Author: main-admin

ಬೆಳ್ತಂಗಡಿ: ವಿಷ್ಣುಮೂರ್ತಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಒಡೆದು ಹಣ ದೋಚಿಕೊಂಡು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಅಲ್ಲಿನ ಸಿ ಸಿ. ಟಿ ವಿ. ಡಿವಿಆರ್, ಮೋನಿಟರ್ ಸಮೇತ ಹಿಡಿದುಕೊಂಡು ಹೋಗಿದ್ದಾರೆ, ದೇವಾಲಯದ ಅರ್ಚಕರು ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ಬಂದಾಗ ಬಾಗಿಲಿಗೆ ಬೀಗ ಒಡೆದು ಅರ್ಧ ಬಾಗಿಲು ತೆರೆದಿದ್ದು ಸಂಶಯ ಬಂದು ತಕ್ಷಣ ಆಡಳಿತ ಮಂಡಳಿಯ ಸದಸ್ಯರಿಗೆ ಮಾಹಿತಿ ನೀಡಿದಾಗ ಕಳ್ಳರು ನುಗ್ಗಿದ್ದು ಖಚಿತವಾಗಿದೆ. ತಕ್ಷಣ ವೇಣೂರು ಠಾಣೆಗೆ ಮಾಹಿತಿ ನೀಡಿ ಆರಕ್ಷಕ ಠಾಣೆಯ ಠಾಣಾಧಿಕಾರಿ ಸೌಮ್ಯ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿ ಪ್ರಕರಣ ದಾಖಲಿಸಿದ್ದಾರೆ.ಬೆರಳಚ್ಚು ತಜ್ಞರು, ಶ್ವಾನದಳ ಬಂದು ಪರಿಶೀಲಿಸಿದೆ, ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಲ್ಲಿ ಠಾಣಾಧಿಕಾರಿ ಸೌಮ್ಯ ಕೆಲವು ಮುಂಜಾಗ್ರತೆಯ ಮಾಹಿತಿ ನೀಡಿ, ಈ ತನಿಖೆಯನ್ನು ಅತ್ಯಂತ ವೇಗವಾಗಿ ಬೇಧಿಸುವುದಾಗಿ ಭರವಸೆ ನೀಡಿದರು. ಈ ಹಿಂದೆಯೂ ಇದೇ ದೇವಸ್ಥಾನದಲ್ಲಿ ಕಳ್ಳತನ ನಡೆದು ದೇವರ ಉತ್ಸವ…

Read More

ಬೆಳ್ತಂಗಡಿ: ವ್ಯಕ್ತಿಯೋರ್ವರು ಮನೆ ಸಮೀಪದ ಬಾವಿಯಲ್ಲಿ ಅಕಸ್ಮಿಕವಾಗಿ ಬಿದ್ದಿರುವ ಘಟನೆ ನಿನ್ನೆ ಮದ್ಯಾಹ್ನ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಗಾಂಧಿನಗರ ಕಾಫಿನಡ್ಕ ತೆಂಕಕಾರಂದೂರು ನಿವಾಸಿ ರಮಾನಂದ(42) ಮೃತ ದುರ್ದೈವಿ. ರಮಾನಂದರು ಮನೆಯಲ್ಲಿ ಇದ್ದರೂ ಕೂಡಾ ಸಂಜೆಯವರೆಗೆ ಮನೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದರಿಂದ ಅತಂಕಗೊಂಡ ಮನೆ ಮಂದಿ ಹುಡುಗಾಟ ನಡೆಸಿದೆರೆನ್ನಲಾಗಿದೆ. ರಾತ್ರಿ ವೇಳೆ ರಮಾನಂದರ ಚಪ್ಪಲಿ ಬಾವಿ ಸಮೀಪ ಸಿಕ್ಕಿದರಿಂದ ತಕ್ಷಣ ಗ್ರಾ.ಪಂ.ಅಧ್ಯಕ್ಷ ಹೇಮಂತ ಬೆಳ್ತಂಗಡಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಅಗ್ನಿಶಾಮಕದಳ ಬಂದು ಮೃತದೇಹವನ್ನು ಮೇಲಕ್ಕೆತ್ತಲಾಯಿತು. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಪ್ರಮುಖ ಅಗ್ನಿಶಾಮಕ ದಳದ ಸಿಬ್ಬಂದಿ ಕೃಷ್ಣ.ಪಿ. ನಾಯ್ಕ, ಚಾಲಕ ಲಿಂಗರಾಜ್ ಲಮಾಣಿ, ಉಸ್ಮಾನ್, ಮಹಮ್ಮದ್ ಜಂಬಗಿ, ಅರುಣ್ ಪಾಲ್ಗೊಂಡಿದ್ದರು.

Read More

ಕಾಪು: ಮೊಬೈಲ್ ಶಾಪ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ಯುವತಿಯೋರ್ವಳು ಬೆಳ್ಳಂಬೆಳಗ್ಗೆ ಮನೆಯಿಂದ ನಾಪತ್ತೆಯಾದ ಘಟನೆ ಆ. 23ರಂದು ನಡೆದಿದೆ. ನೇತ್ರಾವತಿ (20) ಕಾಣೆಯಾಗಿರುವ ಯುವತಿ. ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಮೊಬೈಲ್ ಶಾಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ನೇತ್ರಾವತಿ ಅವರು ಆ. 22ರಂದು ರಾತ್ರಿ ಊಟ ಮಾಡಿ ಮಲಗಿದ್ದು ಆ. 23 ರಂದು ಬೆಳಗ್ಗೆ 5.30ಕ್ಕೆ ಹಾಲ್‌ನಿಂದ ಎದ್ದು ವಾಶ್ ರೂಂಗೆ ಹೋಗಿದ್ದು, ಅಲ್ಲಿಂದ ಮರಳದೇ ಕಾಣೆಯಾಗಿದ್ದಳು. ಮನೆಯವರೆಲ್ಲರೂ ಸೇರಿ ಅಕ್ಕಪಕ್ಕದವರ ಮನೆಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ಪರಿಚಯದವರಲ್ಲಿ ವಿಚಾರಿಸಿದ್ದು ಈವರೆಗೂ ಪತ್ತೆಯಾಗಿರುವುದಿಲ್ಲ ಎಂದು ಅವರ ಅಕ್ಕ ವಿಜಯಲಕ್ಷ್ಮೀ ಅವರು ಕಾಪು ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Read More

ಮಣಿಪಾಲ: ಮಣಿಪಾಲದ ಮಣಿಪಾಲ ಅಕಾಡೆಮಿ ಸ್ಕೂಲಿನ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ಗುಂಪೊಂದು ಮೈಮೇಲೆ ಎರಗಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಇಂದು ನಡೆದಿದೆ. ಗಾಯಗೊಂಡ ಬಾಲಕಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ನಗರದಲ್ಲಿ ಹೆಚ್ಚಾಗಿದೆ. ಹಿರಿಯ ನಾಗರಿಕರು, ಚಿಕ್ಕಮಕ್ಕಳು, ಶಾಲಾ ವಿದ್ಯಾರ್ಥಿಗಳ ತಿರುಗಾಟಕ್ಕೂ ಭೀತಿ ಎದುರಾಗಿದೆ. ಸಾರ್ವಜನಿಕರ ಮೇಲೆ ದಾಳಿ ನಡೆಸಿರುವ ಪ್ರಕರಣಗಳು ಬಹಳಷ್ಟು ನಡೆದಿವೆ. ಸಮಸ್ಯೆಯ ಮುಕ್ತಿಗಾಗಿ ನಗರಸಭೆ ತಕ್ಷಣ ನಗರದಲ್ಲಿ ನೆಲೆ ಕಂಡಿರುವ ನೂರಾರು ಬೀದಿ ನಾಯಿಗಳನ್ನು ಸೆರೆ ಹಿಡಿದು, ಶ್ವಾನ ಪುರ್ನವಸತಿ ಕೇಂದ್ರಗಳಲ್ಲಿ ದಾಖಲಿಸುವಂತೆ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಅವರು ಆಗ್ರಹಿಸಿದ್ದಾರೆ.

Read More

ಮಂಗಳೂರು : ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ (ಎನ್‌ಎಂಪಿಎ) ಸುಮಾರು 1,200 ಕೋ.ರೂ. ವೆಚ್ಚದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಸಾಗರಮಾಲದ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಸೆ. 2ರಂದು ಮಂಗಳೂರಿಗೆ ಆಗಮಿಸಲಿದ್ದು ಇನ್ನೆರಡುದಿನಗಳಲ್ಲಿ ಕಾರ್ಯ ಕ್ರಮದ ರೂಪರೇಖೆ ಅಂತಿಮಗೊಳ್ಳಲಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗ್ಗೆ ಕೊಚ್ಚಿಯಲ್ಲಿ ಕಾರ್ಯಕ್ರಮದ ಬಳಿಕ ಸಂಜೆ 3.45ಕ್ಕೆ ಮಂಗಳೂರಿಗೆ ಆಗಮಿಸಲಿದ್ದು, ಎನ್‌ಎಂಪಿಎಗೆ ಭೇಟಿ ನೀಡಿ ಅಲ್ಲಿ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ನೆರವೇರಿಸಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಬಹುತೇಕ ಗೋಲ್ಡ್‌ ಫಿಂಚ್‌ ಸಿಟಿಮೈದಾನದಲ್ಲಿ ಸಮಾವೇಶ ನಡೆಯಲಿದೆ ಎಂದರು. ಪ್ರಧಾನಿಯವರ ಜತೆ ಮುಖ್ಯಮಂತ್ರಿ ಎಸ್‌.ಆರ್‌. ಬೊಮ್ಮಾಯಿ, ಕೇಂದ್ರ ಬಂದರು ಮತ್ತು ನೌಕಾಯಾನ ಸಚಿವ ಸರ್ಬಾನಂದ ಸೋನೊವಾಲಾ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಮುಂತಾದವರು ಆಗಮಿಸುವ ನಿರೀಕ್ಷೆ ಎಂದು ತಿಳಿಸಿದ್ದಾರೆ.

Read More

ಕಾರ್ಕಳ: ಡಿಪ್ಲೊಮಾ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡ್ಕೂರು ಗ್ರಾಮದಲ್ಲಿ ನಡೆದಿದೆ. ನಿಟ್ಟೆ ಕಾಲೇಜಿನ ಪ್ರಥಮ ವರ್ಷದ ಡಿಪ್ಲೊಮಾ ಓದುತ್ತಿದ್ದ ಅಭಿಷೇಕ್(19)ಅತ್ಮಹತ್ಯೆ ಮಾಡಿಕೊಂಡವರು. ಅಭಿಷೇಕ್ ತನ್ನ ಅಜ್ಜಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಳೆ ತನಗೆ ಪರೀಕ್ಷೆ ಇರುವುದೆಂದು ಅಜ್ಜಿ ಮನೆಗೆ ಓದಲು ಹೋಗುವುದಾಗಿ ಹೇಳಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಮೃತನ ತಾಯಿ ವನಿತಾ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Read More

ಜಯಪುರ: ಟೀ ಪ್ಲಾಂಟೇಷನ್​ ಸೇರಿ ಕಾಡಂಚಿನ ನಿವಾಸಿಗಳಿಗೆ ಕಾಟ ಕೊಡುತ್ತಿದ್ದ ಗಂಡಾನೆಯನ್ನು ಹೆಣ್ಣಾನೆ ಮೂಲಕ ಹನಿಟ್ರ್ಯಾಪ್‌ ಮಾಡಿಸಿದ್ರೂ ಒಂದು ರಾತ್ರಿ ಕಳೆದು ಎಸ್ಕೇಪ್‌ ಆಗಿದೆ. ಮೇಗುಂದಾ ಹೋಬಳಿ ಹೇರೂರು ಗ್ರಾಮ ಪಂಚಾಯಿತಿ ಎಲೆಮಡಿಲು ಬಳಿಯ ಬಾಲನೂರ್ ಟೀ ಪ್ಲಾಂಟೇಷನ್​ನಲ್ಲಿ ಹಾವೇರಿ ಟಸ್ಕರ್ ಕಾಡಾನೆ ಸೆರೆ ಹಿಡಿಯುವ ಅರಣ್ಯ ಇಲಾಖೆ ಕಾರ್ಯಾಚರಣೆಗೆ ಟೀ ಎಸ್ಟೇಟ್​ನ ಮುತ್ತು ಮಾರಿಯಮ್ಮ ದೇವಾಲಯದ ಬಳಿ ಹೆಣ್ಣಾನೆ ಭಾನುಮತಿಯನ್ನು ಭಾನುವಾರ ರಾತ್ರಿಯೇ ಬಿಡಲಾಗಿತ್ತು. ರಾತ್ರಿ ಬಂದ ಕಾಡಾನೆ ಹಾವೇರಿ ಟಸ್ಕರ್ ಸೋಮವಾರ ಬೆಳಗ್ಗೆ 7.30ರ ವರೆಗೆ ಭಾನುಮತಿಯೊಂದಿಗೆ ಕಾಲ ಕಳೆದಿತ್ತು. ಬೆಳಗಾಗುತ್ತಿದ್ದಂತೆ ಕಾಡಾನೆ ಅಲ್ಲಿಂದ ಎಲೆಮಡಿಲು ಗುಡ್ಡಕ್ಕೆ ಕಾಲ್ಕಿತ್ತಿದೆ. ಸೋಮವಾರ ರಾತ್ರಿ ಮತ್ತೆ ಭಾನುಮತಿಯನ್ನು ದೇವಸ್ಥಾನದ ಬಳಿ ಬಿಡಲಾಯಿತಾದರೂ ಕಾಡಾನೆ ಹಾವೇರಿ ಟಸ್ಕರ್ ಭಾನುಮತಿ ಹೆಣ್ಣಾನೆಯ ಬಳಿ ಬಾರದೆ ದೂರದಿಂದಲೇ ಗಮನಿಸಿ ವಾಪಸ್ ತೆರಳಿದೆ ಎಂದು ತಿಳಿದುಬಂದಿದೆ. ಸದ್ಯ ಅರಣ್ಯ ಅಧಿಕಾರಿಗಳು ಬೇರೊಂದು ಸ್ಥಳದಲ್ಲಿ ಭಾನುಮತಿಯನ್ನು ಬಿಡಲಾಗಿದ್ದು ಹಾವೇರಿ ಟಸ್ಕರ್​ನನ್ನು ಹನಿಟ್ರ್ಯಾಪ್​ಗೆ ಬೀಳಿಸಲು ಕಾದಿದ್ದಾರೆ. ಹೆಣ್ಣಾನೆ ಕಟ್ಟಿರುವ ಪ್ರದೇಶದಿಂದ…

Read More

ಮಂಗಳೂರು: ದನಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ (35) ಬಂಧಿತ ಆರೋಪಿಯಾಗಿದ್ದಾನೆ. ಈತ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಬಂಧಿಸಲ್ಪಟ್ಟು ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆರೋಪಿಯ ಇರುವಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆತನನ್ನು ಬಂಧಿಸಲು ತೆರಳಿದ ವೇಳೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು ಪೋಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ದ ಮಂಗಳೂರು ನಗರದ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಕಂಕನಾಡಿ ನಗರ, ಉಳ್ಳಾಲ, ಪಣಂಬೂರು, ಬಜ್ಪೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ…

Read More

ಉಡುಪಿ: ಗಣೇಶ ಚತುರ್ಥಿ ಹಬ್ಬದ ಜನರ ನೂಕುನುಗ್ಗುಲನ್ನು ನಿಭಾಯಿಸುವ ಸಲುವಾಗಿ ಕೇಂದ್ರ ರೈಲ್ವೇಸ್‌ನ ಸಹಯೋಗದೊಂದಿಗೆ ಮುಂಬಯಿ ಲೋಕಮಾನ್ಯ ತಿಲಕ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಹೆಚ್ಚುವರಿ ಸಾಪ್ತಾಹಿಕ ಗಣೇಶ ವಿಶೇಷ ರೈಲನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ. ರೈಲು ನಂ.01173 ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ಎಸಿ ಸಾಪ್ತಾಹಿಕ ವಿಶೇಷ ರೈಲು ಆ.24, ಆ.31 ಹಾಗೂ ಸೆ.7ರ ಬುಧವಾರದಂದು ರಾತ್ರಿ 8:50ಕ್ಕೆ ಲೋಕಮಾನ್ಯ ತಿಲಕ್‌ನಿಂದ ನಿರ್ಗಮಿಸಲಿದ್ದು, ಮರುದಿನ 5:05ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ರೈಲು ನಂ.01174 ಮಂಗಳೂರು ಜಂಕ್ಷನ್-ಲೋಕಮಾನ್ಯ ತಿಲಕ್ ಎಸಿ ಸಾಪ್ತಾಹಿಕ ವಿಶೇಷ ರೈಲು ಆ.25, ಸೆ.1 ಹಾಗೂ ಸೆ.8ರ ಗುರುವಾರ ರಾತ್ರಿ 8:15ಕ್ಕೆ ಮಂಗಳೂರು ಜಂಕ್ಷನ್‌ನಿಂದ ಪ್ರಯಾಣ ಬೆಳೆಸಲಿದ್ದು, ಮರುದಿನ ಸಂಜೆ 5:30ಕ್ಕೆ ಲೋಕಮಾನ್ಯ ತಿಲಕ್ ನಿಲ್ದಾಣ ತಲುಪಲಿದೆ.

Read More

ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಕೂಗಲಾಗುವ ಆಝಾನ್‌ನಲ್ಲಿ ಇರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಹೈಕೋರ್ಟ್ ನಿರಾಕರಿಸಿದೆ. ನಗರದ ನಿವಾಸಿ ಆರ್.ಚಂದ್ರಶೇಖರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಪ್ರತಿ ದಿನ 5 ಬಾರಿ ಆಝಾನ್ ಕೂಗುವುದರಿಂದ ಬೇರೆ ಧರ್ಮಗಳ ಅನುಯಾಯಿಗಳ ಭಾವನೆಗೆ ಧಕ್ಕೆಯಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಅರ್ಜಿದಾರರೇ ಆಝಾನ್ ಅಗತ್ಯ ಧಾರ್ಮಿಕ ಆಚರಣೆ ಎಂದು ತಿಳಿಸಿದ್ದಾರೆ. ಅಲ್ಲದೆ, ಆಝಾನ್‌ನಲ್ಲಿ ಇರುವ ವಿಚಾರಗಳು, ಬೇರೆ ಧರ್ಮಗಳ ಅನುಯಾಯಿಗಳ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎನ್ನುವ ಅರ್ಜಿದಾರರ ವಾದವನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ. ಭಾರತದ ಸಂವಿಧಾನದ ಪ್ರಕಾರ 25 ಮತ್ತು 26ನೆ ವಿಧಿಗಳು ನಮ್ಮ ದೇಶದ ಸಂಸ್ಕೃತಿಯ ಸಹನಶೀಲತೆಯ ಮೂರ್ತರೂಪವಾಗಿವೆ. 25(1) ವಿಧಿಯು ಪ್ರತಿ ವ್ಯಕ್ತಿಯೂ ತಮ್ಮ ತಮ್ಮ ಧರ್ಮಗಳಲ್ಲಿ ಶ್ರದ್ಧೆ ಇರಿಸಲು, ಆಚರಿಸಲು ಮತ್ತು ಪ್ರಚಾರ ಮಾಡಲು ಅವಕಾಶ ಮಾಡಿಕೊಡುತ್ತದೆ ಎಂದು…

Read More