ಮಲ್ಪೆ: ಉಡುಪಿಯ ಟ್ಯುಟೋರಿಯಲ್ ಒಂದರಲ್ಲಿ ಪಿಯುಸಿ ಓದುತ್ತಿದ್ದ ತೆಂಕನಿಡಿಯೂರು ಲಕ್ಷ್ಮೀನಗರ ನಿವಾಸಿ ರವಿ ಕುಲಾಲ್ ಹಾಗೂ ಶರ್ಮಿಳಾ ದಂಪತಿ ಮಗ ಸೃಜನ್(17) ಎಂಬವರು ಆ.4ರಂದು ಬೆಳಗ್ಗೆ ಮನೆಯಿಂದ ಹೋದವನು ಮನೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾನೆ. ಸೃಜನ್ ಈ ಹಿಂದೆ ಎರಡು ಬಾರಿ ಮನೆ ಬಿಟ್ಟು ಹೋದವನು ಮರುದಿನ ವಾಪಸು ಬಂದಿದ್ದಾನೆ. ಈತ ಮನೆಯಿಂದ ಹೋಗುವಾಗ ಕ್ರೀಮ್ ಕಲರ್ ಪ್ಯಾಂಟ್ ಮತ್ತು ಕಾಫಿ ಬಣ್ಣದ ಹೂಗಳಿರುವ ಉದ್ಧತೋಳಿನ ಶರ್ಟ್ ಧರಿಸಿದ್ದ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಕುಂಬಳೆ: ಕಾಸರಗೋಡು ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದೆ. ಕೃಷಿಗೆ ಅಪಾರ ಹಾನಿ ಸಂಭವಿಸಿದೆ. ರಸ್ತೆಗಳಲ್ಲಿ ನೆರೆ ನೀರು ಹರಿದು ವಾಹನ ಮತ್ತು ಜನ ಸಂಚಾರಕ್ಕೆ ತೊಡಕಾಗಿದೆ. ಭೀಮನಡಿ ಗ್ರಾಮದ ಕೂರನಗುಂದದಲ್ಲಿ ಕೃಷಿಕ ರವೀಂದ್ರನ್ ಅವರ ಪತ್ನಿ, ನಿವೃತ್ತ ಶಿಕ್ಷಕಿ ಲತಾ ಅವರು ತೋಟಕ್ಕೆ ಬಾಳೆ ಎಲೆ ತರಲು ಹೋಗಿದ್ದಾಗ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದರು. ಅವರ ಮೃತದೇಹ ಪ್ಲಾಚಿಕರ ಮೀಸಲು ಅರಣ್ಯದ ತೋಡಿಗೆ ನಿರ್ಮಿಸಿದ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ. ಮೃತರು ಪತಿ, ಪುತ್ರನನ್ನು ಅಗಲಿದ್ದಾರೆ. ಇವರು ಎರಡು ತಿಂಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಮಳೆ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಎಲ್ಲ ಶಾಲೆ ಮತ್ತು ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ರಜೆ ಸಾರಲಾಗಿತ್ತು. ಮಂಗಲ್ಪಾಡಿ ಪಂಚಾಯತ್ನ ಇಚ್ಲಂಗೋಡು ವಳಯಂ ರಸ್ತೆಯ ಹೊಳೆ ಭಾಗ ಕುಸಿದಿದೆ. ಇತ್ತೀಚೆಗಷ್ಟೇ 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಇದಾಗಿದ್ದು, ಇನ್ನಷ್ಟು ಮಳೆ ಸುರಿದಲ್ಲಿ ಹೊಳೆ ಪಕ್ಕದ ರಸ್ತೆ ಕುಸಿಯಲಿದೆ ಎಂಬ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಪುತ್ತೂರು: ಇಲ್ಲಿನ ಬೊಳುವಾರು ವಸತಿ ಸಮುಚ್ಚಯ ಮಹಡಿಯಿಂದ ಶುಕ್ರವಾರ ಸಂಜೆ ಬಿದ್ದು ಗಂಭೀರ ಗಾಯಗೊಂಡಿದ್ದ ಸುಧಾನ ವಸತಿ ಶಾಲೆಯ ಪ್ರೌಢಶಾಲೆಯ 9ನೇ ತರಗತಿಯ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಸುಹಾನ್ ಬೊಳುವಾರಿನ ಮನೆಯಿರುವ ಫ್ಲಾಟ್ ನ 5ನೇ ಮಹಡಿಯಿಂದ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಆತನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮುಲ್ಕಿ: ಇಲ್ಲಿನ ಪ್ರತಿಷ್ಠಿತ ವಿಜಯ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ಸಂಭವಿಸಿದ್ದು ಓರ್ವ ಗಾಯಗೊಂಡು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಗಾಯಗೊಂಡವನನ್ನು ಮುಲ್ಕಿ ಸಮೀಪದ ಕರ್ನೀರೆ ನಿವಾಸಿ ಸುಜನ್ ಶೆಟ್ಟಿ (20) ಎಂದು ಗುರುತಿಸಲಾಗಿದೆ. ವಿಜಯ ಕಾಲೇಜಿನಲ್ಲಿ ಕಾಲೇಜು ಡೇ ಫಂಕ್ಷನ್ ನಡೆಯುತ್ತಿದ್ದು ಈ ಸಂದರ್ಭ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹಳೆ ವೈಷಮ್ಯದಿಂದ ಮಾತಿನ ಚಕಮಕಿ ನಡೆದು ಕ್ಷುಲ್ಲಕ ಕಾರಣಕ್ಕೆ ನೂಕಾಟ ತಳ್ಳಾಟ ನಡೆದಿದೆ. ಈ ಸಂದರ್ಭ ಒಂದು ಗುಂಪಿನ ಸುಮಾರು 10ಮಂದಿ ವಿದ್ಯಾರ್ಥಿಗಳು ಹಾಗೂ ಹೊರಗಿನವರು ಸೇರಿ ಕರ್ನೀರೆ ನಿವಾಸಿ ಸುಜನ್ ಶೆಟ್ಟಿ ಎಂಬವರ ಮೇಲೆ ಹಿಗ್ಗಾ ಮುಗ್ಗ ಕೈಯಿಂದ ಹಾಗೂ ಕಾಲಿನಿನಿಂದ ಹಲ್ಲೆ ನಡೆಸಿದ್ದು ಗಾಯಗೊಂಡ ಸುಜನ್ ಮುಲ್ಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದು ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಕಾಲೇಜಿನಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿ…
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟಕ್ಕೆ ನೀಡಲಾಗಿದ್ದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಹಿಂಪಡೆದ ಪೊಲೀಸ್ ಇಲಾಖೆಯ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಮಾಡುವಂತಿಲ್ಲ ಎಂಬ ಆದೇಶವನ್ನು ಎತ್ತಿ ಹಿಡಿದಿದೆ. ಇದೇ ಮೊದಲ ಬಾರಿಗೆ ಪಟಾಕಿಗಳಿಂದ ಗಾಯಗೊಂಡವರ ಫೋಟೋಗಳನ್ನು ತೀರ್ಪಿನ ಪ್ರತಿಗಳಲ್ಲಿ ಬಳಸಲಾಗಿದೆ. ಪಟಾಕಿ ಗಾಯಗಳಿಂದ ದೃಷ್ಟಿ ಕಳೆದುಕೊಂಡ ಯುವಕರು ಮತ್ತು ಮಕ್ಕಳ ಫೋಟೋಗಳು ಇದರಲ್ಲಿವೆ. ಬೆಂಗಳೂರಲ್ಲಿ ಪಟಾಕಿ ಮಾರುವಂತಿಲ್ಲ ಎಂಬ ಆದೇಶ ಎತ್ತಿಹಿಡಿದಿರುವ ಹೈಕೋರ್ಟ್, “ಈ ಫೋಟೋಗಳು ಸಂವಿಧಾನ ರಚನಾಕಾರರನ್ನು ಅವರ ಸಮಾಧಿಯಲ್ಲೇ ನಡುಗಿಸುವಂತಿವೆ. ಬದುಕುವ ಹಕ್ಕು, ಅಂಗ ಮತ್ತು ಸ್ವಾತಂತ್ರ್ಯದ ಹೆಚ್ಚಿನ ಉಲ್ಲಂಘನೆ ಸಾಧ್ಯವಿಲ್ಲ” ಎಂದು ಹೇಳಿದೆ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠವು ಪೊಲೀಸ್ ಇಲಾಖೆಯ ನಿರ್ಧಾರವನ್ನು ಪ್ರಶ್ನಿಸಿದ ಪಟಾಕಿ ವ್ಯಾಪಾರಿಗಳ ವಾದವನ್ನು ತಿರಸ್ಕರಿಸಿದೆ. ಬೆಂಗಳೂರಿನ ಪೊಲೀಸ್ ಆಯುಕ್ತರು 2012ರಲ್ಲಿ ಈ ವ್ಯಾಪಾರಿಗಳ ಎನ್ಒಸಿ ಹಿಂಪಡೆದಿದ್ದರು. ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು 2013ರಲ್ಲಿ ಆಯುಕ್ತರ ಆದೇಶವನ್ನು ಎತ್ತಿ ಹಿಡಿದಿದ್ದರು. ವ್ಯಾಪಾರಿಗಳು ಇದನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ…
ಉಡುಪಿ: ಕರಾವಳಿ ಕಡಲ ತೀರದಲ್ಲಿ ಪ್ರತಿ ಗಂಟೆಗೆ 45ರಿಂದ 55 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದ್ದು ಮೀನುಗಾರರು ಕಡಲಿಗಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಆ. 5ರಂದು ರಾತ್ರಿ 11.30ರ ತನಕ ಕಡಲ ತೀರದಲ್ಲಿ 3ರಿಂದ 3.8ಮೀ. ಎತ್ತರದ ಅಲೆಗಳು ಮಂಗಳೂರಿನಿಂದ ಕಾರವಾರ ತನಕದ ಕಡಲ ತೀರಕ್ಕೆ ಅಪ್ಪಳಿಸಲಿವೆ. ಆ. 5, 7 ರಂದು ಉಡುಪಿ ಸಹಿತ ಕರಾವಳಿಯ ಅಲ್ಲಲ್ಲಿ ಗಾಳಿ, ಗುಡುಗಿನೊಂದಿಗೆ 115.6ರಿಂದ 204.4 ಮಿ.ಮೀ. ಮಳೆ ಬೀಳಲಿದೆ. ಆ.6ರಂದು 204.5 ಮಿ.ಮೀ. ಮಳೆಯಾಗಲಿದೆ. ಆ, 8, 9ರಂದು 64.5ರಿಂದ 115.5 ಮಿ.ಮೀ. ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಭಾರಿ ದುರಂತ ತಪ್ಪಿದೆ. ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಬೃಹತ್ ಮರ ಉರುಳಿ ಬಿದ್ದಿದೆ. ಆದರೆ ಅದೃಷ್ಟವಾಶತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆಯಿಂದ ಆಗುಂಬೆ ಘಾಟಿನಲ್ಲಿ ವಾಹನ ಸಂಚಾರರಿಗೆ ಅಡಚಣೆ ಉಂಟಾಗಿತ್ತು.ಸೋಮೇಶ್ವರ ಕಡಿಯಿಂದ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ.
ಮಂಗಳೂರು/ಉಡುಪಿ: ಮುಂಗಾರು ಬಿರುಸು ಪಡೆದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆ. 4ರಿಂದ 6ರ ವರೆಗೆ ಕರಾವಳಿ ಭಾಗದಲ್ಲಿ “ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ವೇಳೆ ಭಾರೀ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ. ದ.ಕ. ಜಿಲ್ಲೆಯಾದ್ಯಂತ ಗುರುವಾರ ದಿನವಿಡೀ ಉತ್ತಮ ಮಳೆಯಾಗಿದೆ. ಮಂಗಳೂರು ನಗರ ದಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ವೇಳೆ ಮಳೆಯ ಬಿರುಸು ಹೆಚ್ಚಿತ್ತು. ಉಡುಪಿಯಲ್ಲಿ ಹಗಲು ಮೋಡದ ವಾತಾವಣ ಇದ್ದು, ಸಂಜೆಯ ಬಳಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ನಿರ್ವಹಿಸಲು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಸನ್ನದ್ಧವಾಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣ ದಳ (ಎನ್ಡಿಆರ್ಎಫ್)ದ 20 ಮಂದಿಯ ತಂಡ ಸುಬ್ರಹ್ಮಣ್ಯದಲ್ಲಿ ಸನ್ನದ್ಧವಾಗಿದೆ. ರಾಜ್ಯ ವಿಪತ್ತುದಳ (ಎಸ್ಡಿಆರ್ಎಫ್)ದ 55 ಮಂದಿಯ ತಂಡ ತಯಾರಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಗ್ನಿಶಾಮಕ ದಳ ಕಾರ್ಯಪ್ರವೃತ್ತವಾಗಿದೆ.
ಮಂಗಳೂರು; ತ್ರಿವಳಿ ಕೊಲೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೇರಲಾದ ನಿರ್ಬಂಧ ಕ್ರಮಗಳನ್ನು ಆ.5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ. ಆ.5ರಿಂದ ಅಂಗಡಿ ಮುಂಗಟ್ಟುಗಳನ್ನು ರಾತ್ರಿ 9 ರವರೆಗೆ ತೆರೆಯಲು ಅವಕಾಶ ನೀಡಲಾಗಿದ್ದು, ಮದ್ಯದಂಗಡಿಗಳನ್ನು ನಾಳೆಯಿಂದ ಸಂಜೆ 6 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ.
ಮಂಗಳೂರು: ತ್ರಿವಳಿ ಕೊಲೆ ಹಿನ್ನೆಲೆ ಈಗಾಲೆ ವಿಧಿಸಲಾಗಿದ್ದ ನಿಷೇಧಾಜ್ಞೆ ಹಂತ ಹಂತವಾಗಿ ಸಡಿಲಗೊಳಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿಕೊಂಡಿದೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಈ ಬಗ್ಗೆ ಸೂಚನೆ ನೀಡಿದ್ದಾರೆ. ಇನ್ನು ಆ.5 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿದೆ.ಆ.5 ರ ಬಳಿಕ ಹಂತಹಂತವಾಗಿ ನಿಷೇಧಾಜ್ಞೆ ಸಡಿಲಿಕೆಗೆ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಇದರ ಜೊತೆಗೆ ಸಡಿಲಿಕೆ ಬಳಿಕ ಒಂದು ವಾರ ಕಾಲ ಬೈಕ್ ನಲ್ಲಿ ಯುವಕರಿಗೆ ಹಿಂಬದಿ ಸವಾರಿಗೆ ಅವಕಾಶವಿಲ್ಲ. ಈ ವೇಳೆ ಮಕ್ಕಳು, ಮಹಿಳೆಯರು ಹಾಗೂ ಹಿರಿಯರ ನಾಗರಿಕರಿಗೆ ಬೈಕ್ ನಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.ಆದರೆ ಇಬ್ಬರು ಯುವಕರು ಹಿಂಬದಿ ಸವಾರಿ ಮಾಡದಂತೆ ಸೂಚನೆ ನೀಡಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ತಾತ್ಕಾಲಿಕವಾಗಿ ಈ ನಿಯಮ ಜಾರಿಯಲ್ಲಿರಲಿದೆ ಎನ್ನಲಾಗಿದೆ.










