ಬೆಂಗಳೂರು: ಕೋಮುಗಲಭೆಯಲ್ಲಿ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳು ಮೊದಲೆರಡು ಸ್ಥಾನ ಪಡೆದಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ವರದಿಲ್ಲಿ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಇನ್ನು ರೌಡಿಸಂನಲ್ಲಿ ಉಡುಪಿ, ಕೋಲಾರ ಅಗ್ರಸ್ಥಾನ ಪಡೆದಿದ್ದು, ಕಳೆದ ಐದು ವರ್ಷಗಳಲ್ಲಿ ಪ್ರಕರಣ ಆಧರಿಸಿ ಈ ವರದಿಯನ್ನ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 242 ಕೋಮುಗಲಭೆ ಕೇಸ್ ದಾಖಲಾಗಿದ್ದು, ಇದರಲ್ಲಿ ದಕ್ಷಿಣ ಕನ್ನಡ 57, ಶಿವಮೊಗ್ಗ 48 ಕೇಸ್ ದಾಖಲಾಗಿದೆ. ಅದರಂತೆ ಬಾಗಲಕೋಟೆ 28, ದಾವಣಗೆರೆ 18, ಹಾವೇರಿ 18 ಕೋಮುಗಲಭೆ ಪ್ರಕರಣಗಳು ನಡೆದಿವೆ. ಇನ್ನೂ ರೌಡಿಸಂನಲ್ಲಿ ಒಟ್ಟು 1431 ಪ್ರಕರಣಗಳು ದಾಖಲಾಗಿದ್ದು, ಇದ್ರಲ್ಲಿ ಉಡುಪಿ 421, ಕೋಲಾರ 165, ದಕ್ಷಿಣಕನ್ನಡ 152, ಬೆಂಗಳೂರು ನಗರ 80, ಕಲಬುರಗಿ 97, ಶಿವಮೊಗ್ಗದಲ್ಲಿ 158 ಕೇಸ್ ದಾಖಲಾವೆ. ಮೂರು ವರ್ಷದಲ್ಲಿ 4 ಮತೀಯ ಕೊಲೆ ಆಗಿದ್ದು, ಗಲಭೆಯಲ್ಲಿ 280 ಪೊಲೀಸರಿಗೆ ದೈಹಿಕ ಹಾನಿಯಾಗಿದೆ ಎಂದು ವರದಿ ತಿಳಿಸಿದೆ.
Author: main-admin
ಬೆಂಗಳೂರು: ಬಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯೂನಿಟ್ ಉಚಿತ ವಿದ್ಯುತ್ ವಿತರಣೆಯ ಯೋಜನೆಯನ್ನು ಹಿಂಪಡೆದಿಲ್ಲ. ಇನ್ನಷ್ಟು ಸರಳೀಕರಣ ಮಾಡಿ ಇದೇ ತಿಂಗಳಿನಿಂದ ಹಣ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಸ್ಮಾ ದೇವಿ ಮಂದಿರದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಉದ್ಘಾಟನೆ ಹಾಗೂ 43ನೇ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಬಿಸಿಲು, ಗಾಳಿ, ಮಳೆ ಎನ್ನದೇ ಬಹಳ ಕಠಿಣ ಪರಿಶ್ರಮದಿಂದ ದುಡಿಯುವುದು ಈ ಭೋವಿ ಸಮಾಜದ ಮೂಲ ಗುಣ. ಭೋವಿ ಸಮಾಜದೊಂದಿಗೆ ನಮ್ಮದು 30 ವರ್ಷದ ಸಂಬಂಧವಿದೆ. ನಮ್ಮ ತಂದೆಯವರೊಂದಿಗೆ ಈ ಸಮಾಜ ಅನೋನ್ಯವಾಗಿತ್ತು. ಹುಬ್ಬಳ್ಳಿಯಲ್ಲಿ ಜಿ.ಎಸ್ ಬಿಳಗಿಯವರು, ಶಿವಮೊಗ್ಗದಲ್ಲಿ ಜಿ. ಬಸವಣ್ಣಪ್ಪ ಮಂತ್ರಿಯಾಗಿದ್ದರು. ಇವರು ನಮ್ಮ ತಂದೆಯವರೊಂದಿಗೆ ಅತ್ಯಂತ ನಿಕಟ ಒಡನಾಟ ಹೊಂದಿದ್ದರು ಎಂದು ಸ್ಮರಿಸಿದರು. ಬೆಂಗಳೂರಿನಲ್ಲಿ ಇಬ್ಬರು ಈ ಸಮಾಜದಿಂದ ಶಾಸಕರಾಗಿರುವುದು ಹೆಮ್ಮೆಯ ವಿಚಾರ. ಅರವಿಂದ ಲಿಂಬಾವಳಿ ಮತ್ತು ರಘು ಅವರು ನಿರಂತರವಾಗಿ…
ಚಿನ್ನವನ್ನು ಪಾಲಿಶ್ ಮಾಡುವ ನೆಪದಲ್ಲಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದ ಸಂಶಯದ ಮೇರೆಗೆ ಬಿಹಾರ ಮೂಲದ ಇಬ್ಬರ ವಿರುದ್ದ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳೀಯ ನಿವಾಸಿ ಕಿಶೋರ್ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಸೆ.17 ರಂದು ಸಂಜೆ ವೇಳೆ ಕಿಶೋರ್ ಅವರ ಮನೆಯ ಬಳಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದಿದ್ದು, ಹಿಂದಿಯಲ್ಲಿ ಮಾತನಾಡುತ್ತಾ ನಿಮ್ಮಲ್ಲಿ ಚಿನ್ನವಿದ್ದರೆ ಕೊಡಿ ಅದನ್ನು ಪಾಲಿಶ್ ಮಾಡಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಅದಕ್ಕೆ ಕಿಶೋರ್ ಅವರು ನೀವು ಯಾವ ರೀತಿಯಲ್ಲಿ ಚಿನ್ನಪಾಲಿಶ್ ಮಾಡುತ್ತೀರಿ ಎಂದು ಕೇಳಿದಾಗ ಅವರು ತಮ್ಮಲ್ಲಿದ್ದ ಬ್ಯಾಗ್ ನಲ್ಲಿದ್ದ ದ್ರಾವಣ ಇತರ ಸಲಕರಣೆಗಳನ್ನು ತೆರೆದು ತೋರಿಸಿ ಇವುಗಳಿಂದ ಚಿನ್ನ ಪಾಲೀಶ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆ ಅವರ ಮೇಲೆ ಸ್ವಲ್ಪ ಸಂಶಯ ಬಂದು ಅವರ ಹೆಸರು ಕೇಳಿದಾಗ ಅವರಲ್ಲಿ ಓರ್ವನ ಹೆಸರು ಆನಂದ ಕಿಶೋರ್ ಮೆಹ್ತಾ ಹಾಗೂ ಮತ್ತೋರ್ವ ನ ಹೆಸರು ಮನೋಜ್ ಯಾದವ್ ಎಂದು ಹೇಳಿದ್ದು, ಬಿಹಾರದಿಂದ…
ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನ ನಡೆದೇ ಇದೆ. ಹಾಗೆಂದು ನಾವು ಅದಕ್ಕೆ ಸೀಮಿತವಾಗದೇ ನಮ್ಮ ಭಾಷೆ, ಮೂಲ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಹಯೋಗದೊಂದಿಗೆ ನಡೆಯುತ್ತಿರುವ ತುಳು ವೆಬಿನಾರ್ನ ನೂರನೇ ಸಂಚಿಕೆಯನ್ನು ಉದ್ಘಾಟಸಿ ಆಶೀರ್ವಚನ ನೀಡಿದ ಅವರು, ಎಲ್ಲಿದ್ದರೂ ಸತ್ಯ, ಧರ್ಮ, ಸಹಬಾಳ್ವೆಯ ದಾರಿಯಲ್ಲಿ ನಡೆಯಲು ಹೇಳಿಕೊಟ್ಟಿರುವ ತುಳು ಭಾಷೆ, ಸಂಸ್ಕೃತಿಯ ಬಗ್ಗೆ ಶ್ರೀ ಧರ್ಮಸ್ಥಳ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನ ಕೆಲಸ ಮಾಡುತ್ತಿದೆ. ತುಳುನಾಡಿನ ಜಾನಪದ ಔಷಧಿಗಳು, ಬೆಳೆಗಳ ಕುರಿತಂತೆ ಇನ್ನಷ್ಟೂ ಅಧ್ಯಯನ ಪೀಠದ ಮೂಲಕ ನಡೆಯಬೇಕಾಗಿದೆ, ಎಂದರು. ತುಳು ಭಾಷೆ ಬೆಳೆದು ಬಂದ ದಾರಿಯ ಕುರಿತು ವಿಶೇಷ ಉಪನ್ಯಾಸ ನೀಡಿದ ತುಳು-ಕನ್ನಡ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ. ಬಿ ಎ ವಿವೇಕ ರೈ, ತುಳು ತಮಿಳಿನ…
ಮದರಸಾದಲ್ಲಿ 11ರ ಹರೆಯದ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಉಸ್ತಾನ್ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಮದರಸದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ನಡೆದಿತ್ತು. ನೊಂದ ಬಾಲಕನ ತಂದೆ ಮೊಹಮ್ಮದ್ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಾಲಕನಿಗೆ ಹಲ್ಲೆ ನಡೆದಿರುವ ಘಟನೆ ಶನಿವಾರ ಸಂಜೆ ವೇಳೆ ಸಂಭವಿಸಿದೆ. ದೂರಿನ ಹಿನ್ನೆಲೆಯಲ್ಲಿ ಶಿಕ್ಷಕ ಉಸ್ತದ್ ಯಹ್ಯಾ ಫೈಝಿಯನ್ನು ಬಂಧಿಸಲಾಗಿದೆ.ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ 11 ವರ್ಷದ ಬಾಲಕ ಹಫೀಲ್ ಅಹಮ್ಮದ್ ದೇಹದ ಮೇಲೆ ಬಾಸುಂಡೆ ಬರುವಂತೆ ಶಿಕ್ಷಕ ಹೊಡೆದಿದ್ದ.ಮದರಸಕ್ಕೆ ತೆರಳಿದ್ದ ಬಾಲಕನಿಗೆ ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಶಿಕ್ಷಕ ಉಸ್ತದ್ ಯಹ್ಯಾ ಫೈಝಿ ಎಂಬಾತ ಹಲ್ಲೆ ನಡೆಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಂಗಳೂರು: ವಿಶ್ವಸಾಗರ ದಿನಾಚರಣೆಯ ಅಂಗವಾಗಿ ಇಂದು ‘ಸ್ವಚ್ಛ ಕರಾವಳಿ ಸುರಕ್ಷಿತ ಸಾಗರ’ ಎಂಬ ಅಭಿಯಾನದಡಿ ಪಣಂಬೂರು ಕಡಲ ತೀರವನ್ನು ಸ್ವಚ್ಛಗೊಳಿಸಲಾಯಿತು. ಭಾರತ ಸರಕಾರದ ಭೂವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದ.ಕ.ಜಿಲ್ಲಾಡಳಿತದ ವತಿಯಿಂದ ಕಡಲ ತೀರ ಸ್ವಚ್ಛತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್ಸವ ಕಾರ್ಯಕ್ರಮವು ನಡೆಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಕೋಸ್ಟ್ಗಾರ್ಡ್, ಎನ್ಸಿಸಿ, ಎನ್ ಎಸ್ ಎಸ್, ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯರ ಸಹಕಾರದಿಂದ ಕಡಲ ಸ್ವಚ್ಛತೆಯನ್ನು ಮಾಡಲಾಯಿತು. ಈ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾಡಿ, ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ದೇಶದಲ್ಲಿ ಸ್ವಚ್ಛತಾ ಆಂದೋಲನ ಆರಂಭವಾಗಿದೆ. ಆದರೆ ಕಡಲ ತೀರದ ಸ್ವಚ್ಛತಾ ಅಭಿಯಾನ ಕಳೆದ ಹತ್ತಾರು ವರ್ಷಗಳಿಂದ ಇದ್ದರೂ, ಅದಕ್ಕೆ ಮಹತ್ವವನ್ನು ಕೊಡುವ ಕಾರ್ಯವನ್ನು ಪ್ರಧಾನಿಯವರು ಮಾಡಿದ್ದಾರೆ. ಇಂದು ಸ್ವಚ್ಛ ಸಾಗರ ಅಭಿಯಾನದಡಿಯಲ್ಲಿ ಕರಾವಳಿ ಪ್ರದೇಶದ ಸಮುದ್ರ ತೀರಗಳನ್ನು ಸ್ವಚ್ಛತೆ ಮಾಡುವ ಕಾರ್ಯವನ್ನು ಬಹಳ ಯಶಸ್ವಿಯಾಗಿ ಮಾಡಲಾಗಿದೆ ಎಂದು…
ವಿಟ್ಲ : ಮೂರು ದಿನಗಳ ಹಿಂದೆ ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಮೃತರನ್ನು ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಎಂದು ಗುರುತಿಸಲಾಗಿದೆ. ಹೀಗಾಗಿ ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನಿನ್ನೆ ಸಾವನ್ನಪ್ಪಿದ್ದಾರೆ..
ಸೌತೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಬಳಸಿಕೊಂಡು ಆರೋಗ್ಯಕರವಾದ, ಹಾಗೇ ರುಚಿಕರವಾದ ಇಡ್ಲಿಯನ್ನು ಮಾಡಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: 1ಕಪ್ – ಇಡ್ಲಿ ಅಕ್ಕಿ, 1 ಕಪ್ – ಸೌತೆಕಾಯಿ ತುರಿ, ½ ಕಪ್ – ತೆಂಗಿನಕಾಯಿ ತುರಿ, ½ ಕಪ್ – ನೀರು, ಉಪ್ಪು – ರುಚಿಗೆ ತಕ್ಕಷ್ಟು. ಮಾಡುವ ವಿಧಾನ: ಅಕ್ಕಿಯನ್ನು ತೊಳೆದು 30 ನಿಮಿಷಗಳ ಕಾಲ ನೆನೆಸಿಡಿ. ನಂತರ ಇದರ ನೀರನ್ನು ಬಸಿದುಕೊಂಡು ತೆಂಗಿನಕಾಯಿ ತುರಿಯೊಂದಿಗೆ ರುಬ್ಬಿಕೊಳ್ಳಿ. ಸ್ವಲ್ಪ ನೀರು ಸೇರಿಸಿ ತರಿ ತರಿಯಾಗಿ ರುಬ್ಬಿದರೆ ಸಾಕು. ನಂತರ ಇದಕ್ಕೆ ತುರಿದ ಸೌತೆಕಾಯಿ ಹಾಗೂ ಉಪ್ಪು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಇಡ್ಲಿ ತಟ್ಟೆಗೆ ಸ್ವಲ್ಪ ಎಣ್ಣೆ ಸವರಿ ಸ್ವಲ್ಪ ಸ್ವಲ್ಪ ಹಿಟ್ಟನ್ನು ಹಾಕಿ ಹಬೆಯಲ್ಲಿ 20 ನಿಮಿಷಗಳ ಕಾಲ ಬೇಯಿಸಿಕೊಳ್ಳಿ. ತೆಂಗಿನಕಾಯಿ ಚಟ್ನಿಯೊಂದಿಗೆ ಸವಿಯಲು ಚೆನ್ನಾಗಿರುತ್ತದೆ.
ಬಂಟ್ವಾಳ : ಮಂಗಳೂರು ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಾದ ಬಿಸಿ ರೋಡು ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿಯಿಂದ ಉಂಟಾಗಿರುವ ಹೊಂಡದಲ್ಲಿ ಮಳೆಗೆ ನಿಂತಿದ್ದ ನೀರಿನಲ್ಲಿ ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೊಬ್ಬ ಇಳಿದು ಈಜಾಟ ನಡೆಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿ ಬೃಹತ್ ಫ್ಲೈಓವರ್ ನಿರ್ಮಾಣಕ್ಕೆ ಅಗೆಯಲಾದ ಹೊಂಡ ಮತ್ತಷ್ಟು ಅಗಲವಾಗಿದೆ.ಕಲ್ಲಡ್ಕದಲ್ಲಿ ಹೈವೇ ಕಾಮಗಾರಿ ಹೊಂಡದಲ್ಲಿ ಈಜಾಡಿದ ವ್ಯಕ್ತಿಇನ್ನು ಮುಂಜಾಗೃತಾ ಕ್ರಮವಾಗಿ ಗುಂಡಿಯ ಸುತ್ತ ಪ್ಲಾಸ್ಟಿಕ್ ಟೇಪ್ ಅನ್ನು ಕಟ್ಟಲಾಗಿದ್ದು, ಆದರೆ, ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೊಬ್ಬ ಈ ಹೊಂಡದಲ್ಲಿ ಇಳಿದು ಈಜಾಟ ನಡೆಸಿದ್ದಾನೆ. ಜೊತೆಗೆ ಸ್ನಾನ ಮಾಡುವಂತೆ ಹೊರಳಾಡಿದ್ದಾನೆ. ಈ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲಿನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಉಳ್ಳಾಲ: ಉಳ್ಳಾಲ ತಾಲ್ಲೂಕು ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ತಲಪಾಡಿ ನಿವಾಸಿಗಳಾದ ರಿಯಾಝ್(26), ಅಬೂಬಕ್ಕರ್(53), ರಘುನಾಥ(40), ರಾಜೇಶ್(50), ಮುತ್ತಲಿಬ್(40) ಹಾಗೂ ಉತ್ತರ ಪ್ರದೇಶದ ವಲಸೆ ಕಾರ್ಮಿಕರಾದ ಅತುಲ್(22), ರಾಮಧಾರಿ(28), ಪಂಕಜ್(24) ಬಂಧಿತ ಆರೋಪಿಗಳು. ಸೋಮೇಶ್ವರ ಸಮುದ್ರ ತೀರ, ಕೋಟೆಪುರ, ತಲಪಾಡಿ ಇನ್ನಿತರ ಪ್ರದೇಶಗಳಲ್ಲಿ ಮರಳುಗಳವು ಎಗ್ಗಿಲ್ಲದೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಇಂಟರ್ನೆಟ್ ಆಧಾರಿತ ಸಿಸಿಟಿವಿ ಗಳನ್ನು ಅಳವಡಿಕೆ ಮಾಡಲಾಗಿತ್ತು. ಇದಕ್ಕೆ ಬ್ರೇಕ್ ಹಾಕಲು ಅಳವಡಿಸಿರುವ ಸಿಸಿಟಿವಿ ಮತ್ತು ತಂತಿ ತಡೆಬೇಲಿಯನ್ನು ಸೆ.10ರ ನಸುಕಿನ ವೇಳೆ ಧ್ವಂಸಗೈಯ್ಯಲಾಗಿತ್ತು. ಸೋಮೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಇದಾಗಿದ್ದು, ಟಿಪ್ಪರ್ ಹಿಮ್ಮುಖವಾಗಿ ಚಲಾಯಿಸಿ ಧ್ವಂಸಗೈಯ್ಯಲಾಗಿದೆ. ಅದಕ್ಕೂ ಮುನ್ನ ಮುಖಕ್ಕೆ ಬಟ್ಟೆ ಕಟ್ಟಿ ಹಾನಿಗೈಯಲು ವಿಫಲ ಯತ್ನ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿತ್ತು. ಇದೀಗ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಅಕ್ರಮ ಮರುಳು ದಂಧೆ ನಡೆಸುತ್ತಿದ್ದ, ಅಕ್ರಮವಾಗಿ ಮರಳು ಸಾಗಾಟ…









