Author: main-admin

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದು, ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಗೃಹ ಸಚಿವರ ಕಚೇರಿಯಲ್ಲಿ ಜಿ ಪರಮೇಶ್ವರ್ ಅವರನ್ನು SIT ಮುಖ್ಯಸ್ಥ ಪ್ರಣಬ್ ಮೋಹಂತಿ ಭೇಟಿಯಾಗಿ ಚರ್ಚಿಸಿದ್ದಾರೆ. ಇನ್ನು ಸಿಐಡಿ ಮುಖ್ಯಸ್ಥರ ನೇಮಕಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು ಎಸ್ಐಟಿ, ಮುಖ್ಯಸ್ಥ ಪ್ರಣಬ್ ಮೊಹಂತಿಯವರನ್ನೇ ನೇಮಕ ಮಾಡುವ ಸಾಧ್ಯತೆ ಇದೆ. ಹೌದು ಸಿಐಡಿ ಮುಖ್ಯಸ್ಥರ ಹುದ್ದೆಗೆ ನೇಮಕಕ್ಕೆ ರಾಜ್ಯ ಸರ್ಕಾರ ಇದೀಗ ತಯಾರಿ ಮಾಡಿಕೊಂಡಿದ್ದು, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಮಾಡುವ ಸಾಧ್ಯತೆ ಇದೆ ಎಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಲಾಗಿದ್ದು ಸಿಎಂ ಸಿದ್ದರಾಮಯ್ಯ ಕರೆಯ ಮೇರೆಗೆ ಪ್ರಣವ್ ಮೋಹಂತಿ ಭೇಟಿಯಾಗಿದ್ದಾರೆ. ವಿಧಾನಸೌಧದಲ್ಲಿ ಗೃಹ ಸಚಿವರನ್ನು ಭೇಟಿಯಾಗಿದ್ದು ಸರ್ಕಾರ ಇದೀಗ ಒಲವು ತೋರಿದೆ ಇಂದು ಈ ಕುರಿತು ಅಧಿಕೃತ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.

Read More

ಉಡುಪಿ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು, ಯುವ ಸಮುದಾಯವನ್ನೇ ಗುರಿಯಾಗಿರಿಸಿಕೊಂಡು ಸಕ್ರಿಯವಾಗಿರುವ ಡ್ರಗ್ಸ್‌ ಜಾಲವನ್ನು ಮಟ್ಟ ಹಾಕಲು ಉಡುಪಿ ಜಿಲ್ಲಾ ಪೊಲೀಸ್ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ ಸಾರ್ವಜನಿಕರು ಈ ದಂಧೆಯ ಬಗ್ಗೆ ಅನಾಮಧೇಯವಾಗಿ ಮಾಹಿತಿ ನೀಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಕ್ಯೂಆ‌ರ್ ಕೋಡ್‌ನ್ನು ರಚಿಸಿದೆ. ಅಕ್ರಮ ಡ್ರಗ್ಸ್ ಹಾಗೂ ಸಿಗರೇಟ್ ಮಾರಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಅನಾಮಧೇಯರಾಗಿ ಕ್ಯೂಆ‌ರ್ ಕೋಡ್‌ನ್ನು ಸ್ಕ್ಯಾನ್ ಮಾಡಿ ಈ ಮೂಲಕ ಮಾಹಿತಿ ನೀಡಬಹುದಾಗಿದೆ. ಸ್ಕ್ಯಾನ್ ಮಾಡಿದಾಗ ಒಟ್ಟು 15 ಹಂತ ಗಳು ಬರಲಿದ್ದು, ಅದನ್ನು ಸಾರ್ವಜನಿಕರು ಅನುಸರಿಸಿ ಆಯ್ಕೆ ಮಾಡಿ ವರದಿ ಮಾಡಬೇಕು. ಆ ಮೂಲಕ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಬಹುದು. ಮೊದಲ ಹಂತದಲ್ಲಿ ನೀವು ಏನು ವರದಿ ಮಾಡುತ್ತಿದ್ದೀರಿ ಎಂಬುದಕ್ಕೆ ಸೂಕ್ತವಾಗಿರುವುದನ್ನು ಆಯ್ಕೆ ಮಾಡಬೇಕು. ಮುಂದಿನ ವಿವಿಧ ಹಂತಗಳಲ್ಲಿ, ಅಕ್ರಮ ಮಾದಕ ವಸ್ತುಗಳ ಬಳಕೆ ಎಲ್ಲಿ ನಡೆಯುತ್ತಿದೆ, ಕಾಲೇಜು, ಸ್ನಾತಕೋತ್ತರ ಪದವಿ ಸಂಸ್ಥೆಯ ಹೆಸರು ಹಾಗೂ ಅಲ್ಲಿ ಏನು ನಡೆಯುತ್ತಿದೆ ಎಂಬುದರ ವಿವರ ನೀಡಬಹುದು. ಮಾದಕ…

Read More

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 6 ಮಂದಿ ಡಿವೈಎಸ್‌ಪಿ (ಸಿಎಲ್) ರವರುಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ/ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ. ವರ್ಗಾವಣೆಗೊಂಡು ಡಿವೈಎಸ್ ಪಿ (ಸಿವಿಲ್) ಅಧಿಕಾರಿಗಳು 1 ಮ್ಯಾಥೀವ್ ಥಾಮಸ್ ಕೆ.ಟಿ 2 ರಾಜಣ್ಣ ಟಿ.ಬಿ 3 ಸ್ನೇಹರಾಜ್ ಎನ್ 4 ಸಿ.ಕೆ. ಅಶ್ವಥನಾರಾಯಣ 5 ಲಕ್ಷ್ಮಯ್ಯ.ವಿ 6 ಪದ್ಮಶ್ರೀ ಗುಂಜೀಕರ್

Read More

ಮಂಗಳೂರು : ಸ್ಕ್ಯಾನಿಂಗ್ ಸೆಂಟರ್‌ಗಳು ರೋಗಿಗಳಿಂದ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಪಡೆದು ನಂತರವೇ ಸ್ಕ್ಯಾನ್ ಮಾಡಬೇಕು, ಇಲ್ಲದಿದ್ದರೆ ಅಂತಹ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ. ಎಚ್ ಆರ್ ತಿಮ್ಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ನಡೆದ ಪ್ರಸವಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ (ನಿರ್ಬಂಧ ಕಾಯ್ದೆ), 1994 ರ ಕುರಿತ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಗುರುತಿನ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಬೇಕು. ಅಧಿಕಾರಿಗಳು ಸ್ಕ್ಯಾನಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಾರೆ. ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿನ ವರದಿಗಳಿಗೆ ಸಿಬ್ಬಂದಿ ಸದಸ್ಯರಿಂದ ಸಹಿ ಮಾಡಿಸದೇ, ಆಯಾ ತಜ್ಞ ವೈದ್ಯರಿಂದ ಮಾತ್ರ ಸಹಿ ಮಾಡಿಸಬೇಕು” ಎಂದು ಅವರು ಹೇಳಿದರು.ಪ್ರಸ್ತುತ ಜಿಲ್ಲೆಯಲ್ಲಿ 189 ಸ್ಕ್ಯಾನಿಂಗ್ ಸೆಂಟರ್‌ಗಳಿವೆ. ಅದರಲ್ಲಿ 12 ಸರ್ಕಾರಿ ಸ್ವಾಮ್ಯದ ಮತ್ತು 177 ಖಾಸಗಿ ಕೇಂದ್ರಗಳಿವೆ. ವಿಶೇಷ ತಪಾಸಣಾ ತಂಡವನ್ನು ರಚಿಸಲಾಗಿದ್ದು, 2025 ರ ಏಪ್ರಿಲ್‌ನಿಂದ ಆಗಸ್ಟ್ ವರೆಗೆ 274 ಖಾಸಗಿ ಸ್ಕ್ಯಾನಿಂಗ್ ಕೇಂದ್ರಗಳು…

Read More

ಮಂಗಳೂರು: ನಗರದ ಬಿಜೈ ಕಾಪಿಕಾಡ್ ಬಳಿಯ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಅವಧಿ ಮೀರಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಾರ್ ಮಾಲಕ, ಸಿಬ್ಬಂದಿ ಮತ್ತು ಗ್ರಾಹಕರ ವಿರುದ್ಧ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲಕ, ಮ್ಯಾನೇಜರ್ ಪ್ರವೀಣ್, ಸಿಬ್ಬಂದಿ ಅನ್ವಿತ್, ಗ್ರಾಹಕರಾಗಿದ್ದ ಪ್ರೀತೇಶ್, ಪರೇಶ್ ಮತ್ತು ಇನ್ನೊಬ್ಬ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉರ್ವ ಠಾಣೆಯ ಎಸ್ಸೈ ಗುರಪ್ಪಕಾಂತಿ ಪೊಲೀಸ್ ಸಿಬ್ಬಂದಿಯ ಜತೆ ಸೆ.21ರಂದು ರಾತ್ರಿ 12:10ಕ್ಕೆ ಕರ್ತವ್ಯದಲ್ಲಿ ರುವಾಗ ಬಿಜೈ ಕಾಪಿಕಾಡ್ ಬಳಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ ಒಂದರ ಮುಖ್ಯದ್ವಾರ ಮುಚ್ಚಿದ್ದರೂ ಒಳಗಡೆ ಗ್ರಾಹಕರು ಇರುವುದನ್ನು ಕಂಡು ಪ್ರಶ್ನಿಸಿದ್ದಾರೆ. ಬಾಗಿಲು ತೆರೆಯುವಂತೆ ಸಿಬ್ಬಂದಿಗೆ ಸೂಚಿಸಿದ್ದಾರೆ. ಆದರೆ ಬಾಗಿಲು ತೆರೆದಿಲ್ಲ. ರಾತ್ರಿ 12:55ಕ್ಕೆ ಬಾರ್ ಮ್ಯಾನೇಜರ್ ಪ್ರವೀಣ್ ಕರೆ ಮಾಡಿದ ಬಳಿಕ ಒಳಗಡೆ ಇದ್ದ ಸಿಬಂದಿ ಅನ್ವಿತ್ ಎಂಬಾತ ಬಾಗಿಲು ತೆರೆದಿದ್ದಾನೆ. ಯಾಕೆ ಸಮಯಕ್ಕೆ…

Read More

ಬಂಟ್ವಾಳ:ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ನಾರಾಯಣ (42) ಬಂಧಿತ ಆರೋಪಿ. ದಿನಾಂಕ:22-09-2025 ರಂದು ದೂರುದಾರರು ಮನೆಯಿಂದ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಂಟ್ವಾಳ ತಾಲೂಕು ಎಂಬ ವ್ಯಕ್ತಿಯು ಲೈಂಗಿಕ ಕಿರುಕುಳ ನೀಡಿದ ದೂರಿಗೆ ಸಂಬಂದಿಸಿದಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದಿನಾಂಕ 22-09-2025 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Read More

ಮಂಗಳೂರು: ಮಂಗಳೂರು ದಕ್ಷಿಣ ವಲಯ-1 ವ್ಯಾಪ್ತಿಯ ಕದ್ರಿ, ಲೋಬೊ ಲೇನ್ನಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ನಕಲಿ ವೈನ್ ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಅಬಕಾರಿ ಜಂಟಿ ಆಯುಕ್ತ (ಮಂಗಳೂರು ವಿಭಾಗ) ಹಾಗೂ ಅಬಕಾರಿ ಉಪ ಆಯುಕ್ತ (ದ.ಕ. ಜಿಲ್ಲೆ, ಮಂಗಳೂರು) ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಉಪ ವಿಭಾಗ-1ರ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ, ಮಂಗಳೂರು, ತಲಪಾಡಿ ತನಿಖಾ ಠಾಣೆ ಹಾಗೂ ಮಂಗಳೂರು ದಕ್ಷಿಣ ವಲಯ-1ರ ಅಬಕಾರಿ ನಿರೀಕ್ಷಕರು ಮತ್ತು ಸಿಬ್ಬಂದಿಗಳು ದಾಳಿ ನಡೆಸಿದರು. ಮೈಕಲ್ ಬ್ಲೈಸ್ ಮಿನೀಜಸ್ ಎಂಬುವವರ ಮನೆಯಲ್ಲಿ ಪಂಚಸಾಕ್ಷಿಗಳ ಸಮ್ಮುಖದಲ್ಲಿ ದಾಳಿ ನಡೆಸಿದಾಗ, ನಕಲಿ ವೈನ್ – 238.500 ಲೀಟರ್, ವೈನ್ ತಯಾರಿಸಲು ಬಳಸುತ್ತಿದ್ದ ಕೊಳೆ – 1,500 ಲೀಟರ್,ಮದ್ಯ – 3.180 ಲೀಟರ್, ನಕಲಿ ವೈನ್ ತಯಾರಿಸಲು ಬಳಸುತ್ತಿದ್ದ ವಿವಿಧ ಸಲಕರಣೆಗಳು ವಶಪಡಿಸಿಕೊಳ್ಳಲಾಗಿದೆ ಆರೋಪಿ ಮೈಕಲ್ ಬ್ಲೈಸ್ ಮಿನೀಜಸ್ ಅವರನ್ನು ಸ್ಥಳದಲ್ಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ…

Read More

ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 1 ವರ್ಷದವರೆಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.  ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ 32 ಪ್ರಕರಣಗಳಿರುವ ಹಿನ್ನೆಲೆಯಲ್ಲಿ 1 ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. 

Read More

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿನ ಬುರುಡೆ ಪ್ರಕರಣದ ಆರೋಪಿ ಮಂಡ್ಯದ ಚಿನ್ನಯ್ಯ ಸಿ.ಎನ್‌. ಮತ್ತು ಆತನ ಪತ್ನಿ ಮಲ್ಲಿಕಾ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ತಿಮರೋಡಿ ಮಹೇಶ್‌ ಶೆಟ್ಟಿಯ ಆಪ್ತರಲ್ಲಿ ಓರ್ವರಾದ ಗುತ್ತಿಗೆದಾರ ಉಜಿರೆ ನಿವಾಸಿ ನಿತಿನ್‌ ಯಾನೆ ನೀತು ಅವರನ್ನು ಎಸ್‌ಐಟಿ ನೋಟಿಸ್‌ ನೀಡಿ ವಿಚಾರಣೆ ಆರಂಭಿಸಿದೆ. ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡಿದ ಬಗ್ಗೆ ಎಸ್‌ಐಟಿ ದಾಖಲೆ ಮುಂದಿಟ್ಟು ವಿಚಾರಣೆ ಮಾಡಿದಾಗ ಹಣ ವರ್ಗಾವಣೆ ಮಾಡಿದ್ದನ್ನು ನಿತಿನ್‌ ಒಪ್ಪಿಕೊಂಡಿದ್ದಾನೆ. ಹೀಗಾಗಿ ಆತನ ಮೊಬೈಲನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹಣ ವರ್ಗಾವಣೆ ವಿಚಾರವಾಗಿ ಈಗಾಗಲೇ ಹಲವು ವದಂತಿಗಳು ಸೃಷ್ಟಿಯಾಗಿದ್ದು, ನಗದು ರೂಪದಲ್ಲಿ ಹಲವು ಲಕ್ಷ ರೂ. ಮತ್ತು 3 ಲಕ್ಷ ರೂ. ಹಂತಹಂತವಾಗಿ ಬ್ಯಾಂಕ್‌ ಮೂಲಕ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿತ್ತು. ಅದರಂತೆ ಬ್ಯಾಂಕ್‌ ಖಾತೆಗೆ ಹಣ ವರ್ಗಾಯಿಸಿದ ವಿಚಾರವಾಗಿ ದಾಖಲೆಗಳು ಎಸ್‌ಐಟಿಗೆ ಲಭಿಸಿದ್ದರಿಂದ ಮಹೇಶ್‌ ಶೆಟ್ಟಿ ತಿಮರೋಡಿಯ ಹಲವಾರು ಮಂದಿ…

Read More

ಮಂಗಳೂರು: ನಗರದಲ್ಲಿ ಮಾದಕ ವಸ್ತು ಮಾರಾಟ ಜಾಲವನ್ನು ಪತ್ತೆ ಹಚ್ಚಿದ ಸಿಸಿಬಿ ಘಟಕದ ಪೊಲೀಸರು ಭಾನುವಾರ (ಸೆಪ್ಟೆಂಬರ್ 21) ಮತ್ತು ಸೋಮವಾರ ನಡೆಸಿದ ದಾಳಿಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ₹24 ಲಕ್ಷಕ್ಕೂ ಹೆಚ್ಚು ಮೌಲ್ಯದ ಎಂಡಿಎಂಎ ಹಾಗೂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಚಿರಾಗ್ ಸನಿಲ್ – ಗಾಂಧಿನಗರ, ಕಾವೂರು, ಆಲ್ವಿನ್ ಕ್ಲಿಂಟನ್ ಡಿ’ಸೋಜಾ – ಅಶೋಕನಗರ, ಅಬ್ದುಲ್ ಕರೀಂ ಇ.ಕೆ (52) – ಮಲ್ಲಾಪುರಂ ಜಿಲ್ಲೆ, ಕೇರಳ, ಜಾನನ್ ಜಗನ್ನಾಥ (28) – ಕುಲಶೇಖರ, ಮಂಗಳೂರು, ರಾಜೇಶ್ ಬಂಗೇರ (30) – ಬೋಳೂರು ಪರಪು, ಮಂಗಳೂರು, ವರುಣ್ ಗಾಣಿಗ (28) – ಅಶೋಕನಗರ, ಮಂಗಳೂರು ಎಂದು ಗುರುತಿಸಲಾಗಿದೆ ಕಾವೂರು ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿ ದಾಳಿ ನಡೆಸಿದ ವೇಳೆ, ಚಿರಾಗ್ ಸನಿಲ್ ಮತ್ತು ಆಲ್ವಿನ್ ಕ್ಲಿಂಟನ್ ಡಿ’ಸೋಜಾ ಎಂಬ ಇಬ್ಬರನ್ನು ವಶಕ್ಕೆ ಪಡೆದು, ಅವರ ಬಳಿ ಇದ್ದ 111.83 ಗ್ರಾಂ ಎಂಡಿಎಂಎ (ಮೌಲ್ಯ ₹22.3 ಲಕ್ಷ)ವನ್ನು ಪೊಲೀಸರು ಸ್ವಾಧೀನಪಡಿಸಿಕೊಂಡರು. ಪ್ರಾಥಮಿಕ ವಿಚಾರಣೆಯಲ್ಲಿ,…

Read More