ಸುಳ್ಯ: ಭಾರೀ ಶಬ್ದದೊಂದಿಗೆ ಇಂದು ಬೆಳ್ಳಂ ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದ ಘಟನೆ ಸಂಪಾಜೆ ಹಾಗು ಸಮೀಪದ ಪ್ರದೇಶ, ಅರಂತೋಡು, ತೊಡಿಕಾನ, ಸೇರಿ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಗಡಿ ಪ್ರದೇಶಗಳಾದ ಚೆಂಬು, ಕಲ್ಲಪಳ್ಳಿ ಭಾಗದಲ್ಲಿ ಜನರ ಅನುಭವಕ್ಕೆ ಬಂದಿದೆ. ಹೌದು ಜೂ.10 ರಂದು ಬೆಳಿಗ್ಗೆ 6.23ಕ್ಕೆ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ ಎಂದು ಜನ ತಮ್ಮ ಅನುಭವವನ್ನು ದೂರವಾಣಿ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ. ಕಲ್ಲಪಳ್ಳಿ ಭಾಗದಲ್ಲಿ ಸ್ವಲ್ಪ ಹೆಚ್ಚು ತೀವ್ರತೆ ಇರುವಂತೆ ಭಾರೀ ಶಬ್ದದೊಂದಿಗೆ ಭೂ ಕಂಪನದ ಅನುಭವ ಆಯಿತು ಎಂದು ಹಲವರು ಹೇಳಿದ್ದಾರೆ. ವಾರದ ಬಳಿಕ ಇದೀಗ ಮತ್ತೆ ಭೂಮಿ ನಡುಗಿದೆ. ಜೂ.25 ಮತ್ತು ಜುಲೈ 1 ರ ನಡುವೆ ಹಲವು ದಕ್ಷಿಣ ಕನ್ನಡ ಹಾಗು ಕೊಡಗಿನ ಗಡಿ ಭಾಗದಲ್ಲಿ ಭಾರೀ ಶಬ್ದದೊಂದಿಗೆ ಲಘು ಭೂ ಕಂಪನ ಉಂಟಾಗಿತ್ತು. ಇದೀಗ ಭೂಮಿ ಮತ್ತೆ ಕಂಪಿಸಿದ್ದು ಜನರ ಆತಂಕ ಹೆಚ್ಚಿದೆ.
Author: main-admin
ಮಂಗಳೂರು;ಗಾಂಜಾವನ್ನು ಹೊಂದಿದ್ದ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅನಂತು ಕೆ ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್(21) ಶಾನೂಫ್ (21), ಮುಹಮ್ಮದ್ ರಸೀನ್(22), ಗೋಕುಲ ಕೃಷ್ಣನ್ (22), ಶಾರೂನ್ ಆನಂದ(19), ಫಹಾದ್ ಹಬೀಬ್(22), ಮುಹಮ್ಮದ್ ರಿಶಿನ್(22), ರಿಜಿನ್ ರಿಯಾಝ್(22) ಬಂಧಿತರು. ಮಂಗಳೂರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ ಐ ರಾಜೇಂದ್ರ ಬಿ ರವರ ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರು ವೆಲೆನ್ಸಿಯಾ ಬಳಿ ವಸತಿಗೃಹಕ್ಕೆ ದಾಳಿ ನಡೆಸಿ ಗಾಂಜಾವನ್ನು ಹೊಂದಿದ 12 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 900 ಗ್ರಾಂ ತೂಕದ ರೂ. 20,000 ಮೌಲ್ಯದ ಗಾಂಜಾ ಸೇರಿ 2 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಟ್ವಾಳ: ಅಮರನಾಥ ಯಾತ್ರೆ ಕೈಗೊಂಡಿರುವ ಬಂಟ್ವಾಳದ 30 ಮಂದಿಯ ತಂಡ ಸುರಕ್ಷಿತವಾಗಿದೆ. ಈ ಕುರಿತು ಶಾಸಕ ರಾಜೇಶ್ ನಾಯ್ಕ್ ಅವರ ನಿರ್ದೇಶನದಂತೆ ಬಂಟ್ವಾಳ ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ ಅವರು ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಬಂಟ್ವಾಳದ ಯಶೋಧರ ಕರ್ಬೆಟ್ಟು, ಸಂತೋಷ್ ರಾಯಿಬೆಟ್ಟು, ಸುರೇಶ್ ಕೋಟ್ಯಾನ್ ಸಹಿತ ಮೂವತ್ತು ಮಂದಿಯೂ ಸೇಫ್ ಆಗಿ ದರ್ಶನ ಪಡೆದು ಬರುವ ವಿಶ್ವಾಸವನ್ನು ಹೊಂದಿದ್ದಾರೆ. ನಾವು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಿಂದ ಬಂದಿದ್ದೇವೆ. ಕೇವಲ 28 ಕಿಲೊ ಮೀಟರ್ ಅಂತರದಲ್ಲಿ ನಾವು ಅಮರನಾಥ ತಲುಪಲಿದ್ದು, ಸೈನ್ಯದ ಸಹಾಯದಿಂದ ನಾವು ನಾಳೆ ಬೆಳಗ್ಗೆ ತಲುಪುವ ನಿರೀಕ್ಷೆಯಲ್ಲಿದ್ದೇವೆ. ಇಲ್ಲಿ ಸೈನಿಕರು ನಮ್ಮನ್ನು ಸುರಕ್ಷಿತವಾಗಿಟ್ಟಿದ್ದು, ನಿನ್ನೆ ನಡೆದ ದುರ್ಘಟನೆಯಿಂದ ದೂರದ ಪ್ರದೇಶದಲ್ಲಿ ನಾವಿದ್ದು, ಯಾವುದೇ ಅಪಾಯ ಇಲ್ಲಿಲ್ಲ ಎಂದು ತಂಡದ ಸದಸ್ಯ ಬಿ.ಸಿ.ರೋಡ್ ನರಿಕೊಂಬು ನಿವಾಸಿ ಸುರೇಶ್ ಕೋಟ್ಯಾನ್ ತಿಳಿಸಿದ್ದಾರೆ. ರಕ್ಷಣಾ ಕಾರ್ಯ ನಡೆಸುವ ಸೈನಿಕರು ಉತ್ತಮ ಸಹಕಾರ ನೀಡುತ್ತಿದ್ದಾರೆ, ನಾಳೆ ಬೆಳಿಗ್ಗೆ ಅಮರನಾಥ ದಲ್ಲಿ ದರ್ಶನ ಭಾಗ್ಯ…
ಕಾರ್ಕಳ: ದನಗಳನ್ನು ಕದ್ದು ಅವುಗಳನ್ನು ಹತ್ಯೆಗೈದು ಮಾಂಸ ಮಾರಾಟ ಮಾಡುತ್ತಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಸಾಣೂರು ಮೈಲೊಟ್ಟು ನಿವಾಸಿ ಅಬ್ದುಲ್ ರಹಿಮಾನ್(30), ಸಾಣೂರು ನಿವಾಸಿ ರಜಾಕ್ ಹಾಗೂ ಶರೀಫ್ ಬಂಧಿತ ಆರೋಪಿಗಳು. ಸಾಣೂರು ಗ್ರಾಮದ ಸಾಣೂರು ಸೇತುವೆಯ ಬಳಿಯ ಅಬ್ದುಲ್ ರಹಿಮಾನ್ ಮನೆಯ ಶೆಡ್ನಲ್ಲಿ ಕಳವು ಮಾಡಿ ತಂದ ದನವನ್ನು ಕಡಿದು ಮಾರಾಟ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣವೇ ಕಾರ್ಕಳ ನಗರ ಠಾಣಾ ಪಿಎಸ್ಐ ಪ್ರಸನ್ನ ನೇತೃತ್ವದಲ್ಲಿ ಪೊಲೀಸ್ ತಂಡವು ಶುಕ್ರವಾರ ಸಂಜೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 10 ಸಾವಿರ ರೂ ಮೌಲ್ಯದ 27 ಕೆಜಿ ದನದ ಮಾಂಸ ಹಾಗೂ ಕತ್ತಿ, ದನ ಸಾಗಾಟಕ್ಕೆ ಬಳಸಲಾದ ಗೂಡ್ಸ್ ವಾಹನ ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಎಎಸೈ ದಾಮೋದರ, ಕಾನ್ಸ್ಟೇಬಲ್ ಗಳಾದ ಸಿದ್ದರಾಯಪ್ಪ, ಪ್ರತಾಪ್ ಹಾಗೂ ಪ್ರಭು ಅಥಣಿ ಪಾಲ್ಗೊಂಡಿದ್ದರು. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕಡಬ: ಶಿರಾಡಿ ಗ್ರಾಮದ ಗುಂಡ್ಯ ಬಳಿಕ ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನದಿಂದ ತುಸು ದೂರ ಗುಂಡ್ಯ ಹೊಳೆ ಬದಿ ಗಂಡು ಆನೆ ಮರಿಯ ಶವವೊಂದು ನಿನ್ನೆ (ಜು.8ರಂದು) ಪತ್ತೆಯಾಗಿದೆ. ಸಕಲೇಶಪುರ ವಲಯ ಅರಣ್ಯ ವ್ಯಾಪ್ತಿಯ ಮಾರನಹಳ್ಳಿ ಶಾಖೆ ಕೆಂಪುಹೊಳೆ ಮೀಸಲು ಅರಣ್ಯ ಪ್ರದೇಶದಲ್ಲಿ ಆನೆಮರಿ ಶವ ಪತ್ತೆಯಾಗಿದೆ. ಆನೆ ಮರಿಗೆ ಸುಮಾರು 5 ತಿಂಗಳು ಆಗಿರಬಹುದು. ತಾಯಿ ಆನೆಯೊಂದಿಗೆ ಮರಿ ಆನೆ ಆಹಾರ ಹುಡುಕುತ್ತಾ ಬರುವ ವೇಳೆ ಗುಡ್ಡದಿಂದ ಜಾರಿ ಬಿದ್ದಿರಬಹುದು ಅಥವಾ ಹೊಳೆ ದಾಟುವಾಗ ನೀರಿನೊಂದಿಗೆ ಕೊಚ್ಚಿಕೊಂಡು ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮಾರನಹಳ್ಳಿ ಉಪವಲಯ ಅರಣ್ಯ ಅಧಿಕಾರಿ ಮಂಜುನಾಥ್, ಉಪ್ಪಿನಂಗಡಿ ಅರಣ್ಯ ವಲಯ ವ್ಯಾಪ್ತಿಯ ಶಿರಾಡಿ ಅರಣ್ಯಾಧಿಕಾರಿ ಧೀರಜ್, ಅರಣ್ಯ ರಕ್ಷಕ ಸುನಿಲ್ರವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಜನರು ಈಗಾಗಲೇ ತತ್ತರಿಸಿ ಹೋಗಿದ್ದಾರೆ. ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೇ ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 9ರಿಂದ ಮೂರು ದಿನ ಭಾರೀ ಮಳೆಯಾಗಲಿದೆ. ಹಲವು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಯೆಲ್ಲೋ ಅಲರ್ಟ್ ಕೂಡ ಹವಾಮಾನ ಇಲಾಖೆ ಘೋಷಿಸಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಹಲವಡೆ ಭಾರೀ ಮಳೆಯಾದರೇ, ಇನ್ನುಳಿದೆಡೆ ಜಿಟಿ ಜಿಟಿ ಮಳೆಯಾಗಿದೆ. ಇಂದೂ ಸಹ ನಗರದಲ್ಲಿ ತುಂತುರು ಮಳೆ ನಿರೀಕ್ಷೆ ಮಾಡಲಾಗಿದೆ.
ದಕ್ಷಿಣ ಕನ್ನಡ : ವಿಪರೀತ ಮಳೆಯ ಪ್ರಭಾವದಿಂದ ಅನೇಕ ಮನೆಗಳು, ರಸ್ತೆಗಳು, ಸೇತುವೆಗಳು ಹಾನಿಯಾಗಿದೆ. ಅಷ್ಟೇ ಅಲ್ಲದೇ, ಅನೇಕ ಅಪಘಾತಗಳು ನಡೆಯುತ್ತಿದೆ. ಇದರ ಪರಿಣಾಮವಾಗಿ ನಮ್ಮ ಜಿಲ್ಲಾಧಿಕಾರಿಗಳು ಈ ರೀತಿ ಘಟನೆಗಳು ಸಂಭವಿಸಿದರೆ, ಆಯಾಯ ಕಚೇರಿಗಳಿಗೆ ಮಾಹಿತಿಯನ್ನು ತಿಳಿಸಲು ಹೇಳಿದ್ದಾರೆ. ಕಚೇರಿಗಳ ದೂರವಾಣಿ ಸಂಖ್ಯೆಯನ್ನು ಕೊಟ್ಟಿದ್ದು, ಸಹಾಯಕ್ಕಾಗಿ ಈ ನಂಬರ್ ಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ. ಜಿಲ್ಲಾಧಿಕಾರಿ ಕಚೇರಿ ಮತ್ತು ಜಿಲ್ಲಾವಿಪತ್ತು ನಿರ್ವಹಣಾ ಪ್ರಾಧಿಕಾರ, ನಿಯಂತ್ರಣ ಕೊಠಡಿ 1077/ 0824-2442590 ಮೊ.9483908000 ಮಂಗಳೂರು ಮಹಾನಗರ ಪಾಲಿಕೆ : 0824-2220306, 0824-2220319 ಮೆಸ್ಕಾಂ ದ. ಕ. ಜಿಲ್ಲೆ 1912 ಮಂಗಳೂರು ತಾಲೂಕು ಕಚೇರಿ 0824 -2220587/596 ಬಂಟ್ವಾಳ ತಾಲೂಕು ಕಚೇರಿ 08255-232129/232500 ಪುತ್ತೂರು ತಾಲೂಕು ಕಚೇರಿ 08251-230349/232799 ಬೆಳ್ತಂಗಡಿ ತಾಲೂಕು ಕಚೇರಿ 08256-232047/233123 ಸುಳ್ಯ ತಾಲೂಕು ಕಚೇರಿ : 08257-230330,1231231/298339 ಮೂಡುಬಿದ್ರೆ ತಾಲೂಕು ಕಚೇರಿ 08258-238109/239900 ಕಡಬ ತಾಲೂಕು ಕಚೇರಿ : 08251-269435 ಮೂಲ್ಕಿ ತಾಲೂಕು ಕಚೇರಿ 0824-2294496 ಉಳ್ಳಾಲ ತಾಲೂಕು ಕಚೇರಿ:…
ಸುರತ್ಕಲ್ : ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕ ನನ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಗೋಕುಲ ನಗರ ನಿವಾಸಿ ಲೋಕೇಶ್ ಕುಲಾಲ್ (38) ಎಂದು ತಿಳಿದು ಬಂದಿದೆ. ಲಾರಿ ಚಾಲಕನ ಅಜಾಗರೂಕತೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ.ಸುಮಾರು ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಲೋಕೇಶ್ ಅವರನ್ನು ರಕ್ಷಿಸಲಾಗಿದೆ.ಸ್ಕೂಟರ್ ಸವಾರರೊಬ್ಬರು ಅವಘಡದಲ್ಲಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಮುಸ್ಲಿಂ ಜನಾಂಗದ ಪ್ರಮುಖ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಇದೇ ಜುಲೈ 10ರಂದು ರಾಜ್ಯದಾದ್ಯಂತ ಆಚರಿಸಲಾಗುವುದು. ಹಬ್ಬವನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಕೆಲ ಕಾನೂನು ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸರ್ಕಾರ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸುವವರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿ ನೆರವೇರಿಸಬೇಕು. ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ ಕಾಲೇಜು, ಆಸ್ಪತ್ರೆ ಆವರಣಗಳಲ್ಲಿ ಖುರ್ಬಾನಿಯನ್ನು ನಿಷೇಧಿಸಲಾಗಿದೆ. ಸ್ಥಳೀಯಾಡಳಿತ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿ ನೆರವೇರಿಸಬೇಕು. ಖುರ್ಬಾನಿ ನೆರವೇರಿಸುವಾಗ ಶುಚಿತ್ವ ಮತ್ತು ನೈರ್ಮಲ್ಯವನ್ನು ಕಡ್ಡಾಯವಾಗಿ ಕಾಪಾಡಬೇಕು. ಪ್ರಾಣಿ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಪೊಲೀಸ್ ಇಲಾಖೆ, ಪಶು ಪಾಲನಾ ಮತ್ತು ಪಶು ವೈದ್ಯ ಸೇವೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀಡುವ ಸಾಮಾನ್ಯ ಹಾಗೂ ಸ್ಥಳೀಯವಾಗಿ ನೀಡುವ ನಿರ್ದೇಶಗಳನ್ನು ಕಡ್ಡಾಯವಾಗಿ…
ಹಾಸನ: ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಹಾಸನದ ಬಿ.ಟಿ.ಕೊಪ್ಪಲು ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಸೀಮಾ ಮತ್ತು ಇವರ ಪುತ್ರ ಮಯೂರ(10) ಮೃತ ದುರ್ದೈವಿಗಳು. ಮಗನನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಸೀಮಾ ಕರೆದೊಯ್ಯುತ್ತಿದ್ದರು. ಮಾರ್ಗಮಧ್ಯೆ ಯಮನಂತೆ ಬಂದ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ತಾಯಿ-ಮಗ ದುರಂತ ಅಂತ್ಯ ಕಂಡಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










