Author: main-admin

ನವದೆಹಲಿ: ಗೋವಾದಲ್ಲಿ ನಿನ್ನೆ ರಾತ್ರಿ ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರು ತಮ್ಮ ಕೆಲವು ಸಿಬ್ಬಂದಿ ಜೊತಗೆ ಗೋವಾಕ್ಕೆ ಹೋಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಸೋನಾಲಿ ಫೋಗಟ್ ಬಿಗ್ ಬಾಸ್ 14 ರಲ್ಲಿ ಕಾಣಿಸಿಕೊಂಡರು. ಅವರು ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಿದ್ದರು. ನಂತರ ಅವರು ಅಪಾರ ಜನಪ್ರಿಯತೆಯನ್ನು ಗಳಿಸಿದರು. ಸೋನಾಲಿಗೆ ತನಗೆ ತುಂಬಾ ಹತ್ತಿರವಿದ್ದ ಒಬ್ಬ ಡೌಗ್ಟರ್ ಕೂಡ ಇದ್ದಾನೆ. ಸೋನಾಲಿ ಫೋಗಟ್ ಕೂಡ ಬಿಜೆಪಿ ನಾಯಕಿಯಾಗಿದ್ದರು. ಅವರು 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ನಲ್ಲಿ ಆದಂಪುರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇತ್ತೀಚೆಗೆ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಬದಲಾದ ಕುಲದೀಪ್ ಬಿಷ್ಣೋಯ್ ವಿರುದ್ಧ ಅವರು ಸ್ಪರ್ಧಿಸಿದ್ದರು. ಸೋನಾಲಿ ಟಿಕ್‌ ಟಾಕ್‌ ನಲ್ಲೂ ಸಹ ಜನಪ್ರಿಯತೆಯನ್ನ ಹೊಂದಿದ್ದರು

Read More

ಮಂಗಳೂರು: ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26 ರಂದು ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇ ಪ್ರಶಸ್ತಿ ಬಹುಮಾನ ನೀಡಿ ಪ್ರಶಂಸಿದ್ದಾರೆ.ಘಟನೆ ನಡೆದ ಸ್ಥಳದಲ್ಲಿ ಹಂತಕರು ಯಾವುದೇ ಸುಳಿವು ಬಿಟ್ಟುಕೊಡದ ಕಾರಣ ಪ್ರಕರಣ ಪೊಲೀಸರಿಗೆ ಸವಾಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಾಗೂ ಪಶ್ಚಿಮ ವಲಯದ ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು.ಈ ಹಿನ್ನಲೆ ನಗರದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಆಗಸ್ಟ್ 22 ರ ಸೋಮವಾರ, ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Read More

ಮಂಗಳೂರು: ದೇಹದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಕಂಡು ಹಿಡಿದಿದ್ದಾರೆ. ದುಬೈನಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದು, ತಪಾಸಣೆ ವೇಳೆ 45,83,160 ರೂ. ಮೌಲ್ಯದ 24 ಕ್ಯಾರೆಟ್‌ನ 878 ಗ್ರಾಂ ಚಿನ್ನವನ್ನು ಪತ್ತೆಹಚ್ಚಿದ್ದಾರೆ. ಬಂಟ್ವಾಳ ಮೂಲದ ಪ್ರಯಾಣಿಕ ಚಿನ್ನವನ್ನು ಪೌಡರ್ ರೂಪದಲ್ಲಿ ಅಂಡಾಕಾರದ ಪ್ಯಾಕೆಟ್‌ಗಳಲ್ಲಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

Read More

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಿಂದ ಇತಿಹಾಸ ಪ್ರಸಿದ್ಧ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ವಿಶೇಷ ಅನುದಾನ ದೊರಕಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ.ವೀರೇಂದ್ರ ಹೆಗ್ಗಡೆಯವರು 15 ಲಕ್ಷ ರೂ. ಮೊತ್ತದ ಚೆಕ್ ಅನ್ನು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ಶ್ರೀಕ್ಷೇತ್ರ ಧರ್ಮಸ್ಥಳದಿಂದ ವಿವಿಧ ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ಪುರಾತನ ದೇವಸ್ಥಾನಗಳ ಜೀರ್ಣೋದ್ಧಾರ, ಪುನರ್ನಿರ್ಮಾಣ ಕಾರ್ಯಗಳನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವಿಶೇಷ ಆಸ್ಥೆವಹಿಸಿ ಮಾಡಿ ಅನುದಾನವನ್ನು ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ವೇಣೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೂ ಅನುದಾನ ಹೆಗ್ಗಡೆಯವರು ನೀಡಿದ್ದಾರೆ.

Read More

ಕುಂದಾಪುರ : ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಕೊನೆಗೆ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪ ನಡೆದಿದೆ. ಕೊಲೆಯಾದ ಮಹಿಳೆ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೋಗಾರ್‌ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ . ಸೊರಬ ನಿವಾಸಿಯಾಗಿರುವ ಪೂರ್ಣಿಮಾ ಅವರು ರವಿ ಆಚಾರ್ಯ ಅವರನ್ನು ಕಳೆದ ಹದಿನಾರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇನ್ನು ಟಿಪ್ಪರ್‌ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ದಾಡಿಯಲ್ಲಿ ಟಿಪ್ಪರ್‌ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು. ಆದರೆ ವಿಪರೀತ ಕುಡಿತದ ಚಟ ಹೊಂದಿರುವ ರವಿ ಕುಡಿದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.…

Read More

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಬ್ರೆಡ್ ತರಲೆಂದು ಹೋಗಿದ್ದ 8 ವರ್ಷದ ಅಲಿ ಇಸ್ಲಾಂ ಸಾದಾ ಎಂಬ ಬಾಲಕ ಎರಡು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದು, ಇದೀಗ ಗೋವಾದಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಲಾಗಿದ್ದು, ಕಿಡ್ನಾಪ್ ಮಾಡಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಕಾರ್ಯಚರಣೆ ಮುಂದುವರೆಸಿದ ಭಟ್ಕಳ ನಗರ ಠಾಣೆ ಪೊಲೀಸರು ಇದೀಗ ಬಾಲಕನನ್ನು ಗೋವಾದಲ್ಲಿ ಪತ್ತೆ ಮಾಡಿ ರಕ್ಷಿಸಿದ್ದಾರೆ.ಇನ್ನು ಬಾಲಕನ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ಬಾಲಕ ನಾಪತ್ತೆ ಬಗ್ಗೆ ದೂರು ನೀಡಿದ್ದು, ಪರಿಶೀಲನೆ ನಡೆಸಿದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕನನ್ನು ಕಿಡ್ನಾಪ್ ಮಾಡಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.ಕೌಟುಂಬಿಕ ದ್ವೇಷದ ಕಾರಣಕ್ಕೆ ಬಾಲಕನನ್ನು ಅಪಹರಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More

ಹಾಸನ : ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೈವೇಯನ್ನು ಒಂಟಿ ಸಲಗ ಪ್ರತ್ಯಕ್ಷಗೊಂಡಿದ್ದು, ಗ್ರಾಮದಲ್ಲಿ ಕಾಡಾನೆಗಳು ಜನರಲ್ಲಿ ಆತಂಕ ಸೃಷ್ಟಿ ಮಾಡ್ತಿದೆ. ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ‌ 75ರಲ್ಲಿ ಆನೆ ನೋಡಿ ಸವಾರರು ವಾಹನವನ್ನು ನಿಲ್ಲಿಸಿದ್ದಾರೆ. ಎರಡು ಬದಿ ಸಂಚಾರ ಸ್ಥಗಿತಗೊಳಿಸಿ ಕಾಡಾನೆ ದಾಟಲು ಅವಕಾಶ ಮಾಡಿಕೊಟ್ಟಿದ್ದಾರೆ. ಇನ್ನೊಂದೆಡೆ ಸಕಲೇಶಪುರ ಪಟ್ಟಣದ ಸಮೀಪವೇ ಕಾಡಾನೆ ಬಂದಿದೆ. ಭತ್ತದ ಗದ್ದೆಯಲ್ಲಿ ಓಡಾಡಿ ಬೆಳೆಯನ್ನು ನಾಶ ಮಾಡಿದೆ. ಕಾಡಾನೆ ನೋಡಿ ಗ್ರಾಮಸ್ಥರು ಭಯಗೊಂಡಿದ್ದಾರೆ.

Read More

ಮಂಡ್ಯ: ಚಿನ್ನದ ಉದ್ಯಮಿಯಿಂದ ಹನಿಟ್ರ್ಯಾಪ್ ಮಾಡಿ‌ ಸುಮಾರು 50 ಲಕ್ಷ ರೂ.ಹಣ ಸುಲಿಗೆ ಮಾಡಿದ ಆರೋಪದಲ್ಲಿ ಮಹಿಳೆಯೊಬ್ಬರನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ವಿವಿ ರಸ್ತೆಯಲ್ಲಿರುವ ಶ್ರೀನಿಗೋಲ್ಡ್‌ನ ಮಾಲಕ ಮತ್ತು‌ ಪಕ್ಷವೊಂದರ ವ್ಯಾಪಾರ ವಿಭಾಗದ ನಾಯಕ ಜಗನ್ನಾಥ್‌ ಎಸ್‌ ಗೆ ಈ ರೀತಿ ಹನಿಟ್ರ್ಯಾಪ್ ಮಾಡಲಾಗಿದೆ. ಘಟನೆಗೆ ಸಂಬಂಧಿಸಿ ಮಂಡ್ಯದ ಸುಭಾಷ್‌ ನಗರದ 8ನೇ ಕ್ರಾಸ್‌ ನಿವಾಸಿ ಸಲ್ಮಾಬಾನು ಹಾಗೂ ಜಯಂತ್‌ ನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿಗೆ ತೆರಳಲು ಮಂಡ್ಯದ ಸಾರಿಗೆ ಬಸ್‌ ನಿಲ್ದಾಣದಲ್ಲಿ ಜಗನ್ನಾಥ್‌ ಎಸ್‌. ಶೆಟ್ಟಿ ನಿಂತಿದ್ದಾಗ ಆರೋಪಿಗಳಾದ ಸಲ್ಮಾಬಾನು ಹಾಗೂ ಜಯಂತ್‌ ಸೇರಿ ಇತರರು ಕಾರಿನಲ್ಲಿ ಬಂದು ಪರಿಚಯ ಮಾಡಿಕೊಂಡು ತಾವು ಮೈಸೂರಿಗೆ ತೆರಳುತ್ತಿದ್ದು,ಬನ್ನಿ ಎಂದು ಕಾರು ಹತ್ತಿಸಿಕೊಂಡಿದ್ದಾರೆ.ಅನಂತರ ನಮ್ಮ ಸ್ನೇಹಿತ ಮೈಸೂರಿನ ದರ್ಶನ್‌ ಲಾಡ್ಜ್ ನಲ್ಲಿ ಚಿನ್ನದ ಬಿಸ್ಕೆಟ್‌ ತಂದಿದ್ದಾನೆ. ಅದನ್ನು ಪರೀಕ್ಷಿಸಿ ಅಸಲಿಯೇ, ನಕಲಿಯೇ ಎಂದು ಹೇಳಿ ಎಂದು ಜಗನ್ನಾಥ್ ಗೆ ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದಾರೆ. ಚಿನ್ನ ಪರಿಶೀಲಿಸಲು 5 ನಿಮಿಷ ಬನ್ನಿ…

Read More

ಬೆಂಗಳೂರು/ಕುಂದಾಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 22ರಿಂದ 24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸುಮಾರು ಹತ್ತು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಶುರುವಾಗುವ ಮುನ್ಸೂಚನೆ ನೀಡಿದೆ. ಅಲ್ಲದೇ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಕೋಲಾರದಲ್ಲಿ ಆ.23ರಿಂದ ಮುಂದಿನ ಎರಡು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಈ ವರ್ಷ‌ ನಿರೀಕ್ಷೆಗೂ‌ ಮೀರಿದ‌ ಮಳೆಯಾಗಿದ್ದು ರಾಜ್ಯದಾದ್ಯಂತ ಭಾರೀ ಅನಾಹುತಗಳು ಸಂಭವಿಸಿದ್ದವು.‌ ಇದರ ಬೆನ್ನಿಗೇ ವಿರಾಮ ಘೋಷಿಸಿದ್ದ ಮಳೆ ಮತ್ತೆ ಚುರುಕುಗೊಳ್ಳುವ ಸೂಚನೆ ಕರಾವಳಿಗರಿಗೆ ಆತಂಕ ಸೃಷ್ಟಿಸಿದೆ. ಅಲ್ಲದೇ ಮೀನುಗಾರಿಕೆಯನ್ನೇ ನಂಬಿ ಬದುಕುವ ಮೀನುಗಾರ ಕುಟುಂಬಗಳು ಕಂಗಾಲಾಗಿವೆ.

Read More

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ಕಚೇರಿಯಲ್ಲಿ ವೀರ ಸಾವರ್ಕರ್ ಪೋಟೋ ಆಳಡಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಪಾಲಿಕೆಯ ಸುರತ್ಕಲ್‌ನ ಹೊಸ ವಲಯ ಕಚೇರಿ ನಿನ್ನೆ ಉದ್ಘಾಟನೆಗೊಂಡಿತ್ತು. ಅದರಲ್ಲಿರುವ ಮಂಗಳೂರು ಉತ್ತರ ಶಾಸಕ ವೈ ಭರತ್ ಶೆಟ್ಟಿ ತನ್ನ ಶಾಸಕ ಕಛೇರಿಯಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಿ ಉದ್ಘಾಟನೆ ವೇಳೆ ಅದಕ್ಕೆ ಪುಷ್ಪಾರ್ಚನೆಗೈದು ಗೌರವ ಸೂಚಿಸಿದ್ದಾರೆ. ಅಲ್ಲದೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಮಂಗಳೂರು ನಗರ ಹೊರವಲಯದ ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರಿಡಲು ಒತ್ತಾಯಿಸಿದ್ದಾರೆ. ಈ ಕುರಿತು ಶಾಸಕ ಭರತ್ ಶೆಟ್ಟಿ ಅವರು ಕಳೆದ ವರ್ಷವೇ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರಿಡುವ ಪ್ರಸ್ತಾಪ ತೀವ್ರ ಚರ್ಚೆಗೆ ಕಾರಣವಾಗಿದೆ. ಹಿಂದೂ ಸಂಘಟನೆಗಳು, ಸ್ಥಳೀಯರು ಸಾವರ್ಕರ್ ಹೆಸರಿಡಲು ಮನವಿ ಸಲ್ಲಿಸಿದ್ದರು. ಒಂಬತ್ತು ತಿಂಗಳ ಹಿಂದೆ ಈ ಪ್ರಕ್ರಿಯೆ ಶುರು ಆಗಿದೆ. ಸ್ವಾತಂತ್ರ್ಯ ಸೇನಾನಿ ವೀರಸಾವರ್ಕರ್ ವಿರುದ್ಧ ಯಾಕೆ ಈ ಮನಸ್ಥಿತಿಯಲ್ಲಿದ್ದಾರೆ…

Read More