Author: main-admin

ಮಂಗಳೂರು: ನಗರದಲ್ಲಿ ಶೈಕ್ಷಣಿಕ ಹಂತದಲ್ಲೇ ಮಾದಕ ದ್ರವ್ಯ ಜಾಲ ವಿಸ್ತರಿಸುತ್ತಿರುವ ಆತಂಕಕಾರಿ ಬೆಳವಣಿಗೆಯೊಂದು ಬೆಳಕಿಗೆ ಬಂದಿದೆ. ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಐವರು ಕಾಲೇಜು ವಿದ್ಯಾರ್ಥಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಯೊಬ್ಬನ ಬಳಿ ಸಣ್ಣ ಪ್ರಮಾಣದ ಗಾಂಜಾ ಪೊಟ್ಟಣ ಪತ್ತೆಯಾದ ಹಿನ್ನೆಲೆಯಲ್ಲಿ ಆತನ ಪೋಷಕರು ನೀಡಿದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ತನಿಖೆಯ ವೇಳೆ ಈ ವಿದ್ಯಾರ್ಥಿಯ ಹಿಂದೆ ಐವರು ವಿದ್ಯಾರ್ಥಿಗಳ ದೊಡ್ಡ ಪೆಡ್ಲಿಂಗ್ ಜಾಲವೇ ಇರುವುದು ದೃಢಪಟ್ಟಿದೆ. ಬಂಧಿತ ವಿದ್ಯಾರ್ಥಿಗಳು ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಾಸ್ಟೆಲ್‌ಗಳ ಬದಲಾಗಿ ಪ್ರತ್ಯೇಕವಾಗಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದರು. ಇದೇ ಕೊಠಡಿಯನ್ನು ಕೇಂದ್ರವಾಗಿಸಿಕೊಂಡು ಗಾಂಜಾವನ್ನು ಸಣ್ಣ ಪೊಟ್ಟಣಗಳನ್ನಾಗಿ ಮಾಡಿ ಗ್ರಾಹಕರಿಗೆ ಸರಬರಾಜು ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆರು ವಿವಿಧ ಕಾಲೇಜುಗಳ ಸುಮಾರು 40 ವಿದ್ಯಾರ್ಥಿಗಳು ಹಾಗೂ ಇತರ 10 ಮಂದಿ ಇವರಿಂದ ಗಾಂಜಾ ಖರೀದಿಸುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಮಕ್ಕಳ ವರ್ತನೆಯಲ್ಲಿ ಸಣ್ಣ ಬದಲಾವಣೆ ಕಂಡರೂ ಪೋಷಕರು…

Read More

ಮಂಗಳೂರಿನಿಂದ ಮೂಡುಬಿದ್ರೆ ತೆರಳುತ್ತಿದ್ದ ಕೆಕೆಬಿ ಟ್ರಾವೆಲ್ಸ್ ಹೆಸರಿನ ಎಕ್ಸೆಸ್ ಬಸ್ ಮತ್ತು ಕಂಟೇನರ್ ಲಾರಿ ಗುರುಪುರ ಹೆದ್ದಾರಿ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು ಚಾಲಕರಿಬ್ಬರು ತೀವ್ರ ಗಾಯಗೊಂಡಿದ್ದಾರೆ. ಹಲವು ಪ್ರಯಾಣಿಕರಿಗೂ ಗಾಯಗಳಾಗಿವೆ. ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಓವರ್ ಟೇಕ್ ಮಾಡಲು ಬಂದ ಬಸ್ಸಿಗೆ ಕಂಟೇನರ್ ಲಾರಿ ಡಿಕ್ಕಿಯಾಗಿದ್ದು ಮುಂಭಾಗ ನಜ್ಜುಗುಜ್ಜಾಗಿದೆ. ಅಲ್ಲದೆ, ಲಾರಿಯ ಚಾಲಕ ಎಡೆಯಲ್ಲಿ ಸಿಕ್ಕಿಕೊಂಡು ಸ್ಥಳೀಯರ ಹರಸಾಹಸದ ಬಳಿಕ ಹೊರ ತೆಗೆಯಲಾಯಿತು. ಇತರೇ ವಾಹನಗಳ ಚಾಲಕರು, ಪ್ರಯಾಣಿಕರು, ಸ್ಥಳೀಯರು ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನಲ್ಲಿದ್ದ ಏಳು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಬಸ್ ಚಾಲಕ ಮತ್ತು ಲಾರಿಯ ಚಾಲಕರಿಗೆ ಕಾಲು ಮತ್ತು ಕೈಗೆ ಹೆಚ್ಚು ಪೆಟ್ಟು ಬಿದ್ದಿದೆ. ಹುಬ್ಬಳ್ಳಿ ಮೂಲದ ಕಂಟೇನ‌ರ್ ಲಾರಿಯಲ್ಲಿ ಭಾರೀ ಸರಕು ತುಂಬಿಕೊಂಡಿದ್ದು ಬಸ್ಸಿಗೆ ಗುದ್ದಿ ನಿಂತುಬಿಟ್ಟಿದೆ. ಇದರಿಂದಾಗಿ ಎರಡೂ ವಾಹನಗಳ ಮುಂಭಾಗ ಒಂದಕ್ಕೊಂದು ಅಂಟಿಕೊಂಡು ಜಖಂ ಆಗಿತ್ತು. ಮಂಗಳೂರು- ಮೂಡುಬಿದ್ರೆ ನಡುವೆ ಚಲಿಸುವ ಖಾಸಗಿ ಬಸ್ಸುಗಳನ್ನು ಅತಿ ವೇಗದಿಂದ ಚಲಾಯಿಸುವುದು,…

Read More

ಮಂಗಳೂರು : ತೊಕ್ಕೊಟ್ಟಿ‌ನಲ್ಲಿ ರೌಡಿಶೀಟರ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಸಿಬಿ ಪೊಲೀಸರು ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆಂದು ಮಾಹಿತಿ ದೊರೆತಿದೆ. ಬಂಧಿತ ಆರೋಪಿಗಳು ಉಳ್ಳಾಲದ ರಫತ್ ಆಲಿ, ಮೂಡುಶೆಡ್ಡೆಯ ರಿಜ್ವಾನ್, ಫೈಸಲ್ ನಗರದ ಜುಟ್ಟು ಅಶ್ಫಕ್, ಕಲ್ಲಡ್ಕದ ಖಲೀಲ್, ಬಜಾಲ್ ನ ಶಾಕೀರ್ ಹಾಗೂ ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್ ಎಂದು ತಿಳಿದುಬಂದಿದೆ. ಆರೋಪಿಗಳನ್ನು ನಿಗೂಢ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಿದ್ದು ಒಟ್ಟು ಆರು ಮಂದಿ ಹಂತಕರು ಕೊಲೆಯಲ್ಲಿ ನೇರ ಪಾಲ್ಗೊಂಡ ಮಾಹಿತಿ ದೊರೆತಿದೆ. ಪೋಲಿಸರು ಕೃತ್ಯಕ್ಕೆ ಬಳಸಿದ್ದ ಇನೋವಾ ಕಾರನ್ನು ವಿಟ್ಲದ ಬುಡೋಳಿ ಎಂಬಲ್ಲಿ ವಶಕ್ಕೆ ಪಡೆದಿದ್ದು ಆರೋಪಿಗಳು ಮೈಸೂರು, ಬೆಂಗಳೂರು ಕಡೆಗೆ ಪರಾರಿಯಾಗಿದ್ದರೆಂದು ತನಿಖೆಯಲ್ಲಿ ತಿಳಿದುಬಂದಿದೆ.

Read More

ಮಂಗಳೂರು: ನಾನಾ ಕಾರಣಗಳಿಗಾಗಿ ಸಾರ್ವಜನಿಕರು ಕಳೆದುಕೊಂಡ 150 ಮೊಬೈಲ್‌ಗಳನ್ನು ಪೊಲೀಸರು ವಿಶೇಷ ಕಾರ್ಯಾಚರಣೆಯ ಮೂಲಕ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಕಳೆದ ಮಾರ್ಚ್‌ನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು CEIR Portal ಮೂಲಕ ಪತ್ತೆ ಹಚ್ಚಿದರು. ಸಾರ್ವಜನಿಕರು ಮೊಬೈಲ್ ಕಳೆದುಕೊಂಡಿರುವ ಬಗ್ಗೆ CEIR (Central Equipment Identity Register, https://ceir.sancharsaathi.gov.in ) Portal ನಲ್ಲಿ ದಾಖಲಿಸಿದ್ದ ದೂರುಗಳನ್ನು ಪರಿಶೀಲಿಸಿ ಜಿಲ್ಲಾದ್ಯಂತ ಮಾರ್ಚ್ ತಿಂಗಳಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಹಾಗೇ 150 ಮೊಬೈಲ್‌ಗಳನ್ನು ಪತ್ತೆ ಹಚ್ಚಿ ಆಯಾ ಠಾಣಾ ವ್ಯಾಪ್ತಿಯಲ್ಲೇ ವಾರಸುದಾರರಿಗೆ ಹಸ್ತಾಂತರಿಸಲಾಯಿತು ಎಂದು ಪೊಲೀಸ್ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.

Read More

ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಮಂಗಳೂರಿನ ಪ್ರಾದೇಶಿಕ ಉಪ ಡ್ರಗ್ ಕಂಟ್ರೋಲರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಡ್ರಗ್ ಕಂಟ್ರೋಲರ್ ಬಾಬು ಬಿ.ಎನ್ ಅವರ ಮನೆ ಹಾಗೂ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ. ದಿನೇಶ್ ಕುಮಾರ್ ಅವರ ಮೇಲ್ವಿಚಾರಣೆಯಲ್ಲಿ, ಆರು ಲೋಕಾಯುಕ್ತ ತಂಡಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ, ಬೆಂಗಳೂರು ನಗರ ಮತ್ತು ಮಂಗಳೂರಿನಲ್ಲಿರುವ ಆರೋಪಿಗಳಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ದಾಳಿ ನಡೆಸಿವೆ. ದಾಳಿಯಲ್ಲಿ ಬಾಬು ಬಿ.ಎನ್ ಗೆ ಸಂಬಂಧಿಸಿದ ವಸತಿ ಮನೆಗಳು, ವಾಣಿಜ್ಯ ಸಂಸ್ಥೆಗಳು, ಫ್ಲಾಟ್‌ಗಳು ಮತ್ತು ಕಚೇರಿಗಳು ಸೇರಿವೆ. ಶೋಧದ ಸಮಯದಲ್ಲಿ ಆದಾಯಕ್ಕಿಂತ ಹೆಚ್ಚುವರಿಯಾಗಿ ಸುಮಾರು 3.37 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು ಸ್ಥಿರ ಆಸ್ತಿಗಳನ್ನು ಪತ್ತೆಹಚ್ಚಿದ್ದಾರೆ ಎಂದು ಹೇಳಲಾಗುತ್ತದೆ. ಬೆಂಗಳೂರಿನ ನಿವಾಸದಲ್ಲಿ, ಚಿನ್ನ ಮತ್ತು ಬೆಳ್ಳಿ ಆಭರಣಗಳ ಜೊತೆಗೆ 23.64 ಲಕ್ಷ ರೂ. ನಗದು ಸಹ ಪತ್ತೆಯಾಗಿದೆ. ಭ್ರಷ್ಟಾಚಾರ…

Read More

ಉಡುಪಿ : ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿದ್ದ ಆರೋಪಿಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಹಮ್ಮದ್ ಫೈಜಲ್‌ (22), ತಂದೆ: ದಿ. ಸುಲೇಮಾನ್‌, ವಾಸ: ಸಾದತ್ ಕಾಟೇಜ್‌, ಬಂಗ್ಲೆಗುಡ್ಡೆ, ಕಸಬ ಗ್ರಾಮ, ಕುಕ್ಕುಂದೂರು ಪೋಸ್ಟ್‌, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಇವರ ವಿರುದ್ಧ ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ ಕ್ರಮ ಜರುಗಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪೊಲೀಸ್ ನಿರೀಕ್ಷಕರು, ಕಾರ್ಕಳ ನಗರ ಠಾಣೆಯಿಂದ ಸಲ್ಲಿಸಿದ ವರದಿಯ ಆಧಾರದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಈ ಕುರಿತು ಕ್ರಮ ಕೈಗೊಂಡು, ಪೊಲೀಸ್ ಮಹಾನಿರೀಕ್ಷಕರು, ಪಶ್ಚಿಮ ವಲಯ, ಮಂಗಳೂರು ಇವರಿಗೆ ಬಂಧನ ಆದೇಶಕ್ಕಾಗಿ ಶಿಫಾರಸು ಮಾಡಿದ್ದರು. ಅದರ ಮೇರೆಗೆ, ಮಾನ್ಯ ಪೊಲೀಸ್ ಮಹಾನಿರೀಕ್ಷಕರು ಪ್ರಕರಣಗಳನ್ನು ಪರಿಶೀಲಿಸಿ, ದಿನಾಂಕ 07/04/2026ರಂದು ಆರೋಪಿಯ ವಿರುದ್ಧ ಬಂಧನ ಆದೇಶ ಹೊರಡಿಸಿದ್ದಾರೆ. ಕಾರ್ಕಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ದಿನಾಂಕ 07/04/2026ರಂದು ಆರೋಪಿಗೆ ಬಂಧನ…

Read More

ಎಂಸಿಸಿ ಬ್ಯಾಂಕ್, 31 ಮಾರ್ಚ್ 2026ಕ್ಕೆ ಅಂತ್ಯಗೊಳ್ಳುವ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾನದಂಡಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಈ ವರ್ಷ ತನ್ನ 114ನೇ ವರ್ಷದ ಸೇವೆಯನ್ನು ಪೂರೈಸಲಿದೆ. ಬ್ಯಾಂಕ್ ಈ ಆರ್ಥಿಕ ವರ್ಷದಲ್ಲಿ ರೂ. 13 ಕೋಟಿ ಲಾಭವನ್ನು ದಾಖಲಿಸಿದೆ. ನಿವ್ವಳ ಎನ್‌ಪಿಎ (Net NPA) ಇಳಿಕೆಗೆ ನಿರಂತರ ಪ್ರಯತ್ನ ನಡೆಸಿ, ಅದನ್ನು ಒಟ್ಟು ಮುಂಗಡಗಳ 1.25% ಮಟ್ಟಕ್ಕೆ ತಗ್ಗಿಸಲು ಯಶಸ್ವಿಯಾಗಿದೆ. ಒಟ್ಟು ವ್ಯವಹಾರ ರೂ.1525 ಕೋಟಿಗೆ ತಲುಪಿದ್ದು, 23% ವೃದ್ಧಿ ಸಾಧಿಸಿದೆ. 2018ನೇ ವರ್ಷದಲ್ಲಿ ಬ್ಯಾಂಕಿನ ಚುಕ್ಕಾಣಿ ಹಿಡಿದ ಪ್ರಸ್ತುತ ಆಡಳಿತ ಮಂಡಳಿಯ ಅವಧಿಯಲ್ಲಿ ರೂ.500 ಕೋಟಿ ಇದ್ದ ಬ್ಯಾಂಕಿನ ಒಟ್ಟು ವ್ಯವಹಾರವು ಕಳೆದ ಏಳೂವರೆ ವರ್ಷದಲ್ಲಿ ಮೂರು ಪಟ್ಟು ಹೆಚ್ಚಾಗಿದೆ. ಇದು 114 ವರ್ಷದ ಇತಿಹಾಸವಿರುವ ಬ್ಯಾಂಕಿನ ಚರಿತ್ರೆಯಲ್ಲಿಯೇ ದಾಖಲೆಯಾಗಿದೆ. ಬ್ಯಾಂಕಿನ ನೆಟ್‌ವರ್ತ್ ರೂ.83.76 ಕೋಟಿಯಿಂದ ರೂ.91.80 ಕೋಟಿಗೆ ಏರಿಕೆಯಾಗಿದೆ. ಬ್ಯಾಂಕ್ ಆರ್ಥಿಕ ವರ್ಷದಲ್ಲಿ ನಿಗದಿಪಡಿಸಿದ್ದ ಠೇವಣಿಗಳು ಹಾಗೂ ಸಾಲಗಳ ಗುರಿಗಳನ್ನು ಯಶಸ್ವಿಯಾಗಿ ಸಾಧಿಸಿದೆ. ಆರ್ಥಿಕ ವರ್ಷದಲ್ಲಿ…

Read More

ಬಂಟ್ವಾಳ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿಧ ಬಂಟ್ವಾಳ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ಮಾರ್ಚ್ 21, 2026 ರಂದು ಪರ್ಲಿಯಾದಲ್ಲಿರುವ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್ ಅನ್ನು ಕಳವು ಮಾಡಲಾಗಿತ್ತು.ಬಿಎನ್ಎಸ್, 2023 ರ ಸೆಕ್ಷನ್ 303(2) ರ ಅಡಿಯಲ್ಲಿ ಅಪರಾಧ ಸಂಖ್ಯೆ 37/2026 ಎಂದು ಪ್ರಕರಣ ದಾಖಲಿಸಲಾಗಿದ್ದು, ಬಂಟ್ವಾಳ ಪಟ್ಟಣ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯ ವೇಳೆ ಬಂಟ್ವಾಳದ ಸಜೀಪ್ ಮುನ್ನೂರು ನಿವಾಸಿ ಹಸನ್ ಬಾವ (55) ಮತ್ತು ಬಂಟ್ವಾಳದ ಬಿ ಮೂಡ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.ಕದ್ದ ಸ್ಕೂಟರ್ ಸುಮಾರು 50,000 ರೂ. ಮೌಲ್ಯದ್ದಾಗಿದ್ದು, ಆರೋಪಿಗಳಿಂದ ಅದನ್ನು ವಶಪಡಿಸಿಕೊಳ್ಳಲಾಗಿದೆ.

Read More

ಮಂಗಳೂರು : ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಸಮೃದ್ಧ ಪರಂಪರೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) 2025-26ನೇ ಸಾಲಿನಲ್ಲಿ ದಾಖಲೆಯ ಸಾಧನೆ ಮಾಡಿದೆ. ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ದೇಶಕ್ಕೆ ಮಾದರಿಯಾಗಿರುವ ಈ ಬ್ಯಾಂಕ್, ರೂ. 20,226.19 ಕೋಟಿ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ದಾಖಲೆ ಲಾಭಬ್ಯಾಂಕ್ 2025-26ನೇ ಆರ್ಥಿಕ ವರ್ಷದಲ್ಲಿ ರೂ. 131.14 ಕೋಟಿ ಲಾಭ ಗಳಿಸಿದ್ದು, ಇದು ಕಳೆದ ವರ್ಷದ ರೂ.110.41 ಕೋಟಿಗೆ ಹೋಲಿಸಿದರೆ ಶೇ.18.78ರಷ್ಟು ಹೆಚ್ಚಾಗಿದೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಇದು ಸಾರ್ವಕಾಲಿಕ ದಾಖಲೆ ಲಾಭವಾಗಿದೆ. ಅನುತ್ಪಾದಕ ಆಸ್ತಿ (NPA) ಪ್ರಮಾಣವು ಶೇ.2.42ರಿಂದ ಶೇ.2.21ಕ್ಕೆ ಇಳಿಕೆಯಾಗಿರುವುದು ಬ್ಯಾಂಕಿನ ಆರ್ಥಿಕ ಶಕ್ತಿಯನ್ನು ಸೂಚಿಸುತ್ತದೆ ಠೇವಣಿ ಮತ್ತು ಸಾಲ ವಿತರಣೆಬ್ಯಾಂಕ್ ತನ್ನ 113 ಶಾಖೆಗಳ ಮೂಲಕ ರೂ. 9,264.64 ಕೋಟಿ ಠೇವಣಿ ಸಂಗ್ರಹಿಸಿದ್ದು, ಇದು ಕಳೆದ ಸಾಲಿಗಿಂತ ಶೇ.17.53ರಷ್ಟು ಹೆಚ್ಚಾಗಿದೆ.ಮುಂಗಡ ಸಾಲವಾಗಿ ರೂ. 9,706.75 ಕೋಟಿ ವಿತರಿಸಿದ್ದು, ಕೃಷಿ…

Read More

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More