ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಪ್ರಕರಣಗಳು ದಿನೇ ದಿನೇ ಹೆಚ್ಚಾದಂತೆ ಕಾಣುತ್ತಿದೆ. ಇದೀಗ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಜಶೇಖರ್ ವಂದಲಿ ಅವರು ಇತರ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿ ಇದ್ದ ವೇಳೆ ಮಣಿಪಾಲದ ಆರ್.ಟಿ.ಓ ಕಛೇರಿ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ವಿದ್ಯಾರತ್ನ ನಗರದ ನಿವಾಸಿಯಾದ ತೆಲಂಗಾಣ ಮೂಲದ ರಿಶಿತ್ ಶಿವಕುಮಾರ್ ವಡ್ಡೆಪಳ್ಳಿ (21), ಮಣಿಪಾಲ ಕಾಯಿನ್ ಸರ್ಕಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಕೊಡಗು ಜಿಲ್ಲೆಯ ನಕುಲ್ ಪೊನ್ನಪ್ಪ (21), ಈಶ್ವರ ನಗರ ನಿವಾಸಿ ಬಿಹಾರ ಮೂಲದ ಅನುರಾಗ್ ಕುಮಾರ್ (20) ಎಂಬ ಮೂವರನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು.ಇವರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಮೈಸೂರು: ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದು, ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರಕ್ಕೆ ದೂರು ನೀಡಿದ್ದಾರೆ. ಮಠದ ಉಚಿತ ಹಾಸ್ಟೆಲ್ ನಲ್ಲಿ ಇರುವ ಪ್ರೌಢಶಾಲೆಯ ಕೆಲವು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮಠದ ಪ್ರೌಢಶಾಲೆಯಲ್ಲಿ ಓದುವ ವಿದ್ಯಾರ್ಥಿನಿಯರು ಉಚಿತ ಹಾಸ್ಟೆಲ್ ನಲ್ಲಿ ವಾಸವಾಗಿದ್ದು, ಸರದಿಯಂತೆ ಸ್ವಾಮೀಜಿ ಬಳಿಗೆ ವಿದ್ಯಾರ್ಥಿನಿಯರು ಹೋಗಬೇಕು. ಒಪ್ಪದಿದ್ದಾಗ ಹಾಸ್ಟೆಲ್ ವಾರ್ಡನ್, ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡುತ್ತಾರೆ ಎನ್ನಲಾಗಿದೆ. ಹಣ್ಣು ಮತ್ತು ಸಿಹಿ ಕೊಟ್ಟು ಆಶೀರ್ವಾದ ಮಾಡುವ ನೆಪದಲ್ಲಿ ಏಕಾಂತಕ್ಕೆ ಕರೆಸಿಕೊಳ್ಳುವ ಸ್ವಾಮೀಜಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾರೆ. ಕುಟುಂಬದವರ ಮಾಹಿತಿ ಪಡೆದುಕೊಂಡು ಕಷ್ಟದಲ್ಲಿರುವ ಪೋಷಕರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿ ಲೈಂಗಿಕವಾಗಿ ಬಳಸಿಕೊಳ್ಳುತ್ತಾರೆ ಎಂದು ಹೇಳಲಾಗಿದೆ. ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಬಲವಂತದ ಲೈಂಗಿಕ ಕ್ರಿಯೆ ನಂತರ ಸ್ವಾಮೀಜಿ…
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ಸೆ. 9ರಂದು ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿದೆ. ಇನ್ನು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ ಎಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ. ಕಳೆದ ಮಾರ್ಚ್ 2ರಂದು ನಡೆಯಬೇಕಾಗಿದ್ದ ಚುನಾವಣೆಯು ಸುಪ್ರೀಂ ಕೋರ್ಟ್ ಆದೇಶವೊಂದರ ಗೊಂದಲದಿಂದ ಮುಂದೂಡಿಕೆಯಾಗಿತ್ತು. ಹೀಗಾಗಿ ಒಂದು ವರ್ಷ ಅವಧಿ ಪೂರ್ಣಗೊಳಿಸಿದ್ದ ಪ್ರೇಮಾನಂದ ಶೆಟ್ಟಿ ಅವರೇ ಮೇಯರ್ ಸ್ಥಾನದಲ್ಲಿ ಹಾಗೂ ಸುಮಂಗಳಾ ರಾವ್ ಉಪಮೇಯರ್ ಸ್ಥಾನದಲ್ಲಿ ಮುಂದುವರಿದಿದ್ದರು. ಹಾಲಿ ಮೇಯರ್ ಅವಧಿ ಮುಂದುವರಿದಿರುವ ಕಾರಣ ಹಾಲಿ ಬಿಜೆಪಿ ಆಡಳಿತದ ಕೊನೆಯ ಮೇಯರ್ ಅವರ ಅಧಿಕಾರವಧಿ ಅಷ್ಟು ದಿನ ಕಡಿತವಾಗಲಿದೆ. 23ನೇ ಅವಧಿಗೆ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾತಿ ನಿಗದಿಯಾಗಿತ್ತು. ಈ ನಡುವೆ ಆಗಸ್ಟ್ 24ರಂದು ಪಾಲಿಕೆಯ 24ನೇ ಅವಧಿಯ ಮೀಸಲಾತಿ ಪ್ರಕಟಗೊಂಡಿದೆ.…
ಉಪ್ಪಿನಂಗಡಿ: ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಮರ ಕಡಿದು ಅಲ್ಲೇ ತುಂಡುಗಳನ್ನಾಗಿ ಮಾಡಿ ಸಾಗಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪ್ರಕರಣ ವನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ಸಿಬ್ಬಂದಿಗಳು, ಬೆಳೆಬಾಳುವ ದಿಮ್ಮಿ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಪದ್ಮುಂಜ ನಿವಾಸಿ ಗಳಾದ ದಿನೇಶ್, ಉಮೇಶ್ ಗೌಡ ಹಾಗೂ ಹೇಮಂತ್ ಎಂದು ಗುರುತಿಸಲಾಗಿದೆ. ಬಂಧಿತರು ಕಣಿಯೂರು ಗ್ರಾಮದ ಮಲೆಂಗಲ್ಲು ಎಂಬಲ್ಲಿ ರುವ ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಬೃಹತ್ ಗಾತ್ರದ ಕಲ್ಬಾಜಿ ಮರವನ್ನು ಕಡಿಯು ತ್ತಿರುವ ಬಗ್ಗೆ ಉಪ್ಪಿನಂಗಡಿ ವಲಯ ಅರಣ್ಯಾ ಧಿಕಾರಿ ಮಧುಸೂದನ್ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅರಣ್ಯ ಸಿಬ್ಬಂದಿ ಮರದ ದಿಮ್ಮಿ ಸಮೇತ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳು ಮರವನ್ನು ಯಂತ್ರದ ಮೂಲಕ ಉರುಳಿಸಿ, ಬಳಿಕ ಕಾಡಿನ ಒಳಗಡೆ ಅವುಗಳನ್ನು ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡಲು ತಯಾರಿ ನಡೆಸಿಕೊಂಡಿದ್ದು, ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಯಂತ್ರಗಳ ಸಹಿತ ಮರಗಳ ದಿಮ್ಮಿಗಳನ್ನು ವಶಕ್ಕೆ…
ಉಡುಪಿ: ಉಡುಪಿಯಲ್ಲಿ ಹಲವು ವರ್ಷಗಳಿಂದ ಮೆಕ್ಯಾನಿಕ್ ಆಗಿ ಜೀವನ ನಿರ್ವಹಿಸುತ್ತಿದ್ದ ಬಾದಾಮಿ ಮೂಲದ ಅಯ್ಯಪ್ಪ (28) ಎಂಬವರು ಗುರುವಾರ ಹಠಾತ್ ಹೃದಯಾಘಾತದಿಂದ ಮೃತ ಪಟ್ಟಿದ್ದು, ಸಾಂತ್ವನ ಹೇಳಬೇಕಾದ ಬಾಂಧವರು ಮೃತನ ಪತ್ನಿ ಹಾಗೂ ಮಗುವನ್ನು ತಿರಸ್ಕರಿಸಿದ ಅಮಾನವೀಯ ಘಟನೆ ನಡೆದಿದೆ.ಈ ಬಗ್ಗೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳಕ್ಕೆ ಧಾವಿಸಿ ಮೃತನ ಪತ್ನಿ ಹಾಗೂ ಆಕೆಯ 20 ದಿನಗಳ ಮಗುವನ್ನು ಉಡುಪಿಯ ಸಖಿ ಸೆಂಟರ್ಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಮೃತ ಅಯ್ಯಪ್ಪ ಅವರ ಪತ್ನಿಗೆ ಹೆರಿಗೆಯಾಗಿ 20 ದಿನಗಳಷ್ಟೇ ಕಳೆದಿದ್ದು, ವಿಧಿಯ ಲೀಲೆಗೆ ಕುಟುಂಬ ತತ್ತರಿಸಿದೆ. ಪ್ರಕರಣದ ಹಿನ್ನಲೆ : ಅಯ್ಯಪ್ಪ ಅವರು ಉಡುಪಿಯಲ್ಲಿ ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು, ಗುರುವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಾಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಅಯ್ಯಪ್ಪ ಅವರು ಎರಡು ವರ್ಷಗಳ ಹಿಂದೆ ಗಂಗಾವತಿಯ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರ ಮದುವೆಗೆ ಎರಡೂ ಕಡೆಯಿಂದಲೂ ತೀವ್ರ…
ಕಡಬ: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಉಪ್ಪಿನಂಗಡಿ ಕಡೆಯಿಂದ ನೂಜೋಲು ನಿವಾಸಿ ಕುಶಾಲಪ್ಪ ಹಾಗೂ ಅವರ ತಾಯಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಅತಿವೇಗದಲ್ಲಿ ಬಂದ ಮರಳು ಸಾಗಿಸುವ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ನ ಅಡಿಗೆ ಬಿದ್ದಿದ್ದ ಮಹಿಳೆಯನ್ನು ಎರಡು ಕ್ರೈನ್ ಗಳ ಸಹಾಯದಿಂದ ಟಿಪ್ಪರನ್ನು ಮೇಲೆತ್ತಿ ಮಹಿಳೆಯನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಹಾಗೂ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದರು. ಘಟನೆಯಲ್ಲಿ ತಾಯಿ-ಮಗ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಡಬ: ಅನಾರೋಗ್ಯ ಪೀಡಿತ ವೃದ್ಧೆಯನ್ನು ಹೊತ್ತುಕೊಂಡು ಸಾಗಾಟ ನಡೆಸಿದ ಪ್ರಕರಣದಲ್ಲಿ ಕಡಬ ಸುದ್ದಿಯಾಗಿತ್ತು. ಇದೀಗ ಅದೇ ಮನೆಯಿಂದ ಅಡಿಕೆಯನ್ನು ಜೀಪಿನಲ್ಲಿ ಸಾಗಿಸಿರುವ ಬಗ್ಗೆ ಆರೋಪಿಸಲಾಗಿದೆ. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ರಸ್ತೆ ಸರಿ ಇಲ್ಲದೆ ಕಮಲ ಎಂಬ 70 ವರ್ಷದ ವೃದ್ಧೆಯನ್ನು ಬಡಿಗೆಗೆ ಬಟ್ಟೆ ಕಟ್ಟಿ ಆಸ್ಪತ್ರೆಗೆ ಸಾಗಾಟ ನಡೆಸಿದ್ದರು. ರಸ್ತೆ ಸಂಪರ್ಕ ವ್ಯವಸ್ಥಿತವಾಗಿಲ್ಲ ಎಂಬ ಆರೋಪ ವ್ಯಕ್ತವಾಗಿ ರಾಜ್ಯವಾಪಿ ಸುದಿಯಾಗಿತ್ತು.ಅದರೆ ನಿನ್ನೆ ವೃದ್ಧೆಯ ಮನೆಯಿಂದಲೇ ಅಡಿಕೆಯನ್ನು ಜೀಪಿನಲ್ಲಿ ಸಾಗಾಟ ನಡೆಸಿದ್ದಾರೆಂದು ಕೆಲವರು ತರಾಟೆಗೆ ತೆಗೆದುಕೊಂಡರು. 2-3 ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದರೂ ಅಡಿಕೆ ಸಾಗಾಟಕ್ಕೆ ಟೂ ವೀಲ್ ಜೀಪು ಬಳಿಸಿದ್ದೀರಾ,ಮೊನ್ನೆ ವೃದ್ಧೆಯನ್ನು ಹೊತ್ತುಕೊಂಡು ಸಾಗಿಸುತ್ತಾ ರಸ್ತೆ ಸರಿಯಿಲ್ಲ ಎಂದು ಅಪಪ್ರಚಾರ ನಡೆಸಿದ್ದೀರಾ ಎಂದು ಪ್ರಶ್ನಿಸುತ್ತಿರುವುದು ವಿಡಿಯೋದಲ್ಲಿದೆ. ಇದು ಸ್ಥಳೀಯ ಶಾಸಕರ ಹಾಗೂ ನೂಜಿಬಾಳ್ತಿಲ ಗ್ರಾ.ಪಂ. ಬಗ್ಗೆ ತೇಜೋವಧೆ ನಡೆಸಲು ಮೊನ್ನೆ ನಡೆಸಲಾದ ವ್ಯವಸ್ಥಿತ ಸಂಚು ಎಂದು ಸ್ಥಳೀಯ ಗ್ರಾ.ಪಂ.ಸದಸ್ಯರು ಆರೋಪಿಸಿದ್ದಾರೆ.
ಸುಳ್ಯ : ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ ಹತ್ತು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಇದೀಗ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಕೈಗೆತ್ತಿಕೊಂಡಿದೆ. ಎನ್.ಐ.ಎ ತನಿಖೆಗೆ ಸಹಕರಿಸಲು ಒಂದು ತಿಂಗಳವರೆಗೆ ಓಓಡಿ ಮೂಲಕ ಬೆಂಗಳೂರು ಎನ್.ಐ.ಎ ವಿಭಾಗದ ಅಧಿಕಾರಿಗಳ ಜೊತೆ ಪ್ರಕರಣ ಭೇದಿಸಲು ಪ್ರಮುಖ ದಕ್ಷ ಪೊಲೀಸ್ ಅಧಿಕಾರಿಗಳನ್ನು ಎಡಿಜಿಪಿ ಡಾ.ಎಮ್.ಎ.ಸಲೀಂ ಐಪಿಸ್ ಅವರು ಬುಧವಾರ ಆದೇಶ ಹೊರಡಿಸಿದ್ದು ತಕ್ಷಣ ಎನ್.ಐ.ಎ ಬೆಂಗಳೂರು ಕಛೇರಿಗೆ ವರದಿ ಮಾಡಿಕೊಳ್ಳಲು ತಿಳಿಸಿದ್ದಾರೆ. ಎನ್.ಐ.ಎ ಗೆ 9 ಮಂದಿ ಪೊಲೀಸರು ನೇಮಕ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ ಐ ಪ್ರಸನ್ನ , ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ ಐ ಉದಯ ರವಿ, ವೇಣೂರು ಠಾಣೆಯ ಹೆಡ್ ಕಾನ್ಟೇಬಲ್ ಪ್ರವೀಣ್.ಎಮ್, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಪ್ರವೀಣ್ ರೈ ಮತ್ತು ಆದ್ರಾಮ, ವಿಟ್ಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್…
ಶಿರೂರು: ರೈಲು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮದ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷ ಪ್ರಾಯದ ಸಂಪತ್ ಪೂಜಾರಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಪುತ್ತೂರು: ಅನ್ಯ ಕೋಮಿನ ಯುವಕ-ಯುವತಿಯರ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆ ಮಾಹಿತಿ ನೀಡಿರುವ ಘಟನೆ ಪುತ್ತೂರಿನ ನೆಲ್ಲಿಕಟ್ಟೆ ಬಳಿ ನಡೆದಿದೆ. ನೆಲ್ಲಿಕಟ್ಟೆ ಫಿಜಾ ಹಟ್ ನಲ್ಲಿ ಅನ್ಯಕೋಮಿನ ಯುವಕ ಯುವತಿಯರು ಜೊತೆಗಿದ್ದರು.ಇದನ್ನು ಕಂಡು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಜೊತೆಗಿದ್ದವರಲ್ಲಿ ಹಿಂದೂ,ಮುಸ್ಲಿಂ,ಕ್ರಿಶ್ಚಿಯನ್ ಯುವತಿಯರಿದ್ದರು ಎನ್ನಲಾಗಿದೆ.ಎಲ್ಲರೂ ಸರ್ವಧರ್ಮದವರಾಗಿದ್ದರು.ಆದರೆ ಇದನ್ನು ವಿರೋಧಿಸಿ ಹಿಂದೂ ಸಂಘಟನೆ ಪೊಲೀಸರಿಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ. ಜೊತೆಗಿದ್ದವರು ಸ್ಥಳೀಯರು ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ..










