ಮಂಗಳೂರು: ಬ್ರಿಟಿಷರ ದಾಸ್ಯದಿಂದ ದೇಶವನ್ನು ಬಿಡಿಸಿಕೊಳ್ಳಲು ವೀರ ವನಿತೆ ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮ ನಮಗೆ ಪ್ರೇರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕದ ಪಾತ್ರವನ್ನು ಕೊಂಡಾಡಿದರು. ಮಂಗಳೂರು ಬಂದರು 25,000 ಜನರನ್ನು ನಿರ್ವಹಿಸುತ್ತದೆ. ಭಾರತದಲ್ಲಿ ಕ್ರೂಸ್ ಟೂರಿಸಂಗೆ ನವ ಮಂಗಳೂರು ಬಂದರು ಸೂಕ್ತವಾಗಿದೆ. ಇದರ ಬಗ್ಗೆ ಹೆಚ್ಚು ನಿರೀಕ್ಷೆ ಇದೆ. ಕರಾವಳಿಯ ಭರಪೂರ ಲಾಭವನ್ನು ನಾವು ಪಡೆಯಬೇಕಿದೆ ಎಂದರು.ʻಕರ್ನಾಟಕ ಸಂಪದ್ಭರಿತ ರಾಜ್ಯ. ವೀರತ್ವಕ್ಕೆ ಹೆಸರುವಾಸಿ. ಇದು ಮೇಧಾವಿಗಳನ್ನು ಸೃಷ್ಟಿಸಿದ ನಾಡು, ತೀರ್ಥಕ್ಷೇತ್ರದ ಬೀಡು ಸಹ ಹೌದು ’ ಎಂದು ʻವೀರ ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮನವರ ಹೋರಾಟ ಸ್ಮರಿಸಿದರು. ಬ್ರಿಟಿಷರ ದಾಸ್ಯದಿಂದ ದೇಶವನ್ನು ಬಿಡಿಸಿಕೊಳ್ಳಲು ಈ ವೀರ ವನಿತೆಯರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದರು.…
Author: main-admin
ಮಂಗಳೂರು: ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಕ್ಕಾಗಿ ಪರಶುರಾಮನ ಕ್ಷೇತ್ರ ತುಳುನಾಡಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪರಶುರಾಮನ ವಿಗ್ರಹವನ್ನು ಕಾಣಿಕೆಯಾಗಿ ನೀಡಲಾಯಿತು. ಸಂಸದ ನಳಿನ್ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ಕುಮಾರ್ ಅವರು ಪರಶುರಾಮನ ವಿಗ್ರಹವನ್ನು ಪ್ರಧಾನಿಯವರಿಗೆ ಹಸ್ತಾಂತರಿಸಿದರು. ಅಲ್ಲದೆ, ಕರಾವಳಿ ಕಂಪನ್ನು ಸೂಸುವ ಮಲ್ಲಿಗೆ ಹಾರವನ್ನು ತೊಡಿಸಿ ಶಾಲು ಹೊದಿಸಿ ಕರಾವಳಿ ಸಂಪ್ರದಾಯದಂತೆ ಪ್ರಧಾನಿಯವರಿಗೆ ಸ್ವಾಗತ ಕೋರಲಾಯಿತು. ಇದಕ್ಕೂ ಮುನ್ನ ಪ್ರಧಾನಿಯವರಿಗೆ ಪೇಟ ತೊಡಿಸಿ ಶಾಲು ಹಾಕಿ ಶ್ರೀ ಕೃಷ್ಣನ ಮೂರ್ತಿಯನ್ನು ಕೇಂದ್ರ ಸಚಿವ ಸರಬಾನಂದ ಸೊನೆವಾಲ ಅವರು ಪ್ರಧಾನಿಯವರಿಗೆ ನೀಡಿದರು.
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಕುಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿಯಲ್ಲಿರುವ ಸಮಾವೇಶದ ವೇದಿಕೆಯತ್ತ ಆಗಮಿಸಿದ್ದಾರೆ. ನರೇಂದ್ರ ಮೋದಿಯವರು ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿ ಎಲ್ ಒಳಗೊಂಡಂತೆ 3,800 ಕೋ.ರೂ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಮಂಗಳೂರು: ಬೃಹತ್ ರಂಗೋಲಿ ಹಾಗೂ ಬೃಹತ್ ಪೆಂಡಲ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ವೇದಿಕೆ ಸಿದ್ಧಗೊಂಡಿದೆ. ಮಂಗಳೂರು ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂಪಾಯಿಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ. ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆಯನ್ನು ಜಿಲ್ಲಾಡಳಿತ ನಡೆಸಿದೆ. ಕಾರ್ಯಕ್ರಮ ನಡೆಯಲಿರುವ ಬೃಹತ್ ವೇದಿಕೆ ಎದುರು ಬೃಹತ್ ಆದ ಹೂವಿನ ರಂಗೋಲಿ ಕೂಡ ರಚಿಸಲಾಗಿದೆ.
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ. ಕಪ್ಪು ಬಟ್ಟೆ ಕೊಂಡೊಯ್ಯುವಂತಿಲ್ಲ ಎನ್ನುವ ಸ್ಪಷ್ಟ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಪ್ರಧಾನಿಯವರು ಆಗಮಿಸುತ್ತಾರೆ. ಮತ್ತೆ ಸಂಜೆ 4.30ಕ್ಕೆ ಮಂಗಳೂರು ಏರ್ ಪೋರ್ಟ್ ನಿಂದ ತೆರಳುತ್ತಾರೆ. ಭದ್ರತೆಗಾಗಿ ಹೊರಗಿನ ಜಿಲ್ಲೆಗಳಿಂದ ಪೊಲೀಸರು ಆಗಮಿಸಿದ್ದಾರೆ. ಸಾರ್ವಜನಿಕರು ಆಗಮಿಸುವಾಗ ಯಾವುದೇ ಲೈಟರ್, ಬೆಂಕಿ ಪೊಟ್ಟಣ, ಕಪ್ಪು ಬಟ್ಟೆ, ಬಾಟಲ್, ಯಾವುದೇ ಕರಪತ್ರವನ್ನು ತರಬಾರದು. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವವರು ಕಪ್ಪು ಬಟ್ಟೆ ಧರಿಸುವಂತಿಲ್ಲ ಎಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.
ವಿಟ್ಲ: ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಮತ್ತು ಬೆಂಗಳೂರು ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಧ್ಯಾಹ್ನ 12.30ಕ್ಕೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಪೊಲೀಸರು ಎಲ್ಲ ಭದ್ರತಾ ಕಾರ್ಯ ಕೈಗೊಂಡಿದ್ದಾರೆ. ಭದ್ರತೆಗಾಗಿ ಅಧಿಕಾರಿಗಳ ಸಹಿತ ಒಟ್ಟು ಮೂರು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಪ್ರಧಾನಿ ಸಮಾವೇಶ ನಡೆಯುವ ಮಂಗಳೂರಿನ ಕೂಳೂರು ಗೋಲ್ಡ್ಫಿಂಚ್ ಸಿಟಿ ಮೈದಾನಕ್ಕೆ ಗುರುವಾರ ಭೇಟಿ ನೀಡಿ, ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು. ಮೋದಿ ಕಾರ್ಯಕ್ರಮದ ಭದ್ರತೆ ಹಿನ್ನೆಲೆಯಲ್ಲಿ ಡಿಜಿಪಿ ಅವರು ಗುರುವಾರ ಮಂಗಳೂರಿಗೆ ಆಗಮಿಸಲಿದ್ದಾರೆ. ಎಡಿಜಿಪಿ ಅವರು ಈಗಾಗಲೇ ಬಂದಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. 100 ಜನ ಅಧಿಕಾರಿಗಳು, ಎರಡು ಸಾವಿರ ಮಂದಿ ಸಿವಿಲ್ ಪೊಲೀಸರು, ಕೆಎಸ್ಆರ್ಪಿ, ಎಎನ್ಎಫ್, ಸಿಎಆರ್, ಕರಾವಳಿ ಭದ್ರತಾ ಪಡೆ, ಆರ್ಎಎಫ್, ಗರುಡ ಪಡೆ ಸೇರಿದಂತೆ ಒಟ್ಟು ೩ ಸಾವಿರ ಪೊಲೀಸರು ಭದ್ರತೆ ಬಗ್ಗೆ ನಿಗಾ…
ಕಾರ್ಕಳ : ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ನೇತೃತ್ವದಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು,1 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯ ಬಳಿಕ ಈ ಸಮಾವೇಶ ನಡೆಯಲಿದೆ. ರಾಜಕೀಯವಾಗಿಯೂ ಇದು ಮಹತ್ವ ಪಡೆದಿರುವುದರಿಂದ ಸಣ್ಣಪುಟ್ಟ ಸಂಗತಿಗಳಿಗೂ ಬಿಜೆಪಿ ವಿಶೇಷ ಲಕ್ಷ್ಯ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮದ ಖುದ್ದು ಮೇಲುಸ್ತುವಾರಿ ವಹಿಸಿದ್ದು, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜತೆಗೆ ಈಗಾಗಲೇ ಸ್ಥಳ ಪರಿಶೀಲನೆ ಹಾಗೂ ಸಭೆ ನಡೆಸಿದ್ದಾರೆ. ಇನ್ನು ಪ್ರಧಾನಿ ಮೋದಿಯವರಿಗೆ ಈ ಕಾರ್ಯಕ್ರಮದ ಸ್ಮರಣಾರ್ಥವಾಗಿ ತುಳುನಾಡಿನ ದ್ಯೋತಕವಾಗಿ ಪರಶುರಾಮನ ಭವ್ಯ ಪುತ್ಥಳಿಯನ್ನು ಉಡುಗೊರೆ ರೂಪದಲ್ಲಿ ಕೊಡಲು ನಿರ್ಧರಿಸಲಾಗಿದೆ. ಕಾರ್ಯಕ್ರಮದ ಬಳಿಕ ಬಿಜೆಪಿ ಕೋರ್ ಕಮಿಟಿ ಸಭೆಯೂ ಸೇರಿದಂತೆ ಸುಮಾರು ಒಂದು ಗಂಟೆ ಕಾಲ ಪಕ್ಷದ ನಾಯಕರ ಜತೆಗೆ ಪ್ರಧಾನಿ ಮೋದಿ ಚರ್ಚೆ…
ಅಬುಧಾಬಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಬುಧವಾರ ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಸ್ಥಳಕ್ಕೆ ಭೇಟಿ ನೀಡಿದರು. ಈ ಕುರಿತು ಟೀಟ್ ಮಾಡಿರುವ ಅವರು, ಇದು “ಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ’ ಎಂದು ಬಣ್ಣಿಸಿದ್ದಾರೆ. ಗಲ್ಫ್ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗಾಗಿ ಬುಧವಾರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ತೆರಳಿದ ಎಸ್ ಜೈಶಂಕರ್ ಅವರು, ದೇವಾಲಯದ ನಿರ್ಮಾಣದಲ್ಲಿ ಭಾರತೀಯರ ಶ್ರಮವನ್ನು ಶ್ಲಾಘಿಸಿದರು.
ಕಾಸರಗೋಡು:ಕಾಸರಗೋಡು-ಕಾಂಞಗಾಡು ಮಧ್ಯೆ ಹಾದು ಹೋಗುವ ರೈಲ್ವೇ ಹಳಿಗಳಲ್ಲಿ ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್ ಇಟ್ಟು ಹಳಿ ತಪ್ಪಿಸಲು ಯತ್ನಿಸಲಾಗಿದೆ ಎಂದು ವರದಿಯಾಗಿತ್ತು. ಇದೀಗ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶ್ವಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿ ಬೇಕಲದ ಕ್ವಾಟರ್ಸ್ವೊಂದರಲ್ಲಿ ವಾಸವಾಗಿರುವ ತಮಿಳುನಾಡು ವಿಲ್ಲಾಪುರದ ಕನಕವಳ್ಳಿ (22) ಎಂಬಾಕೆಯನ್ನು ಪೊಲೀಸರು ಬಂಧಿಸಿ ವಿಚಾರಿಸಿದ್ದಾರೆ. ಗುಜುರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಈಕೆ ಸಿಮೆಂಟ್ ಒಳಗೊಂಡ ಕಬ್ಬಿಣದ ಸರಳುಗಳನ್ನು ರೈಲು ಹಳಿಯಲ್ಲಿಟ್ಟು ಸರಳಿನಿಂದ ಸಿಮೆಂಟ್ ಬೇರ್ಪಡಿಸಲು ಉದ್ದೇಶಿಸಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈಕೆಯನ್ನು ಗಮನಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆಬಂದಿದೆ. ಆ.21ರಂದು ಕಾಸರಗೋಡು-ಕಾಂಞಗಾಡು ಮಧ್ಯೆ ಹಾದು ಹೋಗುವ ಹಳಿಯಲ್ಲಿ ಬರುವ ಕೋಟಿಕುಳಂ-ಬೇಕಲ ನಡುವೆ ಮೊದಲು ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್ ಪತ್ತಯಾಗಿತ್ತು.ಬಳಿಕ ತೃಕ್ಕನ್ನಾಡ್ ದೇಗುಲದ ಹಿಂದೆ ರೈಲ್ವೆ ಹಳಿಗಳ ಮೇಲೆ ಕಬ್ಬಿಣದ ಸರಳುಗಳು ಮತ್ತು ಭೀಮ್ ಪತ್ತೆಯಾಗಿತ್ತು.










