು ನಾಗೇಶ್ ಗೌಡ ಎಂದು ಅವರ ಮಗ ಗುರುತು ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ನಾಗೇಶ್ ಗೌಡ ರವರು ನೆಕ್ಕರೆ ಕಾಡು ರಸ್ತೆಯಾಗಿ ಮನೆಯೊಂದಕ್ಕೆ ಕೆಲಸಕ್ಕೆ ತೆರಳುತ್ತಿದ್ದು, ಈ ವೇಳೆ ಏನಾದರೂ…
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆಕ್ಕರೆಕಾಡು ಎಂಬಲ್ಲಿ ಗುಡ್ಡವೊಂದರಲ್ಲಿ ವ್ಯಕ್ತಿಯೋರ್ವರ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾಗಿದೆ. ಆ. 8ರಂದು ಸಾಯಂಕಾಲ ಗುಡ್ಡಕ್ಕೆ ಸೊಪ್ಪುತರಲೆಂದು ತೆರಳಿದ ಸ್ಥಳೀಯರಿಗೆ ತಲೆಬುರುಡೆ, ಎಲುಬು ಹಾಗೂ ಆ ವ್ಯಕ್ತಿ ಧರಿಸಿರುವುದಾಗಿ ಶಂಶಯಿಸಲ್ಪಟ್ಟ ಬಟ್ಟೆ ಕಾಣಸಿಕ್ಕಿದೆ. ಬಳಿಕ ಅವರು ಮರಳಿ ಬಂದು ಮನೆಮಂದಿಗೆ ವಿಚಾರ ತಿಳಿಸಿದ್ದಾರೆ. ರಾತ್ರಿ ವೇಳೆ ಅವರು ಈ ವಿಚಾರವನ್ನು ವಿಟ್ಲ ಠಾಣಾ ಪೊಲೀಸರಿಗೆ ತಿಳಿಸಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. ತಲೆಬುರುಡೆ ಪತ್ತೆಯಾದ ಪ್ರಕರಣ ನಾಗರೀಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆ. 14ರ ಮಧ್ಯ ರಾತ್ರಿವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಗಳಿಗೆ ಈ ನಿಬಂಧನೆಯನ್ನು ಜಿಲ್ಲಾಡಳಿತ ಸಡಿಲಿಸಿದೆ. ‘ನಿಷೇಧಾಜ್ಞೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಾರ್ವಜನಿಕರು, ಸಂಘಟನೆಗಳು ಅಥವಾ ರಾಜಕೀಯ ಪಕ್ಷಗಳು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಬಹುದು’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಏರ್ಪಡಿಸುವವರು ಜಿಲ್ಲಾ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬಹುದು. ‘ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿಯೂ ಸಿಆರ್ಪಿಸಿ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಬಹುದು’ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
ವಿಟ್ಲ : ಅನಂತಾಡಿ ಗ್ರಾಮದ ಬಂಟ್ರಂಜ ನಿವಾಸಿ ಶೇಖರ ಅವರ ಪುತ್ರಿ, ಬಾಬನಕಟ್ಟೆ ಲಿಖಿತಾ (11) ಜೋಕಾಲಿ ಹಗ್ಗ ಉರುಳಾಗಿ ಮೃತಪಟ್ಟಿದ್ದಾಳೆ.ಆರನೇ ತರಗತಿ ವಿದ್ಯಾರ್ಥಿನಿ ಲಿಖಿತಾ ಅಪ್ಪ,ಅಮ್ಮ ಹೊರ ಹೋದ ಸಂದರ್ಭದಲ್ಲಿ ಮನೆಯಲ್ಲಿ ಜೋಕಾಲಿಯಾಡುತ್ತಿದ್ದಳು. ತಾಯಿ ವಾಪಸ್ಸ್ ಮನೆಗೆ ಬಂದಾಗ ಲಿಖಿತಾ ಕುತ್ತಿಗೆಗೆ ಜೋಕಾಲಿ ಸುತ್ತಿ ನೇತಾಡುತ್ತಿದ್ದನ್ನು ಕಂಡು ಸ್ಥಳೀಯರನ್ನು ಕರೆದು ಜೋಕಾಲಿಯ ಸೀರೆಯಿಂದ ಲಖಿತಾಳನ್ನು, ಬಿಡಿಸಿದಾಗ ಮೃತಪಟ್ಟಿದ್ದಳು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.










