ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಶಿವಾಜಿನಗರದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ವಿಟ್ಲ ಶಿವಾಜಿನಗರ ನೆಕ್ಕರೆ ಕಾಡು ನಿವಾಸಿ ಸುರೇಶ್(23) ಎಂದು ಗುರುತಿಸಲಾಗಿದೆ. ಸುರೇಶ್ ರವರು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ನೊಂದಿದ್ದು, ಈ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.
Author: main-admin
ನವದೆಹಲಿ: ದೇಶದಲ್ಲಿ ಮಂಕಿಪಾಕ್ಸ್ ಸೋಂಕು ದಿನೇ ದಿನೇ ಏರಿಕೆರಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಾರ್ವಜನಿಕರಿಗಾಗಿ ಕೆಲವು ಮಾರ್ಗಸೂಚಿಗಳನ್ನು ಬುಧವಾರ ಬಿಡುಗಡೆ ಮಾಡಿದೆ. ಸಾರ್ವಜನಿಕರು ಮಂಕಿಪಾಕ್ಸ್ ಸೋಂಕಿನಿಂದ ದೂರವಿರಲು ಕೈಗೊಳ್ಳಬೇಕಾದ ಅವಶ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಪ್ರಮುಖವಾಗಿ ಸೋಂಕಿತರ ಜತೆಗೆ ಮಲಗುವುದು, ಊಟ ಮಾಡುವುದು, ಅವರ ಬಟ್ಟೆ, ಟವಲ್ ಬಳಸುವುದು ಇತ್ಯಾದಿ ಮಾಡಬಾರದು. ಸೋಂಕಿತರ ಬಟ್ಟೆಗಳನ್ನು, ಆರೋಗ್ಯವಂತ ವ್ಯಕ್ತಿಗಳ ಬಟ್ಟೆಗಳೊಂದಿಗೆ ಸೇರಿಸಿ ತೊಳೆಯಬಾರದು. ಸೋಂಕಿನ ಲಕ್ಷಣಗಳು ಕಂಡು ಬಂದ ಕೂಡಲೇ ಸಾಮಾಜಿಕ ಸಭೆ, ಸಮಾರಂಭಗಳಿಂದ ದೂರ ಇರಬೇಕು ಎಂದು ಕೇಂದ್ರ ತಿಳಿಸಿದೆ. ಇನ್ನು ಐಸೋಲೇಷನ್ನಲ್ಲಿರುವ ಸೋಂಕಿತ ವ್ಯಕ್ತಿಯನ್ನು ಯಾರೂ ಸಂಪರ್ಕಿಸಬಾರದು. ಹ್ಯಾಂಡ್ ಸ್ಯಾನಿಟೈಸರ್ ಅಥವಾ ಸಾಬೂನಿನಿಂದ ಆಗಾಗ ಕೈಗಳನ್ನು ಶುಚಿಗೊಳಿಸಬೇಕು. =ಮೂಗು, ಬಾಯಿಯನ್ನು ಮಾಸ್ಕ್ ನಿಂದಲೂ, ಕೈಗಳನ್ನು ಹ್ಯಾಂಡ್ ಗ್ಲೌಸ್ಗಳಿಂದ ಕವರ್ ಮಾಡಿಕೊಳ್ಳಬೇಕು. ವಿಶೇಷವಬಾಗಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ, ಜನ ಇರುವಲ್ಲಿ ಈ ಮುನ್ನೆಚ್ಚರಿಕೆಗಳು ತೀರಾ ಅಗತ್ಯ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಮಳೆ ಬಿರುಸು ಪಡೆದಿದ್ದು, ಮುಂದಿನ ಎರಡು ದಿನ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಇಂದು ಮತ್ತು ನಾಳೆ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಶಿವಮೊಗ್ಗ, ಹಾಸನ, ತುಮಕೂರು, ಹಾವೇರಿ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರ ಶುಕ್ರವಾರ ಬೆಳಗಾವಿ, ಬಾಗಲಕೋಟೆ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಮಂಗಳೂರು: ಸುರತ್ಕಲ್ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಆರು ಮಂದಿ ಆರೋಪಿಗಳನ್ನು ನ್ಯಾಯಾಲಯವು 14 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳಾದ ಸುಹಾಸ್ ಶೆಟ್ಟಿ, ಮೋಹನ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್ ಮತ್ತು ಗಿರಿಧರ್ನನ್ನು ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಮೊದಲು ಬಂಧಿಸಲ್ಪಟ್ಟ ಕಾರು ಮಾಲಕ ಅಜಿತ್ ಕ್ರಾಸ್ತಾನನ್ನು ಈ ಹಿಂದೆಯೇ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು.
ಮಂಗಳೂರು: ಮುಂಗಾರು ಬಿರುಸು ಪಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ತಾಲೂಕಿನಲ್ಲಿ ಭಾರೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಆ.3 ರಿಂದ 5ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, “ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ವೇಳೆ ಭಾರೀ ಗಾಳಿ-ಮಳೆ, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ. ಮಂಗಳವಾರ ಬೆಳಗ್ಗೆ ಅಂತ್ಯಗೊಂಡ ಹಿಂದಿನ 24 ಗಂಟೆಯಲ್ಲಿ ಸುಬ್ರಹ್ಮಣ್ಯದಲ್ಲಿ ಜಿಲ್ಲೆಯಲ್ಲೇ ಅತ್ಯಧಿಕ ಮಳೆಯಾಗಿದ್ದು, 283.5 ಮಿ.ಮೀ. ಮಳೆಯಾಗಿದೆ. ಸಂಪಾಜೆಯಲ್ಲಿ 140 ಮಿ.ಮೀ. ಮಳೆಯಾಗಿದೆ. ಬೆಳ್ತಂಗಡಿಯಲ್ಲಿ 48.3 ಮಿ.ಮೀ., ಬಂಟ್ವಾಳ 37.8, ಮಂಗಳೂರು 42.4, ಪುತ್ತೂರು 38.7, ಸುಳ್ಯ 140.8 ಮಿ.ಮೀ., ಮೂಡುಬಿದಿರೆ 34.7, ಕಡಬ 99.3 ಮಿ.ಮೀ. ಮಳೆಯಾಗಿದೆ.
ಕಡಬ: ವಿವಾಹಿತ ಯುವತಿಯೋರ್ವಳನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವತಿಯು ತನ್ನ ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೇ.20 ರಂದು ರಾತ್ರಿ 10 ಗಂಟೆಗೆ ಪವನ್ ಎಂಬಾತ ಮದ್ಯಪಾನ ಮಾಡಿಕೊಂಡು ಯುವತಿಯನ್ನು ಅತ್ಯಾಚಾರಗೈದಿದ್ದಾನೆ. ಈ ಬಗ್ಗೆ ಯುವತಿ ಪೊಲೀಸ್ ಠಾಣೆಗೆ ದೂರು ನೀಡುತ್ತೇನೆ ಎಂದು ತಿಳಿಸಿದಾಗ ನಾನು ನಿನ್ನನ್ನು ಮದುವೆಯಾಗುತ್ತೇನೆ. ಪೊಲೀಸ್ ಕಂಪ್ಲೇಟ್ ಮಾಡಬೇಡ ಎಂದು ಹೇಳಿ ವಕೀಲರ ಮುಖಾಂತರ ಲಿಖಿತ ಒಪ್ಪಿಗೆ ನೀಡಿದ್ದನು. ಜೊತೆಗೆ ಇದಕ್ಕಾಗಿ ಯುವತಿಯ ಕೈಯಿಂದ 1,70,000 ರೂಪಾಯಿ ಹಣವನ್ನು ಪಡೆದುಕೊಂಡು ಈಗ ಮದುವೆಯಾಗುವುದಿಲ್ಲ ಎಂದು ವಂಚನೆ ಮಾಡಿದ್ದಾಗಿ ಯುವತಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಅದರನ್ವಯ ಯುವಕನ ಮೇಲೆ ಪ್ರಕರಣ ದಾಖಲಾಗಿದೆ.
ಉಳ್ಳಾಲ; ಉಳ್ಳಾಲದಲ್ಲಿ ಯಾವುದೇ ತಲವಾರು ದಾಳಿ ಯತ್ನ ನಡೆದಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಯಾರೂ ವದಂತಿ ಹಬ್ಬಿಸಬೇಡಿ, ವದಂತಿ ಮಾಡಿದವನ ವಿಚಾರಣೆ ನಡೆದಿದೆ. ಆತನ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ವ್ಯಕ್ತಿಯೋರ್ವ ತನ್ನನ್ನು ಬೆನ್ನು ಹಟ್ಟಿ ತಲವಾರು ದಾಳಿ ನಡೆಸಲು ಯತ್ನಿಸಿದ್ದಾನೆ ಎಂಬ ವದಂತಿ ಹಬ್ಬಿಸಿದ್ದ. ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ವದಂತಿ ನಡೆದಿದೆ. ಉಚ್ಚಿಲ ನಿವಾಸಿ ಕಿಶೋರ್ ಎಂಬಾತ ಈ ರೀತಿ ವದಂತಿ ಹಬ್ಬಿಸಿದಾತ. ಈತ ಇಂದು ಬೆಳಗ್ಗೆ ಕೆ.ಸಿ.ನಗರ ಮುಳ್ಳುಗುಡ್ಡೆ ಎಂಬಲ್ಲಿ ತನ್ನನ್ನು ಯಾರೋ ಬೆನ್ನಟ್ಟಿ ತಲವಾರು ದಾಳಿಗೆ ಯತ್ನಿಸಿದ್ದಾರೆ ಎಂದು ವದಂತಿ ಹಬ್ಬಿಸಿದ್ದ.ಈ ಬಗ್ಗೆ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಕುದ್ದು ವಿಚಾರಣೆ ನಡೆಸಿದ್ದು, ಇದೀಗ ಘಟನೆ ಸುಳ್ಳು ಎಂದು ಹೇಳಿದ್ದಾರೆ.
ಸುಳ್ಯ; ಭಾರೀ ಮಳೆ ಹಿನ್ನೆಲೆ ಉಂಟಾದ ಪ್ರವಾಹದ ನೀರಿಗೆ ಬಿದ್ದ ಯುವಕನನ್ನು ಜೀವದ ಹಂಗು ತೊರೆದು ರಕ್ಷಿಸಿ ವ್ಯಕ್ತಿಯೋರ್ವರು ಸುದ್ದಿಯಾಗಿದ್ದಾರೆ. ಶರೀಫ್ ಎಂಬಾತನನ್ನು ಜೀವದ ಹಂಗು ತೊರೆದು ಸೋಮಶೇಖರ್ ಎಂಬವರು ರಕ್ಷಿಸಿ ಮಾನವೀಯತೆ ಮೆರೆದಿದ್ದು, ಕಳೆದ ಕೆಲ ದಿನಗಳಿಂದ ಅಹಿತಕರ ಘಟನೆಗೆ ಸಾಕ್ಷಿಯಾಗಿದ್ದ ಕರಾವಳಿಯಲ್ಲಿ ಸೌಹಾರ್ದತೆಯ ಸಂದೇಶವನ್ನು ಸಾರಲಾಗಿದೆ. ಸುಳ್ಯ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಮುಂದುವರೆದಿದ್ದು, ಸುಬ್ರಹ್ಮಣ್ಯ ಸಮೀಪದ ಹರಿಹರ ಪಳ್ಳತ್ತಡ್ಕ ಎಂಬಲ್ಲಿ ಪ್ರವಾಹದ ನೀರಿನಲ್ಲಿ ಬಂದು ಹರಿಹರಪಳ್ಳತ್ತಡ್ಕ ಸೇತುವೆ ಮೇಲೆ ಸಿಲುಕಿದ್ದ ಮರಗಳನ್ನು ಜೆಸಿಬಿ ತೆರವುಗೊಳಿಸುತ್ತಿತ್ತು. ಈ ಸಂದರ್ಭದಲ್ಲಿ ಕ್ರೇನ್ ಆಪರೇಟರ್ ಶರೀಫ್ ನಿಯಂತ್ರಣ ತಪ್ಪಿ ಪ್ರವಾಹದ ನೀರಿಗೆ ಬಿದ್ದಿದ್ದಾನೆ. ತಕ್ಷಣವೇ ನದಿಗೆ ಹಾರಿ ಶರೀಫ್ ಅವರನ್ನು ಸೋಮಶೇಖರ್ ಕಟ್ಟೆಮನೆ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ಮಂಗಳೂರು: ಅಹಿತಕರ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ನೂತನ ಆದೇಶದ ಹಿನ್ನಲೆಯಲ್ಲಿ ಆ.5ರ ಬೆಳಗ್ಗೆ 6ವರೆಗೆ ನಿರ್ಬಂಧ ಮುಂದುವರಿಯಲಿದೆ. ಇತ್ತೀಚಿಗೆ ಬೆಳ್ಳಾರೆ ಮತ್ತು ಸುರತ್ಕಲ್ನಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಂಜೆ 6ರಿಂದ ಮುಂಜಾನೆ 6ರವರೆಗೆ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿತ್ತು. ಇದರ ಜೊತೆಗೆ ಆ.6ರ ತನಕ ಜಿಲ್ಲೆಯಲ್ಲಿ ನಿಷೇಧಾಜ್ಞೆಯೂ ಜಾರಿಯಲ್ಲಿದೆ.
ಸುರತ್ಕಲ್; ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪ್ರಮುಖ ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು ಈ ಬಗ್ಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮಿಷನರ್ ಶಶಿಕುಮಾರ್, ಪ್ರಕರಣಕ್ಕೆ ಸಂಬಂಧಿಸಿ ಆರು ಜನರ ಬಂಧನವಾಗಿದೆ ಎಂದು ಹೇಳಿದ್ದು, ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿ ಶ್ರೀನಿವಾಸ್ ಕಾಟಿಪಳ್ಳ (23), ಅಭಿಷೇಕ್ (23) ದೀಕ್ಷಿತ್ ಕಾಟಿಪಳ್ಳ (21), ಸುಹಾಸ್ ( 29), ಮೋಹನ್ (23) ಮತ್ತು ಗಿರೀಶ್ (27) ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಅಪರಾಧ ಹಿನ್ನೆಲೆಯುಳ್ಳವರಾಗಿದ್ದಾರೆ ಎಂದು ತಿಳಿದುಬಂದಿದೆ. ಬಜಪೆಯ ಸುಹಾಸ್ ಶೆಟ್ಟಿ ಎಂಬಾತ ಅಭಿಷೇಕ್ ಮೂಲಕ ಹತ್ಯೆಗೆ ಮೊದಲು ಸ್ಕೆಚ್ ಹಾಕಿದ್ದಾರೆ. ಜುಲೈ 27ರಂದು ಸುರತ್ಕಲ್ನ ಒಂದು ಜಾಗದಲ್ಲಿ ಅಭಿಷೇಕ್, ಶ್ರೀನಿವಾಸ ಹಾಗೂ ಉಳಿದವರನ್ನ ಸೇರಿಸಿ ಹತ್ಯೆಗೆ ಸಂಚು ರೂಪಿಸಿದ್ದಾನೆ. ಮೋಹನ್ ಮತ್ತು ಗಿರಿಧರ್ ಮಧ್ಯಾಹ್ನದ ವೇಳೆಗೆ ಅಜಿತ್ ಕ್ರಾಸ್ತಾ ಅವರ ಕಾರನ್ನು 15 ಸಾವಿರ ರೂಪಾಯಿಗೆ ಡೀಲ್ ಮಾಡಿ ತರುತ್ತಾರೆ ಎಂದರು.ಜುಲೈ…









