Author: main-admin

ಪುತ್ತೂರು: ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರದಲ್ಲಿ ಮತದಾರರ ಗುರುತಿನ ಚೀಟಿಗಳನ್ನು ಅನಧಿಕೃತವಾಗಿ ವಿತರಿಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ತಹಶೀಲ್ದಾರ್‌ ನಿಸರ್ಗ ಪ್ರಿಯ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ದಾಳಿ ಮಾಡಿ ಬೀಗ ಜಡಿದಿದೆ. ಗುರುತಿನ ಚೀಟಿ ಕಳೆದುಹೋಗಿದ್ದ ಪುತ್ತೂರಿನ ನಿವಾಸಿಯೋರ್ವರು ಜನಸೇವಾ ಕೇಂದ್ರಕ್ಕೆ ಬಂದು ಮಾಹಿತಿ ನೀಡಿದ್ದರು. ಅಲ್ಲಿನ ಸಿಬಂದಿ ತಾವು ತಯಾರಿಸಿ ಕೊಡುವುದಾಗಿ ಹೇಳಿ ಗುರುತು ಚೀಟಿ ನೀಡಿದ್ದರು. ಆದರೂ ಗುರುತಿನ ಚೀಟಿಯ ಮೇಲೆ ಅನುಮಾನ ಬಂದ ಕಾರಣ ತಾಲೂಕು ಕಚೇರಿಯ ಚುನಾವಣ ಶಾಖೆಗೆ ತೆರಳಿ ತೋರಿಸಿದರು. ಅಧಿಕಾರಿಗಳು ತಪಾಸಣೆ ನಡೆಸಿದಾಗ ಅನುಮತಿ ರಹಿತವಾಗಿ ಗುರುತುಚೀಟಿ ನೀಡಿರುವುದು ಪತ್ತೆಯಾಗಿದೆ. ಮತದಾರರ ಗುರುತಿನ ಚೀಟಿ ವಿತರಿಸುವ ಅಧಿಕಾರವನ್ನು ಯಾವುದೇ ಬಾಹ್ಯ ಕೇಂದ್ರಗಳಿಗೆ ಕೊಟ್ಟಿಲ್ಲ ಎಂದು ಎಸಿ ತಿಳಿಸಿದ್ದಾರೆ. ನಮ್ಮ ಜನಸೇವಾ ಕೇಂದ್ರದಲ್ಲಿ ನಿರ್ದಿಷ್ಟ ವೆಬ್‌ಸೈಟ್‌ ತೆರೆದುಕೊಂಡ ಕಾರಣ ಲಾಗಿನ್‌ ಆಗಿ ಅರ್ಜಿ ಪ್ರಕ್ರಿಯೆ ನಡೆಸಿ ಕಾರ್ಡ್‌ ಮುದ್ರಿಸಿಕೊಟ್ಟಿದ್ದೇವೆ. ಇದರ ಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಗೆ ಪ್ರಾಯೋಗಿಕ…

Read More

ಬೆಳ್ತಂಗಡಿ: ನಗರದ ಸಂತೆ ಕಟ್ಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ವ ಕಂಡಕಂಡವರ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಯಾವುದೇ ಕಾರಣವಿಲ್ಲಧ ದಾರಿ ಹೋಕರ ಮೇಲೆ ಈತ ಏಕಾ ಏಕಿ ಹಲ್ಲೆ ನಡೆಸಿದ್ದು ಹಲವರು ಈತನಿಂದ ಹಲ್ಲೆಗೆ ಒಳಗಾದರು. ಕೂಡಲೇ ಸ್ಥಳೀಯರು ಈತನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಈತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿದ್ದಾರೆ. ಈತ ತನ್ನ ವಿಳಾಸವನ್ನು ಆಗಾಗ ಬೇರೆ ಬೇರೆಯಾಗಿ ಹೇಳುತ್ತಿದ್ದು ಇದರಿಂದಾಗಿ ಈತನ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಸಾಧ್ಯವಾಗಿಲ್ಲ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Read More

ವಿಟ್ಲ. ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಸಬಾ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡರ ಪತ್ನಿ ಸವಿತ ಯಾನೆ ಸೇಸಮ್ಮ (50) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು, ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಮೃತರ ಸಹೋದರ ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಬಂಟ್ವಾಳ : ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ತಲಪಾಡಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕ ಇಬ್ಬರೇ ಇದ್ದ ಬಗ್ಗೆ ಸ್ಥಳೀಯರು ತಿಳಿಸಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದರೆ ಪ್ರಯಾಣಿಕನಿಗೂ ಗಾಯವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ಅಪಘಾತದಿಂದಾಗಿ ಆ್ಯಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ ಒಟ್ಟು ಮೂವರಿಗೆ ಗಾಯಗಳಾಗಿವೆ. ಈ ಪೈಕಿ ವೈದ್ಯ ಡಾ.‌‌ನಿತಿನ್ ಅವರಿಗೆ ಕೈಯಲ್ಲಿ ಮೂಳೆ‌ ಮುರಿತಕ್ಕೊಳಗಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನಿಬ್ಬರು ಗಾಯಾಳುಗಳಾದ ಆಸ್ಪತ್ರೆಯ ಸಿಬ್ಬಂದಿಗಳಾದ ರಿತೇಶ್ ಮತ್ತು ಹುಝೈರ್ ಎಂಬವರಾಗಿದ್ದಾರೆ. ಇವರಿಬ್ಬರಿಗೂ ಸಣ್ಣ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ವೇಳೆ ಆ್ಯಂಬುಲೆನ್ಸ್ ನಲ್ಲಿ ರೋಗಿಗಳು ಇರಲಿಲ್ಲ ಎಂದು ತಿಳಿದು ಬಂದಿದೆ. ಮೆಡಿಸಿನ್ ಪಾರ್ಸೆಲ್ ವಿಚಾರವಾಗಿ ಆಂಬುಲೆನ್ಸ್ ನಲ್ಲಿ ಬೆಳ್ತಂಗಡಿಗೆ ಬಂದಿದ್ದರು ಎಂದು ಗೊತ್ತಾಗಿದೆ. ಅಪಘಾತದಿಂದಾಗಿ ಬೊಲೆರೋ ಆ್ಯಂಬುಲೆನ್ಸ್ ವಾಹನ ಬಹುತೇಕ ನುಜ್ಜುಗುಜ್ಜಾಗಿದೆ. ಘಟನೆಯಿಂದ ಸುಮಾರು ಅರ್ಧ ತಾಸು ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ತಕ್ಷಣ ಸ್ಪಂದಿಸಿದ ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ನಾಗರಿಕರ ಸಹಕಾರದಿಂದ ವಾಹನ ಸಂಚಾರ ಸುಗಮಗೊಳಿಸಿದರು.

Read More

ಹುಬ್ಬಳ್ಳಿ : ಸಂಸಾರದ ಗುಟ್ಟು ವ್ಯಾದಿ ರಟ್ಟು ಎಂಬ ಮಾತು ಕೇಳಿದ್ದಿರಿ. ಆದರೆ ಇಲ್ಲಿ ಮಾತ್ರ ವ್ಯಾದಿ ರಟ್ಟು ಅಷ್ಟೇ ಅಲ್ಲ ಸೀದಾ ರಾಷ್ಟ್ರಪತಿ ಭವನ ತಲುಪಿದೆ. ಇದು ಮದುವೆಯಾಗಿ ಸುಖ ಸಂಸಾರ ನಡೆಸುತ್ತಿದ್ದರೂ, ಪುನಃ ಎರಡನೇ ಮದುವೆಯಾಗಿ ಸಂಕಷ್ಟ ಎದುರಿಸುತ್ತಿರುವವರ ವಿಚಿತ್ರ ತ್ರಿಕೋನ ಸ್ಟೋರಿ. ಒಂದು ಕಡೆ ಮೊದಲ ಗಂಡ ಬಿಟ್ಟು ಹೋದ, ಎರಡನೇ ಗಂಡನ ಜೊತೆಗೆ ಜೀವನ ಮಾಡಲು ಆತನ ಮೊದಲನೆ ಹೆಂಡತಿ ಬಿಡುತ್ತಿಲ್ಲ. ಹೀಗಾಗಿ, ರೂಪಮಾಲಾ ಎಂಬ ಗೃಹಿಣಿ ದಯಾಮರಣ ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದಾರೆ. ನನ್ನ ಮೊದಲ ಗಂಡ ಬಿಟ್ಟು ಹೋದ, ಎರಡನೇ ಗಂಡನ ಜೊತೆಗೆ ಜೀವನ ಮಾಡಲು ಆತನ ಮೊದಲನೆ ಹೆಂಡತಿ ಬಿಡುತ್ತಿಲ್ಲ. ನನಗೆ ಮಾನಸಿಕ ಹಿಂಸೆಯಾಗುತ್ತಿದೆ ನಾನು ಗರ್ಭಿಣಿ. ಆತ್ಮಹತ್ಯೆ ಸಹ ಮಾಡಿಕೊಳ್ಳಲು ಆಗುತ್ತಿಲ್ಲ. ದಯವಿಟ್ಟು ನನಗೆ ದಯಾಮರಣ ಕರುಣಿಸಿ ಅಂತ ರಾಷ್ಟ್ರಪತಿಗೆ ಮಹಿಳೆಯೊಬ್ಬಳು ಪತ್ರ ಬರೆದಿದ್ದಾರೆ. ಈಗಾಗಲೇ ಮದುವೆಯಾಗಿ ಸುಖ ಸಂಸಾರ ನಡೆಸಿದ್ದಾರೆ. ಎದೆಮಟ್ಟಕ್ಕೆ ಬೆಳೆದು ನಿಂತ ಮಕ್ಕಳಿವೆ. ಇದನ್ನ ಲೆಕ್ಕಿಸಿದೆ…

Read More

ಆಹಾರ ಮತ್ತು ಪಾನೀಯ ಸೇವನೆಯಲ್ಲಿನ ವ್ಯತ್ಯಾಸ ಕೆಲವೊಮ್ಮೆ ಫಜೀತಿ ಉಂಟು ಮಾಡುತ್ತದೆ. ಮಲಬದ್ಧತೆಯೂ ಅವುಗಳಲ್ಲೊಂದು. ಈ ಸಮಸ್ಯೆಯಿಂದ ಹೊಟ್ಟೆ ಉಬ್ಬರಿಸಿದಂತಾಗಿ ಏನು ತಿಂದರೂ ರುಚಿಸದ ಸ್ಥಿತಿ ಒದಗುತ್ತದೆ. ಬ್ರೊಕೋಲಿ ಸೇವನೆಯಿಂದ ಈ ಸಮಸ್ಯೆ ಬಗೆಹರಿಸಬಹುದು. ಹೆಚ್ಚಿನ ಸಮಯ ಕುಳಿತಲ್ಲೇ ಕಳೆಯುವುದು, ವ್ಯಾಯಾಮದ ಕೊರತೆ, ಜಂಕ್ ಫುಡ್ ತಿನ್ನುವುದು ಮತ್ತಿತರ ಕಾರಣಗಳಿಂದ ಮಲಬದ್ಧತೆ ಸಮಸ್ಯೆ ಬರುತ್ತದೆ. ಬ್ರೊಕೋಲಿಯಲ್ಲಿ ಅನೇಕ ಪೋಷಕಾಂಶಗಳಿದ್ದು, ಅವು ಆರೋಗ್ಯಕರವಾಗಿವೆ, ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತವೆ. ಇದರಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಫೈಟೊಕೆಮಿಕಲ್ ಗುಣವಿದ್ದು, ಎಲ್ಲ ರೀತಿಯ ಸೋಂಕು ಮತ್ತು ರೋಗಗಳನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಕಡಿಮೆ ಕ್ಯಾಲೊರಿ ಇರುವ ಈ ತರಕಾರಿ ಅತ್ಯಧಿಕ ಅಂಟಿ ಆಕ್ಸಿಡೆಂಟ್ ಗಳು ಮತ್ತು ಅಗತ್ಯ ಖನಿಜಗಳಿಂದ ತುಂಬಿದೆ. ವಿಟಮಿನ್ ಸಿ ಧಾರಾಳವಾಗಿರುವ ಬ್ರೊಕೋಲಿಯನ್ನು ಸ್ಯಾಂಡ್ ವಿಚ್, ಸೂಪ್, ಸಲಾಡ್ ರೂಪದಲ್ಲಿ ಸೇವಿಸಿ ನಿಮ್ಮ ಮಲಬದ್ಧತೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.

Read More

ನವದೆಹಲಿ: ಬೋಳು ತಲೆಯಿದ್ದವರು ಕೂದಲನ್ನು ಬೆಳೆಸಲು ಔಷಧಿಗಳ ಮೊರೆ ಹೋಗುವುದು ಸಾಮಾನ್ಯ. ಇತ್ತೀಚಿನ ದಿನಗಳಲ್ಲಿ ಜನರು ಕೂದಲ ಕಸಿ ಮಾಡಿಸುವಲ್ಲಿಗೆ ವಾಲುತ್ತಿದ್ದಾರೆ. ಆದರೆ ಕೂದಲ ಕಸಿ ಮಾಡಿಸಿಕೊಳ್ಳಲು ಹೋದವರೊಬ್ಬರು ವೈದ್ಯರ ಯಡವಟ್ಟಿನಿಂದ ಜೀವವನ್ನೇ ಕಳೆದುಕೊಂಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ದೆಹಲಿಯ ವ್ಯಕ್ತಿ ಅಥರ್ ರಶೀದ್ (30) ಕೂದಲ ಕಸಿ ಮಾಡಿಸಿಕೊಳ್ಳಲು ಕ್ಲಿನಿಕ್‌ಗೆ ಹೋಗಿದ್ದರು. ಆದರೆ ಕೂದಲ ಕಸಿ ಮಾಡಿಸಿಕೊಂಡ ಬಳಿಕ ಅವರು ತೀವ್ರವಾದ ನೋವಿನಿಂದ ಬಳಲುತ್ತಿದ್ದು, ಬಹು ಅಂಗಾಂಗ ವೈಫಲ್ಯ ಉಂಟಾಗಿ ಸಾವನ್ನಪ್ಪಿದ್ದಾರೆ. ರಶೀದ್ ತಮ್ಮ ಮನೆಯಲ್ಲಿ ಒಬ್ಬರೇ ದುಡಿಯುತ್ತಿದ್ದ ವ್ಯಕ್ತಿಯಾಗಿದ್ದು, ತಮ್ಮ ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಕೂದಲ ಶಸ್ತ್ರಚಿಕಿತ್ಸೆಯ ಬಳಿಕ ನನ್ನ ಮಗ ತುಂಬಾ ನೋವಿನಿಂದ ಬಳಲುತ್ತಿದ್ದ ಆತನ ಮೈಮೇಲೆ ಗುಳ್ಳೆಗಳಾಗಿದ್ದವು ಎಂದು ರಶೀದ್ ತಾಯಿ ಆಸಿಯಾ ಬೇಗಂ ತಿಳಿಸಿದ್ದಾರೆ. ಘಟನೆಯ ಬಳಿಕ ರಶೀದ್ ಕುಟುಂಬದ ಸದಸ್ಯರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿದ ಇಬ್ಬರು ವೈದ್ಯರು ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

Read More

ಚಿಕ್ಕಮಗಳೂರು : ವಿವಾದಿತ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಎಂಬ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ 8 ಜನರು ಇದ್ದರು. ಅರ್ಚಕರ ನೇಮಿಸುವ ಅಧಿಕಾರ ಆಡಳಿತ ಮಂಡಳಿಗೆ ಇದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿತ್ತು, ಅಂತೆಯೇ ಆಡಳಿತ ಮಂಡಳಿ ಇಬ್ಬರು ಅರ್ಚಕರನ್ನು ನೇಮಿಸಿ ಆದೇಶ ಹೊರಡಿಸಿದೆ. ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ವಿವಾದಾತ್ಮಕ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ಮಂಜೂರಾಗಿದೆ. ತೀವ್ರ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಅನುಮತಿ ನೀಡಲಾಗಿದೆ.ಇನ್ನೂ, ದತ್ತಪೀಠದಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಭೇಟಿ…

Read More

ಉಡುಪಿ: ಜನರ ತೀವ್ರ ವಿರೋಧದ ನಡುವೆಯೂ ಸದ್ದಿಲ್ಲದೇ ಹೆಜಮಾಡಿ ಟೋಲ್‌ನಲ್ಲಿ ವಾಹನಗಳಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಮುಂದಾಗಿರುವುದು ಜನಾಕ್ರೋಶಕ್ಕೆ ಕಾರಣ ವಾಗಿದೆ. ಸಾರ್ವಜನಿಕರು ಮತ್ತೆ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ. ಜಿಲ್ಲೆಯ ಶಾಸಕರು, ಸಚಿವರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳೂ ಸುರತ್ಕಲ್‌ ಟೋಲ್‌ನ ದರವನ್ನು ಹೆಜಮಾಡಿಯಲ್ಲಿ ಸಂಗ್ರಹಿಸಲು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಇದಾವುದಕ್ಕೂ ಟೋಲ್‌ ಗುತ್ತಿಗೆಯ ಕಂಪೆನಿಯಾಗಲೀ ಅಥವಾ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಾಗಲೀ ಬೆಲೆಯೇ ಕೊಡದಿರುವುದೂ ಜನಾಕ್ರೋಶವನ್ನು ಹೆಚ್ಚಿಸಿದೆ. ಹೆಜಮಾಡಿ ಟೋಲ್‌ ದರ ಪರಿಷ್ಕರಣೆ ವಿಷಯವಾಗಿ ಡಿ. 5ರಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ಸಚಿವ ನಿತಿನ್‌ ಗಡ್ಕರಿಯವರು ವಿಶೇಷ ಸಭೆ ನಡೆಸುವುದಾಗಿ ಶಾಸಕ ಕೆ. ರಘುಪತಿ ಭಟ್‌ ಅವರಿಗೆ ಭರವಸೆ ನೀಡಿದ್ದರು. ಹಾಗೆಯೇ ಡಿ. 3ರಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ, ಇಂಧನ ಸಚಿವ ಸುನಿಲ್‌ ಕುಮಾರ್‌ ಸಹಿತ ಜಿಲ್ಲೆಯ ಶಾಸಕರು ಹಾಗೂ ಜನಪ್ರತಿನಿಧಿಗಳ ಸಭೆ ನಡೆದಿತ್ತು. ಈ ಸಭೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು…

Read More